Sat. Aug 8th, 2026

ಸಂದರ್ಭ: ಸಾಮಾಜಿಕ ಬಹಿಷ್ಕಾರಕ್ಕೆ ಸಂಪೂರ್ಣ ನಿಷೇಧ ಹೇರಲು ನಿರ್ಧರಿಸಿ ರುವ ರಾಜ್ಯ ಸರ್ಕಾರ, ಇನ್ನು ಮುಂದೆ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕ ವಾಗಿ ಬಹಿಷ್ಕರಿಸಿದರೆ ಮೂರು ವರ್ಷದ ವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸುವ ಕಾನೂನು ಜಾರಿಗೆ ತಂದಿದೆ.

• ಸಾಮಾಜಿಕ ಬಹಿಷ್ಕಾರವನ್ನು ಅಪರಾಧವೆಂದು ಪರಿಗಣಿಸಿ ಶಿಕ್ಷೆ ವಿಧಿಸಲು ಅವಕಾಶ ನೀಡುವ ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ. ನಿಷೇಧ ಮತ್ತು ಪರಿಹಾರ) ಮಸೂದೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅಂಕಿತ ಹಾಕಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದ ಕಾಯ್ದೆ ರೂಪದಲ್ಲಿ ಜಾರಿಗೆ ಬಂದಿದೆ.
• ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡವರು, ಈ ಉದ್ದೇಶದಿಂದ ಸಭೆ, ಪಂಚಾಯಿತಿ, ಜಮಾವಣೆ, ಅಭಿಪ್ರಾಯ ಸಂಗ್ರಹಿಸುವುದು, ಬಹಿಷ್ಕಾರಕ್ಕೆ ಪ್ರತ್ಯಕ್ಷ, ಪರೋಕ್ಷ ಸಹಾಯ ನೀಡುವವರನ್ನೂ ಅಪರಾಧಿಗಳೆಂದು ಪರಿಗಣಿಸಿ ಜೈಲು ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಕೂಡಾ ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
• ಒತ್ತಡ, ಪ್ರಚೋದನೆ ಈ ಕಾಯ್ದೆಯ ಅನ್ವಯ, ಬಹಿಷ್ಕಾರಕ್ಕೆ ಒಳಗಾದವರು ಪೊಲೀಸ್ ಠಾಣೆ, ನ್ಯಾಯಾಧೀಶರಿಗೆ ದೂರು ನೀಡ ಬಹುದು. ಪ್ರಥಮ ದರ್ಜೆ ನ್ಯಾಯಾಧೀಶರಿಗೆ ವಿಚಾರಣೆಯ ಅಧಿಕಾರ ನೀಡಲಾಗಿದೆ.
• ಸಂತ್ರಸ್ತರಿಗೆ ಸಹಾಯ ಒದಗಿಸಲು ಮತ್ತು ದಂಡದ ಮೊತ್ತವನ್ನು ಪರಿಹಾರವಾಗಿ ನೀಡಲು ನಿರ್ದೇಶನ ನೀಡಬಹುದು. ಸಾಮಾಜಿಕ ಬಹಿಷ್ಕಾರದಂತಹ ನಿರ್ಧಾರ ತೆಗೆದುಕೊಳ್ಳಲು ನಡೆಸುವ ಸಭೆಗಳ ಕುರಿತು ಮಾಹಿತಿ ಬಂದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿಷೇಧಿಸಿ ಆದೇಶಿಸಬಹುದು. ಸಾಮಾಜಿಕ ಬಹಿಷ್ಕಾರ ತಡೆ ಅಧಿಕಾರಿ ಗಳಾಗಿ ಗ್ರೂಪ್ ‘ಎ’ ಅಧಿಕಾರಿಗಳನ್ನು ಸರ್ಕಾರ ನಿಯೋಜಿಸಲಿದೆ.

0 0 votes
Article Rating
Subscribe
Notify of
guest

0 Comments
Oldest
Newest Most Voted