Kannada
ಪ್ರಚಲಿತ ವಿದ್ಯಮಾನಗಳು: 4ನೇ ಡಿಸೆಂಬರ್ 2025
- ಇ–ಖಾತಾದಲ್ಲಿ ಯುಪಿಒಆರ್ ಮಾಹಿತಿ: ಇಂಟಿಗ್ರೇಟೆಡ್ ವ್ಯವಸ್ಥೆ: ಮುನೀಶ್ ಮೌದ್ಗಿಲ್
ಸಂದರ್ಭ: ಜಿಬಿಎ ವ್ಯಾಪ್ತಿಯಲ್ಲಿನ ಆಸ್ತಿಗಳ ಇ–ಖಾತಾದಲ್ಲಿ ನಗರ ಆಸ್ತಿ ಮಾಲೀಕತ್ವದ ದಾಖಲೆಗಳನ್ನು (ಯುಪಿ ಒಆರ್) ಅಳವಡಿಸುವ ‘ಇಂಟಿಗ್ರೇಟೆಡ್ ಇ–ಖಾತಾ ವ್ಯವಸ್ಥೆ’ಯನ್ನು ಜಾರಿ ಮಾಡಲಾಗಿದೆ.
- ನಗರ ಸಮೀಕ್ಷೆಯಲ್ಲಿ ಯುಪಿಒಆರ್ ನಲ್ಲಿ ಆಸ್ತಿ ನಕ್ಷೆಗಳು, ಡ್ರೋನ್ ಮೂಲಕ ಪಡೆದುಕೊಂಡ ಓವರ್-ವ್ಯೂ ಚಿತ್ರಗಳನ್ನು ಜಿಬಿಎ ನೀಡುತ್ತಿರುವ ಇ-ಖಾತಾ ವ್ಯವಸ್ಥೆ ಯೊಂದಿಗೆ ಸಂಯೋಜಿಸಲಾಗಿದೆ.
- ನಗರದಲ್ಲಿ ಸುಮಾರು ಎರಡು ವರ್ಷ ಗಳಿಂದ ಯುಪಿಒಆರ್ ಯೋಜನೆಯಡಿ ನಿರ್ವಹಿಸಲಾಗಿರುವ ಕಾರ್ಯವನ್ನು ಇ-ಖಾತಾ ವ್ಯವಸ್ಥೆಗೆ ಸಂಯೋಜಿಸಲು ಕಂದಾಯ ಇಲಾಖೆ ಅಧಿಕಾರಿಗಳು ಮಾಡಿರುವ ಕಾರ್ಯ ಶ್ಲಾಘನೀಯ.
- ಇ-ಖಾತಾದಲ್ಲಿರುವ ನಿಖರ ಜಿಪಿಎಸ್ ಮಾಹಿತಿ, ಯುಪಿಒಆರ್ ನಕ್ಷೆ ಮತ್ತು ಚಿತ್ರಗಳನ್ನು ಜೋಡಿಸುವುದು ಅತ್ಯಂತ ಪ್ರಮುಖವಾಗಿದೆ. ಈಗಾಗಲೇ ಸುಮಾರು ಒಂದು ಲಕ್ಷ ಸಂಯೋಜಿತ ಇ-ಖಾತಾಗಳನ್ನು ನೀಡಲಾಗಿದ್ದು, ಪ್ರತಿದಿನವೂ ಈ ಸಂಖ್ಯೆ ಮತ್ತಷ್ಟು ಹೆಚ್ಚಿಸಲು ಕ್ರಮವಹಿಸಲಾಗುವುದು.
- ಜಿಬಿಎ ವ್ಯಾಪ್ತಿಯಲ್ಲಿ ಸುಮಾರು 9 ಲಕ್ಷ ಅಂತಿಮ ಇ-ಖಾತಾ ನೀಡಲಾಗಿದ್ದು, ಪ್ರತಿದಿನ ಸರಾಸರಿ 2,500 ಇ-ಖಾತಾಗಳನ್ನು ನೀಡಲಾಗುತ್ತಿದೆ. ಕಾಯುವ ಅವಧಿ ಸರಾಸರಿ ಎರಡು ದಿನ.
ಲಭ್ಯವಿರುವ ಮಾಹಿತಿ
l ಮಾಲೀಕರ ವಿವರ l ಆಸ್ತಿಯ ಎಲ್ಲ ವಿವರ
l ಆಸ್ತಿಯ ಚಿತ್ರ l ಮಾಲೀಕರ ಚಿತ್ರ
l ಆಸ್ತಿಯ ಜಿಪಿಎಸ್ ಅಂಕಿಗಳು l ಆಸ್ತಿಯ ಡಿಜಿಟಲ್ ಮ್ಯಾಪ್, ಸ್ಥಳದ ಚಿತ್ರ
l ಆಸ್ತಿಯ ತೆರಿಗೆ, ಬಳಕೆ ವಿವರ l ಬೆಸ್ಕಾಂ ಮೀಟರ್ ಸಂಖ್ಯೆ
l ಆಸ್ತಿ ಮಾಲೀಕತ್ವ ಪಡೆದಿರುವ ದಾಖಲೆ ಸಂಖ್ಯೆ
- ವನ್ಯಜೀವಿ ಮಾನವ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್ ಆರಂಭ
ಸಂದರ್ಭ: ಸಿಬ್ಬಂದಿ ಕಾಡಿನಲ್ಲಿ ಎಷ್ಟು ಹೊತ್ತು ಗಸ್ತು ತಿರುಗುತ್ತಾರೆ ಎಂದು ಗಮನಿಸಲು ಇ–ಗಸ್ತು ತಂತ್ರಾಂಶ ರೂಪಿಸಿದ್ದು, ಎಂ.ಸ್ಟ್ರೈಪ್ ಜೊತೆಗೆ ಜಾರಿಗೆ ಸೂಚಿಸಲಾಗಿದೆ.
- ‘ಮಾನವ ಹಾಗೂ ವನ್ಯಜೀವಿ ಸಂಘರ್ಷ ತಡೆಯಲು ನಾಗರಹೊಳೆ, ಮಲೆಮಹದೇಶ್ವರ ಬೆಟ್ಟ, ಕಾಳಿ, ಮಡಿಕೇರಿ ವನ್ಯಧಾಮಗಳಲ್ಲಿ ಕಮಾಂಡ್ ಕೇಂದ್ರ ತೆರೆಯಲಾಗಿದೆ’.‘ಅರಣ್ಯದೊಳಗೆ ಗಸ್ತು ಹೆಚ್ಚಿಸಲು ಇದು ಸಹಕಾರಿ.
- ಚಿಕ್ಕಮಗಳೂರು, ಬನ್ನೇರು ಘಟ್ಟ ರಾಷ್ಟ್ರೀಯ ಉದ್ಯಾನ, ಮೈಸೂರು ವಿಭಾಗ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ, ಹಾಸನ ವಲಯದಲ್ಲೂ ಸೆಂಟರ್ ತೆರೆಯಲಾಗುವುದು.
- ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಕೇಂದ್ರವನ್ನು ಅಧಿವೇಶನದ ನಂತರ ಉದ್ಘಾಟಿಸಲಾಗುವುದು.
- ‘ಈ ಕೇಂದ್ರದಲ್ಲಿ ಕೃತಕ ಬುದ್ಧಿಮತ್ತೆ ಕ್ಯಾಮೆರಾ, ಥರ್ಮಲ್ ಡ್ರೋನ್ ಕ್ಯಾಮೆರಾ, ಆಧುನಿಕ ತಂತ್ರಜ್ಞಾನ ಆಧಾರಿತ ಪರಿಕರಗಳು ಇರಲಿದ್ದು, ವನ್ಯಜೀವಿಗಳ ಚಲನವಲನದ ಬಗ್ಗೆ ನಿಗಾ ಇರಿಸಲಾಗುವುದು.
- ಯಾವ ಗ್ರಾಮಗಳ ವನ್ಯಜೀವಿ ಬಳಿ ಬಂದಿವೆ ಎಂಬ ಅರಿತು ಕ್ರಮ ವಹಿಸಿ ಜೀವಹಾನಿ ತಡೆಯಬಹುದು.
- ‘ರಾಜ ಭವನ’ ಅಲ್ಲ ‘ಲೋಕ ಭವನ’
ಸಂದರ್ಭ: ಕೇಂದ್ರ ಗೃಹ ಸಚಿವಾಲಯದ ತೀರ್ಮಾನದಂತೆ ದೇಶದಾದ್ಯಂತ ಇರುವ ‘ರಾಜ ಭವನ’ಗಳ ಹೆಸರನ್ನು ‘ಲೋಕ ಭವನ’ ಎಂದು ಮರುನಾಮಕರಣ ಮಾಡಲಾಗಿದ್ದು, ‘ರಾಜ ಭವನ, ಕರ್ನಾಟಕ’ ಎನ್ನುವುದನ್ನು ‘ಲೋಕ ಭವನ, ಕರ್ನಾಟಕ’ ಎಂದು ಹೆಸರಿಸಲಾಗಿದೆ.
- ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ‘ಹೆಸರು ಬದಲಾವಣೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮೋದನೆ ನೀಡಿದ್ದಾರೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರಲಿದೆ.
- ‘ಮುಂದಿನ ದಿನಗಳಲ್ಲಿ ಸರ್ಕಾರದ ಎಲ್ಲ ಇಲಾಖೆಗಳು, ಸರ್ಕಾರಿ ಆದೇಶಗಳು, ಅಧಿಕೃತ ಪತ್ರ ವ್ಯವಹಾರಗಳು, ವೆಬ್ಸೈಟ್ ಹಾಗೂ ಫಲಕಗಳಲ್ಲಿ ‘ರಾಜ ಭವನ ಕರ್ನಾಟಕ’ ಬದಲು ‘ಲೋಕ ಭವನ ಕರ್ನಾಟಕ’ ಎಂದು ಬಳಸಬೇಕು.
ಬಡತನದ ಸುಳಿಯಲ್ಲಿ ಭಾರತದ ಮಕ್ಕಳು

- ಕರ್ನಾಟಕದ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ
ಸಂದರ್ಭ: ಕರ್ನಾಟಕದಲ್ಲಿನ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ ನೀಡಲಾಗಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ರಾಜ್ಯಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
- ನವೆಂಬರ್ 25ರವರೆಗೆ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮವು (ಎನ್ಸಿಡಿಸಿ) ದೇಶದಲ್ಲಿನ ಸಹಕಾರ ಸಂಸ್ಥೆಗಳ ಅಭಿವೃದ್ಧಿಗೆ ₹4.67 ಲಕ್ಷ ಕೋಟಿ ಮಂಜೂರು ಮಾಡಿದೆ. ಈ ಪೈಕಿ ಕರ್ನಾಟಕದಲ್ಲಿನ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ ನೀಡಲಾಗಿದೆ ಎಂದು ಬುಧವಾರ ತಿಳಿಸಿದ್ದಾರೆ.
- ರಾಷ್ಟ್ರೀಯ ಸಹಕಾರ ದತ್ತಾಂಶದ ಪ್ರಕಾರ, ಕರ್ನಾಟಕದಲ್ಲಿ 46,798 ಸಹಕಾರ ಸಂಘಗಳು ಇದ್ದು, ಅವು ಒಟ್ಟು 2.38 ಕೋಟಿ ಸದಸ್ಯರನ್ನು ಹೊಂದಿವೆ.
- 2021ರಲ್ಲಿ ಕೇಂದ್ರ ಸಹಕಾರ ಸಚಿವಾಲಯ ಆರಂಭವಾಯಿತು. ಅಂದಿನಿಂದ ‘ಸಹಕಾರದಿಂದ ಸಮೃದ್ಧಿ’ ಗುರಿ ಸಾಧಿಸಲು ಮತ್ತು ಕರ್ನಾಟಕ ಸೇರಿದಂತೆ ದೇಶದ ಎಲ್ಲೆಡೆ ಹೈನುಗಾರಿಕೆ, ಸಕ್ಕರೆ ಮತ್ತು ಕೃಷಿ ಸಹಕಾರ ಸಂಘಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
- ಪಾನ್ ಮಸಾಲಾ ಮೇಲೆ ಬೆಲೆ ನಮೂದು ಕಡ್ಡಾಯ
ಸಂದರ್ಭ: ಪಾನ್ ಮಸಾಲಾ ಪೊಟ್ಟಣಗಳ ಮೇಲೆ ಚಿಲ್ಲರೆ ಮಾರಾಟ ದರವನ್ನು (ಆರ್ಎಸ್ಪಿ) ನಮೂದು ಮಾಡುವುದು ಕಡ್ಡಾಯ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯವು ಹೇಳಿದೆ.
- ಪೊಟ್ಟಣಗಳ ಗಾತ್ರ ಯಾವುದೇ ಇರಲಿ, ಅದರಲ್ಲಿ ಇರುವ ಉತ್ಪನ್ನದ ತೂಕ ಎಷ್ಟೇ ಇರಲಿ, ಆರ್ಎಸ್ಪಿ ಹಾಗೂ ‘ಕಾನೂನು ಮಾಪನಶಾಸ್ತ್ರ (ಪೊಟ್ಟಣದಲ್ಲಿನ ಸರಕುಗಳು) ನಿಯಮ–2011’ರ ಅಡಿಯಲ್ಲಿ ಹೇಳಿರುವ ಸಂಗತಿಗಳನ್ನು ನಮೂದು ಮಾಡುವುದು ಕಡ್ಡಾಯ ಎಂದು ಇಲಾಖೆಯು ಸ್ಪಷ್ಟಪಡಿಸಿದೆ.
- ಈ ಆದೇಶ ಫೆಬ್ರುವರಿ 1ರಿಂದ ಅನ್ವಯ ವಾಗಲಿದೆ. 10 ಗ್ರಾಂ ಹಾಗೂ ಅದ ಕ್ಕಿಂತ ಕಡಿಮೆ ತೂಕದ ಪೊಟ್ಟಣ ಗಳಲ್ಲಿ ಕೆಲವು ವಿವರಗಳನ್ನು ನೀಡುವ ಅಗತ್ಯ ಇಲ್ಲ ಎಂದು ಈ ಹಿಂದೆ ವಿನಾಯಿತಿ ನೀಡಲಾಗಿತ್ತು. ಆದರೆ ಈಗಿನ ಆದೇ ಶವು ವಿನಾಯಿತಿಗಳನ್ನು ಇಲ್ಲವಾಗಿಸಲಿದೆ.
- ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕ ಮಸೂದೆಗೆ ಅನುಮೋದನೆ
ಸಂದರ್ಭ: ತಂಬಾಕು ಮತ್ತು ಅದಕ್ಕೆ ಸಂಬಂಧಿಸಿದ ಉತ್ಪನ್ನಗಳ ಮೇಲೆ ಹೆಚ್ಚಿನ ಅಬಕಾರಿ ಸುಂಕ ವಿಧಿಸುವ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದೆ.
- ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ– 2025 ಅನ್ನು ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
- ಪ್ರಸ್ತುತ ಜಾರಿಯಲ್ಲಿರುವ ತೆರಿಗೆ ಪರಿಹಾರದ ಸ್ವರೂಪವು 2026ರ ಮಾರ್ಚ್ ವೇಳೆಗೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಈ ಮಸೂದೆ ಜಾರಿಗೆ ಬಂದ ನಂತರ ಸಿಗರೇಟ್, ಜಗಿಯುವ ತಂಬಾಕು, ಸಿಗಾರ್, ಹುಕ್ಕಾ, ಜರ್ದಾ ಮತ್ತು ಪರಿಮಳಯುಕ್ತ ತಂಬಾಕಿನಂತಹ ಎಲ್ಲ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಗರಿಷ್ಠ ಮಟ್ಟದಲ್ಲೇ ಮುಂದುವರಿಸಲು ಅವಕಾಶ ಸಿಗುತ್ತದೆ.
- ಪ್ರಸ್ತುತ, ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲೆ ಶೇ 28ರಷ್ಟು ಜಿಎಸ್ಟಿ ಜೊತೆಗೆ ವಿವಿಧ ತೆರಿಗೆ ವಿಧಿಸಲಾಗುತ್ತಿದೆ.
- ಈ ಮಸೂದೆಯು, ತಯಾರಿಸದ ತಂಬಾಕಿನ ಮೇಲೆ ಶೇ 60–70ರಷ್ಟು ಅಬಕಾರಿ ಸುಂಕ ವಿಧಿಸಲು ಪ್ರಸ್ತಾಪಿಸುತ್ತದೆ. ಸಿಗಾರ್ ಮತ್ತು ಚುಟ್ಟ ಮೇಲಿನ ಅಬಕಾರಿ ಸುಂಕವು ಶೇ 25ರಷ್ಟು ಅಥವಾ ಒಂದು ಸಾವಿರ ಸಿಗಾರ್ ಮೇಲೆ ₹5 ಸಾವಿರ ಯಾವುದು ಹೆಚ್ಚೋ ಅದನ್ನು ಪ್ರಸ್ತಾಪಿಸಲಾಗಿದೆ.
- ಉದ್ದವಿರುವ ಹಾಗೂ ಫಿಲ್ಟರ್ ಆಧರಿಸಿ ಒಂದು ಸಾವಿರ ಸಿಗರೇಟ್ ಮೇಲೆ ₹2,700ರಿಂದ ₹11 ಸಾವಿರವರೆಗೆ ತೆರಿಗೆ ವಿಧಿಸಲು ಪ್ರಸ್ತಾಪಿಸಲಾಗಿದೆ. ಆದರೆ, ಜಗಿಯುವ ತಂಬಾಕಿಗೆ ಪ್ರತಿ ಕೆ.ಜಿಗೆ ₹100ವರೆಗೆ ತೆರಿಗೆ ವಿಧಿಸಲಾಗುತ್ತದೆ.
ಪ್ರಚಲಿತ ವಿದ್ಯಮಾನಗಳು: 3ನೇ ಡಿಸೆಂಬರ್ 2025
- ಋತುಚಕ್ರ ರಜೆ: ಹೊರಬಿದ್ದ ಆದೇಶ
ಸಂದರ್ಭ: ರಾಜ್ಯ ಸರ್ಕಾರದ ಮಹಿಳಾ ನೌಕರರಿಗೆ ತಕ್ಷಣದಿಂದಲೇ ಜಾರಿಯಾಗುವಂತೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.
- ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ.
- ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಋತುಚಕ್ರ ರಜೆ ಪಡೆಯಬಹುದು.
- ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಸಕ್ಷಮಪ್ರಾಧಿಕಾರವೇ ಈ ರಜೆಯನ್ನೂ ಮಂಜೂರು ಮಾಡಬಹುದಾಗಿದೆ.
- ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕಿಲ್ಲ.
- ಜತೆಗೆ ಈ ರಜೆಯನ್ನು ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು.
- ರಾಜ್ಯದಲ್ಲಿ ನಾನಾ ಕಾರ್ಮಿಕ ಕಾಯಿದೆಯಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು, ಸಂಸ್ಥೆಗಳಲ್ಲಿಕಾರ್ಯ ನಿರ್ವಹಿಸುತ್ತಿರುವ 18ರಿಂದ 52 ವರ್ಷ ವಯೋಮಿತಿಯ ಎಲ್ಲ ಕಾಯಂ, ಗುತ್ತಿಗೆ, ಹೊರ ಗುತ್ತಿಗೆ ಮಹಿಳಾ ನೌಕರರಿಗೆ ಋುತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದರಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆ ಸೌಲಭ್ಯ .
- ಸರ್ಕಾರಿ ಕಾಯಂ, ಗುತ್ತಿಗೆ, ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಮತ್ತು ಸಂಸ್ಥೆಗಳಲ್ಲಿ ದುಡಿಯುವ ಮಹಿಳಾ ನೌಕರರು, ಹೊರಗುತ್ತಿಗೆ ವಲಯಗಳಲ್ಲಿ ದುಡಿಯುವ ಮಹಿಳಾ ಉದ್ಯೋಗಿಗಳಿಗೂ ಈ ರಜೆ ಸೌಲಭ್ಯ ಅನ್ವಯವಾಗಲಿದೆ.
- ರಫ್ತು ಕೇಂದ್ರವಾಗಿ ದಕ್ಷಿಣ ಕನ್ನಡ
- ದಕ್ಷಿಣ ಕನ್ನಡವನ್ನು ಜಿಲ್ಲಾ ರಫ್ತು ಕೇಂದ್ರವಾಗಿ ಘೋಷಿಸಲಾಗಿದೆ.
- ಸಮುದ್ರ ಆಹಾರಗಳು, ಗೋಡಂಬಿಯನ್ನು ಸಂಭಾವ್ಯ ರಫ್ತು ಉತ್ಪನ್ನಗಳಾಗಿ ಸೇರಿಸಲಾಗಿದೆ.
- ಜಿಲ್ಲೆಗಳು ರಫ್ತು ಕೇಂದ್ರಗಳಾಗಿ (DEH) ಉಪಕ್ರಮದಡಿಯಲ್ಲಿ, ದಕ್ಷಿಣ ಕನ್ನಡವನ್ನು ಅಧಿಕೃತವಾಗಿ ರಫ್ತು ತಾಣವೆಂದು ಗುರುತಿಸಲಾಗಿದೆ. ಈ ಮಾನ್ಯತೆಯು ಸುಸ್ಥಿರ ಆರ್ಥಿಕ ಅಭಿವೃದ್ಧಿಯತ್ತ ಜಿಲ್ಲೆಯ ನಿರಂತರ ಪ್ರಯತ್ನಗಳತ್ತ ಗಮನ ಸೆಳೆದಿದೆ.
ಡಿಜಿಟಲ್ ಇ–ಸ್ಟ್ಯಾಂಪ್ ಕಾಗದರಹಿತ ನೋಂದಣಿಯತ್ತ ಹೆಜ್ಜೆ

- ಕೇಂದ್ರದಿಂದ ಭಾರತ್ ಟ್ಯಾಕ್ಸಿ ಆ್ಯಪ್
ಸಂದರ್ಭ: ಸಹಕಾರ ವ್ಯವಸ್ಥೆಯ ಅಡಿಯಲ್ಲಿ ಕೆಲಸ ನಿರ್ವಹಿ ಸುವ ‘ಭಾರತ್ ಟ್ಯಾಕ್ಸಿ’ ಆ್ಯಪ್ ಅನ್ನು ಆರಂಭಿಸುವ ಆಲೋಚನೆಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
- ಈ ಆ್ಯಪ್ ಕಾರ್ಯರೂಪಕ್ಕೆ ಬಂದ ನಂತರದಲ್ಲಿ ವಾಣಿಜ್ಯ ಬಳಕೆಯ ವಾಹನ ಗಳ ಚಾಲಕರು ಖಾಸಗಿ ಕಂಪನಿಗಳ ಮೇಲೆ ಅವಲಂಬಿತರಾಗುವುದು ಇನ್ನಿಲ್ಲವಾಗಲಿದೆ ಎಂಬುದು ಸರ್ಕಾರದ ಲೆಕ್ಕಾಚಾರ.
- ‘ಭಾರತ್ ಟ್ಯಾಕ್ಸಿ’ ಆ್ಯಪ್ಅನ್ನು ಸಹಕಾರ ಟ್ಯಾಕ್ಸಿ ಕೋ–ಆಪರೇಟಿವ್ ಲಿಮಿಟೆಡ್ ನಿರ್ವಹಿಸಲಿದೆ. ಇದು ಬಹುರಾಜ್ಯ ಸಹಕಾರ ಸಂಸ್ಥೆಯಾಗಿದೆ.
- ಟ್ಯಾಕ್ಸಿ ಸೇವೆಯನ್ನು ಈ ಆ್ಯಪ್ ಮೂಲಕ ಪಡೆದುಕೊಳ್ಳುವುದು ಗ್ರಾಹಕಸ್ನೇಹಿ ಆಗಿರಲಿದೆ. ಸೇವೆಗಳಿಗೆ ಬೆಲೆ ನಿಗದಿಯು ಪಾರದರ್ಶಕವಾಗಿ ಇರಲಿದೆ.
- ಈ ಆ್ಯಪ್ನ ಬಳಕೆಗೆ ಕಮಿಷನ್ ನೀಡುವ ಪ್ರಮೇಯ ಇರುವುದಿಲ್ಲ. ಹೀಗಾಗಿ ಚಾಲಕರಿಗೆ ಪ್ರತಿ ಬಾರಿಯೂ ಪೂರ್ಣ ಮೊತ್ತ ಪಾವತಿ ಆಗುತ್ತದೆ.
- ಸಹಕಾರ ಸಂಘ ಪಡೆಯುವ ಲಾಭವನ್ನು ಚಾಲಕರಿಗೆ ನೇರವಾಗಿ ಹಂಚಿಕೆ ಮಾಡಲಾಗುತ್ತದೆ.
- ಪಾರದರ್ಶಕ ಬೆಲೆ ನಿಗದಿ ವ್ಯವಸ್ಥೆಯು ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಲಾಭದಾಯಕ ಆಗಲಿದೆ.
- ಭಾರತ್ ಟ್ಯಾಕ್ಸಿ ಆ್ಯಪ್ ತನ್ನ ಪ್ರಾಯೋಗಿಕ ಕಾರ್ಯಾಚರಣೆಯನ್ನು ದೆಹಲಿಯಲ್ಲಿ ಆರಂಭಿಸಿದೆ.
- ಈಗ ಈ ಆ್ಯಪ್ನಲ್ಲಿ 51 ಸಾವಿರಕ್ಕೂ ಹೆಚ್ಚು ಚಾಲಕರು ನೋಂದಾಯಿಸಿಕೊಂಡಿದ್ದಾರೆ.
- ‘ಎರಡು ಹಂತದಲ್ಲಿ ಜನಗಣತಿ– 2027’
ಸಂದರ್ಭ: 2027ರ ಜನಗಣತಿಗೆ ಸಂಬಂಧಿಸಿದಂತೆ ಪ್ರಶ್ನಾವಳಿ ರಚಿಸಲಾಗುತ್ತಿದ್ದು, ರಿಜಿಸ್ಟ್ರಾರ್ ಜನರಲ್ ಹಾಗೂ ಜನಗಣತಿ ಆಯುಕ್ತರು ಆ ಪ್ರಶ್ನೆಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ಯಲ್ಲಿ ತೊಡಗಿದ್ದಾರೆ. ಜನಗಣತಿ ಸಂದರ್ಭದಲ್ಲೇ ಜಾತಿಗಣತಿಯನ್ನೂ ನಡೆಸಲಾಗುತ್ತದೆ.
- ಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತಿದೆ, ಮನೆಗಣತಿಯನ್ನು 2026ರ ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರ ಅವಧಿಯಲ್ಲಿ ನಡೆಯಲಿದೆ.
- ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನುಕೂಲವಾಗುವಂತೆ 30 ದಿನಗಳೊಳಗೆ ಈ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.
- ಜತೆಗೆ ಎರಡನೇ ಹಂತದಲ್ಲಿ 2027ರ ಫೆಬ್ರುವರಿಯಲ್ಲಿ ಜನಗಣತಿಯನ್ನು ಆರಂಭಿಸಲಾಗುತ್ತದೆ.
ಪ್ರಚಲಿತ ವಿದ್ಯಮಾನಗಳು: 2ನೇ ಡಿಸೆಂಬರ್ 2025
- ಮೊಬೈಲ್ನಲ್ಲಿ ‘ಸಂಚಾರ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯ
ಸಂದರ್ಭ: ಅನ್ಯರ ಆಧಾರ್ ಕಾರ್ಡ್ ಬಳಸಿ ಅಕ್ರಮವಾಗಿ ಸಿಮ್ ಖರೀದಿಸುವುದು, ಮೊಬೈಲ್ ಕಳ್ಳತನ ಆಗುವುದು, ಪ್ರತಿ ಮೊಬೈಲ್ಗೂ ನೀಡಲಾಗುವ ಅಂತರರಾಷ್ಟ್ರೀಯ ಮೊಬೈಲ್ ಗುರುತಿನ ಸಂಖ್ಯೆ (ಐಎಂಇಐ) ನಕಲು ಮಾಡುವುದು ಸೇರಿದಂತೆ ಹಲವು ವಂಚನೆಗಳಿಂದ ಜನರನ್ನು ರಕ್ಷಿಸುವ ಸಲುವಾಗಿ ಎಲ್ಲ ಮೊಬೈಲ್ಗಳಲ್ಲಿಯೂ ‘ಸಂಚಾರ ಸಾಥಿ’ ಆ್ಯಪ್ ಅಳವಡಿಕೆ (ಇನ್ಸ್ಟಾಲ್) ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಈ ಸಂಬಂಧ ಭಾರತದ ಎಲ್ಲ ಮೊಬೈಲ್ ತಯಾರಕರಿಗೆ, ಮೊಬೈಲ್ ಸೆಟ್ಗಳನ್ನು ಆಮದು ಮಾಡಿಕೊಳ್ಳುವ ಕಂಪನಿಗಳಿಗೆ ದೂರಸಂಪರ್ಕ ಸಚಿವಾಲಯವು ನ.28ರಂದು ಕೆಲವು ನಿರ್ದೇಶನಗಳನ್ನು ನೀಡಿ ಆದೇಶ ಹೊರಡಿಸಿದೆ.

- ‘ಭಾರತದಲ್ಲಿ ತಯಾರಾಗುವ ಅಥವಾ ಆಮದು ಮಾಡಿಕೊಳ್ಳಲಾಗುವ ಎಲ್ಲ ಮೊಬೈಲ್ ಗಳಲ್ಲಿಯೂ ‘ಸಂಚಾರ ಸಾಥಿ’ ಆ್ಯಪ್ ಅನ್ನು ಮೊದಲೇ ಇನ್ಸ್ಟಾಲ್ ಮಾಡಿರಬೇಕು. ಈಗಾಗಲೇ ಮಾರುಕಟ್ಟೆಯಲ್ಲಿರುವ (ಇನ್ನೂ ಖರೀದಿಯಾಗದ) ಮೊಬೈಲ್ಗಳಲ್ಲಿ ಮೊದಲ ಸಾಫ್ಟ್ವೇರ್ ಅಪ್ಡೇಟ್ ವೇಳೆ ಈ ಆ್ಯಪ್ ಅನ್ನು ಬಳಕೆದಾರರಿಗೆ ನೀಡಬೇಕು’ ಎಂದು ಸಚಿವಾಲಯ ಹೇಳಿದೆ.
- ‘ಈ ಆ್ಯಪ್ ಅನ್ನು ಮೊದಲೇ ‘ಇನ್ಸ್ಟಾಲ್’ ಮಾಡಿರುವ ಹೊಸ ಮೊಬೈಲ್ಗಳನ್ನು ‘ಸೆಟ್ಟಿಂಗ್’ ಮಾಡಿಕೊಳ್ಳುವಾಗಲೇ ಬಳಕೆದಾರರಿಗೆ ಈ ಆ್ಯಪ್ ಇರುವುದು ಸುಲಭವಾಗಿ ಕಾಣುವಂತೆ ಮಾಡಬೇಕು. ಈ ಆ್ಯಪ್ನ ಕಾರ್ಯಾಚರಣೆಯನ್ನು ಡಿಸೇಬಲ್ ಮಾಡುವುದಾಗಲೀ ಅಥವಾ ನಿರ್ಬಂಧಿಸುವುದಾಗಲೀ ಮಾಡುವಂತಿಲ್ಲ’ ಎಂದು ಆದೇಶದಲ್ಲಿ ಹೇಳಲಾಗಿದೆ.
- ‘ತಯಾರಿಕಾ ಕಂಪನಿಗಳು ಮತ್ತು ಮೊಬೈಲ್ಗಳನ್ನು ಆಮದು ಮಾಡಿಕೊಳ್ಳುವ ಕಂಪನಿಗಳು ಆದೇಶ ಪ್ರಕಟವಾದ 120 ದಿನಗಳ ಒಳಗೆ ಆ್ಯಪ್ ಇನ್ಸ್ಟಾಲ್ ಆದ ಕುರಿತು ವರದಿ ನೀಡಬೇಕು’ ಎಂದೂ ಹೇಳಿದೆ.
- ಆದೇಶ ಪಾಲಿಸದಿದ್ದರೆ ಕ್ರಮ: ಈ ಆದೇಶವನ್ನು ಪಾಲಿಸದಿದ್ದರೆ ದೂರಸಂಪರ್ಕ ಕಾಯ್ದೆ –2023 ಮತ್ತು ದೂರಸಂಪರ್ಕ ಸೈಬರ್ ಭದ್ರತಾ ನಿಯಮಗಳು – 2024 ಮತ್ತು ಇತರೆ ಕಾಯ್ದೆಗಳ ಅನ್ವಯ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.
- ಇಂದಿರಾ ಕಿಟ್ಗೆ ಕ್ಯೂಆರ್ ಕೋಡ್
ಸಂದರ್ಭ: ‘ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿಯೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶ ಅಳವಡಿಸಿ, ಅದರ ಆಧಾರದಲ್ಲಿ ಪಡಿತರ ಚೀಟಿದಾರರಿಗೆ ‘ಇಂದಿರಾ’ ಆಹಾರ ಕಿಟ್ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
- ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕಿಲೋ ಅಕ್ಕಿಯ ಬದಲು ‘ಇಂದಿರಾ’ (ಐಎನ್ಡಿಐ ಆರ್ಎ – ಇಂಟೆಗ್ರೇಟೆಡ್ ನ್ಯೂಟ್ರಿಷಿಯನ್ ಆ್ಯಂಡ್ ಡಯೆಟರಿ ಇನಿಷಿಯೇಟಿವ್ ಫಾರ್ ರಿವೈಟಲೈಷಿಂಗ್ ಅನ್ನಭಾಗ್ಯ ಬೆನಿಫಿಷರೀಸ್– ಅನ್ನಭಾಗ್ಯ ಫಲಾನುಭವಿ ಗಳನ್ನು ಪುನರುಜ್ಜೀವನಗೊಳಿಸುವ ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮ) ಆಹಾರ ಕಿಟ್ ಯೋಜನೆಯ ಅನುಷ್ಠಾನದ ಕುರಿತು ಮುಖ್ಯಮಂತ್ರಿ ಸಭೆ ನಡೆಸಿದರು.
- ‘ಕಿಟ್ನಲ್ಲಿ ಉತ್ತಮ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಪೂರೈಸಬೇಕು. ಗುಣಮಟ್ಟದಲ್ಲಿ ರಾಜಿ ಆಗಬಾರದು. ಅಳತೆಯಲ್ಲಿ ಹೆಚ್ಚು ಕಡಿಮೆ ಆಗದಂತೆಯೂ ಎಚ್ಚರಿಕೆ ವಹಿಸಬೇಕು’ ಎಂದು ಹೇಳಿದರು.
- ಎಲ್ಕೆಜಿ ಮಕ್ಕಳಿಗೂ ಮಧ್ಯಾಹ್ನದ ಬಿಸಿಯೂಟ
ಸಂದರ್ಭ: ಸರ್ಕಾರಿ ಶಾಲೆಗಳಲ್ಲಿ ಆರಂಭವಾಗಿರುವ ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ಸೇರಿದಂತೆ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ.
- 2019–20ನೇ ಶೈಕ್ಷಣಿಕ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ವಿಭಾಗಗಳನ್ನು ಆರಂಭಿಸಲಾಗಿತ್ತು. ಆದರೆ, ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ ಆಗಿರಲಿಲ್ಲ.
- ಪ್ರಧಾನಮಂತ್ರಿ ಪೋಷಣ್ ಶಕ್ತಿ ಅಭಿಯಾನದ ಅನುಮೋದನಾ ಮಂಡಳಿ ಸಭೆಯ ನಿರ್ಧಾರದಂತೆ ಡಿ.1ರಿಂದ ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳಿಗೂ ವಿಸ್ತರಿಸಲಾಗಿದೆ.
- ಪ್ರತಿ ಮಗುವಿಗೆ ಪ್ರತಿದಿನ ಕೇಂದ್ರ ಸರ್ಕಾರ ₹4.07, ರಾಜ್ಯ ಸರ್ಕಾರ ₹2.71 ವೆಚ್ಚ ಮಾಡಲಿವೆ. ಒಟ್ಟು ಆಹಾರ ತಯಾರಿ ವೆಚ್ಚ ₹6.78 ನಿಗದಿ ಮಾಡಲಾಗಿದೆ. ಅದಲ್ಲದೆ, ವಾರದಲ್ಲಿ ನಾಲ್ಕು ದಿನ ಮೊಟ್ಟೆ ಖರೀದಿಗೆ ಅಜೀಂ ಪ್ರೇಮ್ಜಿ ಫೌಂಡೇಶನ್ ಹಣಕಾಸಿನ ಸಹಾಯ ಮಾಡಲಿದೆ. ಉಳಿದ ಎರಡು ದಿನಗಳ ವೆಚ್ಚವನ್ನು ಶಾಲಾ ಶಿಕ್ಷಣ ಇಲಾಖೆ ಭರಿಸುತ್ತದೆ.
- ರಾಜ್ಯದಲ್ಲಿ ‘ಡಿಜಿಟಲ್ ಇ– ಸ್ಟ್ಯಾಂಪ್’ಜಾರಿ: ಸ್ಟ್ಯಾಂಪ್ ವಂಚನೆ, ಭದ್ರತಾ ಲೋಪ ತಡೆಗೆ ಕಂದಾಯ ಇಲಾಖೆ ಹೊಸ ವ್ಯವಸ್ಥೆ
ಸಂದರ್ಭ: ಹೊಸ ವ್ಯವಸ್ಥೆಯಲ್ಲಿ ನಾಗರಿಕರು ಆಧಾರ್ ಆಧಾರಿತ ಇ– ಸಹಿ ಅಥವಾ ಡಿಜಿಟಲ್ ಸಿಗ್ನೇಚರ್ ಸರ್ಟಿಫಿಕೇಟ್ (ಡಿಎಸ್ಸಿ) ಬಳಸಿ ದಸ್ತಾವೇಜುಗಳಿಗೆ ಡಿಜಿಟಲ್ ಸಹಿ ಮಾಡಬಹುದು, ಕಂದಾಯ ಸಚಿವ.

ನೋಂದಣಿ ಮತ್ತು ನೋಂದಣಿಯೇತರ ಛಾಪಾ ಕಾಗದ ವಹಿವಾಟುಗಳಿಗೆ ಬಳಸುವ ‘ಇ– ಸ್ಟ್ಯಾಂಪ್’ ಬದಲಿಗೆ ‘ಡಿಜಿಟಲ್ ಇ– ಸ್ಟ್ಯಾಂಪ್’ ವ್ಯವಸ್ಥೆಯನ್ನು ಕಂದಾಯ ಇಲಾಖೆ ಜಾರಿಗೆ ತಂದಿದೆ.
- ‘ಸ್ಟ್ಯಾಂಪ್ ವಂಚನೆ ಮತ್ತು ಭದ್ರತಾ ಲೋಪವನ್ನು ಸಂಪೂರ್ಣ ತೊಡೆದು ಹಾಕಲು ಈ ಹೊಸ ವ್ಯವಸ್ಥೆ ಪರಿಚಯಿಸಲಾಗಿದೆ. ಈ ವ್ಯವಸ್ಥೆಗೆ ಅಗತ್ಯವಾದ ನಿಯಮಗಳನ್ನು ಪ್ರಕಟಿಸಲಾಗಿದ್ದು, ಮುಂದಿನ ದಿನಗಳಲ್ಲಿ ‘ಡಿಜಿಟಲ್ ಇ-ಸ್ಟ್ಯಾಂಪ್’ ಕಡ್ಡಾಯಗೊಳಿಸಲಾಗುವುದು’.
- ‘ನಾಗರಿಕರು ಮಧ್ಯವರ್ತಿಗಳ ನೆರವಿಲ್ಲದೆ, ಮನೆಯಲ್ಲಿಯೇ ಕುಳಿತು ‘ಡಿಜಿಟಲ್ ಇ– ಸ್ಟ್ಯಾಂಪ್’ ತಯಾರಿಸಿಕೊಳ್ಳಬಹುದು. ಇಂಟರ್ನೆಟ್ ಇದ್ದರೆ 24×7 ಜಗತ್ತಿನಲ್ಲಿ ಎಲ್ಲಿಯೇ ಕುಳಿತು ಈ ಸೇವೆಯನ್ನು ಪಡೆಯಬಹುದು. ಎಲ್ಲ ಸೇವೆಗಳು ಸಂಪೂರ್ಣ ಡಿಜಿಟಲ್ ಆಗಿರಲಿದೆ. ಸುರಕ್ಷಿತ ಮತ್ತು ವೇಗವಾಗಿ ಆನ್ಲೈನ್ ಪಾವತಿ ಮಾಡಲು ಕೂಡಾ ಅವಕಾಶವಿದೆ’.
- ‘ಹಿಂದೆ ಛಾಪಾ ಕಾಗದಗಳನ್ನು ಮುದ್ರಿಸಲಾಗುತ್ತಿತ್ತು. ನಕಲಿ ಹಾಗೂ ಛಾಪಾ ಕಾಗದಗಳ ಮರುಬಳಕೆಯ ವಂಚನೆ ತೆಲಗಿ ಹಗರಣದಿಂದ ಬಹಿರಂಗವಾಗಿತ್ತು. ಅದನ್ನು ತಡೆಯಲು ಭೌತಿಕ ಸ್ಟಾಂಪ್ ಕಾಗದಗಳ ಬಳಕೆ ನಿಲ್ಲಿಸಿ, ‘ಇ-ಸ್ಟ್ಯಾಂಪ್’ ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು.
- ‘ಸ್ಟಾಕ್ ಹೋಲ್ಡಿಂಗ್ ಕಾರ್ಪೊರೇಷನ್ ಲಿಮಿಟೆಡ್ (ಎಸ್ಎಚ್ಸಿಐಎಲ್) ಸಹಯೋಗದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಇ– ಸ್ಟ್ಯಾಂಪ್’ ಕಾಗದವನ್ನು ಮುದ್ರಿಸುತ್ತಿದೆ. ಆದರೆ, ಝೆರಾಕ್ಸ್ ಯಂತ್ರಗಳ ಮೂಲಕ ಇ-ಸ್ಟ್ಯಾಂಪ್ ಪ್ರಮಾಣಪತ್ರಗಳನ್ನು ನಕಲು ಅಥವಾ ಅವುಗಳಂತೆಯೇ ಕಾಣುವ ಪ್ರತಿಗಳನ್ನು ಸೃಷ್ಟಿಸಲು ಸಾಧ್ಯವಾಗಿತ್ತು. ಇದರಿಂದ ಮೂಲ ಹಾಗೂ ನಕಲಿ ಯಾವುದೆಂದು ಪತ್ತೆ ಮಾಡುವುದೇ ಸವಾಲಾಗಿದೆ. ಒಂದು ಉದ್ದೇಶಕ್ಕೆ ಖರೀದಿಸಿದ ಸ್ಟ್ಯಾಂಪ್ ಕಾಗದವನ್ನು ಬೇರೆ ರೀತಿಯ ದಸ್ತಾವೇಜಿಗೆ ಬಳಸುವ ಪ್ರಸಂಗಗಳೂ ನಡೆದಿವೆ. ನಕಲಿ, ನಕಲು ಪ್ರತಿ ಹಾಗೂ ತಪ್ಪು ವರ್ಗೀಕರಣದಿಂದ ಸರ್ಕಾರಕ್ಕೆ ಸೇರುವ ಸ್ಟ್ಯಾಂಪ್ ಶುಲ್ಕ ತಪ್ಪಿಸಿದ ಹಲವು ಘಟನೆಗಳೂ ನಡೆದಿವೆ.
- ‘ಡಿಜಿಟಲ್ ಇ– ಸ್ಟ್ಯಾಂಪ್ ವ್ಯವಸ್ಥೆ ಎಲ್ಲ ರೀತಿಯಲ್ಲೂ ಸುರಕ್ಷಿತವಾಗಿ ಇರಲಿದೆ. ಹೊಸ ವ್ಯವಸ್ಥೆ ಜಾರಿಯಿಂದ ಇ-ಸ್ಟ್ಯಾಂಪ್ ವಿತರಣೆಗಾಗಿ ಎಸ್ಎಚ್ಸಿಐಎಲ್ಗೆ ಸರ್ಕಾರ ನೀಡುವ ಕಮಿಷನ್ ಮೊತ್ತ ಉಳಿತಾಯ ಆಗಲಿದೆ’.
- ನಾಲ್ಕು ಕಾರ್ಮಿಕ ಸಂಹಿತೆಗಳು ಹೊಸ ನಿಯಮಗಳಲ್ಲೇನಿದೆ?
ಸಂದರ್ಭ: ಕೇಂದ್ರ ಸರ್ಕಾರವು ಕಾರ್ಮಿಕ ಕಲ್ಯಾಣದ ದೃಷ್ಟಿಯಿಂದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರೂಪಿಸಿದೆ. ವೇತನ ಸಂಹಿತೆ (2019), ಕೈಗಾರಿಕಾ ಸಂಪರ್ಕ ಸಂಹಿತೆ (2020), ಸಾಮಾಜಿಕ ಭದ್ರತಾ ಸಂಹಿತೆ (2020), ಉದ್ಯೋಗ ಭದ್ರತೆ, ಆರೋಗ್ಯ ಮತ್ತು ಕೆಲಸದ ಸ್ಥಿತಿಗತಿಗಳ ಸಂಹಿತೆ (2020) ಜಾರಿಗೆ ಬಂದಿದ್ದು, ಕಾರ್ಮಿಕರ ಜೀವನ ಮಟ್ಟವನ್ನು ಸುಧಾರಿಸುವ ದಿಸೆಯಲ್ಲಿ ಇವುಗಳನ್ನು ರೂಪಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರತಿಪಾದಿಸಿದೆ.
- ಇದುವರೆಗೂ ಅಸ್ತಿತ್ವದಲ್ಲಿದ್ದ 29 ಕಾರ್ಮಿಕ ಕಾನೂನುಗಳನ್ನು ಪರಾಮರ್ಶಿಸಿ, ನಿಯಮಾವಳಿಗಳನ್ನು ಆಧುನೀಕರಿಸಿ ಹೊಸ ಸಂಹಿತೆಗಳನ್ನು ರೂಪಿಸಲಾಗಿದೆ.
- ಪ್ರಗತಿ ಪಥದಲ್ಲಿ ಸಾಗುತ್ತಿರುವ ದೇಶದ ಉದ್ಯಮ ರಂಗಕ್ಕೆ ತಕ್ಕಂತೆ ಕಾರ್ಮಿಕ ವ್ಯವಸ್ಥೆಯನ್ನು ಸಜ್ಜುಗೊಳಿಸುವ ಆಶಯ ಇವುಗಳ ಹಿಂದಿದೆ ಎಂದು ಕೇಂದ್ರವು ಹೇಳಿದೆ.

ಹೊಸ ಕಾರ್ಮಿಕ ಸಂಹಿತೆಗಳ ಅಗತ್ಯವೇನು?
- ಭಾರತದಲ್ಲಿ ಅಸ್ತಿತ್ವದಲ್ಲಿದ್ದ ಬಹುತೇಕ ಕಾರ್ಮಿಕ ಕಾನೂನುಗಳು ಸ್ವಾತಂತ್ರ್ಯಪೂರ್ವದಲ್ಲಿ ಮತ್ತು ದೇಶದಲ್ಲಿ ಉದ್ಯಮಗಳು ಆರಂಭವಾಗುತ್ತಿದ್ದ ಹಂತದಲ್ಲಿ ರೂಪಿಸಿದಂಥವು.
- ಜಗತ್ತಿನ ಮುಂದುವರಿದ ಆರ್ಥಿಕತೆಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಕಾರ್ಮಿಕ ಕಾನೂನುಗಳನ್ನು ಬದಲಾಯಿಸಿದ್ದರೂ ಭಾರತದಲ್ಲಿ ಹಳೆಯ ನಿಯಮಗಳೇ ಚಾಲ್ತಿಯಲ್ಲಿದ್ದವು.
- ವಸಾಹತುಶಾಹಿಯ ನೆರಳಿನಿಂದ ಹೊರಬಂದು, ಉದ್ಯಮ ರಂಗದ ಅಗತ್ಯಕ್ಕೆ ತಕ್ಕಂತೆ, ಉದ್ಯಮಿ ಮತ್ತು ಕಾರ್ಮಿಕ ಇಬ್ಬರ ಹಿತವನ್ನೂ ಕಾಯುವಂತೆ ಹೊಸ ನಿಯಮಗಳನ್ನು ರೂಪಿಸುವುದು ಅಗತ್ಯವಾಗಿತ್ತು.
- ಈ ದಿಸೆಯಲ್ಲಿ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಲಾಗಿದೆ. ಸದ್ಯದ ಮತ್ತು ಭವಿಷ್ಯದ ತಾಂತ್ರಿಕ ಹಾಗೂ ಆರ್ಥಿಕ ಬೆಳವಣಿಗೆಗಳನ್ನು ದೃಷ್ಟಿಯಲ್ಲಿರಿಸಿಕೊಂಡು, ಆತ್ಮನಿರ್ಭರ ಭಾರತಕ್ಕಾಗಿ ಕಾರ್ಮಿಕ ಪಡೆಯನ್ನು ಸಿದ್ಧಗೊಳಿಸಲು ಈ ನಾಲ್ಕು ಸಂಹಿತೆಗಳು ನೆರವಾಗಲಿವೆ ಎಂದು ಕೇಂದ್ರವು ಹೇಳಿದೆ.
- ಎಫ್ಡಿಐ ಶೇ 18ರಷ್ಟು ಹೆಚ್ಚಳ
ಸಂದರ್ಭ: ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿನ ವಿದೇಶಿ ನೇರ ಹೂಡಿಕೆ (ಎಫ್ಡಿಐ) ಪ್ರಮಾಣ ಶೇ 18ರಷ್ಟು ಹೆಚ್ಚಳವಾಗಿದ್ದು, ₹3.15 ಲಕ್ಷ ಕೋಟಿಯಷ್ಟಾಗಿದೆ. ಇದೇ ಅವಧಿಯಲ್ಲಿ ಅಮೆರಿಕದಿಂದ ವಿದೇಶಿ ನೇರ ಹೂಡಿಕೆ ಪ್ರಮಾಣದಲ್ಲಿ ದುಪ್ಪಟ್ಟು ಹೆಚ್ಚಾಗಿದ್ದು, ₹59,283 ಕೋಟಿಯಷ್ಟಾಗಿದೆ.
- ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ವಿದೇಶಿ ನೇರ ಹೂಡಿಕೆ ₹2.66 ಲಕ್ಷ ಕೋಟಿಯಷ್ಟಾಗಿತ್ತು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
- ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹1.48 ಲಕ್ಷ ಕೋಟಿ ಒಳಹರಿವು ಆಗಿದೆ. ಕಳೆದ ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಹೋಲಿಸಿದರೆ ಇದು ಶೇ 21ರಷ್ಟು ಹೆಚ್ಚಳ ಎಂದು ಹೇಳಿದೆ.
- ಸಂಕಷ್ಟದಲ್ಲಿದ್ದ ಭಾರತೀಯರು ಸ್ವದೇಶಕ್ಕೆ: ಶ್ರೀಲಂಕಾ: ‘ಸಾಗರಬಂಧು’ ಕಾರ್ಯಾಚರಣೆಯಿಂದ ತಾಯ್ನಾಡಿಗೆ
ಸಂದರ್ಭ: ‘ದಿತ್ವಾ’ ಚಂಡಮಾರುತದಿಂದಾಗಿ ತತ್ತರಿಸಿರುವ ಶ್ರೀಲಂಕಾದಲ್ಲಿ ಸಿಲುಕಿದ್ದ 104 ಭಾರತೀಯರನ್ನು ಕರೆತರಲಾಗಿದೆ. ಈ ಮೂಲಕ ಅಪಾಯದಲ್ಲಿದ್ದ ಎಲ್ಲ ಭಾರತೀಯರು ಸ್ವದೇಶಕ್ಕೆ ತಲುಪಿದಂತಾಗಿದೆ.
- ‘ಸಾಗರಬಂಧು ಹೆಸರಿನ ಕಾರ್ಯಾಚರಣೆಯಲ್ಲಿ 104 ಭಾರತೀಯರನ್ನು ವಾಯಪಡೆಯ ಯುದ್ಧವಿಮಾನದ ಮೂಲಕ ಕೊಲಂಬೊ ಬಂಡಾರನಾಯಿಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಿರುವನಂತಪುರಕ್ಕೆ ಕರೆತರಲಾಯಿತು’ ಎಂದು ಭಾರತದ ಹೈಕಮಿಷನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.
- ಶ್ರೀಲಂಕಾದ ರಕ್ಷಣ ಕಾರ್ಯಕ್ಕೆ ಮತ್ತಷ್ಟು ನೆರವು ನೀಡುತ್ತಿರುವ ಭಾರತ, ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಿದೆ. ಭಾರತೀಯ ವಾಯುಪಡೆಯ ಚೇತಕ್ ಯುದ್ಧವಿಮಾನವು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದೆ. ಭೂಕುಸಿತ ಮತ್ತು ಪ್ರವಾಹದಿಂದ ರಸ್ತೆ ಸಂಪರ್ಕ ಕಡಿತಗೊಂಡಿರುವ ಗುಡ್ಡಪ್ರದೇಶ ಕೊಟ್ಮಲೆಯಲ್ಲಿಯೂ ಕಾರ್ಯಾಚರಣೆ ನಡೆಸುತ್ತಿದೆ
- ಎನ್ಡಿಆರ್ಎಫ್ ಕೊಲಂಬೊಕ್ಕೆ ತಲುಪಿದ್ದು, ಕೋಚಿಕಡೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.
ತಮಿಳುನಾಡಿನಲ್ಲಿ ಮುಂದುವರಿದ ಮಳೆ
- ದಿತ್ವಾ ಚಂಡಮಾರುತದ ಪರಿಣಾಮವಾಗಿ ಚೆನ್ನೈ, ತಿರುವಲ್ಲೂರು, ಕಾಂಚೀಪುರಂ, ಕಡಲೂರು ಸೇರಿದಂತೆ ತಮಿಳುನಾಡಿನ ಹಲವೆಡೆ ಸಾಧಾರಣ ಮಳೆಯಾಗಿದೆ.
- ದಿತ್ವಾ ಚಂಡಮಾರುತವು ದುರ್ಬಲಗೊಂಡಿದ್ದು, ಅದರ ಪರಿಣಾಮವಾಗಿ ವಾಯುಭಾರ ಕುಸಿತವಾಗಿದೆ. ಇದು ತಮಿಳುನಾಡು–ಪಾಂಡಿಚೇರಿ ಕರಾವಳಿಗೆ ಸಮೀಪವಾಗಿರುವುದರಿಂದ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
- ನಿರಂತರ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಕೃಷಿಭೂಮಿಗೆ ಹಾನಿಯಾಗಿದೆ.
- ಆಯಾ ವರ್ಷವೇ ಏಕಲವ್ಯ ಪ್ರಶಸ್ತಿ ಪ್ರದಾನ
ಸಂದರ್ಭ: 2022 ಮತ್ತು 2023ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಮತ್ತು ಕ್ರೀಡಾ ಪೋಷಕ ಪ್ರಶಸ್ತಿ.
‘ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದವರಿಗೆ ₹6 ಕೋಟಿ ನೀಡಲಾಗುವುದು. ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಸರ್ಕಾರಿ ಉದ್ಯೋಗವನ್ನೂ ನೀಡಲಾಗುವುದು, ಬೆಳ್ಳಿ ಗೆದ್ದವರಿಗೆ ₹4 ಕೋಟಿ ಮತ್ತು ಕಂಚು ಗೆದ್ದವರಿಗೆ ₹3 ಕೋಟಿ ನಗದು ಪುರಸ್ಕಾರ ನೀಡಲಾಗುವುದು’ ಎಂದು ಪುನರುಚ್ಚರಿಸಿದ ಸಿದ್ದರಾಮಯ್ಯ ಅವರು, 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ಗಾಗಿ 60 ಮಂದಿಯನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗುತ್ತಿದೆ. ತರಬೇತಿಯ ವೇಳೆ ಪ್ರತಿ ವರ್ಷ ಪ್ರತಿ ಕ್ರೀಡಾಪಟುವಿಗೆ ₹10 ಲಕ್ಷ ನೀಡಲಾಗುತ್ತದೆ ಎಂದರು.
ಪ್ರಶಸ್ತಿ ಪುರಸ್ಕೃತರು
- 2022ನೇ ಸಾಲಿನ ಏಕಲವ್ಯ ಪುರಸ್ಕೃತರು: ಪ್ರಿಯಾ ಎಚ್. ಮೋಹನ್ (ಅಥ್ಲೆಟಿಕ್ಸ್), ಮಿಥುನ್ ಮಂಜುನಾಥ್ (ಬ್ಯಾಡ್ಮಿಂಟನ್), ಪ್ರತ್ಯನುಷ್ ತೋಮರ್, ಸಂಪತ್ ವಿ.ಪಾಸ್ಮೆಲ್ (ಸೈಕ್ಲಿಂಗ್), ಮೊಹಮ್ಮದ್ ರಾಹಿಲ್ (ಹಾಕಿ/ ಪರ ತಂದೆ ನಾಸಿರುದ್ದೀನ್ ಸ್ವೀಕರಿಸಿದರು), ಧನಲಕ್ಷ್ಮಿ (ಕಯಾಕಿಂಗ್ ಮತ್ತು ಕೆನೊಯಿಂಗ್), ಅದಿತಿ ಅಶೋಕ್ (ಗಾಲ್ಫ್), ಎಸ್.ಡಿ.ಪ್ರಜ್ವಲ್ ದೇವ್ (ಟೆನಿಸ್), ಯುಕ್ತಿ ರಾಜೇಂದ್ರ (ಶೂಟಿಂಗ್), ರಿಧಿಮಾ ವೀರೇಂದ್ರಕುಮಾರ್ (ಈಜು), ಮಣಿಕಂದನ್ ಕೆ (ಪ್ಯಾರಾ ಕ್ಲೈಬಿಂಗ್), ಎಲ್.ಎಂ.ಮನೋಜ್ (ವಾಲಿಬಾಲ್), ಪ್ರವಲಿಕಾ ವಿ.ಕುಷ್ಟಗಿ (ಟೇಕ್ವಾಂಡೊ), ನಿಂಗಪ್ಪ ಪಿ.ಗೇಣೆನ್ನವರ (ಕುಸ್ತಿ), ರಕ್ಷಿತಾ ಆರ್. (ಪ್ಯಾರಾ ಅಥ್ಲೆಟಿಕ್ಸ್).
- 2023: ನಿಹಾಲ್ ಜೋಯೆಲ್ (ಅಥ್ಲೆಟಿಕ್ಸ್), ಕೆ.ಸಾಯಿ ಪ್ರತೀಕ್, ಆರ್.ಸಂಜನಾ (ಬ್ಯಾಸ್ಕೆಟ್ಬಾಲ್), ಅನುಪಮಾ ಗುಳೇದ (ಸೈಕ್ಲಿಂಗ್), ನೈದಿಲೆ ಬಿ (ಫೆನ್ಸಿಂಗ್), ಉಜ್ವಲ್ ನಾಯ್ಡು (ಜಿಮ್ನಾಸ್ಟಿಕ್ಸ್), ಬಿ.ಆಭರಣ ಸುದೇವ್ (ಹಾಕಿ), ದಾದಾಪೀರ್ (ಕಯಾಕಿಂಗ್/ ಕೆನೋಯಿಂಗ್), ದಿವ್ಯಾ ಟಿ.ಎಸ್. (ಶೂಟಿಂಗ್), ಅನೀಶ್ ಎಸ್.ಗೌಡ (ಈಜು), ಪ್ರಿಯಾಂಕಾ ಎಸ್. (ವಾಲಿಬಾಲ್), ಐಶ್ವರ್ಯ ಪಿ.ಕರಿಗಾರ (ಕುಸ್ತಿ), ಉಷಾ ಬಿ.ಎನ್. (ವೇಟ್ ಲಿಫ್ಟಿಂಗ್), ಶ್ರೀಧರ ನಾಗಪ್ಪ ಮಾಳಗಿ (ಪ್ಯಾರಾ ಈಜು), ಅಮ್ಮು ಮೋಹನ್ (ಪ್ಯಾರಾ ಬ್ಯಾಡ್ಮಿಂಟನ್). (ಪ್ರಶಸ್ತಿಯು ₹4ಲಕ್ಷ ನಗದು, ಏಕಲವ್ಯ ಪ್ರತಿಮೆ, ಪ್ರಮಾಣಪತ್ರ ಒಳಗೊಂಡಿದೆ)
- ಕರ್ನಾಟಕ ಕ್ರೀಡಾ ರತ್ನ: 2022: ದಿವ್ಯಾ ಎಂ.ಎಸ್. (ಬಾಲ್ ಬ್ಯಾಡ್ಮಿಂಟನ್), ಭಾಸ್ಕರ ದೇವಾಡಿಗ (ಕಂಬಳ), ರಾಯಪ್ಪ ಧರೆಪ್ಪ ಅಬ್ಬುನವರ (ಸಂಗ್ರಾಣಿ ಕಲ್ಲು ಎತ್ತುವುದು), ಚೈತ್ರಾ ಬಿ. (ಕೊಕ್ಕೊ), ವಿಠಲ್ ಮೇಟಿ (ಕಬಡ್ಡಿ), ಶಂಕರಪ್ಪ ಕೆ. (ಮಲ್ಲಕಂಬ), ಗೋಪವ್ವ ಮಂಜುನಾಥ ಖೋಡ್ಕಿ (ಕುಸ್ತಿ), ಮೊಹಮ್ಮದ್ ಫಿರೋಜ್ ಶೇಖ್ (ಯೋಗ). 2023: ಗೌತಮ್ ಎಂ.ಕೆ. (ಕೊಕ್ಕೊ), ಸುನಿಲ್ ಬಿ.ಪಡತಾರೆ (ಕುಸ್ತಿ), ವಿನಾಯಕ ಎಂ.ಕೊಂಗಿ (ಯೋಗ), ಮೇಘನಾ ಎಚ್.ಎಂ. (ಬಾಲ್ಬ್ಯಾಡ್ಮಿಂಟನ್), ಆತ್ಮೀಯಾ ಎಂ.ಬಿ. (ಕಬಡ್ಡಿ), ಮಂಜುಳಾ ಹಣಮಂತ ಹುಲಗಣ್ಣವರ (ಮಲ್ಲಕಂಬ). (₹2 ಲಕ್ಷ ನಗದು, ಪ್ರತಿಮೆ ಮತ್ತು ಪ್ರಶಂಸಾಪತ್ರ)
- 2023: ಕ್ರೀಡಾ ಪೋಷಕ ಪ್ರಶಸ್ತಿ: ಶೇಷಾದ್ರಿಪುರಂ ಶಿಕ್ಷಣ ದತ್ತಿ, ಬೆಂಗಳೂರು. (₹10 ಲಕ್ಷ ನಗದು, ಪ್ರಶಂಸಾಪತ್ರ).
ತರಬೇತಿಗಾಗಿ ಜೀವಮಾನ ಸಾಧನೆ
- 2022 ಬಿ.ಎನ್.ಸುಧಾಕರ್ (ಬ್ಯಾಡ್ಮಿಂಟನ್), ಆರ್.ರಾಜನ್ (ಬ್ಯಾಸ್ಕೆಟ್ಬಾಲ್), ಕೃಷ್ಣ (ಫುಟ್ಬಾಲ್), ಕಬಡ್ಡಿ (ಈಶ್ವರ ಅಂಗಡಿ), ಉಮೇಶ ಕಲಘಟಗಿ (ಈಜು). 2023: ರಾಹುಲ್ ಬಿ. (ಪ್ಯಾರಾ ಅಥ್ಲೆಟಿಕ್ಸ್), ಎಚ್.ಎನ್.ಕೃಷ್ಣಮೂರ್ತಿ (ಕಬಡ್ಡಿ), ಕೆ.ಸತ್ಯನಾರಾಯಣ (ಬ್ಯಾಸ್ಕೆಟ್ಬಾಲ್), ಎಚ್.ಬಿ.ರವೀಶ್ (ಹಾಕಿ).
- (₹3 ಲಕ್ಷ ನಗದು, ಪ್ರತಿಮೆ, ಪ್ರಶಂಸಾ ಪತ್ರ)
- ಡುಪ್ಲಾಂಟಿಸ್ ‘ವರ್ಷದ ಅಥ್ಲೀಟ್’
ಸಂದರ್ಭ: ಸ್ವೀಡನ್ನ ಪೋಲ್ವಾಲ್ಟ್ ತಾರೆ ಅರ್ಮಾಂಡ್ ಡುಪ್ಲಾಂಟಿಸ್ ಹಾಗೂ ಅಮೆರಿಕದ ಸಿಡ್ನಿ ಮೆಕ್ಲಾಫ್ಲಿನ್ ಲೆವ್ರೊನ್ ಅವರು ವಿಶ್ವ ಅಥ್ಲೆಟಿಕ್ಸ್ ಕೊಡಮಾಡುವ 2025ನೇ ಸಾಲಿನ ‘ವರ್ಷದ ಅಥ್ಲೀಟ್’ ಗೌರವಕ್ಕೆ ಪಾತ್ರರಾಗಿದ್ದಾರೆ.
ಮೊನಾಕೊದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ‘ಸೋಲಿಲ್ಲದ ಸರದಾರ’ ಡುಪ್ಲಾಂಟಿಸ್ ಅವರು ಟೋಕಿಯೊದಲ್ಲಿ ಈ ವರ್ಷದ ಸೆಪ್ಟೆಂಬರ್ ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ನಲ್ಲಿ 6.30ಮೀ. ಜಿಗಿದು 14ನೇ ಬಾರಿಗೆ ವಿಶ್ವ ದಾಖಲೆ ಸ್ಥಾಪಿಸಿದ್ದಾರೆ.

- 26 ವರ್ಷ ವಯಸ್ಸಿನ ಡುಪ್ಲಾಂಟಿಸ್ ಅವರು ಈ ವರ್ಷದಲ್ಲಿ ಪೋಲ್ವಾಲ್ಟ್ ಹೊರಾಂಗಣ ಮತ್ತು ಒಳಾಂಗಣ ಸ್ಪರ್ಧೆಗಳಲ್ಲಿ ವಿಶ್ವ ಚಾಂಪಿಯನ್ ಆಗಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 16 ಕೂಟಗಳಲ್ಲಿ ಚಿನ್ನ ಜಯಿಸಿದ್ದು, ಅಜೇಯರಾಗಿ ಉಳಿದಿದ್ದಾರೆ.
- ವರ್ಷದ ಅಥ್ಲೀಟ್ ಜೊತೆಗೆ ವರ್ಷದ ‘ಶ್ರೇಷ್ಠ ಫೀಲ್ಡ್ ಅಥ್ಲೀಟ್’ ಗೌರವಕ್ಕೂ ಅವರು ಭಾಜನರಾಗಿದ್ದಾರೆ ಅವರು 2020 ಮತ್ತು 2022ರಲ್ಲಿಯೂ ವರ್ಷದ ಅಥ್ಲೀಟ್ ಗೌರವಕ್ಕೆ ಭಾಜನರಾಗಿದ್ದರು.
- ಎರಡು ಬಾರಿಯ ಒಲಿಂಪಿಕ್ ಚಾಂಪಿಯನ್ ಹಾಗೂ ವಿಶ್ವದಾಖಲೆ ಹೊಂದಿರುವ ಅಮೆರಿಕದ ಓಟಗಾರ್ತಿ ಲೆವ್ರೊನ್ ಅವರು ಮಹಿಳಾ ವಿಭಾಗದಲ್ಲಿ ಈ ಗೌರವಕ್ಕೆ ಭಾಜನರಾಗಿದ್ದಾರೆ. 26 ವರ್ಷ ವಯಸ್ಸಿನ ಲೆವ್ರೊನ್ ಅವರು ವಿಶ್ವ ಚಾಂಪಿಯನ್ಷಿಪ್ನ 400 ಮೀ. ಓಟ ಹಾಗೂ 400 ಮೀ. ಹರ್ಡಲ್ಸ್ ಸ್ಪರ್ಧೆಗಳೆರಡರಲ್ಲೂ ಚಿನ್ನ ಗೆದ್ದ ಮೊದಲ ಅಥ್ಲೀಟ್ ಆಗಿದ್ದಾರೆ. ಕಳೆದೆರಡು ವರ್ಷ ಗಳಲ್ಲಿ ಸ್ಪರ್ಧಿಸಿದ ಎಲ್ಲ ಸ್ಪರ್ಧೆಗಳಲ್ಲಿಯೂ ಅವರು ಸ್ವರ್ಣ ಜಯಿಸಿದ್ದಾರೆ.
ಪ್ರಚಲಿತ ವಿದ್ಯಮಾನಗಳು: 1ನೇ ಡಿಸೆಂಬರ್ 2025
ವಿಐಎಸ್ಎಲ್ ಪುನಶ್ಚೇತನಕ್ಕೆ ₹4,000 ಕೋಟಿ: ಎಚ್ಡಿಕೆ
ಸಂದರ್ಭ:‘ಭದ್ರಾವತಿಯ ವಿಶ್ವೇಶ್ವರಾಯ ಉಕ್ಕಿನ ಕಾರ್ಖಾನೆಯ (ವಿಐಎಸ್ಎಲ್) ಪುನಶ್ಚೇತನಕ್ಕೆ ₹4,000 ಕೋಟಿ ಮೊತ್ತದ ವಿಸ್ತೃತ ಯೋಜನಾ ವರದಿ (ಡಿಪಿಆರ್).
- ಭಾರತೀಯ ಉಕ್ಕು ಪ್ರಾಧಿಕಾರ ಬಂಡವಾಳ ಹೂಡಲಿದೆ. ಪುನಶ್ಚೇತನದ ನಂತರ ರೈಲ್ವೆ ಹಾಗೂ ರಕ್ಷಣಾ ವಲಯದ ಬೇಡಿಕೆ ಆಧರಿಸಿ ಉತ್ಪಾದನೆ ಆರಂಭಿಸಲಾಗುವುದು.
- ಕಾರ್ಖಾನೆಯ 50 ವರ್ಷಗಳ ಭವಿಷ್ಯ ಗಮನದಲ್ಲಿಟ್ಟುಕೊಂಡು ಮಾರುಕಟ್ಟೆ ಹಾಗೂ ಹೊಸ ತಂತ್ರಜ್ಞಾನದ ಕುರಿತು ಅಧ್ಯಯನ ನಡೆಸಿ ಪ್ರತ್ಯೇಕ ಡಿಪಿಆರ್ ರೂಪಿಸಲಾಗಿದೆ.
ಕೂಸಿನ ಮನೆ ‘ಆರೈಕೆದಾರ’ರಿಗೆ ಸಂಕಷ್ಟ: ನರೇಗಾದಡಿ ಗೌರವಧನ ಪಾವತಿಗೆ ಅವಕಾಶ ಇಲ್ಲ: ಕೇಂದ್ರ l ಇವರು ನರೇಗಾ ಭಾಗ.
ಸಂದರ್ಭ: ‘ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ ಕೂಲಿಯನ್ನು ಕೇಂದ್ರದ ಅನುದಾನದಲ್ಲಿ ನೀಡಲಾಗುತ್ತದೆ; ಸಲಕರಣೆಗಳ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ.
- ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳ ಆರೈಕೆಗಾಗಿ ರಾಜ್ಯ ಸರ್ಕಾರ ಆರಂಭಿ ಸಿದ್ದ ‘ಕೂಸಿನ ಮನೆ’ ಆರೈಕೆದಾರರಿಗೆ ನರೇಗಾದಡಿ ಗೌರವಧನ ನೀಡಲು ಅವಕಾಶ ಇಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.
- ಇದರಿಂದಾಗಿ ರಾಜ್ಯದಲ್ಲಿ ಕೂಸಿನ ಮನೆಯಲ್ಲಿ ಆರೈಕೆದಾರರಾಗಿ ನೇಮಕಗೊಂಡಿದ್ದ 7,358 ಕೂಲಿ ಕಾರ್ಮಿಕರಿಗೆ ಸಂಕಷ್ಟ ಎದುರಾಗಿದೆ.
- ನರೇಗಾ ಯೋಜನೆಯ ಕಾರ್ಮಿಕರ ಎಳೆಯ ಮಕ್ಕಳ ಪಾಲನೆ, ಆರೈಕೆಗಾಗಿ ರಾಜ್ಯ ಸರ್ಕಾರ 2023ರಲ್ಲಿ ಈ ಕಾರ್ಯಕ್ರಮ ರೂಪಿಸಿದೆ.
- ಒಂದು ‘ಕೂಸಿನ ಮನೆ’ಗೆ ಸಕ್ರಿಯ ಉದ್ಯೋಗ ಚೀಟಿ ಹೊಂದಿದ್ದ ಇಬ್ಬರು ಮಹಿಳೆಯರನ್ನು ಆರೈಕೆದಾರರಾಗಿ ನೇಮಿಸಲಾಗಿದೆ. ಇವರಿಗೆ ಸಾಮೂಹಿಕ ಕಾಮಗಾರಿಗಳಲ್ಲಿ ಪ್ರತ್ಯೇಕ ಎನ್ಎಂಆರ್ (ನಾಮಿನಲ್ ಮಾಸ್ಟರ್ ರೋಲ್) ಸೃಜಿಸಿ, ಕೆಲಸದ ಸ್ಥಳದಲ್ಲಿ ದೈನಂದಿನ ಹಾಜರಾತಿಯಿಂದ ವಿನಾಯಿತಿ ನೀಡಿದ್ದು ಗೌರವಧನವಾಗಿ ಕೂಲಿ ಪಾವತಿಸಲಾಗುತ್ತಿತ್ತು. ಕಾಮಗಾರಿ ಇಲ್ಲದಿದ್ದಾಗ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಗೌರವಧನ ಭರಿಸಲಾಗುತ್ತಿತ್ತು.
- ನರೇಗಾದಲ್ಲಿ ಹೆಚ್ಚು ಮಾನವ ದಿನಗಳನ್ನು ಸೃಜಿಸಿದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 4,000 ಕೂಸಿನ ಮನೆಗಳನ್ನು ಸ್ಥಾಪಿಸಿತ್ತು. ಈಗ ‘ಮನೆ’ಗಳ ಸಂಖ್ಯೆ 3,679ಕ್ಕೆ ಇಳಿದಿದೆ. 46,723 ಮಕ್ಕಳ ನೋಂದಣಿ ಆಗಿದೆ.
- ಕೆಲ ದಿನಗಳ ಹಿಂದೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ರಾಜ್ಯದ ಗ್ರಾಮೀಣಾಭಿವೃದ್ಧಿ ಆಯುಕ್ತಾ ಲಯಕ್ಕೆ ಪತ್ರ ಬರೆದಿದ್ದು, ‘ಆರೈಕೆದಾರರ ಗೌರವಧನವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಭರಿಸಲು ನರೇಗಾ ಕಾಯ್ದೆಯ ಶೆಡ್ಯೂಲ್–2ರಲ್ಲಿ ಅವಕಾಶ ಇಲ್ಲ’ ಎಂದು ತಿಳಿಸಿದೆ.
- ಆದ್ದರಿಂದ ಆರೈಕೆದಾರರಿಗೆ ತಕ್ಷಣದಿಂದ ವಿನಾಯಿತಿ ರದ್ದು ಪಡಿಸುವಂತೆ ಇಲಾಖೆ ಸುತ್ತೋಲೆ ಹೊರಡಿಸಿದೆ.
- ‘ಮಹಿಳಾ ಕಾರ್ಮಿಕರು ಮಕ್ಕಳನ್ನು ‘ಕೂಸಿನ ಮನೆ’ಗಳಲ್ಲಿ ಬಿಟ್ಟು ನಿಶ್ಚಿಂತೆಯಿಂದ ನರೇಗಾದಲ್ಲಿ ದುಡಿದು ಕೂಲಿ ಪಡೆಯುತ್ತಿದ್ದಾರೆ. ಕೂಸಿನ ಮನೆಯ ಆರೈಕೆದಾರರೂ ನರೇಗಾ ಭಾಗವೇ ಆಗಿದ್ದಾರೆ. ಆದ್ದರಿಂದ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗುತ್ತಿತ್ತು.
2080ಕ್ಕೆ ದೇಶದ ಜನಸಂಖ್ಯೆಯಲ್ಲಿ ಸ್ಥಿರತೆ
ಸಂದರ್ಭ: ಫಲವಂತಿಕೆ ದರ (ಫರ್ಟಿಲಿಟಿ ರೇಟ್) ಕುಸಿತದಿಂದಾಗಿ ದೇಶದ ಜನಸಂಖ್ಯೆಯು 2080ರ ವೇಳೆಗೆ ಸ್ಥಿರಗೊಳ್ಳುವ ನಿರೀಕ್ಷೆಯಿದೆ ಎಂದು ಇಂಡಿಯನ್ ಅಸೋಸಿಯೇಷನ್ ಫಾರ್ ದಿ ಸ್ಟಡಿ ಆಫ್ ಪಾಪುಲೇಷನ್ (ಐಐಎಸ್ಪಿ) ಹೇಳಿದೆ.
- ಪ್ರಸ್ತುತ ಫಲವಂತಿಕೆಯ ದರ 1.9ರಷ್ಟಿದ್ದು, ಕಳೆದ ಎರಡು ದಶಕಗಳಲ್ಲಿ ಜನನ ಪ್ರಮಾಣವು ತೀವ್ರವಾಗಿ ಕುಸಿಯುತ್ತಿದೆ.
- ‘ನಮ್ಮ ದೇಶದ ಫಲವಂತಿಕೆಯ ಒಟ್ಟು ದರ 2000ನೇ ಇಸ್ವಿಯಲ್ಲಿ ಶೇಕಡ 3.5ರಷ್ಟಿತ್ತು. ಇದೀಗ ಶೇ 1.9ಕ್ಕೆ ನಿಂತಿದ್ದು, ತೀವ್ರವಾಗಿ ಕುಸಿತಗೊಂಡಿದೆ.
- ‘ದೇಶದ ಜನಸಂಖ್ಯೆಯು 2080ರ ವೇಳೆಗೆ 180 ಕೋಟಿ ಅಥವಾ 190 ಕೋಟಿಗೆ ಏರಿಕೆಯಾಗುವ ನಿರೀಕ್ಷೆಯಿದೆ. ಬೆಳವಣಿಗೆ ದರವೂ ಸ್ಥಿರಗೊಳ್ಳುವ ನಿರೀಕ್ಷೆಯಿದೆ.
- ಈಗಿನ ಎಲ್ಲ ಅಂದಾಜುಗಳು, ಭಾರತದ ಗರಿಷ್ಠ ಜನಸಂಖ್ಯೆಯು 200 ಕೋಟಿಗಿಂತ ಕಡಿಮೆಯಿರುತ್ತದೆ ಎಂಬುದನ್ನು ತೋರಿಸುತ್ತಿವೆ.
ಕಾಮನ್ವೆಲ್ತ್: ₹ 3000–5000 ಕೋಟಿ ನಿರ್ವಹಣಾ ವೆಚ್ಚ
ಸಂದರ್ಭ: ಅಹಮದಾಬಾದಿ ನಲ್ಲಿ 2030ರಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟಕ್ಕಾಗಿ ಸಂಘಟನಾ ಸಮಿತಿಯೊಂದನ್ನು ರಚಿಸಲಾಗುವುದು. ಕೂಟದ ಕಾರ್ಯ ನಿರ್ವಹಣಾ ವೆಚ್ಚವು ಅಂದಾಜು ₹ 3000 ರಿಂದ ₹ 5000 ಕೋಟಿ ಆಗುವ ಸಾಧ್ಯತೆ ಇದೆ.
- ಕೂಟದ ಯೋಜನೆಯಲ್ಲಿ ಭಾಗಿಯಾಗಿರುವ ಮೂಲಗಳ ಪ್ರಕಾರ, ಕ್ರೀಡೆ ಮತ್ತು ಸಾರ್ವಜನಿಕ ಬಳಕೆಗಾಗಿ ಇರುವ ಮೂಲಸೌಲಭ್ಯಗಳನ್ನು ಉನ್ನತ ದರ್ಜೆಗೆ ಏರಿಸುವುದು, ಹೊಸ ಸೌಲಭ್ಯ ಗಳನ್ನು ನಿರ್ಮಿಸುವುದು ಸೇರಿದಂತೆ ಇರುವ ಕಾರ್ಯ ಯೋಜನೆಗಳಿಗೆ ಒಟ್ಟಾರೆ ವೆಚ್ಚವನ್ನು ಅಂದಾಜು ಮಾಡಲಾಗುತ್ತಿದೆ.
ವಿಶ್ವ ಯುವ ಟಿಟಿ: ದಿವ್ಯಾಂಶಿಗೆ ಕಂಚು
ಸಂದರ್ಭ: ಭಾರತದ ಉದಯೋನ್ಮುಖ ಆಟಗಾರ್ತಿ ದಿವ್ಯಾಂಶಿ ಭೌಮಿಕ್ ಅವರು ಐಟಿಟಿಎಫ್ ವಿಶ್ವ ಯುವ ಟೇಬಲ್ ಟೆನಿಸ್ ಚಾಂಪಿಯನ್ ಷಿಪ್ನಲ್ಲಿ 15 ವರ್ಷದೊಳಗಿನವರ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡರು.
- ಭಾರತ ತಂಡ ವಿಭಾಗದಲ್ಲಿ ಎರಡು ಪದಕಗಳನ್ನು ಗೆದ್ದುಕೊಂಡಿತು. 15 ವರ್ಷದೊಳಗಿನ ಬಾಲಕಿಯರ ತಂಡ (ದಿವ್ಯಾಂಶಿ, ಅನನ್ಯಾ ಮುರಳೀಧರನ್, ಅಂಕೊಲಿಕಾ ಚಕ್ರವರ್ತಿ ಮತ್ತು ನೈಶಾ ರೆವಾಸ್ಕರ್) ಕಂಚಿನ ಪದಕ ಗೆದ್ದಿತ್ತು.
- 19 ವರ್ಷದೊಳಗಿನವರ ಬಾಲಕರ ವಿಭಾಗದಲ್ಲಿ ಭಾರತ ತಂಡ ಬೆಳ್ಳಿ ಪದಕ ಗೆದ್ದಿತು. ಅಂಕುರ್ ಭಟ್ಟಾಚಾರ್ಜಿ, ಅಭಿನಂದ್ ಪ್ರದಿವಾಧಿ, ಪುನಿತ್ ಬಿಸ್ವಾಸ್ ಮತ್ತು ಪ್ರಿಯಾನುಜ್ ಭಟ್ಟಾಚಾರ್ಯ ಅವರನ್ನು ತಂಡ ಒಳಗೊಂಡಿತ್ತು.