Tue. Feb 24th, 2026

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಹತ್ವದ ಪ್ರಚಲಿತ ವಿದ್ಯಮಾನಗಳು

ಇಂದಿನಿಂದ ಶೇ 10ರಷ್ಟು ಸುಂಕ
ಸಂದರ್ಭ: ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಶೇ 10ರಷ್ಟು ಹೆಚ್ಚುವರಿ ಸುಂಕವು ಜಾರಿಗೆ ಬರಲಿದೆ. ಈ ಆದೇಶವು 150 ದಿನಗಳವರೆಗೆ ಜಾರಿಯಲ್ಲಿ ಇರಲಿದೆ.

  • ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫೆಬ್ರುವರಿ 24ರಿಂದ ಎಲ್ಲ ದೇಶಗಳಿಂದ ಅಮರಿಕಕ್ಕೆ ಪ್ರವೇಶಿಸುವ ಸರಕುಗಳ ಮೇಲೆ ಶೇ 15ರಷ್ಟು ಸುಂಕ ವಿಧಿಸುವುದಾಗಿ ಹೇಳಿದ್ದಾರೆ. ಆದರೆ, ಇದರ ಅಧಿಕೃತ ಆದೇಶ ಇದುವರೆಗೆ ಜಾರಿ ಆಗಿಲ್ಲ.
  • ಅಮೆರಿಕದ ಸುಪ್ರೀಂ ಕೋರ್ಟ್, ಡೊನಾಲ್ಡ್ ಟ್ರಂಪ್ ಅವರು ಅಮೆರಿಕಕ್ಕೆ ಪ್ರವೇಶಿಸುವ ಸರಕುಗಳ ಮೇಲೆ ಈ ಹಿಂದೆ ವಿಧಿಸಿದ್ದ ಪ್ರತಿಸುಂಕವನ್ನು ಅನೂರ್ಜಿತಗೊಳಿಸಿದೆ. ತೀರ್ಪಿನ ಬಳಿಕ ಟ್ರಂಪ್ ಅವರು ಎಲ್ಲ ದೇಶಗಳಿಂದ ಆಮದಾಗುವ ಸರಕುಗಳ ಮೇಲೆ ಶೇ 10ರಷ್ಟು ಸುಂಕ ವಿಧಿಸಿದ್ದರು. ಆದರೆ, ಈ ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಸುಂಕವನ್ನು ಶೇ 15ಕ್ಕೆ ಹೆಚ್ಚಳ ಮಾಡಿದ್ದಾರೆ.
  • 150 ದಿನಗಳ ನಂತರ ಏನಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲದಿರುವುದರಿಂದ ಈ ಸುಂಕದ ಬಗ್ಗೆಯೂ ಗೊಂದಲವಿದೆ.

ರಾಜ್ಯದ ಪ್ರಾಮುಖ್ಯತೆಯ ಪ್ರಸ್ತುತ ಘಟನೆಗಳು ಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳು

ನಲಿ-ಕಲಿ ರದ್ದು ಶಾಲೆಗಳಿಗೆ ಮಾರಕ?
ಸಂದರ್ಭ: ಪ್ರಾಥಮಿಕ ಶಾಲಾ ಶಿಕ್ಷಕರ ಮನವಿಯಂತೆ ರಾಜ್ಯದಲ್ಲಿ ನಲಿ-ಕಲಿ ಯೋಜನೆಯನ್ನು ರದ್ದುಗೊಳಿಸುವ ಪ್ರಕ್ರಿಯೆ ಸರ್ಕಾರದ ಹಂತದಲ್ಲಿ ನಡೆಯುತ್ತಿದೆ.

  • ರಾಜ್ಯದಲ್ಲಿ ಅಂದಾಜು 6,500ಕ್ಕೂ ಹೆಚ್ಚಿನ ಏಕಶಿಕ್ಷಕ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಇವೆಲ್ಲವೂ ಸಾಮಾನ್ಯ ವಾಗಿ ಮೂಲಸೌಕರ್ಯ ಕಲ್ಪಿಸದ ಕುಗ್ರಾಮಗಳಲ್ಲಿಯೇ ಕಾರ್ಯ ನಿರ್ವಹಿಸುತ್ತಿವೆ.
  • ಪ್ರಸ್ತುತ 1ರಿಂದ 3ನೇ ತರಗತಿವರೆಗೂ ಒಂದೇ ಕೊಠಡಿಯಲ್ಲಿ ಮೂರೂ ತರಗತಿಗಳ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಇದೇ ಕಾರಣಕ್ಕೆ ಪಾಲಕರು ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮೂರು ವರ್ಷ ಒಂದೇ ರೀತಿಯ ಪಾಠ-ಪ್ರವಚನ ನಡೆಯಲಿವೆ. ಮಕ್ಕಳ ಕಲಿಕೆ, ಕೌಶಲದಲ್ಲಿ ಬೆಳವಣಿಗೆಯಾಗುವುದಿಲ್ಲವೆಂಬ ಕಾರಣಕ್ಕಾಗಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ.

ಪತ್ರಿಕೆ-I: ಪ್ರಬಂಧಗಳು

ಪ್ರಬಂಧ-1: ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಹತ್ವದ ವಿಷಯ

“ಎಐ ಇಂಪ್ಯಾಕ್ಟ್ ಶೃಂಗಸಭೆ’ ಕೃತಕ ಬುದ್ಧಿಮತ್ತೆ ಕ್ಷೇತ್ರದ ಚಟುವಟಿಕೆಗಳಿಗೆ ಉತ್ತೇಜನ ನೀಡುವಂತಿದೆ ಹಾಗೂ ಆ ಕ್ಷೇತ್ರದಲ್ಲಿನ ಚರ್ಚೆಗಳಲ್ಲಿ ಭಾರತೀಯರಿಗೆ ವೇದಿಕೆ ದೊರಕಿಸುವ ಪ್ರಯತ್ನವಾಗಿದೆ, ವಿವರಿಸಿ.

ಪ್ರಬಂಧ-2: ರಾಜ್ಯ ಮಹತ್ವ/ ಸ್ಥಳೀಯ ಮಹತ್ವ ವಿಷಯ

ಮಿಷನರಿ ಮುದ್ರಣಾಲಯಗಳಿಂದ ಆಧುನಿಕ ಡಿಜಿಟಲ್ ಮುದ್ರಣವರೆಗೆ ಕನ್ನಡ ಮುದ್ರಣೋದ್ಯಮದ ಇತಿಹಾಸ ಅಭಿವೃದ್ಧಿ ಮತ್ತು ಪಯಣ ಕುರಿತು ಮುದ್ರಣ ತಂತ್ರಜ್ಞಾನದ ಮಹತ್ವ ಚರ್ಚಿಸಿ.

ಪತ್ರಿಕೆ-II: ಸಾಮಾನ್ಯ ಅಧ್ಯಯನ-1

ರಾಜಾಜಿ ಪ್ರತಿಮೆ ಅನಾವರಣ
ಸಂದರ್ಭ: ಸ್ವತಂತ್ರ ಭಾರತದ ಮೊದಲ ಮತ್ತು ಏಕೈಕ ಭಾರತೀಯ ಗವರ್ನರ್ ಜನರಲ್, ಚಕ್ರವರ್ತಿ ರಾಜಗೋಪಾಲಾಚಾರಿ (ರಾಜಾಜಿ) ಅವರ ಪ್ರತಿಮೆಯನ್ನು ರಾಷ್ಟ್ರಪತಿ ದೌಪದಿ ಮುರ್ಮುಅವರು ರಾಷ್ಟ್ರಪತಿ ಭವನದಲ್ಲಿ ಅನಾವರಣಗೊಳಿಸಿದರು.

  • ವಸಾಹತುಶಾಹಿ ಕುರುಹುಗಳನ್ನು ತೊಡೆದುಹಾಕಲು ತೆಗೆದುಕೊಳ್ಳಲಾಗುತ್ತಿರುವ ಸರಣಿ ಕ್ರಮಗಳ ಭಾಗವಾಗಿ ಈ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಷ್ಟ್ರಪತಿ ಕಚೇರಿ ಹೇಳಿದೆ.
  • ರಾಷ್ಟ್ರ ಪತಿ ಭವನದ ಅಶೋಕ ಮಂಟಪದ ಬಳಿಯಿರುವ ಭವ್ಯವಾದ ತೆರೆದ ಮೆಟ್ಟಿಲುಗಳಲ್ಲಿ ಇದ್ದ. ನವ ದೆಹಲಿಯ ಹಲವಾರು ಕಟ್ಟಡಗಳ ಪ್ರಮುಖ ವಾಸ್ತುಶಿಲ್ಪಿ ಎಡ್ರಿನ್ ಲಟೈನ್ಸ್ ಅವರ ಪ್ರತಿಮೆಯನ್ನು ತೆರವುಗೊಳಿಸಿ. ರಾಜಗೋಪಾಲಾಚಾರಿ ಅವರ ಪ್ರತಿಮೆಯನ್ನು ಇಡಲಾಗಿದೆ.
  • ವಸಾಹತುಶಾಹಿ ಮನಃಸ್ಥಿತಿಯ ಕುರುಹುಗಳನ್ನು ತೊಡೆದುಹಾಕಲು ಮತ್ತು ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯಗಳ ಶ್ರೀಮಂತಿಕೆಯನ್ನು ಹೆಮ್ಮೆಯಿಂದ ಅಳವಡಿಸಿಕೊಳ್ಳಲು ಹಾಗೂ ಭಾರತಮಾತೆಗೆ ಅಸಾಧಾರಣ ಸೇವೆ ಸಲ್ಲಿಸಿದವರನ್ನು ಗೌರವಿಸಲು ತೆಗೆದುಕೊಳ್ಳುತ್ತಿ-ರುವ ಸರಣಿ ಕ್ರಮಗಳ ಭಾಗವಾಗಿ ಪ್ರತಿಮೆ ಅನಾವರಣ ಮಾಡಲಾಗಿದೆ’ಎಂದು ರಾಷ್ಟ್ರಪತಿ ಕಚೇರಿ ‘ಎಕ್ಸ್’ ಮಾಡಿದೆ.

3.25 ಲಕ್ಷ ಕೋಟಿ ದಾಟಿದ ಜೈವಿಕ ಆರ್ಥಿಕತೆ
ಸಂದರ್ಭ: ರಾಜ್ಯ ಜೈವಿಕ ಆರ್ಥಿಕತೆಯು 2025ರಲ್ಲಿ 3,25,360 ಕೋಟಿ ರೂ.ಗಳಿಗೆ ತಲುಪಿದೆ. ಸಂಶೋಧನೆ ನೇತೃತ್ವದ ಜತೆಗೆ ತಯಾರಿಕೆ, ವಿತರಣೆ, ಸೇವೆಗಳವರೆಗೆ ಸರಪಳಿ ಒಳಗೊಂಡಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.

  • ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್), ಜೈವಿಕ ತಂತ್ರಜ್ಞಾನ ಉದ್ಯಮಗಳ ಸಂಘದ (ಎಬಿಎಲ್‌ಇ) ಸಹಯೋಗದಲ್ಲಿ ಸಿದ್ಧಪಡಿಸಿರುವ ವರದಿಯಲ್ಲಿ ಈ ಸಂಗತಿ ಉಲ್ಲೇಖವಾಗಿದೆ.
  • ದೇಶದ ಅತ್ಯಂತ ಪ್ರಬುದ್ಧ ಮತ್ತು ನಾವೀನ್ಯತೆ ಆಧಾರಿತ ಜೈವಿಕ ತಂತ್ರಜ್ಞಾನ ವ್ಯವಸ್ಥೆಯಾಗಿ ರಾಜ್ಯ ಸುಸ್ಥಿರ ರೀತಿಯಲ್ಲಿ ಮುಂಚೂಣಿ ಸ್ಥಾನ ಕಾಯ್ದುಕೊಂಡಿದೆ.
  • ಜೈವಿಕ ತಂತ್ರಜ್ಞಾನವು ಪ್ರಯೋಗಾಲಯಗಳಿಗೆ ಸೀಮಿತವಾಗಿಲ್ಲ. ಆರ್ಥಿಕ ಬೆಳವಣಿಗೆ, ಕೈಗಾರಿಕಾ ನಾವೀನ್ಯತೆ ಮತ್ತು ಸಾಮಾಜಿಕ ಪ್ರಭಾವದ ಕೇಂದ್ರ ಚಾಲಕ ಶಕ್ತಿಯಾಗಿ ಅಭಿವೃದ್ಧಿಗೊಳ್ಳುತ್ತಾ ಮುನ್ನಡೆಯುತ್ತಿದೆ.
  • ಡೀಪ್-ಟೆಕ್ ಸ್ಟಾರ್ಟ್‌ ಅಪ್‌ಗಳಿಗೆ ಬೆಂಬಲ, ನಾವೀನ್ಯತೆ ಮೂಲಸೌಕರ್ಯಗಳ ಬಲಪಡಿಸುವಿಕೆ ಮತ್ತು ಬೆಳವಣಿಗೆಯು ಬೆಂಗಳೂರು ಆಚೆಗಿನ ಪ್ರತಿಯೊಂದು ಪ್ರದೇಶಕ್ಕೂ ತಲುಪುವಂತೆ ನೋಡಿಕೊಳ್ಳುವ ಮೂಲಕ ಸಮಗ್ರ ಜೈವಿಕ ಉತ್ಪಾದನಾ ಆರ್ಥಿಕತೆ ನಿರ್ಮಿಸುವುದರತ್ತ ಸರ್ಕಾರವು ಹೆಚ್ಚು ಗಮನನೀಡಬೇಕಿದೆ.

ಪತ್ರಿಕೆ-III: ಸಾಮಾನ್ಯ ಅಧ್ಯಯನ-2

ಹೊಸ ನೀತಿ ಅನಾವರಣಗೊಳಿಸಿದ ಗೃಹ ಸಚಿವಾಲಯ: ಉಗ್ರರ ನಿಗ್ರಹಕ್ಕೆಪ್ರಹಾರ್

ಸಂದರ್ಭ: ಭಯೋತ್ಪಾದಕಚಟುವಟಿಕೆಗಳನ್ನುಹತ್ತಿಕ್ಕಲು ಮತ್ತುಉಗ್ರರದಾಳಿಗೆ ತಕ್ಕ ಪ್ರತಿಕ್ರಿಯೆ ನೀಡುವ ಕಾರ್ಯತಂತ್ರ ಒಳಗೊಂಡ ದೇಶದ ಮೊತ್ತ ಮೊದಲ ಭಯೋತ್ಪಾದಕ ನಿಗ್ರಹನೀತಿ ‘ಪ್ರಹಾರ್’ ಅನ್ನುಕೇಂದ್ರಗೃಹಸಚಿವಾಲಯಅನಾವರಣಗೊಳಿಸಿದೆ.

  • ಪಹಲ್ಲಾಮ್ ಉಗ್ರ ದಾಳಿ ಬಳಿಕ ಭಯೋತ್ಪಾದನೆ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ ನೀತಿ ಕಠಿಣಗೊಳಿಸಿರುವ ಕೇಂದ್ರ ಸರ್ಕಾರ, ದೇಶದ ಭದ್ರತೆಯನ್ನು ಸಮಗ್ರ ದಿಕ್ಕುಗಳಲ್ಲೂ ಬಲಪಡಿಸುವ ಉದ್ದೇಶದಿಂದ ‘ಪ್ರಹಾರ್’ ಹೆಸರಿನ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿಯನ್ನು ಬಿಡುಗಡೆ ಮಾಡಿದೆ. ಗಡಿಯಾಚೆಯ ಭಯೋತ್ಪಾದನೆ, ಸೈಬರ್ ದಾಳಿ, ಡೋಣ್‌ಗಳ ದುರ್ಬಳಕೆ ಹಾಗೂ ತಂತ್ರಜ್ಞಾನ ಬಳಸಿಕೊಂಡು ಅಪತ್ತು ಸೃಷ್ಟಿಸುವ ಪ್ರಯತ್ನಗಳನ್ನು ಮಟ್ಟಹಾಕುವ ನಿಟ್ಟಿನಲ್ಲಿ ನೂತನ ನೀತಿ ರೂಪಿಸಲಾಗಿದೆ.
  • ಕೇಂದ್ರ ಸರ್ಕಾರದ ಈ ಕಾರ್ಯತಂತ್ರವು ಬದಲಾಗು ತ್ತಿರುವ ಭಯೋತ್ಪಾದನೆಯ ಸ್ವರೂಪವನ್ನು ಎದುರಿಸಲು ಸಮಗ್ರ ಚೌಕಟ್ಟನ್ನು ರೂಪಿಸಿದೆ. ಕೇಂದ್ರ ಗೃಹ ಸಚಿವಾಲಯವು ಬಿಡುಗಡೆ ಮಾಡಿರುವ ಈ ಹೊಸ ನೀತಿಯು ಭಯೋ ತ್ಪಾದನೆಯನ್ನು ಯಾವುದೇ ಧರ್ಮ, ಜನಾಂಗ ಅಥವಾ ರಾಷ್ಟ್ರೀಯತೆಗೆ ಜೋಡಿಸದೆ, ಹಿಂಸಾಚಾರಕ್ಕೆ ಯಾವುದೇ ಸಮರ್ಥನೆ ಇಲ್ಲ ಎಂಬ ದೃಢ ನಿಲುವನ್ನು ಪ್ರತಿಪಾದಿಸಿದೆ. ಗೃಹ ಸಚಿವಾಲಯದ ವರದಿ ಪ್ರಕಾರ, ಗಡಿಯಾಚೆಗಿನ ಪ್ರಾಯೋಜಿತ ಭಯೋತ್ಪಾದನೆ ಭಾರತಕ್ಕೆ ದೊಡ್ಡ ಸವಾಲಾಗಿದೆ. ಅಲ್‌ಖೈದಾ ಮತ್ತು ಐಸಿಸ್‌ನಂಥ ಜಾಗತಿಕ ಸಂಘಟನೆಗಳು ‘ಸ್ವೀಪರ್ ಸೆಲ್’ಗಳ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಯತ್ನಿಸುತ್ತಿವೆ.
  • ಭಯೋತ್ಪಾದನೆ ನಿಗ್ರಹ ಕಾರ್ಯದಲ್ಲಿ ತೊಡಗಿರುವ ಏಜೆನ್ಸಿಗಳ ನಡುವೆ ಸಮನ್ವಯತೆ ಸಾಧಿಸುವುದು, ತನಿಖೆಯ ಪ್ರತಿಯೊಂದು ಹಂತದಲ್ಲೂ ಕಾನೂನು ತಜ್ಞರ ಸೇವೆ ಲಭ್ಯವಾಗುವಂತೆ ಮಾಡುವುದು ಹಾಗೂ ಭಯೋತ್ಪಾದಕ ರಿಗೆ ಹಣಕಾಸಿನ ನೆರವು, ಶಸ್ತ್ರಾಸ್ತ್ರ ಗಳು ಲಭ್ಯವಾಗುವುದನ್ನು ತಡೆಯುವ ಗುರಿಯನ್ನು ಈನೀತಿ ಹೊಂದಿದೆ.
  • ಗೃಹ ಸಚಿವಾಲಯ ಸಿದ್ಧಪಡಿಸಿರುವ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿ ಮತ್ತು ಕಾರ್ಯತಂತ್ರ ನೀತಿಯು, ‘ದೇಶದ ಒಳಗಿನ ಮತ್ತು ಹೊರಗಿನ ಕೆಲವು ಶಕ್ತಿಗಳು ಡೋನ್‌ಗಳು ಹಾಗೂ ರೊಬಾಟಿಕ್ ಅನ್ನು ಭಯೋತ್ಪಾದನೆಗಾಗಿ ದುರುಪಯೋಗಪಡಿಸಿಕೊಳ್ಳುವುದು’ ಕಳವಳಕ್ಕೆ ಕಾರಣವಾಗಿದೆ ಎಂದು ಹೇಳಿದೆ.
  • ಪಹಲ್ಲಾಮ್ ಉಗ್ರ ದಾಳಿ ಬಳಿಕ ಭಯೋತ್ಪಾದನೆ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ ನೀತಿ ಕಠಿಣಗೊಳಿಸಿರುವ ಕೇಂದ್ರ ಸರ್ಕಾರ, ದೇಶದ ಭದ್ರತೆಯನ್ನು ಸಮಗ್ರ ದಿಕ್ಕುಗಳಲ್ಲೂ ಬಲಪಡಿಸುವ ಉದ್ದೇಶದಿಂದ ‘ಪ್ರಹಾರ್’ ಹೆಸರಿನ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿಯನ್ನು ಬಿಡುಗಡೆ ಮಾಡಿದೆ. ಗಡಿಯಾಚೆಯ ಭಯೋತ್ಪಾದನೆ, ಸೈಬರ್ ದಾಳಿ, ಡೋಣ್‌ಗಳ ದುರ್ಬಳಕೆ ಹಾಗೂ ತಂತ್ರಜ್ಞಾನ ಬಳಸಿಕೊಂಡು ಅಪತ್ತು ಸೃಷ್ಟಿಸುವ ಪ್ರಯತ್ನಗಳನ್ನು ಮಟ್ಟಹಾಕುವ ನಿಟ್ಟಿನಲ್ಲಿ ನೂತನ ನೀತಿ ರೂಪಿಸಲಾಗಿದೆ.
  • ಕೇಂದ್ರ ಸರ್ಕಾರದ ಈ ಕಾರ್ಯತಂತ್ರವು ಬದಲಾಗು ತ್ತಿರುವ ಭಯೋತ್ಪಾದನೆಯ ಸ್ವರೂಪವನ್ನು ಎದುರಿಸಲು ಸಮಗ್ರ ಚೌಕಟ್ಟನ್ನು ರೂಪಿಸಿದೆ. ಕೇಂದ್ರ ಗೃಹ ಸಚಿವಾಲಯವು ಬಿಡುಗಡೆ ಮಾಡಿರುವ ಈ ಹೊಸ ನೀತಿಯು ಭಯೋ ತ್ಪಾದನೆಯನ್ನು ಯಾವುದೇ ಧರ್ಮ, ಜನಾಂಗ ಅಥವಾ ರಾಷ್ಟ್ರೀಯತೆಗೆ ಜೋಡಿಸದೆ, ಹಿಂಸಾಚಾರಕ್ಕೆ ಯಾವುದೇ ಸಮರ್ಥನೆ ಇಲ್ಲ ಎಂಬ ದೃಢ ನಿಲುವನ್ನು ಪ್ರತಿಪಾದಿಸಿದೆ. ಗೃಹ ಸಚಿವಾಲಯದ ವರದಿ ಪ್ರಕಾರ, ಗಡಿಯಾಚೆಗಿನ ಪ್ರಾಯೋಜಿತ ಭಯೋತ್ಪಾದನೆ ಭಾರತಕ್ಕೆ ದೊಡ್ಡ ಸವಾಲಾಗಿದೆ. ಅಲ್‌ಖೈದಾ ಮತ್ತು ಐಸಿಸ್‌ನಂಥ ಜಾಗತಿಕ ಸಂಘಟನೆಗಳು ‘ಸ್ವೀಪರ್ ಸೆಲ್’ಗಳ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಯತ್ನಿಸುತ್ತಿವೆ.
  • ಸವಾಲುಗಳ ಎಚ್ಚರಿಕೆ: ವಿಶೇಷವಾಗಿ ಪಂಜಾಬ್ ಮತ್ತು ಜಮ್ಮು-ಕಾಶ್ಮೀರದಲ್ಲಿ ಡೋನ್ ತಂತ್ರಜ್ಞಾನದ ಮೂಲಕ ಶಸ್ತ್ರಾಸ್ತ್ರ ಮತ್ತು ಮಾದಕ ವಸ್ತುಗಳ ಸಾಗಾಟ ನಡೆಯುತ್ತಿದೆ. ಭಯೋತ್ಪಾದಕರು ಸಂವಹನಕ್ಕಾಗಿ ಎನ್‌ಕ್ರಿಪ್ಪೆಡ್ ಆ್ಯಪ್‌ಗಳು, ಡಾರ್ಕ್ ವೆಬ್ ಮತ್ತು ಕ್ರಿಪ್ಲೋ ವ್ಯಾಲೆಟ್‌ಗಳನ್ನು ಬಳಸುತ್ತಿರುವುದು ಭದ್ರತಾ ಸಂಸ್ಥೆಗಳಿಗೆ ಹೊಸ ಸವಾಲಾಗಿದೆ. ಅಲ್ಲದೆ, ಸೈಬರ್ ದಾಳಿಗಳು ಮತ್ತು ರಾಹಾಯವಿಕ ವಾಡ ಡಿಜಿಟಲ್ ಶಸ್ತ್ರಾಸ್ತ್ರಗಳ
  • ಅಂತಾರಾಷ್ಟ್ರೀಯ ಸಹಕಾರ: ಭಯೋತ್ಪಾದನೆ ಜಾಗತಿಕ ಸಮಸ್ಯೆ ಆಗಿರುವುದರಿಂದ, ಇತರ ರಾಷ್ಟ್ರಗಳೊಂದಿಗೆ ಗುಪ್ತಚರ ಮಾಹಿತಿ ಹಂಚಿಕೆ ಮತ್ತು ಅಪರಾಧಿಗಳ ಹಸ್ತಾಂತರ ಪ್ರಕ್ರಿಯೆ ವೇಗಗೊಳಿಸಲು ಭಾರತ ನಿರ್ಧರಿಸಿದೆ.

ದತ್ತಾಂಶ ಹಂಚಿಕೆ: ಬಳಕೆದಾರರ ಆಯ್ಕೆಗೆ
ಸಂದರ್ಭ: ಮೆಟಾ ಪ್ಲಾಟ್‌ಫಾರ್ಮ್ಸ್ ಅಥವಾ ಮೆಟಾ ಸಮೂಹದ ಇತರ ಕಂಪನಿಗಳೊಂದಿಗೆ ದತ್ತಾಂಶ ಹಂಚಿಕೊಳ್ಳುವ ಆಯ್ಕೆಯನ್ನು ಬಳಕೆದಾರರಿಗೇ ಬಿಡಬೇಕು ಎಂದು ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ನೀಡಿರುವ ಆದೇಶವನ್ನು ಜಾರಿಗೆ ತರುವುದಾಗಿ ವಾಟ್ಸ್ಆ್ಯಪ್, ಸುಪ್ರೀಂ ಕೋರ್ಟ್‌ ತಿಳಿಸಿದೆ.

  • ಸಿಸಿಐ ಶಿಫಾರಸು ಗಮನದಲ್ಲಿ ಇಟ್ಟುಕೊಂಡು, ವಾಟ್ಸ್ಆ್ಯಪ್ ಮತ್ತು ಅದರ ಮಾತೃಸಂಸ್ಥೆ ಮೆಟಾ ಪ್ಲಾಟ್‌ಫಾರ್ಮ್ನಲ್ಲಿ ಜಾಹೀರಾತುಗಳ ಮೇಲೆ ಐದು ವರ್ಷ ನಿಷೇಧ ಹೇರಬೇಕು ಎಂಬ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಈ ಎರಡೂ ಕಂಪನಿಗಳಿಗೆ ಸಿಜೆಐ ನೇತೃತ್ವದ ಪೀಠವು ಸೂಚಿಸಿತು.

ಒಂದು ದೇಶ ಒಂದು ಮತಪಟ್ಟಿ: ಚುನಾವಣಾ ಆಯೋಗದಿಂದ ಮಹತ್ವದ ಹೆಜ್ಜೆ
ಸಂದರ್ಭ: ದೇಶಾದ್ಯಂತ ಚುನಾವಣೆಗಳಲ್ಲಿ ಪಾರದರ್ಶಕತೆ ಮತ್ತು ಏಕರೂಪತೆ ತರುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ದೆಹಲಿಯ ಭಾರತ ಮಂಟಪದಲ್ಲಿ ರಾಜ್ಯ ಚುನಾವಣಾ ಆಯುಕ್ತರ ರಾಷ್ಟ್ರೀಯ ದುಂಡುಮೇಜಿನ ಸಮ್ಮೇಳನವನ್ನು ಆಯೋಜಿಸಿದ್ದು, ಬರೋಬ್ಬರಿ 27 ವರ್ಷಗಳ ನಂತರ ಇಂಥದ್ದೊಂದು ಬೃಹತ್ ಸಭೆ ನಡೆಯುತ್ತಿರುವುದು ವಿಶೇಷ.

  • ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯ ಪ್ರಮುಖ ಉದ್ದೇಶ ‘ಒಂದೇ ಮತದಾರರ ಪಟ್ಟಿ’ ಪರಿಕಲ್ಪನೆಯನ್ನು ಜಾರಿಗೆ ತರುವುದಾಗಿದೆ ಎನ್ನಲಾಗಿದೆ.
  • ಪ್ರಸ್ತುತ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಕೇಂದ್ರ ಆಯೋಗವು ಪಟ್ಟಿ ಸಿದ್ಧಪಡಿಸಿದರೆ, ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ರಾಜ್ಯ ಚುನಾವಣಾ ಆಯೋಗಗಳು ಪ್ರತ್ಯೇಕ ಪಟ್ಟಿ ತಯಾರಿಸುತ್ತವೆ. ಇದರಿಂದ ಮತದಾರರ ಸಂಖ್ಯೆಯಲ್ಲಿ ವ್ಯತ್ಯಾಸಗಳು ಕಂಡುಬರುತ್ತಿದ್ದು, ಗೊಂದಲ ಸೃಷ್ಟಿಯಾಗುತ್ತಿದೆ. ಉದಾಹರಣೆಗೆ, ಉತ್ತರಪ್ರದೇಶದಲ್ಲಿ ಇತ್ತೀಚೆಗೆ ಇಂತಹ ವ್ಯತ್ಯಾಸಗಳು ಕಂಡುಬಂದಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ನಿರ್ಣಾಯಕ ಸಮಾವೇಶ:

  • ಈ ಸಭೆಯಲ್ಲಿ ‘ಇಸಿಐನೆಟ್’ ಎಂಬ ಡಿಜಿಟಲ್ ಫ್ಲ್ಯಾಟ್‌ಫಾರ್ಮ್ ಸೇರಿದಂತೆ ಹಲವು ತಾಂತ್ರಿಕ ಸುಧಾರಣೆಗಳನ್ನು ಪರಿಚಯಿಸಲಾಗುವುದು. ಅಲ್ಲದೆ, ಇವಿಎಂ ಯಂತ್ರಗಳ ಭದ್ರತೆ, ಪಾರದರ್ಶಕತೆ ಮತ್ತು ಮತದಾರರ ಅರ್ಹತೆ ಬಗ್ಗೆಯೂಸುದೀರ್ಘಟರ್ಟೆ ನಡೆಯಲಿದೆ.
  • 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಮತದಾರರ ಅರ್ಹತೆಯ ಮೇಲಿನ ತುಲನಾತ್ಮಕ ಅಭ್ಯಾಸಗಳ ಜತೆಗೆ ಎಲೆಕ್ಟ್ರಾನಿಕ್ ಮತಯಂತ್ರಗಳ ದೃಢತೆ, ಪಾರದರ್ಶಕತೆ ಮತ್ತು ಸುರಕ್ಷತೆಯ ಚರ್ಚೆಗಳು ಇದರಲ್ಲಿರಲಿವೆ.
  • ಒಟ್ಟು 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಚುನಾವಣಾ ಆಯುಕ್ತರು ಇದರಲ್ಲಿ ಭಾಗವಹಿಸಲಿದ್ದು, ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಈ ಸಮಾವೇಶ ನಿರ್ಣಾಯಕ ಎನ್ನಲಾಗಿದೆ.
  • ಭಾರತೀಯ ಚುನಾವಣಾ ಆಯೋಗವು ಲೋಕಸಭೆ, ವಿಧಾನಸಭೆ, ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಚುನಾವಣಿಗಳಿಗೆ ಜವಾಬ್ದಾರರಾಗಿದ್ದರೆ, ಸಾಂವಿಧಾನಿಕ ನಿಬಂಧನೆಗಳಡಿ ರಚಿಸಲಾದ ರಾಜ್ಯ ಚುನಾವಣಾ ಆಯೋಗಗಳು ಪಂಚಾಯತ್‌ಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾರರ ಪಟ್ಟಿ ಸಿದ್ಧಪಡಿಸುವ ಮತ್ತು ಅವುಗಳ ಚುನಾವಣೆಗಳನ್ನು ಮೇಲ್ವಿಚಾರಣೆ ಮಾಡುವ ಜವಾಬ್ದಾರಿ ಹೊಂದಿವೆ.

ಪತ್ರಿಕೆ-IV: ಸಾಮಾನ್ಯ ಅಧ್ಯಯನ-3

ಅಪ್ಪೆಮಿಡಿ: ವಿಶಿಷ್ಟ ತಳಿಗಳ ಭಂಡಾರ ರಕ್ಷಣೆಗೆ ಕೂಗು
ಸಂದರ್ಭ: ಉತ್ತರ ಕನ್ನಡದ ಅಘನಾಶಿನಿ ನದಿ ಪಾತ್ರದಲ್ಲಿ ಕಂಡುಬರುವ ಅಪರೂಪದ ಅಪ್ಪೆಮಿಡಿ ಮಾವಿನ ವೈವಿಧ್ಯ ಸಂರಕ್ಷಣೆಗಾಗಿ ಈ ಪ್ರದೇಶವನ್ನು ಜೀವವೈವಿಧ್ಯ ಪರಂಪರೆ ತಾಣ’ ಎಂದು ಘೋಷಿಸಬೇಕು ಎಂದು ಪರಿಸರ ತಜ್ಞರು ಮತ್ತು ಪರಿಸರ ಪ್ರೇಮಿಗಳು ಕರ್ನಾಟಕ ಜೀವವೈವಿಧ್ಯ ಮಂಡಳಿಗೆ ಮನವಿ ಸಲ್ಲಿಸಿದ್ದಾರೆ.

  • 30 ಕಿ.ಮೀ ಉದ್ದದ ನದಿದಂದೆಯಲ್ಲಿನ ಅಪ್ಪೆಮಿಡಿ ವೈವಿಧ್ಯದ ರಕ್ಷಣೆ ಇದರ ಉದ್ದೇಶ.
  • ‘ಜೈವಿಕ ವೈವಿಧ್ಯ ಕಾಯ್ದೆ 2002ರ ಅನುಬಂಧ 37ರಡಿ ಈ ವಿಶಿಷ್ಟ ಅನುವಂಶಿಕ ಭಂಡಾರವನ್ನು ರಕ್ಷಿಸಬೇಕು’ ಹಕ್ಕೊತ್ತಾಯ ಮಂಡಿಸಿದ್ದಾರೆ. ‘ಶಿರಸಿ ಮತ್ತು ಸಿದ್ದಾಪುರ ತಾಲ್ಲೂಕು ವ್ಯಾಪ್ತಿಯ ಸರಕುಳಿಯಿಂದ ಉಂಚಳ್ಳಿ ಜಲಪಾತದವರೆಗಿನ ನದಿ ದಂಡೆಯ ಎರಡೂ ಬದಿಯ 100 ಮೀಟರ್ ವ್ಯಾಪ್ತಿಯನ್ನು ಈ ಸಂರಕ್ಷಿತ ವಲಯದಲ್ಲಿ ಸೇರಿಸಬೇಕು’ ಎಂದು ಕೋರಿದ್ದಾರೆ.
  • ‘ಅಘನಾಶಿನಿ ಯಾವ ಅಣೆಕಟ್ಟುಗಳಿಲ್ಲದ ಮುಕ್ತ ಹರಿವಿನ ನದಿ. ಇಲ್ಲಿನ ವಿಶಿಷ್ಟ ಪರಿಸರ ವ್ಯವಸ್ಥೆಯಲ್ಲಿ ಅನಂತ ಭಟ್ಟನ ಅಪ್ಪೆ, ಜೀರಿಗೆ ಮಿಡಿ, ಕಂಚಿಪ್ಪ ಮತ್ತು ಗಿಳಿಸುಂಡಿಯಂಥ ನೂರಾರು ಅಪರೂಪದ ಅಪ್ಪೆಮಿಡಿ ತಳಿಗಳಿವೆ. ಇತ್ತೀಚಿನ ಅಧ್ಯಯನವೊಂದರ ಪ್ರಕಾರ, 10 ಕಿ.ಮೀ. ವ್ಯಾಪ್ತಿಯಲ್ಲಿ ವಿಶಿಷ್ಟ ಪರಿಮಳ ಹಾಗೂ ರುಚಿಯ ಸಾವಿರಕ್ಕೂ ಹೆಚ್ಚು ಮರಗಳಿವೆ’ ಎಂದು ಉಲ್ಲೇಖಿಸಿದ್ದಾರೆ.
  • ‘2023ರಲ್ಲಿ ಅಘನಾಶಿನಿ ಮುಖಜ ಭೂಮಿಗೆ’ ರಾಮ್‌ಸರ್ ತಾಣ’ದ ಮಾನ್ಯತೆ ಸಿಕ್ಕ ಬೆನ್ನಲ್ಲೇ, ನದಿ ಮೇಲ್ಬಾಗದ ಜೈವಿಕ ಸಂಪತ್ತು ಉಳಿಸುವ ತುರ್ತು ಅಗತ್ಯ ಕುರಿತು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ಇಲ್ಲಿ ಅತಿಕ್ರಮಣ, ವಾಣಿಜ್ಯ ಏಕದಳ ಕೃಷಿ, ಹವಾಮಾನ ಬದಲಾವಣೆಯಂಥ ಬೆದರಿಕೆ ಇದೆ’
  • ಈ ವ್ಯಾಪ್ತಿಯ ಅಣಲೆಬೈಲ್, ನೆಗ್ಗು, ಕಾನಸೂರು, ಹಸರಗೋಡು, ಹಾರ್ಸಿಕಟ್ಟಾ, ಸೋವಿನಕೊಪ್ಪ ಮತ್ತು ಹೆಗ್ಗರಣಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಮುದಾಯದ ಸಹಭಾಗಿತ್ತದೊಂದಿಗೆ ಜೀನ್ ಮ್ಯಾಪಿಂಗ್, ಪಾರಂಪರಿಕ ಹಬ್ಬಗಳು ಮತ್ತು ಸಂಶೋಧನಾ ಕಾರ್ಯಕ್ರಮ ಹಮ್ಮಿಕೊಳ್ಳುವ ಉದ್ದೇಶವಿದೆ.
  • ‘ಜೀವವೈವಿಧ್ಯ ಪರಂಪರೆ ತಾಣ’ ಘೋಷಣೆ ಬೇಡಿಕೆಗೆ ಮಾನ್ಯತೆ ಸಿಕ್ಕರೆ, ಸ್ಥಳೀಯ ಕೃಷಿಕರ ಹಕ್ಕುಗಳಿಗೆ ಆದ್ಯತೆ ಸಿಗುತ್ತದೆ. ಅಲ್ಲದೇ, ಪಶ್ಚಿಮ ಘಟ್ಟಗಳ ಈ ಅಪರೂಪದ ಜೈವಿಕ ಹಾಗೂ ಸಾಂಸ್ಕೃತಿಕ ಪರಂಪರೆಯು ಮುಂದಿನ ಪೀಳಿಗೆಗೆ ಸುರಕ್ಷಿತವಾಗಿ ಹಸ್ತಾಂತರ ವಾಗಲಿದೆ’.

ಸೂರ್ಯಘರ್ ಅಡಿ 30 ಲಕ್ಷ ಮನೆಗೆ ಸೌರಶಕ್ತಿ: ಮೈಲಿಗಲ್ಲು

  • ಪ್ರಧಾನ ಮಂತ್ರಿ ಸೂರ್ಯಘರ್‌ಯೋಜನೆ ಅಡಿ 30 ಲಕ್ಷ ಮನೆಗಳಿಗೆ ಸೌರಫಲಕ ಆಳವಡಿಸುವ ಮೂಲಕ ಕೇಂದ್ರ ಸರ್ಕಾರ ಮತ್ತೊಂದು ಮೈಲಿಗಲ್ಲು ದಾಟಿದೆ.
  • ‘ಸೂರ್ಯಘರ್ ಮೂಲಕ ಸೌರಶಕ್ತಿ ಫಲಕ ಅಳವಡಿಕೆಯಿಂದ ಇಂಧನ ಸ್ವಾವಲಂಬನೆ ಆಗಲಿದೆ ಹಾಗೂ ವಿದ್ಯುತ್ ಬಿಲ್ ಕಡಿಮೆ ಆಗಲಿದೆ.

ಪತ್ರಿಕೆ-V: ಸಾಮಾನ್ಯ ಅಧ್ಯಯನ-4

ನೈತಿಕ ಪ್ರಕರಣ ಅಧ್ಯಯನ (Ethics Case Study)
ಹಿನ್ನಲೆ (Background):

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂನಲ್ಲಿ ಅನಧಿಕೃತ ಮಾರಾಟಗಾರನಿಂದ ಪೂರೈಸಲಾದ ಕಲಬೆರಕೆ ಹಾಲನ್ನು ಸೇವಿಸಿದ ಪರಿಣಾಮ ಎರಡು ದಿನಗಳಲ್ಲಿ ನಾಲ್ವರು ನಾಗರಿಕರು ಮೃತಪಟ್ಟಿದ್ದು, 12 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಕಲಬೆರಕೆ ಹಾಲು ಸೇವನೆಯಿಂದ ಮೂತ್ರಪಿಂಡ ವೈಫಲ್ಯ ಉಂಟಾಗಿ ಸಾವು ಸಂಭವಿಸಿದೆ. ಹಾಲು ಪೂರೈಸಿದ ಮಾರಾಟಗಾರನು 46 ಹಸುಗಳು ಹಾಗೂ ಸ್ಥಳೀಯ ರೈತರಿಂದ ಹಾಲು ಸಂಗ್ರಹಿಸಿ ಮನೆಗಳಿಗೆ ವಿತರಿಸುತ್ತಿದ್ದನು. ಸರ್ಕಾರ ತನಿಖೆ ಆರಂಭಿಸಿ, ಪರಿಹಾರ ಘೋಷಿಸಿದೆ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದೆ.

ನೀವು ಆ ಜಿಲ್ಲೆಯ ಜಿಲ್ಲಾಧಿಕಾರಿ (District Collector) ಆಗಿದ್ದೀರಿ:
1.ಪ್ರಕರಣದಲ್ಲಿರುವ ನೈತಿಕ ಸಮಸ್ಯೆಗಳು (Ethical Issues)?

2.ಪಾಲುದಾರರು (Stakeholders)?
3.ಒಳಗೊಂಡಿರುವ ಮೌಲ್ಯಗಳು (Values Involved)

4.ಜಿಲ್ಲಾಧಿಕಾರಿಯಾಗಿ ನಿಮ್ಮ ಆಯ್ಕೆಗಳು (Options)?
ಆಯ್ಕೆ 1: ಕೇವಲ ತನಿಖೆ ನಡೆಸಿ ಕಾನೂನು ಕ್ರಮಕ್ಕೆ ಸೀಮಿತವಾಗುವುದು
ಆಯ್ಕೆ 2: ತುರ್ತು ಸಾರ್ವಜನಿಕ ಆರೋಗ್ಯ ಕ್ರಮಗಳ ಜೊತೆಗೆ ಕಠಿಣ ಆಡಳಿತಾತ್ಮಕ ಕ್ರಮಗಳು
ಆಯ್ಕೆ 3: ದೀರ್ಘಕಾಲಿಕ ಆಹಾರ ಸುರಕ್ಷತಾ ಸುಧಾರಣೆಗಳನ್ನು ಜಾರಿಗೆ ತರುವುದು

    Sources: Prajavani, Kannada Prabha, Vijayavani

    0 0 votes
    Article Rating
    Subscribe
    Notify of
    guest

    0 Comments
    Oldest
    Newest Most Voted
    Inline Feedbacks
    View all comments