Sat. Feb 7th, 2026

ಸಂದರ್ಭ: ಅಮೆರಿಕದಲ್ಲಿ ನೆಲಸಿರುವ ಭಾರತ ಮೂಲದ ಖಗೋಳ ವಿಜ್ಞಾನಿ ಪ್ರೊಫೆಸರ್ ಶ್ರೀನಿವಾಸ ಕುಲಕರ್ಣಿ ಅವರಿಗೆ ಇಂಗ್ಲೆಂಡ್ ರಾಯಲ್ ಅಸ್ಟ್ರನಾಮಿಕಲ್ ಸೊಸೈಟಿಯ ಶ್ರೀನಿವಾಸ (ಆರ್ಎಎಸ್) ಚಿನ್ನದ ಪದಕ ಕುಲಕರ್ಣಿ ಲಭಿಸಿದೆ.
• ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸಂಶೋಧನೆಗಳನ್ನು ಕೈಗೊಂಡಿರುವ ಶ್ರೀನಿವಾಸ್ ಕುಲಕರ್ಣಿ ಅವರು, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರ ಸಹೋದರ.
• ಮಹಾರಾಷ್ಟ್ರದಲ್ಲಿ ಜನಿಸಿರುವ ಕುಲಕರ್ಣಿ ಅವರು, ಕ್ಯಾಲಿಫೋರ್ನಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಾಧ್ಯಾಪಕರಾಗಿದ್ದಾರೆ.

ಖಗೋಳ ವಸ್ತುಗಳು ಮತ್ತು ಗಾಮಾ ಕಿರಣಗಳ ಸ್ವಯಂಸ್ಫೋಸೇರಿದಂತೆ ಖಗೋಳ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಸಂಶೋಧನೆ ಕೈಗೊಂಡು ಯಶಸ್ವಿಯಾಗಿದ್ದಾರೆ.
ಬಹುತರಂಗಾಂತರದ ‘ಖಗೋಳ ಭೌತಶಾಸ್ತ್ರದಲ್ಲಿ ಕ್ಷಣಿಕ ಕುರಿತಾದ ಸುಸ್ಥಿರ, ನವೀನ ಮತ್ತು ಅಭೂತಪೂರ್ವ ಅನ್ನೇಷಣೆ’ಯ ಕೊಡುಗೆಯನ್ನು ಚಿನ್ನದ ಪದಕ ಆಯ್ಕೆಗೆ ಪರಿಗಣಿಸಲಾಗಿದೆ.
1984ರಿಂದಲೂ ರಾಯಲ್ ಸಂಸ್ಥೆಯು ಚಿನ್ನದ ಪದಕವನ್ನು ನೀಡುತ್ತಿದೆ. ಖ್ಯಾತ ವಿಜ್ಞಾನಿಗಳಾದ ಸ್ಟೀಪನ್ ಹಾಕಿಂಗ್, ಜಾನ್ ಬೆಲ್ ಬರ್ನೆಲ್, ಅಲ್ಬರ್ಟ್ ಐನ್ಸ್ಟೀನ್ ಮತ್ತು ಎಡ್ರಿನ್ ಹಬಲ್ ಅವರು ಈ ಪದಕ ಪಡೆದಿದ್ದಾರೆ. ಇವರ ಸಾಲಿಗೆ ಕುಲಕರ್ಣಿ ಸೇರಿದ್ದಾರೆ.
• 2024ರಲ್ಲಿ ಖಗೋಳ ಕ್ಷೇತ್ರದ ಪ್ರಶಸ್ತಿ) ಅನ್ವೇಷಣೆಗಾಗಿ ‘ಶಾ’ ಪುರಸ್ಕಾರವನ್ನೂ (ಹಾಂಕಾಂಗ್ ನೀಡುವ ಕುಲಕರ್ಣಿ ಪಡೆದಿದ್ದಾರೆ. ಖಗೋಳ ವಿಜ್ಞಾನದ ಸಾಧನಗಳ ಅನ್ವೇಷಕರಾಗಿ ರುವ ಕುಲಕರ್ಣಿ ಅವರು, ಈವರೆಗೆ 10 ಸಾಧನಗಳನ್ನು ರೂಪಿಸಿದ್ದಾರೆ.
• ಕುಲಕರ್ಣಿ ಅವರು ನಾಸಾದ ನೇರಳಾತೀತ ಕಿರಣಗಳ ಅನ್ವೇಷಣೆಗೆ ಸಂಬಂಧಿಸಿದ (ಯುವಿಎಕ್ಸ್) ಸಂಶೋಧನೆಯ ಕಾರ್ಯಯೋಜನೆಯ ಭಾಗವಾಗಿದ್ದಾರೆ.ನೇರಳಾತೀತ ಕಿರಣಗಳ ಕುರಿತಾದ ಅತ್ಯಂತ ಸೂಕ್ಷ್ಮ ಸಂಶೋಧನೆ ಇದಾಗಿದೆ.

•ಕುಲಕರ್ಣಿ ಅವರು 1978ರಲ್ಲಿ ದೆಹಲಿಯ ಭಾರತೀಯ ತಾಂತ್ರಿಕ ಸಂಸ್ಥೆಯಲ್ಲಿ (ಐಐಟಿ) ಸ್ನಾತಕೋತ್ತರ ಪದವಿ, 1983ರಲ್ಲಿ ಬಾರ್ಕ್ಲೆಯಲ್ಲಿ ಪಿಎಚ್.ಡಿ ಪದವಿ ಪಡೆದಿದ್ದಾರೆ.

0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments