Fri. Feb 6th, 2026

Kannada

ಸಹಕಾರಿ ‘ಭಾರತ್ ಟ್ಯಾಕ್ಸಿ’ ಸೇವೆ ಶುರು

ಸಂದರ್ಭ: ಭಾರತ್‌ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಚಾಲನೆ ನೀಡಿದ್ದಾರೆ. ಇದು ದೇಶದಲ್ಲಿ ಸಹಕಾರ ತತ್ತ್ವದಲ್ಲಿ ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಮೊದಲ ವೇದಿಕೆ ಆಗಿದೆ.

  • ಮುಂದಿನ ಮೂರು ವರ್ಷಗಳಲ್ಲಿ ಭಾರತ್ ಟ್ಯಾಕ್ಸಿ ಸೇವೆಯನ್ನು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಮತ್ತು ದ್ವಾರಕಾದಿಂದ ಕಾಮಾಕ್ಯದವರೆಗೆ ವಿಸ್ತರಿಸಲಾಗುವುದು.
  • ಭಾರತ್ ಟ್ಯಾಕ್ಸಿ ಜೊತೆ ಸೇರಿರುವ ಚಾಲಕರೊಂದಿಗೆ ಲಾಭವನ್ನು ಹಂಚಿಕೊಳ್ಳಲಾಗುವುದು ಚಾಲಕರುಗಳಿಸುವ ಪ್ರತಿ 1 ಖಾತೆಗೆ ಜಮಾ ಆಗಲಿದೆ. ಉಳಿದ ₹20 ವೇದಿಕೆಯಲ್ಲಿ ಉಳಿಯಲಿದೆ. ಆ ₹20ಕ್ಕೂ ಚಾಲಕರೇ ಮಾಲೀಕರಾಗಿ ಇರುತ್ತಾರೆ ಎಂದಿದ್ದಾರೆ.
  • ಗ್ರಾಹಕರು ಈ ವೇದಿಕೆಯ ಮೂಲಕ ಕಾರು, ತ್ರಿಚಕ್ರ ಮತ್ತು ದ್ವಿಚಕ್ರ ವಾಹನಗಳ ಸೇವೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.
  • ಈಗ ದೇಶದಲ್ಲಿ ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಮಾರುಕಟ್ಟೆಯಲ್ಲಿ ಊಬರ್, ಓಲಾ ಮತ್ತು ರಾಪಿಡೊ ಪ್ರಾಬಲ್ಯ ಹೊಂದಿವೆ.
  • ಚಾಲಕರೇ ಮಾಲೀಕರಾಗುವ ಅವಕಾಶವನ್ನು ಇಂತಹ ಈ ವೇದಿಕೆಯು ನೀಡಲಿದೆ. ಅವಕಾಶವನ್ನು ಇತರೆ ಯಾವುದೇ ವೇದಿಕೆ ಒದಗಿ-ಸುತ್ತಿಲ್ಲ.
  • ಅಮೂಲ್ ಸೇರಿದಂತೆ ದೇಶದ ಎಂಟು ಪ್ರಮುಖ ಸಹಕಾರ ಸಂಘಗಳ ನೆರವಿನೊಂದಿಗೆ ಕಳೆದ ಡಿಸೆಂಬರ್ 2ರಂದು ದೆಹಲಿ ಎನ್‌ಸಿಆರ್ ಮತ್ತು ಗುಜರಾತ್‌ನಲ್ಲಿ ಪ್ರಾಯೋಗಿಕವಾಗಿ ಈ ಸೇವೆಯನ್ನು ಆರಂಭಿಸಲಾಯಿತು.
  • ಸಹಕಾರ ತತ್ತ್ವದ ಆಧಾರದಲ್ಲಿ ಆ್ಯಪ್ ಮೂಲಕ ಟ್ಯಾಕ್ಸಿ ಸೇವೆ ಒದಗಿಸುವ ಜಗತ್ತಿನ ಅತಿದೊಡ್ಡ ವೇದಿಕೆ ಇದಾಗಿದೆ. ಅಲ್ಲದೆ, ಚಾಲಕರ ಮಾಲೀಕತ್ವದ ವಿಶ್ವದ ಅತಿದೊಡ್ಡ ವೇದಿಕೆಯೂ ಹೌದು ಎಂದು ಸಹಕಾರ ಸಚಿವಾಲಯ ಹೇಳಿದೆ.
  • ಈ ಸೇವೆ ಆರಂಭಗೊಂಡಾಗಿನಿಂದ ಇಲ್ಲಿಯವರೆಗೆ 3 ಲಕ್ಷಕ್ಕೂ ಅಧಿಕ ಚಾಲಕರು ಈ ವೇದಿಕೆ ಸೇರಿದ್ದಾರೆ. 1 ಲಕ್ಷ ಹೆಚ್ಚು ಬಳಕೆದಾರರು ನೋಂದಣಿ ಆಗಿದ್ದಾರೆ.
  • ಮುಂಬರುವ ವರ್ಷಗಳಲ್ಲಿ ಸಂಘಗಳು ಹೊಸ ಸಹಕಾರ ವ್ಯವಹಾರಗಳಿಗೆ ಪ್ರವೇಶಿಸಲಿವೆ. ಈ ಚಾಲಕರನ್ನು ‘ಸಾರಥಿಗಳು’ ಎಂದು ಕರೆಯಲಾಗುತ್ತದೆ. ಈ ಚಾಲಕರಿಗೆ ಇನ್ನೊ-ಟೋಕಿಯೊ ಜನರಲ್‌ ಇನ್ಸೂರೆನ್ಸ್ ಕಂಪನಿಯು ವೈಯಕ್ತಿಕ ಅಪಘಾತ ಮತ್ತು ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.
  • ಭಾರತ್ ಟ್ಯಾಕ್ಸಿ ಸೇವೆಯು ಸಾರ್ವಜನಿಕರಿಗೆ ಕೈಗೆಟಕುವ, ಸುರಕ್ಷಿತ ಸೇವೆಯನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದಿದ್ದಾರೆ.

Source: PV

ರಾಷ್ಟ್ರಪತಿ ಅಂಕಿತಕ್ಕೆ ‘ದ್ವೇಷಭಾಷಣ ತಡೆ’ ಮಸೂದೆ

ಸಂದರ್ಭ: ಹಲವು ಕಾರಣಗಳನ್ನು ನೀಡಿ ಅಂಕಿತ ಹಾಕದೆ ಆರ್. ರಾಷ್ಟ್ರಪತಿಯ ವಿವೇಚನೆಗೆ ರಾಜ್ಯಪಾಲರು ಕಾಯ್ದಿರಿಸಿದ್ದ ದ್ವೇಷ ಭಾಷಣ ತಡೆ ಮಸೂದೆಯನ್ನು ರಾಷ್ಟ್ರಪತಿಯವರ ಅಂಕಿತಕ್ಕಾಗಿ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಗೆ (ನ್ಯಾಯಾಂಗ) ರಾಜ್ಯ ಸರ್ಕಾರವು (ಫೆ. 4) ರವಾನಿಸಿದೆ.

  • ದ್ವೇಷ ಭಾಷಣ ಹಾಗೂ ದ್ವೇಷಾಪರಾಧಗಳನ್ನು ತಡೆಯಲು ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ -2025’ ಅನ್ನು ಸರ್ಕಾರ ರೂಪಿಸಿ, ಅಂಕಿತ ಹಾಕುವಂತೆ ಕೋರಿ ಲೋಕಭವನಕ್ಕೆ ಕಳುಹಿಸಿತ್ತು.
  • ಆದರೆ, ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್ ನೀಡಿದ್ದ ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ಮತ್ತು ಸಾಂವಿಧಾನಿಕವಾಗಿ ಸಂರಕ್ಷಿತ ಪ್ರಜಾಪ್ರಭುತ್ವದ ಚರ್ಚೆಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಉಂಟು ಮಾಡುವ ಸಾಧ್ಯತೆಯ ಆತಂಕ ವ್ಯಕ್ತಪಡಿಸಿ ಈ ಮಸೂದೆಯನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು.

