Sat. Feb 7th, 2026

ಸಂದರ್ಭ:ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಪ್ರಮಾಣ ಮಾರ್ಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾ ರಸು ಮಾಡಲು, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿ ಶಿಷ್ಟ ಬುಡಕಟ್ಟುಗಳ ಆಯೋಗಕ್ಕೆ ಅಧಿಕಾರ ನೀಡುವ ತಿದ್ದುಪಡಿ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
• ಸರ್ಕಾರದಿಂದ ಹೊಸ ದತ್ತಾಂಶ ಅಥವಾ ಮಾಹಿತಿ ಸ್ವೀಕರಿಸಿದ ಬಳಿಕ, ಪರಿಶಿಷ್ಟ ಜಾತಿಯ ವಿವಿಧ ಪ್ರವರ್ಗಗಳಿಗೆ ಒಳ ಮೀಸಲಾತಿ ಹಂಚಿಕೆ ಪ್ರಮಾಣದಲ್ಲಿ ಬದಲಾವಣೆ ಮಾಡಿ ಎಂದು ಆಯೋಗವು ಶಿಫಾರಸು ಮಾಡಬಹುದಾಗಿದೆ.
• ಇತರ ಮಸೂದೆಗಳು: ಕರ್ನಾಟಕ ಬಾಡಿಗೆ ತಿದ್ದುಪಡಿ ಮಸೂದೆ, ಬಯಲುಸೀಮೆ ಪ್ರದೇಶಾಭಿ-ವೃದ್ಧಿ ಮಂಡಳಿ ತಿದ್ದುಪಡಿ ಮಸೂದೆ. ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ತಿದ್ದುಪಡಿ ಮಸೂದೆ, ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ತಿದ್ದುಪಡಿ ಮಸೂದೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ತಿದ್ದುಪಡಿ ಮಸೂದೆ.
• ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ಮಸೂದೆ, ಕರ್ನಾಟಕ ಭೂ ಕಂದಾಯ 2ನೇ ತಿದ್ದುಪಡಿ ಮಸೂದೆ, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ, ಕರ್ನಾಟಕ ವಿಶ್ವವಿ-ದ್ಯಾಲಯ ಎರಡನೇ ತಿದ್ದುಪಡಿ ಮಸೂದೆ, ಚಂದ್ರಗುತ್ತಿ ಶ್ರೀರೇಣುಕಾಂಬ ಕ್ಷೇತ್ರ ಅಭಿವೃದ್ಧಿಪ್ರಾಧಿಕಾರ.
• ಡಿಸಿಎಂಗೆ ಮಸೂದೆ: ರಾಜ್ಯಪಾಲರು ಹಿಂತಿರುಗಿಸಿದ್ದ ಎರಡು ಮಸೂದೆಗಳ ಪೈಕಿ ‘ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಮಸೂದೆ’ಯನ್ನು ಉಪ ಮುಖ್ಯಮಂತ್ರಿಯವರಿಗೆ ಕಳುಹಿಸಲಾಗಿದೆ. ‘ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ’ಯನ್ನು ಹೆಚ್ಚಿನ ವಿವರಣೆ ಪಡೆಯಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಕಳುಹಿಸಲಾಗಿದೆ.

ಕರ್ನಾಟಕ ಸರ್ಕಾರದ ಇತ್ತೀಚಿನ ಪ್ರಮುಖ ಮಸೂದೆಗಳು ಮತ್ತು ಅವುಗಳ ಪ್ರಭಾವ
ಈ ಮಸೂದೆಗಳು ಕೇವಲ ಆಡಳಿತಕ್ಕೆ ಸೀಮಿತವಾಗದೆ, ಸಾಮಾಜಿಕ ನ್ಯಾಯ, ಸಾರಿಗೆ ಮತ್ತು ಸಂಸ್ಕೃತಿಯ ರಕ್ಷಣೆಯ ಮೇಲೆ ಹೆಚ್ಚಿನ ಗಮನಹರಿಸಿವೆ.’

ಮಸೂದೆಯ ಹೆಸರುಮುಖ್ಯ ಉದ್ದೇಶನಿರೀಕ್ಷಿತ ಪರಿಣಾಮ
ಪರಿಶಿಷ್ಟ ಜಾತಿ/ಬುಡಕಟ್ಟುಗಳ ಆಯೋಗ ತಿದ್ದುಪಡಿ ಮಸೂದೆಹೊಸ ದತ್ತಾಂಶ ಆಧರಿಸಿ ಒಳ ಮೀಸಲಾತಿ ಪ್ರಮಾಣ ಬದಲಾಯಿಸಲು ಅಧಿಕಾರ ನೀಡುವುದು.ವಿವಿಧ ಪ್ರವರ್ಗಗಳಿಗೆ ನ್ಯಾಯಸಮ್ಮತ ಮೀಸಲಾತಿ ಹಂಚಿಕೆ ಸಾಧ್ಯವಾಗಲಿದೆ.
ಕರ್ನಾಟಕ ಬಾಡಿಗೆ ತಿದ್ದುಪಡಿ ಮಸೂದೆಹಳೆಯ ಬಾಡಿಗೆ ಕಾನೂನುಗಳಲ್ಲಿ ಕಾಲಕ್ಕೆ ತಕ್ಕಂತೆ ಬದಲಾವಣೆ ತರುವುದು.ಬಾಡಿಗೆದಾರರು ಮತ್ತು ಮಾಲೀಕರ ನಡುವಿನ ಹಕ್ಕುಗಳ ಸಮತೋಲನ.
ಬಯಲುಸೀಮೆ & ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಸೂದೆಗಳುಆಯಾ ಭಾಗದ ಪ್ರಾದೇಶಿಕ ಸಮಸ್ಯೆಗಳಿಗೆ ಅನುಗುಣವಾಗಿ ಅಭಿವೃದ್ಧಿ ಮಾಡುವುದು.ಮೂಲಸೌಕರ್ಯ, ನೀರಾವರಿ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳ ಸುಧಾರಣೆ.
ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಮಸೂದೆಸಾರಿಗೆ ವ್ಯವಸ್ಥೆಯಲ್ಲಿ ಸಮನ್ವಯ ತರುವುದು.ಬಸ್ ಮತ್ತು ಮೆಟ್ರೋ ಸೇವೆಗಳ ಏಕೀಕರಣದಿಂದ ಸುಗಮ ಸಂಚಾರ.
ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಮಸೂದೆಕಲಾವಿದರು ಮತ್ತು ಸಿನಿಮಾ ಕ್ಷೇತ್ರದ ಕೆಲಸಗಾರರ ರಕ್ಷಣೆ.ಅರ್ಹ ಕಲಾವಿದರಿಗೆ ಪಿಂಚಣಿ, ವಿಮೆ ಮತ್ತು ಕಲ್ಯಾಣ ನಿಧಿಯ ಭದ್ರತೆ.
ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಮಸೂದೆರಸ್ತೆ ಸುರಕ್ಷತಾ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸುವುದು.ಅಪಘಾತಗಳ ಸಂಖ್ಯೆಯಲ್ಲಿ ಇಳಿಕೆ ಮತ್ತು ಸುರಕ್ಷಿತ ಸಂಚಾರ ವ್ಯವಸ್ಥೆ.
ಕರ್ನಾಟಕ ಭೂ ಕಂದಾಯ 2ನೇ ತಿದ್ದುಪಡಿ ಮಸೂದೆಭೂ ದಾಖಲೆಗಳ ನಿರ್ವಹಣೆಯಲ್ಲಿ ಸುಧಾರಣೆ ತರುವುದು.ರೈತರಿಗೆ ತಮ್ಮ ಭೂ ದಾಖಲೆಗಳ ನಿರ್ವಹಣೆ ಸುಲಭ ಮತ್ತು ಸರಳವಾಗಲಿದೆ.
ಧಾರ್ಮಿಕ ಕ್ಷೇತ್ರ ಅಭಿವೃದ್ಧಿ ಮಸೂದೆಗಳು (ಮಲೆ ಮಹದೇಶ್ವರ & ಚಂದ್ರಗುತ್ತಿ)ಪ್ರಸಿದ್ಧ ಯಾತ್ರಾ ಸ್ಥಳಗಳ ಅಭಿವೃದ್ಧಿ ಪ್ರಾಧಿಕಾರ ರಚನೆ.ಯಾತ್ರಿಕರಿಗೆ ಉತ್ತಮ ಮೂಲಸೌಕರ್ಯ ಮತ್ತು ಕ್ಷೇತ್ರದ ಸಮಗ್ರ ಸಂರಕ್ಷಣೆ.
ಕರ್ನಾಟಕ ವಿಶ್ವವಿದ್ಯಾಲಯ 2ನೇ ತಿದ್ದುಪಡಿ ಮಸೂದೆಉನ್ನತ ಶಿಕ್ಷಣದ ಆಡಳಿತದಲ್ಲಿ ಸುಧಾರಣೆ ತರುವುದು.ಪಠ್ಯಕ್ರಮ ಮತ್ತು ಆಡಳಿತದಲ್ಲಿ ಆಧುನಿಕ ಬದಲಾವಣೆಗಳು.

Source: Prajavani

0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments