- ಋತುಚಕ್ರ ರಜೆ: ಹೊರಬಿದ್ದ ಆದೇಶ
ಸಂದರ್ಭ: ರಾಜ್ಯ ಸರ್ಕಾರದ ಮಹಿಳಾ ನೌಕರರಿಗೆ ತಕ್ಷಣದಿಂದಲೇ ಜಾರಿಯಾಗುವಂತೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.
- ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ.
- ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಋತುಚಕ್ರ ರಜೆ ಪಡೆಯಬಹುದು.
- ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಸಕ್ಷಮಪ್ರಾಧಿಕಾರವೇ ಈ ರಜೆಯನ್ನೂ ಮಂಜೂರು ಮಾಡಬಹುದಾಗಿದೆ.
- ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕಿಲ್ಲ.
- ಜತೆಗೆ ಈ ರಜೆಯನ್ನು ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು.
- ರಾಜ್ಯದಲ್ಲಿ ನಾನಾ ಕಾರ್ಮಿಕ ಕಾಯಿದೆಯಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು, ಸಂಸ್ಥೆಗಳಲ್ಲಿಕಾರ್ಯ ನಿರ್ವಹಿಸುತ್ತಿರುವ 18ರಿಂದ 52 ವರ್ಷ ವಯೋಮಿತಿಯ ಎಲ್ಲ ಕಾಯಂ, ಗುತ್ತಿಗೆ, ಹೊರ ಗುತ್ತಿಗೆ ಮಹಿಳಾ ನೌಕರರಿಗೆ ಋುತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದರಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆ ಸೌಲಭ್ಯ .
- ಸರ್ಕಾರಿ ಕಾಯಂ, ಗುತ್ತಿಗೆ, ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಮತ್ತು ಸಂಸ್ಥೆಗಳಲ್ಲಿ ದುಡಿಯುವ ಮಹಿಳಾ ನೌಕರರು, ಹೊರಗುತ್ತಿಗೆ ವಲಯಗಳಲ್ಲಿ ದುಡಿಯುವ ಮಹಿಳಾ ಉದ್ಯೋಗಿಗಳಿಗೂ ಈ ರಜೆ ಸೌಲಭ್ಯ ಅನ್ವಯವಾಗಲಿದೆ.
- ರಫ್ತು ಕೇಂದ್ರವಾಗಿ ದಕ್ಷಿಣ ಕನ್ನಡ
- ದಕ್ಷಿಣ ಕನ್ನಡವನ್ನು ಜಿಲ್ಲಾ ರಫ್ತು ಕೇಂದ್ರವಾಗಿ ಘೋಷಿಸಲಾಗಿದೆ.
- ಸಮುದ್ರ ಆಹಾರಗಳು, ಗೋಡಂಬಿಯನ್ನು ಸಂಭಾವ್ಯ ರಫ್ತು ಉತ್ಪನ್ನಗಳಾಗಿ ಸೇರಿಸಲಾಗಿದೆ.
- ಜಿಲ್ಲೆಗಳು ರಫ್ತು ಕೇಂದ್ರಗಳಾಗಿ (DEH) ಉಪಕ್ರಮದಡಿಯಲ್ಲಿ, ದಕ್ಷಿಣ ಕನ್ನಡವನ್ನು ಅಧಿಕೃತವಾಗಿ ರಫ್ತು ತಾಣವೆಂದು ಗುರುತಿಸಲಾಗಿದೆ. ಈ ಮಾನ್ಯತೆಯು ಸುಸ್ಥಿರ ಆರ್ಥಿಕ ಅಭಿವೃದ್ಧಿಯತ್ತ ಜಿಲ್ಲೆಯ ನಿರಂತರ ಪ್ರಯತ್ನಗಳತ್ತ ಗಮನ ಸೆಳೆದಿದೆ.
ಡಿಜಿಟಲ್ ಇ–ಸ್ಟ್ಯಾಂಪ್ ಕಾಗದರಹಿತ ನೋಂದಣಿಯತ್ತ ಹೆಜ್ಜೆ

- ಕೇಂದ್ರದಿಂದ ಭಾರತ್ ಟ್ಯಾಕ್ಸಿ ಆ್ಯಪ್
ಸಂದರ್ಭ: ಸಹಕಾರ ವ್ಯವಸ್ಥೆಯ ಅಡಿಯಲ್ಲಿ ಕೆಲಸ ನಿರ್ವಹಿ ಸುವ ‘ಭಾರತ್ ಟ್ಯಾಕ್ಸಿ’ ಆ್ಯಪ್ ಅನ್ನು ಆರಂಭಿಸುವ ಆಲೋಚನೆಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
- ಈ ಆ್ಯಪ್ ಕಾರ್ಯರೂಪಕ್ಕೆ ಬಂದ ನಂತರದಲ್ಲಿ ವಾಣಿಜ್ಯ ಬಳಕೆಯ ವಾಹನ ಗಳ ಚಾಲಕರು ಖಾಸಗಿ ಕಂಪನಿಗಳ ಮೇಲೆ ಅವಲಂಬಿತರಾಗುವುದು ಇನ್ನಿಲ್ಲವಾಗಲಿದೆ ಎಂಬುದು ಸರ್ಕಾರದ ಲೆಕ್ಕಾಚಾರ.
- ‘ಭಾರತ್ ಟ್ಯಾಕ್ಸಿ’ ಆ್ಯಪ್ಅನ್ನು ಸಹಕಾರ ಟ್ಯಾಕ್ಸಿ ಕೋ–ಆಪರೇಟಿವ್ ಲಿಮಿಟೆಡ್ ನಿರ್ವಹಿಸಲಿದೆ. ಇದು ಬಹುರಾಜ್ಯ ಸಹಕಾರ ಸಂಸ್ಥೆಯಾಗಿದೆ.
- ಟ್ಯಾಕ್ಸಿ ಸೇವೆಯನ್ನು ಈ ಆ್ಯಪ್ ಮೂಲಕ ಪಡೆದುಕೊಳ್ಳುವುದು ಗ್ರಾಹಕಸ್ನೇಹಿ ಆಗಿರಲಿದೆ. ಸೇವೆಗಳಿಗೆ ಬೆಲೆ ನಿಗದಿಯು ಪಾರದರ್ಶಕವಾಗಿ ಇರಲಿದೆ.
- ಈ ಆ್ಯಪ್ನ ಬಳಕೆಗೆ ಕಮಿಷನ್ ನೀಡುವ ಪ್ರಮೇಯ ಇರುವುದಿಲ್ಲ. ಹೀಗಾಗಿ ಚಾಲಕರಿಗೆ ಪ್ರತಿ ಬಾರಿಯೂ ಪೂರ್ಣ ಮೊತ್ತ ಪಾವತಿ ಆಗುತ್ತದೆ.
- ಸಹಕಾರ ಸಂಘ ಪಡೆಯುವ ಲಾಭವನ್ನು ಚಾಲಕರಿಗೆ ನೇರವಾಗಿ ಹಂಚಿಕೆ ಮಾಡಲಾಗುತ್ತದೆ.
- ಪಾರದರ್ಶಕ ಬೆಲೆ ನಿಗದಿ ವ್ಯವಸ್ಥೆಯು ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಲಾಭದಾಯಕ ಆಗಲಿದೆ.
- ಭಾರತ್ ಟ್ಯಾಕ್ಸಿ ಆ್ಯಪ್ ತನ್ನ ಪ್ರಾಯೋಗಿಕ ಕಾರ್ಯಾಚರಣೆಯನ್ನು ದೆಹಲಿಯಲ್ಲಿ ಆರಂಭಿಸಿದೆ.
- ಈಗ ಈ ಆ್ಯಪ್ನಲ್ಲಿ 51 ಸಾವಿರಕ್ಕೂ ಹೆಚ್ಚು ಚಾಲಕರು ನೋಂದಾಯಿಸಿಕೊಂಡಿದ್ದಾರೆ.
- ‘ಎರಡು ಹಂತದಲ್ಲಿ ಜನಗಣತಿ– 2027’
ಸಂದರ್ಭ: 2027ರ ಜನಗಣತಿಗೆ ಸಂಬಂಧಿಸಿದಂತೆ ಪ್ರಶ್ನಾವಳಿ ರಚಿಸಲಾಗುತ್ತಿದ್ದು, ರಿಜಿಸ್ಟ್ರಾರ್ ಜನರಲ್ ಹಾಗೂ ಜನಗಣತಿ ಆಯುಕ್ತರು ಆ ಪ್ರಶ್ನೆಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ಯಲ್ಲಿ ತೊಡಗಿದ್ದಾರೆ. ಜನಗಣತಿ ಸಂದರ್ಭದಲ್ಲೇ ಜಾತಿಗಣತಿಯನ್ನೂ ನಡೆಸಲಾಗುತ್ತದೆ.
- ಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತಿದೆ, ಮನೆಗಣತಿಯನ್ನು 2026ರ ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರ ಅವಧಿಯಲ್ಲಿ ನಡೆಯಲಿದೆ.
- ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನುಕೂಲವಾಗುವಂತೆ 30 ದಿನಗಳೊಳಗೆ ಈ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.
- ಜತೆಗೆ ಎರಡನೇ ಹಂತದಲ್ಲಿ 2027ರ ಫೆಬ್ರುವರಿಯಲ್ಲಿ ಜನಗಣತಿಯನ್ನು ಆರಂಭಿಸಲಾಗುತ್ತದೆ.