ಖೇಮಚಂದ್ ಮಣಿಪುರ ಮುಖ್ಯಮಂತ್ರಿ: ರಾಷ್ಟ್ರಪತಿ ಆಳ್ವಿಕೆರದ್ದು

  • ಸರ್ಕಾರ ರಚನೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೆ ರಾಜ್ಯದಲ್ಲಿದ್ದ ರಾಷ್ಟ್ರ ಪತಿ ಆಳ್ವಿಕೆಯನ್ನೂ ರದ್ದುಗೊಳಿಸಲಾಗಿದೆ.
  • 2025ರ ಫೆಬ್ರುವರಿ 13ರಂದು ಮಣಿಪುರದಲ್ಲಿ ಜಾರಿಗೊಳಿಸಲಾಗಿದ್ದ ರಾಷ್ಟ್ರಪತಿ ಅಳ್ವಿಕೆಯನ್ನು ಸಂವಿಧಾನದ 356ನೇ ವಿಧಿಯ ಷರತ್ತು (2)ರ ಅನ್ವಯ ನೀಡಲಾದ ಹಕ್ಕುಗಳನ್ನು ಚಲಾಯಿಸಿ 2026ರ ಫೆಬ್ರುವರಿ 4ರಂದು ಹಿಂಪಡೆಯುತ್ತಿರುವುದಾಗಿ ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ಪ್ರಕಟಣೆ ಹೊರಡಿಸಿದ್ದಾರೆ.

ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ದಿಮೆ ಉನ್ನತೀಕರಣ ಯೋಜನೆ(ಪಿಎಂಎಫ್‌ಎಂಇ) ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನ

ಸಂದರ್ಭ: ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ದಿಮೆ ಉನ್ನತೀಕರಣ ಯೋಜನೆ (ಪಿಎಂಎಫ್ಎಂಇ) ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಸಾಲ ವಿತರಣೆಯಲ್ಲಿ ಕರ್ನಾಟಕದ ಜೊತೆಗೆ ತಮಿಳುನಾಡು ಕೂಡ ಮೊದಲ ಸ್ಥಾನ ಹಂಚಿಕೊಂಡಿದೆ.

  • ಕರ್ನಾಟಕದಲ್ಲಿ ಪಿಎಂಎಫ್‌ಎಂಇ ಯೋಜನೆಯ ಅನುಷ್ಠಾನದ ಜವಾಬ್ದಾರಿ ಹೊತ್ತಿರುವ ‘ಕರ್ನಾಟಕ ಆಹಾರ ಸಂಸ್ಕರಣೆ ಮತ್ತು ರಫ್ತು ನಿಗಮ’ವು (ಕೆಪೆಕ್) ಈ ಸಾಧನೆ ಮಾಡಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಹೇಳಿದ್ದಾರೆ.
  • 2021-22ರಲ್ಲಿ ಶುರುವಾದ ಈ ಯೋಜನೆಯ ಆಡಿ ನೆರವು ಬಯಸಿ ಕೆಪೆಕ್‌ಗೆ ಜನವರಿ ಅಂತ್ಯಕ್ಕೆ 8,734 ಅರ್ಜಿಗಳು ಬಂದಿದ್ದವು. ಈ ಪೈಕಿ 7,872 ಅರ್ಜಿದಾರರಿಗೆ ಸಾಲ ವಿತರಿಸಲಾಗಿದೆ. 2025-26ರ ಆರ್ಥಿಕ ವರ್ಷದಲ್ಲೇ 8.162 ಅರ್ಜಿಗಳನ್ನು ಸ್ವೀಕರಿಸಿ 2,346 ಅರ್ಜಿಗಳಿಗೆ ಸಾಲ ಮಂಜೂರು ಮಾಡಲಾಗಿದೆ. 2,486 ಅರ್ಜಿಗಳು ಬ್ಯಾಂಕುಗಳಲ್ಲಿ ಪರಿಶೀಲನಾ ಹಂತದಲ್ಲಿವೆ. ಯೋಜನೆ ಪ್ರಾರಂಭವಾದ ಐದು ವರ್ಷಗಳಲ್ಲಿ ಇದು ಗರಿಷ್ಠ ಸಾಧನೆ ಎಂದು ಪ್ರಕಟಣೆ ತಿಳಿಸಿದೆ.

‘ಪಿನಾಕಿನಿ: ನ್ಯಾಯಮಂಡಳಿ ಸ್ಥಾಪಿಸಿ’

ಸಂದರ್ಭ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ. ಇದ ರಿಂದಾಗಿ, ಮಾತುಕತೆ ಮೂಲಕವೇ ವಿವಾದ ಬಗೆಹರಿಸಲು ಮುಂದಾಗಿದ್ದ ಕರ್ನಾಟಕಕ್ಕೆ ಹಿನ್ನಡೆಯಾಗಿದೆ.

  • ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದ್ದ ನ್ಯಾಯ ಮೂರ್ತಿಗಳಾದ ವಿಕ್ರಮ್ನಾಥ್ ಹಾಗೂ ಎನ್.ವಿ.ಅಂಜಾರಿಯಾ ಅವರಿದ್ದ ಪೀಠವು, ‘1956ರ ಅಂತರರಾಜ್ಯ ನದಿ ನೀರು ವಿವಾದ ಕಾಯ್ದೆಯಡಿ ಕೇಂದ್ರ ಸರ್ಕಾರವು ಶಾಸನಬದ್ದ ಕಾರ್ಯಗಳನ್ನು ನಡೆಸಲು ಯಾವುದೇ ಕಾನೂನು ಅಡಚಣೆ ಇಲ್ಲ’ ಎಂದು ಸ್ಪಷ್ಟಪಡಿಸಿದೆ.
  • ವಿವಾದ ಪರಿಹರಿಸಲು ನ್ಯಾಯ ಮಂಡಳಿ ರಚಿಸುವುದಕ್ಕೆ ಕೇಂದ್ರಕ್ಕೆ ಯಾವುದೇ ಅಡಚಣೆ ಇಲ್ಲ.
  • ತಮಿಳುನಾಡು ತನ್ನ ದೂರನ್ನು ನ್ಯಾಯ ಮಂಡಳಿಯ ಮುಂದೆ ಸಲ್ಲಿಸಬೇಕು ಎಂದು ಪೀಠ ನಿರ್ದೇಶಿಸಿತು. 2018ರಲ್ಲಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಪೀಠ ವಿಲೇವಾರಿ ಮಾಡಿತು.
  • ದಕ್ಷಿಣ ಪಿನಾಕಿನಿ ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ. ಬೆಂಗಳೂರಿನ ಎಲೆ ಮಲ್ಲಪ್ಪ ಚೆಟ್ಟ ಕೆರೆಯಿಂದ ಹೊಸ-ಕೋಟೆಯವರೆಗೆ ನೀರು ಹರಿಸುವ ಕಾಮಗಾರಿ, ಬ್ಯಾಲಹಳ್ಳಿ ಗ್ರಾಮದ ಹತ್ತಿರ ಪೆನ್ನಾರ್ ನದಿಯಿಂದ ನೀರು ಹರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ.
  • ಈ ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್‌ಗೆ 2018ರ ಮೇ 18ರಂದು ಅರ್ಜಿ ಸಲ್ಲಿಸಿತ್ತು. ಜಲವಿವಾದ ನ್ಯಾಯಮಂಡಳಿ ಒತ್ತಾಯಿಸಿ ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರಕ್ಕೆ 2019ರ ನವೆಂಬರ್ ತಿಂಗಳಲ್ಲಿ ಮನವಿ ಮಾಡಿತ್ತು.
  • ಜಲಶಕ್ತಿ ಸಚಿವಾಲಯವು 2020ರಲ್ಲಿ ಸಂಧಾನ ಸಭೆ ನಡೆಸಿತ್ತು. ಆದರೆ, ರಾಜ್ಯ ಸರ್ಕಾರಗಳು ಒಮ್ಮತಕ್ಕೆ ಬಂದಿರಲಿಲ್ಲ. ಹೊಸದಾಗಿ ಸಂಧಾನ ನಡೆಸುವಂತೆ ಕರ್ನಾಟಕ ಸರ್ಕಾರವು ಕೇಂದ್ರವನ್ನು 2024ರ ಜೂನ್‌ನಲ್ಲಿ ಒತ್ತಾಯಿಸಿತ್ತು.
  • ಈ ನಡುವೆ, ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ, ಕೇಂದ್ರ ಜಲ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ಜಲಶಕ್ತಿ ಸಚಿವಾಲಯವು ಹೊಸ ಸಂಧಾನ ಸಮಿತಿ ರಚಿಸಿತ್ತು. ಈ ಸಮಿತಿಯು ಉಭಯ ರಾಜ್ಯಗಳ ನಡುವೆ ಒಂಬತ್ತು ಸಭೆಗಳನ್ನು ನಡೆಸಿತ್ತು.
  • జల ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಮಾತುಕತೆಯ ಮೂಲಕ ಈ ವಿವಾದವನ್ನು ಸೌಹಾರ್ದ-ಯುತವಾಗಿ ಬಗೆಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರವು ಜಲಶಕ್ತಿ ಸಚಿವಾಲಯಕ್ಕೆ ಪತ್ರ ಬರೆದಿತ್ತು.
  • ಕರ್ನಾಟಕದ ಜಲಾನಯನ ಪ್ರದೇಶದಲ್ಲಿ ಒಟ್ಟು 11.77 ಟಿಎಂಸಿ ನೀರಿನಲ್ಲಿ 9.77 ಟಿಎಂಸಿ ನೀರನ್ನು ಬಳಸಲು ಯೋಜಿಸಲಾಗಿದೆ. ಇದರಲ್ಲಿ 2 ಟಿಎಂಸಿ ಮತ್ತು ವಾಡಿಕೆಗಿಂತ ಹೆಚ್ಚು ಮಳೆ ಬಂದಾಗ ದೊರೆಯುವ ಹೆಚ್ಚುವರಿ ನೀರು ತಮಿಳುನಾಡಿಗೆ ಉಳಿಯುತ್ತದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿತ್ತು.

ದಲೈಲಾಮಾಗೆ ಗ್ರಾಮಿ ಪ್ರಶಸ್ತಿ

ಸಂದರ್ಭ: ಟಿಬೆಟ್‌ನ ಬೌದ್ಧರ ಅಧ್ಯಾತ್ಮಿಕ ಗುರು ದಲೈ ಲಾಮಾ ಅವರು ‘ಗ್ರಾಮಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.

  • ಅಡಿಯೊ ಪುಸ್ತಕ, ನಿರೂಪಣೆ ಹಾಗೂ ಕಥೆ ಹೇಳುವಿಕೆ, ಸಂಗೀತ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಎಂದು . ‘ಗ್ರಾಮಿ’ಯನ್ನು ಗುರುತಿಸಲಾಗಿದೆ.
  • ಲಾಸ್ ಏಂಜಲೀಸ್‌ನಲ್ಲಿ ನಡೆದ ಗ್ರಾಮಿ ಪ್ರಶಸ್ತಿ ಸಮಾರಂಭದಲ್ಲಿ ‘ಮೆಡಿಟೇಷನ್: ದಿ ರಿಪ್ಲೆಕ್ಷನ್ ಅಫ್ ಹಿಸ್ ಹೋಲಿನೆಸ್ ದಿ ದಲೈ ಲಾಮಾ’ ಎಂಬ ಅಡಿಯೂ ಬುಕ್‌ಗಾಗಿ ಪ್ರಶಸ್ತಿ ಘೋಷಣೆ ಮಾಡಲಾಯಿತು.
  • ಪ್ರಶಸ್ತಿಗೆ ಅರ್ಹರಾಗಿರುವುದಕ್ಕೆ ಕೃತಜ್ಞತೆ ಸಲ್ಲಿಸಿರುವ ದಲೈ ಲಾಮಾ, ‘ಇದು ವೈಯಕ್ತಿಕ ಸಾಧನೆಯಲ್ಲ, ಜಾಗತಿಕ ಹೊಣೆಗಾರಿಕೆ ಹಾಗೂ ಸಹಾನುಭೂತಿಗೆ ಸಂದ ಮನ್ನಣೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
  • ‘ಈ ಪ್ರಶಸ್ತಿಯನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ. ಶಾಂತಿ, ಸಹಾನುಭೂತಿ, ಪರಿಸರ ಬಗ್ಗೆ ಕಾಳಜಿ, ಮಾನವೀಯತೆಯ ಏಕತೆ ಮತ್ತು ಎಂಟು ಶತಕೋಟಿ ಜನರ ಯೋಗಕ್ಷೇಮ ಅತ್ಯಗತ್ಯ ಎಂದು ನಾನು ನಂಬಿಕೊಂಡಿದ್ದೇನೆ. ಈ ಸಂದೇಶವನ್ನು ಇನ್ನಷ್ಟು ಪಸರಿಸಲು ಗ್ರಾಮಿ ಪ್ರಶಸ್ತಿ ಪ್ರೇರಣೆಯಾಗಲಿದೆ’ ಎಂದು ಹೇಳಿದ್ದಾರೆ.
  • 1959ರಲ್ಲಿ ಚೀನಾ ಸೇನೆಯ ಅತಿಕ್ರಮಣದಿಂದ ಜೀವಭಯಕ್ಕೆ ಒಳಗಾಗಿ ಭಾರತಕ್ಕೆ ಬಂದು ಆಶ್ರಯ ಪಡೆದಿದ್ದಾರೆ.
  • ಚೀನಾ ಆಕ್ಷೇಪ (ಬೀಜಿಂಗ್ ವರದಿ): ದಲೈ ಲಾಮಾ ಅವರಿಗೆ ಗ್ರಾಮಿ ಪ್ರಶಸ್ತಿ ನೀಡಿದ್ದನ್ನು ಚೀನಾ ಖಂಡಿಸಿದೆ.

25 ವರ್ಷದಲ್ಲಿ ರೈತರಿಗೆ ₹111 ಲಕ್ಷ ಕೋಟಿ ನಷ್ಟ: ಕೃಷಿ ಸುಧಾರಣಾ ಸಮಿತಿ ಅಧ್ಯಕ್ಷ ದೇವಿಂದ‌ರ್ ಶರ್ಮಾ

ಸಂದರ್ಭ: ಅಧ್ಯಯನದ ಪ್ರಕಾರ 25 ವರ್ಷದಲ್ಲಿ (2000-2025ರ ಅವಧಿ) ದೇಶದ ರೈತರಿಗೆ ₹111 ಲಕ್ಷ ಕೋಟಿ ನಷ್ಟವಾಗಿದೆ. ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಕೃಷಿ ಬಿಕ್ಕಟ್ಟಿನಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿ ದ್ದಾರೆ ಎಂದು ಕೃಷಿ ಸುಧಾರಣಾ ಸಮಿತಿ ಅಧ್ಯಕ್ಷ ದೇವಿಂದರ್‌ ಶರ್ಮಾ ಹೇಳಿದರು.

  • ರೈತರ ಆತ್ಮಹತ್ಯೆಗಳ ತಡೆ ಸಮಿತಿ ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ರೈತರ ಆತ್ಮಹತ್ಯೆ ತಡೆಯುವ ಕುರಿತು ಚರ್ಚೆ ನಡೆಸಿ ಕೃಷಿ ತಂತ್ರಜ್ಞರ, ರೈತ ನಾಯಕರ ಸಲಹೆ ಪಡೆಯಲಾಯಿತು.
  • 2000-2016ರ ಅವಧಿಯಲ್ಲಿ ₹45 ಲಕ್ಷ ಕೋಟಿ ರೈತರಿಗೆ ನಷ್ಟವಾಗಿತ್ತು. ಇದಕ್ಕೆ ಹಲವು ಕಾರಣಗಳಿವೆ.

ಆರ್‌ಟಿಇ: ಖಾಸಗಿಗೂ ಅನ್ವಯಕ್ಕೆ ತಿದ್ದುಪಡಿ ಶಿಕ್ಷಣ ಹಕ್ಕುಕಾಯ್ದೆ

ಸಂದರ್ಭ: (ಆರ್ಟಿಇ) ಅಡಿ ಶೇ 25ರಷ್ಟು ಸೀಟು ಗಳನ್ನು ಉಚಿತವಾಗಿ ನೀಡುವುದನ್ನು ಸರ್ಕಾರಿ, ಅನುದಾನಿತ ಶಾಲೆಗಳಿಗೆ ಸೀಮಿತಗೊಳಿಸಿ 2019ರಲ್ಲಿ ಮಾಡಿರುವ ತಿದ್ದುಪಡಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆಯುವ ಸಾಧ್ಯತೆಯಿದೆ.

  • ಈ ಕುರಿತು ಜತೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ‘ಎಲ್ಲ ರಾಜ್ಯಗಳು ಖಾಸಗಿ ಶಾಲೆಗಳಲ್ಲಿ ಶೇಕಡ 25ರಷ್ಟು ಸೀಟುಗಳನ್ನು ಅರ್‌ಟಿಇ ಕೋಟಾ ಮೂಲಕ ತುಂಬುವುದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕೆಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಈ ವಿಷಯವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು’ ಎಂದು ಹೇಳಿದರು.
  • ಆದರೆ, ‘ಈ ತಿದ್ದುಪಡಿಗಳನ್ನು ಹಿಂಪಡೆಯುವುದರಿಂದ ಆರ್ಥಿಕವಾಗಿ ಉಂಟಾಗುವ ಪರಿಣಾಮಗಳು, ಹಣಕಾಸು ಇಲಾಖೆ ಅಭಿಪ್ರಾಯ ಮತ್ತು ತೀರ್ಮಾನವೂ ಮಹತ್ವದ್ದಾಗಿರುತ್ತದೆ. ಖಾಸಗಿ ಶಾಲೆಗಳಲ್ಲಿ ಶೇ 25 ಸೀಟು ಗಳನ್ನು ಆರ್‌ಟಿಇ ಕೋಟಾದಡಿ ಭರ್ತಿ ಮಾಡಿದರೆ, ಶುಲ್ಕ ಮರು ಪಾವತಿಗಾಗಿ ಸುಮಾರು ₹500 ಕೋಟಿ ಅಗತ್ಯವಿದೆ’ ಎಂದು ಸಚಿವರು ವಿವರಿಸಿದರು.
  • ಆರ್‌ಟಿಇ ಕಾಯ್ದೆಯ ನಿಯಮ 4ಕ್ಕೆ ತರಲಾದ ಹಿಂಪಡೆಯುವುದಕ್ಕೆ ತಿದ್ದುಪಡಿಗಳನ್ನು ತಮಗೆ ವೈಯಕ್ತಿಕವಾಗಿಯಾವುದೇ ಆಕ್ಷೇಪ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.
  • ಆರ್‌ಟಿಇ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ ವಾಗಿದೆ. ಆದರೆ, 2019ರಲ್ಲಿ ನಿಯಮ 4ಕ್ಕೆ ತಿದ್ದುಪಡಿ ಮಾಡಿ, ಸಮೀಪದಲ್ಲೇ (1 ಕಿಲೋ ಮೀಟರ್ ಒಳಗೆ) ಸರ್ಕಾರಿ ಅಥವಾ ಅನುದಾನಿತ ಶಾಲೆಗಳಿದ್ದರೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ನೀಡುವುದಕ್ಕೆ ವಿನಾಯಿತಿ ನೀಡಿತ್ತು. ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರವು ಆಗ ಸಮರ್ಥಿಸಿಕೊಂಡಿತ್ತು.
  • ಈ ತಿದ್ದುಪಡಿಯೊಂದಿಗೆ, ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರವೇಶಕ್ಕೆ ಆದ್ಯತೆ ನೀಡಿತು. ಇದರಿಂದ ಆರ್‌ಟಾ ಆಡಿ ಪ್ರವೇಶಕ್ಕೆ ಬೇಡಿಕೆ ಕುಸಿದು, ಶೇ 90 ಸೀಟುಗಳು ಖಾಲಿ ಉಳಿದಿವೆ. 2016-17ನೇ ಸಾಲಿನಲ್ಲಿ ವಿವಿಧ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಆರ್‌ಟಿಇ ಅಡಿ ಪ್ರವೇಶ ಗಳು ಕಡಿಮೆಯಾಗಿದ್ದವು. ಪೋಷಕರು ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದು ಪ್ರಮುಖ ಕಾರಣಗಳಲ್ಲಿ ಒಂದಾಗಿತ್ತು.
  • 86 ಸಾವಿರಕ್ಕೂ ಹೆಚ್ಚು ಅರ್ಜಿಗಳಲ್ಲಿ 34 ಸಾವಿರ ಅರ್ಜಿಗಳು ಅನರ್ಹ ಜಾತಿ/ಆದಾಯ ಪ್ರಮಾಣ ಪತ್ರಗಳ ಕಾರಣ ದಿಂದ ತಿರಸ್ಕೃತಗೊಂಡವು. ಹಾಗೆಯೇ. 24 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಅನರ್ಹ ಆಧಾರ್/ಮತದಾರರ ಗುರುತಿನ ಚೀಟಿಗಳ ಕಾರಣದಿಂದ ನಿರಾಕರಿಸಲಾಗಿತ್ತು.

ಸುಪ್ರೀಂ ಕೋರ್ಟ್ ಏನು ಹೇಳಿದೆ?

  • 2009ರ ಆರ್‌ಟಿಇ ಕಾಯ್ದೆಯಡಿ ಖಾಸಗಿ ಅನುದಾನರಹಿತ ಅಲ್ಪಸಂಖ್ಯಾತವಲ್ಲದ ಶಾಲೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದ ಮಕ್ಕಳಿಗೆ ಶೇ25ರಷ್ಟು ಸೀಟುಗಳು ನೀಡುವುದನ್ನು ರಾಜ್ಯಗಳು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಜನವರಿ 14ರಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತು.
  • ಇದನ್ನು ‘ರಾಷ್ಟ್ರೀಯ ಮಿಷನ್’ ಎಂದು ಹೇಳಿರುವ ನ್ಯಾಯಾಲಯ, ಈ ಕೋಟಾದಡಿ ಸೀಟುಗಳನ್ನು ಭರ್ತಿ ಮಾಡುವುದನ್ನು ಖಚಿತಪಡಿಸಲು ರಾಜ್ಯಗಳು ನಿಯಮಗಳನ್ನು ರೂಪಿಸಬೇಕು ಎಂದು ಆದೇಶಿಸಿತು.