Wed. Feb 25th, 2026

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಹತ್ವದ ಪ್ರಚಲಿತ ವಿದ್ಯಮಾನಗಳು

ರಾಜ್ಯದ ಪ್ರಾಮುಖ್ಯತೆಯ ಪ್ರಸ್ತುತ ಘಟನೆಗಳು ಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳು

ಪತ್ರಿಕೆ-I: ಪ್ರಬಂಧಗಳು

ಪ್ರಬಂಧ-1:

ಮೊಬೈಲ್ ಬಳಕೆ ನಿಯಂತ್ರಣ: ಇದು ವೈಯಕ್ತಿಕ ಹೊಣೆಗಾರಿಕೆಯೇ ಅಥವಾ ಸರ್ಕಾರದ ಹಸ್ತಕ್ಷೇಪ ಅಗತ್ಯವೇ? ಚರ್ಚಿಸಿ.

ಪ್ರಬಂಧ2:

ಗರಿಷ್ಠ ಗ್ಯಾರಂಟಿ ಯೋಜನೆಗಳು: ಸಾಮಾಜಿಕ ನ್ಯಾಯವೇ ಅಥವಾ ಹಣಕಾಸು ಒತ್ತಡವೇ?

ಪತ್ರಿಕೆ-II: ಸಾಮಾನ್ಯ ಅಧ್ಯಯನ-1

₹3.25 ಲಕ್ಷ ಕೋಟಿ ಜೈವಿಕ ಆರ್ಥಿಕತೆ
ಸಂದರ್ಭ: ರಾಜ್ಯದಲ್ಲಿ ಜೈವಿಕ ಆರ್ಥಿಕತೆಯು (ಬಯೋ ಎಕಾನಮಿ) 2025 ರಲ್ಲಿ ₹3.25,360 ಕೋಟಿಗಳಿಗೆ (39.2 ಶತಕೋಟಿ ಡಾಲರ್) ಏರಿಕೆಯಾಗಿದೆ. ಹಿಂದಿನ ವರ್ಷಕ್ಕಿಂತ ಗರಿಷ್ಠ ಬೆಳವಣಿಗೆ ದಾಖಲಿಸಿದೆ.

  • ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿಯು (ಕೆಐಟಿಎಸ್), ಜೈವಿಕ ತಂತ್ರಜ್ಞಾನ ಉದ್ಯಮಗಳ ಸಂಘದ (ಎಬಿಎಲ್‌ಇ) ಸಹಯೋಗದಲ್ಲಿ ಸಿದ್ಧಪಡಿಸಿರುವ ರಾಜ್ಯದ ಜೈವಿಕ ಆರ್ಥಿಕ ವರದಿ 2025 ರಲ್ಲಿ ಈ ಮಾಹಿತಿ ಇದೆ. ಈ ವರದಿಯನ್ನು ಐಟಿ ಬಿಟಿ ಸಚಿವ ಬಿಡುಗಡೆ ಮಾಡಿದರು.
  • ‘ಕರ್ನಾಟಕವು ದೇಶದ ಜೈವಿಕ ಆರ್ಥಿಕತೆಗೆ ಶೇ 21ರಷ್ಟು ಕೊಡುಗೆ ನೀಡುತ್ತಿದೆ. ರಾಜ್ಯದ ಒಟ್ಟು ಅಂತರಿಕ ಉತ್ಪನ್ನದಲ್ಲಿ (ಜಿಎಸ್‌ಡಿಪಿ) ಶೇ 10 ಕ್ಕಿಂತ ಹೆಚ್ಚು ಪಾಲು ಹೊಂದಿದೆ. ಜೈವಿಕ ತಂತ್ರಜ್ಞಾನವು ಅರ್ಥಿಕ ಬೆಳವಣಿಗೆಯ ಪ್ರಮುಖ ಎಂಜಿನ್ ಆಗಿರುವುದಕ್ಕೆ ನಿದರ್ಶನವಾಗಿದೆ. ದೇಶದ ಅತ್ಯಂತ ಪ್ರಬುದ್ಧ ಮತ್ತು ನಾವೀನ್ಯ ಆಧಾರಿತ ಜೈವಿಕ ತಂತ್ರಜ್ಞಾನ ವ್ಯವಸ್ಥೆಯಾಗಿ ಸುಸ್ಥಿರ ರೀತಿಯಲ್ಲಿ ಮುಂಚೂಣಿ ಸ್ಥಾನ ಕಾಯ್ದುಕೊಂಡಿರುವುದನ್ನು ಈ ವರದಿ ಬೆಳಕು ಚೆಲ್ಲಿದೆ’.
  • ಜೈವಿಕ ತಂತ್ರಜ್ಞಾನವು ಇನ್ನು ಮುಂದೆ ಪ್ರಯೋಗಾಲಯಗಳಿಗೆ ಮಾತ್ರ ಸೀಮಿತವಾಗಿರದೇ ಆರ್ಥಿಕ ಬೆಳವಣಿಗೆ, ಕೈಗಾರಿಕಾ ನಾವೀನ್ಯತೆ ಮತ್ತು ಸಾಮಾಜಿಕ ಪ್ರಭಾವದ ಕೇಂದ್ರ ಚಾಲಕ ಶಕ್ತಿಯಾಗಲಿದೆ. ಡೀಪ್ ಟೆಕ್ ನವೋದ್ಯಮಗಳಿಗೆ ಬೆಂಬಲ, ನಾವೀನ್ಯತೆ, ಮೂಲ ಸೌಕರ್ಯಗಳ
  • ಬಲಪಡಿಸುವಿಕೆ ಮತ್ತು ಬೆಳವಣಿಗೆಯು ಬೆಂಗಳೂರು ಅಚೆಗಿನ ಪ್ರತಿಯೊಂದು ಪ್ರದೇಶಕ್ಕೂ ತಲುಪುವಂತೆ ನೋಡಿಕೊಳ್ಳಬೇಕಾಗಿದೆ.

ಪತ್ರಿಕೆ-III: ಸಾಮಾನ್ಯ ಅಧ್ಯಯನ-2

ತಕ್ಷಣವೇ ಸಿಗಲಿದೆ ಮ್ಯುಟೇಷನ್ ಪ್ರತಿ

ಸಂದರ್ಭ: ಕೃಷಿ ಭೂಮಿ ಸೇರಿದಂತೆ ಯಾವುದೇ ಸ್ವತ್ತಿಗೆ ಸ್ವಯಂ ಚಾಲಿತವಾಗಿ ಮ್ಯುಟೇಷನ್ ಪಡೆಯಬಹುದಾದ ಹೊಸ ವ್ಯವಸ್ಥೆಗೆ ಕಂದಾಯ ಸಚಿವ ಚಾಲನೆ ನೀಡಿದರು.

  • ಚಾಲಿತ ಎಲ್ಲ 7 ದಿನಗಳ ಮತ್ತು 15 ದಿನಗಳ ನೋಟಿಸ್ ಅವಧಿ ಹೊಂದಿರುವ ಮ್ಯುಟೇಷನ್‌ಗಳನ್ನು ನೋಟಿಸ್ ಅವಧಿ ಮುಕ್ತಾಯವಾದ ನಂತರ ಮಾನವ ಹಸ್ತಕ್ಷೇಪವಿಲ್ಲದೆ ಸ್ವಯಂ ತಂತ್ರಾಂಶದ ಮೂಲಕ ಸರ್ವರ್ ಸಹಿ ಇರುವ ಮ್ಯುಟೇಷನ್ ಪಡೆಯ ಬಹುದಾಗಿದೆ. ಇದರಿಂದಾಗಿ ಕ್ರಯ, ವಿಭಾಗ, ದಾನ, ಪೌತಿ, ಉಯಿಲುಗಳ ಮ್ಯುಟೇಷನ್ ಸ್ವಯಂಚಾಲಿತವಾಗಿ ಪಡೆಯಬಹುದು.
  • ಒಂದು ವೇಳೆ 7 ಕೆಲಸದ ದಿನಗಳು ಅದವಾ 15 ಕೆಲಸದ ದಿನಗಳ ನೋಟಿಸ್ ಅವಧಿಯೊಳಗೆ ಕಂದಾಯ ನಿರೀಕ್ಷಕರು (ಸರ್ಕಾರಿ ಆಕ್ಷೇಪ) ಅಥವಾ ಸಾರ್ವಜನಿಕರು ತಕರಾರು ಸಲ್ಲಿಸಿದರೆ, ಅಂತಹ ಮ್ಯುಟೇಷನ್‌ಗಳನ್ನು ಪೂರ್ಣಗೊಳಿಸದೆ, ಅರ್‌ಸಿಸಿಎಂಎಸ್ ತಂತ್ರಾಂಶದ ಮೂಲಕ ತಹಶೀಲ್ದಾರ್ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸಲಾಗುತ್ತದೆ. ತಹಶೀಲ್ದಾರರ ನಿರ್ಧಾರದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
  • ಈ ಹಿಂದೆ ಮ್ಯುಟೇಷನ್ ಗಳಿಗೆ ಆಕ್ಷೇಪಣೆ ಇದ್ದಲ್ಲಿ ಅಥವಾ ಅನುಮೋದನೆ ನೀಡಬೇಕಾದಲ್ಲಿ, ರಾಜಸ್ವ ನಿರೀಕ್ಷಕರು ಖುದ್ದಾಗಿ ತಾಲ್ಲೂಕು ಕಚೇರಿಗಳಿಗೆ ಬಂದು ಸಲ್ಲಿಸಬೇಕಾ ಗಿತ್ತು. ಈಗ ರಾಜಸ್ವ ನಿರೀಕ್ಷಕರಿಗೆ ಲಾಗಿನ್ ನೀಡಿದ್ದು, ಯಾವುದೇ ಸ್ಥಳದಿಂದ ಆಕ್ಷೇಪಣೆ ಸಲ್ಲಿಸಲು ತಂತ್ರಾಂಶದಲ್ಲಿ ಅವಕಾಶ ನೀಡಲಾಗಿದೆ.

ಕೇರಳ ಶೀಘ್ರದಲ್ಲೇ ಆಗಲಿದೆ ‘ಕೇರಳಂ’:  ‘ಕೇರಳಂ’ ಹೆಸರಿಗೆ ಸಂಪುಟ ಒಪ್ಪಿಗೆ

ಸಂದರ್ಭ: ಕೇರಳ ಶೀಘ್ರದಲ್ಲೇ ‘ಕೇರಳಂ’ ಆಗಲಿದೆ. ರಾಜ್ಯದ ಮರು ನಾಮಕರಣ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ.

  • ಕೇರಳ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.
  • ಕೇರಳದ ಹೆಸರನ್ನು ಅಧಿಕೃತ ವಾಗಿ ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯ ‘ವನ್ನು ಕೇರಳ ವಿಧಾನಸಭೆಯು 2023ರ * ಅಗಸ್ಟ್ 9ರಂದು ಅಂಗೀಕರಿಸಿತ್ತು.
  • ‘ಭಾಷೆಗಳ ಆಧಾರದಲ್ಲಿ 1956ರ ನ.1ರಂದು ರಾಜ್ಯಗಳನ್ನು ರಚಿಸಲಾಗಿತ್ತು. ಕೇರಳ ಪಿರವಿ ದಿನವನ್ನೂ ನ.1 ರಂದು ಆಚರಿಸಲಾಗುತ್ತದೆ. ರಾಜ್ಯವನ್ನು ಮಲಯಾಳ ಭಾಷೆಯಲ್ಲಿ ‘ಕೇರಳಂ* ಎಂದೇ ಕರೆಯಲಾಗುತ್ತಿದೆ. ಆದರೆ, ಇತರ ಭಾಷೆಗಳಲ್ಲಿ ರಾಜ್ಯದ ಹೆಸರು ಇನ್ನೂ ಕೇರಳವಾಗಿದೆ. ಸಂವಿಧಾನದ 3ನೇ ವಿಧಿದಡಿ ‘ಕೇರಳಂ’ ಎಂದು ತಿದ್ದುಪಡಿ ಮಾಡಲು ಮತ್ತು ಸಂವಿಧಾನದ 8ನೇ ವಿಧಿಯಡಿದಲ್ಲಿ ಉಲ್ಲೇಖಿಸಿರುವ ಎಲ್ಲ ಭಾಷೆಗಳಲ್ಲಿ ‘ಕೇರಳಂ’ ಎಂದು ಮರು ನಾಮಕರಣ ತಕ್ಷಣ ಮಾಡಲು ಕ್ರಮ ಕೈಗೊಳ್ಳುವಂತೆ ವಿಧಾನಸಭೆ ಸರ್ವಾನುಮತದಿಂದ ಕೇಂದ್ರ ಸರ್ಕಾರ ವನ್ನು ಕೋರುತ್ತದೆ’ ಎಂದು ನಿರ್ಣಯ ತೆಗೆದುಕೊಂಡಿತ್ತು.
  • ಮೊದಲ ಬಾರಿ ಕಳುಹಿಸಿದ್ದನಿರ್ಣಯವನ್ನು ಪರಿಶೀಲಿಸಿದ್ದ ಕೇಂದ್ರ ಗೃಹ ಸಚಿವಾಲಯವು ಕೆಲ ತಾಂತ್ರಿಕ ಬದಲಾವಣೆ ಮಾಡುವಂತೆ ಹೇಳಿತ್ತು. ಹೀಗಾಗಿ, ಕೇರಳ

ಪತ್ರಿಕೆ-IV: ಸಾಮಾನ್ಯ ಅಧ್ಯಯನ-3

ಎಚ್‌ಪಿವಿ ಲಸಿಕೆ ಅಭಿಯಾನ ಶೀಘ್ರ

ಸಂದರ್ಭ: ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ ಕ್ರಮ 14 ವರ್ಷದ ಹೆಣ್ಣುಮಕ್ಕಳಿಗೆ ಎಚ್ಪಿವಿ ಲಸಿಕೆ (ಗರ್ಭಕಂಠದ ಕ್ಯಾನ್ಸರ್ ತಡೆಯಲು) ನೀಡುವ ವಿಶೇಷ ಅಭಿಯಾನವನ್ನು ಕೇಂದ್ರ ಸರ್ಕಾರವು ಶೀಘ್ರದಲ್ಲಿಯೇ ಆರಂಭಿಸಲಿದೆ.

  • ಪ್ರತಿವರ್ಷ ಎಲ್ಲ ಸಾಮಾಜಿಕ ಆರ್ಥಿಕ ವರ್ಗದ 1.15 ಕೋಟಿ ಹೆಣ್ಣುಮಕ್ಕಳಿಗೆ ಲಸಿಕೆಯನ್ನು ಉಚಿತವಾಗಿ ನೀಡ ಲಾಗುವುದು ಎಂದು ಮಾಹಿತಿ ನೀಡಿವೆ.
  • ಭಾರತೀಯ ಮಹಿಳೆಯರಲ್ಲಿ ಅತಿ ಹೆಚ್ಚಾಗಿ ಕಂಡುಬರುವ ಕ್ಯಾನ್ಸರ್‌ಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಪ್ರಮಾಣ ಎರಡನೆಯದಾಗಿದೆ. ಹೆಣ್ಣುಮಕ್ಕಳನ್ನು ಇದರ ಕಬಂಧಬಾಹುವಿನಿಂದ ರಕ್ಷಿಸುವ ಉದ್ದೇಶದಿಂದ ವರ್ಷಗಟ್ಟಲೆ ಲಸಿಕೆಯ ಪರೀಕ್ಷೆ ನಡೆಸಿದ್ದ ಕೇಂದ್ರ ಸರ್ಕಾರ, ಈ ವಾರದಿಂದಲೇ ರಾಷ್ಟ್ರದಾದ್ಯಂತ ಲಸಿಕೆ ಅಭಿಯಾನ ಆರಂಭಿಸಲು ಮುಂದಾಗಿದೆ.
  • ಇದು ವಿಶೇಷ ಅಭಿಯಾನವಾಗಿದ್ದು, ಸಾರ್ವತ್ರಿಕ ಲಸಿಕೆ ಕಾರ್ಯಕ್ರಮದ ಭಾಗ ಅಲ್ಲ. ಮೆರ್ಕ್ ಕಂಪನಿಯ ಗಾರ್ಡಸಿಲ್ ಲಸಿಕೆಯನ್ನು ಪೂರೈಸಲಾಗುತ್ತದೆ.
  • ಜನನ ಪ್ರಮಾಣಪತ್ರ, ಆಧಾರ್ ಅಥವಾ ಪಡಿತರ ಚೀಟಿಯಂತಹ ಸರ್ಕಾರಿ ಗುರುತಿನ ಚೀಟಿಯ ಮೇಲೆ ನಮೂದಾಗಿರುವ ಜನ್ಮ ದಿನಾಂಕದ ಆಧಾರದಲ್ಲಿ ವಯಸ್ಸನ್ನು ನಿರ್ಧರಿಸಿ ಲಸಿಕೆಯನ್ನು ವಿತರಿಸಲಾಗುತ್ತದೆ.
  • ಈ ಲಸಿಕೆಯು ಜಗತ್ತಿನಾದ್ಯಂತ ವ್ಯಾಪಕವಾಗಿ ಸಂಶೋಧನೆಗೆ ಒಳಪಟ್ಟಿದ್ದು, ಶೇ 93 100ರಷ್ಟು ಪರಿಣಾಮಕಾರಿಯಾಗಿ ಕ್ಯಾನ್ಸರ್ ತಡೆಗಟ್ಟುತ್ತದೆ ಎಂದು ದೃಢಪಟ್ಟಿದೆ.
  • ‘ಶಿಫಾರಸು ಮಾಡಲಾದ ನಿರ್ದಿಷ್ಟ ವಯೋಮಾನದ ಹೆಣ್ಣುಮಕ್ಕಳಿಗೆ ಈ ಲಸಿಕೆ ನೀಡಿದಲ್ಲಿ ಗರ್ಭಕಂಠ ಕ್ಯಾನ್ಸರ್‌ನಿಂದ ದೀರ್ಘಕಾಲದವರೆಗೆ ರಕ್ಷಣೆ ಪಡೆಯಬಹುದು ಎಂದು ಜಾಗತಿಕ ಮತ್ತು ಭಾರತೀಯ ವೈಜ್ಞಾನಿಕ ಸಾಕ್ಷ್ಯಗಳು ದೃಢಪಡಿಸಿವೆ’ ಎಂದು ಮೂಲಗಳು ತಿಳಿಸಿವೆ.
  • ಈ ಲಸಿಕೆ ವಿತರಣೆಗೆ 2006ರಲ್ಲಿ ಪರವಾನಗಿ ಲಭಿಸಿದ್ದು, ಈವರೆಗೆ ಜಗತ್ತಿನಾದ್ಯಂತ 50 ಕೋಟಿ ಡೋಸ್ ಪೂರೈಕೆ ಮಾಡಲಾಗಿದೆ.
  • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024ರ ಬಜೆಟ್ ಭಾಷಣದಲ್ಲಿ ಎಚ್‌.ಪಿವಿ ಲಸಿಕೆ ಅಭಿಯಾನದ ಬಗ್ಗೆ ಘೋಷಣೆ ಮಾಡಿದ್ದರು.

ಪತ್ರಿಕೆ-V: ಸಾಮಾನ್ಯ ಅಧ್ಯಯನ-4

ನೈತಿಕ ಪ್ರಕರಣ ಅಧ್ಯಯನ (Ethics Case Study) – ಕೊಪ್ಪಳ ಜಿಲ್ಲೆಯ ಕಾರ್ಖಾನೆ ವಿವಾದ
ಹಿನ್ನಲೆ (Background):

ಕೊಪ್ಪಳ ಜಿಲ್ಲೆಯ ಒಂದು ಗ್ರಾಮದಲ್ಲಿ ಸ್ಥಾಪನೆಯಾಗುತ್ತಿರುವ ಕೈಗಾರಿಕಾ ಘಟಕ (ಕಾರ್ಖಾನೆ) ಕುರಿತಾಗಿ ಸ್ಥಳೀಯ ಜನರಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಕಾರ್ಖಾನೆ ಸ್ಥಾಪನೆಯಿಂದ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ ಎಂಬುದು ಸರ್ಕಾರದ ವಾದ. ಆದರೆ ಸ್ಥಳೀಯ ರೈತರು ಹಾಗೂ ಗ್ರಾಮಸ್ಥರು, ಕಾರ್ಖಾನೆಯಿಂದ ಪರಿಸರ ಮಾಲಿನ್ಯ, ಕೃಷಿ ಭೂಮಿಗೆ ಹಾನಿ, ನೀರಿನ ಮೂಲಗಳ ಮೇಲೆ ಒತ್ತಡ ಮತ್ತು ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಪ್ರತಿಭಟನೆಗಳು ಶಾಂತಿಯುತವಾಗಿ ಆರಂಭವಾದರೂ, ಕ್ರಮೇಣ ಉದ್ವಿಗ್ನತೆಗೆ ತಿರುಗುವ ಲಕ್ಷಣಗಳು ಕಾಣಿಸುತ್ತಿವೆ. ಸ್ಥಳೀಯ ಆಡಳಿತಾಧಿಕಾರಿಯಾಗಿ ನೀವು ಈ ವಿಷಯವನ್ನು ನಿರ್ವಹಿಸಬೇಕಾದ ಜವಾಬ್ದಾರಿಯನ್ನು ಹೊಂದಿದ್ದೀರಿ. ಒಂದು ಕಡೆ ಅಭಿವೃದ್ಧಿ ಮತ್ತು ಕೈಗಾರಿಕೀಕರಣದ ಅಗತ್ಯ, ಮತ್ತೊಂದು ಕಡೆ ಪರಿಸರ ಸಂರಕ್ಷಣೆ, ಜನರ ಜೀವನೋಪಾಯ ಮತ್ತು ಸಾರ್ವಜನಿಕ ಶಾಂತಿ – ಇವುಗಳ ನಡುವೆ ಸಮತೋಲನ ಸಾಧಿಸುವುದು ನಿಮ್ಮ ಮುಂದೆ ಇರುವ ಸವಾಲಾಗಿದೆ.

ಪ್ರಮುಖ ನೈತಿಕ ಪ್ರಶ್ನೆಗಳು (Ethical Issues)
1.ಆರ್ಥಿಕ ಅಭಿವೃದ್ಧಿ vs ಪರಿಸರ ಸಂರಕ್ಷಣೆ
2.ಉದ್ಯೋಗ ಸೃಷ್ಟಿ vs ಆರೋಗ್ಯ ಮತ್ತು ಜೀವನೋಪಾಯ ರಕ್ಷಣೆ
3.ಸಾರ್ವಜನಿಕ ಹಿತಾಸಕ್ತಿ vs ಖಾಸಗಿ ಹೂಡಿಕೆದಾರರ ಲಾಭ
4.ಕಾನೂನು ಪಾಲನೆ vs ರಾಜಕೀಯ/ಆರ್ಥಿಕ ಒತ್ತಡ

ಪಾಲುದಾರರು (Stakeholders)
ಸ್ಥಳೀಯ ರೈತರು ಮತ್ತು ಗ್ರಾಮಸ್ಥರು
ಕಾರ್ಖಾನೆ ಸ್ಥಾಪಿಸುವ ಕಂಪನಿ
ರಾಜ್ಯ ಸರ್ಕಾರ
ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆ
ಪರಿಸರ ನಿಯಂತ್ರಣ ಮಂಡಳಿ
ನಾಗರಿಕ ಸಮಾಜ ಸಂಘಟನೆಗಳು

ನಿಮ್ಮ ಮುಂದಿರುವ ಆಯ್ಕೆಗಳು (Options)
ಆಯ್ಕೆ 1:
ಕಾರ್ಖಾನೆ ಸ್ಥಾಪನೆಗೆ ತಕ್ಷಣ ಅನುಮತಿ ನೀಡುವುದು.

ಆಯ್ಕೆ 2:
ಎಲ್ಲಾ ಅನುಮತಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಪರಿಸರ ಪರಿಣಾಮ ಅಧ್ಯಯನ (EIA) ಮರುಪರಿಶೀಲನೆ ಮಾಡುವುದು.

ಆಯ್ಕೆ 3:
ಸ್ಥಳೀಯ ಜನರೊಂದಿಗೆ ಸಂವಾದ ನಡೆಸಿ, ಪರಿಹಾರ ಮತ್ತು ಪರಿಹಾರ ಕ್ರಮಗಳೊಂದಿಗೆ ಸಮ್ಮತ ಪರಿಹಾರ ರೂಪಿಸುವುದು.

Sources: Prajavani, Vijayavani

0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments