Sat. Feb 7th, 2026
  • ರಾಜ್ಯದಲ್ಲಿ ಹೂಡಿಕೆಗೆ ಸಿಂಗಪುರ ಉತ್ಸುಕ

ಸಂದರ್ಭ: ಬೆಂಗಳೂರಿನಲ್ಲಿ ವ್ಯಾಪಾರ ವಹಿವಾಟು ನಡೆಸಲು ಸಿಂಗಪುರ ಹೆಚ್ಚು ಉತ್ಸುಕವಾಗಿದೆ. ದೇಶದ ಜತೆ ತಂತ್ರಜ್ಞಾನ ಹಂಚಿಕೊಳ್ಳುವ ಮತ್ತು ಕೈಗಾರಿಕಾ ಪಾರ್ಕ್ಸ್ಥಾಪಿಸುವ ಕುರಿತು ಸಿಂಗಪುರದ ವಿದೇಶಾಂಗ ಸಚಿವರ ಜತೆ ಚರ್ಚೆ ನಡೆಸಲಾಗಿದೆ.

  • ಸಿಂಗಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವೆ ಗಾನ್ ಶಿಯೋ ಹುಯಂಗ್ ಅವರ ನೇತೃತ್ವದ  ನಿಯೋಗದ ಜತೆ ಚರ್ಚೆ.  
  • ಹಲವು ದೇಶಗಳ ಜನ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದು, ಹೀಗಾಗಿ ಸಿಂಗಪುರ ಇಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿದೆ ಎಂದರು.

2026ರಲ್ಲಿ ಸಿಂಗಪುರಕ್ಕೆ

  • ‘ಭಾರತದಲ್ಲಿ ಅತ್ಯಧಿಕ ವಿದೇಶಿ ನೇರ ಹೂಡಿಕೆ ಮಾಡುತ್ತಿ ರುವ ಸಿಂಗಪುರ ಜತೆ ಕೈಗಾರಿಕಾ ಮತ್ತು ವಾಣಿಜ್ಯ ಸಹಭಾಗಿತ್ವ ಬೆಳೆಸಿಕೊಳ್ಳಲು ರಾಜ್ಯದ ಪಾಲಿಗೆ ಒಳ್ಳೆಯ ಅವಕಾಶ. ಇದನ್ನು ಸದ್ಭಳಕೆ ಮಾಡಿಕೊಳ್ಳುವ ಉದ್ದೇಶದಿಂದ 2026ರಲ್ಲಿ ಸಿಂಗಪುರಕ್ಕೆ ಭೇಟಿ ನೀಡಲಾಗುವುದು’ ಎಂದು ಕೈಗಾರಿಕಾ ಸಚಿವ.
  • ಸಿಂಗಪುರ ಭೇಟಿಗೂ ಮುನ್ನ ದ್ವಿಪಕ್ಷೀಯ ಕೈಗಾರಿಕಾ ಬಾಂಧವ್ಯ ವರ್ಧನೆ ಕುರಿತು ಅಧಿಕಾರಿಗಳ ಮಟ್ಟದಲ್ಲಿ ವಿಚಾರ ವಿನಿಮಯ ನಡೆಸಲಾಗುವುದು. ಮಾಹಿತಿ ತಂತ್ರಜ್ಞಾನ, ಸೆಮಿಕಂಡಕ್ಟರ್, ಫಿನ್-ಟೆಕ್, ಚಿಪ್ ವಿನ್ಯಾಸ, ಔಷಧ ತಯಾರಿಕೆ ಮುಂತಾದ ಕ್ಷೇತ್ರಗಳಲ್ಲಿ ಹೂಡಿಕೆಗೆ ಅತ್ಯುತ್ತಮ ಅವಕಾಶಗಳಿವೆ ಎಂದರು.

ಹೂಡಿಕೆ: ಅಮೆರಿಕ ಕಂಪನಿಗಳ ಆಸಕ್ತಿ

  • ‘ಅಮೆರಿಕದ ಉತಾ ಪ್ರಾಂತ್ಯದ ವೈಮಾಂತರಿಕ್ಷ ಕ್ಷೇತ್ರದ ಉದ್ಯಮಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿಸಿವೆ, ಬೃಹತ್ ಕೈಗಾರಿಕಾ ಸಚಿವ.
  • ‘ತಯಾರಿಕಾ, ಜೀವವಿಜ್ಞಾನ, ರೋಗನಿಧಾನ, ಶಿಕ್ಷಣ ಮತ್ತು ವಿದ್ಯುತ್ ಚಾಲಿತ ಸಾರ್ವಜನಿಕ ಸಾರಿಗೆ ಹಾಗೂ ವಾಹನ ಕ್ಷೇತ್ರದ ಕಂಪನಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿವೆ.  
  • ಇನ್ಫೊಸಿಸ್ಪ್ರಶಸ್ತಿಪ್ರಕಟ
  • ವರ್ಷಕ್ಕೆ 12 ಮುಟ್ಟಿನ ರಜೆ: ಆದೇಶ

ಸಂದರ್ಭ: ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ನೀಡುವ ಕುರಿತು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.

  • ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಅನ್ವಯವಾಗಲಿದೆ.
  • 18ರಿಂದ 52 ವಯೋಮಾನದ ಎಲ್ಲ ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸೌಲಭ್ಯ ನೀಡಬೇಕು ಎಂದು ಎಲ್ಲ ಉದ್ಯೋಗದಾತರಿಗೂ ಆದೇಶದಲ್ಲಿ ಸೂಚಿಸಿದೆ.

ಷರತ್ತುಗಳು:

  • ಆಯಾ ತಿಂಗಳ ರಜೆಯನ್ನು ಆಯಾ ತಿಂಗಳಲ್ಲೇ ಬಳಸಿಕೊಳ್ಳಬೇಕು
  • ಒಂದು ತಿಂಗಳ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸುವಂತಿಲ್ಲ
  • ಮುಟ್ಟಿನ ರಜೆ ಪಡೆಯಲು ವೈದ್ಯಕೀಯ ಪ್ರಮಾಣಪತ್ರ ನೀಡಬೇಕಿಲ್ಲ
  • 52 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಈ ರಜೆಯ ಸೌಲಭ್ಯ ಇಲ್ಲ
  • ಸರ್ಕಾರಿ, ಬಹುರಾಷ್ಟ್ರೀಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೂ ಅನ್ವಯ
  • ಮೀಸಲಾತಿ ಅಧಿಸೂಚನೆ: ನೋಟಿಸ್ :ಹೈಕೋರ್ಟ್ ಮೆಟ್ಟಿಲೇರಿದ ರಾಜ್ಯ ಚುನಾವಣಾ ಆಯೋಗ

ಸಂದರ್ಭ:ಮುಂದಿನ ವರ್ಷ ಜನವರಿಯಲ್ಲಿ ಅವಧಿ ಪೂರ್ಣಗೊಳ್ಳಲಿರುವ 5,950 ಗ್ರಾಮ ಪಂಚಾಯಿತಿಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಅನುಕೂಲವಾಗುವಂತೆ ಅಂತಿಮ ಮೀಸಲಾತಿಯ ಅಧಿಸೂಚನೆ ಹೊರಡಿಸಲು ತಕ್ಷಣವೇ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ.

  • ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
  • ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ‘ಇದೊಂದು ಗಂಭೀರ ವಿಷಯವಾಗಿದ್ದು, ಸರ್ಕಾರದಿಂದ ಅಗತ್ಯ ಮಾಹಿತಿಗಳನ್ನು ಪಡೆದು ಎರಡು ವಾರಗಳಲ್ಲಿ ನ್ಯಾಯಾಲಯಕ್ಕೆ ತಿಳಿಸಬೇಕು’ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿ ಸಲು ಆದೇಶಿಸಿತು.‌ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಲಾಗಿದೆ.
  • ವಿವಾದಾತ್ಮಕ ಮಸೂದೆ ಜಂಟಿ ಸಮಿತಿ ರಚನೆ

ಸಂದರ್ಭ: ಕನಿಷ್ಠ 30 ದಿನ ಜೈಲುವಾಸ ಅನುಭವಿಸಿದ ಪ್ರಧಾನಿ, ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿ, ಸಚಿವರನ್ನು ಹುದ್ದೆಯಿಂದ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸುವ ವಿವಾದಾತ್ಮಕ ಮಸೂದೆಗಳನ್ನು ಪರಿಶೀಲಿಸಲು ಸಂಸತ್ತಿನ ಜಂಟಿ ಸಮಿತಿಯನ್ನು ರಚಿಸಲಾಗಿದೆ.

  • ಮಸೂದೆಯನ್ನು ಸಂಸದರ ಸಮಿತಿಯ ಪರಿಶೀಲನೆಗೆ ಕಳುಹಿಸುವ ನಿರ್ಣಯವನ್ನು ಸಂಸತ್ತು  ಅಂಗೀಕರಿಸಿ 84 ದಿನಗಳು ಕಳೆದಿವೆ. ಆದರೆ, ಎನ್‌ಸಿಪಿ (ಎಸ್‌ಪಿ) ಹೊರತುಪಡಿಸಿ ಇಂಡಿಯಾ ಮೈತ್ರಿಕೂಟವು ಯಾವುದೇ ಸಂಸದರನ್ನು ಈ ಸಮಿತಿಗೆ ನಾಮನಿರ್ದೇಶನ ಮಾಡಲು ನಿರಾಕರಿಸಿದ್ದರಿಂದ  ಸಮಿತಿ ರಚನೆ ಕಾರ್ಯ ಬಾಕಿ ಉಳಿದಿತ್ತು.
  • ಬಿಜೆಪಿಯ ಅಪರಾಜಿತಾ ಸಾರಂಗಿ ಅಧ್ಯಕ್ಷತೆಯಲ್ಲಿ 31 ಸದಸ್ಯರ ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ಬಿಜೆಪಿಯ 15 ಮಂದಿ ಸೇರಿ ಎನ್‌ಡಿಎನ 26 ಸಂಸದರು, ವಿರೋಧ ಪಕ್ಷಗಳ ನಾಲ್ವರು ಸದಸ್ಯರಿದ್ದಾರೆ. ಕರ್ನಾಟಕದ ಸುಧಾಮೂರ್ತಿ ಈ ಸಮಿತಿಗೆ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ.  ಜೆಡಿಎಸ್‌ ಸಂಸದ ಎಂ. ಮಲ್ಲೇಶಬಾಬು ಸಹ ಈ  ಸಮಿತಿ ಸದಸ್ಯರು.
  • ಸುಪ್ರಿಯಾ ಸುಳೆ (ಎನ್‌ಸಿಪಿ –ಎಸ್‌ಪಿ),  ಅಕಾಲಿ ದಳದ ಹರ್‌ಸಿಮ್ರತ್ ಕೌರ್, ವೈಎಸ್‌ಆರ್‌ ಕಾಂಗ್ರೆಸ್‌ನ ಎಸ್‌. ನಿರಂಜನ ರೆಡ್ಡಿ ಮತ್ತು ಎಐಎಂಐಎಂನ ಅಸಾದುದ್ದೀನ್‌ ಓವೈಸಿ ಈ ಸಮಿತಿಯಲ್ಲಿರುವ ವಿರೋಧ ಪಕ್ಷಗಳ ಸಂಸದರು. ಬಿಜೆಡಿ ಮತ್ತು ಬಿಆರ್‌ಎಸ್‌ನ ಸಂಸದರು ಈ ಸಮಿತಿಯಲ್ಲಿ ಇಲ್ಲ. 
  • ಸಮಿತಿಯಲ್ಲಿ ಲೋಕಸಭೆಯ 21, ರಾಜ್ಯಸಭೆಯ 10 ಸದಸ್ಯರು ಇದ್ದಾರೆ. ಮುಂದಿನ ಚಳಿಗಾಲದ ಅಧಿವೇಶನದ ಮೊದಲ ವಾರದ ಕೊನೆಯ ದಿನ ಸಮಿತಿ ವರದಿ ಸಲ್ಲಿಸಲಿದೆ. ಆದರೂ, ವರದಿ ಸಲ್ಲಿಸಲು ನಿಗದಿಪಡಿಸಿರುವ ಗಡುವು ವಿಸ್ತರಣೆಯಾಗುವ ಸಾಧ್ಯತೆಗಳಿವೆ. 
  • ಇಂಡಿಯಾ ಮೈತ್ರಿಕೂಟ,  ತೃಣಮೂಲ ಕಾಂಗ್ರೆಸ್‌, ಎಎಪಿ, ಸಮಾಜವಾದಿ ಪಾರ್ಟಿ ಮತ್ತು ಶಿವಸೇನಾ (ಯುಬಿಟಿ) ಈ ಸಮಿತಿಯನ್ನು ಬಹಿಷ್ಕರಿಸುವುದಾಗಿ ಹೇಳಿವೆ.
  • 77 ಅಡಿ ರಾಮನ ಪ್ರತಿಮೆ: ಪರ್ತಗಾಳಿಮಠ: .28ಕ್ಕೆ ಪ್ರಧಾನಿಯಿಂದ ಜನಾರ್ಪಣೆ

ಸಂದರ್ಭ: ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠವು ಕರ್ನಾಟಕ ಗೋವಾ ಗಡಿ ಭಾಗದ ಕಾನಕೋಣ ಸಮೀಪದ ಪರ್ತಗಾಳಿಯಲ್ಲಿ ನಿರ್ಮಿಸಿರುವ 77 ಅಡಿ ಎತ್ತರದ ರಾಮನ ಕಂಚಿನ ಪ್ರತಿಮೆ ಹಾಗೂ ರಾಮಾಯಣ ವನ .28ಕ್ಕೆ ಜನಾರ್ಪಣೆಗೊಳ್ಳಲಿದೆ.

  • ಐದೂವರೆ ಶತಮಾನದ ಇತಿಹಾಸ ಹೊಂದಿರುವ ಗೋಕರ್ಣ ಪರ್ತಗಾಳಿ ಜೀವೋತ್ತಮ ಮೂಲ ಮಠದಲ್ಲಿ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಂದು ಮಧ್ಯಾಹ್ನ 3.50ಕ್ಕೆ ಉದ್ಘಾಟಿಸುವರು.
  • 13ನೇ ಶತಮಾನದಲ್ಲಿ ಮಧ್ವಾ ಚಾರ್ಯರು ಸ್ಥಾಪಿಸಿದ ಮಠವಿದು. ಸದ್ಯದಕ್ಷಿಣ ಗೋವಾದ ಪರ್ತಗಾಳಿ ಗ್ರಾಮದ ಕುಶಾವತಿ ನದಿಯ ದಡದಲ್ಲಿರುವ ಪ್ರಧಾನ ಮಠದ ಆವರಣದಲ್ಲಿ ಸುಮಾರು ₹16 ಕೋಟಿ ವೆಚ್ಚದಲ್ಲಿ ಭಾರತದಲ್ಲಿಯೇ ಅತಿ ಎತ್ತರದರಾಮನ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ. ಇದರೊಟ್ಟಿಗೆ ರಾಮಾಯಣ ಉದ್ಯಾನ, 3ಡಿ ಮ್ಯಾಪಿಂಗ್, ವಿಶಾಲ ಸಭಾಂಗಣ, ಬಹು ಬಳಕೆಯ ಕಟ್ಟಡ, ಮ್ಯೂಸಿಯಂ ಅನ್ನು ರೂಪಿಸಲಾಗಿದೆ ಎಂದರು.
  • ಮಠದ 24ನೇ ಪೀಠಾಧ್ಯಕ್ಷರಾದ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ  ಮಾರ್ಗದರ್ಶನದಲ್ಲಿಯೇ 550ನೇ ವರ್ಷದ ಆಚರಣೆ, ಧಾರ್ಮಿಕ ಕಾರ್ಯಕ್ರಮಗಳು ನ.27ರಂದು ಆರಂಭಗೊಂಡು ಡಿ.7ರವರೆಗೂ ಪರ್ತಗಾಳಿಯಲ್ಲಿ ಇರಲಿವೆ. ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು
  • ಮಠದ 550 ನೇ ವರ್ಷದ ಸಂದರ್ಭದಲ್ಲಿ ವೇದಿಕ್‌ ಪಾಠ ಶಾಲೆ ನಿರ್ಮಿಸಿ, ಗುರುಕುಲ ಮಾದರಿಯಲ್ಲಿ 12 ವರ್ಷ ಶಿಕ್ಷಣವನ್ನು ನೀಡಲು ಮಠ ಮುಂದಾಗಿದೆ. 1 ಲಕ್ಷ ಚದರಡಿ ಪ್ರದೇಶದಲ್ಲಿ ಗುರುಕುಲ ವಿದ್ಯಾಪೀಠ ಕೆಲಸವೂ ಶುರುವಾಗಿದೆ ಎಂದು ಹೇಳಿದರು.‌‌
  • ರಫ್ತು ಉತ್ತೇಜನಾ ಯೋಜನೆಗೆ ಒಪ್ಪಿಗೆ

ಸಂದರ್ಭ: ಆರು ವರ್ಷಗಳ ಅವಧಿಯಲ್ಲಿ ಜಾರಿಗೆ ಬರುವ, ₹25 ಸಾವಿರ ಕೋಟಿ ಮೊತ್ತದ ರಫ್ತು ಉತ್ತೇಜನಾ ಯೋಜನೆಗೆ ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ನೀಡಿದೆ. ಯೋಜನೆಯು ಹಣಕಾಸು ವರ್ಷದಿಂದಲೇ ಜಾರಿಗೆ ಬರಲಿದೆ.

