Sat. Feb 7th, 2026
  • ಸಂಸ್ಕರಿಸಿದ ನೀರಿನ ಗುಣಮಟ್ಟಕ್ಕೆ ಒಂದೇ ನೀತಿ

ಸಂದರ್ಭ:ಸಂಸ್ಕರಿಸಿದ ನೀರಿನ ಗುಣಮಟ್ಟದ ಖಾತ್ರಿಗಾಗಿ ರಾಷ್ಟ್ರಮಟ್ಟ ದಲ್ಲಿ ಏಕ ರೂಪದ ನೀತಿ ರೂಪಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್‌ ತಿಳಿಸಿದರು.

  • ನೀತಿ ಆಯೋಗವು ಬೆಂಗಳೂರು ಜಲ ಮಂಡಳಿಯ ಸಹಯೋಗದಲ್ಲಿ ನಗರದಲ್ಲಿ ಆಯೋಜಿಸಿರುವ ಭಾರತದಲ್ಲಿ ಸಂಸ್ಕರಿಸಿದ ನೀರಿನ ಪುನರ್‌ಬಳಕೆ ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
  • ‘ನಗರೀಕರಣದ ಪ್ರಭಾವದಿಂದಾಗಿ ನೀರಿನ ಬಳಕೆ ಪ್ರಮಾಣ ಹೆಚ್ಚಳವಾಗಿದೆ. ಆದರೆ, ಭಾರತದಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿದೆ. ಅಂತರ್ಜಲ ಹಾಗೂ ನದಿ ನೀರಿನ ಅವಲಂಬನೆ ಜತೆಗೆ ಬಳಸಿದ ನೀರಿನ ಸಂಸ್ಕರಣೆಗೆ ಒತ್ತು ನೀಡಲಾಗುತ್ತಿದೆ.
  • ಈಗಾಗಲೇ ಕರ್ನಾಟಕವೂ ಸೇರಿ 11 ರಾಜ್ಯಗಳಲ್ಲಿ ಸಂಸ್ಕರಿಸಿದ ನೀರಿನ ಪುನರ್ಬಳಕೆ ನೀತಿ ಇದೆ. 2030ರೊಳಗೆ ಶೇ 50, 2045ರ ಹೊತ್ತಿಗೆ ಶೇ 100ರಷ್ಟು ನೀರಿನ ಪುನರ್‌ ಬಳಕೆಯನ್ನು ಮಾಡುವತ್ತ ದೇಶ ಹೆಜ್ಜೆ ಇಡಲೇಬೇಕಾಗಿರುವುದರಿಂದ ಏಕರೂಪದ ನೀತಿ ಜಾರಿಗೆ ಪ್ರಯತ್ನ ನಡೆದಿದೆ’ ಎಂದು ವಿವರಿಸಿದರು.
  • ‘ಭಾರತದ ನಗರ ಪ್ರದೇಶಗಳಲ್ಲಿ ಪ್ರತಿ ನಿತ್ಯ 72,368 ಮಿಲಿಯನ್ ಲೀಟರ್‌ (ಎಂಎಲ್‌ಡಿ) ಕೊಳಚೆ ನೀರು ಉತ್ಪಾದನೆಯಾಗುತ್ತಿದೆ. ಇದರಲ್ಲಿ 31,885 ಎಂಎಲ್‌ಡಿ ಸಂಸ್ಕರಣೆ ಯಾಗುತ್ತಿದೆ. ಶೇ 60ರಷ್ಟು ಇನ್ನೂ ಸಂಸ್ಕರಣೆಯಾಗಬೇಕಿದೆ. ಬೆಂಗಳೂರಿನಲ್ಲಿ ನಿತ್ಯ 2,200 ಎಂಎಲ್ಡಿ ಕೊಳಚೆ ನೀರು ಸಂಗ್ರಹವಾಗುತ್ತಿದ್ದು 1,300 ಎಂಎಲ್ಡಿ ಸಂಸ್ಕರಣೆಯಾಗುತ್ತಿದೆ. ಈ ಕಾರ್ಯ ಶ್ಲಾಘನೀಯ’ ಎಂದರು.
  • ‘5 ವರ್ಷಗಳಲ್ಲಿ 25 ಸಾವಿರ ನವೋದ್ಯಮ

ಸಂದರ್ಭ:ಕರ್ನಾಟಕ ನವೋದ್ಯಮ ನೀತಿ 2025– 2030’ಕ್ಕೆ ಸಂಪುಟ ಸಭೆ ಒಪ್ಪಿಗೆ: ಮುಂದಿನ ಐದು ವರ್ಷಗಳಲ್ಲಿ ಬೆಂಗಳೂರು ಮತ್ತು ರಾಜ್ಯದ ಇತರ ನಗರಗಳಲ್ಲಿ ಒಟ್ಟು 25,000 ಹೆಚ್ಚುವರಿ ನವೋದ್ಯಮಗಳನ್ನು ಸ್ಥಾಪಿಸುವ ಉದ್ದೇಶದಕರ್ನಾಟಕ ನವೋದ್ಯಮ ನೀತಿ 2025– 2030’ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

  • ಇದಕ್ಕಾಗಿ ಐದು ವರ್ಷಗಳಿಗೆ ₹518.27 ಕೋಟಿ ನಿಗದಿ ಮಾಡಲಾಗಿದೆ. ಬೆಂಗಳೂರಿನಲ್ಲಿ 15 ಸಾವಿರ ಮತ್ತು ರಾಜ್ಯದ ಇತರ ನಗರಗಳಲ್ಲಿ 10 ಸಾವಿರ ನವೋದ್ಯಮಗಳು ಸ್ಥಾಪನೆಗೊಳ್ಳಲಿವೆ.
  • ರಾಜ್ಯದಲ್ಲಿ ನವೋದ್ಯಮ ವ್ಯವಸ್ಥೆಯನ್ನು ಬಲಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಅನುದಾನ, ಇನ್‌ಕ್ಯುಬೇಷನ್, ಮೂಲಸೌಕರ್ಯ, ಮಾರ್ಗದರ್ಶನ, ಕೌಶಲ ಅಭಿವೃದ್ಧಿ, ಮಾರುಕಟ್ಟೆ ಪ್ರವೇಶ, ವಿಸ್ತರಣೆ, ಅಂತರರಾಷ್ಟ್ರೀಯ ಸಹಯೋಗವನ್ನು ನವೋದ್ಯಮ ನೀತಿ ಒಳಗೊಂಡಿದೆ.
  • ಉದಯೋನ್ಮುಖ ಮತ್ತು ಮುಂದುವರಿದ ತಂತ್ರಜ್ಞಾನಗಳಲ್ಲಿ ರಾಜ್ಯವನ್ನು ಮುಂಚೂಣಿಗೆ ತರಲು ಕೃತಕ ಬುದ್ಧಿಮತ್ತೆ, ಬ್ಲಾಕ್‌ಚೈನ್‌, ಕ್ವಾಂಟಮ್‌ ಕಂಪ್ಯೂಟಿಂಗ್ ಮತ್ತು ಇತರ ಆಳವಾದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ನಾವೀನ್ಯವನ್ನು ಪ್ರೋತ್ಸಾಹಿಸಲಾಗುವುದು. ರಾಜ್ಯದ ವಿವಿಧ ನಗರಗಳಲ್ಲಿ ಉದ್ಯಮಿಗಳನ್ನು ಬೆಂಬಲಿಸಲು ನಾವೀನ್ಯ ಕೇಂದ್ರಗಳು, ಇನ್‌ಕ್ಯುಬೇಶನ್‌ ಕೇಂದ್ರಗಳನ್ನು ವಿಸ್ತರಿಸಲು ನಿರ್ಧರಿಸಲಾಗಿದೆ.

ಇಂದಿರಾ ಕಿಟ್ ಪದಾರ್ಥ ಮಾರ್ಪಾಡು

  • ಇಂದಿರಾ ಆಹಾರ ಕಿಟ್‌ನಲ್ಲಿ ಫಲಾನುಭವಿಗಳಿಗೆ ತೊಗರಿ ಬೇಳೆ 1 ಕೆ.ಜಿ, ಅಡುಗೆ ಎಣ್ಣೆ 1 ಲೀಟರ್, ಸಕ್ಕರೆ 1 ಕೆ.ಜಿ, ಉಪ್ಪು 1 ಕೆ.ಜಿ ನೀಡಲಾಗುತ್ತದೆ. 1 ಕೆ.ಜಿ ಹೆಸರು ಕಾಳಿನ ಬದಲಿಗೆ ಅದರ ವೆಚ್ಚಕ್ಕನುಗುಣವಾಗಿ 1ರಿಂದ 3 ಸದಸ್ಯರಿಗೆ 1/4 ಕೆ.ಜಿ, 3 ರಿಂದ 4 ಸದಸ್ಯರಿರುವ ಕುಟುಂಬಕ್ಕೆ 1/2 ಕೆ.ಜಿ ಹಾಗೂ 5 ಕ್ಕೂ ಹೆಚ್ಚು ಸದಸ್ಯರಿರುವ ಕುಟುಂಬಕ್ಕೆ 3/4 ಕೆ.ಜಿ ತೊಗರಿ ಬೇಳೆಯನ್ನು ವಿತರಿಸಲು ತೀರ್ಮಾನಿಸಲಾಗಿದೆ.
  • ರಕ್ಷಣಾ ಉತ್ಪಾದನೆ: ಸ್ವಾವಲಂಬನೆ

ಸಂದರ್ಭ: ಭಾರತದ ಉತ್ಪಾದನಾ ಪ್ರದರ್ಶನ7ನೇ ಆವೃತ್ತಿ ಉದ್ಘಾಟನೆ: ರಕ್ಷಣಾ ಕ್ಷೇತ್ರದಲ್ಲಿ ಅತಿ ದೊಡ್ಡ ಆಮದು ರಾಷ್ಟ್ರವಾಗಿದ್ದ ಭಾರತವು, ಸದ್ಯ ತನ್ನ ಅಗತ್ಯದ ಶೇಕಡ 90ರಷ್ಟು ಸಾಮಗ್ರಿಗಳನ್ನು ತಾನೇ ಉತ್ಪಾದಿಸಿಕೊಳ್ಳುವ ಮೂಲಕ ಆತ್ಮನಿರ್ಭರ ರಾಷ್ಟ್ರವಾಗಿ ಹೊರ ಹೊಮ್ಮಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ಜೋಶಿ ಹೇಳಿದರು.

  • ಐಎಂಎಸ್ ಫೌಂಡೇಷನ್, ಲಘು ಉದ್ಯೋಗ ಭಾರತಿ–ಕರ್ನಾಟಕ ಸಹಯೋಗದೊಂದಿಗೆ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ಭಾರತದ ಉತ್ಪಾದನಾ ಪ್ರದರ್ಶನ–7ನೇ ಆವೃತ್ತಿ ಉದ್ಘಾಟಿಸಿ ಮಾತನಾಡಿದರು.
  • ‘ಈ ಹಿಂದೆ ಶೇಕಡ 70ರಷ್ಟು ರಕ್ಷಣಾ ಸಾಮಗ್ರಿಗಳು ಆಮದು ಆಗುತ್ತಿದ್ದವು. ಈಗ ಎಲ್ಲವೂ ಸ್ವದೇಶದಲ್ಲೇ ತಯಾರಾಗುತ್ತಿವೆ. ಇದು ದೇಶದ ಸೌರ್ವಭೌಮತ್ವಕ್ಕೆ ಹಿಡಿದ ಕನ್ನಡಿ. ಈ ಎಲ್ಲಾ ಬೆಳವಣಿಗೆಗೂ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ, ಸ್ಟಾರ್ಟ್‌ಅಪ್‌ಗಳು ಹಾಗೂ ಖಾಸಗಿ ಅನ್ವೇಷಕರ ಕೊಡುಗೆ ಬಹು ದೊಡ್ಡದು’ ಎಂದರು.
  • ‘ಬೆಳವಣಿಗೆ ಹಾದಿಯಲ್ಲಿದ್ದರೂ ಕೈಗಾರಿಕೆಗಳನ್ನು ಅನುಮಾನಗಳಿಂದ ನೋಡುವ ಕಾಲವಿತ್ತು. ಆದರೆ, ಇಂದು ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಪ್ರಗತಿಯತ್ತ ಸಾಗುತ್ತಿದೆ’ ಎಂದು ಹೇಳಿದರು.
  • 80ರ ದಶಕದ ಘಟನೆ ನೆನಪಿಸಿಕೊಂಡ ಸಚಿವರು, ‘1984ರಲ್ಲಿ ನನ್ನ ತಂದೆ ಒಂದು ಚೀಲ ಸಿಮೆಂಟ್‌ಗಾಗಿ ದಿನವಿಡೀ ಸರದಿ ಸಾಲಿನಲ್ಲಿ ನಿಂತಿದ್ದರು. ಅಂದು ಅಷ್ಟು ಅಭಾವವಿತ್ತು. ಇಂದು ಪರಿಸ್ಥಿತಿ ಬದಲಾಗಿದ್ದು, ಇಸ್ರೊ ಅಗ್ಗದ ವೆಚ್ಚದಲ್ಲಿ ಉಪಗ್ರಹಗಳನ್ನು ಉಡಾವಣೆ ಮಾಡುತ್ತಿದೆ. ಇದು ನವ ಭಾರತ’ ಎಂದರು.
  • ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಉದ್ಯಮವು ದೇಶದ ಆರ್ಥಿಕತೆಯ ಬೆನ್ನೆಲುಬು ಆಗಿದೆ. ಕ್ಷೇತ್ರದಲ್ಲಿ 30 ಕೋಟಿ ಜನರು ಕೆಲಸ ಮಾಡುತ್ತಿದ್ದು, ದೇಶದ ಆರ್ಥಿಕತೆಗೆ ಶೇಕಡ 30ರಷ್ಟು ಕೊಡುಗೆ ಇದೆ. ತಯಾರಿಕಾ ವಲಯದಲ್ಲಿ ಶೇಕಡ 45 ಹಾಗೂ ರಫ್ತು ಕ್ಷೇತ್ರದಲ್ಲಿ ಶೇಕಡ 40 ರಷ್ಟು ಕೊಡುಗೆ ನೀಡಿದೆ. ಇಸ್ರೊ, ಡಿಆರ್ಡಿಒ, ಎಚ್ಎಎಲ್, ಬಿಎಚ್ಇಎಲ್ ಸಂಸ್ಥೆಗಳು ತಮ್ಮ ಪೂರೈಕೆ ಸರಪಳಿಯಲ್ಲಿ ಸಣ್ಣ ಮತ್ತು ಕೈಗಾರಿಕಾ ವಲಯವನ್ನು ಸೇರಿಸಿಕೊಂಡು ಬೆಳೆಯಬೇಕು ಎಂದು ಹೇಳಿದರು.
  • ಇಸ್ರೊ ನಡೆದು ಬಂದ ಹಾದಿಯನ್ನು ವಿವರಿಸಿದ ಅಧ್ಯಕ್ಷ ವಿ.ನಾರಾಯಣನ್, ‘ಕೆಲ ದಿನಗಳ ಹಿಂದೆ ಸ್ವದೇಶಿ ನಿರ್ಮಿತಬಾಹುಬಲಿರಾಕೆಟ್ಮೂಲಕ ಅತ್ಯಂತ ಭಾರವಾದ ಉಪಗ್ರಹವನ್ನು ಕಕ್ಷೆಗೆ ಸೇರಿಸುವುದರೊಂದಿಗೆ ಚಾರಿತ್ರಿಕ ಸಾಧನೆ ಮಾಡಿದ್ದೇವೆ. 4,410 ಕೆ.ಜಿ ತೂಕದ ಸಂವಹನ ಉಪಗ್ರಹವನ್ನು (ಸಿಎಂಎಸ್‌–03) ಹೊತ್ತು ನಭಕ್ಕೆ ಚಿಮ್ಮಿದ ಲಾಂಚ್ವೆಹಿಕಲ್ ಮಾರ್ಕ್–3 (ಎಲ್ವಿಎಂ3-ಎಂ5) ‘ಬಾಹುಬಲಿಯುಆತ್ಮನಿರ್ಭರ ಭಾರತ ಸಾಧನೆಗೆ ಸಾಕ್ಷಿ. ಪ್ರಸ್ತುತ 450 ಕ್ಕೂ ಹೆಚ್ಚು ದೇಶಿಯ ಕಂಪನಿಗಳೊಂದಿಗೆ ಇಸ್ರೊ ಪಾಲುದಾರಿಕೆ ಹೊಂದಿದೆ’ ಎಂದು ತಿಳಿಸಿದರು.

  • ಸಕ್ಕರೆ ಕಾರ್ಖಾನೆ
  • ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್‌ ಕಬ್ಬಿಗೆ ಕೇಂದ್ರ ಸರ್ಕಾರ ನಿಗದಿ ಪಡಿಸಿದಷ್ಟು ಎಫ್‌ಆರ್‌ಪಿ (₹3,550) ನೀಡಬೇಕು ಎಂದು ಆಗ್ರಹಿಸಿ ರಾಜ್ಯದ ಕಬ್ಬು ಬೆಳೆಗಾರರು ಪ್ರತಿಭಟನೆ ತೀವ್ರಗೊಳಿಸಿರುವುದರ ನಡುವೆಯೇ ರಾಜ್ಯದಲ್ಲಿರುವ ಕಾರ್ಖಾನೆಗಳ ಮಾಲೀಕತ್ವದ ಬಗ್ಗೆಯೂ ಚರ್ಚೆ ನಡೆಯುತ್ತಿದೆ.
  • ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿದ್ದು, ಈ ಪೈಕಿ ಬೆಳಗಾವಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯಲ್ಲಿಯೇ 53 ಇವೆ. ಹಲವು ಕಾರ್ಖಾನೆಗಳು ಸಚಿವರು, ಶಾಸಕರು, ರಾಜಕಾರಣಿಗಳು ಹಾಗೂ ಅವರ ಸಂಬಂಧಿಕರ ನೇರ ಮಾಲೀಕತ್ವದಲ್ಲಿವೆ.
  • ಸಹಕಾರಿ ವ್ಯವಸ್ಥೆಯಡಿ ಹಲವು ಕಾರ್ಯನಿರ್ವಹಿಸುತ್ತಿದ್ದು, ಪರೋಕ್ಷವಾಗಿ ಪ್ರಭಾವಿ ರಾಜಕಾರಣಿಗಳ ಹಿಡಿತದಲ್ಲಿವೆ. ನಷ್ಟದ ಸುಳಿಗೆ ಸಿಲುಕಿರುವ ಕೆಲವು ಸಹಕಾರಿ ಕಾರ್ಖಾನೆಗಳನ್ನು ರಾಜಕಾರಣಿಗಳೇ ಗುತ್ತಿಗೆಗೆ ಪಡೆದು ನಿರ್ವಹಿಸುತ್ತಿದ್ದಾರೆ. ಉದ್ಯಮಿಗಳೇ ನೇರವಾಗಿ ನಡೆಸುತ್ತಿರುವ ಕಾರ್ಖಾನೆಗಳ ಸಂಖ್ಯೆ ಕೆಲವೇ ಕೆಲವು
  • ವಿಶ್ವದರ್ಜೆಯ ಬ್ಯಾಂಕ್ಬೇಕು: ನಿರ್ಮಲಾ

ಸಂದರ್ಭ: ಭಾರತದಲ್ಲಿ ದೊಡ್ಡದಾದ ಹಾಗೂ ವಿಶ್ವದರ್ಜೆಯ ಬ್ಯಾಂಕ್ಗಳ ಅಗತ್ಯವಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಿಚಾರವಾಗಿ ಆರ್ಬಿಐ ಜೊತೆ ಮಾತುಕತೆ ನಡೆಯುತ್ತಿದೆ ಎಂದಿದ್ದಾರೆ.

  • ‘ಸರ್ಕಾರವು ತೀರ್ಮಾನ ತೆಗೆದುಕೊಳ್ಳುವ ಮೊದಲು ಬಹಳಷ್ಟು ಕೆಲಸಗಳು ಆಗಬೇಕಿವೆ. ಈಗಾಗಲೇ ಅಸ್ತಿತ್ವದಲ್ಲಿರುವ ಬ್ಯಾಂಕ್‌ಗಳಿಂದ ಒಂದು ಬ್ಯಾಂಕ್‌ ಸೃಷ್ಟಿಸುವ ಮೂಲಕ ಈ ಕೆಲಸ ಆಗದು. ವಿಲೀನದ ಮೂಲಕ ಅದನ್ನು ಮಾಡಬಹುದು, ಅದು ಕೂಡ ಒಂದು ಮಾರ್ಗ. ಆದರೆ ಹೆಚ್ಚಿನ ಬ್ಯಾಂಕ್‌ಗಳು ಕೆಲಸ ಮಾಡಲು ಅವಕಾಶ ನೀಡುವ ವ್ಯವಸ್ಥೆಯೊಂದು ರೂಪುಗೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.
  • ರಾಜ್ಯದಲ್ಲೇ ಸಿದ್ಧವಾಗಲಿವೆಎಐ ಸರ್ವರ್‌’

ಸಂದರ್ಭ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಕಾರ್ಯನಿರ್ವ ಹಿಸುವ ಅತ್ಯಾಧುನಿಕಎಐ ಸರ್ವರ್ಗಳನ್ನು ಅಮೆರಿಕದ ಬುರ್ಕಾನ್ವರ್ಲ್ಡ್ಇನ್ವೆಸ್ಟ್ಮೆಂಟ್ಗ್ರೂಪ್ಕರ್ನಾಟಕದಲ್ಲೇ ತಯಾರಿಸಲಿದೆ

  • ಬುರ್ಕಾನ್‌ ವರ್ಲ್ಡ್‌ನ ಅಧೀನ ಸಂಸ್ಥೆ ದಿ ಘಾಜಿ ಗ್ರೂಪ್‌ ಸಿಇಒ ಶಫಿ ಖಾನ್‌ ಅವರ ನೇತೃತ್ವದ ನಿಯೋಗದ ಜತೆ ಹೂಡಿಕೆ ಕುರಿತು ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಈ ವಿಷಯ ತಿಳಿಸಿದರು.
  • ಅಮೆರಿಕದ ಮಿಯಾಮಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಈ ಕಂಪನಿ ರಾಜ್ಯದಲ್ಲಿ ₹1,500 ಕೋಟಿ ಬಂಡವಾಳ ಹೂಡಲು ಮುಂದೆ ಬಂದಿದೆ. ದೇವನಹಳ್ಳಿ ಸಮೀಪ 10-15 ಎಕರೆ ಭೂಮಿ ನೀಡಲಾಗುವುದು. ಹೂಡಿಕೆಯಿಂದ ತಯಾರಿಕಾ ವಲಯದಲ್ಲಿ ಸಾಕಷ್ಟು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.
  • ಡೇಟಾ ಕೇಂದ್ರಗಳಲ್ಲಿ ಬಳಕೆಯಾಗುವ ಸರ್ವರ್‌ಗಳಿಗೆ ಬಹು ಬೇಡಿಕೆ ಇದೆ. ಇದಕ್ಕೆ ಸಂಬಂಧಿಸಿದ ತಂತ್ರಜ್ಞಾನ ಹಾಗೂ ಉಪಕರಣಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಲು ಸಹಕಾರ ನೀಡಲಾಗುವುದು. ಅತ್ಯಾ ಧುನಿಕ ಸಿಪಿಯು, ಜಿಪಿಯು, ಎಐ-ರೆಡಿ ನೆಟ್ವರ್ಕ್‌ ಸ್ವಿಚ್‌ ತಯಾರಿಕೆಯನ್ನೂ ಕಂಪನಿ ಆರಂಭಿಸಲಿದೆ. ಜಾಗತಿಕ ತಾಂತ್ರಿಕ ಪಾಲುದಾರ ಕಂಪನಿಗಳಾದ ಗಿಗಾಬೈಟ್‌ ಮತ್ತು ಸೆರಾ ನೆಟ್‌ವರ್ಕ್‌ ಸಹಯೋಗ ನೀಡಲಿವೆ. ಸೆಮಿಕಂಡಕ್ಟರ್‌, ಎಐ ಹಾರ್ಡ್-ವೇರ್‌, ಆಧುನಿಕ ಎಲೆಕ್ಟ್ರಾನಿಕ್ಸ್‌ ಕಾರ್ಯಪರಿಸರದ ಬಲವರ್ಧನೆ ಆಗಲಿದೆ. ಸ್ಥಳೀಯವಾಗಿ ಆರ್‌ ಆ್ಯಂಡ್‌ ಡಿ, ತಂತ್ರಜ್ಞಾನ ವರ್ಗಾವಣೆ, ಶಿಕ್ಷಣ ಸಂಸ್ಥೆಗಳು ಮತ್ತು ಇಲ್ಲಿಯ ಕೈಗಾರಿಕೆಗಳ ಸಹಭಾಗಿತ್ವ ಸಿಗಲಿದೆ ಎಂದರು.
  • ಸೇವಾ ವಲಯ ಪ್ರಗತಿ ಇಳಿಕೆ

ಸಂದರ್ಭ: ‘ದೇಶದ ಸೇವಾ ವಲಯದ ಬೆಳವಣಿಗೆ ಅಕ್ಟೋಬರ್ ತಿಂಗಳಿನಲ್ಲಿ ಐದು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆ ಆಗಿದೆ ಎಂದು ಎಸ್ ಆ್ಯಂಡ್ಪಿ ಗ್ಲೋಬಲ್ಸಂಸ್ಥೆಯ ಮಾಸಿಕ ಸಮೀಕ್ಷೆ ತಿಳಿಸಿದೆ.

  • ಎಚ್‌ಎಸ್‌ಬಿಸಿ ಇಂಡಿಯಾ ಸರ್ವಿಸಸ್ ಪಿಎಂಐ ಬ್ಯುಸಿನೆಸ್ ಆ್ಯಕ್ಟಿವಿಟಿ ಸೂಚ್ಯಂಕವು ಸೆಪ್ಟೆಂಬರ್‌ನಲ್ಲಿ 60.9 ದಾಖಲಾಗಿತ್ತು. ಆದರೆ, ಅಕ್ಟೋಬರ್‌ನಲ್ಲಿ 58.9ಕ್ಕೆ ಇಳಿದಿದೆ.
  • ‘ಹೆಚ್ಚಿದ ಸ್ಪರ್ಧಾತ್ಮಕತೆಯ ಒತ್ತಡ ಮತ್ತು ಭಾರಿ ಮಳೆಯು ಚಟುವಟಿಕೆಯ ಇಳಿಕೆಗೆ ಕಾರಣವಾದವು. ಇದು ಸೂಚ್ಯಂಕ ಇಳಿಕೆಗೆ ದಾರಿ ಮಾಡಿಕೊಟ್ಟಿತು’ ಎಂದು ಎಚ್‌ಎಸ್‌ಬಿಸಿ ಇಂಡಿಯಾದ ಮುಖ್ಯ ಅರ್ಥಶಾಸ್ತ್ರಜ್ಞೆ ಪ್ರಾಂಜುಲ್ ಭಂಡಾರಿ ಹೇಳಿದ್ದಾರೆ.
  • ಹೆಚ್ಚಿದ ಬೇಡಿಕೆ ಮತ್ತು ಜಿಎಸ್‌ಟಿ ದರ ಇಳಿಕೆಯಂತಹ ಅಂಶಗಳು ಕಾರ್ಯಾಚರಣೆಯ ಸ್ಥಿತಿ ಸುಧಾರಿಸಲು ನೆರವಾದವು. ಆದರೂ, ಸ್ಪರ್ಧಾತ್ಮಕತೆ ಮತ್ತು ಹೆಚ್ಚಿನ ಮಳೆಯಿಂದ ಬೆಳವಣಿಗೆಯು ನಿಧಾನವಾಯಿತು ಎಂದು ಹೇಳಿದ್ದಾರೆ.
0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments