ಸಂದರ್ಭ: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಪರಿಸರ ಸೂಕ್ಷ್ಮ ಪ್ರದೇಶವನ್ನು (ಇಎಸ್ಝಡ್) 268 ಚದರ ಕಿ.ಮೀ ನಿಂದ 168 ಚದರ ಕಿ.ಮೀ.ಗೆ ಇಳಿಸಿರುವ ಕರ್ನಾಟಕ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ನೇಮಿಸಿರುವ ಕೇಂದ್ರ ಉನ್ನತಾಧಿಕಾರ ಸಮಿತಿಯು (ಸಿಇಸಿ) ಕಟುವಾಗಿ ಟೀಕಿಸಿದ್ದು. ಈ ಕ್ರಮವು ಉದ್ಯಾನದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅಭಿಪ್ರಾಯಪಟ್ಟಿದೆ.

• ಪರಿಸರ ಸೂಕ್ಷ್ಮ ಪ್ರದೇಶವನ್ನು ಇಳಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರಿನ ನಿವಾಸಿ ಬೆಳ್ಳಿಯಪ್ಪ ಮತ್ತಿತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು ಈ ಬಗ್ಗೆ, ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸಮಿತಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು ಸಮಿತಿಯು ಸುಪ್ರೀಂ ಕೋರ್ಟ್ಗೆ 524 ಪುಟಗಳ ವರದಿ ಸಲ್ಲಿಸಿದೆ ಯಾವುದೇ ವೈಜ್ಞಾನಿಕ, ಪರಿಸರ ಅಥವಾ ಭೂದೃಶ್ಯ ಮಟ್ಟದ ಅಧ್ಯಯನ ಹಾಗೂ ಮೌಲ್ಯಮಾಪನ ನಡೆಸದೆಯೇ ಪರಿಸರ ಸೂಕ್ಷ್ಮ ಪ್ರದೇಶವನ್ನು ನಿರಂತರವಾಗಿ ಕಡಿತ ಮಾಡಲಾಗಿದೆ ಎಂದೂ ಸಮಿತಿ ತಿಳಿಸಿದೆ.
• ಪರಿಸರ ಸೂಕ್ಷ್ಮ ಪ್ರದೇಶದ ಪಕ್ಕದಲ್ಲೇ ಕರ್ನಾಟಕ ವಸತಿ ಇಲಾಖೆಯು ಸೂರ್ಯನಗರ ಲೇಔಟ್ (ಕೆಎಚ್ ಬಿ ಸೂರ್ಯ ಸಿಟಿ) ಎಂಬ ಬೃಹತ್ ವಸತಿ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಈ ಪ್ರದೇಶವು ಮೊದಲು ಪರಿಸರ ಸೂಕ್ಷ್ಮ ಪ್ರದೇಶದ ಭಾಗವಾಗಿತ್ತು ವಸತಿ ಬಡಾವಣೆಗಳ ನಿರ್ಮಾಣಕ್ಕೆ ನಿರ್ಬಂಧ ವಿಧಿಸಲಾಗಿತ್ತು ನಗರೀಕರಣದ ಒತ್ತಡದ ನೆಪವೊಡ್ಡಿ 2018ರ ಅಧಿಸೂಚನೆಯಲ್ಲಿ ಈ ಪ್ರದೇಶವನ್ನು ಇಎಸ್ಝಡ್ನಿಂದ ಹೊರಗಿಡಲಾಯಿತು.
• ಆ ಬಳಿಕ ವಸತಿ ಯೋಜನೆಯನ್ನು ಸುಗಮಗೊಳಿಸಲು ದೊಡ್ಡ ಪ್ರಮಾಣದ ಭೂ ಸಮತಟ್ಟು ನೈಸರ್ಗಿಕವಾಗಿ ಎತ್ತರದ ಭೂಪ್ರದೇಶವನ್ನು ಸಮತಟ್ಟಾಗಿಸುವುದು ಸೇರಿದಂತೆ ವ್ಯಾಪಕ ಪ್ರಮಾಣದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳಲಾಯಿತು.
• ಪರಿಸರ ಪರಿಣಾಮದ ಅಧ್ಯಯನ ಹಾಗೂ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸದೆಯೇ ಈ ಕಾರ್ಯ ನಡೆಸಲಾಯಿತು ಈ ಯೋಜನೆಯು ಕರಡಿಕ್ಕಲ್-ಮಾದೇಶ್ವರ ಕಾರಿಡಾರ್ನ ಪಕ್ಕದಲ್ಲಿಯೇ ಅನುಷ್ಠಾನಗೊಳ್ಳುತ್ತಿದೆ. ಈ ಭಾಗದಲ್ಲಿ ಈಗಾಗಲೇ ಮಾನವ-ವನ್ಯಜೀವಿ ಸಂಘರ್ಷ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ’ ಎಂದು ಸಮಿತಿಯು ವರದಿಯಲ್ಲಿ ಉಲ್ಲೇಖಿಸಿದೆ.
• ಬೆಂಗಳೂರಿನ ಸುತ್ತಮತ್ತ ತ್ವರಿತ ನಗರ ವಿಸ್ತರಣೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾಂಪ್ರದಾಯಿಕ ಆನೆ ಕಾರಿಡಾರ್ಗಳ ಅವನತಿಯಿಂದಾಗಿ ಸಮಸ್ಯೆ ಮತ್ತು ಬಿಗಡಾಯಿಸಿದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ದಕ್ಷಿಣ, ಪಶ್ಚಿಮ, ಆಗ್ನೆಯ ಮತ್ತು ನೈರುತ್ಯ ಭಾಗಗಳಲ್ಲಿ ಮಾನವ-ಆನೆ ಸಂಘರ್ಷ ಪ್ರಕರಣಗಳು ವ್ಯಾಪಕ ಪ್ರಮಾಣದಲ್ಲಿ ಜಾಸ್ತಿ ಆಗಿದೆ ಸುಸ್ತಿರ ಮಾನವ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ ಸಮತೋಲನದಿಂದ ಸಾಗಲು ಇಎಸ್ಝಡ್ಗಳು ನಿಯಂತ್ರಕಗಳಾಗಿ ಕೆಲಸ ಮಾಡುತ್ತವೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
Source: Prajavani