  • ಈ ಯೋಜನೆಯು, ಅಮೆರಿಕವು ಭಾರತದ ಸರಕುಗಳ ಮೇಲೆ ವಿಧಿಸಿರುವ ಭಾರಿ ಪ್ರಮಾಣದ ಸುಂಕದ ಪರಿಣಾಮವನ್ನು ನಿಭಾಯಿಸಲು ರಫ್ತುದಾರರಿಗೆ ನೆರವಾಗಲಿದೆ. ಎರಡು ಉಪ ಯೋಜನೆಗಳ ಮೂಲಕ (‘ನಿರ್ಯಾತ್ ಪ್ರೋತ್ಸಾಹನ್’ ಮತ್ತು ‘ನಿರ್ಯಾತ್ ದಿಶಾ’) ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.
  • ಈ ಯೋಜನೆಯು ರಫ್ತು ವ್ಯವಸ್ಥೆಗೆ ಬೆಂಬಲವಾಗಿ ನಿಲ್ಲಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಸಭೆಯ ನಂತರ ತಿಳಿಸಿದರು.
  • ಚಿಲ್ಲರೆ ಹಣದುಬ್ಬರ ಇಳಿಕೆ: ದಶಕದ ಕನಿಷ್ಠ ಮಟ್ಟಕ್ಕೆ ಹಣದುಬ್ಬರ l ಇಳಿಕೆಗೆ ಜಿಎಸ್ಟಿ ಪರಿಷ್ಕರಣೆಯೂ ಕಾರಣ

ಸಂದರ್ಭ: ಚಿಲ್ಲರೆ ಹಣದುಬ್ಬರ ಪ್ರಮಾಣವು ಅಕ್ಟೋಬರ್‌ ನಲ್ಲಿ ಶೇಕಡ 0.25ಕ್ಕೆ ಇಳಿಕೆಯಾಗಿದೆ. ಜನರು ನಿತ್ಯದ ಬದುಕಿನಲ್ಲಿ ಹೆಚ್ಚಾಗಿ ಬಳಕೆ ಮಾಡುವ ಸರಿಸುಮಾರು 380 ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರವನ್ನು ಕಡಿಮೆ ಮಾಡಿದ್ದುದು ಕೂಡ ಹಣದುಬ್ಬರ ಇಳಿಕೆಗೆ ಒಂದು ಕಾರಣ ಎಂದು ತಜ್ಞರು ಹೇಳಿದ್ದಾರೆ.

  • ಅಲ್ಲದೆ, ತರಕಾರಿ, ಹಣ್ಣುಗಳು ಮತ್ತು ಮೊಟ್ಟೆ ಬೆಲೆಯು ಕಡಿಮೆ ಆಗಿರುವುದು ಕೂಡ ಹಣದುಬ್ಬರ ದರವನ್ನು ತಗ್ಗಿಸಿದೆ. ಅಕ್ಟೋಬರ್‌ನಲ್ಲಿ ದಾಖಲಾಗಿರುವ, ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರ ಪ್ರಮಾಣವು 2014ರ ಜನವರಿ ನಂತರದ ಅತ್ಯಂತ ಕನಿಷ್ಠ ಮಟ್ಟವಾಗಿದೆ.
  • ಸೆಪ್ಟೆಂಬರ್‌ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 1.44ರಷ್ಟು ಇತ್ತು. ಹಿಂದಿನ ವರ್ಷದ ಅಕ್ಟೋಬರ್‌ನಲ್ಲಿ ಇದು ಶೇ 6.21ರಷ್ಟು ಆಗಿತ್ತು.
  • ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಬಿಡುಗಡೆ ಮಾಡಿರುವ ಅಂಕಿ–ಅಂಶಗಳ ಪ್ರಕಾರ ಅಕ್ಟೋಬರ್‌ನಲ್ಲಿ ಆಹಾರ ವಸ್ತುಗಳ ಹಣದುಬ್ಬರ ಪ್ರಮಾಣವು ಶೇ (–)5.02ರಷ್ಟು ಆಗಿತ್ತು.
  • ಹಣದುಬ್ಬರವು ಇಳಿಕೆ ಕಂಡಿರುವುದಕ್ಕೆ ಮುಖ್ಯ ಕಾರಣಗಳಲ್ಲಿ ಜಿಎಸ್‌ಟಿ ದರ ಪರಿಷ್ಕರಣೆಯೂ ಸೇರಿದೆ ಎಂದು ಎನ್‌ಎಸ್‌ಒ ಹೇಳಿದೆ. ಎಣ್ಣೆ ಮತ್ತು ಕೊಬ್ಬುಗಳು, ತರಕಾರಿಗಳು, ಹಣ್ಣುಗಳು, ಮೊಟ್ಟೆ, ಪಾದರಕ್ಷೆ, ಏಕದಳ ಧಾನ್ಯಗಳು ಮತ್ತು ಅವುಗಳ ಉತ್ಪನ್ನಗಳು, ಸಾರಿಗೆ ಹಾಗೂ ಸಂವಹನ ವರ್ಗಗಳಲ್ಲಿ ಹಣ ದುಬ್ಬರ ಇಳಿಕೆ ಆಗಿದ್ದುದು ಕೂಡ ಒಂದು ಕಾರಣ ಎಂದು ಎನ್‌ಎಸ್‌ಒ ಹೇಳಿದೆ.
  • ಗ್ರಾಮೀಣ ಪ್ರದೇಶಗಳಲ್ಲಿ ಹಣದುಬ್ಬರ ಪ್ರಮಾಣವು (–)0.25 ಆಗಿದೆ. ನಗರ ಪ್ರದೇಶಗಳಲ್ಲಿ ಇದು ಶೇ 0.88ರ ಮಟ್ಟದಲ್ಲಿದೆ.
  • ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು (ಎಂಪಿಸಿ) ಚಿಲ್ಲರೆ ಹಣದುಬ್ಬರದ ಅಂದಾಜು ಪ್ರಮಾಣವನ್ನು ಪ್ರಸಕ್ತ ಆರ್ಥಿಕ ವರ್ಷಕ್ಕೆ ಶೇ 2.6ರ ಮಟ್ಟದಿಂದ ತುಸು ಕಡಿಮೆ ಮಾಡುವ ಸಾಧ್ಯತೆ ಇದೆ ಎಂದು ಐಸಿಆರ್‌ಎ ಸಂಸ್ಥೆಯ ಮುಖ್ಯ ಅರ್ಥ ಶಾಸ್ತ್ರಜ್ಞೆ ಅದಿತಿ ನಾಯರ್ ಹೇಳಿದ್ದಾರೆ.
  • ‘ಸಮಿತಿಯು ಅಕ್ಟೋಬರ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ರೆಪೊ ದರವನ್ನು ಶೇ 0.25ರಷ್ಟು ಕಡಿಮೆ ಮಾಡುವುದಕ್ಕೆ ಹಣದುಬ್ಬರದ ಇಳಿಕೆಯು ಒತ್ತಾಸೆ ನೀಡುತ್ತದೆ. ಪ್ರಸಕ್ತ ಹಣಕಾಸು ವರ್ಷದ ಎರಡನೆಯ ತ್ರೈಮಾಸಿಕದ ಜಿಡಿಪಿ ಬೆಳವಣಿಗೆ ದರವು ಆಶ್ಚರ್ಯಕರ ಮಟ್ಟದಲ್ಲಿ ಏರಿಕೆ ಕಾಣದೆ ಇದ್ದರೆ, ರೆಪೊ ದರ ಇಳಿಕೆಯ ಸಾಧ್ಯತೆಗೆ ಬಲ ಬರುತ್ತದೆ’ ಎಂದು ಅದಿತಿ ಅವರು ಅಭಿಪ್ರಾಯಪಟ್ಟಿದ್ದಾರೆ.
  • ಜಿಎಸ್‌ಟಿ ದರ ಪರಿಷ್ಕರಣೆಯು ಸೆಪ್ಟೆಂಬರ್‌ ಕೊನೆಯಲ್ಲಿ ಜಾರಿಗೆ ಬಂತು. ಅದರ ಧನಾತ್ಮಕ ಪರಿಣಾಮವು ಅಕ್ಟೋಬರ್‌ನಲ್ಲಿ ಕಂಡುಬಂದಿದೆ ಎಂದು ಕೇರ್‌ಎಜ್‌ ರೇಟಿಂಗ್ಸ್‌ ಸಂಸ್ಥೆಯ ಮುಖ್ಯ ಅರ್ಥಶಾಸ್ತ್ರಜ್ಞೆ ರಜನಿ ಸಿನ್ಹಾ ಹೇಳಿದ್ದಾರೆ.
  • ‘ಹಣಕಾಸು ನೀತಿಗಳ ದೃಷ್ಟಿಯಿಂದ ಹೇಳುವುದಾದರೆ, ಹಣದುಬ್ಬರ ಕಡಿಮೆ ಆಗಿರುವುದು, ಆರ್ಥಿಕ ಬೆಳವಣಿಗೆಯ ಮೇಲೆ ಗಮನ ನೀಡಲು ಆರ್‌ಬಿಐಗೆ ಹೆಚ್ಚಿನ ಅವಕಾಶ ಮಾಡಿಕೊಡುತ್ತದೆ… ಈ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಆರ್ಥಿಕ ಬೆಳವಣಿಗೆ ದರವು ಕಡಿಮೆ ಆದರೆ, ರೆಪೊ ದರ ಕಡಿತಕ್ಕೆ ಸಂದರ್ಭ ಸೃಷ್ಟಿಯಾಗುತ್ತದೆ’ ಎಂದು ಸಿನ್ಹಾ ಅವರು ಹೇಳಿದ್ದಾರೆ.
  • ಕ್ವಾಂಟಮ್ಎಕೋಸಿಸ್ಟಮ್ಮ್ಯಾಪ್‌’ಗೆ ಸೂಚನೆ

ಸಂದರ್ಭ: ಕ್ವಾಂಟಮ್ತಂತ್ರಜ್ಞಾನದ ಬಗ್ಗೆ ಸಮಗ್ರ ಮಾಹಿತಿ ಪ್ರಚುರಪಡಿಸಲುಕರ್ನಾಟಕ ಕ್ವಾಂಟಮ್ಎಕೋಸಿಸ್ಟಮ್ಮ್ಯಾಪ್ ತಯಾರಿಸಲು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

  • ಸ್ವಿಟ್ಜರ್‌ಲೆಂಡ್‌ನಲ್ಲಿ ಕ್ವಾಂಟಮ್‌ ತಂತ್ರಜ್ಞಾನದ ಬಗ್ಗೆ ಸಮಗ್ರ ಮಾಹಿತಿ ಪ್ರಚುರಪಡಿಸಲು ‘ಸ್ವಿಸ್‌ನೆಕ್ಸ್‌ ಕ್ವಾಂಟಮ್ ಮ್ಯಾಪ್‌’ ಸಿದ್ಧಪಡಿಸಿದೆ. ಅದೇ ಮಾದರಿ ಯಲ್ಲಿ ಇಲ್ಲೂ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ಸಿದ್ದಪಡಿಸುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.
  • ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸ್ವಿಸ್‌ನೆಕ್ಸ್‌ ಇಂಡಿಯಾದ ಸಿಇಓ ಮತ್ತು ಕೌನ್ಸಲ್‌ ಜನರಲ್‌ ಡಾ ಎಂಜೆಲಾ ಹೊನೆಗ್ಗರ್‌ ಮತ್ತು ರಾಜ್ಯದ ಅಧಿಕಾರಿಗಳ ಜತೆ ಬೋಸರಾಜು ಮಾತುಕತೆ ನಡೆಸಿದರು. ಸಭೆಯಲ್ಲಿ ಕರ್ನಾಟಕ ಮತ್ತು ಸ್ವಿಟ್ಜರ್‌ಲೆಂಡ್ ಮಧ್ಯೆ ಸಂಶೋಧನೆ ಮತ್ತು ಉದ್ಯಮಗಳ ತಂತ್ರಜ್ಞಾನ ವಿನಿಮಯಕ್ಕೆ ವೇದಿಕೆಯನ್ನು ರಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಕುರಿತೂ ವಿವರವಾಗಿ ಚರ್ಚಿಸಲಾಯಿತು.
  • ಬೆಂಗಳೂರು ನಗರವು ದೇಶದ ಕ್ವಾಂಟಮ್‌ ನವೋದ್ಯಮದ ರಾಜಧಾನಿ. ಕ್ವಾಂಟಮ್ ಕ್ಷೇತ್ರದಲ್ಲಿ ತೊಡಗಿಸಿ ಕೊಂಡಿರುವ ಸಾಕಷ್ಟು ನವೋದ್ಯಮಗಳು ಮತ್ತು ಉದ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಹಲವಾರು ಸಂಸ್ಥೆಗಳೂ ಸಂಶೋಧನೆಯಲ್ಲಿ ತೊಡಗಿಕೊಂಡಿವೆ. ದೇಶದಲ್ಲಿಯೇ ಅತಿ ಹೆಚ್ಚು ಕ್ವಾಂಟಮ್‌ ಕ್ಷೇತ್ರದಲ್ಲಿ ಪ್ರಾವೀಣ್ಯತೆ ಹೊಂದಿರುವ ಮಾನವ ಸಂಪನ್ಮೂಲವೂ ಲಭ್ಯವಿದೆ ಎಂದು ಬೋಸರಾಜು ತಿಳಿಸಿದರು.
  • ದೇಶದಲ್ಲೇ ಮೊದಲ ಕ್ಯೂ–ಸಿಟಿಯನ್ನು ನಿರ್ಮಾಣ ಮಾಡಲು ಸರ್ಕಾರ ಭೂಮಿ ಮಂಜೂರು ಮಾಡಿದೆ. ಈ ಎಲ್ಲಾ ವಿಷಯಗಳನ್ನು ಉತ್ತಮ ರೀತಿಯಲ್ಲಿ ಪ್ರಚುರ ಪಡಿಸಲು ಮ್ಯಾಪ್ ರಚಿಸುವುದು ಅಗತ್ಯವಿದೆ ಎಂದರು.
  • ಈ ಪ್ರಸ್ತಾವಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸ್ವಿಸ್‌ನೆಕ್ಸ್‌ ಸಿಇಓ ಡಾ. ಎಂಜೆಲಾ ಹೊನೆಗ್ಗರ್ ಅವರು, ಸ್ವಿಟ್ಜರ್‌ಲೆಂಡ್‌ ಕ್ವಾಂಟಮ್‌ ಕ್ಷೇತ್ರದ ಆವಿಷ್ಕಾರ ಹಾಗೂ ಉದ್ಯಮಗಳ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದೆ. ಈ ಬಗ್ಗೆ ಅಮೆರಿಕಾ ಹಾಗೂ ಇನ್ನಿತರ ದೇಶಗಳಲ್ಲಿ ಪ್ರಚಾರ ಮಾಡುವ ಮತ್ತು ಮಾಹಿತಿಯನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಸ್ವಿಸ್‌ನೆಕ್ಸ್‌ ಕ್ವಾಂಟಮ್‌ ಮ್ಯಾಪ್‌ ರಚಿಸಲಾಯಿತು ಎಂದರು.
  • ಸ್ವಿಸ್‌ನೆಕ್ಸ್‌ ಕ್ವಾಂಟಮ್‌ ಮ್ಯಾಪ್‌ನಿಂದ ಕ್ವಾಂಟಮ್‌ ಕ್ಷೇತ್ರದ ಯಾವ ವಿಷಯದಲ್ಲಿ ಯಾವ ಯಾವ ಉದ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಸಹಯೋಗದ ಅವಕಾಶ ಎಲ್ಲಿದೆ ಎನ್ನುವ ಮಾಹಿತಿಯನ್ನು ಕ್ರೋಡೀಕರಿಸಲಾಗಿತ್ತು. ಇದೇ ರೀತಿ ಮ್ಯಾಪ್‌ ಸಿದ್ದಪಡಿಸಿದರೆ ಎರಡೂ ರಾಷ್ಟ್ರಗಳ ನಡುವೆ ವಿಚಾರ ವಿನಿಮಯದ ಮೊದಲ ಹೆಜ್ಜೆ ಯಾಗಲಿದೆ ಎಂದು ಹೇಳಿದರು.
  • . ಪರಿಕರದಿಂದ ಶೇ 50ರಷ್ಟು ಕೆಲಸ: ಸೇಲ್ಸ್ಫೋರ್ಸ್

ಸಂದರ್ಭ: 2027 ವೇಳೆಗೆ ದೇಶದ ಸೇವಾ ವಲಯದಲ್ಲಿ ಗ್ರಾಹಕರಿಂದ ಬರುವ ಕೋರಿಕೆಗಳ ಪೈಕಿ ಶೇ 50ರಷ್ಟಕ್ಕೆ ಕೃತಕ ಬುದ್ಧಿಮತ್ತೆ (.) ಆಧಾರಿತ ಪರಿಕರಗಳೇ ಪರಿಹಾರ ನೀಡಲಿವೆ ಎಂದು ಸೇಲ್ಸ್ಫೋರ್ಸ್ಸಮೀಕ್ಷೆ ಹೇಳಿದೆ.

  • ಅಮೆರಿಕ ಮೂಲದ ಸೇಲ್ಸ್‌ಫೋರ್ಸ್‌ ಕಂಪನಿಯು ಕ್ಲೌಡ್ ಆಧಾರಿತ ತಂತ್ರಾಂಶ ಸೇವೆಗಳನ್ನು ಒದಗಿಸುತ್ತದೆ.
  • ಸೇವಾ ವಲಯದ ತಜ್ಞರ ಪ್ರಕಾರ, ಗ್ರಾಹಕರಿಂದ ಈಗ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಬರುತ್ತಿರುವ ಕೋರಿಕೆಗಳ ಪೈಕಿ ಶೇ 30ರಷ್ಟನ್ನು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಪರಿಹರಿಸುತ್ತಿದೆ. ಇದು 2027ರ ವೇಳೆಗೆ ಶೇ 50ಕ್ಕೆ ತಲುಪುವ ನಿರೀಕ್ಷೆ ಇದೆ ಎಂದು ಸೇಲ್ಸ್‌ಫೋರ್ಸ್‌ ತನ್ನ ಇತ್ತೀಚಿನ ವರದಿಯೊಂದರಲ್ಲಿ ತಿಳಿಸಿದೆ.
  • ‘ಎ.ಐ ತಂತ್ರಜ್ಞಾನದ ಬಳಕೆಯಿಂದ ಸೇವಾ ವೆಚ್ಚವು ಕಡಿತಗೊಂಡಿದ್ದು, ಗ್ರಾಹಕರಿಗೆ ನೀಡುವ ಸೇವೆಯಲ್ಲಿ ಸುಧಾರಣೆ ಆಗಿದೆ’ ಎಂದು ಸೇಲ್ಸ್‌ಫೋರ್ಸ್ ಇಂಡಿಯಾದ ಸಲ್ಯೂಷನ್ ಎಂಜಿನಿಯರಿಂಗ್ ವಿಭಾಗದ ಉಪಾಧ್ಯಕ್ಷ ದೀಪು ಚಾಕೊ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
  • ‘ಸೇವಾ ವಲಯದ ಕಂಪನಿಗಳು, ಈ ತಂತ್ರಜ್ಞಾನ ಬಳಸುವುದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ಈ ತಂತ್ರಜ್ಞಾನದ ಬಳಕೆಯಿಂದ ವರಮಾನವು ಶೇ 16ರಷ್ಟು ಹೆಚ್ಚಳವಾಗಲಿದೆ ಎಂದು ದೇಶದ ಸೇವಾ ವಲಯದ ಕಂಪನಿಗಳು ಭಾವಿಸಿವೆ’ ಎಂದು ಸೇಲ್ಸ್‌ಫೋರ್ಸ್ ಇಂಡಿಯಾದ ಮಾರಾಟ ಮತ್ತು ವಿತರಣೆಯ ವ್ಯವಸ್ಥಾಪಕ ನಿರ್ದೇಶಕಿ ಮನ್ಕಿರಣ್ ಚೌಹಾನ್ ತಿಳಿಸಿದರು.
  • ಈ ವರ್ಷದ ಏಪ್ರಿಲ್‌ 25ರಿಂದ ಜೂನ್‌ 6ರವರೆಗೆ ಜಗತ್ತಿನ 6,500 ಕಂಪನಿಗಳಿಂದ ಸಂಗ್ರಹಿಸಿದ ಮಾಹಿತಿ ಆಧರಿಸಿ ಈ ವರದಿ ತಯಾರಿಸಲಾಗಿದೆ.
  • ವಿಶ್ವದೆಲ್ಲೆಡೆಯಿಂದ ಪ್ರತಿಭಾವಂತರ ಕರೆತರಲು ಎಚ್‌–1ಬಿ ವೀಸಾ ಅಗತ್ಯ

ಸಂದರ್ಭ: ಅಮೆರಿಕ ಅಧ್ಯಕ್ಷ ಡೊನಾಲ್ಡ್ಟ್ರಂಪ್ಅವರು ಎಚ್1ಬಿ ವೀಸಾ ಕಾರ್ಯಕ್ರಮ ವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

  • ‘ಕೆಲ ಕ್ಷೇತ್ರಗಳಿಗೆ ಸಂಬಂಧಿಸಿ ಅಮೆರಿಕದಲ್ಲಿ ಪ್ರತಿಭಾವಂತರು ಇಲ್ಲ. ಈ ಕೊರತೆ ನೀಗಿಸಲು ವಿಶ್ವದ ವಿವಿಧ ಭಾಗಗಳಿಂದ ಪ್ರತಿಭಾವಂತರನ್ನು ಅಮೆರಿಕಕ್ಕೆ ಕರೆತರುವುದು ಅಗತ್ಯ. ಹೀಗಾಗಿ ಎಚ್‌–1ಬಿ ವೀಸಾ ಅಗತ್ಯ’ ಎಂದು ಹೇಳಿದ್ದಾರೆ.
  • ಫಾಕ್ಸ್‌ ನ್ಯೂಸ್‌ನ ಲಾರಾ ಇನ್‌ಗ್ರಹಾಮ್ ಅವರಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ಮಾತು ಹೇಳಿದ್ದಾರೆ.
  • ‘ಎಚ್‌–1ಬಿ ವೀಸಾ ಯೋಜನೆ ಟ್ರಂಪ್‌ ಆಡಳಿತದ ಆದ್ಯತೆ ಆಗಿಲ್ಲವೇ? ಒಂದು ವೇಳೆ, ಅಮೆರಿಕನ್ನರಿಗೆ ನೀಡುವ ವೇತನವನ್ನು ಹೆಚ್ಚಳ ಮಾಡಿದಲ್ಲಿ ಇತರ ದೇಶಗಳಿಂದ ಉದ್ಯೋಗ ಅರಸಿ ಇಲ್ಲಿಗೆ ಬರುವವರ ಸಂಖ್ಯೆ ಕಡಿಮೆ ಯಾಗುವುದಿಲ್ಲವೇ’ ಎಂಬ ಲಾರಾ ಅವರ ಪ್ರಶ್ನೆಗೆ ಟ್ರಂಪ್‌ ಈ ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮಲ್ಲಿಯೇ ಸಾಕಷ್ಟು ಪ್ರತಿಭೆಗಳಿವೆ ಯಲ್ಲ?’ ಎಂದೂ ಲಾರಾ ಪ್ರಶ್ನಿಸಿದ್ದಾರೆ.

  • ಇದಕ್ಕೆ ಪ್ರತಿಕ್ರಿಯಿಸಿರುವ ಟ್ರಂಪ್, ‘ಇಲ್ಲ. ಅಮೆರಿಕವು ಕೆಲ ಕ್ಷೇತ್ರಗಳಿಗೆ ಸಂಬಂಧಿಸಿ ಪ್ರತಿಭೆಗಳನ್ನು ಹೊಂದಿಲ್ಲ. ಅಂತಹ ಪ್ರತಿಭಾವಂತರನ್ನು ಇತರ ದೇಶಗಳಿಂದ ಕರೆತರಬೇಕು. ಇಲ್ಲಿನ ಜನರು ಇನ್ನಷ್ಟು ಕಲಿಯಬೇಕಿದೆ’ ಎಂದು ಅವರು ಹೇಳಿದ್ದಾರೆ.
  • ಎಚ್‌–1ಬಿ ವೀಸಾ ದುರ್ಬಳಕೆ ತಡೆಯುವ ಉದ್ದೇಶದಿಂದ ಕಳೆದ ವಾರ ಟ್ರಂಪ್‌ ಆಡಳಿತವು ತನಿಖೆ ಆರಂಭಿಸಿತ್ತು. ‘ಅಮೆರಿಕದಲ್ಲಿನ ಉದ್ಯೋಗಗಳ ಸಂರಕ್ಷಣೆ ಮಾಡುವ ಅಗತ್ಯ ಇದ್ದು, ಇದಕ್ಕಾಗಿ ಎಚ್‌–1ಬಿ ವೀಸಾ ದುರ್ಬಳಕೆಗೆ ಕಡಿವಾಣ ಹಾಕಬೇಕಿದೆ. ಹೀಗಾಗಿ 175 ಪ್ರಕರಣಗಳ ಕುರಿತು ತನಿಖೆ ಕೈಗೊಂಡಿದ್ದೇವೆ’ ಎಂದು ಕಾರ್ಮಿಕ ಇಲಾಖೆ ‘ಎಕ್ಸ್’ನಲ್ಲಿ ಪೋಸ್ಟ್‌ ಮಾಡಿತ್ತು.
  • ಎಚ್‌–1ಬಿ ವೀಸಾ ಅರ್ಜಿ ಶುಲ್ಕ ಹೆಚ್ಚಳ ಮಾಡುವ ಆದೇಶಕ್ಕೆ ಟ್ರಂಪ್‌ ಅವರು ಸೆಪ್ಟೆಂಬರ್‌ನಲ್ಲಿ ಸಹಿ ಹಾಕಿದ್ದರು. ಈ ನೂತನ ಆದೇಶದ ಪ್ರಕಾರ, ಈ ವೀಸಾಕ್ಕಾಗಿ ಹೊಸದಾಗಿ ಅರ್ಜಿ ಸಲ್ಲಿಸುವವರು 1 ಲಕ್ಷ ಡಾಲರ್‌(ಅಂದಾಜು ₹88 ಲಕ್ಷ) ಶುಲ್ಕ ನೀಡಬೇಕಾಗುತ್ತದೆ.
  • ಟ್ರಂಪ್‌ ಅವರ ಈ ಕ್ರಮದಿಂದ, ಉದ್ಯೋಗ ಅರಸಿ ಅಮೆರಿಕಕ್ಕೆ ತೆರಳುವ ಭಾರತೀಯರಿಗೆ ಅದರಲ್ಲೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದವರಿಗೆ ಭಾರಿ ಸಮಸ್ಯೆಯಾಗಿದೆ. ವಿಶೇಷ ಕೌಶಲ ಅಗತ್ಯವಿರುವ ವಿದೇಶಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಅಮೆರಿಕದ ಕಂಪನಿಗಳಿಗೂ ಈ ಆದೇಶದಿಂದ ಹೊರೆಯಾಗುತ್ತಿದೆ.
0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments