Wed. Mar 25th, 2026

Kannada

ಪ್ರಚಲಿತ ವಿದ್ಯಮಾನಗಳು: 9 & 10ನೇ ನವೆಂಬರ್ 2025

ಆಫ್ರಿಕಾದಿಂದ ಮತ್ತೆ 8 ಚೀತಾಗಳು ಭಾರತಕ್ಕೆ
ಭೋಪಾಲ್ (ಪಿಟಿಐ): ಭಾರತಕ್ಕೆ ಚೀತಾಗಳನ್ನು ಮರುಪರಿಚಯಿಸುವ 2022ರ ಕಾರ್ಯಕ್ರಮದ ಅಡಿಯಲ್ಲಿ ಸ್ಥಳಾಂತರಿಸಲು 8 ಚೀತಾಗಳನ್ನು ದಕ್ಷಿಣ ಆಫ್ರೀಕಾದ ಬೋಟ್ಸ್‌ವಾನಾದಲ್ಲಿ ಸೆರೆಹಿಡಿಯಲಾಗಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿ ಯೊಬ್ಬರು ಹೇಳಿದ್ದಾರೆ.

ಎರಡು ಗಂಡು ಚೀತಾಗಳು ಸೇರಿ ಒಟ್ಟು ಎಂಟು ಚೀತಾಗಳನ್ನು ಒಂದು ತಿಂಗಳ ಕಾಲ ಪ್ರತ್ಯೇಕವಾಸದಲ್ಲಿ ಇರಿಸಲಾಗುತ್ತದೆ. ಭಾರತಕ್ಕೆ ಕಳುಹಿಸುವ ಮೊದಲು ಅವುಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಅಂಗೋಲಾ ಪ್ರವಾಸಕ್ಕೆ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಫ್ರಿಕಾದ ದಕ್ಷಿಣ ಭಾಗದ ಅಂಗೋಲಾ ಹಾಗೂ ಬೋಟ್ಸ್‌ವಾನಾ ದೇಶಗಳಿಗೆ 6 ದಿನಗಳ ಪ್ರವಾಸಕ್ಕೆ ಶನಿವಾರ ತೆರಳಿದರು. ಈ ದೇಶಗಳಿಗೆ ಭಾರತದ ರಾಷ್ಟ್ರಪತಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು.

ಆ ದೇಶಗಳೊಂದಿಗೆ ಸಹಯೋಗ ಹಾಗೂ ಪಾಲುದಾರಿಕೆಯನ್ನು ವಿಸ್ತರಿಸುವ ಭಾರತದ ಪ್ರಯತ್ನದ ಭಾಗವಾಗಿ ಈ ಪ್ರವಾಸ ಕೈಗೊಂಡಿದ್ದಾರೆ.

ಮೊದಲು ಅಂಗೋಲಾ ರಾಜಧಾನಿ ಲೌಂಡಾಕ್ಕೆ ಮುರ್ಮು ಬಂದಿಳಿಯಲಿದ್ದಾರೆ. ಇಲ್ಲಿ ನ.8 ರಿಂದ 11ರವರೆಗೆ ಪ್ರವಾಸದಲ್ಲಿರಲಿರುವ ಅವರು ದೇಶದ 50ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ.

ಅಂಗೋಲಾ ಅಧ್ಯಕ್ಷ ಜಾವೊ ಮ್ಯಾನುಯೆಲ್‌ ಗೊಂಕ್ಲಾವೆಸ್‌ ಲಿಯೊರೆಂಕೊ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಉನ್ನತ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಆ ದೇಶದ ಸಂಸತ್ತನ್ನು ಉದ್ದೇಶಿಸಿ ಮುರ್ಮು ಮಾತನಾಡಲಿದ್ದಾರೆ.

‘ಸ್ವಾವಲಂಬಿ ಭಾರತದ ಪ್ರತೀಕ ವಂದೇ ಭಾರತ್‌’
ಎರ್ನಾಕುಲಂ-–ಬೆಂಗಳೂರು ರೈಲಿಗೆ ಸಚಿವ ಎಚ್‌ಡಿಕೆ ಸ್ವಾಗತ
ರೈಲ್ವೆ ಜಾಲಕ್ಕೆ ಸೇರ್ಪಡೆ ಯಾಗುವ ಪ್ರತಿಯೊಂದು ‘ವಂದೇ ಭಾರತ್‌’ ರೈಲು ಕೂಡ ಸ್ವಾವಲಂಬಿ ಭಾರತದ ಪ್ರತೀಕವಾಗಿದೆ. ಭವಿಷ್ಯವನ್ನು ರೂಪಿಸುವ ನಾವೀನ್ಯತೆ, ವಿಶ್ವಾಸ ಮತ್ತು ಸಾಮರ್ಥ್ಯದ ದ್ಯೋತಕ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳ ಮೂಲಕ ಸಂಚರಿಸುವ ಎರ್ನಾಕುಲಂ-ಬೆಂಗಳೂರು ‘ವಂದೇ ಭಾರತ್‌’ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಆಗಿ ಶನಿವಾರ ಚಾಲನೆ ನೀಡಿದ್ದರು. ಈ ರೈಲು ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣಕ್ಕೆ ಬಂದಾಗ ಸ್ವಾಗತಕೋರಿ ಕುಮಾರಸ್ವಾಮಿ ಅವರು ಮಾತನಾಡಿದರು.

‘ಮೇಕ್‌ ಇನ್‌ ಇಂಡಿಯಾದ ಅಡಿ ಯಲ್ಲಿ ನಮ್ಮದೇ ಎಂಜಿನಿಯರ್‌ಗಳು ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಈ ರೈಲುಗಳು ಭಾರತವು ತಾಂತ್ರಿಕವಾಗಿ ಮತ್ತು ವೇಗವಾಗಿ ಹೇಗೆ ಪ್ರಗತಿ ಸಾಧಿಸುತ್ತಿದೆ ಎಂಬುದನ್ನು ಬಿಂಬಿಸುತ್ತಿವೆ’ ಎಂದು ಹೇಳಿದರು.

ಅಂತರ ರಾಜ್ಯ ಸಂಪರ್ಕ ಮಾರ್ಗವು ಅಗತ್ಯವಾಗಿದ್ದು, ವಾಣಿಜ್ಯ, ಶಿಕ್ಷಣ ಮತ್ತು ಸಂಸ್ಕೃತಿಯ ಎರಡು ಕೇಂದ್ರಗಳಾದ ಎರ್ನಾಕುಲಂ–ಬೆಂಗಳೂರನ್ನು ಈ ‘ವಂದೇ ಭಾರತ್’ ರೈಲು ಜೋಡಿಸುತ್ತಿದೆ ಎಂದು ಅವರು ಹೇಳಿದರು.

ಸಂಸದ ಪಿ.ಸಿ. ಮೋಹನ್ ಮತ್ತು ನೈರುತ್ಯ ರೈಲ್ವೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಕಬ್ಬಿಗೆ ಪರಿಷ್ಕೃತ ದರ ಇಲಾಖೆ ಅಧಿಕೃತ ಆದೇಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಸಭೆಯಲ್ಲಿ ಪ್ರತಿ ಟನ್‌ ಕಬ್ಬಿಗೆ ನಿಗದಿ ಮಾಡಿದ್ದ ಪರಿಷ್ಕೃತ ದರಕ್ಕೆ ಸಂಬಂಧಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಸಕ್ಕರೆ) ಶನಿವಾರ ಆದೇಶ ಹೊರಡಿಸಿದೆ.

ಪರಿಷ್ಕೃತ ದರ 2025–26ನೇ ಸಾಲಿನ ಹಂಗಾಮಿಗೆ ಅನ್ವಯವಾಗಲಿದೆ. ರಾಜ್ಯದ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ಈ ಮೊತ್ತ ಪಾವತಿಸಬೇಕಿದೆ. ಕಾರ್ಖಾನೆಗಳು ಮೊದಲ ಕಂತಿನಲ್ಲಿ ಶೇ 10.25 ಸಕ್ಕರೆ ಇಳುವರಿ ಪ್ರಮಾಣ ಇರುವ ಪ್ರತಿ ಟನ್‌ ಕಬ್ಬಿಗೆ ₹3,100, ಶೇ 11.25 ಇಳುವರಿ ಇರುವ ಕಬ್ಬಿಗೆ ₹3,200 ಪಾವತಿಸುತ್ತವೆ. ಕಾರ್ಖಾನೆಗಳು ಪಾವತಿಸಬೇಕಾದ ಕನಿಷ್ಠ ಹೆಚ್ಚುವರಿ ದರ ಪ್ರತಿ ಟನ್‌ಗೆ ₹50 ಹಾಗೂ ರಾಜ್ಯ ಸರ್ಕಾರ ಒಂದು ಬಾರಿಗೆ ನೀಡುತ್ತಿರುವ ಆರ್ಥಿಕ ನೆರವು ₹50 ಎರಡನೇ ಕಂತಿನಲ್ಲಿ ಪಾವತಿಸಲಾಗುತ್ತದೆ.

ಶೇ 10.25–ಶೇ 9.5ರ ನಡುವಿನ ಇಳುವರಿ ಪ್ರಮಾಣದ ನಡುವೆ ಪ್ರತಿ 0.1 ಕಡಿಮೆ ಇಳುವರಿಗೆ ಅನುಪಾತಕ್ಕೆ ಅನುಗುಣವಾಗಿ ಪ್ರತಿ ಕ್ವಿಂಟಲ್‌ಗೆ ₹3.46 ಮೊತ್ತವನ್ನು ಪರಿಗಣಿಸಬೇಕು ಎಂದು ಕಬ್ಬು ಅಭಿವೃದ್ಧಿ ಆಯುಕ್ತ ಹಾಗೂ ಸಕ್ಕರೆ ನಿರ್ದೇಶಕರು ಸೂಚಿಸಿದ್ದಾರೆ.

ಕೇಂದ್ರ ಸರ್ಕಾರ ಸಾಗಣೆ ವೆಚ್ಚ ಸೇರಿ ಶೇ 9.5 ಇಳುವರಿ ಇರುವ ಪ್ರತಿ ಟನ್‌ ಕಬ್ಬಿಗೆ ₹3,290.50, ಶೇ 10.25 ಇಳುವರಿಗೆ ₹3,550 ಹಾಗೂ ಶೇ 11.25 ಇಳುವರಿಗೆ ₹3,896 ನ್ಯಾಯಯುತ ಮತ್ತು ಲಾಭದಾಯಕ ದರವನ್ನು (ಎಫ್‌ಆರ್‌ಪಿ) ನಿಗದಿ ಮಾಡಿತ್ತು. ನಂತರ ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಕಬ್ಬು ಕಟಾವು, ಸಾಗಣೆ ವೆಚ್ಚ ಕುರಿತು ಮಾರ್ಗಸೂಚಿ ಹೊರಡಿಸಿತ್ತು.

ಕೇಂದ್ರ ಸರ್ಕಾರ ಹೊರಡಿಸಿದ ಎಫ್‌ಆರ್‌ಪಿ, ಮಾರ್ಗಸೂಚಿ ನ್ಯಾಯಯುತ ವಾಗಿಲ್ಲ. ರೈತರು ಬೆಳೆದ ಕಬ್ಬಿಗೆ ನ್ಯಾಯಸಮ್ಮತ ಬೆಲೆ ಸಿಗುತ್ತಿಲ್ಲ. ಉತ್ಪಾದನಾ ವೆಚ್ಚವನ್ನು ಗಣನೆಗೆ ತೆಗೆದುಕೊಳ್ಳದೆ ದರ ನಿಗದಿ ಮಾಡಲಾಗಿದೆ. ಇಳುವರಿ ನಿಗದಿಯೂ ಪಾರದರ್ಶಕವಾಗಲಿಲ್ಲ. ಹೆಚ್ಚಿನ ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ವಿಧಾನಸೌಧದಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿ ಪರಿಷ್ಕೃತ ದರ ಘೋಷಣೆ ಮಾಡಿದ್ದರು.

ಶೂಟಿಂಗ್‌: ರವಿಂದರ್‌ಗೆ ಚಿನ್ನ, ಇಳವೆನಿಲ್‌ಗೆ ಕಂಚು
ಕೈರೊ (ಪಿಟಿಐ): ಸೇನೆಯ ಅನುಭವಿ ಶೂಟರ್ ರವಿಂದರ್ ಸಿಂಗ್ ಅವರು ಐಎಸ್‌ಎಸ್‌ಎಫ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಶನಿವಾರ ಪುರುಷರ 50 ಮೀ. ಪಿಸ್ತೂಲ್‌ ಸ್ಪರ್ಧೆಯಲ್ಲಿ ಚಿನ್ನ ಗೆದ್ದು ಸಂಭ್ರಮಿಸಿದರು.

ಆದರೆ ಮಹಿಳೆಯರ ವಿಭಾಗದಲ್ಲಿ ಎರಡು ಬಾರಿಯ ಒಲಿಂಪಿಯನ್ ಇಳವನಿಲ್ ವಳರಿವನ್‌ ಅವರು 10 ಮೀ. ಏರ್‌ ರೈಫೆಲ್‌ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಕಂಚಿನ ಪದಕಕ್ಕೆ ಸಮಾಧಾನಪಟ್ಟುಕೊಳ್ಳಬೇಕಾಯಿತು.

ದಕ್ಷಿಣ ಕೊರಿಯಾದ ಬಾನ್ ಹ್ಯೊಜಿನ್ (255.0) ಚಿನ್ನ ಗೆದ್ದರೆ, ಚೀನಾದ ವಾಂಗ್‌ ಜಿಫೀ (254) ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು. 19ನೇ ಶಾಟ್‌ವರೆಗೆ ಚೀನಾ ಸ್ಪರ್ಧಿಯು ವಳರಿವನ್ ಅವರಿಗಿಂತ ಹಿಂದೆಯಿದ್ದರು.

ವಳರಿವನ್, ಮೇಘನಾ ಸಜ್ಜನರ ಮತ್ತು ಶ್ರೇಯಾ ಅಗರವಾಲ್ ಅವರನ್ನೊಳಗೊಂಡ ಭಾರತ ತಂಡ (1893.3) ತಂಡ ವಿಭಾಗದಲ್ಲಿ ಮೂರನೇ ಸ್ಥಾನ ಪಡೆಯಿತು.

ನಾಯಕ್ ಸುಬೇದಾರ್ ಆಗಿರುವ 29 ವರ್ಷ ವಯಸ್ಸಿನ ರವಿಂದರ್ ಸಿಂಗ್ ಅವರು 569 ಪಾಯಿಂಟ್ ಸ್ಕೋರ್ ಮಾಡಿದರೆ, ದಕ್ಷಿಣ ಕೊರಿಯಾದ ಕಿಮ್‌ ಚಿಯಾಂಗ್‌ಯಾಂಗ್ (556) ಅವರು ಬೆಳ್ಳಿ ಮತ್ತು ತಟಸ್ಥ ರಾಷ್ಟ್ರದ ಆ್ಯಂಟನ್‌ ಅರಿಸ್ಟರ್ಕೊವ್‌ (555) ಕಂಚು ಗೆದ್ದರು. ರವಿಂದರ್‌, ಕಮಲಜೀತ್‌ ಮತ್ತು ಯೋಗೇಶ್ ಕುಮಾರ್ ಅವರನ್ನು ಒಳಗೊಂಡ ತಂಡವು ಟೀಮ್‌ ವಿಭಾಗದಲ್ಲಿ ಬೆಳ್ಳಿ ಗೆದ್ದಿತು.

ವಂದೇ ಭಾರತ್‌-: 4 ರೈಲಿಗೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು– ಎರ್ನಾಕುಳಂ ಸೇರಿದಂತೆ ನಾಲ್ಕು ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಬನಾರಸ್‌ ರೈಲು ನಿಲ್ದಾಣದಿಂದ ಶನಿವಾರ ಹಸಿರು ನಿಶಾನೆ ತೋರಿದರು.

ನೂತನ ರೈಲುಗಳು ಬನಾರಸ್‌–ಖಜುರಾಹೊ, ಲಖನೌ–ಸಹಾರನಪುರ, ಫಿರೋಜ್‌ಪುರ–ದೆಹಲಿ, ಎರ್ನಾಕುಳಂ–ಬೆಂಗಳೂರಿನ ನಡುವೆ ಸಂಚರಿಸಲಿವೆ.

ಈ ಸೆಮಿ ಹೈಸ್ಪೀಡ್‌ ರೈಲುಗಳು ಪ್ರಮುಖ ರೈಲು ನಿಲ್ದಾಣಗಳ ನಡುವಣ ಪ್ರಯಾಣದ ಅವಧಿಯನ್ನು ತಗ್ಗಿಸಲಿವೆ, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿವೆ ಮತ್ತು ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳಿಗೆ ಬೆಂಬಲ ನೀಡಲಿವೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕ ರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು,‘ವಂದೇ ಭಾರತ್‌, ನಮೋ ಭಾರತ್‌ ಮತ್ತು ಅಮೃತ ಭಾರತ್‌ ರೈಲುಗಳು ಭಾರತೀಯ ರೈಲ್ವೆಯ ಹೊಸ ಪೀಳಿಗೆಗಳು’ ಎಂದರು.

‘ದೇಶದಲ್ಲಿ ಸಾಕಷ್ಟು ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ, ವಿಮಾನಗಳು ಜಗತ್ತಿನಾದ್ಯಂತ ಹಾರಾಡುತ್ತಿವೆ. ಈ ಎಲ್ಲ ಅಭಿವೃದ್ಧಿಯು ದೇಶದ ಬೆಳವಣಿಗೆ ಯೊಂದಿಗೆ ಸಂಬಂಧ ಹೊಂದಿದೆ. ಜಗತ್ತಿನ ಅಭಿವೃದ್ಧಿ ಹೊಂದಿದ ದೇಶಗಳ ಆರ್ಥಿಕ ಬೆಳವಣಿಗೆಯಲ್ಲಿ ಮೂಲ ಸೌಕರ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ಅಭಿವೃದ್ಧಿಯ ಪಥದಲ್ಲಿ ಭಾರತವೂ ವೇಗವಾಗಿ ಸಾಗುತ್ತಿದೆ’ ಎಂದರು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉಪಸ್ಥಿತರಿದ್ದರು.

‘ಅಭಿವೃದ್ಧಿಯ ಪಯಣದಲ್ಲಿ ಭಾಗಿ’

‘ವಂದೇ ಭಾರತ್’ ರೈಲು ಜಾಲವು ಭಾರತದ ಪ್ರಮುಖ ಯಾತ್ರಾ ಸ್ಥಳಗಳನ್ನು ಸಂಪರ್ಕಿಸುವ ಮೂಲಕ ದೇಶದ ಸಂಸ್ಕೃತಿ, ನಂಬಿಕೆ ಮತ್ತು ಅಭಿವೃದ್ಧಿಯ ಪಯಣದಲ್ಲಿ ಜೊತೆಯಾಗಿದೆ. ದೇಶದಲ್ಲಿ ಯಾತ್ರೆಯನ್ನು ‘ಧ್ಯಾನದ ಮಾರ್ಗ’ ಎಂದೇ ಶತಮಾನಗಳಿಂದ ಪರಿಗಣಿಸಲಾಗುತ್ತದೆ’ ಎಂದು ಪ್ರಧಾನಿ ಹೇಳಿದರು.‌

ಶಾಲಾ ಮಕ್ಕಳಿಂದ ಆರ್‌ಎಸ್‌ಎಸ್‌ ಗೀತೆ: ಪಿಣರಾಯಿ ಖಂಡನೆ

ತಿರುವನಂತಪುರ: ನೂತನವಾಗಿ ಉದ್ಘಾಟನೆಗೊಂಡ ಎರ್ನಾಕುಳಂ–ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶಾಲಾ ಮಕ್ಕಳಿಂದ ಆರ್‌ಎಸ್‌ಎಸ್‌ ಗೀತೆಯನ್ನು ಹಾಡಿಸಲಾಗಿದೆ ಎಂದು ಹೇಳಲಾಗಿದ್ದು, ಈ ನಡೆ ಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಖಂಡಿಸಿದ್ದಾರೆ.

ರೈಲಿನಲ್ಲಿ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ದೃಶ್ಯ ಟಿ.ವಿ ಚಾನೆಲ್‌ಗಳಲ್ಲಿ ಪ್ರಸಾರವಾಗಿದೆ.

‘ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ ಸಂವಿಧಾನಾತ್ಮಕ ನೀತಿಗಳನ್ನು ಉಲ್ಲಂಘಿಸಲಾಗಿದೆ. ಸಂಘ ಪರಿವಾರವು ತನ್ನ ಕೋಮು ರಾಜಕೀಯದ ಪ್ರಚಾರಕ್ಕಾಗಿ ಅತಿದೊಡ್ಡ ಸಾರ್ವಜನಿಕ ವಲಯವಾದ ರೈಲ್ವೆಯನ್ನು ಬಳಸಿಕೊಂಡಿರುವುದು ಸ್ವೀಕಾರಾರ್ಹವಲ್ಲ’ ಎಂದು ಹರಿಹಾಯ್ದಿದ್ದಾರೆ.

  • ಮಧುಗುಂಡಿ: ಅಪರೂಪದ ಜೇಡ ಗೋಚರ

ಸಂದರ್ಭ: 123 ವರ್ಷಗಳ ನಂತರ ಸಂಶೋಧಕರಿಗೆ ಕಾಣಿಸಿಕೊಂಡ ‘ಪಿಲಿಯಾ’ ಪ್ರಭೇದ: ಮಧುಗುಂಡಿಯಲ್ಲಿ ಪರಿಸರ ಅಧ್ಯಯನಕ್ಕೆ ಹೆಚ್ಚು ಅವಕಾಶವಿರುವುದು ಮತ್ತೆ ಸಾಬೀತಾಗಿದೆ. ಹಾಗಾಗಿ ಅಧ್ಯಯನ ಆಸಕ್ತಿ ಇರುವ ಅತಿಥಿಗಳಿಗೇ ಹೆಚ್ಚಿನ ಅವಕಾಶ ನೀಡುತ್ತಿದ್ದೇವೆ ಶ್ರೀಜಿತ್, ರಿವರ್‌ ಮಿಸ್ಟ್ ಮುಖ್ಯಸ್ಥ .

  • ಪಶ್ಚಿಮ ಘಟ್ಟದ ಜೀವವೈವಿಧ್ಯದ ಅಧ್ಯಯನ ಕೈಗೊಂಡಿರುವ ಸಂಶೋಧಕರ ತಂಡವು ಮೂಡಿಗೆರೆ ತಾಲ್ಲೂಕಿನ ಮಧುಗುಂಡಿಯಲ್ಲಿ ಕುಪ್ಪಳಿಸುವ ಜೇಡಗಳ ‘ಪಿಲಿಯಾ’ ಗುಂಪಿಗೆ ಸೇರಿದ ಹೊಸ ಪ್ರಭೇದದ ಜೇಡವು ಗೋಚರಿಸಿದೆ.
  • ಈ ಕುರಿತ ವರದಿ ಅಂತರರಾಷ್ಟ್ರೀಯ ಜೀವವೈವಿಧ್ಯ ಅಧ್ಯಯನ ಪತ್ರಿಕೆ ಝೂಟಾಕ್ಸಾನಲ್ಲಿ(Zootaxa) ಪ್ರಕಟವಾಗಿದೆ. ಈ ತಳಿಯ ಜೇಡ ಕೊನೆಯದಾಗಿ 1902ರಲ್ಲಿ ಕೇರಳದಲ್ಲಿ ಕಾಣಿಸಿಕೊಂಡಿತ್ತು. ಈಗ, 123 ವರ್ಷಗಳ ನಂತರ ಮಧುಗುಂಡಿಯಲ್ಲಿ ಈ ಸಂಕುಲ ಕಾಣಿಸಿಕೊಂಡಿರುವುದು ದಾಖಲಾಗಿದೆ.
  • ಸಂಶೋಧಕರು ಮೊದಲ ಬಾರಿಗೆ ಈ ಪ್ರಬೇಧದ ಗಂಡು, ಹೆಣ್ಣು ಜೇಡಗಳನ್ನು ಗುರುತಿಸಿದ್ದಾರೆ. ಈ ಗುಂಪಿಗೆ ‘‍ಪಿಲಿಯಾ ಮಲೆನಾಡು’ ಎಂಬ ಹೆಸರನ್ನು ಸಂಶೋಧಕರು ಸೂಚಿಸಿದ್ದಾರೆ. ಗೋಚರಿಸಿದ ಸ್ಥಳಕ್ಕೆ ಗೌರವ ಸೂಚಿಸಲು ಈ ಹೆಸರು ನೀಡಲಾಗಿದೆ ಎಂದೂ ಹೇಳುತ್ತಾರೆ.
  • ಮಧುಗುಂಡಿಯ ರಿವರ್‌ ಮಿಸ್ಟ್‌ ರೆಸಾರ್ಟ್‌ನಲ್ಲಿ ನೈಸರ್ಗಿಕ ತಜ್ಞರಾಗಿರುವ, ವನ್ಯಜೀವಿ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅಜಿತ್ ಪಡಿಯಾರ್ ಈ ಹೊಸ ಪ್ರಭೇದವನ್ನು ಮೊದಲಿಗೆ ಗಮನಿಸಿದ್ದಾರೆ. ಒಟ್ಟು 24 ಜೇಡ ಪತ್ತೆಯಾಗಿವೆ. ಅವುಗಳಲ್ಲಿ 17 ಗಂಡು, ಮೂರು ಹೆಣ್ಣು ಮತ್ತು ನಾಲ್ಕು ಎಳೆಯ ಜೇಡಗಳಿವೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಅಪರೂಪದ ‘ಕೇಸರಿ ರೀಡ್‌ಟೇಲ್’ ಚಿಟ್ಟೆಗಳನ್ನು ಅಜಿತ್ ಪಡಿಯಾರ್ ಗುರುತಿಸಿದ್ದರು.
  • ‘ಸಾಮಾನ್ಯವಾಗಿ ಮನೆ ಮತ್ತು ತೋಟಗಳಲ್ಲಿ ಕಾಣಿಸುವ ಜೇಡಗಳಿಗಿಂತ ಈ ಪಿಲಿಯಾ ಪ್ರಭೇದದ ಜೇಡಗಳು ವಿಭಿನ್ನವಾಗಿವೆ. ಅದರಲ್ಲೂ ಹೆಣ್ಣು ಜೇಡ ಮೊದಲ ಬಾರಿಗೆ ಗುರುತಿಸಲ್ಪಟ್ಟಿದೆ. ಇದು ಈ ಪ್ರಭೇದದ ಅಧ್ಯಯನದಲ್ಲಿ ಮಹತ್ವದ ಹೆಜ್ಜೆ’ ಎಂದು ಪಡಿಯಾರ್ ಅಭಿಪ್ರಾಯಪಡುತ್ತಾರೆ.
  • ಗಮನಾರ್ಹವೆಂದರೆ ಈ ಜೇಡಗಳು ಅಪರೂಪದ ಸಸ್ಯ ಪ್ರಭೇದಗಳಾದ ‘ಮೆಮೆಸಿಲಾನ್ ಅಂಬ ಲಾಟಮ್’ ಮತ್ತು ‘ಮೆಮೆಸಿಲಾನ್ ಮಲಬಾರಿಕಮ್’ಗಳಲ್ಲಿ ಮಾತ್ರವೇ ಕಾಣಿಸಿಕೊಳ್ಳುತ್ತಿವೆ. ಸಾಮಾನ್ಯವಾಗಿ ಈ ಸಸ್ಯಗಳ ಎಲೆಗಳ ನಡುವೆ ಅಡಗಿಕೊಂಡಿರುವುದು ಕಂಡುಬಂದಿದೆ ಎಂದು ವಿವರಿಸಿದರು.
  •  
  • ಬಹುಪತ್ನಿತ್ವ ನಿಷೇಧಕ್ಕೆ ಅಸ್ಸಾಂ ಸಚಿವ ಸಂಪುಟ ಅಸ್ತು

ಸಂದರ್ಭ: ಬಹುಪತ್ನಿತ್ವ ನಿಷೇಧಕ್ಕೆ ಸಂಬಂಧಿಸಿದ ಮಸೂದೆಯನ್ನು ಅಸ್ಸಾಂ ಸಚಿವ‌‌ ಸಂಪುಟ ಸಭೆ ಅನುಮೋದಿ ಸಿದೆ. ಮಸೂದೆಯು ಕಾಯ್ದೆಯಾಗಿ ಜಾರಿಗೆ ಬಂದ ನಂತರ ನಿಯಮ ಉಲ್ಲಂಘಿಸಿ, ಬಹುಪತ್ನಿತ್ವ ಅನುಸರಿಸುವವರಿಗೆ ಏಳು ವರ್ಷಗಳವರೆಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

  • ವಿಧಾನ ಮಂಡಲದ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು. ಬಹುಪತ್ನಿತ್ವ ನಿಷೇಧದ ಕಾರಣಕ್ಕೆ ಸಂತ್ರಸ್ತರಾಗುವವರಿಗೆ ನೆರವು ಕಲ್ಪಿಸಲು ಪ್ರತ್ಯೇಕ ಹಣಕಾಸು ನಿಧಿ ಸ್ಥಾಪಿಸಲಾಗುವುದು ಎಂದೂ ಹೇಳಿದ್ದಾರೆ.
  • 15 ಲಕ್ಷ ಟನ್ಸಕ್ಕರೆ ರಫ್ತಿಗೆ ಒಪ್ಪಿಗೆ

ಸಂದರ್ಭ: ಅಕ್ಟೋಬರ್ನಿಂದ ಆರಂಭವಾಗಿರುವ ಪ್ರಸ್ತಕ ವರ್ಷದ ಸಕ್ಕರೆ ಮಾರುಕಟ್ಟೆ ವರ್ಷದಲ್ಲಿ 15 ಲಕ್ಷ ಟನ್ಸಕ್ಕರೆ ರಫ್ತಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

  • ಕಾಕಂಬಿ (ಮೊಲಾಸಿಸ್‌) ರಫ್ತು ಮೇಲಿನ ಶೇಕಡ 50ರಷ್ಟು ಸುಂಕವನ್ನು ತೆಗೆಯಲು ಕೇಂದ್ರ ನಿರ್ಧರಿಸಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನವೆಂಬರ್ 7ರಂದು ಬರೆದ ಪತ್ರದಲ್ಲಿ ಜೋಶಿ ತಿಳಿಸಿದ್ದಾರೆ.
  • ದೇಶದಲ್ಲಿನ ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮದ ಬಗ್ಗೆ ಪತ್ರದಲ್ಲಿ ವಿವರಿಸಿದ್ದಾರೆ.
  • 2024–25ರ ಸಕ್ಕರೆ ಮಾರುಕಟ್ಟೆ ವರ್ಷದಲ್ಲಿ (ಅಕ್ಟೋಬರ್‌ನಿಂದ ಸೆಪ್ಟೆಂಬರ್) 10 ಲಕ್ಷ ಟನ್‌ ಸಕ್ಕರೆ ರಫ್ತಿಗೆ ಕೇಂದ್ರ ಅನುಮತಿ ನೀಡಿತ್ತು. ಈ ಪೈಕಿ 8 ಲಕ್ಷ ಟನ್‌ ಸಕ್ಕರೆ ಮಾತ್ರ ರಫ್ತಾಗಿತ್ತು.
  • ಈ ಬಾರಿ ಉದ್ಯಮವು 20 ಲಕ್ಷ ಟನ್‌ ಸಕ್ಕರೆ ರಫ್ತಿಗೆ ಬೇಡಿಕೆ ಇಟ್ಟಿತ್ತು. ಆದರೆ, 15 ಲಕ್ಷ ಟನ್‌ ರಫ್ತಿಗೆ ಅನುಮತಿ ನೀಡಿದೆ.
  • ಸಕ್ಕರೆ ದಾಸ್ತಾನು ಹೆಚ್ಚಳದಿಂದಾಗಿ ಸಕ್ಕರೆ ರಫ್ತಿಗೆ ಅನುಮತಿ ನೀಡಲು ಕೇಂದ್ರ ಚಿಂತನೆ ನಡೆಸುತ್ತಿದೆ ಎಂದು ಇತ್ತೀಚೆಗೆ ಕೇಂದ್ರ ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಅವರು ಹೇಳಿದ್ದರು.
  • ಕಳೆದ ಸಕ್ಕರೆ ಮಾರುಕಟ್ಟೆ ವರ್ಷದಲ್ಲಿ 34 ಲಕ್ಷ ಟನ್‌ ಸಕ್ಕರೆಯನ್ನು ಎಥೆನಾಲ್‌ ತಯಾರಿಕೆಗೆ ಕೈಗಾರಿಕೆಗಳು ಬಳಕೆ ಮಾಡಿವೆ. ಇದು ಅಂದಾಜು ಮಾಡಿದ್ದ 45 ಲಕ್ಷ ಟನ್‌ಗಿಂತ ಕಡಿಮೆ. ಇದರ ಪರಿಣಾಮವಾಗಿ ಹೆಚ್ಚಿನ ದಾಸ್ತಾನು ಇದೆ ಎಂದು ಚೋಪ್ರಾ ತಿಳಿಸಿದ್ದರು.
  • ಪ್ರಸಕ್ತ ಋತುವಿನಲ್ಲಿ 3.4 ಕೋಟಿ ಟನ್‌ ಸಕ್ಕರೆ ಉತ್ಪಾದನೆ ಆಗಲಿದೆ. ಈ ಪೈಕಿ 2.85 ಕೋಟಿ ಟನ್‌ ಸಕ್ಕರೆಗೆ ದೇಶದ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ ಎಂದು ಹೇಳಿದ್ದರು.
  • ಅತಿದೊಡ್ಡ ಸ್ಕಾಚ್ ವಿಸ್ಕಿ ಮಾರುಕಟ್ಟೆಯಾಗುವತ್ತ ಭಾರತ

ಸಂದರ್ಭ: ಸ್ಕಾಚ್ ವಿಸ್ಕಿಗಳ ಪಾಲಿಗೆ ಜಾಗತಿಕ ಮಟ್ಟದಲ್ಲಿ ಭಾರತವೇ ಅತಿದೊಡ್ಡ ಮಾರುಕಟ್ಟೆಯಾಗಲಿದೆ ಎಂದು ಸ್ಕಾಚ್ವಿಸ್ಕಿ ಅಸೋಸಿಯೇಷನ್ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ಕೆಂಟ್ಹೇಳಿದ್ದಾರೆ.

  • ಭಾರತದ ಸಿಂಗಲ್ ಮಾಲ್ಟ್‌ ವಿಸ್ಕಿಗೆ ಬೇಡಿಕೆ ಹೆಚ್ಚಿರುವುದನ್ನು ಮಾರ್ಕ್‌ ಕೆಂಟ್ ಅವರು ಶ್ಲಾಘಿಸಿದ್ದಾರೆ.
  • ಸ್ಕಾಚ್‌ ವಿಸ್ಕಿಗಳು 180 ದೇಶಗಳ ಮಾರುಕಟ್ಟೆಗಳಿಗೆ ರಫ್ತಾಗುತ್ತವೆ. ಈ ಪೈಕಿ ಭಾರತದ ಮಾರುಕಟ್ಟೆಯು ಸ್ಕಾಚ್ ವಿಸ್ಕಿಗಳ ಪಾಲಿಗೆ ಪ್ರಮಾಣದ ಲೆಕ್ಕದಲ್ಲಿ ಈಗಾಗಲೇ ಅತಿದೊಡ್ಡದು. ಆದರೆ ಮೌಲ್ಯದ ಲೆಕ್ಕದಲ್ಲಿ ಭಾರತದ ಮಾರುಕಟ್ಟೆಯು ಮೊದಲ ಐದು ಮಾರುಕಟ್ಟೆಗಳ ಪೈಕಿ ಒಂದಾಗಿದೆ ಎಂದು ಕೆಂಟ್ ಹೇಳಿದ್ದಾರೆ.
  • ಭಾರತ ಮತ್ತು ಬ್ರಿಟನ್ನಡುವಿನ ಮುಕ್ತ ವ್ಯಾಪಾರ ಒಪ್ಪಂದವು (ಎಫ್ಟಿಎ) ಅನುಷ್ಠಾನಕ್ಕೆ ಬಂದ ನಂತರದಲ್ಲಿ, ಹಲವು ವಿಧದ ಸ್ಕಾಚ್ವಿಸ್ಕಿಗಳು ಭಾರತಕ್ಕೆ ಬರಲಿವೆ. ಅದರಲ್ಲೂ ಮುಖ್ಯವಾಗಿ, ಸ್ಕಾಟ್ಲೆಂಡಿನ ಸಣ್ಣ ಕಂಪನಿಗಳ ಸ್ಕಾಚ್‌ ವಿಸ್ಕಿಗಳು ಕೂಡ ಭಾರತದಲ್ಲಿ ಲಭ್ಯವಾಗಲಿವೆ ಎಂದು ಮಾರ್ಕ್‌ ಕೆಂಟ್‌ ಹೇಳಿದ್ದಾರೆ.
  • ಜಪಾನ್‌: ಪ್ರಬಲ ಭೂಕಂಪನ, ಸುನಾಮಿ ಎಚ್ಚರಿಕೆ

ಸಂದರ್ಭ: ಉತ್ತರ ಜಪಾನ್ನಲ್ಲಿ ಭಾನುವಾರ ಸಂಜೆ ಪ್ರಬಲ ಭೂಕಂಪನ ಸಂಭವಿಸಿದ್ದು, ಬಳಿಕ ಹಲವು ಬಾರಿ ಭೂಮಿ ಕಂಪಿಸಿದೆ ಎಂದು ಜಪಾನ್ಹವಾಮಾನ ಇಲಾಖೆ ತಿಳಿಸಿದೆ. ಸುನಾಮಿ ಸಂಭವಿಸುವ ಸಾಧ್ಯತೆ ಇದೆ ಎಂದು ಅದು ಎಚ್ಚರಿಸಿದೆ.

  • ಮೊದಲಿಗೆ 6.7 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಇವಾಟೆ ಕರಾವಳಿಯ 10 ಕಿ.ಮೀ. ಆಳದಲ್ಲಿ ಭೂಕಂಪನ ಕೇಂದ್ರಬಿಂದು ಪತ್ತೆ ಯಾಗಿದೆ ಎಂದು ತಿಳಿಸಿದೆ.
  • ಸುನಾಮಿ ಕಾರಣ ಕರಾವಳಿ ಪ್ರದೇಶಗಳಿಂದ ದೂರ ಇರುವಂತೆ ಜನರಿಗೆ ಮುನ್ಸೂಚನೆ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಮತ್ತೆ ಭೂಮಿ ಕಂಪಿಸುವ ಸಾಧ್ಯತೆ ಇದೆ ಎಂದೂ ಎಚ್ಚರಿಸಲಾಗಿದೆ. ಭೂಕಂಪನದಿಂದ ಉಂಟಾದ ಹಾನಿಯ ಬಗ್ಗೆ ಸದ್ಯಕ್ಕೆ ಯಾವುದೇ ವರದಿಯಾಗಿಲ್ಲ.
  • 50 ಸಂಸ್ಥೆ ಜೊತೆ ಡಿಪಿಐಐಟಿ ಒಪ್ಪಂದ

ಸಂದರ್ಭ: ತಯಾರಿಕೆಗೆ ಉತ್ತೇಜನ ನೀಡಲು ಮತ್ತು ನವೋದ್ಯಮಗಳಿಗೆ ಪೂರಕವಾದ ನಾವೀನ್ಯ ಪರಿಸರದ ವ್ಯವಸ್ಥೆ ರೂಪಿಸಲು ಐಟಿಸಿ, ಫ್ಲಿಪ್ಕಾರ್ಟ್‌, ಮರ್ಸಿಡಿಸ್ಬೆಂಜ್ ಸೇರಿದಂತೆ 50ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನಾ ಇಲಾಖೆ (ಡಿಪಿಐಐಟಿ) ಒಪ್ಪಂದ ಮಾಡಿಕೊಂಡಿದೆ.

  • ಈ ಕುರಿತ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೋಟ್, ಎಚ್‌ಡಿಎಫ್‌ಸಿ ಕ್ಯಾಪಿಟಲ್ ಅಡ್ವೈಸರ್ಸ್‌, ಹೀರೊ ಮೋಟೊ, ಜೆಪ್ಟೊ, ಕೋಟಕ್ ಮಹೀಂದ್ರ ಬ್ಯಾಂಕ್, ಯೆಸ್ ಬ್ಯಾಂಕ್, ಪೇಟಿಎಂ, ವಾಲ್‌ಮಾರ್ಟ್‌ ಮತ್ತು ಏಥರ್‌ ಎನರ್ಜಿ ಒಪ್ಪಂದ ಮಾಡಿಕೊಂಡ ಕಂಪನಿಗಳ ಪಟ್ಟಿಯಲ್ಲಿವೆ.
  • ಈ ಒಪ್ಪಂದದ ಭಾಗವಾಗಿ ನವೋದ್ಯಮಗಳಿಗೆ ಪೂರಕವಾದ ವ್ಯವಸ್ಥೆಗೆ ಉತ್ತೇಜನ ನೀಡಲಾಗುವುದು. ನವೋದ್ಯಮಗಳ ಆರಂಭಿಕ ಹಂತದಲ್ಲಿ ಅಗತ್ಯವಾಗಿ ಬೇಕಿರುವ ಎಲ್ಲ ನೆರವು ಒದಗಿಸುವ ತಯಾರಿಕಾ ವಲಯದ ಇನ್‌ಕ್ಯುಬೇಟರ್‌ ಗಳನ್ನು ಅಭಿವೃದ್ಧಿಪಡಿಸುವ ಮೂಲಕ ಉತ್ಪಾದನೆಯಲ್ಲಿ ನಾವೀನ್ಯವನ್ನು ಹೆಚ್ಚಿಸುವ ಉದ್ದೇಶ ಇದೆ ಎಂದು ಅಧಿಕಾರಿ ಹೇಳಿದ್ದಾರೆ.
  • ಶೂಟಿಂಗ್ವಿಶ್ವಕಪ್: ಅನೀಶ್ಗೆ ಬೆಳ್ಳಿ

ಸಂದರ್ಭ: ಭಾರತದ ಅನೀಶ್ಭಾನವಾಲಾ ಅವರು ಇಲ್ಲಿ ನಡೆಯುತ್ತಿರುವ ಐಎಸ್ಎಸ್ಎಫ್ವಿಶ್ವ ಶೂಟಿಂಗ್ಚಾಂಪಿಯನ್ಷಿಪ್ ಪುರುಷರ 25 ಮೀ. ರ್ಯಾಪಿಡ್ಫೈಯರ್ಪಿಸ್ತೂಲ್ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದರು.

  • 23 ವರ್ಷ ವಯಸ್ಸಿನ ಹರಿಯಾಣದ ಶೂಟರ್‌ ಫೈನಲ್‌ ಸುತ್ತಿನಲ್ಲಿ 28 ಪಾಯಿಂಟ್ಸ್‌ ಕಲೆಹಾಕಿದರು. ಫ್ರಾನ್ಸ್‌ನ ಕ್ಲೆಮೆಂಟ್‌ ಬೆಸಾಗೆಟ್‌ (31) ಸ್ವರ್ಣ ಗೆದ್ದರೆ, ಉಕ್ರೇನ್‌ನ ಮಾಕ್ಸಿಮ್‌ ಹರೊಡಿನೆಟ್ಸ್‌ (25) ಕಂಚಿನ ಪದಕ ತಮ್ಮದಾಗಿಸಿಕೊಂಡರು.

ಪ್ರಚಲಿತ ವಿದ್ಯಮಾನಗಳು: 8ನೇ ನವೆಂಬರ್ 2025

  • ಕಬ್ಬಿಗೆ ₹3,300 ದರ, ₹50 ಪ್ರೋತ್ಸಾಹಧನ

ಸಂದರ್ಭ: ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಜತೆ ನಡೆಸಿದ ಸುದೀರ್ಘ ಮಾತುಕತೆ ಬಳಿಕ ರಾಜ್ಯ ಸರ್ಕಾರ, ಪ್ರತಿ ಟನ್ಕಬ್ಬಿಗೆ ₹3,300 ದರ ನಿಗದಿ ಮಾಡಿದೆ.

  • ‘ಕೇಂದ್ರದಿಂದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತರಿಗೆ ಅನ್ಯಾಯವಾಗಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಮಾಲೀಕರು, ರೈತರನ್ನು ಒಳಗೊಂಡು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • ಸಕ್ಕರೆಯ ಎಂಎಸ್‌ಪಿ ಹೆಚ್ಚಳ, ಎಥೆನಾಲ್ ಹಂಚಿಕೆ ಹೆಚ್ಚಳ, ಸಕ್ಕರೆ ರಫ್ತು ಮಿತಿಯನ್ನು ಹೆಚ್ಚಿಸುವುದು ಸೇರಿದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದರು.
  • ಕಾರ್ಖಾನೆಗಳು ಒಂದು ಟನ್ಗೆ ಹಿಂದೆ ನಿಗದಿಯಾಗಿದ್ದ ₹3,200 ಜತೆಗೆ ಹೆಚ್ಚುವರಿಯಾಗಿ ₹50 ನೀಡಿದರೆ, ರಾಜ್ಯ ಸರ್ಕಾರವು ಒಂದು ಅವಧಿಯ ಪ್ರೋತ್ಸಾಹ ಧನವಾಗಿ ₹50 ಪಾವತಿಸಲಿದೆ. ಸಾಗಣೆ ಮತ್ತು ಕಟಾವು ವೆಚ್ಚ ಹೊರತುಪಡಿಸಿ ಶೇ 11.25 ಇಳುವರಿ ಪ್ರಮಾಣ ಇರುವ ಪ್ರತಿ ಟನ್ಕಬ್ಬಿಗೆ ₹3,300 ಹಾಗೂ ಶೇ 10.5 ಇಳುವರಿ ಪ್ರಮಾಣ ಇರುವ ಕಬ್ಬಿಗೆ ₹3,200 ದರ ಸಿಗಲಿದೆ.
  • ಕೇಂದ್ರ ಸರ್ಕಾರ ಕಟಾವು ಮತ್ತು ಸಾಗಣೆ ವೆಚ್ಚ ಸೇರಿಸಿ ಶೇ 10.5 ಇಳುವರಿ ಪ್ರಮಾಣ ಇರುವ ಪ್ರತಿ ಟನ್‌ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ದರ (ಎಫ್‌ಆರ್‌ಪಿ) ₹3,550 ನಿಗದಿಪಡಿಸಿದೆ. ಸಾಗಣೆ, ಕಟಾವು ವೆಚ್ಚ ಹೊರತುಪಡಿಸಿ ಸಕ್ಕರೆ ಕಾರ್ಖಾನೆಗಳಿಗೆ ಪೂರೈಸುವ ಕಬ್ಬಿಗೆ ₹3,500 ದರ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿ, ವಿಜಯ‍ಪುರ, ಬಾಗಲಕೋಟೆ, ಹಾವೇರಿ ಮತ್ತು ಕಲಬುರಗಿ ಸೇರಿದಂತೆ ವಿವಿಧೆಡೆ ರೈತರು ಅ.30ರಿಂದ ಪ್ರತಿಭಟನೆ ನಡೆಸುತ್ತಿದ್ದರು.
  • ಸಚಿವರು ಸ್ಥಳಕ್ಕೆ ತೆರಳಿ ಮಾತುಕತೆ ನಡೆಸಿದರೂ ರೈತರು ಪಟ್ಟು ಸಡಿಲಿಸಿರಲಿಲ್ಲ. ಬೆಳಗಾವಿ ಜಿಲ್ಲಾಧಿಕಾರಿ ನಿಗದಿ ಮಾಡಿದ್ದ ₹3,200 ದರವನ್ನೂ ಬೆಳೆಗಾರರು ತಿರಸ್ಕರಿಸಿದ್ದರು.
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಸಭೆ ನಡೆಸಿ, ಪರಿಷ್ಕೃತ ದರ ಘೋಷಣೆ ಮಾಡಿದರು. ಕಬ್ಬಿನ ಇಳುವರಿ ಪ್ರಮಾಣ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸವಾಗುತ್ತದೆ. ಹಾಗಾಗಿ, ಎಲ್ಲ ಇಳುವರಿ ಪ್ರಮಾಣದ ಕಬ್ಬಿಗೂ ಪ್ರತಿ ಟನ್ಗೆ ₹100ರೂ ಹೆಚ್ಚಳ ಅನ್ವಯವಾಗಲಿದೆ ಎಂದು ಖಚಿತಪಡಿಸಿದರು.
  • ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ), ಕಬ್ಬಿಗೆ ಎಫ್ಆರ್ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಎಥೆನಾಲ್ಹಂಚಿಕೆ, ಸಕ್ಕರೆ ರಫ್ತು ಮಿತಿ ನಿಗದಿಪಡಿಸುವುದೂ ಕೇಂದ್ರ ಸರ್ಕಾರ.
  • ಹಣಕಾಸು ವಲಯದಲ್ಲಿ ಸುಧಾರಣೆ ಅಗತ್ಯ: ವಿಶ್ವಬ್ಯಾಂಕ್

ಸಂದರ್ಭ: 2047 ವೇಳೆಗೆ ಭಾರತವು 30 ಟ್ರಿಲಿಯನ್ ಡಾಲರ್ (₹2,660 ಲಕ್ಷ ಕೋಟಿ) ಆರ್ಥಿಕತೆಯಾಗಲು ಹಣಕಾಸು ವಲಯದಲ್ಲಿ ಹೆಚ್ಚಿನ ಸುಧಾರಣೆಗಳು ಮತ್ತು ಖಾಸಗಿ ಬಂಡವಾಳಕ್ಕೆ ಉತ್ತೇಜನ ನೀಡುವ ಅಗತ್ಯವಿದೆ ಎಂದು ವಿಶ್ವಬ್ಯಾಂಕ್ ವರದಿ ತಿಳಿಸಿದೆ.

  • ಭಾರತದ ‘ವಿಶ್ವ ದರ್ಜೆ’ಯ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಸರ್ಕಾರದ ಕಾರ್ಯಕ್ರಮಗಳಿಂದ ಪುರುಷರು ಮತ್ತು ಮಹಿಳೆಯರಿಗೆ ಹಣಕಾಸು ಸೇವೆಗಳು ಸುಲಭವಾಗಿ ಲಭ್ಯವಾಗುವಂತಾಗಿವೆ ಎಂದು ವಿಶ್ವ ಬ್ಯಾಂಕ್‌ನ ಹಣಕಾಸು ವಲಯದ ಮೌಲ್ಯಮಾಪನ ವರದಿ ತಿಳಿಸಿದೆ.
  • ವಿಶೇಷವಾಗಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣ ಹೆಚ್ಚಳವಾಗಬೇಕು. ವ್ಯಕ್ತಿಗಳು ಮತ್ತು ಎಂಎಸ್‌ಎಂಇಗಳಿಗೆ ಹೆಚ್ಚಿನ ಹಣಕಾಸು ಸೌಲಭ್ಯ ಲಭ್ಯವಾಗುವಂತೆ ಮಾಡಬೇಕು. ಸಹಕಾರಿ ಬ್ಯಾಂಕ್‌ಗಳ ಮೇಲೆ ಪ್ರಾಧಿಕಾರದ ನಿಯಂತ್ರಣ ಅಗತ್ಯ ಎಂದು ಸಲಹೆ ನೀಡಿದೆ. 
  • ಹಣಕಾಸು ವಲಯದ ಮೌಲ್ಯಮಾಪನ ಕಾರ್ಯಕ್ರಮವು (ಎಫ್‌ಎಸ್‌ಎಪಿ) ಅಂತರರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವ ಬ್ಯಾಂಕ್‌ನ ಜಂಟಿ ಕಾರ್ಯಕ್ರಮವಾಗಿದೆ. ಇದು ದೇಶದ ಹಣಕಾಸು ವಲಯದ ಸಮಗ್ರ ಮತ್ತು ಆಳವಾದ ವಿಶ್ಲೇಷಣೆಯನ್ನು ಮಾಡುತ್ತದೆ.
  • ಜಿಡಿಪಿ: ಶೇ 6.8ರಷ್ಟು ನಿರೀಕ್ಷೆ

ಸಂದರ್ಭ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 6.8ಕ್ಕಿಂತಲೂ ಹೆಚ್ಚಾಗುವ ವಿಶ್ವಾಸವಿದೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಹೇಳಿದ್ದಾರೆ.

  • ಜಿಎಸ್‌ಟಿ ಇಳಿಕೆ ಮತ್ತು ಆದಾಯ ತೆರಿಗೆ ವಿನಾಯಿತಿಯಿಂದ ಜನರು ಹೆಚ್ಚು ಹಣ ವ್ಯಯಿಸಲು ಉತ್ತೇಜನ ನೀಡಿದೆ ಎಂದು ಹೇಳಿದ್ದಾರೆ. 
  • ಆರ್ಥಿಕ ಸಮೀಕ್ಷೆ ವರದಿ ಸಹ ಜಿಡಿಪಿ ಬೆಳವಣಿಗೆ ಶೇ 6.3ರಿಂದ ಶೇ 6.8ರಷ್ಟಾಗಲಿದೆ ಎಂದು ಅಂದಾಜಿಸಿದೆ. ಅಮೆರಿಕ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವು ಬೆಳವಣಿಗೆಗೆ ಉತ್ತೇಜನ ನೀಡಲಿದೆ. ಈ ಒಪ್ಪಂದ ಶೀಘ್ರ ಆಗಲಿದೆ ಎಂದು ಹೇಳಿದ್ದಾರೆ.
  • ಪ್ರಸಕ್ತ ಆರ್ಥಿಕ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 7.8ರಷ್ಟಾಗಿತ್ತು. ಕೃಷಿ ವಲಯ ಮತ್ತು ಸೇವಾ ವಲಯದಿಂದ ಈ ಪ್ರಗತಿ ಸಾಧಿಸಿತ್ತು.
  • ರಾಜ್ಯದ ಕಚ್ಚಾ ಗೇರು ಆಮದು ಹೆಚ್ಚಳ

ಸಂದರ್ಭ: 14ರಿಂದ 16ರವರೆಗೆ ಗೋಡಂಬಿ ಶತಮಾನೋತ್ಸವ ಶೃಂಗ:  ‘ಜಗತ್ತಿನ ಒಟ್ಟು ಗೋಡಂಬಿ ಬಳಕೆಯಲ್ಲಿ ಭಾರತದ ಪ್ರಮಾಣ ಮೂರನೇ ಒಂದರಷ್ಟಿದೆ. ದೇಶದ ಗೋಡಂಬಿ ಸಂಸ್ಕರಣೆಯಲ್ಲಿ ಕರ್ನಾಟಕದ ಪಾಲು ಶೇ 25ರಷ್ಟಿದೆ. ರಾಜ್ಯದ ಕಚ್ಚಾಗೇರು ಆಮದು ಪ್ರಮಾಣ 5 ಲಕ್ಷ ಟನ್ಗೆ ತಲುಪಿದೆ ಎಂದು ಕರ್ನಾಟಕ ಗೇರು ಉತ್ಪಾದಕರ ಸಂಘ ಹೇಳಿದೆ.

  • ‘ಮಂಗಳೂರಿನ ಗೇರು ಸಂಸ್ಕರಣಾ ಉದ್ಯಮಕ್ಕೆ (1925ರಲ್ಲಿ ಆರಂಭ) ನೂರು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ‘ಗೋಡಂಬಿ ಶತಮಾನೋತ್ಸವ ಶೃಂಗ’ವನ್ನು ಇದೇ 14ರಿಂದ 16ರವರೆಗೆ ಇಲ್ಲಿ ಆಯೋಜಿಸಲಾಗಿದೆ’ ಎಂದು ಸಂಘದ ಅಧ್ಯಕ್ಷ ಎಸ್‌. ಅನಂತ ಕೃಷ್ಣ ರಾವ್‌ ಹಾಗೂ ಶೃಂಗದ ಸಂಚಾಲಕ ಕೆ. ಪ್ರಕಾಶ್‌ ಕಲ್ಬಾವಿ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  • ‘ಗೇರು ಸಂಸ್ಕರಣೆಯಲ್ಲಿ ಹೊಸ ಆವಿಷ್ಕಾರಗಳ ಪರಿಚಯ, ಸಮಸ್ಯೆಗಳ ಬಗ್ಗೆ ಚರ್ಚೆ ಇರಲಿದೆ. ದೇಶದಲ್ಲಿ ಗೋಡಂಬಿ ಸಂಸ್ಕರಣೆಯಲ್ಲಿ ತೊಡಗಿರುವ ಸಾವಿರಕ್ಕೂ ಹೆಚ್ಚು ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ’ ಎಂದರು.
  • ‘ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಅದರಲ್ಲೂ ಮಂಗಳೂರು ಗೋಡಂಬಿಗೆ ಬೇಡಿಕೆ ಹೆಚ್ಚಿದೆ. ಆರಂಭದಲ್ಲಿ ವರ್ಷಕ್ಕೆ 50 ಸಾವಿರ ಟನ್‌ ಇದ್ದ ಕಚ್ಚಾ ಗೇರು ಬೀಜ ಸಂಸ್ಕರಣೆಯ ಪ್ರಮಾಣ ಈಗ ವರ್ಷಕ್ಕೆ 5 ಲಕ್ಷ ಟನ್‌ಗೆ ತಲುಪಿದೆ. ನವಮಂಗಳೂರು ಬಂದರಿಗೆ ಏಳು ತಿಂಗಳಲ್ಲಿ 3.45 ಲಕ್ಷ ಟನ್‌ ಕಚ್ಚಾಗೇರು ಆಮದಾಗಿದ್ದು, ಒಂದು ವರ್ಷದಲ್ಲಿ ಇದರ ಪ್ರಮಾಣ 5 ಲಕ್ಷ ಟನ್‌ ಆಗಲಿದೆ’ ಎಂದರು.
  • ಭಾರತದ ಸಂಸ್ಕರಣಾ ಉದ್ಯಮಕ್ಕೆ 20 ಲಕ್ಷ ಟನ್‌ ಕಚ್ಚಾ ಗೇರು ಬೀಜ ಬೇಕು. ಆದರೆ, ನಮ್ಮ ದೇಶದಲ್ಲಿ ಬೆಳೆಯುವುದು ಸರಾಸರಿ 5 ಲಕ್ಷ ಟನ್‌ ಮಾತ್ರ. ನಮಗೆ ಬೇಕಿರುವ ಕಚ್ಚಾ ಗೇರು ಬೀಜಗಳ ಪೈಕಿ ಶೇ 25ರಷ್ಟು ಮಾತ್ರ ದೇಶೀಯವಾಗಿ ಬೆಳೆಯಲಾಗುತ್ತಿದೆ. ಶೇ 75ರಷ್ಟು ಹೊರದೇಶಗಳನ್ನೇ ಅವಲಂಬಿಸಿದ್ದೇವೆ.
  • ಕರ್ನಾಟಕದಲ್ಲಿ ಕಚ್ಚಾ ಗೇರು ಬೆಳೆಯುವ ಪ್ರಮಾಣ 50 ಸಾವಿರ ಟನ್‌ನಷ್ಟು ಮಾತ್ರ. ರಾಜ್ಯದ 26 ಜಿಲ್ಲೆಗಳಲ್ಲಿ ಗೇರು ಕೃಷಿ ಇದ್ದು, ಇದಕ್ಕೆ ಇನ್ನಷ್ಟು ಉತ್ತೇಜನ ನೀಡಬೇಕು. ಗೇರು ಹಣ್ಣಿನಿಂದ ಕಚ್ಚಾ ಗೇರು ಬೀಜ ಹೊರ ತೆಗೆದ ನಂತರ, ಆ ಹಣ್ಣು (ಹಣ್ಣಿನ ಶೇ 80ರಷ್ಟು ಭಾಗ) ಈಗ ವ್ಯರ್ಥವಾಗುತ್ತಿದೆ. ಅದರಿಂದ ಉಪ ಉತ್ಪನ್ನ ತಯಾರಿಸಿ ಈ ಬೆಳೆಯನ್ನು ಲಾಭದಾಯಕವಾಗಿಸಬೇಕಿದೆ ಎಂದರು.
  • ದೇಶೀಯ ಮಾರುಕಟ್ಟೆಯಲ್ಲಿ ಬೇಡಿಕೆ ಮತ್ತು ದರ ಹೆಚ್ಚಾಗಿದೆ. ಹೀಗಾಗಿ ನಮ್ಮ ದೇಶದ ಗೋಡಂಬಿ ರಫ್ತು ಪ್ರಮಾಣ ಕೇವಲ 50 ಸಾವಿರ ಟನ್‌ನಷ್ಟು ಮಾತ್ರ ಇದೆ ಎಂದು ಹೇಳಿದರು.
  • ರಾಜ್ಯದ ಕರಾವಳಿಯಲ್ಲಿ ಅಂದಾಜು 400 ಗೋಡಂಬಿ ಸಂಸ್ಕರಣಾ ಘಟಕಗಳು ಇದ್ದವು. ಈಗ 250 ಘಟಕಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಯಾಂತ್ರೀಕರಣಕ್ಕೆ ಒಗ್ಗಿಕೊಳ್ಳದಿರುವುದು ಮತ್ತಿತರ ಕಾರಣ ಕೆಲ ಘಟಕಗಳು ಮುಚ್ಚಿವೆ. ಘಟಕಗಳು ಕಡಿಮೆಯಾದರೂ, ಗೋಡಂಬಿ ಸಂಸ್ಕರಣೆಯ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ಅವರು ಹೇಳಿದರು.
  • ಬೆಂಗಳೂರುಎರ್ನಾಕುಳಂವಂದೇ ಭಾರತ್ಗೆಹಸಿರು ನಿಶಾನೆ ಇಂದು

ಸಂದರ್ಭ: ಬೆಂಗಳೂರು ಎರ್ನಾಕುಳಂ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ಆಗಿ ಹಸಿರು ನಿಶಾನೆ ತೋರಲಿದ್ದಾರೆ.

  • ಎರ್ನಾಕುಲಂ ಜಂಕ್ಷನ್‌ನಿಂದ ಹೊರಡುವ ರೈಲು ತ್ರಿಶ್ಶೂರ್, ಪಾಲಕ್ಕಾಡ್‌, ಕೊಯಮತ್ತೂರು, ತಿರುಪ್ಪೂರು, ಈರೋಡ್, ಸೇಲಂ, ಕೃಷ್ಣರಾಜಪುರಂ ನಿಲ್ದಾಣಗಳ ಮೂಲಕ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ತಲುಪಲಿದೆ. ಕೇರಳ–ತಮಿಳುನಾಡು–ಕರ್ನಾಟಕದಲ್ಲಿ ಸಂಚರಿಸುವ ಈ ರೈಲು ಎಂಟು ಕೋಚ್‌ಗಳನ್ನು ಒಳಗೊಂಡಿರಲಿದೆ.
  • 97 ಜೆಟ್ಎಂಜಿನ್ಖರೀದಿಗೆ ಒಪ್ಪಂದ

ಸಂದರ್ಭ: ಹಿಂದೂಸ್ಥಾನ್ಏರೋನಾಟಿಕ್ಸ್ಲಿಮಿಟೆಡ್‌ (ಎಚ್ಎಎಲ್‌) ತನ್ನ ತೇಜಸ್ಲಘು ಯುದ್ಧ ವಿಮಾನ ಕಾರ್ಯಕ್ರಮಕ್ಕಾಗಿ 97 ಜೆಟ್ಎಂಜಿನ್ಗಳನ್ನು ಖರೀದಿಸಲು ಜಿಇ ಏರೋಸ್ಪೇಸ್ಜತೆ ಒಪ್ಪಂದ ಮಾಡಿಕೊಂಡಿದೆ.

  • ಒಪ್ಪಂದದ ಪ್ರಕಾರ, ಎಫ್‌404–ಜಿಇ–ಐಎನ್‌20 ಎಂಜಿನ್‌ಗಳ ವಿತರಣೆಯು 2027ರಿಂದ ಪ್ರಾರಂಭವಾಗಲಿದ್ದು, 2032ರ ವೇಳೆಗೆ ಪೂರೈಕೆ ಪೂರ್ಣಗೊಳಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  • 97 ಲಘು ಯುದ್ಧ ವಿಮಾನ ಎಂಕೆ1ಎ ಕಾರ್ಯಕ್ರಮವನ್ನು ಕಾರ್ಯಗತ ಗೊಳಿಸಲು ಎಂಜಿನ್‌ಗಳು ಹಾಗೂ ‘ಪೂರಕ ಪ್ಯಾಕೇಜ್’ ಖರೀದಿಗೆ ಜನರಲ್‌ ಎಲೆಕ್ಟ್ರಿಕ್‌ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.
  • ಭಾರತೀಯ ವಾಯುಪಡೆಗೆ 97 ತೇಜಸ್‌ ಎಂಕೆ–1ಎ ಲಘು ಯುದ್ಧ ವಿಮಾನಗಳನ್ನು ಖರೀದಿಸಲು ರಕ್ಷಣಾ ಸಚಿವಾಲಯವು ಎಚ್‌ಎಎಲ್‌ನೊಂದಿಗೆ ಸೆಪ್ಟೆಂಬರ್‌ನಲ್ಲಿ ₹62,370 ಕೋಟಿ ಮೊತ್ತದ ಒಪ್ಪಂದ ಮಾಡಿಕೊಂಡಿತ್ತು.
  • ಭಾರತ ಹಾಕಿಗೆ ಶತಮಾನ ಸಂಭ್ರಮ

ಸಂದರ್ಭ: ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ದಿಗ್ಗಜರು ಅಪರೂಪದ ಛಾಯಾಚಿತ್ರ, ಸ್ಮರಣಿಕೆಗಳ ಪ್ರದರ್ಶನ: ಇಲ್ಲಿನ ಹೆಗ್ಗುರುತಾದ ಮೇಜರ್ ಧ್ಯಾನ್ಚಂದ್ ಕ್ರೀಡಾಂಗಣ ಸಂಭ್ರಮದಿಂದ ಕಳೆಗಟ್ಟಿತ್ತು. ತಲೆಮಾರು ಗಳನ್ನು ಪ್ರಭಾವಿಸಿದ ದಿಗ್ಗಜ ಆಟಗಾರರು, ಒಲಿಂಪಿಕ್ಸ್ವರ್ಣ ವಿಜೇತ ಆಟಗಾರರು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.

  • ಭಾರತದ ಹಾಕಿ ಸುವರ್ಣಯುಗದಲ್ಲಿ ಆಡಿದ್ದ ಗುರುಬಕ್ಷ್‌ ಸಿಂಗ್, ಅಸ್ಲಂ ಶೇರ್‌ ಖಾನ್‌, ಹರ್ಬಿಂದರ್ ಸಿಂಗ್‌, ಅಜಿತ್ ಪಾಲ್‌ ಸಿಂಗ್‌, ಅಶೋಕ್ ಕುಮಾರ್, ಬಿ.ಪಿ.ಗೋವಿಂದ, ಜಾಫರ್ ಇಕ್ಬಾಲ್‌, ಬ್ರಿಗೇಡಿಯರ್ ಹರಚರಣ್‌ ಸಿಂಗ್‌, ವಿನೀತ್ ಕುಮಾರ್, ಮಿರ್‌ ರಂಜನ್‌ ನೇಗಿ, ರೋಮಿಯೊ ಜೇಮ್ಸ್‌, ಅಸುಂತ ಲಾಕ್ರಾ, ಸುಭದ್ರ ಪ್ರಧಾನ್ ಇವರಲ್ಲಿ ಒಳಗೊಂಡಿದ್ದರು.
  • ಈ ಸಂದರ್ಭದಲ್ಲಿ ಹಾಜರಿದ್ದ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರು ಭಾರತದ ರಾಷ್ಟ್ರೀಯ ಕ್ರೀಡೆಯ ವೈಭವಯುತ ಪಯಣವನ್ನು ಕೊಂಡಾಡಿದರು. ದೇಶದ ಕ್ರೀಡಾ ಪರಂಪರೆಯಲ್ಲಿ ಈ ಆಟದ ಗಟ್ಟಿ ಬೇರುಗಳನ್ನು ನೆನಪಿಸಿದರು.
  • ‘ಈ ಕ್ರೀಡೆಯು ದೇಶದಲ್ಲಿ ವಿವಿಧ ಹಂತಗಳನ್ನು ದಾಟಿದೆ. ಭಾರತ ಕ್ರೀಡಾ ಕ್ಷೇತ್ರದಲ್ಲಿ ಮೆರೆಯಬಹುದು  ಎಂಬುದನ್ನು ಭಾರತ ಹಾಕಿ ತಂಡವು ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನದ ಮೂಲಕ ಸಾಧಿಸಿ ತೋರಿಸಿತು’ ಎಂದು ಮಾಂಡವೀಯ ಬಣ್ಣಿಸಿದರು.

ಪ್ರಚಲಿತ ವಿದ್ಯಮಾನಗಳು: 7ನೇ ನವೆಂಬರ್ 2025

  • ಸಂಸ್ಕರಿಸಿದ ನೀರಿನ ಗುಣಮಟ್ಟಕ್ಕೆ ಒಂದೇ ನೀತಿ

ಸಂದರ್ಭ:ಸಂಸ್ಕರಿಸಿದ ನೀರಿನ ಗುಣಮಟ್ಟದ ಖಾತ್ರಿಗಾಗಿ ರಾಷ್ಟ್ರಮಟ್ಟ ದಲ್ಲಿ ಏಕ ರೂಪದ ನೀತಿ ರೂಪಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್‌ ತಿಳಿಸಿದರು.

  • ನೀತಿ ಆಯೋಗವು ಬೆಂಗಳೂರು ಜಲ ಮಂಡಳಿಯ ಸಹಯೋಗದಲ್ಲಿ ನಗರದಲ್ಲಿ ಆಯೋಜಿಸಿರುವ ಭಾರತದಲ್ಲಿ ಸಂಸ್ಕರಿಸಿದ ನೀರಿನ ಪುನರ್‌ಬಳಕೆ ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
  • ‘ನಗರೀಕರಣದ ಪ್ರಭಾವದಿಂದಾಗಿ ನೀರಿನ ಬಳಕೆ ಪ್ರಮಾಣ ಹೆಚ್ಚಳವಾಗಿದೆ. ಆದರೆ, ಭಾರತದಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿದೆ. ಅಂತರ್ಜಲ ಹಾಗೂ ನದಿ ನೀರಿನ ಅವಲಂಬನೆ ಜತೆಗೆ ಬಳಸಿದ ನೀರಿನ ಸಂಸ್ಕರಣೆಗೆ ಒತ್ತು ನೀಡಲಾಗುತ್ತಿದೆ.
  • ಈಗಾಗಲೇ ಕರ್ನಾಟಕವೂ ಸೇರಿ 11 ರಾಜ್ಯಗಳಲ್ಲಿ ಸಂಸ್ಕರಿಸಿದ ನೀರಿನ ಪುನರ್ಬಳಕೆ ನೀತಿ ಇದೆ. 2030ರೊಳಗೆ ಶೇ 50, 2045ರ ಹೊತ್ತಿಗೆ ಶೇ 100ರಷ್ಟು ನೀರಿನ ಪುನರ್‌ ಬಳಕೆಯನ್ನು ಮಾಡುವತ್ತ ದೇಶ ಹೆಜ್ಜೆ ಇಡಲೇಬೇಕಾಗಿರುವುದರಿಂದ ಏಕರೂಪದ ನೀತಿ ಜಾರಿಗೆ ಪ್ರಯತ್ನ ನಡೆದಿದೆ’ ಎಂದು ವಿವರಿಸಿದರು.
  • ‘ಭಾರತದ ನಗರ ಪ್ರದೇಶಗಳಲ್ಲಿ ಪ್ರತಿ ನಿತ್ಯ 72,368 ಮಿಲಿಯನ್ ಲೀಟರ್‌ (ಎಂಎಲ್‌ಡಿ) ಕೊಳಚೆ ನೀರು ಉತ್ಪಾದನೆಯಾಗುತ್ತಿದೆ. ಇದರಲ್ಲಿ 31,885 ಎಂಎಲ್‌ಡಿ ಸಂಸ್ಕರಣೆ ಯಾಗುತ್ತಿದೆ. ಶೇ 60ರಷ್ಟು ಇನ್ನೂ ಸಂಸ್ಕರಣೆಯಾಗಬೇಕಿದೆ. ಬೆಂಗಳೂರಿನಲ್ಲಿ ನಿತ್ಯ 2,200 ಎಂಎಲ್ಡಿ ಕೊಳಚೆ ನೀರು ಸಂಗ್ರಹವಾಗುತ್ತಿದ್ದು 1,300 ಎಂಎಲ್ಡಿ ಸಂಸ್ಕರಣೆಯಾಗುತ್ತಿದೆ. ಈ ಕಾರ್ಯ ಶ್ಲಾಘನೀಯ’ ಎಂದರು.
  • ‘5 ವರ್ಷಗಳಲ್ಲಿ 25 ಸಾವಿರ ನವೋದ್ಯಮ

ಸಂದರ್ಭ:ಕರ್ನಾಟಕ ನವೋದ್ಯಮ ನೀತಿ 2025– 2030’ಕ್ಕೆ ಸಂಪುಟ ಸಭೆ ಒಪ್ಪಿಗೆ: ಮುಂದಿನ ಐದು ವರ್ಷಗಳಲ್ಲಿ ಬೆಂಗಳೂರು ಮತ್ತು ರಾಜ್ಯದ ಇತರ ನಗರಗಳಲ್ಲಿ ಒಟ್ಟು 25,000 ಹೆಚ್ಚುವರಿ ನವೋದ್ಯಮಗಳನ್ನು ಸ್ಥಾಪಿಸುವ ಉದ್ದೇಶದಕರ್ನಾಟಕ ನವೋದ್ಯಮ ನೀತಿ 2025– 2030’ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

  • ಇದಕ್ಕಾಗಿ ಐದು ವರ್ಷಗಳಿಗೆ ₹518.27 ಕೋಟಿ ನಿಗದಿ ಮಾಡಲಾಗಿದೆ. ಬೆಂಗಳೂರಿನಲ್ಲಿ 15 ಸಾವಿರ ಮತ್ತು ರಾಜ್ಯದ ಇತರ ನಗರಗಳಲ್ಲಿ 10 ಸಾವಿರ ನವೋದ್ಯಮಗಳು ಸ್ಥಾಪನೆಗೊಳ್ಳಲಿವೆ.
  • ರಾಜ್ಯದಲ್ಲಿ ನವೋದ್ಯಮ ವ್ಯವಸ್ಥೆಯನ್ನು ಬಲಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಅನುದಾನ, ಇನ್‌ಕ್ಯುಬೇಷನ್, ಮೂಲಸೌಕರ್ಯ, ಮಾರ್ಗದರ್ಶನ, ಕೌಶಲ ಅಭಿವೃದ್ಧಿ, ಮಾರುಕಟ್ಟೆ ಪ್ರವೇಶ, ವಿಸ್ತರಣೆ, ಅಂತರರಾಷ್ಟ್ರೀಯ ಸಹಯೋಗವನ್ನು ನವೋದ್ಯಮ ನೀತಿ ಒಳಗೊಂಡಿದೆ.
  • ಉದಯೋನ್ಮುಖ ಮತ್ತು ಮುಂದುವರಿದ ತಂತ್ರಜ್ಞಾನಗಳಲ್ಲಿ ರಾಜ್ಯವನ್ನು ಮುಂಚೂಣಿಗೆ ತರಲು ಕೃತಕ ಬುದ್ಧಿಮತ್ತೆ, ಬ್ಲಾಕ್‌ಚೈನ್‌, ಕ್ವಾಂಟಮ್‌ ಕಂಪ್ಯೂಟಿಂಗ್ ಮತ್ತು ಇತರ ಆಳವಾದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ನಾವೀನ್ಯವನ್ನು ಪ್ರೋತ್ಸಾಹಿಸಲಾಗುವುದು. ರಾಜ್ಯದ ವಿವಿಧ ನಗರಗಳಲ್ಲಿ ಉದ್ಯಮಿಗಳನ್ನು ಬೆಂಬಲಿಸಲು ನಾವೀನ್ಯ ಕೇಂದ್ರಗಳು, ಇನ್‌ಕ್ಯುಬೇಶನ್‌ ಕೇಂದ್ರಗಳನ್ನು ವಿಸ್ತರಿಸಲು ನಿರ್ಧರಿಸಲಾಗಿದೆ.

ಇಂದಿರಾ ಕಿಟ್ ಪದಾರ್ಥ ಮಾರ್ಪಾಡು

  • ಇಂದಿರಾ ಆಹಾರ ಕಿಟ್‌ನಲ್ಲಿ ಫಲಾನುಭವಿಗಳಿಗೆ ತೊಗರಿ ಬೇಳೆ 1 ಕೆ.ಜಿ, ಅಡುಗೆ ಎಣ್ಣೆ 1 ಲೀಟರ್, ಸಕ್ಕರೆ 1 ಕೆ.ಜಿ, ಉಪ್ಪು 1 ಕೆ.ಜಿ ನೀಡಲಾಗುತ್ತದೆ. 1 ಕೆ.ಜಿ ಹೆಸರು ಕಾಳಿನ ಬದಲಿಗೆ ಅದರ ವೆಚ್ಚಕ್ಕನುಗುಣವಾಗಿ 1ರಿಂದ 3 ಸದಸ್ಯರಿಗೆ 1/4 ಕೆ.ಜಿ, 3 ರಿಂದ 4 ಸದಸ್ಯರಿರುವ ಕುಟುಂಬಕ್ಕೆ 1/2 ಕೆ.ಜಿ ಹಾಗೂ 5 ಕ್ಕೂ ಹೆಚ್ಚು ಸದಸ್ಯರಿರುವ ಕುಟುಂಬಕ್ಕೆ 3/4 ಕೆ.ಜಿ ತೊಗರಿ ಬೇಳೆಯನ್ನು ವಿತರಿಸಲು ತೀರ್ಮಾನಿಸಲಾಗಿದೆ.
  • ರಕ್ಷಣಾ ಉತ್ಪಾದನೆ: ಸ್ವಾವಲಂಬನೆ

ಸಂದರ್ಭ: ಭಾರತದ ಉತ್ಪಾದನಾ ಪ್ರದರ್ಶನ7ನೇ ಆವೃತ್ತಿ ಉದ್ಘಾಟನೆ: ರಕ್ಷಣಾ ಕ್ಷೇತ್ರದಲ್ಲಿ ಅತಿ ದೊಡ್ಡ ಆಮದು ರಾಷ್ಟ್ರವಾಗಿದ್ದ ಭಾರತವು, ಸದ್ಯ ತನ್ನ ಅಗತ್ಯದ ಶೇಕಡ 90ರಷ್ಟು ಸಾಮಗ್ರಿಗಳನ್ನು ತಾನೇ ಉತ್ಪಾದಿಸಿಕೊಳ್ಳುವ ಮೂಲಕ ಆತ್ಮನಿರ್ಭರ ರಾಷ್ಟ್ರವಾಗಿ ಹೊರ ಹೊಮ್ಮಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ಜೋಶಿ ಹೇಳಿದರು.

  • ಐಎಂಎಸ್ ಫೌಂಡೇಷನ್, ಲಘು ಉದ್ಯೋಗ ಭಾರತಿ–ಕರ್ನಾಟಕ ಸಹಯೋಗದೊಂದಿಗೆ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ಭಾರತದ ಉತ್ಪಾದನಾ ಪ್ರದರ್ಶನ–7ನೇ ಆವೃತ್ತಿ ಉದ್ಘಾಟಿಸಿ ಮಾತನಾಡಿದರು.
  • ‘ಈ ಹಿಂದೆ ಶೇಕಡ 70ರಷ್ಟು ರಕ್ಷಣಾ ಸಾಮಗ್ರಿಗಳು ಆಮದು ಆಗುತ್ತಿದ್ದವು. ಈಗ ಎಲ್ಲವೂ ಸ್ವದೇಶದಲ್ಲೇ ತಯಾರಾಗುತ್ತಿವೆ. ಇದು ದೇಶದ ಸೌರ್ವಭೌಮತ್ವಕ್ಕೆ ಹಿಡಿದ ಕನ್ನಡಿ. ಈ ಎಲ್ಲಾ ಬೆಳವಣಿಗೆಗೂ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ, ಸ್ಟಾರ್ಟ್‌ಅಪ್‌ಗಳು ಹಾಗೂ ಖಾಸಗಿ ಅನ್ವೇಷಕರ ಕೊಡುಗೆ ಬಹು ದೊಡ್ಡದು’ ಎಂದರು.
  • ‘ಬೆಳವಣಿಗೆ ಹಾದಿಯಲ್ಲಿದ್ದರೂ ಕೈಗಾರಿಕೆಗಳನ್ನು ಅನುಮಾನಗಳಿಂದ ನೋಡುವ ಕಾಲವಿತ್ತು. ಆದರೆ, ಇಂದು ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಪ್ರಗತಿಯತ್ತ ಸಾಗುತ್ತಿದೆ’ ಎಂದು ಹೇಳಿದರು.
  • 80ರ ದಶಕದ ಘಟನೆ ನೆನಪಿಸಿಕೊಂಡ ಸಚಿವರು, ‘1984ರಲ್ಲಿ ನನ್ನ ತಂದೆ ಒಂದು ಚೀಲ ಸಿಮೆಂಟ್‌ಗಾಗಿ ದಿನವಿಡೀ ಸರದಿ ಸಾಲಿನಲ್ಲಿ ನಿಂತಿದ್ದರು. ಅಂದು ಅಷ್ಟು ಅಭಾವವಿತ್ತು. ಇಂದು ಪರಿಸ್ಥಿತಿ ಬದಲಾಗಿದ್ದು, ಇಸ್ರೊ ಅಗ್ಗದ ವೆಚ್ಚದಲ್ಲಿ ಉಪಗ್ರಹಗಳನ್ನು ಉಡಾವಣೆ ಮಾಡುತ್ತಿದೆ. ಇದು ನವ ಭಾರತ’ ಎಂದರು.
  • ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಉದ್ಯಮವು ದೇಶದ ಆರ್ಥಿಕತೆಯ ಬೆನ್ನೆಲುಬು ಆಗಿದೆ. ಕ್ಷೇತ್ರದಲ್ಲಿ 30 ಕೋಟಿ ಜನರು ಕೆಲಸ ಮಾಡುತ್ತಿದ್ದು, ದೇಶದ ಆರ್ಥಿಕತೆಗೆ ಶೇಕಡ 30ರಷ್ಟು ಕೊಡುಗೆ ಇದೆ. ತಯಾರಿಕಾ ವಲಯದಲ್ಲಿ ಶೇಕಡ 45 ಹಾಗೂ ರಫ್ತು ಕ್ಷೇತ್ರದಲ್ಲಿ ಶೇಕಡ 40 ರಷ್ಟು ಕೊಡುಗೆ ನೀಡಿದೆ. ಇಸ್ರೊ, ಡಿಆರ್ಡಿಒ, ಎಚ್ಎಎಲ್, ಬಿಎಚ್ಇಎಲ್ ಸಂಸ್ಥೆಗಳು ತಮ್ಮ ಪೂರೈಕೆ ಸರಪಳಿಯಲ್ಲಿ ಸಣ್ಣ ಮತ್ತು ಕೈಗಾರಿಕಾ ವಲಯವನ್ನು ಸೇರಿಸಿಕೊಂಡು ಬೆಳೆಯಬೇಕು ಎಂದು ಹೇಳಿದರು.
  • ಇಸ್ರೊ ನಡೆದು ಬಂದ ಹಾದಿಯನ್ನು ವಿವರಿಸಿದ ಅಧ್ಯಕ್ಷ ವಿ.ನಾರಾಯಣನ್, ‘ಕೆಲ ದಿನಗಳ ಹಿಂದೆ ಸ್ವದೇಶಿ ನಿರ್ಮಿತಬಾಹುಬಲಿರಾಕೆಟ್ಮೂಲಕ ಅತ್ಯಂತ ಭಾರವಾದ ಉಪಗ್ರಹವನ್ನು ಕಕ್ಷೆಗೆ ಸೇರಿಸುವುದರೊಂದಿಗೆ ಚಾರಿತ್ರಿಕ ಸಾಧನೆ ಮಾಡಿದ್ದೇವೆ. 4,410 ಕೆ.ಜಿ ತೂಕದ ಸಂವಹನ ಉಪಗ್ರಹವನ್ನು (ಸಿಎಂಎಸ್‌–03) ಹೊತ್ತು ನಭಕ್ಕೆ ಚಿಮ್ಮಿದ ಲಾಂಚ್ವೆಹಿಕಲ್ ಮಾರ್ಕ್–3 (ಎಲ್ವಿಎಂ3-ಎಂ5) ‘ಬಾಹುಬಲಿಯುಆತ್ಮನಿರ್ಭರ ಭಾರತ ಸಾಧನೆಗೆ ಸಾಕ್ಷಿ. ಪ್ರಸ್ತುತ 450 ಕ್ಕೂ ಹೆಚ್ಚು ದೇಶಿಯ ಕಂಪನಿಗಳೊಂದಿಗೆ ಇಸ್ರೊ ಪಾಲುದಾರಿಕೆ ಹೊಂದಿದೆ’ ಎಂದು ತಿಳಿಸಿದರು.

  • ಸಕ್ಕರೆ ಕಾರ್ಖಾನೆ
  • ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್‌ ಕಬ್ಬಿಗೆ ಕೇಂದ್ರ ಸರ್ಕಾರ ನಿಗದಿ ಪಡಿಸಿದಷ್ಟು ಎಫ್‌ಆರ್‌ಪಿ (₹3,550) ನೀಡಬೇಕು ಎಂದು ಆಗ್ರಹಿಸಿ ರಾಜ್ಯದ ಕಬ್ಬು ಬೆಳೆಗಾರರು ಪ್ರತಿಭಟನೆ ತೀವ್ರಗೊಳಿಸಿರುವುದರ ನಡುವೆಯೇ ರಾಜ್ಯದಲ್ಲಿರುವ ಕಾರ್ಖಾನೆಗಳ ಮಾಲೀಕತ್ವದ ಬಗ್ಗೆಯೂ ಚರ್ಚೆ ನಡೆಯುತ್ತಿದೆ.
  • ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿದ್ದು, ಈ ಪೈಕಿ ಬೆಳಗಾವಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯಲ್ಲಿಯೇ 53 ಇವೆ. ಹಲವು ಕಾರ್ಖಾನೆಗಳು ಸಚಿವರು, ಶಾಸಕರು, ರಾಜಕಾರಣಿಗಳು ಹಾಗೂ ಅವರ ಸಂಬಂಧಿಕರ ನೇರ ಮಾಲೀಕತ್ವದಲ್ಲಿವೆ.
  • ಸಹಕಾರಿ ವ್ಯವಸ್ಥೆಯಡಿ ಹಲವು ಕಾರ್ಯನಿರ್ವಹಿಸುತ್ತಿದ್ದು, ಪರೋಕ್ಷವಾಗಿ ಪ್ರಭಾವಿ ರಾಜಕಾರಣಿಗಳ ಹಿಡಿತದಲ್ಲಿವೆ. ನಷ್ಟದ ಸುಳಿಗೆ ಸಿಲುಕಿರುವ ಕೆಲವು ಸಹಕಾರಿ ಕಾರ್ಖಾನೆಗಳನ್ನು ರಾಜಕಾರಣಿಗಳೇ ಗುತ್ತಿಗೆಗೆ ಪಡೆದು ನಿರ್ವಹಿಸುತ್ತಿದ್ದಾರೆ. ಉದ್ಯಮಿಗಳೇ ನೇರವಾಗಿ ನಡೆಸುತ್ತಿರುವ ಕಾರ್ಖಾನೆಗಳ ಸಂಖ್ಯೆ ಕೆಲವೇ ಕೆಲವು
  • ವಿಶ್ವದರ್ಜೆಯ ಬ್ಯಾಂಕ್ಬೇಕು: ನಿರ್ಮಲಾ

ಸಂದರ್ಭ: ಭಾರತದಲ್ಲಿ ದೊಡ್ಡದಾದ ಹಾಗೂ ವಿಶ್ವದರ್ಜೆಯ ಬ್ಯಾಂಕ್ಗಳ ಅಗತ್ಯವಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಿಚಾರವಾಗಿ ಆರ್ಬಿಐ ಜೊತೆ ಮಾತುಕತೆ ನಡೆಯುತ್ತಿದೆ ಎಂದಿದ್ದಾರೆ.

  • ‘ಸರ್ಕಾರವು ತೀರ್ಮಾನ ತೆಗೆದುಕೊಳ್ಳುವ ಮೊದಲು ಬಹಳಷ್ಟು ಕೆಲಸಗಳು ಆಗಬೇಕಿವೆ. ಈಗಾಗಲೇ ಅಸ್ತಿತ್ವದಲ್ಲಿರುವ ಬ್ಯಾಂಕ್‌ಗಳಿಂದ ಒಂದು ಬ್ಯಾಂಕ್‌ ಸೃಷ್ಟಿಸುವ ಮೂಲಕ ಈ ಕೆಲಸ ಆಗದು. ವಿಲೀನದ ಮೂಲಕ ಅದನ್ನು ಮಾಡಬಹುದು, ಅದು ಕೂಡ ಒಂದು ಮಾರ್ಗ. ಆದರೆ ಹೆಚ್ಚಿನ ಬ್ಯಾಂಕ್‌ಗಳು ಕೆಲಸ ಮಾಡಲು ಅವಕಾಶ ನೀಡುವ ವ್ಯವಸ್ಥೆಯೊಂದು ರೂಪುಗೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.
  • ರಾಜ್ಯದಲ್ಲೇ ಸಿದ್ಧವಾಗಲಿವೆಎಐ ಸರ್ವರ್‌’

ಸಂದರ್ಭ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಕಾರ್ಯನಿರ್ವ ಹಿಸುವ ಅತ್ಯಾಧುನಿಕಎಐ ಸರ್ವರ್ಗಳನ್ನು ಅಮೆರಿಕದ ಬುರ್ಕಾನ್ವರ್ಲ್ಡ್ಇನ್ವೆಸ್ಟ್ಮೆಂಟ್ಗ್ರೂಪ್ಕರ್ನಾಟಕದಲ್ಲೇ ತಯಾರಿಸಲಿದೆ

  • ಬುರ್ಕಾನ್‌ ವರ್ಲ್ಡ್‌ನ ಅಧೀನ ಸಂಸ್ಥೆ ದಿ ಘಾಜಿ ಗ್ರೂಪ್‌ ಸಿಇಒ ಶಫಿ ಖಾನ್‌ ಅವರ ನೇತೃತ್ವದ ನಿಯೋಗದ ಜತೆ ಹೂಡಿಕೆ ಕುರಿತು ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಈ ವಿಷಯ ತಿಳಿಸಿದರು.
  • ಅಮೆರಿಕದ ಮಿಯಾಮಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಈ ಕಂಪನಿ ರಾಜ್ಯದಲ್ಲಿ ₹1,500 ಕೋಟಿ ಬಂಡವಾಳ ಹೂಡಲು ಮುಂದೆ ಬಂದಿದೆ. ದೇವನಹಳ್ಳಿ ಸಮೀಪ 10-15 ಎಕರೆ ಭೂಮಿ ನೀಡಲಾಗುವುದು. ಹೂಡಿಕೆಯಿಂದ ತಯಾರಿಕಾ ವಲಯದಲ್ಲಿ ಸಾಕಷ್ಟು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.
  • ಡೇಟಾ ಕೇಂದ್ರಗಳಲ್ಲಿ ಬಳಕೆಯಾಗುವ ಸರ್ವರ್‌ಗಳಿಗೆ ಬಹು ಬೇಡಿಕೆ ಇದೆ. ಇದಕ್ಕೆ ಸಂಬಂಧಿಸಿದ ತಂತ್ರಜ್ಞಾನ ಹಾಗೂ ಉಪಕರಣಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಲು ಸಹಕಾರ ನೀಡಲಾಗುವುದು. ಅತ್ಯಾ ಧುನಿಕ ಸಿಪಿಯು, ಜಿಪಿಯು, ಎಐ-ರೆಡಿ ನೆಟ್ವರ್ಕ್‌ ಸ್ವಿಚ್‌ ತಯಾರಿಕೆಯನ್ನೂ ಕಂಪನಿ ಆರಂಭಿಸಲಿದೆ. ಜಾಗತಿಕ ತಾಂತ್ರಿಕ ಪಾಲುದಾರ ಕಂಪನಿಗಳಾದ ಗಿಗಾಬೈಟ್‌ ಮತ್ತು ಸೆರಾ ನೆಟ್‌ವರ್ಕ್‌ ಸಹಯೋಗ ನೀಡಲಿವೆ. ಸೆಮಿಕಂಡಕ್ಟರ್‌, ಎಐ ಹಾರ್ಡ್-ವೇರ್‌, ಆಧುನಿಕ ಎಲೆಕ್ಟ್ರಾನಿಕ್ಸ್‌ ಕಾರ್ಯಪರಿಸರದ ಬಲವರ್ಧನೆ ಆಗಲಿದೆ. ಸ್ಥಳೀಯವಾಗಿ ಆರ್‌ ಆ್ಯಂಡ್‌ ಡಿ, ತಂತ್ರಜ್ಞಾನ ವರ್ಗಾವಣೆ, ಶಿಕ್ಷಣ ಸಂಸ್ಥೆಗಳು ಮತ್ತು ಇಲ್ಲಿಯ ಕೈಗಾರಿಕೆಗಳ ಸಹಭಾಗಿತ್ವ ಸಿಗಲಿದೆ ಎಂದರು.
  • ಸೇವಾ ವಲಯ ಪ್ರಗತಿ ಇಳಿಕೆ

ಸಂದರ್ಭ: ‘ದೇಶದ ಸೇವಾ ವಲಯದ ಬೆಳವಣಿಗೆ ಅಕ್ಟೋಬರ್ ತಿಂಗಳಿನಲ್ಲಿ ಐದು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆ ಆಗಿದೆ ಎಂದು ಎಸ್ ಆ್ಯಂಡ್ಪಿ ಗ್ಲೋಬಲ್ಸಂಸ್ಥೆಯ ಮಾಸಿಕ ಸಮೀಕ್ಷೆ ತಿಳಿಸಿದೆ.

  • ಎಚ್‌ಎಸ್‌ಬಿಸಿ ಇಂಡಿಯಾ ಸರ್ವಿಸಸ್ ಪಿಎಂಐ ಬ್ಯುಸಿನೆಸ್ ಆ್ಯಕ್ಟಿವಿಟಿ ಸೂಚ್ಯಂಕವು ಸೆಪ್ಟೆಂಬರ್‌ನಲ್ಲಿ 60.9 ದಾಖಲಾಗಿತ್ತು. ಆದರೆ, ಅಕ್ಟೋಬರ್‌ನಲ್ಲಿ 58.9ಕ್ಕೆ ಇಳಿದಿದೆ.
  • ‘ಹೆಚ್ಚಿದ ಸ್ಪರ್ಧಾತ್ಮಕತೆಯ ಒತ್ತಡ ಮತ್ತು ಭಾರಿ ಮಳೆಯು ಚಟುವಟಿಕೆಯ ಇಳಿಕೆಗೆ ಕಾರಣವಾದವು. ಇದು ಸೂಚ್ಯಂಕ ಇಳಿಕೆಗೆ ದಾರಿ ಮಾಡಿಕೊಟ್ಟಿತು’ ಎಂದು ಎಚ್‌ಎಸ್‌ಬಿಸಿ ಇಂಡಿಯಾದ ಮುಖ್ಯ ಅರ್ಥಶಾಸ್ತ್ರಜ್ಞೆ ಪ್ರಾಂಜುಲ್ ಭಂಡಾರಿ ಹೇಳಿದ್ದಾರೆ.
  • ಹೆಚ್ಚಿದ ಬೇಡಿಕೆ ಮತ್ತು ಜಿಎಸ್‌ಟಿ ದರ ಇಳಿಕೆಯಂತಹ ಅಂಶಗಳು ಕಾರ್ಯಾಚರಣೆಯ ಸ್ಥಿತಿ ಸುಧಾರಿಸಲು ನೆರವಾದವು. ಆದರೂ, ಸ್ಪರ್ಧಾತ್ಮಕತೆ ಮತ್ತು ಹೆಚ್ಚಿನ ಮಳೆಯಿಂದ ಬೆಳವಣಿಗೆಯು ನಿಧಾನವಾಯಿತು ಎಂದು ಹೇಳಿದ್ದಾರೆ.

ಪ್ರಚಲಿತ ವಿದ್ಯಮಾನಗಳು: 6ನೇ ನವೆಂಬರ್ 2025

  • ಭಾರತ ಸಂಜಾತ ನ್ಯೂಯಾರ್ಕ್ಮೇಯರ್

ಸಂದರ್ಭ: ನ್ಯೂಯಾರ್ಕ್ ನಗರದ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ, ಭಾರತ ಸಂಜಾತ ಜೊಹ್ರಾನ್ ಮಮ್ದಾನಿ (34) ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ.

  • ಅಮೆರಿಕದ ಅತಿ ದೊಡ್ಡ ನಗರವಾದ ನ್ಯೂಯಾರ್ಕ್ಪ್ರಥಮ ಪ್ರಜೆಯಾಗಿ ಆಯ್ಕೆಯಾದ ಮೊದಲ ಮುಸ್ಲಿಂ ಹಾಗೂ ದಕ್ಷಿಣ ಏಷ್ಯಾದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
  • ಜೊಹ್ರಾನ್ ಅವರು ಭಾರತದ ಸಿನಿಮಾ ನಿರ್ದೇಶಕಿ ಮತ್ತು ನಿರ್ಮಾಪಕಿ ಮೀರಾ ನಾಯರ್ ಮತ್ತು ಪ್ರೊ. ಮಹಮದ್ಮಮ್ದಾನಿ ಅವರ ಪುತ್ರ. 
  • ಮಮ್ದಾನಿ ಜನಿಸಿದ್ದು ಉಗಾಂಡಾದ ಕಂಪಾಲದಲ್ಲಿ. ಅವರಿಗೆ  5 ವರ್ಷವಿದ್ದಾಗ ದಕ್ಷಿಣ ಆಫ್ರಿಕಾದ ಕೇಪ್ಟೌನ್ಗೆ, ನಂತರ 7 ವರ್ಷ ಇದ್ದಾಗ  ನ್ಯೂಯಾರ್ಕ್ಗೆ  ವಲಸೆ ಬಂದು ಅವರ ಕುಟುಂಬ ನೆಲೆಗೊಂಡಿತ್ತು. ಮಮ್ದಾನಿ ಅವರಿಗೆ 2018ರಲ್ಲಿ ಅಮೆರಿಕದ ಪೌರತ್ವ ಲಭಿಸಿತ್ತು.ಅಮೆರಿಕನ್ ಅನಿಮೇಟರ್ರಮಾ ಸವಾಫ್ ದುವಾಜಿ ಅವರ ಪತ್ನಿ.
  • ಯಾರ್ಕ್‌ನ ಮಾಜಿ ಗವರ್ನರ್, ಪ್ರಭಾವಿ ರಾಜಕೀಯ ಮುಖಂಡ ಆ್ಯಂಡ್ರ್ಯೂ ಕೌಮೊ ಮತ್ತು ರಿಪಬ್ಲಿಕನ್‌ ಅಭ್ಯರ್ಥಿ ಕರ್ಟಿಸ್‌ ಸ್ಲಿವಾ ಅವರನ್ನು ಮಮ್ದಾನಿ ಸೋಲಿಸಿದ್ದಾರೆ.
  • ಮಮ್ದಾನಿ ಅವರು ಜನವರಿ 1ರಂದು  ಅಮೆರಿಕದ ಅತಿ ದೊಡ್ಡ ನಗರವಾದ ನ್ಯೂಯಾರ್ಕ್‌ನ ಮೇಯರ್‌ ಪಟ್ಟಕ್ಕೇರು ವಾಗ, ಈ ಸ್ಥಾನ ಅಲಂಕರಿಸುತ್ತಿರುವ ಮೊದಲ ಮುಸ್ಲಿಂ, ಮೊದಲ ಭಾರತೀಯ, ಆಫ್ರಿಕಾದಲ್ಲಿ ಜನಿಸಿದ ಮೊದಲ ವ್ಯಕ್ತಿ ಮತ್ತು ಕಳೆದೊಂದು ಶತಮಾನದಲ್ಲಿ ಮೇಯರ್‌ ಹುದ್ದೆಗೇರಿದ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗಳಿಗೂ ಪಾತ್ರರಾಗಲಿದ್ದಾರೆ.
  • ಮಮ್ದಾನಿ ಗೆಲುವಿನೊಂದಿಗೆ ನ್ಯೂಯಾರ್ಕ್‌ ನಗರ ಮತ್ತು ಅಮೆರಿಕವು ಹೊಸ ರಾಜಕೀಯ ಮತ್ತು ಸೈದ್ಧಾಂತಿಕ ಯುಗಕ್ಕೆ ಮುನ್ನುಡಿ ಬರೆದಿದೆ. ಬಂಡವಾಳಶಾಹಿಯ ವಿರುದ್ಧ  ಪ್ರಜಾಪ್ರಭುತ್ವವಾದಿ, ಸಮಾಜವಾದಿಯ ಐತಿಹಾಸಿಕ ಗೆಲುವು, ದೇಶದ ರಾಜಕೀಯ ಸ್ಥಿತ್ಯಂತರಕ್ಕೂ  ಕಾರಣವಾಗಲಿವೆ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ.
  • ಮಮ್ದಾನಿ ಅವರು ಬ್ರಾಂಕ್ಸ್‌ ಹೈಸ್ಕೂಲ್‌ ಆಫ್ ಸೈನ್ಸ್‌ನಲ್ಲಿ ಪ್ರೌಢ ಶಿಕ್ಷಣ ಹಾಗೂ ಬೌಡೊಯಿನ್‌ ಕಾಲೇಜಿನಿಂದ ಪದವಿ ಪಡೆದಿದ್ದಾರೆ. ಪ್ರೌಢಶಾಲಾ ಹಂತದ ಕ್ರಿಕೆಟ್‌ ತಂಡದಲ್ಲೂ ಅವರು ಪ್ರಮುಖ ಆಟಗಾರರಾಗಿದ್ದರು.
  • ವಸತಿ ಸಲಹೆಗಾರ ಅಧಿಕಾರಿ ಯಾಗಿಯೂ ಕಾರ್ಯನಿರ್ವಹಿಸಿದ್ದ ಅವರು, ನ್ಯೂಯಾರ್ಕ್‌ನಲ್ಲಿ ಕಡಿಮೆ ಆದಾಯ ಹೊಂದಿರುವ ವಲಸಿಗರನ್ನು ಮನೆಗಳಿಂದ ಹೊರಹಾಕುವುದನ್ನು ತಡೆಗಟ್ಟಲು ಅಪಾರವಾಗಿ ಶ್ರಮಿಸಿದ್ದರು. ಈ ಕಾರ್ಯಕ್ಕಾಗಿ ವಲಸಿಗರ, ಕಾರ್ಮಿಕರ ವಿಶ್ವಾಸ ಗಳಿಸಿದ್ದ ಅವರು, 2020ರಲ್ಲಿ ಮೊದಲ ಬಾರಿ ನ್ಯೂಯಾರ್ಕ್‌ ಅಸೆಂಬ್ಲಿಗೆ ಆಯ್ಕೆಯಾಗಿದ್ದರು.
  • ನ್ಯೂಯಾರ್ಕ್‌ ಮೇಯರ್‌ ಚುನಾವಣೆಯ ಪ್ರಾಥಮಿಕ ಹಂತದಿಂದಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಮಮ್ದಾನಿ ಅವರನ್ನು ವಿರೋಧಿ ಸಿಕೊಂಡು ಬಂದಿದ್ದರು.

ವೆಚ್ಚ ಕಡಿಮೆಗೊಳಿಸಿ, ಜೀವನ ಸುಗಮಗೊಳಿಸಿ

  • ಬೆಲೆ ಏರಿಕೆ, ಹಣದುಬ್ಬರ ಹೆಚ್ಚಳ, ಉದ್ಯೋಗ ಕಡಿತ ಸೇರಿದಂತೆ ರಾಜಕೀಯ ಮತ್ತು ಆರ್ಥಿಕ ಅಸ್ಥಿರತೆ ಎದುರಿಸುತ್ತಿರುವ ಅಮೆರಿಕನ್ನರಿಗೆ, ವಿಶೇಷವಾಗಿ ನ್ಯೂಯಾರ್ಕ್‌ನ ಜನರಿಗೆ, ‘ಜೀವನ ನಿರ್ವಹಣೆ ವೆಚ್ಚವನ್ನು ಕಡಿಮೆ ಮಾಡಲೆಂದೇ ನ್ಯೂಯಾರ್ಕ್‌ನ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ’ ಎಂಬ ಮಮ್ದಾನಿ ಅವರ  ಭರವಸೆಯ ನುಡಿಗಳು ವಿಶ್ವಾಸ ಮೂಡಿಸಿದ್ದವು. ನಗರ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ, ಮಕ್ಕಳಿಗಾಗಿ ಸಾರ್ವಜನಿಕ ಆಸ್ಪತ್ರೆ, ಕಡಿಮೆ ವೆಚ್ಚದ  ಮನೆಗಳು ಸೇರಿದಂತೆ ‘ವೆಚ್ಚ ಕಡಿಮೆಗೊಳಿಸಿ, ಜೀವನ ಸುಗಮಗೊಳಿಸಿ’ ಎನ್ನುವುದು ಅವರ ಚುನಾವಣಾ ಘೋಷಣೆಯಾಗಿತ್ತು.
  • ಬಂಡವಾಳಶಾಹಿ ವ್ಯವಸ್ಥೆಗೆ ವಿರುದ್ಧವಾಗಿದ್ದ ಈ ಯುವ ರಾಜಕಾರಣಿಯು ನ್ಯೂಯಾರ್ಕ್‌ನ ಯುವಸಮೂಹ ಹಾಗೂ ಶ್ರಮಿಕ ವರ್ಗದ ಅಪಾರ ಬೆಂಬಲವನ್ನು ಗಳಿಸಿರುವುದು ಚುನಾವಣಾ ಫಲಿತಾಂಶದಲ್ಲಿ ಸ್ಪಷ್ಟವಾಗಿದೆ.

ಭಾರತದ ನಂಟು     

  • ತಮ್ಮ ಮೊದಲ ವಿಜಯೋತ್ಸವ ಭಾಷಣದಲ್ಲಿ ಮಮ್ದಾನಿ, ಭಾರತ ಅಥವಾ ಭಾರತೀಯರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ನೆಹರೂ ಮತ್ತು ‘ಧೂಮ್ ಮಚಾಲೆ’ ಹಾಡಿನ ಮೂಲಕ ತಮ್ಮ ಭಾರತೀಯ ಬೇರನ್ನು ಸ್ಮರಿಸಲು  ಮರೆಯಲಿಲ್ಲ. ವಿಜಯೋತ್ಸವ ಭಾಷಣದ ಬೆನ್ನಲ್ಲೇ ವೇದಿಕೆಯಲ್ಲಿ ಬಾಲಿವುಡ್‌ನ ಜನಪ್ರಿಯ  ‘ಧೂಮ್ ಮಚಾಲೆ’ ಹಾಡು ಕೇಳಿಬಂತು. ಮಮ್ದಾನಿ ಅವರ ವಾಕ್ಚಾತುರ್ಯ ಮತ್ತು ಸಾಮಾಜಿಕ ಮಾಧ್ಯಮದ ಮೇಲಿನ ಹಿಡಿತ ಕೂಡ ಅವರ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಎನ್ನಲಾಗುತ್ತಿದೆ.

ದಾಖಲೆ ಮತ ಚಲಾವಣೆ

  • ನ್ಯೂಯಾರ್ಕ್‌ ಮೇಯರ್‌ ಚುನಾವಣೆಯಲ್ಲಿ 1969ರ ಬಳಿಕ ಇದೇ ಮೊದಲ ಬಾರಿಗೆ 20 ಲಕ್ಷ ಮತಗಳು ಚಲಾವಣೆಯಾಗಿವೆ ಎಂದು ನ್ಯೂಯಾರ್ಕ್‌ನ ಚುನಾವಣಾ ಮಂಡಳಿ ಹೇಳಿದೆ.
  • ಕೃತಕ ಬುದ್ಧಿಮತ್ತೆ ವಿಷಯ ಪರಿಚಯ

ಸಂದರ್ಭ: ಸ್ಯಾಮ್ಸಂಗ್ಹಾಗೂ ಹಲವು ವಿ.ವಿ.ಗಳ ಜತೆ ಬೆಂಗಳೂರು ಕೃಷಿ ವಿ.ವಿ ಒಪ್ಪಂದ: ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಬೋಧನೆ, ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ಹಾಗೂ ಮಷಿನ್ಲರ್ನಿಂಗ್‌ (ಎಂಎಲ್‌) ತಂತ್ರಜ್ಞಾನ ಅಳವಡಿಸಿಕೊಳ್ಳುವ ಉದ್ದೇಶದಿಂದ 2025–26ನೇ ಶೈಕ್ಷಣಿಕ ಸಾಲಿನಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ (ಬಿ.ಎಸ್ಸಿ ಕೃಷಿ ಹಾಗೂ ಎಂ.ಎಸ್ಸಿ ಕೃಷಿ) ವಿದ್ಯಾರ್ಥಿಗಳಿಗೆ ಎಐ ಹಾಗೂ ಎಂಎಲ್ವಿಷಯವನ್ನು ಪರಿಚಯಿಸಲಾಗುತ್ತಿದೆ

  • ಬೆಂಗಳೂರು ಕೃಷಿ ವಿಶ್ವವಿದ್ಯಾಲ ಯವು ಸ್ಯಾಮ್‌ಸಂಗ್‌ ಕಂಪನಿಯೊಂದಿಗೆ ಎಐ ಮತ್ತು ಎಂಎಲ್‌ ವಿಷಯದ ತರಬೇತಿ ನೀಡುವ ಕುರಿತು ಒಪ್ಪಂದ ಮಾಡಿಕೊಂಡಿದೆ. ಸ್ಯಾಮ್‌ಸಂಗ್‌ನ ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್‌ಆರ್) ಮೊದಲ ಹಂತದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ 300 ವಿದ್ಯಾರ್ಥಿಗಳಿಗೆ ಎಐ–ಎಂಎಲ್‌ ವಿಷಯದ ಬಗ್ಗೆ 80 ಗಂಟೆಗಳ ಕಾಲ ಆನ್‌ಲೈನ್‌ ಹಾಗೂ ಆಫ್‌ಲೈನ್‌ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ.
  • ‘ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ದ ಪ್ರಥಮ ವರ್ಷದ ಪದವಿಯ ಎರಡನೇ ಸೆಮಿಸ್ಟರ್‌ನಲ್ಲಿ ‌ಎಐ–ಎಂಎಲ್‌ ವಿಷಯ ಇರಲಿದ್ದು, ಇದಕ್ಕೆ ಅಂಕಗಳು ಇರುವುದಿಲ್ಲ. ಆದರೆ ಕಡ್ಡಾಯವಾಗಿ ಉತ್ತೀರ್ಣ ಆಗಬೇಕು. ಎಂ.ಎಸ್ಸಿ ಪ್ರಥಮ ವರ್ಷದ ಎರಡನೇ ಸೆಮಿಸ್ಟರ್‌ಗೆ ಎಐ–ಎಲ್‌ ವಿಷಯ ಇರಲಿದ್ದು, ವಿದ್ಯಾರ್ಥಿಗಳಿಗೆ ಆರು ತಿಂಗಳ ತರಬೇತಿ ನೀಡಲಾಗುತ್ತದೆ.
  • ‘ವಿಶ್ವವಿದ್ಯಾಲಯದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಹಾಗೂ ಮಷಿನ್‌ ಲರ್ನಿಂಗ್‌ (ಎಂಎಲ್) ಎಂಬ ನೂತನ ವಿಭಾಗವನ್ನು ಪ್ರಾರಂಭಿಸಲಾಗಿದೆ. ಇದು ಬಹುಶಿಸ್ತೀಯ ಅಧ್ಯಯನ ವಿಭಾಗವಾಗಿದ್ದು, ಕಂಪ್ಯೂಟರ್‌ ತಂತ್ರಜ್ಞಾನದ ಬಗ್ಗೆ ಹೆಚ್ಚು ಮಾಹಿತಿ ಇರುವವರನ್ನು ಇದರ ಮುಖ್ಯಸ್ಥರನ್ನಾಗಿ ಮಾಡಲಾಗುತ್ತದೆ’ ಎಂದು ಹೇಳಿದರು.
  • ‘ಎಐ–ಎಂಎಲ್‌ ನೂತನ ವಿಭಾಗದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ನಗರದ ಹಲವು ಎಂಜಿನಿಯರಿಂಗ್‌ ಕಾಲೇಜುಗಳ ನುರಿತ ತಜ್ಞರಿಂದ ತರಬೇತಿ ನೀಡಲಾಗುತ್ತದೆ. ಇದರ ಭಾಗವಾಗಿ ಈಗಾಗಲೇ ಗೀತಂ ವಿಶ್ವ ವಿದ್ಯಾಲಯದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ರೇವಾ ವಿಶ್ವವಿದ್ಯಾಲಯ, ಮಣಿಪಾಲ್‌ ಅಕಾಡೆಮಿಯೊಂದಿಗೆ ಒಪ್ಪಂದ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆಯುತ್ತಿದೆ. ಎಐ–ಎಂಎಲ್‌ಗೆ ಸಂಬಂಧಿಸಿದ ಕಂಪ್ಯೂಟರ್‌ ಆಧಾರಿತ ಪಠ್ಯ ವಿಷಯಗಳ ಬಗ್ಗೆ ಎಂಜಿನಿಯರಿಂಗ್‌ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಅಧ್ಯಾಪಕರು ನಮ್ಮ ವಿದ್ಯಾರ್ಥಿಗಳಿಗೆ ಪಾಠ ಮಾಡಲಿದ್ದಾರೆ’ ಎಂದರು.
  • ‘ಸ್ಯಾಮ್‌ಸಂಗ್‌ ಕಂಪನಿಯೊಂದಿಗೆ ಮತ್ತೊಂದು ಒಪ್ಪಂದ ಮಾಡಿಕೊಳ್ಳ ಲಾಗುತ್ತಿದ್ದು, ನೂತನ ಎಐ–ಎಂಎಲ್‌ನ ವಿಭಾಗದ ವಿಷಯಗಳಿಗೆ ಸಂಬಂಧಿಸಿದಂತೆ ಕಂಪನಿಯ ಸಿಬ್ಬಂದಿಯು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದ್ದಾರೆ. ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಇಂತಹ ಈ ವಿಷಯಗಳನ್ನು ಪರಿಚಯಿಸುತ್ತಿದ್ದೇವೆ. ವಿದ್ಯಾರ್ಥಿಗಳು ಉತ್ತೀರ್ಣರಾದ ನಂತರ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಪಡೆದುಕೊಳ್ಳಲು ಸಹಾಯಕವಾಗಲಿದೆ’ ಎಂದು ತಿಳಿಸಿದರು.

ಎಐಎಂಎಲ್ಪದವಿ ಪ್ರಾರಂಭಿಸುವ ಚಿಂತನೆ

  • ‘ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳ ಪೈಕಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಎಐ–ಎಂಎಲ್‌ ಕೋರ್ಸ್‌ ಅನ್ನು ಮೊದಲ ಬಾರಿಗೆ ಪರಿಚಯಿಸಲಾಗುತ್ತಿದೆ. ನಾಲ್ಕು ವರ್ಷಗಳ ನಂತರ ಬಿ.ಎಸ್ಸಿ ಅಗ್ರಿ ಇನ್‌ ಎಐ–ಎಂಎಲ್‌, ಬಿ.ಎಸ್ಸಿ ಹಾರ್ಟಿಕಲ್ಚರ್‌ ಇನ್‌ ಎಐ–ಎಂಲ್‌ ವಿಷಯಗಳಲ್ಲಿ ಪದವಿಯನ್ನೂ ಪ್ರಾರಂಭಿಸುವ ಚಿಂತನೆ ಇದೆ’ ಎಂದು ಎಸ್.ವಿ. ಸುರೇಶ ತಿಳಿಸಿದರು. 
  • ‘ಈಗ ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಎಐ–ಎಂಎಲ್‌ ಆಕ್ರಮಿಸಿಕೊಂಡಿದೆ. ಆದ್ದರಿಂದ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ತರಲು ವಿದ್ಯಾರ್ಥಿಗಳನ್ನು ಈ ನೂತನ ಕೋರ್ಸ್‌ಗೆ ಅಣಿಗೊಳಿಸುತ್ತಿದ್ದೇವೆ’ ಎಂದರು.
  • ಅರಣ್ಯ: ಕಾಮಗಾರಿಗಳಿಗೆ ಷರತ್ತುಬದ್ಧ ಒಪ್ಪಿಗೆ

ಸಂದರ್ಭ: ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಸಭೆ l ಚಿತ್ತಾಪುರದಲ್ಲಿ ಚಿರತೆ ಸಂರಕ್ಷಣಾ ಮೀಸಲು ಪ್ರಸ್ತಾವ: ಶರಾವತಿ ಸಿಂಗಳೀಕ ವನ್ಯಜೀವಿಧಾಮ, ರಂಗನತಿಟ್ಟು ಪಕ್ಷಿಧಾಮ ಪರಿಸರ ಸೂಕ್ಷ್ಮ ವಲಯ ಹಾಗೂ ಸೋಮೇಶ್ವರ ವನ್ಯಜೀವಿಧಾಮ ದಲ್ಲಿ ರಸ್ತೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣದ ಯೋಜನೆಗಳಿಗೆ ನಡೆದ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆ ಷರತ್ತುಬದ್ಧ ಒಪ್ಪಿಗೆ ನೀಡಿದೆ.

  • ವನ್ಯಜೀವಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಯೋಜನೆಯನ್ನು ರೂಪಿಸಬೇಕು ಎಂಬ ಕರಾರು ವಿಧಿಸಿ ಸಭೆ ಅನುಮೋದನೆ ನೀಡಿತು. ಚಿತ್ತಾಪುರದಲ್ಲಿ ಚಿರತೆ ಸಂರಕ್ಷಣಾ ಮೀಸಲು ಸ್ಥಾಪಿಸುವ ಕುರಿತು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.
  • ಸಿಂಗಳೀಕ ವನ್ಯಜೀವಿಧಾಮದ ವ್ಯಾಪ್ತಿಯ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕಿನ ಹಿರೇಬೈಲ್‌ ಗ್ರಾಮದ ಅಂದಬಳ್ಳಿ ಮತ್ತು ಇತರ 5 ಗ್ರಾಮಗಳ 325 ಮನೆಗಳಿಗೆ, ಹೊನ್ನಾವರ ಪಟ್ಟಣ ಮತ್ತು ಮಾರ್ಗದಲ್ಲಿರುವ 9 ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರಿನ ಪೈಪ್‌ಲೈನ್ ಯೋಜನೆಗೆ 0.976 ಹೆಕ್ಟೇರ್‌ ಅರಣ್ಯ ಪ್ರದೇಶವನ್ನು ನೀಡುವ ಯೋಜನೆಗೆ ಅನುಮೋದನೆ ಪಡೆಯಲು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಪ್ರಸ್ತಾವ ಕಳುಹಿಸಲು ಸಭೆ ತೀರ್ಮಾನಿಸಿದೆ.
  • ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 291 ಜನವಸತಿ ಪ್ರದೇಶಗಳಿಗೆ (ಯೋಜನೆ ಹಂತ–2 ರಲ್ಲಿ 193 ಜನವಸತಿ ಪ್ರದೇಶಗಳಿಗೆ) ಕುಡಿಯುವ ನೀರಿನ ಸಂಪರ್ಕ ನೀಡುವ ಪ್ರಸ್ತಾವದ ಬಗ್ಗೆ ಚರ್ಚಿಸಿದ ಮಂಡಳಿ, ಇದಕ್ಕಾಗಿ 4.4 ಹೆಕ್ಟೇರ್‌ ಅರಣ್ಯ ಭೂಮಿ ನೀಡುವ ಪ್ರಸ್ತಾವಕ್ಕೆ ಒಪ್ಪಿಗೆ ಪಡೆಯಲು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆಗೆ ಕಳುಹಿಸಲು ತೀರ್ಮಾನಿಸಲಾಗಿದೆ.
  • ಅತ್ತಿವೇರಿ ಪಕ್ಷಿಧಾಮ, ಶರಾವತಿ ಸಿಂಗಳೀಕ ವನ್ಯಜೀವಿಧಾಮ ಹಾಗೂ ಸೋಮೇಶ್ವರ ವನ್ಯಜೀವಿಧಾಮದಲ್ಲಿ ಸಂವಹನ ಕಂಬಗಳನ್ನು ಅಳವಡಿಸುವ ಕುರಿತಾದ ಬಿಎಸ್‌ಎನ್‌ಎಲ್‌ ಪ್ರಸ್ತಾವವನ್ನು ಮುಂದೂಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಸಂವಹನ ಕಂಬಗಳಿಂದ ಪರಿಸರಕ್ಕೆ, ಪಶುಪಕ್ಷಿ ಗಳಿಗೆ ಆಗುವ ತೊಂದರೆ ಕುರಿತು ವಿವರ ಮಂಡಿಸಲು ಸೂಚಿಸಲಾಯಿತು.
  • ಪಶ್ಚಿಮಘಟ್ಟದಲ್ಲಿ ಕಾರ್ಯಗತವಾಗಿರುವ ರಸ್ತೆ ಮತ್ತಿತರ ಅಭಿವೃದ್ಧಿ ಯೋಜನೆಗಳಲ್ಲಿ ಷರತ್ತುಗಳ ಪಾಲನೆ ಆಗಿದೆಯೇ ಇಲ್ಲವೇ ಎಂಬ ಬಗ್ಗೆ ಪರಾಮರ್ಶೆ ನಡೆಸುವಂತೆ ಈಶ್ವರ ಖಂಡ್ರೆ ಸೂಚಿಸಿದರು.
  • ಅರಣ್ಯ ಮತ್ತು ವನ್ಯಜೀವಿಧಾಮಗಳಲ್ಲಿ ಯಾವುದೇ ಯೋಜನೆಗೆ ಅನುಮತಿ ನೀಡುವಾಗ ವನ್ಯಜೀವಿಗಳಿಗೆ ತೊಂದರೆ ಆಗದಂತೆ ಅಪಾಯ ತಗ್ಗಿಸುವ ಪರಿಹಾರಗಳೊಂದಿಗೆ ಪ್ರಸ್ತಾವನೆ ಮಂಡಿಸುವುದನ್ನು ಕಡ್ಡಾಯಗೊಳಿಸುವಂತೆ ಅವರು ನಿರ್ದೇಶನ ನೀಡಿದರು.

ರೇಡಿಯೊ ಕಾಲರ್ ಹಾಕಿ ಕಾಡಿಗೆ ಬಿಡಿ

  • ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಬಳಿಯ ಕೆರೆಕಟ್ಟೆ ಸಮೀಪ ಸೆರೆ ಹಿಡಿಯಲಾಗಿರುವ ಆನೆಗೆ ರೇಡಿಯೊ ಕಾಲರ್ ಅಳವಡಿಸಿ ಕಾಡಿಗೆ ಬಿಡುವುದು ಸೂಕ್ತ ಎಂದು ಸಚಿವ ಈಶ್ವರ ಖಂಡ್ರೆ ಸಭೆಯಲ್ಲಿ ಸೂಚಿಸಿದರು.

ಕುಂಬ್ಳೆ ಕರೆಯಲು ಸೂಚನೆ

  • ಅರಣ್ಯ ಮತ್ತು ವನ್ಯಜೀವಿ ರಾಯಭಾರಿ ಯಾಗಿ ನೇಮಕಗೊಂಡಿರುವ ಅನಿಲ್ ಕುಂಬ್ಳೆ ಅವರನ್ನು ಮುಂದಿನ ಸಭೆಗಳಿಗೆ ಆಹ್ವಾನಿಸುವಂತೆ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಖಂಡ್ರೆ ಸೂಚನೆ ನೀಡಿದರು.
  • 2025 ಪ್ರಕಾಶಮಾನ ಚಂದಿರ ಗೋಚರ

ಸಂದರ್ಭ: ಪ್ರಸಕ್ತ ವರ್ಷದ ಅತಿದೊಡ್ಡ ಹಾಗೂ ಅತ್ಯಂತ ಪ್ರಕಾಶಮಾನವಾದ ಚಂದ್ರ (ಸೂಪರ್ಮೂನ್‌) ಬುಧವಾರ ಗೋಚರಿಸಿದೆ. ‘ನವೆಂಬರ್ಸೂಪರ್ಮೂನ್ ಎಂದು ಕರೆಯಲಾಗುವ ಚಂದ್ರ, ಸಾಮಾನ್ಯ ಹುಣ್ಣಿಮೆಯ ಚಂದ್ರನಿಗಿಂತಲೂ ಭೂಮಿಗೆ ಬರೋಬ್ಬರಿ 17,000 ಮೈಲಿಗಳಷ್ಟು ಸಮೀಪದಲ್ಲಿದ್ದದ್ದು ವಿಶೇಷ.

  • 2025ನೇ ಸಾಲಿನಲ್ಲಿ ಕಾಣಿಸಿ ಕೊಳ್ಳುವ ಮೂರು ಸೂಪರ್‌ ಮೂನ್‌ಗಳ ಪೈಕಿ ಇದು ಎರಡನೆಯದ್ದಾಗಿದ್ದು, ಸಾಮಾನ್ಯ ಹುಣ್ಣಿಮೆ ಚಂದ್ರನಿಗಿಂತ ಈ ಸೂಪರ್‌ ಮೂನ್‌ ಶೇಕಡ 14ರಷ್ಟು ದೊಡ್ಡದಾಗಿ ಹಾಗೂ ಶೇ 30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಕಾಣಿಸಿಕೊಂಡಿದೆ.
  • ಭೂಮಿಯಿಂದ 3,57,000 ಕಿ.ಮೀ.ದೂರದಲ್ಲಿ ಅಂದರೆ ಅತ್ಯಂತ ಸಮೀಪದಲ್ಲಿ ಚಂದ್ರ ಗೋಚರಿಸಿರುವ ಕಾರಣ, ಇದು ಅತ್ಯಂತ ದೊಡ್ಡದಾಗಿ ಹಾಗೂ ಪ್ರಕಾಶಮಾನವಾಗಿ ಕಾಣಿಸಿಕೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
  • ಸಂಜೆ 6.49ರ ಸುಮಾರಿಗೆ ದೇಶದ ವಿವಿಧ ಭಾಗಗಳಲ್ಲಿ ಜನರು ಸೂಪರ್‌ ಮೂನ್‌ ವೀಕ್ಷಿಸಲು ಸಾಧ್ಯವಾಗಿದ್ದು, ಹಲವರು ‘ಅತ್ಯಂತ ಪ್ರಕಾಶಮಾನವಾದ ಸೂಪರ್‌ ಮೂನ್‌’ ಎಂಬ ಶೀರ್ಷಿಕೆಗಳೊಂದಿಗೆ ಫೋಟೊಗಳನ್ನು ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
  • ದಶಕ ಕಳೆದರೂ ಸಿಗದ ನ್ಯಾಯಬೆಲೆ
  • ‘ಎ.ಐ: ಅಗತ್ಯ ಎದುರಾದರೆ ನಿಯಂತ್ರಣ’

ಸಂದರ್ಭ: ಕೃತಕ ಬುದ್ಧಿಮತ್ತೆ (.) ವಲಯದಲ್ಲಿ ಅಗತ್ಯ ಸೃಷ್ಟಿಯಾದಾಗ ನಿಯಂತ್ರಣ ಕ್ರಮಗಳನ್ನು ಅಥವಾ ಕಾನೂನನ್ನು ಜಾರಿಗೆ ತರಲಾಗುತ್ತದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ (.ಟಿ.) ಕಾರ್ಯದರ್ಶಿ ಎಸ್. ಕೃಷ್ಣನ್ ಹೇಳಿದ್ದಾರೆ.

  • ಈಗ ಸರ್ಕಾರವು ಕೃತಕ ಬುದ್ಧಿಮತ್ತೆ ವಲಯದಲ್ಲಿನ ಆವಿಷ್ಕಾರಗಳ ಮೇಲೆ ಗಮನ ನೀಡುತ್ತಿದೆ. ಎ.ಐ. ಮೂಲಕ ದೇಶದ ಜನರಿಗೆ ಅತ್ಯಂತ ಹೆಚ್ಚಿನ ಲಾಭ ತಂದುಕೊಡಲು ಸರ್ಕಾರ ಬಯಸುತ್ತಿದೆ ಎಂದು ಅವರು ಹೇಳಿದ್ದಾರೆ.
  • ‘ಆವಿಷ್ಕಾರಗಳಿಗೆ ಹೆಚ್ಚಿನ ಆದ್ಯತೆ ನೀಡುವುದು ಇಂದಿನ ಅಗತ್ಯ ಎಂದು ಭಾವಿಸುವುದಾದರೆ, ನಿಯಂತ್ರಣ ಕ್ರಮಗಳನ್ನು ಜಾರಿಗೆ ತರುವುದು ಇಂದಿನ ಆದ್ಯತೆ ಆಗುವುದಿಲ್ಲ… ಆದರೆ ನಿಯಂತ್ರಣ ಕ್ರಮಗಳಿಗೆ ಅಥವಾ ಕಾನೂನಿನ ಜಾರಿಗೆ ಅಗತ್ಯ ಎದುರಾದರೆ ಸರ್ಕಾರ ಆಗ ಹಿಂದೇಟು ಹಾಕುವುದಿಲ್ಲ’ ಎಂದು ಕೃಷ್ಣನ್ ತಿಳಿಸಿದ್ದಾರೆ.
  • ಡಿಸೆಂಬರ್ನಿಂದ ರಷ್ಯಾ ತೈಲ ಇಲ್ಲ

ಸಂದರ್ಭ: ನೇರ ಆಮದು ನಿಲ್ಲುವ ಸಾಧ್ಯತೆ, ಮಧ್ಯವರ್ತಿಗಳ ಮೂಲಕ ಆಮದು ಮುಂದುವರಿಕೆ: ಭಾರತದ ಕಂಪನಿಗಳು ರಷ್ಯಾದಿಂದ ಕಚ್ಚಾ ತೈಲವನ್ನು ನೇರವಾಗಿ ಆಮದು ಮಾಡಿಕೊಳ್ಳುವುದನ್ನು ನವೆಂಬರ್ಕೊನೆಯ ವಾರದಿಂದ ಕಡಿಮೆ ಮಾಡಲಿವೆ.

  • ರಷ್ಯಾದ ರೊಸ್ನೆಫ್ಟ್‌ ಹಾಗೂ ಲುಕಾಯಿಲ್ ಕಂಪನಿಗಳ ಮೇಲೆ ಅಮೆರಿಕವು ವಿಧಿಸಿರುವ ನಿರ್ಬಂಧಕ್ಕೆ ಅನುಗುಣವಾಗಿ ಭಾರತದ ತೈಲ ಸಂಸ್ಕರಣಾ ಕಂಪನಿಗಳು ನಡೆದುಕೊಳ್ಳುವ ನಿರೀಕ್ಷೆ ಇದೆ ಎಂದು ತಜ್ಞರು ಹೇಳಿದ್ದಾರೆ.
  • ಇದರಿಂದಾಗಿ ಡಿಸೆಂಬರ್‌ನಲ್ಲಿ ಭಾರತಕ್ಕೆ ಬರುವ ರಷ್ಯಾದ ಕಚ್ಚಾ ತೈಲದ ಪ್ರಮಾಣ ತೀವ್ರವಾಗಿ ತಗ್ಗಲಿದೆ. ನಂತರದಲ್ಲಿ, 2026ರ ಆರಂಭದಿಂದ ಮಧ್ಯವರ್ತಿಗಳು ಹಾಗೂ ಪರ್ಯಾಯ ವ್ಯಾಪಾರ ಮಾರ್ಗಗಳ ಮೂಲಕ ರಷ್ಯಾದ ಕಚ್ಚಾ ತೈಲದ ಆಮದು ನಿಧಾನವಾಗಿ ಹೆಚ್ಚಳವಾಗುವ ಅಂದಾಜು ಇದೆ.
  • ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವ ಕಂಪನಿಗಳ ಸಾಲಿನಲ್ಲಿ ಮೊದಲ ಸ್ಥಾನದಲ್ಲಿರುವ ರಿಲಯನ್ಸ್ ಇಂಡಸ್ಟ್ರೀಸ್‌ ಲಿಮಿಟೆಡ್‌ ಅಲ್ಲಿಂದ ಖರೀದಿಯನ್ನು ನಿಲ್ಲಿಸಲಿದೆ. ಸರ್ಕಾರಿ ಸ್ವಾಮ್ಯದ ಇತರ ಎರಡು ಸಂಸ್ಕರಣಾ ಕಂಪನಿಗಳು ರಷ್ಯಾದಿಂದ ತೈಲ ಆಮದು ನಿಲ್ಲಿಸುವುದಾಗಿ ಹೇಳಿವೆ. ಎಂಆರ್‌ಪಿಎಲ್‌ ಹಾಗೂ ಎಚ್‌ಪಿಸಿಎಲ್‌–ಮಿತ್ತಲ್‌ ಎನರ್ಜಿ ಲಿಮಿಟೆಡ್‌ ಕಂಪನಿ ಮುಂದಿನ ದಿನಗಳಲ್ಲಿ ಆಮದನ್ನು ಅಮಾನತಿನಲ್ಲಿ ಇರಿಸುವ ಆಲೋಚನೆ ಇರುವುದಾಗಿ ಹೇಳಿವೆ.
  • ಆದರೆ ನಯಾರಾ ಎನರ್ಜಿ ಕಂಪನಿಯ ವಾದಿನಾರ್‌ ತೈಲ ಸಂಸ್ಕರಣಾ ಘಟಕವು ರಷ್ಯಾದಿಂದ ತೈಲ ಆಮದನ್ನು ಮುಂದುವರಿಸುವ ನಿರೀಕ್ಷೆ ಇದೆ. ನಯಾರಾ ಕಂಪನಿಯಲ್ಲಿ ರೊಸ್ನೆಫ್ಟ್‌ನ ಹೂಡಿಕೆ ಇದೆ.
  • ದತ್ತಾಂಶ ವಿಶ್ಲೇಷಣಾ ಸಂಸ್ಥೆ ಕೆಪ್ಲರ್‌ನ ಮುಖ್ಯ ಸಂಶೋಧನಾ ವಿಶ್ಲೇಷಕ ಸುಮಿತ್ ರಿತೋಲಿಯಾ ಅವರ ಪ್ರಕಾರ, ಅಕ್ಟೋಬರ್‌ನಲ್ಲಿ ಭಾರತಕ್ಕೆ ಕಚ್ಚಾ ತೈಲ ಪೂರೈಸಿದ ದೇಶಗಳ ಸಾಲಿನಲ್ಲಿ ರಷ್ಯಾ ಮೊದಲ ಸ್ಥಾನದಲ್ಲಿದೆ. ಇರಾಕ್ ಮತ್ತು ಸೌದಿ ಅರೇಬಿಯಾ ನಂತರದ ಸ್ಥಾನಗಳಲ್ಲಿವೆ.
  • ತಜ್ಞರ ಪ್ರಕಾರ ರಷ್ಯಾದಿಂದ ಕಚ್ಚಾ ತೈಲ ಆಮದು ಸಂಪೂರ್ಣವಾಗಿ ನಿಲ್ಲುವ ಸಾಧ್ಯತೆ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಆಮದು ಹೆಚ್ಚು ಸಂಕೀರ್ಣವಾದ ಸಾಗಣೆ ಮತ್ತು ಖರೀದಿ ವ್ಯವಸ್ಥೆಯನ್ನು ಆಶ್ರಯಿಸಲಿದೆ.
  • ‘ಡಿಸೆಂಬರ್‌ನಲ್ಲಿ ರಷ್ಯಾದ ಕಚ್ಚಾ ತೈಲ ಆಮದು ಗಣನೀಯವಾಗಿ ಕಡಿಮೆ ಆಗಬಹುದು. 2026ರ ಮೊದಲಾರ್ಧದ ಮಧ್ಯಭಾಗದಲ್ಲಿ ಅಥವಾ ಕೊನೆಯ ಹಂತದಲ್ಲಿ, ಹೊಸ ಮಧ್ಯವರ್ತಿಗಳು ಹಾಗೂ ಪರ್ಯಾಯ ಮಾರ್ಗಗಳು ಸೃಷ್ಟಿಯಾದ ನಂತರ ಅಲ್ಲಿಂದ ತೈಲ ತರಿಸಿಕೊಳ್ಳುವುದು ಹಂತ ಹಂತವಾಗಿ ಹೆಚ್ಚಳವಾಗಬಹುದು’ ಎಂದು ಹೇಳಿದ್ದಾರೆ.
  • ಸ್ಟಾರ್ಲಿಂಕ್ ಜೊತೆ ಮಹಾರಾಷ್ಟ್ರ ಸರ್ಕಾರ ಒಪ್ಪಂದ

ಸಂದರ್ಭ: ಉಪಗ್ರಹ ಆಧಾರಿತ ಇಂಟರ್ನೆಟ್ಸೇವೆ ಒದಗಿಸುವ, ಉದ್ಯಮಿ ಇಲಾನ್ಮಸ್ಕ್ಒಡೆತನದ ಸ್ಟಾರ್ಲಿಂಕ್ಕಂಪನಿಯ ಜೊತೆ ಮಹಾರಾಷ್ಟ್ರ ಸರ್ಕಾರ ಒಪ್ಪಂದ ಮಾಡಿಕೊಂಡಿದೆ.

  • ಮಹಾರಾಷ್ಟ್ರವು ಸ್ಟಾರ್‌ಲಿಂಕ್‌ ಜೊತೆಗೆ ಒಪ್ಪಂದ ಮಾಡಿಕೊಂಡ ದೇಶದ ಮೊದಲ ರಾಜ್ಯವಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಈ ಕುರಿತ ಒಪ್ಪಂದಕ್ಕೆ ಸರ್ಕಾರವು ಸ್ಟಾರ್‌ಲಿಂಕ್ ಸ್ಯಾಟ್‌ಲೈಟ್ ಕಮ್ಯುನಿಕೇಷನ್ಸ್ ಪ್ರೈವೆಟ್ ಲಿಮಿಟೆಡ್‌ನೊಂದಿಗೆ ಸಹಿ ಹಾಕಿದೆ.
  • ‘ಈ ಒಪ್ಪಂದದಿಂದ ಉಪಗ್ರಹ ಆಧಾರಿತ ಇಂಟರ್‌ನೆಟ್‌ ಸೇವೆಯನ್ನು ಸರ್ಕಾರಿ ಸಂಸ್ಥೆಗಳು, ಗ್ರಾಮೀಣ ಪ್ರದೇಶಗಳು, ಕುಗ್ರಾಮ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ಒದಗಿಸಲಾಗುವುದು’ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ.
  • ‘ಸ್ಟಾರ್‌ಲಿಂಕ್ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ಐಸಿಟಿ) ಕ್ಷೇತ್ರದ ಅತಿದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. ಕಂಪನಿಯೊಂದಿಗೆ ಮಹಾರಾಷ್ಟ್ರ ಒಪ್ಪಂದ ಹೊಂದಿರುವುದು ನಮಗೆ ಗೌರವವಾಗಿದೆ’ ಎಂದು ತಿಳಿಸಿದ್ದಾರೆ.
  • ಈ ಸಹಯೋಗವು ಡಿಜಿಟಲ್‌ ಮಹಾರಾಷ್ಟ್ರ ಮಿಷನ್‌, ಕರಾವಳಿ ಅಭಿವೃದ್ಧಿ ಸೇರಿ ಹಲವು ಅಭಿವೃದ್ಧಿಗೆ ನೆರವಾಗಲಿದೆ ಎಂದು ಹೇಳಿದ್ದಾರೆ.
  • ಡೆಟ್ರಾಯಿಟ್‌: ಮೊದಲ ಮಹಿಳಾ ಮೇಯರ್ಆಯ್ಕೆ
  • ಡೆಟ್ರಾಯಿಟ್‌ನ ಮೊದಲ ಮಹಿಳಾ ಮೇಯರ್‌ ಆಗಿ ಮೇರಿ ಶೆಫೀಲ್ಡ್ ಅವರು ಆಯ್ಕೆಯಾಗಿದ್ದಾರೆ. ಸದ್ಯ ಅವರು ಸಿಟಿ ಕೌನ್ಸಿಲ್‌ ಅಧ್ಯಕ್ಷೆ ಆಗಿದ್ದಾರೆ.
  • ಪ್ರಮುಖ ಚರ್ಚ್‌ವೊಂದರ ಪ್ರಸಿದ್ಧ ಪಾದ್ರಿ ಸೊಲೊಮನ್ ಕಿನ್ನೊಚ್ ಅವರನ್ನು ಶೆಫೀಲ್ಡ್ ಸಾರ್ವತ್ರಿಕ ಚುನಾವಣೆಯಲ್ಲಿ ಪರಾಭವಗೊಳಿಸಿದ್ದಾರೆ. ಮೇಯರ್‌ ಆಗಿ ಜನವರಿಯಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
  • 2013ರಲ್ಲಿ ಶೆಫೀಲ್ಡ್ ತಮ್ಮ 26ನೇ ವಯಸ್ಸಿನಲ್ಲಿ ಸಿಟಿ ಕೌನ್ಸಿಲ್‌ಗೆ ಆಯ್ಕೆಯಾಗಿದ್ದು, 2022ರಲ್ಲಿ ಕೌನ್ಸಿಲ್‌ನ ಅಧ್ಯಕ್ಷರಾಗಿದ್ದರು. 
  • ‘ಡೆಟ್ರಾಯಿಟ್‌ನ ಮಕ್ಕಳಿಗೆ ಶಿಕ್ಷಣ ನೀಡುವ ಕಡೆ ಹೆಚ್ಚು ಗಮನ ನೀಡುತ್ತೇನೆ. ಸಾರ್ವಜನಿಕರ ಸುರಕ್ಷತೆ ಮತ್ತು ಜೀವನಮಟ್ಟ ಸುಧಾರಿಸುವುದು ಚುನಾಯಿತ ಮೇಯರ್‌ ಆಗಿ ನನ್ನ ಆದ್ಯತೆಯಾಗಿದೆ’ ಎಂದು ಮೇರಿ ಶೆಫೀಲ್ಡ್ ಹೇಳಿದ್ದಾರೆ.
  • ಸಾಲದ ಹಣ ಕೌಶಲ ವೃದ್ಧಿಗೆ ಬಳಕೆ: ಸಮೀಕ್ಷೆ

ಸಂದರ್ಭ: ದೇಶದ ಯುವಕರು ಸಾಲದ ರೂಪದಲ್ಲಿ ಪಡೆಯುವ ಹಣವನ್ನು ಬಹಳ ಜವಾಬ್ದಾರಿಯಿಂದ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ಹಣವನ್ನು ಕೌಶಲ ಹೆಚ್ಚಿಸಿಕೊಳ್ಳಲು, ವೃತ್ತಿಯಲ್ಲಿ ಬೆಳವಣಿಗೆ ಸಾಧಿಸಲು, ಉದ್ಯಮ ಲೋಕದಲ್ಲಿನ ಗುರಿಗಳನ್ನು ಸಾಧಿಸಲು ಬಳಸುತ್ತಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

  • ಸಾಲ ನೀಡುವ ವೇದಿಕೆ ಎಂ–ಪಾಕೆಟ್‌ ನಡೆಸಿರುವ ಸಮೀಕ್ಷೆಯ ಪ್ರಕಾರ ಇಂದಿನ ತಲೆಮಾರಿನ ಜನರಿಗೆ ಸಾಲ ಪಡೆಯುವುದು ಹೊಸ ಸಾಧ್ಯತೆಗಳನ್ನು ಅರಸಲು ಇರುವ ಒಂದು ಮಾರ್ಗ.
  • ಸಮೀಕ್ಷೆಯಲ್ಲಿ ಭಾಗಿಯಾಗಿದ್ದವರ ಪೈಕಿ ಶೇಕಡ 63ರಷ್ಟು ಮಂದಿ ಸಾಲದಿಂದಾಗಿ ತಮ್ಮ ಹಣಕಾಸಿನ ಸ್ಥಿತಿಯ ಮೇಲೆ ಉತ್ತಮ ಪರಿಣಾಮ ಉಂಟಾಗಿದೆ ಎಂದು ಹೇಳಿದ್ದಾರೆ, ಶೇ 40ರಷ್ಟು ಮಂದಿ ಸಾಲವನ್ನು ವೃತ್ತಿಯಲ್ಲಿ ಮುಂದೆ ಬರಲು, ಜೀವನಶೈಲಿಯಲ್ಲಿ ಸುಧಾರಣೆ ತರಲು, ಶಿಕ್ಷಣಕ್ಕಾಗಿ ಬಳಕೆ ಮಾಡಿಕೊಂಡಿದ್ದಾರೆ.
  • ಮೂರು ಸಾವಿರಕ್ಕೂ ಹೆಚ್ಚು ಯುವಕರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದರು. ಶೇ 23.4ರಷ್ಟು ಮಂದಿ ಆರೋಗ್ಯ ವೆಚ್ಚ ನಿಭಾಯಿಸಲು ಸಾಲ ಪಡೆಯುತ್ತಿದ್ದಾರೆ, ಶೇ 12.4ರಷ್ಟು ಮಂದಿ ತುರ್ತು ಸಂದರ್ಭ ನಿಭಾಯಿಸಲು ಸಾಲ ಪಡೆಯುತ್ತಿದ್ದಾರೆ. ಯುವಕರು ಸಾಲ ಪಡೆದು ತಮ್ಮ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಲು, ದೀರ್ಘಾವಧಿಯಲ್ಲಿ ಬೆಳವಣಿಗೆ ಸಾಧಿಸಲು ಅದನ್ನು ಬಳಸಿಕೊಳ್ಳುತ್ತಿರುವುದು ಸಮೀಕ್ಷೆಯಲ್ಲಿ ಕಂಡುಬಂದಿದೆ.
  • ಅಣ್ವಸ್ತ್ರ ಪರೀಕ್ಷೆ‍‍ ಪುನರಾರಂಭ: ವ್ಲಾದಿಮಿರ್ಪುಟಿನ್ಸೂಚನೆ

ಸಂದರ್ಭ: ಅಣ್ವಸ್ತ್ರ ಪರೀಕ್ಷೆಗಳನ್ನು ಪುನರಾರಂಭಿಸುವ ಸಾಧ್ಯತೆ ಕುರಿತು ಶೀಘ್ರವೇ ಪ್ರಸ್ತಾವ ಸಲ್ಲಿಸಿ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ಪುಟಿನ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

  • ಅಮೆರಿಕವು ಅಣ್ವಸ್ತ್ರ ಪರೀಕ್ಷೆಗಳನ್ನು ಪುನರಾರಂಭಿಸುವ ಬಗ್ಗೆ, ಅಧ್ಯಕ್ಷ ಡೊನಾಲ್ಡ್‌  ಟ್ರಂಪ್‌ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಯಾಗಿ ರಷ್ಯಾ ಈ ಪ್ರತಿಕ್ರಿಯೆ ನೀಡಿದೆ.
  • ಭದ್ರತಾ ಮಂಡಳಿ ಸದಸ್ಯರೊಂದಿಗೆ ಚರ್ಚೆ ನಡೆಸಿದ ಪುಟಿನ್‌, ‘ಅಮೆರಿಕ ಮೊದಲು ಅಣ್ವಸ್ತ್ರ ಪರೀಕ್ಷೆ ನಡೆಸಿದರೆ ಮಾತ್ರ ರಷ್ಯಾ ಅಣ್ವಸ್ತ್ರ ಪರೀಕ್ಷೆಗಳನ್ನು ಪುನರಾರಂಭಿಸುತ್ತದೆ’ ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ದೃಢಪಡಿಸಿದರು. 
  • ಮತ್ತೆ ಮೇಯರ್ಆದ ಪುರೆವಾಲ್

ಸಂದರ್ಭ: ಭಾರತೀಯ ಮೂಲದ ಪುರೆವಾಲ್ಅವರು ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ಅವರ ಸಹೋದರ ಕೋರಿ ಬೌಮನ್ಅವರನ್ನು  ಪರಾಭವಗೊಳಿಸಿ ಎರಡನೇ ಬಾರಿಗೆ  ಸಿನ್ಸಿನಾಟಿಯ ಮೇಯರ್ ಹುದ್ದೆಗೇರಿದ್ದಾರೆ.

  • ಇದರೊಂದಿಗೆ ಡೆಮಾಕ್ರಟ್‌ಗಳು ಸಿನ್ಸಿನಾಟಿಯ ಸ್ಥಳೀಯ ಸರ್ಕಾರದ ಹಿಡಿತವನ್ನು ಪಡೆದಿದ್ದಾರೆ ಮತ್ತು ಒಹಿಯೊನಲ್ಲಿ ಪುರೆವಾಲ್‌ ಅವರ ರಾಜಕೀಯ ಭವಿಷ್ಯವು ಉಜ್ವಲವಾಗುವ ಸೂಚನೆ ಲಭಿಸಿದೆ ಎಂದು ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.
  • ನಾಸ್ಕಾಂ ಫೌಂಡೇಷನ್ನಿಂದ ಮಹಿಳಾ ಉದ್ಯಮಿಗಳಿಗೆ ನೆರವು

ಸಂದರ್ಭ: ಮಹಿಳಾ ಉದ್ಯಮಿಗಳನ್ನು ವಾಣಿಜ್ಯ ಕ್ಷೇತ್ರದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ನಾಸ್ಕಾಂ ಫೌಂಡೇಷನ್ ಮತ್ತು ಒಎನ್ಡಿಸಿ ನೆಟ್ವರ್ಕ್ಜೊತೆಯಾಗಿ ಹೊಸ ಯೋಜನೆಯೊಂದನ್ನು ರೂಪಿಸಿವೆ. ಇದು ಕರ್ನಾಟಕದ ಮಹಿಳಾ ಉದ್ಯಮಿಗಳನ್ನು ಆದ್ಯತೆಯನ್ನಾಗಿ ಇರಿಸಿಕೊಂಡಿದೆ.

  • ಈ ಯೋಜನೆಯ ಮೂಲಕ ಮಹಿಳೆಯರ ನೇತೃತ್ವದ 200 ಉದ್ಯಮಗಳನ್ನು ಒಎನ್‌ಡಿಸಿ ನೆಟ್‌ವರ್ಕ್‌ ವ್ಯಾಪ್ತಿಗೆ ತರಲಾಗಿದೆ, ಅವರಿಗೆ ಇ–ವಾಣಿಜ್ಯ ಮಾರುಕಟ್ಟೆ ಲಭ್ಯವಾಗುವಂತೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
  • ‘ಭಾರತದ ಇ–ವಾಣಿಜ್ಯ ಮಾರುಕಟ್ಟೆಯು 2034ರ ವೇಳೆಗೆ ಅಮೆರಿಕದ ಇ–ವಾಣಿಜ್ಯ ಮಾರುಕಟ್ಟೆಯನ್ನು ಮೀರಿ ಬೆಳೆಯುವ ಅಂದಾಜು ಇದೆ. ಹೀಗಿದ್ದರೂ, ಈ ವಲಯದಲ್ಲಿ ಬೆಳೆಯಲು ಬೇಕಿರುವ ಡಿಜಿಟಲ್ ಪರಿಣತಿಯು ಸಣ್ಣ ಹಾಗೂ ಮಧ್ಯಮ ಗಾತ್ರದ ವ್ಯಾಪಾರಿಗಳ ಪೈಕಿ ಹಲವರಿಗೆ ಈಗಲೂ ಇಲ್ಲ.
  • ಒಎನ್‌ಡಿಸಿ ಜೊತೆಗಿನ ನಮ್ಮ ಪಾಲುದಾರಿಕೆಯು 200ಕ್ಕೂ ಹೆಚ್ಚು ಮಹಿಳಾ ಉದ್ಯಮಿಗಳಿಗೆ ಆನ್‌ಲೈನ್‌ ಮಾರುಕಟ್ಟೆಯಲ್ಲಿ ಬೆಳವಣಿಗೆ ಸಾಧಿಸಲು ನೆರವಾಗಿದೆ’ ಎಂದು ನಾಸ್ಕಾಂ ಫೌಂಡೇಷನ್‌ನ ಸಿಇಒ ಜ್ಯೋತಿ ಶರ್ಮಾ ಹೇಳಿದ್ದಾರೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿ, ಉಡುಪಿ ಸೇರಿದಂತೆ 22 ಜಿಲ್ಲೆಗಳ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಪ್ರಚಲಿತ ವಿದ್ಯಮಾನಗಳು: 5ನೇ ನವೆಂಬರ್ 2025

  • ತ್ವರಿತ ನ್ಯಾಯಕ್ಕೆಎಐತಂತ್ರಜ್ಞಾನ

ಸಂದರ್ಭ: ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ನ್ಯಾಯಾಲಯಗಳಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ, ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ತ್ವರಿತ ನ್ಯಾಯಾಲಯ ಸ್ಥಾಪಿಸುವುದೂ ಸೇರಿದಂತೆ ಜಿಲ್ಲಾ ನ್ಯಾಯಾಂಗಕ್ಕೆ ಸಮಗ್ರ ಸುಧಾರಣೆ ತರಲು ಸರ್ಕಾರ ಮುಂದಡಿ ಇಟ್ಟಿದೆ.

  • ಈ ಉದ್ದೇಶದಿಂದ ‘ಕರ್ನಾಟಕ ಜಿಲ್ಲಾ ನ್ಯಾಯಾಂಗ ಸುಧಾರಣೆಗಳ ಮಸೂದೆ– 2025’ರ ಕರಡು ಸಿದ್ಧಗೊಂಡಿದೆ. ಬೆಳಗಾವಿ ಅಧಿವೇಶನದಲ್ಲಿ ಈ ಮಸೂದೆ ಮಂಡಿಸುವ ತಯಾರಿಯೂ ನಡೆದಿದೆ.
  • ನ್ಯಾಯಾಂಗ ಪ್ರಕ್ರಿಯೆ ಗಳಲ್ಲಿ ವೇಗ, ನಿಖರತೆ, ಪಾರದರ್ಶಕತೆ ಮತ್ತು ವಸ್ತುನಿಷ್ಠತೆ ಹೆಚ್ಚಿಸಲು ಕೃತಕ ಬುದ್ಧಿಮತ್ತೆ (ಎಐ) ಸಾಧನ ಬಳಸಬೇಕು ಮತ್ತು ಡಿಜಿಟಲ್ ತಂತ್ರಜ್ಞಾನಗಳನ್ನು ಪರಿಚಯಿಸಬೇಕು. ಆ ಮೂಲಕ ಜಿಲ್ಲಾ ನ್ಯಾಯಾಂಗದಲ್ಲಿ ನ್ಯಾಯದಾನ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಲು ರಾಜ್ಯ ಸರ್ಕಾರ ಮತ್ತು ಹೈಕೋರ್ಟ್‌ ಸಮನ್ವಯದಿಂದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಪ್ರಸ್ತಾವ ಮಸೂದೆಯಲ್ಲಿದೆ.
  • ಮಸೂದೆಯಲ್ಲಿ ಏನಿದೆ?: ರೈತರು, ನಿರುದ್ಯೋಗಿಗಳು, ಉದ್ಯೋಗ ವಂಚಿತರು, ಭೂ ವಿವಾದಗಳು, ಕೃಷಿ ಸಾಲಗಳು, ಬೆಳೆ ವಿಮೆ ಮತ್ತು ಹಿಡುವಳಿ ಸಮಸ್ಯೆಗಳು ಸೇರಿದಂತೆ ಕೃಷಿ ವಿವಾದಗಳನ್ನು ಒಳಗೊಂಡ ಸಿವಿಲ್ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವುದಕ್ಕೆ ಅನುಗುಣವಾಗಿ ಪ್ರತಿ ಜಿಲ್ಲೆಗೆ ಕನಿಷ್ಠ ಒಂದು ‘ತ್ವರಿತ ನ್ಯಾಯಾಲಯ’ ಸ್ಥಾಪಿಸಬೇಕು.
  • ಈ ನ್ಯಾಯಾಲಯಗಳ ಮುಂದಿರುವ ಎಲ್ಲ ಪ್ರಕರಣಗಳಿಗೆ ಮಧ್ಯಸ್ಥಿಕೆ ಕೇಂದ್ರಗಳು, ಲೋಕ ಅದಾಲತ್‌ಗಳು ಅಥವಾ ಪರ್ಯಾಯ ವಿವಾದ ಪರಿಹಾರ ಕೇಂದ್ರಗಳ ಮೂಲಕ ಪೂರ್ವ ವಿಚಾರಣೆಯ ಮಧ್ಯಸ್ಥಿಕೆ ಕಡ್ಡಾಯವಾಗಿ ಮಾಡಬೇಕು.
  • ತ್ವರಿತ ನ್ಯಾಯಾಲಯಗಳ ಕಾರ್ಯಕ್ಷಮತೆಯ ಬಗ್ಗೆ ಜಿಲ್ಲಾ ನ್ಯಾಯಾಂಗ ಮೇಲ್ವಿಚಾರಣಾ ಸಮಿತಿಯು ತ್ರೈಮಾಸಿಕ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು. ಈ ನ್ಯಾಯಾಲಯಗಳ ಪೀಠಾಸೀನ ಅಧಿಕಾರಿಯು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದೊಂದಿಗೆ ಸಮನ್ವಯ ಸಾಧಿಸಿ, ರೈತರಿಗೆ, ನಿರುದ್ಯೋಗಿಗಳಿಗೆ ಮತ್ತು ಉದ್ಯೋಗ ವಂಚಿತರಿಗೆ ಕಾನೂನು ನೆರವಿನ ಲಭ್ಯತೆಯನ್ನು ಖಾತರಿಪಡಿಸಬೇಕು.
  • 10 ವರ್ಷಗಳಿಗಿಂತ ಹೆಚ್ಚು ಅವಧಿಯಿಂದ ಬಾಕಿ ಇರುವ ಪ್ರಕರಣ ಗಳನ್ನು (ವಿಶೇಷ ಕಾರಣಗಳಿಗಾಗಿ ಹೈಕೋರ್ಟ್‌ ನಿರ್ದೇಶನ ನೀಡದ ಹೊರತು) ಪ್ರಾದೇಶಿಕ ಮತ್ತು ವಿಷಯದ ಅಧಿಕಾರ ವ್ಯಾಪ್ತಿ ಹೊಂದಿರುವ ತ್ವರಿತ ನ್ಯಾಯಾಲಯಕ್ಕೆ ವರ್ಗಾಯಿಸಬೇಕು.
  • ಐದು ಮತ್ತು ಹತ್ತು ವರ್ಷಗಳ ನಡುವೆ ಬಾಕಿ ಉಳಿದಿರುವ ಪ್ರಕರಣಗಳನ್ನು ಜಿಲ್ಲಾ ನ್ಯಾಯಾಧೀಶರ ಶಿಫಾರಸಿನ ಆಧಾರದಲ್ಲಿ ಅಥವಾ ಹೈಕೋರ್ಟ್‌ ನಿರ್ದೇಶನದ ಮೂಲಕ ತ್ವರಿತ ನ್ಯಾಯಾಲಯಕ್ಕೆ ವರ್ಗಾಯಿಸಬಹುದು. ಹೀಗೆ ವರ್ಗಾಯಿಸಿದ ಪ್ರತಿಯೊಂದು ಪ್ರಕರಣವನ್ನು ಸಾಧ್ಯವಾದಷ್ಟು ಮಟ್ಟಿಗೆ ವರ್ಗಾವಣೆಯಾದ ದಿನದಿಂದ 12 ತಿಂಗಳ ಒಳಗೆ ವಿಲೇವಾರಿ ಮಾಡಬೇಕು. ಈ ಬಗ್ಗೆ ಹೈಕೋರ್ಟ್‌ಗೆ ಪ್ರಗತಿ ವರದಿ ಸಲ್ಲಿಸಬೇಕು.
  • ಮೇಲ್ವಿಚಾರಣಾ ಸಮಿತಿ ರಚನೆ: ಪ್ರತಿ ಜಿಲ್ಲೆಯಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ, ಇಬ್ಬರು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ವಕೀಲರ ಸಂಘದ ಒಬ್ಬ ಪ್ರತಿನಿಧಿಯನ್ನು ಒಳಗೊಂಡ ‘ಜಿಲ್ಲಾ ನ್ಯಾಯಾಂಗ ಮೇಲ್ವಿಚಾರಣಾ ಸಮಿತಿ’ಯನ್ನು ಹೈಕೋರ್ಟ್‌ ಸ್ಥಾಪಿಸಬೇಕು ಎಂದೂ ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.
  • ಸಂಡೂರಿನಲ್ಲಿ ಕೌಶಲ ವಿ.ವಿ ಸ್ಥಾಪನೆ: 30 ಲಕ್ಷ ಯುವಜನರಿಗೆ ಕೌಶಲ ತರಬೇತಿ ಗುರಿ

ಸಂದರ್ಭ: ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಕೌಶಲ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

  • ರಾಜ್ಯದ ಜನಸಂಖ್ಯೆಯ ಶೇಕಡ 60ಕ್ಕಿಂತ ಹೆಚ್ಚು ಜನರು 35 ವರ್ಷದ ಒಳಗೆ ಇದ್ದಾರೆ. ಯುವಪೀಳಿಗೆಯನ್ನು ಸರಿಯಾದ ಕೌಶಲ ಮತ್ತು ಆತ್ಮ ವಿಶ್ವಾಸದಿಂದ ಸಜ್ಜುಗೊಳಿಸ ಬೇಕಿದೆ.ನವೋದ್ಯಮ ರಾಜಧಾನಿಯಾಗಿ ರೂಪಾಂತರಗೊಂಡಿರುವ ಬೆಂಗಳೂರು ನಗರ, ಈಗ ಭಾರತದ ಕೌಶಲ ರಾಜಧಾನಿ ಆಗಿರುವುದು ಹೆಮ್ಮೆಎಂದರು.
  • ಬಜೆಟ್ನಲ್ಲಿ ಘೋಷಿಸಿದ್ದ ಕರ್ನಾಟಕ ಕೌಶಲಾಭಿವೃದ್ಧಿ ನೀತಿ 2025-32 ಅನ್ನು ಕೌಶಲ ಶೃಂಗಸಭೆ–2025 ಮೂಲಕ ಕಾರ್ಯರೂಪಕ್ಕೆ ತರಲಾಗುತ್ತಿದೆ. ಏಳು ವರ್ಷದ ಕಾರ್ಯತಂತ್ರದ ನೀಲನಕ್ಷೆಗೆ ₹4,432 ಕೋಟಿ ಅನುದಾನ ನೀಡಿ, ರಾಜ್ಯವನ್ನು ಕೌಶಲಭರಿತ ಹಾಗೂ ಭವಿಷ್ಯದ ಸವಾಲುಗಳಿಗೆ ಸನ್ನದ್ಧ ವಾಗಿಸುವ ಹಾಗೂ ಕಾರ್ಮಿಕ ಶಕ್ತಿಯ ಜಾಗತಿಕ ಕೇಂದ್ರವನ್ನಾಗಿ ರೂಪಿಸುವ ಉದ್ದೇಶವಿದೆ’ ಎಂದು ವಿವರಿಸಿದರು.
  • 2032 ವೇಳೆಗೆ ಸುಮಾರು 30 ಲಕ್ಷ ಯುವಜನರಿಗೆ ಕೌಶಲ ತರಬೇತಿ ನೀಡಲಾಗುವುದು. ಐಟಿಐಗಳಲ್ಲಿ ಮಹಿಳೆಯರ ಪ್ರವೇಶವನ್ನು ಶೇಕಡ 33ಕ್ಕೆ ಹೆಚ್ಚಿಸುವ ಹಾಗೂ ಅಂತರರಾಷ್ಟ್ರೀಯ ವಲಸೆ ಕೇಂದ್ರ ಮೂಲಕ ಜಾಗತಿಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದರು..
  • ನೀಲನಕ್ಷೆ ಬಿಡುಗಡೆ: 2025–2032 ಹಾಗೂ ಕರ್ನಾಟಕ ವರ್ಕ್‌ಫೋರ್ಸ್‌ ಬ್ಲೂಪ್ರಿಂಟ್–2030 ಬಿಡುಗಡೆ ಮಾಡಲಾಯಿತು.
  • ಆಹಾರ ಸುರಕ್ಷತೆಗೆ ಮಾನದಂಡ ರೂಪಿಸಿ

ಸಂದರ್ಭ: ‘ಬೀದಿ ಬದಿ ವ್ಯಾಪಾರಿಗಳು ಹಾಗೂ ದೊಡ್ಡದೊಡ್ಡ ರೆಸ್ಟೋರೆಂಟ್ಗಳು ಆರೋಗ್ಯ ಮತ್ತು ಸುರಕ್ಷತಾ ಮಾನದಂಡ ನಿಯಮಗಳನ್ನು ಚಾಚೂ ತಪ್ಪದೆ ಅನುಸರಣೆ ಮಾಡುವ ಜತೆಗೆ, ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನದ ಬಗ್ಗೆ ನಿಗಾ ಇರಿಸುವುದಕ್ಕೆ ಸೂಕ್ತ ಕಾರ್ಯ ವಿಧಾನವೊಂದನ್ನು ರೂಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನನೀಡಿದೆ.

  • ‘ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘ’ದ ಗೌರವ ಕಾರ್ಯದರ್ಶಿ ನಾಗರಾಜ ಧನ್ಯ ಮತ್ತು ‘ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘ’ದ ಅಧ್ಯಕ್ಷ ಕೆ.ಎನ್. ವಾಸುದೇವ ಅಡಿಗ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ತೀರ್ಪು ನೀಡಿದೆ.

ನ್ಯಾಯಪೀಠ ಹೇಳಿದ್ದೇನು?

  • ‘ಮಾನವನ ಆಹಾರ ಸೇವನೆ ಎಲ್ಲಿಯವರೆಗೆ ಜೀವಂತವಾಗಿರುತ್ತದೆಯೋ ಅಲ್ಲಿಯವರೆಗೂ ಸೇವಿಸುವ ಆಹಾರ ಆರೋಗ್ಯಕರವಾಗಿ ಇರಬೇಕು. ಆರೋಗ್ಯ ಕಾರಣಗಳಿಗಾಗಿ, ಪ್ರತಿಯೊಬ್ಬ ನಾಗರಿಕನೂ ತನ್ನ ಆಹಾರದ ಗುಣಮಟ್ಟವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ.
  • ‘ಭಾರತದಲ್ಲಿ ಬೀದಿ ಬದಿ ಆಹಾರಕ್ಕೆ ಅದರದೇ ಆದ ಸಾಂಸ್ಕೃತಿಕ ಆಯಾಮವಿದೆ. ರಸ್ತೆಬದಿಯ ಸಾಮಾನ್ಯ ಅಂಗಡಿಗಳಿಂದ ಹಿಡಿದು ಆಧುನಿಕ ರೆಸ್ಟೋರೆಂಟ್‌ಗಳವರೆಗೆ, ಭಾರತೀಯ ಪಾಕಪದ್ಧತಿಯ ವಿಶೇಷ ಘಮಲು ಚೈತನ್ಯಶೀಲ ಅಭಿವೃದ್ಧಿ ಉದ್ಯಮದ ಸಂಕೇತವಾಗಿದೆ. ಆದ್ದರಿಂದ, ಈ ಎಲ್ಲ ಉದ್ಯಮಗಳ ವಾರ್ಷಿಕ ವಹಿವಾಟನ್ನು ಆರ್ಥಿಕ ಮಾಪಕದ ಮೂಲಕ ಆಹಾರ ವ್ಯವಹಾರಗಳ ಪರವಾನಗಿ ಮತ್ತು ನೋಂದಣಿ ನಿಯಮಗಳು-2011ರಡಿ ಸಣ್ಣ ಮತ್ತು ದೊಡ್ಡ ರೆಸ್ಟೋರೆಂಟ್‌ಗಳೆಂದು ಪ್ರತ್ಯೇಕಿಸುತ್ತವೆ ಎಂಬುದು ಗಮನಾರ್ಹ.’
  • ‘ಮನುಷ್ಯರ ಆರೋಗ್ಯಕ್ಕೆ ಎದುರಾಗುವ ಅಪಾಯಗಳ ಬಗ್ಗೆ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ-2006ರ ನಿಯಮಗಳ ಅಡಿಯಲ್ಲಿ ಸಣ್ಣ, ಮಧ್ಯಮ ಮತ್ತು ಬೃಹತ್ ರೆಸ್ಟೋರೆಂಟ್‌ಗಳಿಗೆ ತ್ರಿಪಕ್ಷೀಯ ಮಾರ್ಗಸೂಚಿಯೊಂದನ್ನು ರೂಪಿಸಬೇಕು’ ಎಂದೂ ನ್ಯಾಯಪೀಠ ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಖಡಕ್ ತಾಕೀತು ಮಾಡಿದೆ.
  • ‘ಅರ್ಜಿದಾರರು ಆಕ್ಷೇಪಿಸಿರುವ ನಿಬಂಧನೆಗಳನ್ನು ಅಸಾಂವಿಧಾನಿಕ ಎಂದು ನಿರ್ಣಯಿಸಿ ಅವುಗಳನ್ನು ರದ್ದುಗೊಳಿಸಲು ಯಾವುದೇ ಕಾರಣಗಳಿಲ್ಲ’ ಎಂದು ಸ್ಪಷ್ಟಪಡಿಸಿದೆ.
  • ಏನಿದು ಅರ್ಜಿ?: ‘ಆಹಾರ ಸುರಕ್ಷತೆ ದೃಷ್ಟಿಯಿಂದ ನಿಯಮಗಳನ್ನು ರೂಪಿಸಿ, ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕು’ ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಈ ಸಂಬಂಧ ಆಹಾರ ಸುರಕ್ಷಾ ಆಯುಕ್ತರು 2012ರ ಮಾರ್ಚ್ 13ರಂದು ಅಧಿಸೂಚನೆ ಹೊರಡಿಸಿದ್ದರು.
  • ‘ಈ ಅಧಿಸೂಚನೆಯನ್ನು ರದ್ದುಪಡಿಸಬೇಕು’ ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆಹಾರ ಸುರಕ್ಷತೆ ಮತ್ತು ಮಾನದಂಡಗಳ ನಿಯಂತ್ರಣ, (ಪ್ಯಾಕೇಜಿಂಗ್ ಮತ್ತು ಲೇಬಲಿಂಗ್) ನಿಯಮಗಳು-2011, ಆಹಾರ ಸುರಕ್ಷತೆ ಮತ್ತು ಮಾನದಂಡಗಳು, ಆಹಾರ ಉತ್ಪನ್ನಗಳ ಮಾನದಂಡಗಳು ಮತ್ತು ಆಹಾರ ಸೇರ್ಪಡೆಗಳ ನಿಯಮಗಳು-2011 ಮತ್ತು ಆಹಾರ ಸುರಕ್ಷತೆ ಮತ್ತು ಪ್ರಮಾಣಿತ ಕಾಯ್ದೆ-2006 50 ರಿಂದ 65 ರವರೆಗಿನಕಲಂಗಳು ಅಸಾಂವಿಧಾನಿಕಎಂದು ಅರ್ಜಿದಾರರು ಆಕ್ಷೇಪಿಸಿದ್ದರು.
  • ‘ಮಾನದಂಡಗಳನ್ನು ಅನ್ವಯಿಸಲು ನಮಗೆ ಸಾಧ್ಯವಿಲ್ಲ’ ಎಂದು ಅರ್ಜಿದಾರರಾದ ಹೋಟೆಲ್ ಸಂಘಗಳು ಪ್ರತಿಪಾದಿಸಿದ್ದವು.
  • ದೇಶದ ಆರನೇ ಕಲುಷಿತ ನಗರ ದೆಹಲಿ: ವರದಿ

ಸಂದರ್ಭ: ಅಕ್ಟೋಬರ್ನಲ್ಲಿ ಗಾಳಿಯು ಅತಿ ಹೆಚ್ಚು ಕಲುಷಿತಗೊಂಡ ದೇಶದ 10 ನಗರಗಳ ಪಟ್ಟಿಯಲ್ಲಿ ದೆಹಲಿ ಆರನೇ ಸ್ಥಾನ ಪಡೆದಿದ್ದು, ಗಾಜಿಯಾಬಾದ್ಮತ್ತು ನೊಯಿಡಾ ನಂತರದ ಸ್ಥಾನದಲ್ಲಿವೆ ಎಂದು ಅಧ್ಯಯನವೊಂದು ತಿಳಿಸಿದೆ.

  • ಶಕ್ತಿ ಮತ್ತು ಶುದ್ಧ ಗಾಳಿಯ ಸಂಶೋಧನಾ ಕೇಂದ್ರ (ಸಿಆರ್‌ಇಎ) ಬಿಡುಗಡೆ ಮಾಡಿದ ಅಕ್ಟೋಬರ್‌ ತಿಂಗಳ ವಾಯು ಗುಣಮಟ್ಟದ ವರದಿಯ ಪ್ರಕಾರ, ಹರಿಯಾಣದ ಧಾರುಹೆಡಾ ನಗರವು ಅಕ್ಟೋಬರ್‌ನಲ್ಲಿ ವಾಯು ಮಾಲಿನ್ಯದಲ್ಲಿ ಮೊದಲ ಸ್ಥಾನದಲ್ಲಿತ್ತು. ಅಲ್ಲಿ ಪ್ರತಿ ಘನ ಮೀಟರ್‌ ಗಾಳಿಯಲ್ಲಿ 123 ಮೈಕ್ರೋ ಗ್ರಾಂನಷ್ಟು ಮಾಲಿನ್ಯಕಾರಕ ಕಣಗಳು ಪತ್ತೆಯಾಗಿದ್ದವು.
  • ದೇಶದಾದ್ಯಂತ ಗಾಳಿಯ ಗುಣಮಟ್ಟದಲ್ಲಿ ತೀವ್ರ ಕುಸಿತ ಕಂಡುಬಂದಿದ್ದು, ಇಂಡೋ–ಗಂಗಾ ಬಯಲು (ಐಜಿಪಿ), ವಿಶೇಷವಾಗಿ ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ (ಎನ್‌ಆರ್‌ಸಿ) ಪರಿಸ್ಥಿತಿ ತೀವ್ರ ಹದಗೆಟ್ಟಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
  • ಪೋಕ್ಸೊದುರ್ಬಳಕೆ: ‘ಸುಪ್ರೀಂಕಳವಳ

ಸಂದರ್ಭ: ವೈವಾಹಿಕ ಕಲಹ ಮತ್ತು ಹದಿಹರೆಯದವರ ನಡುವಿನ ಸಹಮತದ ಸಂಬಂಧಗಳ ಪ್ರಕರಣಗ ಳಲ್ಲಿಪೋಕ್ಸೊ ಕಾಯ್ದೆ ದುರುಪಯೋಗ ಆಗುತ್ತಿದೆ ಎಂದು ಸುಪ್ರೀಂ ಕೋರ್ಟ್ಕಳವಳ ವ್ಯಕ್ತಪಡಿಸಿದೆ.

  • ಈ ಸಂಬಂಧ ಕಾನೂನು ನಿಬಂಧನೆಗಳ ಕುರಿತು ಬಾಲಕರು ಮತ್ತು ಪುರುಷರಿಗೆ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಆರ್‌. ಮಹದೇವನ್‌ ಅವರ ಪೀಠ ಒತ್ತಿ ಹೇಳಿದೆ. 
  • ‘ದೇಶದಲ್ಲಿ ಬಾಲಕಿಯರು ಮತ್ತು ಮಹಿಳೆಯರಿಗೆ ಸುರಕ್ಷಿತ ವಾತಾವರಣ ಮೂಡಿಸಲು ‘ಪೋಕ್ಸೊ’ ಕಾಯ್ದೆ ಬಗ್ಗೆ ಜನರಲ್ಲಿ ಸಂವೇದನಾಶೀಲತೆ ಬೆಳೆಯುವಂತೆ ಮಾಡಬೇಕಿದೆ. ಅದಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡಬೇಕು’ ಎಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆಯನ್ನು ಪೀಠ ನಡೆಸಿತು.
  • ಎಸ್ಐಆರ್ಪ್ರಕ್ರಿಯೆ ಆರಂಭ

ಸಂದರ್ಭ: 2002ರಲ್ಲಿ ರಾಜ್ಯದಲ್ಲಿ ಎಸ್ಐಆರ್ಪ್ರಕ್ರಿಯೆಯು ಎರಡು ವರ್ಷದವರೆಗೆ ನಡೆದಿತ್ತು. ಬಾರಿ ಒಂದೇ ತಿಂಗಳಿಗೆ ಇದನ್ನು ಮುಗಿಸಿಬಿಡುವ  ಆತುರ ಆಯೋಗಕ್ಕೆ ಏಕೆ? ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ.

  • ಮೂರು ಕೇಂದ್ರಾಡಳಿತ ಪ್ರದೇಶ ಮತ್ತು 9 ರಾಜ್ಯಗಳಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕಾರ್ಯವನ್ನು ಚುನಾವಣಾ ಆಯೋಗವು ಆರಂಭಿಸಿದೆ.
  • ಮತಗಟ್ಟೆ ಹಂತದ ಅಧಿಕಾರಿಗಳು ಮನೆ ಮನೆಗೆ ತೆರಳಿ ಸ್ವಯಂ ಮಾಹಿತಿ ಗಳನ್ನು ತುಂಬುವ ನಮೂನೆಗಳನ್ನು ವಿತರಿಸಿದರು.
  • ಪಶ್ವಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ಎಸ್‌ಐ ಆರ್‌ಗೆ ತೀವ್ರ ವಿರೋಧ ವ್ಯಕ್ತ‍ಪಡಿಸಿದೆ. ‘ಎಸ್‌ಐಆರ್‌ ಅಂದರೆ ಮತ್ತೇನೂ ಅಲ್ಲ, ಅದು ‘ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)’ ಇದ್ದಂತೆ’ ಎಂದಿರುವ ತಮಿಳುನಾಡು ಸರ್ಕಾರ, ಇದರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
  • ಎಸ್‌ಐಆರ್‌ ಕುರಿತು ನಿರ್ಧಾರ ಕೈಗೊಳ್ಳಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಬುಧವಾರ ಆನ್‌ಲೈನ್‌ ಮೂಲಕ ಸರ್ವ ಪಕ್ಷ ಸಭೆ ಕರೆದಿದ್ದಾರೆ.
  • ವ್ಯಕ್ತಿ ಆತ್ಮಹತ್ಯೆ:‘ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಆರಂಭಗೊಂಡ ಕಾರಣ, ದಾಖಲೆಗಳಲ್ಲಿ ಇರುವ ತನ್ನ ಹೆಸರಿನ ಕಾಗುಣಿತದಲ್ಲಿ ತಪ್ಪುಗಳಿವೆ ಎಂದು ಹೆದರಿ ಹೌರಾ ಜಿಲ್ಲೆಯ ಜಾಹಿರ್‌ ಮಲ್‌ (30) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ’ ಎಂದು ಪೊಲೀಸರು ತಿಳಿಸಿದರು.
  • ಪಿಎಲ್ 3ನೇ ಸುತ್ತು ಶುರು

ಸಂದರ್ಭ: ಹೂಡಿಕೆ ಇನ್ನಷ್ಟು ಆಕರ್ಷಿಸುವುದು ಕೇಂದ್ರದ ಉದ್ದೇಶ: ವಿಶೇಷ ಬಳಕೆ ಉದ್ದೇಶದ ಉಕ್ಕು ತಯಾರಿಕಾ ವಲಯದಲ್ಲಿ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೂರನೆಯ ಸುತ್ತಿನ ಉತ್ಪಾದನೆ ಆಧಾರಿತ ಉತ್ತೇಜನ (ಪಿಎಲ್) ಯೋಜನೆಯನ್ನು ಆರಂಭಿಸಿದೆ.

  • ದೇಶಿ ಉತ್ಪಾದನೆ ಹೆಚ್ಚಿಸುವುದು ಹಾಗೂ ಆಮದನ್ನು ತಗ್ಗಿಸುವುದು ಕೂಡ ಪಿಎಲ್‌ಐ ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ. ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಯೋಜನೆಗೆ ಚಾಲನೆ ನೀಡಿದರು.
  • ರಕ್ಷಣೆ, ವೈಮಾಂತರಿಕ್ಷ, ಇಂಧನ, ವಾಹನ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಬಳಕೆ ಮಾಡುವ ‘ವಿಶೇಷ ಬಳಕೆ ಉದ್ದೇಶದ ಉಕ್ಕು’ ತಯಾರಿಕಾ ವಲಯಕ್ಕೆ ಸಂಬಂಧಿಸಿದ ಪಿಎಲ್‌ಐ ಯೋಜನೆಗೆ ಕೇಂದ್ರ ಸಚಿವ ಸಂಪುಟವು 2021ರ ಜುಲೈನಲ್ಲಿ ಒಪ್ಪಿಗೆ ನೀಡಿತ್ತು. ಇದಕ್ಕೆ ₹6,322 ಕೋಟಿ ಅನುದಾನ ನಿಗದಿ ಮಾಡಲಾಗಿತ್ತು.
  • ಈ ಯೋಜನೆಯು ಮೊದಲ ಎರಡು ಸುತ್ತುಗಳಲ್ಲಿ ಇದುವರೆಗೆ ₹43,874 ಕೋಟಿ ಹೂಡಿಕೆಯನ್ನು ಆಕರ್ಷಿಸಿದೆ. ಈ ಪೈಕಿ ₹22,973 ಕೋಟಿ ಈಗಾಗಲೇ ಹೂಡಿಕೆ ಆಗಿದೆ. ಅಲ್ಲದೆ, ಮೊದಲ ಎರಡು ಸುತ್ತುಗಳ ಮೂಲಕ 13 ಸಾವಿರಕ್ಕೂ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಿದೆ.
  • ‘ಮೊದಲ ಎರಡು ಸುತ್ತುಗಳಲ್ಲಿ ದೊರೆತ ಸ್ಪಂದನೆಯು ಉತ್ತೇಜನಕಾರಿ ಯಾಗಿದೆ. ಆ ಯಶಸ್ಸು ಸುಧಾರಣೆ ಆಧಾರಿತ ಹಾಗೂ ಕೈಗಾರಿಕೆಗಳಿಗೆ ಅಗತ್ಯವಿರುವ ನೀತಿಗಳ ಶಕ್ತಿಯನ್ನು ಹೇಳುತ್ತಿದೆ’ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
  • ‘ಈ ಯೋಜನೆಯ ಮೂಲಕ ನಾವು ಭಾರತದಲ್ಲಿ ಉಕ್ಕು ತಯಾರಿಕೆ ಮಾಡುವುದಕ್ಕೆ ಮಾತ್ರ ಗಮನ ನೀಡುತ್ತಿಲ್ಲ. ಬದಲಿಗೆ, ಭಾರತದಿಂದ ಜಗತ್ತಿಗೆ ಉಕ್ಕು ಪೂರೈಕೆ ಮಾಡುವತ್ತಲೂ ಆಲೋಚನೆ ಹೊಂದಿದ್ದೇವೆ’ ಎಂದು ಹೇಳಿದ್ದಾರೆ.
  • ಯೋಜನೆಯ ಮೂರನೆಯ ಸುತ್ತು ಹೊಸ ಉದ್ದಿಮೆಗಳಿಗೆ ಹಾಗೂ ಈಗಾಗಲೇ ಇರುವ ಉದ್ದಿಮೆಗಳಿಗೆ ಹೊಸ ಅವಕಾಶಗಳನ್ನು ತೆರೆಯುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
  • ಸುಡಾನ್‌: ಕದನ ವಿರಾಮಕ್ಕೆ ಆಗ್ರಹ

ಸಂದರ್ಭ: ಸುಡಾನ್ನಲ್ಲಿನ ಆಂತರಿಕ ಸಂಘರ್ಷ ಶಮನಗೊಳಿಸಲು ತಕ್ಷಣವೇ ಕದನ ವಿರಾಮ ಜಾರಿಗೊಳಿಸಿ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ಆಗ್ರಹಿಸಿದ್ದಾರೆ.

  • ಎಲ್‌ ಫಾಶರ್‌ನ ಡಾರ್ಫರ್‌ ನಗರವನ್ನು ಅರೆಸೈನಿಕ ಪಡೆಗಳು ವಶಪಡಿಸಿಕೊಂಡ ಬೆನ್ನಿಗೆ, ‘ಸುಡಾನ್‌ನಲ್ಲಿನ ಆಂತರಿಕ ಸಂಘರ್ಷವು ಯಾರ ನಿಯಂತ್ರಣಕ್ಕೂ ಸಿಗದಾಗಿದೆ’ ಎಂದಿದ್ದಾರೆ.
  • ಕತಾರ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ಮಾತನಾಡಿದ ಗುಟೆರೆಸ್‌, ‘ಗಂಭೀರ ಎಚ್ಚರಿಕೆ ನೀಡಿದ್ದರೂ ಎಲ್‌ ಫಾಶರ್ ವಶಪಡಿಸಿಕೊಂಡಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
  • ಸುಡಾನ್‌ನಲ್ಲಿನ ಆಂತರಿಕ ಸಂಘರ್ಷವು ಎರಡು ವರ್ಷದಿಂದಲೂ ಜಗತ್ತಿನ ಮಾನವೀಯ ಬಿಕ್ಕಟ್ಟುಗಳಲ್ಲಿ ಒಂದಾಗಿದೆ.
  • ಈ ಸಂಘರ್ಷದಲ್ಲಿ ಅಪಾರ ಸಂಖ್ಯೆಯ ನಾಗರಿಕರು ಸಿಲುಕಿಕೊಂಡಿದ್ದು, ತುರ್ತಾಗಿ ಕದನ ವಿರಾಮ ಒಪ್ಪಂದ ಏರ್ಪಡಬೇಕು ಎಂದು ಹೇಳಿದ್ದಾರೆ.
  • ಬ್ಯಾಂಕ್ಖಾಸಗೀಕರಣದಿಂದ ಧಕ್ಕೆ ಇಲ್ಲ

ಸಂದರ್ಭ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ಖಾಸಗೀಕರಣದಿಂದ ಹಣಕಾಸಿನ ಒಳಗೊಳ್ಳುವಿಕೆಯ ಉದ್ದೇಶಕ್ಕೆ ಮತ್ತು ರಾಷ್ಟ್ರದ ಹಿತಾಸಕ್ತಿಗೆ ಧಕ್ಕೆ ಆಗುತ್ತದೆ ಎಂಬ ಆತಂಕದಲ್ಲಿ ಹುರುಳಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

  • 1969ರಲ್ಲಿ ನಡೆದ ಬ್ಯಾಂಕ್‌ಗಳ ರಾಷ್ಟ್ರೀಕರಣ ಪ್ರಕ್ರಿಯೆಯು ಹಣಕಾಸಿನ ಒಳಗೊಳ್ಳುವಿಕೆಯ ವಿಚಾರದಲ್ಲಿ ಅಪೇಕ್ಷಿತ ಫಲಿತಾಂಶವನ್ನು ನೀಡಿಲ್ಲ ಎಂದು ಅವರು ಹೇಳಿದರು.
  • ಡೆಲ್ಲಿ ಸ್ಕೂಲ್ ಆಫ್ ಎಕನಾಮಿಕ್ಸ್‌ನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ರಾಷ್ಟ್ರೀಕರಣದಿಂದಾಗಿ ಆದ್ಯತಾ ವಲಯಗಳಿಗೆ ಸಾಲ ನೀಡುವ ವಿಚಾರದಲ್ಲಿ, ಸರ್ಕಾರದ ಯೋಜನೆಗಳ ವಿಚಾರದಲ್ಲಿ ಅನುಕೂಲ ಆಗಿದ್ದು ನಿಜ. ಆದರೆ ಸರ್ಕಾರದ ನಿಯಂತ್ರಣದ ಕಾರಣದಿಂದಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ವೃತ್ತಿಪರತೆ ಯನ್ನು ಕಳೆದುಕೊಂಡವು’ ಎಂದು ಹೇಳಿದರು.
  • ‘ನಾವು ಬ್ಯಾಂಕ್‌ಗಳನ್ನು ವೃತ್ತಿಪರವಾಗಿಸಿದ ನಂತರದಲ್ಲಿ’ ರಾಷ್ಟ್ರೀಕರಣದ ಉದ್ದೇಶಗಳು ‘ಬಹಳ ಚೆಂದವಾಗಿ ಅನುಷ್ಠಾನ ಗೊಳ್ಳುತ್ತಿವೆ’ ಎಂದು ನಿರ್ಮಲಾ ವಿವರಿಸಿದರು. ‘ಬ್ಯಾಂಕ್‌ಗಳನ್ನು ವೃತ್ತಿಪರವಾಗಿ ಸಲು ಯತ್ನಿಸಿದಾಗ, ಅಥವಾ ಅವುಗಳ ಖಾಸಗೀಕರಣದ ಉದ್ದೇಶ ಹೊಂದಿದಾಗ, ಬ್ಯಾಂಕ್‌ಗಳನ್ನು ಎಲ್ಲರಿಗೂ ತೆರೆದು ಕೊಳ್ಳುವಂತೆ ಮಾಡುವ ಉದ್ದೇಶವು ಸೋಲುತ್ತದೆ ಎಂಬ ಗ್ರಹಿಕೆ ತಪ್ಪು’ ಎಂದು ವಿವರಿಸಿದರು.
  • ಬ್ಯಾಂಕ್‌ಗಳು ವೃತ್ತಿಪರವಾಗಿ ನಡೆಯಲು ಅವಕಾಶ ಕಲ್ಪಿಸಿದಾಗ, ಬ್ಯಾಂಕ್‌ಗಳಿಗೆ ಸಂಬಂಧಿಸಿದ ತೀರ್ಮಾನಗಳನ್ನು ಅಲ್ಲಿನ ಆಡಳಿತ ಮಂಡಳಿಗಳೇ ತೆಗೆದುಕೊಂಡಾಗ, ರಾಷ್ಟ್ರೀಯ ಹಿತಾಸಕ್ತಿ ಹಾಗೂ ಬ್ಯಾಂಕಿನ ಹಿತಾಸಕ್ತಿಗಳು ಈಡೇರುತ್ತವೆ ಎಂದು ಹೇಳಿದರು.
  • ಬ್ಯಾಂಕ್‌ ಖಾಸಗೀಕರಣದ ಭಾಗವಾಗಿ ಕೇಂದ್ರ ಸರ್ಕಾರವು ಐಡಿಬಿಐ ಬ್ಯಾಂಕ್‌ನ ಶೇ 51ರಷ್ಟು ಷೇರುಗಳನ್ನು ಭಾರತೀಯ ಜೀವ ವಿಮಾ ನಿಗಮಕ್ಕೆ (ಎಲ್‌ಐಸಿ) 2019ರಲ್ಲಿ ಮಾರಾಟ ಮಾಡಿದೆ.
  • ಮಹಿಳೆಯರ ಏಕದಿನ ್ಯಾಂಕಿಂಗ್ಅಗ್ರಸ್ಥಾನ ಕಳೆದುಕೊಂಡ ಮಂದಾನ

ಸಂದರ್ಭ: ಭಾರತ ಕ್ರಿಕೆಟ್ತಂಡದ ಉಪನಾಯಕಿ ಸ್ಮೃತಿ ಮಂದಾನ ಅವರು ಐಸಿಸಿ ಮಹಿಳಾ ಏಕದಿನ ಬ್ಯಾಟರ್ಗಳ ್ಯಾಂಕಿಂಗ್ನಲ್ಲಿ ಅಗ್ರಸ್ಥಾನ ಕಳೆದುಕೊಂಡಿದ್ದಾರೆ. ಜೆಮಿಮಾ ರಾಡ್ರಿಗಸ್ಅವರು ಅಗ್ರ ಹತ್ತರಲ್ಲಿ ಸ್ಥಾನ ಪಡೆದಿದ್ದಾರೆ.

  • ಮಹಿಳಾ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ ಮತ್ತು ಫೈನಲ್‌ನಲ್ಲಿ ಅಮೋಘ ಶತಕ ದಾಖಲಿಸಿದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕಿ ಲಾರಾ ವೋಲ್ವಾರ್ಟ್‌ ಎರಡು ಸ್ಥಾನಗಳ ಬಡ್ತಿ ಪಡೆದು, ಮಂದಾನ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.
  • ಟೂರ್ನಿಯಲ್ಲಿ ದಾಖಲೆಯ 571 ರನ್‌ ಗಳಿಸಿದ ವೋಲ್ವಾರ್ಟ್‌ ಅವರು ವೃತ್ತಿಜೀವನದಲ್ಲೇ ಗರಿಷ್ಠ ರೇಟಿಂಗ್‌ (814) ಸಂಪಾದಿಸಿದ್ದಾರೆ. ಮಂದಾನ ಎರಡನೇ ಸ್ಥಾನ ಸ್ಥಾನಕ್ಕೆ ಸರಿದಿದ್ದಾರೆ.
  • ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಜೇಯ ಶತಕ ದಾಖಲಿಸಿದ್ದ ಜೆಮಿಮಾ ಒಂಬತ್ತು ಸ್ಥಾನಗಳ ಬಡ್ತಿ ಪಡೆದು 10ನೇ ಸ್ಥಾನಕ್ಕೆ ಜಿಗಿದಿದ್ದಾರೆ. ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ನಾಲ್ಕು ಸ್ಥಾನಗಳ ಬಡ್ತಿಯೊಂದಿಗೆ 14ನೇ ಸ್ಥಾನದಲ್ಲಿದ್ದಾರೆ.
  • ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೊನ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಭಾರತದ ದೀಪ್ತಿ ಶರ್ಮಾ ಐದನೇ ಸ್ಥಾನದಲ್ಲಿದ್ದಾರೆ.
  • ಐಸಿಸಿ ತಂಡದಲ್ಲಿ ಭಾರತದ ಮೂವರು

ಸಂದರ್ಭ: ಭಾರತ ತಂಡದ ಸ್ಮೃತಿ ಮಂದಾನ, ಜೆಮಿಮಾ ರಾಡ್ರಿಗಸ್ ಮತ್ತು ದೀಪ್ತಿ ಶರ್ಮಾ ಅವರು  ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.

  • ಭಾರತದ ತಂಡದ ಜಯದಲ್ಲಿ ಈ ಮೂವರೂ ಉತ್ತಮ ಕಾಣಿಕೆ ನೀಡಿದ್ದಾರೆ. ಆದ್ದರಿಂದ ಅವರನ್ನು ತಂಡಕ್ಕೆ ಪರಿಗಣಿಸ ಲಾಗಿದೆ.
  • ರನ್ನರ್ಸ್ ಅಪ್ ದಕ್ಷಿಣ ಆಫ್ರಿಕಾ ತಂಡದ ಲಾರಾ ವೊಲ್ವಾರ್ಟ್‌ ಅವರನ್ನು ಈ ತಂಡಕ್ಕೆ ನಾಯಕಿಯನ್ನಾಗಿ ನೇಮಕ ಮಾಡಲಾಗಿದೆ. ಪಾಕಿಸ್ತಾನದ ಸಿದ್ರಾ ನವಾಜ್ ಅವರನ್ನು ವಿಕೆಟ್‌ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.
  • ತಂಡ: ಲಾರಾ ವೊಲ್ವಾರ್ಟ್ (ನಾಯಕಿ/ದಕ್ಷಿಣ ಆಫ್ರಿಕಾ), ಸ್ಮೃತಿ ಮಂದಾನ (ಭಾರತ), ಜೆಮಿಮಾ ರಾಡ್ರಿಗಸ್ (ಭಾರತ), ಮರೈಝಾನ್ ಕಾಪ್ (ದಕ್ಷಿಣ ಆಫ್ರಿಕಾ), ಆ್ಯಷ್ಲೆ ಗಾರ್ಡನರ್ (ಆಸ್ಟ್ರೇಲಿಯಾ), ದೀಪ್ತಿ ಶರ್ಮಾ (ಭಾರತ), ಅನಾಬೆಲ್ ಸದರ್ಲೆಂಡ್ (ಆಸ್ಟ್ರೇಲಿಯಾ), ನದೀನ್ ಡಿ ಕ್ಲರ್ಕ್ (ದಕ್ಷಿಣ ಆಫ್ರಿಕಾ), ಸಿದ್ರಾ ನವಾಜ್ (ವಿಕೆಟ್‌ಕೀಪರ್/ ಪಾಕಿಸ್ತಾನ), ಅಲನಾ ಕಿಂಗ್ (ಆಸ್ಟ್ರೇಲಿಯಾ), ಸೋಫಿ ಎಕ್ಲೆಸ್ಟೊನ್ (ಇಂಗ್ಲೆಂಡ್),  ನ್ಯಾಟ್ ಶಿವರ್ ಬ್ರಂಟ್ (ಇಂಗ್ಲೆಂಡ್/12ನೇ ಆಟಗಾರ್ತಿ).
  • ಪ್ರಧಾನಿ ಭೇಟಿ ಇಂದು: ವಿಶ್ವಕಪ್ ವಿಜೇತ ಭಾರತ ತಂಡದ ಆಟಗಾರ್ತಿಯರು ನರೇಂದ್ರ ಮೋದಿ ಅವರನ್ನು ಭೇಟಿ ಯಾಗಲಿದ್ದಾರೆ. ತಂಡದ ಸದಸ್ಯೆಯರು ಮಂಗಳವಾರ ನವದೆಹಲಿಗೆ ಆಗಮಿಸಿದ್ದಾರೆ.
  • ನವಿ ಮುಂಬೈನಲ್ಲಿ ನಡೆದಿದ್ದ ಫೈನಲ್‌ನಲ್ಲಿ ಹರ್ಮನ್‌ಪ್ರೀತ್ ಬಳಗವು ಜಯಿಸಿ ಪ್ರಶಸ್ತಿ ಗಳಿಸಿತ್ತು.
  • 2028 ಲಾಸ್ಏಂಜಲೀಸ್ಒಲಿಂಪಿಕ್ಸ್ಮೀರಾಬಾಯಿ ತೂಕ ವಿಭಾಗಕ್ಕೆ ಕೊಕ್

ಸಂದರ್ಭ: ಭಾರತದ ವೇಟ್ಲಿಫ್ಟಿಂಗ್ ತಾರೆ ಮೀರಾಬಾಯಿ ಚಾನು ಅವರ ತೂಕ ವಿಭಾಗವನ್ನು 2028 ಲಾಸ್ಏಂಜಲೀಸ್ಒಲಿಂಪಿಕ್ಸ್ನಲ್ಲಿ ತೆಗೆದುಹಾಕಲಾಗಿದೆ. ಅವರು ಮುಂದಿನ ಕ್ರೀಡೆಗಳಲ್ಲಿ 53 ಕೆ.ಜಿ. ತೂಕ ವಿಭಾಗದಲ್ಲಿ ಸ್ಪರ್ಧಿಸಬೇಕಾಗುತ್ತದೆ.

  • 31 ವರ್ಷ ವಯಸ್ಸಿನ ಚಾನು 2020ರ ಟೋಕಿಯೊ ಕ್ರೀಡೆಗಳ 49 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಕೊಂಡಿದ್ದರು. ಆದರೆ 2028ರ ಕ್ರೀಡೆಗಳ ವೇಟ್‌ಲಿಫ್ಟಿಂಗ್ ಸ್ಪರ್ಧೆಗಳು 53 ಕೆ.ಜಿ. ತೂಕ ವಿಭಾಗದಿಂದ ಆರಂಭವಾಗಲಿವೆ. ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು ಸ್ಪರ್ಧೆಗಳ ಸಂಖ್ಯೆಯನ್ನು 12ಕ್ಕೆ ಹೆಚ್ಚಿಸಲು ಅಂತರ ರಾಷ್ಟ್ರೀಯ ಒಲಿಂಪಿಕ್ ಸಮಿತಿ ನಿರ್ಧರಿಸಿದೆ.
  • 53 ಕೆ.ಜಿ. ತೂಕ ವಿಭಾಗದಲ್ಲಿ ಸ್ಪರ್ಧಿ ಸುವುದರಿಂದ ಚಾನು ಅವರಿಗೆ ಅನು ಕೂಲವಾಗಲಿದೆ. ಆದರೆ ಮಣಿಪುರದ ಸ್ಪರ್ಧಿಯು ಮುಂದಿನ ವರ್ಷದ ಏಷ್ಯನ್ ಗೇಮ್ಸ್‌ವರೆಗೆ ಈ ಹಿಂದಿನಂತೆ 49 ಕೆ.ಜಿ. ವಿಭಾಗದಲ್ಲೇ ಸ್ಪರ್ಧಿಸಲಿದ್ದಾರೆ ಎಂದು ರಾಷ್ಟ್ರೀಯ ಮುಖ್ಯ ಕೋಚ್‌ ವಿಜಯ್ ಶರ್ಮಾ ತಿಳಿಸಿದ್ದಾರೆ.
  • ಪುರುಷರ ವಿಭಾಗ ಮತ್ತು ಮಹಿಳೆಯರ ವಿಭಾಗಗಳಲ್ಲಿ ತಲಾ ಆರು ತೂಕ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಈ ವರ್ಷ ಎರಡನೇ ಬಾರಿ ಅಂತರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಫೆಡರೇಷನ್‌ ತೂಕ ವಿಭಾಗಗಳಲ್ಲಿ ಬದಲಾವಣೆ ತಂದಿದೆ. ಈ ಹಿಂದಿನ ಪಟ್ಟಿಯ ಪ್ರಕಾರ ಅವರು 48 ಕೆ.ಜಿ. ವಿಭಾಗದಲ್ಲಿ (49 ಕೆ.ಜಿ. ತೆಗೆದುಹಾಕಿದ ಕಾರಣ) ಕಣಕ್ಕಿಳಿಯಲು ಯೋಚಿಸಿದ್ದರು.
  • 48 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಲು ಆಗುತ್ತಿರುವ ದೈಹಿಕ ಸವಾಲುಗಳ ಬಗ್ಗೆ ಚಾನು ಹಲವು ಬಾರಿ ಮಾತನಾಡಿದ್ದರು. ‘ಏಷ್ಯನ್ ಗೇಮ್ಸ್ ನಂತರ 53 ಕೆ.ಜಿ. ತೂಕ ವಿಭಾಗದಲ್ಲಿ ಸ್ಪರ್ಧಿಸಲು ಬೇಕಾದ ಪ್ರಕ್ರಿಯೆಗಳನ್ನು ಆರಂಭಿಸುತ್ತೇವೆ’ ಎಂದು ಶರ್ಮಾ ಹೇಳಿದ್ದಾರೆ.

ಪ್ರಚಲಿತ ವಿದ್ಯಮಾನಗಳು: 4ನೇ ನವೆಂಬರ್ 2025

  • ಡಿಜಿಟಲ್ಅರೆಸ್ಟ್ ವಿರುದ್ಧ ಕಠಿಣ ಕಾನೂನು: ಸುಪ್ರೀಂ

ಸಂದರ್ಭ: ‘ಡಿಜಿಟಲ್ಅರೆಸ್ಟ್ ಹೆಸರಿನಲ್ಲಿ ದೇಶದ ಜನರನ್ನು ಬೆದರಿಸಿ ₹3,000 ಕೋಟಿಗೂ ಹೆಚ್ಚು ಮೊತ್ತವನ್ನು ಸುಲಿಗೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮತ್ತು ಸಿಬಿಐ ಸುಪ್ರೀಂ ಕೋರ್ಟ್ಗೆ ತಿಳಿಸಿವೆ. ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ‘ ಪಿಡುಗು ನಿಯಂತ್ರಣಕ್ಕೆ ಕಠಿಣ ಕ್ರಮ ಅಗತ್ಯ ಎಂದು ಹೇಳಿದೆ.

  • ಹರಿಯಾಣದ ವೃದ್ಧ ದಂಪತಿ ತಾವು ‘ಡಿಜಿಟಲ್‌ ಅರೆಸ್ಟ್‌’ನಲ್ಲಿ ₹1.5 ಕೋಟಿ ಕಳೆದುಕೊಂಡಿರುವ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಅವರಿಗೆ ಪತ್ರ ಬರೆದಿದ್ದರು. ಇದನ್ನು ಆಧರಿಸಿ ನ್ಯಾಯಾಲಯವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.
  • ಎಲ್ಲ ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿ ನಡೆದ ಇಂಥ ಪ್ರಕರಣಗಳ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್‌ ಅ.27ರಂದು ನಡೆದ ವಿಚಾರಣೆ ವೇಳೆ ಸೂಚನೆ ನೀಡಿತ್ತು. ಇದರಂತೆ, ಕೇಂದ್ರ ಗೃಹ ಸಚಿವಾಲಯ ಮತ್ತು ಸಿಬಿಐ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡಿವೆ.
  • ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್‌, ಉಜ್ಜಲ್‌ ಭುಯಾನ್‌ ಮತ್ತು ಜಾಯ್‌ ಮಾಲ್ಯಾ ಬಾಗ್ಚಿ ಅವರಿರುವ ಪೀಠವು ಈ ವರದಿಯನ್ನು ಪರಿಶೀಲಿಸಿತು. ‘ಗೃಹ ಸಚಿವಾಲಯ ಮತ್ತು ಸಿಬಿಐ ವರದಿಯನ್ನು ಪರಿಶೀಲಿಸಿ ನಮ್ಮ ಕಚೇರಿಯು ಸಣ್ಣ ವರದಿಯೊಂದನ್ನು ಸಿದ್ಧಪಡಿಸಿದೆ’ ಎಂದು ಪೀಠ ತಿಳಿಸಿತು.
  • ‘ಡಿಜಿಟಲ್‌ ಅರೆಸ್ಟ್‌’ ಎನ್ನವುದು ನಾವು ಅಂದುಕೊಂಡಿದ್ದಕ್ಕಿಂತ ಬಹಳ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ವರದಿಯನ್ನು ನೋಡಿದರೆ ದಿಗಿಲಾಗುತ್ತಿದೆ ಎಂದರು.
  • ಅಮಿಕಸ್ಕ್ಯೂರಿ ನೇಮಕ: ಸೈಬರ್‌ ಅಪರಾಧ, ಪ್ರಮುಖವಾಗಿ ‘ಡಿಜಿಟಲ್‌ ಅರೆಸ್ಟ್‌’ ಹೆಸರಿನ ವಂಚನೆ ನಿಯಂತ್ರಣ ಕುರಿತು ನ್ಯಾಯಾಲಯಕ್ಕೆ ಸಲಹೆ ಮತ್ತು ಸಹಕಾರ ನೀಡಲು ಅಮಿಕಸ್‌ ಕ್ಯೂರಿಯನ್ನು ನೇಮಿಸಲಾಗುವುದು ಎಂದು ಪೀಠ ಹೇಳಿತು. ಹಿರಿಯ ವಕೀಲೆ, ಸೈಬರ್‌ ಕಾನೂನು ತಜ್ಞೆ ಎನ್‌.ಎಸ್‌. ನಪ್ಪಿನಾಯ್‌ ಅವರನ್ನು ಅಮಿಕಸ್‌ ಕ್ಯೂರಿಯನ್ನಾಗಿ ನೇಮಿಸಿತು. ಸೈಬರ್‌ ಅಪರಾಧಗಳಿಗೆ ಸಂಬಂಧಿಸಿ ಕಾನೂನುಗಳ ಬಗ್ಗೆ ಮಾಹಿತಿ ನೀಡುವ ‘ಸೈಬರ್‌ ಸಾಥಿ’ ಎಂಬ ವೆಬ್‌ಸೈಟ್‌ ಅನ್ನೂ ಇವರು ಸ್ಥಾಪಿಸಿದ್ದಾರೆ.
  • ‘ಕೇಂದ್ರ ಗೃಹ ಸಚಿವಾಲಯದಲ್ಲಿ ಪ್ರತ್ಯೇಕ ತಂಡವೊಂದು ಸೈಬರ್ ಅಪರಾಧಗಳಿಗೆ ಸಂಬಂಧಿಸಿ ಕೆಲಸ ಮಾಡುತ್ತಿದೆ, ಬೇಕಾದ ಕ್ರಮಗಳನ್ನೂ ಕೈಗೊಂಡಿದೆ’ ಎಂದು ಸಾಲಿಸಿಟರ್‌ ಜನರಲ್ ತುಷಾರ್‌ ಮೆಹ್ತಾ ಪೀಠಕ್ಕೆ ತಿಳಿಸಿದರು. ಅಮಿಕಸ್‌ ಕ್ಯೂರಿ ಅವರಿಂದ ಸಲಹೆ ಪಡೆದ ಬಳಿಕ ಕೆಲವು ಮಾರ್ಗಸೂಚಿಗಳನ್ನು ನೀಡುವುದಾಗಿ ಹೇಳಿದ ಪೀಠವು, ಮುಂದಿನ ವಿಚಾರಣೆಯನ್ನು ನ.10ಕ್ಕೆ ಮುಂದೂಡಿತು.
  • ನೊಬೆಲ್ಪುರಸ್ಕೃತರ ಜತೆ ಸಂವಾದ

ಸಂದರ್ಭ: ಸಮಾಜದ ಅಭ್ಯುದಯ ಮತ್ತು ಪ್ರಗತಿಯ ಸಾಧ್ಯತೆಗಳು ಸದ್ಯ ತಿರುವು ದಾರಿಗೆ ಬಂದು ನಿಂತಿವೆ ಎಂದು ನೊಬೆಲ್ಪ್ರಶಸ್ತಿ ಪುರಸ್ಕೃತ ಜೇಮ್ಸ್ರಾಬಿನ್ಸನ್ಅಭಿಪ್ರಾಯಪಟ್ಟರು. ಟಾಟಾ ಟ್ರಸ್ಟ್ ಸಹಭಾಗಿತ್ವದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.

  • ‘ಒನ್‌ ವೇ ಸ್ಟ್ರೀಟ್‌’ ಸಿದ್ಧಾಂತವನ್ನು ವಿವರಿಸಿದ ಅವರು, ‘ನಾನು ಸಮೃದ್ಧಿ ಮತ್ತು ಪ್ರಗತಿ ಬಗ್ಗೆ ಯೋಚಿಸುವಾಗ, ಈ ವಿಚಾರಗಳ ಕುರಿತ ಚಿಂತನೆ ಯಾವಾಗ ಪ್ರಾರಂಭವಾಯಿತು’ ಎಂಬ ಪ್ರಶ್ನೆ ತಲೆದೋರುತ್ತದೆ. ಇದನ್ನು ವಿಶ್ವ ಇತಿಹಾಸದ ಅನೇಕ ಹಂತಗಳಲ್ಲಿ ಪರಿಗ ಣಿಸಬಹುದು. ಆದರೆ, ಅದಕ್ಕೆ ಒಂದು ಉಲ್ಲೇಖದ ಬಿಂದುವಾಗಿ ಇಬ್ಬರು ಸ್ಕಾಟ್‌ಲೆಂಡ್‌ ಚಿಂತಕರು 18ನೇ ಶತಮಾನದಲ್ಲಿ ನಡೆದ ನಗರೀಕರಣ, ಕೈಗಾರೀಕರಣ, ಸಾಮಾಜಿಕ ಬದಲಾವಣೆ ಗಮನಿಸುತ್ತಾ ಒಂದು ಸಿದ್ಧಾಂತ ರೂಪಿಸಿ ದರು. ಅದನ್ನು ‘ಒನ್‌ ವೇ ಸ್ಟ್ರೀಟ್‌ ಸಿದ್ಧಾಂತ’ ಎಂದು ಕರೆಯುವೆ’ ಎಂದರು.
  • ಸಿಗದ ಎಫ್ಆರ್ಪಿ ರಾಜ್ಯದ ಕಬ್ಬು ನೆರೆರಾಜ್ಯಕ್ಕೆ

ಕೇಂದ್ರ ಸರ್ಕಾರವು ಪ್ರತಿ ಟನ್‌ ಕಬ್ಬಿಗೆ ನಿಗದಿಪಡಿಸಿರುವ ನ್ಯಾಯಸಮ್ಮತ ಮತ್ತು ಲಾಭದಾಯಕ ದರ (ಎಫ್‌ಆರ್‌ಪಿ) ಆಧಾರದಲ್ಲಿ ರಾಜ್ಯದಲ್ಲಿ ಬೆಲೆ ನಿಗದಿ ಮಾಡಲಾಗಿದ್ದರೂ ಸಕ್ಕರೆ ಕಾರ್ಖಾನೆಗಳು ಕಡಿಮೆ ದರ ನೀಡಲು ಮುಂದಾಗಿವೆ. ಈ ಕಾರಣಕ್ಕೆ ರಾಜ್ಯದ ಗಡಿ ಭಾಗದ ಜಿಲ್ಲೆಗಳ ಕಬ್ಬು ಬೆಳೆಗಾರರು ಹೆಚ್ಚಿನ ದರ ನೀಡುತ್ತಿರುವ ಮತ್ತು ಸಕಾಲದಲ್ಲಿ ಹಣ ಪಾವತಿಸುತ್ತಿರುವ ಹೊರರಾಜ್ಯಗಳ ಸಕ್ಕರೆ ಕಾರ್ಖಾನೆಗಳತ್ತ ಮುಖ ಮಾಡುತ್ತಿದ್ದಾರೆ.

ಉತ್ತರ ಕರ್ನಾಟಕ ಭಾಗದ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಕಲಬುರಗಿಯ ಕಬ್ಬು ಬೆಳೆಗಾರರು ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಮಾರಾಟ ಮಾಡುತ್ತಿದ್ದಾರೆ. ದಕ್ಷಿಣದ ಚಾಮರಾಜನಗರ ಜಿಲ್ಲೆಯಲ್ಲಿ ಬೆಳೆಗಾರರು ತಮಿಳುನಾಡಿನ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸುತ್ತಿದ್ದಾರೆ.

ಕೇಂದ್ರ ಸರ್ಕಾರವು 2025ರ ಸಾಲಿಗೆ ಶೇ 10.25ರಷ್ಟು ಇಳುವರಿ (recovery rate) ಇರುವ ಟನ್‌ ಕಬ್ಬಿಗೆ ₹3,550 ನಿಗದಿ ಮಾಡಿದೆ. ಇದರ ಆಧಾರದಲ್ಲಿ ರಾಜ್ಯ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತರು ರಾಜ್ಯದಲ್ಲಿರುವ 81 ಕಾರ್ಖಾನೆಗಳು 2025–26ನೇ ಸಾಲಿಗೆ ಬೆಳೆಗಾರರಿಗೆ ಮೊದಲ ಕಂತಿನಲ್ಲಿ ಪಾವತಿಸಬೇಕಾದ ದರವನ್ನು ನಿಗದಿಪಡಿಸಿ ಸೆಪ್ಟೆಂಬರ್ 15ರಂದು ಆದೇಶ ಹೊರಡಿಸಿದ್ದಾರೆ. 2024–25ನೇ ಸಾಲಿನಲ್ಲಿ ಕಾರ್ಖಾನೆಗಳಲ್ಲಿ ಅರೆದ ಕಬ್ಬಿನಿಂದ ಉತ್ಪಾದನೆಯಾದ ಸಕ್ಕರೆಯ ಆಧಾರದಲ್ಲಿ ಎಫ್‌ಆರ್‌ಪಿ ನಿಗದಿಪಡಿಸಲಾಗಿದೆ.

ಆದರೆ, ರಾಜ್ಯದ ಯಾವ ಕಾರ್ಖಾನೆಯೂ ಇಷ್ಟು ಬೆಲೆ ನೀಡಲು ಮುಂದಾಗಿಲ್ಲ. ₹2,700ರಿಂದ ₹3,100ರವರೆಗೆ ದರ ನೀಡಲು ತೀರ್ಮಾನಿಸಿವೆ .

ಸಾಮಾನ್ಯವಾಗಿ ಕಾರ್ಖಾನೆಗಳು ಕಬ್ಬಿನ ಕಟಾವು ಮತ್ತು ಸಾಗಣೆ ವೆಚ್ಚವನ್ನು ಲೆಕ್ಕಹಾಕಿ ಅದನ್ನು ದರದಲ್ಲಿ ಕಡಿತ ಮಾಡುತ್ತವೆ. ₹800ರಿಂದ ₹900ವರೆಗೂ ಕಡಿತ ಮಾಡುತ್ತವೆ. ಹಾಗಾದಾಗ, ಟನ್‌ ಕಬ್ಬಿನ ದರ ಇನ್ನಷ್ಟು ಕಡಿಮೆಯಾಗುತ್ತದೆ.

‘ರಾಜ್ಯದಲ್ಲಿ ಕಾರ್ಖಾನೆಗಳು ನೀಡುವ ದರವನ್ನು ನೋಡಿದಾಗ, ಮಹಾರಾಷ್ಟ್ರದಲ್ಲಿ ಇಲ್ಲಿಗಿಂತ ಪ್ರತಿ ಟನ್‌ಗೆ ₹300–₹400 ಹೆಚ್ಚು ಸಿಗುತ್ತಿದೆ. ಅಲ್ಲಿನ ಕಾರ್ಖಾನೆಗಳು ಪ್ರತಿ ಟನ್‌ ಕಬ್ಬಿಗೆ ₹3,400 ನೀಡುತ್ತಿವೆ. ರಾಜ್ಯದ ಕಾರ್ಖಾನೆಗಳು ಹಣ ಪಾವತಿಯನ್ನು ವಿಳಂಬ ಮಾಡುತ್ತಿವೆ. ಅಲ್ಲಿನ ಕಾರ್ಖಾನೆಗಳು ತಕ್ಷಣ ಪಾವತಿಸುತ್ತಿವೆ. ಇಲ್ಲಿ ಕಡಿಮೆ ಪಾವತಿಯ ಜೊತೆಗೆ ತೂಕ, ಇಳುವರಿ ಪ್ರಮಾಣದಲ್ಲೂ ಕಾರ್ಖಾನೆಗಳು ಮೋಸ ಮಾಡುತ್ತವೆ’ ಎಂದು ಹೇಳುತ್ತಾರೆ ಕಬ್ಬು ಬೆಳೆಗಾರರು.

‘ಕೇಂದ್ರ ಸರ್ಕಾರವು ಶೇ 10.25ರಷ್ಟು ಇಳುವರಿ ದರ ಆಧರಿಸಿ ಎಫ್‌ಆರ್‌ಪಿ ನಿಗದಿ ಮಾಡಿದೆ. ಇದು ಕೂಡ ಅವೈಜ್ಞಾನಿಕ. ಇಳುವರಿ ಪ್ರಮಾಣ ಶೇ 9.5ರ ಆಧಾರದ ಮೇಲೆ ಎಫ್‌ಆರ್‌ಪಿ ಘೋಷಿಸಬೇಕು. ಆಗ ಮಾತ್ರ ರೈತರಿಗೆ ಲಾಭದಾಯಕ ದರ ಸಿಗಲು ಸಾಧ್ಯ. ಎಫ್‌ಆರ್‌ಪಿ ಘೋಷಣೆ ಮಾಡಿದ ಮೇಲೂ ದರ ಪರಿಷ್ಕರಣೆ ಮಾಡುವ ಅಧಿಕಾರ ಕರ್ನಾಟಕ ಕಬ್ಬು ನಿಯಂತ್ರಣ ಮಂಡಳಿಗೆ ಇದೆ. ರಾಜ್ಯದ ಬಹುಪಾಲು ಕಾರ್ಖಾನೆಗಳನ್ನು ಜನಪ್ರತಿನಿಧಿಗಳು, ರಾಜಕಾರಣಿಗಳೇ ನಡೆಸುತ್ತಿದ್ದಾರೆ. ಅವರು ಮಂಡಳಿಯನ್ನು ಹಿಡಿತದಲ್ಲಿಟ್ಟು ದರ ಪರಿಷ್ಕರಣೆ ಆಗದಂತೆ ನೋಡಿಕೊಳ್ಳುತ್ತಿದ್ದಾರೆ’ ಎಂಬುದು ಅವರ ತಕರಾರು.

10 ಲಕ್ಷ ಟನ್‌ ಕಬ್ಬು ಮಹಾರಾಷ್ಟ್ರಕ್ಕೆ: ನೆರೆಯ ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಬೆಳಗಾವಿ ಜಿಲ್ಲೆಯ ಅಥಣಿ, ಚಿಕ್ಕೋಡಿ, ನಿಪ್ಪಾಣಿ, ರಾಯಬಾಗ ಮತ್ತು ಕಾಗವಾಡ ತಾಲ್ಲೂಕುಗಳ ಹಲವು ರೈತರು ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸುತ್ತಾರೆ.

ಅಂದಾಜಿನ ಪ್ರಕಾರ, ಪ್ರತಿ ವರ್ಷ 10 ಲಕ್ಷ ಟನ್‌ಗಳಷ್ಟು ಜಿಲ್ಲೆಯ ಕಬ್ಬು ‘ಮಹಾ’ ಕಾರ್ಖಾನೆಗಳಲ್ಲಿ ನುರಿಯುತ್ತಿದೆ. ಜಿಲ್ಲೆಯಲ್ಲಿ 29 ಸಕ್ಕರೆ ಕಾರ್ಖಾನೆಗಳು ಇದ್ದಾಗ್ಯೂ ಮಹಾರಾಷ್ಟ್ರಕ್ಕೆ ಅಪಾರ ಪ್ರಮಾಣದ ಕಬ್ಬು ಸಾಗಣೆಯಾಗುತ್ತಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ಕಲ್ಲಪ್ಪಣ್ಣ ಅವಾಡೆ ಸಹಕಾರ ಸಕ್ಕರೆ ಕಾರ್ಖಾನೆ (ಹುಪರಿ), ದತ್ತ ಸೇತ್ಕರಿ ಸಹಕಾರ ಸಕ್ಕರೆ ಕಾರ್ಖಾನೆ (ಶಿರೋಳ), ಪಂಚಗಂಗಾ ಸಹಕಾರ ಸಕ್ಕರೆ ಕಾರ್ಖಾನೆ (ಇಚಲಕರಂಜಿ), ಛತ್ರಪತಿ ಶಾಹೂ ಸಹಕಾರ ಸಕ್ಕರೆ ಕಾರ್ಖಾನೆ (ಕಾಗಲ್), ಸದಾಶಿವರಾವ್ ಮಂಡಲಿಕ್ ಸಹಕಾರ ಸಕ್ಕರೆ ಕಾರ್ಖಾನೆ (ಹಮೀದವಾಡ), ಸಂತಾಜಿ ಘೋರ್ಪಡೆ ಸಹಕಾರ ಸಕ್ಕರೆ ಕಾರ್ಖಾನೆ (ಸೇನಾಪತಿ ಕಾಪಸಿ), ದೂದಗಂಗಾ ವೇದಗಂಗಾ ಸಹಕಾರ ಸಕ್ಕರೆ ಕಾರ್ಖಾನೆ (ಬಿದರಿ), ಗುರುದತ್ತ ಸಕ್ಕರೆ ಕಾರ್ಖಾನೆ (ಟಾಕಳಿ) ಮುಂತಾದ ಕಾರ್ಖಾನೆಗಳು ಬೆಳಗಾವಿ ಜಿಲ್ಲೆಯ ರೈತರ ಕಬ್ಬನ್ನೇ ನೆಚ್ಚಿಕೊಂಡಿವೆ.

ಜಿಲ್ಲೆಯ ಕಾರ್ಖಾನೆಗಳು ಟನ್‌ ಕಬ್ಬಿಗೆ ₹3,010 ದರ ವಾಗ್ದಾನ ಮಾಡಿವೆ. ಜಿಲ್ಲಾಧಿಕಾರಿ ಮಧ್ಯಸ್ಥಿಕೆಯಲ್ಲಿ ನಡೆದ ಸಭೆಯಲ್ಲಿ ಇದನ್ನು ₹3,200ಕ್ಕೆ ಏರಿಸುವ ಭರವಸೆ ನೀಡಲಾಗಿದೆ. ಆದರೆ, ₹3,500ಕ್ಕೆ ಏರಿಸಲೇಬೇಕು ಎಂದು ರೈತರು ಜಿಲ್ಲೆಯಾದ್ಯಂತ ಬೃಹತ್‌ ಪ್ರಮಾಣದ ಪ್ರತಿಭಟನೆ ನಡೆಸಿದ್ದಾರೆ.

‘ಜಿಲ್ಲಾಡಳಿತ ಮಧ್ಯಸ್ಥಿಕೆ ವಹಿಸಿದರೂ ಉತ್ತಮ ದರ ಸಿಗುತ್ತಿಲ್ಲ. ಸದ್ಯ ಕಾರ್ಖಾನೆಗಳು ಕಬ್ಬು ಕಟಾವು ಹಾಗೂ ಸಾಗಣೆ ವೆಚ್ಚ ಸೇರಿಸಿ ₹3,200 ದರ ನೀಡುವುದಾಗಿ ಹೇಳಿವೆ. ಸಾಗಣೆ ವೆಚ್ಚವನ್ನೂ ರೈತರ ಕಬ್ಬಿನ ಬಿಲ್ಲಿನಿಂದಲೇ ಕತ್ತರಿಸಿ ವಾಹನದವರಿಗೆ ನೀಡುತ್ತಾರೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಹಾಗಾಗಿ, ಕಟಾವು ಮತ್ತು ಸಾಗಣೆ ವೆಚ್ಚದ ಹೊರತಾಗಿ ₹3,500 ದರ ನೀಡಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ’ ಎನ್ನುವುದು ಕಬ್ಬು ಬೆಳೆಗಾರ, ರೈತ ಮುಖಂಡ ಚೂಣಪ್ಪ ಪೂಜಾರಿ ಅವರ ಮಾತು.

ಕಬ್ಬು ಸಾಗಿಸಲು ಅಣಿ: ವಿಜಯಪುರ ಜಿಲ್ಲೆಯಲ್ಲಿ ಇದೇ 1ರಿಂದ ಪ್ರಸಕ್ತ ಸಾಲಿನ ಕಬ್ಬು ಅರೆಯುವಿಕೆ ಆರಂಭವಾಗಬೇಕಿತ್ತು. ಆದರೆ, ಈವರೆಗೆ ಯಾವೊಂದು ಸಕ್ಕರೆ ಕಾರ್ಖಾನೆಯೂ ಕಬ್ಬಿನ ದರವನ್ನು ಘೋಷಿಸಿಲ್ಲ. ಜಿಲ್ಲೆಯ 10 ಸಕ್ಕರೆ ಕಾರ್ಖಾನೆಗಳು ಬೆಳೆಗಾರರಿಗೆ ನೀಡಬೇಕಾದ ದರವನ್ನು ಜಿಲ್ಲಾಧಿಕಾರಿಯವರು ನಿಗದಿಪಡಿಸಿದ್ದಾರೆ. ಇನ್ನೂ ಕಬ್ಬು ನುರಿಯುವಿಕೆ ಆರಂಭವಾಗಿಲ್ಲ.

ಇದರ ನಡುವೆಯೇ ಜಿಲ್ಲೆಯ ಗಡಿಭಾಗದ ಇಂಡಿ, ಚಡಚಣ, ಆಲಮೇಲ ಭಾಗದ ಕಬ್ಬು ಬೆಳೆಗಾರರಿಗೆ ಮಹಾರಾಷ್ಟ್ರ ಸಕ್ಕರೆ ಕಾರ್ಖಾನೆಗಳು ಹೆಚ್ಚಿನ ದರ ನೀಡುವ ಭರವಸೆ ನೀಡಿದ್ದು, ಬೆಳೆಗಾರರು ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಲು ಅಣಿಯಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಕಬ್ಬು ನುರಿಸುವ ಹಂಗಾಮು ನವೆಂಬರ್‌ 1 ರಿಂದ ಆರಂಭವಾಗಿದೆ. ಸೋಲಾಪುರದ ಸಿದ್ದೇಶ್ವರ, ಲೋಕಮಂಗಲ, ಸಿದ್ದನಾಥ ಮತ್ತು ಅಕ್ಕಲಕೋಟದ ಜೈನ್‌ ಸಕ್ಕರೆ ಕಾರ್ಖಾನೆ ಸೇರಿದಂತೆ ಇತರೆ ಕಾರ್ಖಾನೆಗಳು ಪ್ರತಿ ಟನ್‌ಗೆ ₹3,500 ನೀಡುವುದಾಗಿ ರೈತರೊಂದಿಗೆ ಮಾತುಕತೆ ನಡೆಸಿವೆ. ಸಾಗಣೆ ವೆಚ್ಚ ಪಡೆಯದೇ ಜಿಲ್ಲೆಯ ಕಬ್ಬು ಖರೀದಿಸಲು ಮುಂದಾಗಿವೆ. ಅದಲ್ಲದೆ, ಮಹಾರಾಷ್ಟ್ರದ ಬಹುತೇಕ ಕಾರ್ಖಾನೆಗಳು ಎಥೆನಾಲ್‌ ಘಟಕ ಹೊಂದಿದ್ದು, ಕಬ್ಬು ಖರೀದಿಗೆ ಪೈಪೋಟಿ ಒಡ್ಡುತ್ತಿವೆ. ಒಂದು ವೇಳೆ ಮಹಾರಾಷ್ಟ್ರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಸಾಗಣೆಯಾದರೆ ರಾಜ್ಯ ಸರ್ಕಾರಕ್ಕೆ ಕೋಟ್ಯಂತರ ತೆರಿಗೆ ನಷ್ಟವಾಗಲಿದೆ ಎನ್ನುತ್ತಾರೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಸಗರ.

ಮಾಹಿತಿ: ಸಂತೋಷ ಈ.ಚಿನಗುಡಿ, ಬಸವರಾಜ ಸಂಪಳ್ಳಿ, ಮನೋಜ್‌ಕುಮಾರ್‌ ಗುದ್ದಿ, ಬಾಲಚಂದ್ರ ಎಚ್‌.

ಕಲಬುರಗಿ ಕಬ್ಬು ಮಹಾರಾಷ್ಟ್ರಕ್ಕೆ

ಕಾರ್ಖಾನೆಗಳು ಸಮೀಪದಲ್ಲಿವೆ ಮತ್ತು ಸಕಾಲದಲ್ಲಿ ಹಣ ಸಿಗುತ್ತದೆ ಎಂಬ ಕಾರಣಕ್ಕೆ ಮಹಾರಾಷ್ಟ್ರ ಹಾಗೂ ತೆಲಂಗಾಣದೊಂದಿಗೆ ಗಡಿ ಹಂಚಿಕೊಂಡಿರುವ ಕಲಬುರಗಿ ಜಿಲ್ಲೆಯ ಗಡಿ ಭಾಗದ ಗ್ರಾಮಗಳ ಬೆಳೆಗಾರರು ನೆರೆ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬನ್ನು ಸಾಗಿಸುತ್ತಾರೆ.

ಜಿಲ್ಲೆಯಲ್ಲಿ ಹೆಚ್ಚು ಕಬ್ಬನ್ನು ಬೆಳೆಯುವ ಅಫಜಲಪುರ ತಾಲ್ಲೂಕಿನಲ್ಲಿ ರೇಣುಕಾ ಶುಗರ್ಸ್ ಹಾಗೂ ಕೆಪಿಆರ್‌ ಶುಗರ್ಸ್ ಸಕ್ಕರೆ ಕಾರ್ಖಾನೆಗಳಿದ್ದು, ಹೆಚ್ಚಿನ ಪ್ರಮಾಣದ ಕಬ್ಬನ್ನು ಇವೆರಡು ಕಾರ್ಖಾನೆಗಳಿಗೇ ಸಾಗಿಸಲಾಗುತ್ತದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸಕಾಲಕ್ಕೆ ಬಾಕಿ ಪಾವತಿ ಮಾಡದೇ ಇರುವುದರಿಂದ ಹಾಗೂ ಬೆಲೆಯೂ ಕಮ್ಮಿ ನಿಗದಿ ಆಗುವುದರಿಂದ ನೆರೆಯ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬನ್ನು ಪೂರೈಸುತ್ತಿದ್ದಾರೆ.

‘ಮಹಾರಾಷ್ಟ್ರದ 10 ಸಕ್ಕರೆ ಕಾರ್ಖಾನೆಗಳಿಗೆ ಅಫಜಲಪುರ, ಆಳಂದ ತಾಲ್ಲೂಕಿನ ರೈತರು ಕಬ್ಬು ಸಾಗಣೆ ಮಾಡುತ್ತಾರೆ. ಸೋಲಾಪುರ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಈಗಾಗಲೇ ಪ್ರತಿ ಟನ್ ಕಬ್ಬಿಗೆ ‌₹3,440 ಬೆಲೆ ನಿಗದಿ ಮಾಡಿವೆ. ಹೀಗಾಗಿ ಕಬ್ಬು ಬೆಳೆಗಾರರು ಅಲ್ಲಿನ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸುತ್ತಿದ್ದಾರೆ’ ಎಂಬುದು ಕಲಬುರಗಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ ಹೂಗಾರ ಅನಿಸಿಕೆ.

ಚಾ.ನಗರದಿಂದ ತಮಿಳುನಾಡಿಗೆ

ಚಾಮರಾಜನಗರ ಜಿಲ್ಲೆಯ ಕೆಲವು ಬೆಳೆಗಾರರು ಕಬ್ಬನ್ನು ಕೊಳ್ಳೇಗಾಲ ಸಮೀಪದ ಕುಂತೂರಿನಲ್ಲಿರುವ ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಯ ಬದಲಿಗೆ ತಮಿಳುನಾಡಿನ ಈರೋಡ್‌ನಲ್ಲಿರುವ ಶಕ್ತಿ ಶುಗರ್ಸ್‌ ಸೇರಿದಂತೆ ಇತರೆ ಕಾರ್ಖಾನೆಗಳಿಗೆ ಪೂರೈಸುತ್ತಿದ್ದಾರೆ.

‘ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಯು ಪ್ರತಿ ಟನ್‌ಗೆ ₹3,320 ನೀಡುತ್ತಿದ್ದು, ತಮಿಳುನಾಡಿನ ಕಾರ್ಖಾನೆಗಳು ₹4,000ವರೆಗೂ ನೀಡಲು ಮುಂದೆ ಬಂದಿವೆ. ಹೆಚ್ಚು ಬೆಲೆ ಸಿಗುವ ಕಾರಣಕ್ಕೆ ರೈತರು ಅಲ್ಲಿನ ಕಾರ್ಖಾನೆಗಳಿಗೆ ಸಾಗಿಸುತ್ತಿದ್ದಾರೆ’ ಎಂದು ರೈತ ಮುಖಂಡರು ಹೇಳಿದ್ದಾರೆ.

ಜಿಲ್ಲೆಯಲ್ಲಿ 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗುತ್ತಿದೆ. ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಹಾಗೂ ಉತ್ತಮ ದರ ಸಿಗಬೇಕು ಎಂಬ ಕಾರಣಕ್ಕೆ ಜಿಲ್ಲೆಯಿಂದ ಹೊರಜಿಲ್ಲೆ ಹಾಗೂ ರಾಜ್ಯಗಳಿಗೆ ಕಬ್ಬು ಪೂರೈಕೆ ಮಾಡಲು ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ.

ನಷ್ಟ ಅನುಭವಿಸಬೇಕೇ?

‘ರಾಜ್ಯದ ಬಹುತೇಕ ಸಕ್ಕರೆ ಕಾರ್ಖಾನೆಗಳ ಮಾಲೀಕತ್ವ ಸಚಿವರು, ಶಾಸಕರು, ಸಂಸದರು, ರಾಜಕಾರಣಿಗಳಲ್ಲಿದೆ. ಇವರು ಯಾರೂ ಬೆಳೆಗಾರರ ಪರವಾಗಿ ಯೋಚನೆ ಮಾಡುವುದಿಲ್ಲ. ಕೇಂದ್ರ ಸರ್ಕಾರ ನಿಗದಿಪಡಿಸಿದ ಎಫ್‌ಆರ್‌ಪಿ ದರವನ್ನು ನೀಡಲೂ ಕಾರ್ಖಾನೆಗಳು ಹಿಂದೆ ಮುಂದೆ ನೋಡುತ್ತವೆ. ಕೇಂದ್ರವು ಶೇ 10.25ರಷ್ಟು ಇಳುವರಿ ದರ ಆಧರಿಸಿ ಎಫ್‌ಆರ್‌ಪಿ ನಿಗದಿಪಡಿಸಿದೆ. ಒಂದು ವೇಳೆ ಇಳುವರಿ ಪ್ರಮಾಣ ಹೆಚ್ಚಿದ್ದರೆ ಹೆಚ್ಚು ದರ ನೀಡಬೇಕು. ಇಳುವರಿ ಶೇ 1ರಷ್ಟು ಹೆಚ್ಚಿದ್ದರೆ ₹346 ಹೆಚ್ಚುವರಿ ನೀಡಬೇಕು. ಬೆಳಗಾವಿ ಜಿಲ್ಲೆಯಲ್ಲಿ ಬೆಳೆಯುತ್ತಿರುವ ಕಬ್ಬಿನ ಇಳುವರಿ ಪ್ರಮಾಣ ಶೇ 12– ಶೇ 13ರವರೆಗೂ ಇದೆ. ಈ ಲೆಕ್ಕದಲ್ಲಿ ಕಾರ್ಖಾನೆಗಳು ಹೆಚ್ಚು ದರ ನೀಡಬೇಕು. ಆದರೆ, ಯಾವ ಕಾರ್ಖಾನೆಗಳೂ ನೀಡುತ್ತಿಲ್ಲ. ರೈತರು ನಷ್ಟ ಅನುಭವಿಸುವುದನ್ನು ತಪ್ಪಿಸಲು ಮಹಾರಾಷ್ಟ್ರದ ಕಾರ್ಖಾನೆಗಳಿಗೆ ಮಾರಾಟ ಮಾಡುತ್ತಾರೆ ಇದು ತಪ್ಪೇ’ ಎಂದು ಪ್ರಶ್ನಿಸುತ್ತಾರೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌.

‘ಮಹಾರಾಷ್ಟ್ರದಲ್ಲಿ ಸಹಕಾರಿ ಕಾರ್ಖಾನೆಗಳು ಹೆಚ್ಚಿವೆ. ಉತ್ತಮ ಬೆಲೆ ಜೊತೆಗೆ ಸಕಾಲದಲ್ಲಿ ಹಣ ಪಾವತಿ ಮಾಡುತ್ತಿವೆ. ರಾಜ್ಯದ ಬಹುತೇಕ ಕಾರ್ಖಾನೆಗಳು ತೂಕ, ಇಳುವರಿ ದರದಲ್ಲಿ ಮೋಸ ಮಾಡುವುದರ ಜೊತೆಗೆ ಕಟಾವು, ಸಾಗಣೆ ವೆಚ್ಚವನ್ನು ಹೆಚ್ಚು ಕಡಿತ ಮಾಡುತ್ತವೆ. ವಿಳಂಬವಾಗಿ ಪಾವತಿ ಮಾಡುತ್ತವೆ’ ಎಂಬುದು ಅವರ ದೂರು.

ಮಾರಾಟಕ್ಕೆ ಅವಕಾಶ

ಕರ್ನಾಟಕ ಕಬ್ಬು (ಖರೀದಿ ಮತ್ತು ಸರಬರಾಜು ನಿಯಂತ್ರಣ) ಕಾಯ್ದೆಗೆ 2014ರಲ್ಲಿ ತಿದ್ದುಪಡಿಯಾಗಿದೆ. ಆದರೆ, ಇದು ರೈತರ ಕಬ್ಬು ಸಾಗಣೆ ಮೇಲೆ ಯಾವುದೇ ನಿಯಂತ್ರಣ ಹೇರುವುದಿಲ್ಲ. ಹಾಗಾಗಿ, ಕೃಷಿಕ ತನ್ನ ಉತ್ಪನ್ನವನ್ನು ಎಲ್ಲಿಯಾದರೂ (ಅಂತರ ಜಿಲ್ಲೆ, ಅಂತರ ರಾಜ್ಯ) ಮಾರಲು ಸ್ವತಂತ್ರ. ಆದರೆ, ಕಾರ್ಖಾನೆಗಳು ನೆರೆ ರಾಜ್ಯದ ಕಬ್ಬು ತರಿಸಿಕೊಳ್ಳಬೇಕಿದ್ದರೆ, ನಿಯಮ ಪಾಲಿಸಬೇಕು. ಇದಕ್ಕಾಗಿ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ಬಹುತೇಕ ಕಾರ್ಖಾನೆಗಳು ಅಂತರರಾಜ್ಯ ಅನುಮತಿ (ಮಲ್ಟಿಸ್ಟೇಟ್‌ ಲೈಸನ್ಸ್‌) ಪಡೆದಿರುತ್ತವೆ. ಆದರೆ, ರಾಜ್ಯದ ಬಹುಪಾಲು ಸಕ್ಕರೆ ಕಾರ್ಖಾನೆಗಳು, ಸ್ಥಳೀಯವಾಗಿ ಬೆಳೆದ ಕಬ್ಬನ್ನು ತಮಗೇ ಮಾರಾಟ ಮಾಡಬೇಕು ಎಂದು ಬೆಳೆಗಾರರಿಗೆ ನಿರ್ದೇಶನ ನೀಡಬೇಕು ಎಂದು ಜಿಲ್ಲಾಡಳಿತಗಳನ್ನು ಒತ್ತಾಯಿಸತ್ತಲೇ ಬಂದಿವೆ.

  • 9 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ಶುರು

ಸಂದರ್ಭ: ದೇಶದ ಮೂರು ಕೇಂದ್ರಾಡಳಿತ ಪ್ರದೇಶಗಳು ಮತ್ತು 9 ರಾಜ್ಯಗಳ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್‌) ಪ್ರಕ್ರಿಯೆಯು ಆರಂಭವಾಗಲಿದೆ.

  • ಡಿಸೆಂಬರ್‌ 4ಕ್ಕೆ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಡಿ.9ಕ್ಕೆ ಮತದಾರರ ಪಟ್ಟಿಯ ಕರಡನ್ನು ಚುನಾವಣಾ ಆಯೋಗವು ಬಿಡುಗಡೆ ಮಾಡಲಿದೆ. ಅಂತಿಮ ಪಟ್ಟಿಯನ್ನು 2026ರ ಫೆ.7ರಂದು ಬಿಡುಗಡೆ ಮಾಡಲಿದೆ. ಆಯೋಗವು ಬಿಹಾರದಲ್ಲಿ ಇತ್ತೀಚೆಗಷ್ಟೇ ಎಸ್‌ಐಆರ್‌ ಪ್ರಕ್ರಿಯೆ ‍ಪೂರ್ಣಗೊಳಿಸಿತ್ತು.
  • ಎಲ್ಲೆಲ್ಲಿ?: ಅಂಡಮಾನ್ಮತ್ತು ನಿಕೋಬಾರ್, ಲಕ್ಷದ್ವೀಪ, ಪುದುಚೇರಿ, ಛತ್ತೀಸಗಢ, ಗೋವಾ, ಗುಜರಾತ್‌, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು, ಕೇರಳ, ಉತ್ತರ ಪ್ರದೇಶ ಮತ್ತುಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ನಡೆಯಲಿದೆ.
  • ಈ ಪೈಕಿ ತಮಿಳುನಾಡು, ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಕೇರಳದಲ್ಲಿ 2026ರಲ್ಲಿ ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಎಸ್‌ಐಆರ್‌ ನಡೆಸದಂತೆ ತಡೆಯಲು ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಅಲ್ಲಿನ ಸರ್ಕಾರ ಹೇಳಿದೆ.

ಅಸ್ಸಾಂಗೆ ಪ್ರತ್ಯೇಕ ದಿನಾಂಕ

  • ‘ಅಸ್ಸಾಂನಲ್ಲಿ ಪೌರತ್ವವನ್ನು ಪರಿಶೀಲಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಕಾರ್ಯವು ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ. ಆದ್ದರಿಂದ, ಈ ರಾಜ್ಯದಲ್ಲಿ ಎಸ್‌ಐಆರ್‌ ಆರಂಭಿಸಲು ಪ್ರತ್ಯೇಕವಾಗಿ ದಿನಾಂಕ ಘೋಷಿಸಲಾಗುವುದು’ ಎಂದು ಚುನಾವಣಾ ಆಯೋಗ ಹೇಳಿದೆ. ಅಸ್ಸಾಂನಲ್ಲಿ 2026ರಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ಐತಿಹಾಸಿಕ ಸಾಧನೆ

  • ಬಿಹಾರದಲ್ಲಿ ಎಸ್‌ಐಆರ್‌ ನಡೆದಿದ್ದು, ಜಗತ್ತಿನಲ್ಲೇ ಅತಿ ದೊಡ್ಡ ‘ಶುದ್ಧೀಕರಣ’ ಪ್ರಕ್ರಿಯೆಯಾಗಿತ್ತು. ಜೊತೆಗೆ, ಭಾರತದ ಪ್ರಜಾಪ್ರಭುತ್ವಕ್ಕೆ ಇದೊಂದು ಮೈಲಿಗಲ್ಲು. ಸದ್ಯ ಬಿಹಾರದಲ್ಲಿ ಮಾತ್ರವೇ ಈ ಪ್ರಕ್ರಿಯೆ ‍ಪೂರ್ಣಗೊಂಡಿದೆ.
  • ಈ ಪ್ರಕ್ರಿಯೆ ಯನ್ನು ದೇಶದಾದ್ಯಂತ ವಿಸ್ತರಿಸಿದರೆ, ಅದು ದೇಶದ ಮತ್ತು ಚುನಾವಣಾ ಆಯೋಗದ ಅತ್ಯಂತ ದೊಡ್ಡ ಐತಿಹಾಸಿಕ ಸಾಧನೆಯಾಗಲಿದೆ.
  • ದೇಶದಾದ್ಯಂತ ಈ ಪ್ರಕ್ರಿಯೆಯು ಪೂರ್ಣಗೊಂಡರೆ, ಆಯೋಗದ ಕುರಿತು ಮಾತ್ರವಲ್ಲ, ನಮ್ಮ ದೇಶ ಪ್ರಜಾತಂತ್ರ ವ್ಯವಸ್ಥೆ ಬಗ್ಗೆಯೇ ದೇಶದ ಜನರು ಹೆಮ್ಮೆ ಪಡುತ್ತಾರೆ
  • ಯುಪಿಐ ವಹಿವಾಟು ₹27.28 ಲಕ್ಷ ಕೋಟಿ

ಸಂದರ್ಭ: ಅಕ್ಟೋಬರ್ ತಿಂಗಳಿನಲ್ಲಿ ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ) ಮೂಲಕ 2,070 ಕೋಟಿ ವಹಿವಾಟುಗಳು ನಡೆದಿವೆ. ಹಣದ ಲೆಕ್ಕದಲ್ಲಿ ಒಟ್ಟು ₹27.28 ಲಕ್ಷ ಕೋಟಿಯಷ್ಟು ವಹಿವಾಟುಗಳು ನಡೆದಿವೆ ಎಂದು ರಾಷ್ಟ್ರೀಯ ಪಾವತಿ ನಿಗಮ (ಎನ್ಪಿಸಿಐ) ತಿಳಿಸಿದೆ.

  • ಹಬ್ಬದ ಋತುವಿನ ಅಂಗವಾಗಿ ಖರೀದಿ ಹೆಚ್ಚಿದ ಕಾರಣದಿಂದಾಗಿ ವಹಿವಾಟು ಹೆಚ್ಚಳ ಆಗಿದೆ ಎಂದು ನಿಗಮ ತಿಳಿಸಿದೆ.
  • ಕಳೆದ ವರ್ಷದ ಅಕ್ಟೋಬರ್‌ನಲ್ಲಿ ₹23.49 ಲಕ್ಷ ಕೋಟಿ ಮೌಲ್ಯದ ವಹಿವಾಟು ನಡೆದಿತ್ತು. ಇದಕ್ಕೆ ಹೋಲಿಸಿದರೆ ಶೇ 16ರಷ್ಟು ಬೆಳವಣಿಗೆ ದಾಖಲಿಸಿದೆ ಎಂದು ಹೇಳಿದೆ. ಅಕ್ಟೋಬರ್‌ನಲ್ಲಿ ದಿನನಿತ್ಯ ಸರಾಸರಿ 66.8 ಕೋಟಿ ವಹಿವಾಟುಗಳು ನಡೆದಿವೆ. ಇದರ ಮೌಲ್ಯ ದಿನಕ್ಕೆ ಸರಾಸರಿ ₹87,993 ಕೋಟಿ.
  • ಈ ವರ್ಷದ ಮೇ ತಿಂಗಳಿನಲ್ಲಿ ₹25.14 ಲಕ್ಷ ಕೋಟಿಯಷ್ಟು ಮೌಲ್ಯದ ವಹಿವಾಟು ನಡೆದಿತ್ತು. ಇದು ಆವರೆಗಿನ ಗರಿಷ್ಠ ಮಟ್ಟದ ವಹಿವಾಟು ನಡೆದ ತಿಂಗಳಾ ಗಿತ್ತು. ಆದರೆ, ಅಕ್ಟೋಬರ್ ವಹಿವಾಟು ಇದಕ್ಕಿಂತಲೂ ಹೆಚ್ಚಳವಾಗಿದೆ.

ಮಲೇಷ್ಯಾದಲ್ಲೂ ಯುಪಿಐ: ಮಲೇಷ್ಯಾದಲ್ಲಿ ಯುಪಿಐ ಬಳಸುವ ಮೂಲಕ ವಹಿವಾಟು ನಡೆಸಬಹುದಾಗಿದೆ ಎಂದು ಎನ್ಪಿಸಿಐ ತಿಳಿಸಿದೆ. ಎನ್ಪಿಸಿಐ ಇಂಟರ್ನ್ಯಾಷನಲ್ ಮತ್ತು ರೇಜರ್ಪೇ ಕರ್ಲೆಕ್ ಕುರಿತು ಒಪ್ಪಂದ ಮಾಡಿಕೊಂಡಿವೆ.

  • 18ರಿಂದ ಬೆಂಗಳೂರು ಟೆಕ್ ಶೃಂಗಸಭೆ

ಸಂದರ್ಭ:28ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ ತುಮಕೂರು ರಸ್ತೆಯ ಬೆಂಗಳೂರು ಅಂತರ ರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಇದೇ 18ರಿಂದ ಮೂರು ದಿನ ನಡೆಯಲಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

  • ‘ಈ ಶೃಂಗಸಭೆ ಯಲ್ಲಿ 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ತಂತ್ರಜ್ಞಾನ ಮತ್ತು ಉದ್ಯಮವನ್ನು ಒಂದೇ ವೇದಿಕೆಗೆ ತರುವ ಜಾಗತಿಕ ಕಾರ್ಯಕ್ರಮ ಇದಾಗಿದ್ದು, ಈ ಬಾರಿ ಕ್ವಾಂಟಮ್ ಕಂಪ್ಯೂಟಿಂಗ್, ಎಐ, ಸ್ಪೇಸ್ಟೆಕ್, ಹೆಲ್ತ್ಟೆಕ್ಗೆ ವಿಶೇಷ ಗಮನ ನೀಡ ಲಾಗುವುದು ಎಂದು ಹೇಳಿದರು.
  • ‘20ರಂದು ಫ್ಯೂಚರ್ ಮೇಕರ್ಸ್ ಕಾನ್‌ಕ್ಲೇವ್ ನಡೆಯ ಲಿದ್ದು, 10 ಸಾವಿರಕ್ಕೂ ಹೆಚ್ಚಿನ ಉದ್ಯಮಿಗಳು, ಹೂಡಿಕೆದಾರರು, ಸ್ಟಾರ್ಟ್ ಅಪ್ ಸಂಸ್ಥಾಪಕರು ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆವಿಷ್ಕಾರ ಮಾಡಿ ರುವವರು ಪಾಲ್ಗೊಳ್ಳಲಿದ್ದಾರೆ’ ಎಂದರು.
  • ಹೊಸ ನೀತಿ: ಸ್ಟಾರ್ಟ್ ಅಪ್ ಐಟಿ ಸ್ಪೇಸ್ ಟೆಕ್ಗೆ ಹೊಸ ನೀತಿ ತರಲು ನಿರ್ಧರಿಸಲಾಗಿದೆ. ಒಟ್ಟಾರೆ, ಬಾರಿ ನೀತಿಗಳನ್ನು ಜಾಗತಿಕ ದೃಷ್ಟಿಕೋನದಲ್ಲೇ ರೂಪಿಸಲಾಗಿದೆ. ಮಾಹಿತಿ ತಂತ್ರಜ್ಞಾನ, ಸ್ಟಾರ್ಟ್ ಅಪ್, ಸ್ಪೇಸ್ಟೆಕ್ನಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ನೀತಿಯ ಮೂಲಕ ಕರ್ನಾಟಕದಲ್ಲಿರುವ ಇನ್ನಷ್ಟು ಅವಕಾಶಗಳ ಅರಿವು ಮೂಡಿ ಸಲು ಪ್ರಯತ್ನಿಸಲಾಗುವುದುಎಂದರು.
  • ₹600 ಕೋಟಿ ಹೂಡಿಕೆ: ‘ಕರ್ನಾಟಕವನ್ನು ಭಾರತದ ಡೀಪ್ ಟೆಕ್ ರಾಜಧಾನಿಯಾಗಿ ರೂಪಿಸುವ ಉದ್ದೇಶದಿಂದ ಸರ್ಕಾರ ₹600 ಕೋಟಿ ಹೂಡಿಕೆಗೆ ಬದ್ಧವಾಗಿದೆ. ಇದರಲ್ಲಿ ಎಐ, ಕ್ವಾಂಟಮ್ ಕಂಪ್ಯೂಟಿಂಗ್, ರೋಬೊಟಿಕ್ಸ್ ಹಾಗೂ ಸುಸ್ಥಿರತೆ ಆಧಾರಿತ ಆವಿಷ್ಕಾರಗಳಿಗೂ ಪ್ರೋತ್ಸಾಹ ನೀಡಲಾಗುವುದು’ ಎಂದೂ ಅವರು ತಿಳಿಸಿದರು.
  • ತಯಾರಿಕಾ ಚಟುವಟಿಕೆ ಏರಿಕೆ

ಸಂದರ್ಭ: ದೇಶದ ತಯಾರಿಕಾ ವಲಯದ ಚಟುವಟಿಕೆ ಅಕ್ಟೋಬರ್ತಿಂಗಳಿನಲ್ಲಿ ಏರಿಕೆಯಾಗಿದೆ ಎಂದು ಎಸ್ಆ್ಯಂಡ್ಪಿ ಗ್ಲೋಬಲ್ಸಂಸ್ಥೆಯ ಮಾಸಿಕ ಸಮೀಕ್ಷಾ ವರದಿ ತಿಳಿಸಿದೆ.

  • ಎಸ್‌ ಆ್ಯಂಡ್‌ ಪಿ ಗ್ಲೋಬಲ್‌ ಸಂಸ್ಥೆಯು ನಿರ್ವಹಿಸುವ ‘ಎಚ್‌ಎಸ್‌ಬಿಸಿ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಪರ್ಚೇಸಿಂಗ್ ಮ್ಯಾನೇಜರ್ಸ್‌ ಸೂಚ್ಯಂಕ’ವು ಸೆಪ್ಟೆಂಬರ್‌ ತಿಂಗಳಲ್ಲಿ 57.7 ದಾಖಲಾಗಿತ್ತು. ಇದು ಅಕ್ಟೋಬರ್‌ನಲ್ಲಿ 59.2ಕ್ಕೆ ಏರಿಕೆಯಾಗಿದೆ.
  • ಪಿಎಂಐ ಸೂಚ್ಯಂಕವು 50ಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇದ್ದರೆ ಅದನ್ನು ಬೆಳವಣಿಗೆ ಎಂದು ಗುರುತಿಸಲಾಗುತ್ತದೆ.
  • ಜಿಎಸ್‌ಟಿ ಇಳಿಕೆಯಿಂದ ಖರೀದಿ ಹೆಚ್ಚಳವಾಯಿತು. ದೇಶೀಯ ಮಾರುಕಟ್ಟೆಯಲ್ಲಿ ಸರಕುಗಳಿಗೆ ಹೆಚ್ಚಿದ ಬೇಡಿಕೆ ಮತ್ತು ಹೊಸ ರಫ್ತು ಕಾರ್ಯಾದೇಶದಿಂದ ಸೂಚ್ಯಂಕವು ಏರಿಕೆ ಕಂಡಿದೆ ಎಂದು ತಿಳಿಸಿದೆ. ಜೊತೆಗೆ ತಂತ್ರಜ್ಞಾನ ಕಂಪನಿಗಳು ಹೂಡಿಕೆ ಪ್ರಮಾಣವನ್ನು ಹೆಚ್ಚಿಸಿದ್ದು ಸಹ ಸೂಚ್ಯಂಕಗಳ ಏರಿಕೆಗೆ ಕಾರಣವಾಗಿದೆ ಎಂದು ತಿಳಿಸಿದೆ.
  • ಆದರೆ, ಇದೇ ಅವಧಿಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಂದಗೊಂಡಿದೆ ಎಂದು ಹೇಳಿದೆ.
  • ‘ಅಕ್ಟೋಬರ್‌ನಲ್ಲಿ ತಯಾರಿಕಾ ವಲಯದ ಉತ್ಪಾದನೆ ಏರಿಕೆಯಾಗಿದೆ. ಹೊಸ ಕಾರ್ಯಾದೇಶ ಮತ್ತು ಉದ್ಯೋಗ ಸೃಷ್ಟಿ ಹೆಚ್ಚಳವಾಗಿದೆ’ ಎಂದು ಎಚ್‌ಎಸ್‌ಬಿಸಿ ಇಂಡಿಯಾದ ಮುಖ್ಯ ಅರ್ಥಶಾಸ್ತ್ರಜ್ಞೆ ಪ್ರಾಂಜುಲ್‌ ಭಂಡಾರಿ ಹೇಳಿದ್ದಾರೆ.
  • ಅಣ್ವಸ್ತ್ರ ಪರೀಕ್ಷೆ: ಟ್ರಂಪ್ ಸಮರ್ಥನೆ

ಸಂದರ್ಭ:ಅಣ್ವಸ್ತ್ರಗಳನ್ನು ಪರೀಕ್ಷಿಸುತ್ತಿರುವ ದೇಶಗಳಲ್ಲಿ ಪಾಕಿಸ್ತಾನ ಮತ್ತು ಚೀನಾ ಸೇರಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ಟ್ರಂಪ್ಹೇಳಿದ್ದಾರೆ.

  • ಮೂರು ದಶಕಗಳ ನಂತರ ಅಮೆರಿಕದ ಸ್ವಂತ ಅಣ್ವಸ್ತ್ರಗಳ ಪರೀಕ್ಷೆಯನ್ನು ಪುನರಾರಂಭಿಸುವ ತಮ್ಮ ಆಡಳಿತದ ಯೋಜನೆಗಳನ್ನು ಸಮರ್ಥಿಸಿಕೊಳ್ಳುವ ಭಾಗವಾಗಿ ಟ್ರಂಪ್‌ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
  • ಕಳೆದ ವಾರ ಚೀನಾ ಅಧ್ಯಕ್ಷ  ಷಿ ಜಿನ್‌ಪಿಂಗ್ ಅವರೊಂದಿಗಿನ ಭೇಟಿಗೂ ಮುನ್ನ ಟ್ರಂಪ್‌ ಅವರು, ಅಮೆರಿಕವು ಪ್ರತಿಸ್ಪರ್ಧಿ ಶಕ್ತಿಗಳೊಂದಿಗೆ ಸರಿಸಮವಾಗಿ ಅಣ್ವಸ್ತ್ರಗಳ ಪರೀಕ್ಷೆ ಆರಂಭಿಸುವುದಾಗಿ ಘೋಷಿಸಿದ್ದರು.
  • ‘ಸಿಬಿಎಸ್ ನ್ಯೂಸ್‌’ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್‌ ಅವರು, ರಷ್ಯಾ, ಚೀನಾ, ಉತ್ತರ ಕೊರಿಯಾ ಮತ್ತು ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸುವ ದೇಶಗಳೆಂದು ಹೆಸರಿಸಿದರು.
  • ‘ರಷ್ಯಾ, ಚೀನಾ ಪರೀಕ್ಷೆ ನಡೆಸುತ್ತಿವೆ. ಆದರೆ, ಅವರು ಅದರ ಬಗ್ಗೆ ಮಾತನಾಡುವು ದಿಲ್ಲ. ಉತ್ತರ ಕೊರಿಯಾ, ಪಾಕಿಸ್ತಾನ ಪರೀಕ್ಷೆ ನಡೆಸುತ್ತಿ ರುವುದು ನಿಸ್ಸಂಶಯ’ ಎಂದು ಟ್ರಂಪ್‌ ಹೇಳಿದರು.
  • ‘ನಾವೂ ಪರಮಾಣು ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸಬೇಕು. ಶಸ್ತ್ರಾಸ್ತ್ರಗಳ ವಿಶ್ವಾಸಾರ್ಹತೆ ಯನ್ನು ಖಚಿತಪಡಿಸಿ ಕೊಳ್ಳಲು ಇಂತಹ ಪರೀಕ್ಷೆ ಅಗತ್ಯ’ ಎಂದು ಟ್ರಂಪ್‌ ಹೇಳಿದರು.
  • ಅಮೆರಿಕದ ಮಾಧ್ಯಮ ವರದಿಗಳ ಪ್ರಕಾರ, ‘ಅಮೆರಿಕ ಸೇನೆಯು ಪರಮಾಣು ಸಿಡಿತಲೆಯನ್ನು ಹೊತ್ತೊಯ್ಯುವ ಸಾಮರ್ಥ್ಯವಿರುವ ತನ್ನ ಕ್ಷಿಪಣಿಗಳನ್ನು ನಿಯಮಿತವಾಗಿ ಪರೀಕ್ಷಿಸುತ್ತದೆ. ಆದರೆ, 1992ರಿಂದ ಶಸ್ತ್ರಾಸ್ತ್ರಗಳನ್ನು ಸ್ಫೋಟಿಸಿಲ್ಲ.
  • ರಷ್ಯಾ ಪೋಸಿಡಾನ್‌ ಪರಮಾಣು ಸಾಮರ್ಥ್ಯದ ಸೂಪರ್‌ ಟಾರ್ಪಿಡೊವನ್ನು ಪರೀಕ್ಷಿಸಿದೆ ಎಂದು ಅಧ್ಯಕ್ಷ ವ್ಲಾದಿಮಿರ್‌ ಪುಟಿನ್ ಕಳೆದ ವಾರ ಹೇಳಿದ್ದರು.

ಪ್ರಚಲಿತ ವಿದ್ಯಮಾನಗಳು: 3ನೇ ನವೆಂಬರ್ 2025

  • ಭಾರತ ನಾರಿಯರಿಗೆ ಕಿರೀಟ: ಚೊಚ್ಚಲ ವಿಶ್ವಕಪ್ಗೆದ್ದು ಬೀಗಿದ ಹರ್ಮನ್ಪ್ರೀತ್ಬಳಗ

ಸಂದರ್ಭ: ಮಹಿಳಾ ಕ್ರಿಕೆಟ್‌ ರಂಗದಲ್ಲಿ ಹೊಸ ಶಕೆ ಆರಂಭವಾಯಿತು. ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ  ಭಾರತ ತಂಡವು ಮೊದಲ ಬಾರಿಗೆ ವಿಶ್ವ ಕಿರೀಟ ಮುಡಿಗೇರಿಸಿಕೊಂಡು ಚಾರಿತ್ರಿಕ ಸಾಧನೆ ಮೆರೆಯಿತು. ಹಲವು ವರ್ಷಗಳಿಂದ ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳು ಕಂಡಿದ್ದ ಕನಸು ನನಸಾಯಿತು. ಹರ್ಮನ್‌ ಪ್ರೀತ್ ಕೌರ್ ಬಳಗದ ಆಟಗಾರ್ತಿಯರು ಹರ್ಷದ ಹೊನಲಲ್ಲಿ ತೇಲಿದರು.

  • 2005 ಮತ್ತು 2017ರ ಟೂರ್ನಿಗಳಲ್ಲಿ ಫೈನಲ್‌ನಲ್ಲಿ ಎಡವಿದ್ದ  ಭಾರತ ತಂಡ ಈ ಬಾರಿ ಗುರಿ ತಪ್ಪಲಿಲ್ಲ. ದೀಪ್ತಿ ಶರ್ಮಾ ಮತ್ತು ಶಫಾಲಿ ವರ್ಮಾ ಅವರ ಆಲ್‌ರೌಂಡ್ ಆಟದ ಬಲದಿಂದ ಭಾರತವು 52 ರನ್‌ಗಳಿಂದ ದಕ್ಷಿಣ ಆಫ್ರಿಕಾ ವನಿತೆಯರ ಎದುರು ಜಯಭೇರಿ ಬಾರಿಸಿತು.
  • ದಕ್ಷಿಣ ಆಫ್ರಿಕಾ ತಂಡಕ್ಕೆ ಚೊಚ್ಚಲ ಪ್ರಶಸ್ತಿ ಜಯಿಸುವ ಅವಕಾಶ ಕೈತಪ್ಪಿತು. ಆದರೆ ತಂಡದ ನಾಯಕಿ ಲಾರಾ ವೋಲ್ವಾರ್ಟ್‌ (101; 98 ಎಸೆತ; 4X11, 6X1) ಅವರ ಅಮೋಘ ಶತಕವು ಇತಿಹಾಸದ ಪುಟ ಸೇರಿತು. ಅವರ ಬಳಗದ ದಿಟ್ಟ ಹೋರಾಟವೂ ಮನಗೆದ್ದಿತು.
  • ಏಳು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಸೆಮಿಫೈನಲ್‌ ನಲ್ಲಿ ಸೋಲಿಸಿದ್ದ ಭಾರತ ಮತ್ತು ನಾಲ್ಕು ಸಲ ಕಿರೀಟ ಧರಿಸಿದ್ದ ಇಂಗ್ಲೆಂಡ್ ತಂಡ ವನ್ನು ಮಣಿಸಿದ್ದ ದಕ್ಷಿಣ ಆಫ್ರಿಕಾ ಫೈನಲ್‌ ನಲ್ಲಿ ಮುಖಾಮುಖಿಯಾಗಿದ್ದವು.
  • ಸಿಎಂಎಸ್‌ – 3 ಕಕ್ಷೆಗೆ: ಇತಿಹಾಸ ನಿರ್ಮಿಸಿದ ಇಸ್ರೊ

ಸಂದರ್ಭ: ಸಂವಹನ ಉಪಗ್ರಹವನ್ನುಬಾಹುಬಲಿ ನಿಖರವಾಗಿ ಕಕ್ಷೆಗೆ ಸೇರಿಸಿದೆ. ಇದು ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಹೆಮ್ಮೆಯ ಗರಿ.ವಿ. ನಾರಾಯಣನ್‌, ಇಸ್ರೊ ಅಧ್ಯಕ್ಷ

  • ಹೊಸ ತಲೆಮಾರಿನ, ಸ್ವದೇಶಿ ನಿರ್ಮಿತ ‘ಬಾಹುಬಲಿ’ ರಾಕೆಟ್‌ ಮೂಲಕ ಅತ್ಯಂತ ಭಾರವಾದ ಉಪಗ್ರಹವನ್ನು ಕಕ್ಷೆಗೆ ಸೇರಿಸುವುದರೊಂದಿಗೆ ಇಸ್ರೊ ಚಾರಿತ್ರಿಕ ಸಾಧನೆ ಮಾಡಿದೆ.
  • ಶ್ರೀಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ 4,410 ಕೆ.ಜಿ ತೂಕದ ಸಂವಹನ ಉಪಗ್ರಹವನ್ನು (ಸಿಎಂಎಸ್‌–03) ಹೊತ್ತು ನಭಕ್ಕೆ ಚಿಮ್ಮಿದ ಲಾಂಚ್‌ ವೆಹಿಕಲ್ ಮಾರ್ಕ್–3 (ಎಲ್‌ವಿಎಂ3-ಎಂ5) ‘ಬಾಹುಬಲಿ’ಯು ‘ಆತ್ಮನಿರ್ಭರ ಭಾರತ’ದ ಸಾಧನೆಗೆ ಸಾಕ್ಷಿಯಾಯಿತು.
  • ದೇಶದ ಬಾಹ್ಯಾಕಾಶ ಕೇಂದ್ರ ದಿಂದ ಮೊದಲ ಬಾರಿಗೆ ಉಡ್ಡಯನ ಮಾಡಲಾಗುತ್ತಿರುವ ಭಾರಿ ತೂಕದ ಉಪಗ್ರಹ ಎಂಬ ಹೆಗ್ಗಳಿಕೆಗೆ ‘ಸಿಎಂಎಸ್‌–03’ ಪಾತ್ರವಾಯಿತು. ಇದರ ಉಡ್ಡಯನಕ್ಕೆ ಬಳಸಿದ ಭಾರಿ ಗಾತ್ರದ ರಾಕೆಟ್‌ (ಎಲ್‌ವಿಎಂ3-ಎಂ5) ‌ಕೂಡ ‘ಬಾಹುಬಲಿ’ ಹೆಸರಿನ ಹಿರಿಮೆಯನ್ನು ಹೆಚ್ಚಿಸಿತು.

7 ಉಪಗ್ರಹ ಉಡಾವಣೆ ಗುರಿ

  • ಇಸ್ರೊದ ಮಹತ್ವಾಕಾಂಕ್ಷೆಯ ಗಗನಯಾನ ಕಾರ್ಯಕ್ರಮದಡಿ ಮೊದಲ ಮಾನವ ರಹಿತ ಯೋಜನೆಯೂ ಸೇರಿದಂತೆ 2026ರ ಮಾರ್ಚ್‌ ಒಳಗೆ 7 ಉಪಗ್ರಹ ಉಡಾವಣೆಗಳನ್ನು ನಡೆಸುವ ಗುರಿಯನ್ನು ಇಸ್ರೊ ಹೊಂದಿದೆ.
  • ಉಪಗ್ರಹದ ತೂಕ: 4,410 ಕೆ.ಜಿ
  • ಉಡ್ಡಯನಕ್ಕೆ ಬಳಸಿದ ರಾಕೆಟ್ ಎತ್ತರ: 43.5 ಮೀಟರ್
  • ಉಪಗ್ರಹದ ಕಾರ್ಯ ನಿರ್ವಹಣೆಯ ಅವಧಿ :15 ವರ್ಷ
  • ಕನಿಷ್ಠ 15 ವರ್ಷ ಕಾರ್ಯಾಚರಣೆ:  ಉಪಗ್ರಹವನ್ನು ಭೂಹೊಂದಾಣಿಕೆ ವರ್ಗಾವಣೆ ಕಕ್ಷೆಗೆ (ಜಿಟಿಒ) ಸೇರಿಸಲಾಗಿದ್ದು, ಇದು 2013ರಲ್ಲಿ ಉಡಾವಣೆ ಮಾಡಿದ ‘ಜಿಎಸ್‌ಎಟಿ–7’ ಸರಣಿಯ ಉಪಗ್ರಹಕ್ಕೆ ಬದಲಿಯಾಗಿ, ಮುಂದಿನ 15 ವರ್ಷಗಳವರೆಗೆ ಕಾರ್ಯ ನಿರ್ವಹಿಸಲಿದೆ ಎಂದು ಇಸ್ರೊ ಹೇಳಿದೆ.
  • ಸಾಗರಯಾನಕ್ಕೆ,ಭೂಮೇಲ್ಮೈ ನಲ್ಲಿ ನಡೆಯುವ ಚಟುವಟಿಕೆಗೆ ಅಗತ್ಯವಿರುವ ಸಂವಹನ ಸೇವೆಯನ್ನು ಈ ಉಪಗ್ರಹದ ಮೂಲಕ ನೀಡಲಾಗುತ್ತದೆ.
  • ಎಲ್‌ವಿಎಂ–3 ಮೂಲಕ ನಡೆದಿರುವ ಉಡಾವಣೆಗಳು ಶೇ 100ರಷ್ಟು ಯಶಸ್ಸಿನ ದರ ಹೊಂದಿವೆ. ಚಂದ್ರಯಾನ– 3ರ (3,841.4 ಕೆ.ಜಿ) ಉಡಾವಣೆ ನಂತರ ಈ ರಾಕೆಟ್‌, ಮತ್ತೊಂದು ಮೈಲಿಗಲ್ಲು ನಿರ್ಮಿಸಿದೆ. 
  • ಇಸ್ರೊದ ಗಗನಯಾನ ಯೋಜನೆಯಲ್ಲಿ ‘ಎಲ್‌ವಿಎಂ–3’ ರಾಕೆಟ್ ಬಳಸುವ ಯೋಜನೆ ಇದ್ದು, ಇದಕ್ಕೆ ‘ಎಚ್‌ಆರ್‌ಎಲ್‌ವಿ’ ಎಂದು ಹೆಸರಿಡಲಾಗಿದೆ. 2018ರಲ್ಲಿ ಜಿಸ್ಯಾಟ್‌–11 (5,854 ಕೆ.ಜಿ) ಉಪಗ್ರಹವನ್ನು ಫ್ರೆಂಚ್‌ ಗಯಾನದಿಂದ ಉಡ್ಡಯನ ಮಾಡಲಾಗಿತ್ತು.
  • ಪವನ ವಿದ್ಯುತ್: ಕರ್ನಾಟಕಕ್ಕೆ ಪ್ರಶಸ್ತಿ

ಸಂದರ್ಭ: ಅತ್ಯಧಿಕ ಪವನ ವಿದ್ಯುತ್ಉತ್ಪಾದನೆ ಮೂಲಕ 2024-25ನೇ ಸಾಲಿನಲ್ಲಿ ಪ್ರಶಸ್ತಿ ಪಡೆದಿದ್ದ ಕರ್ನಾಟಕ ನವೀಕರಿಸಬಹು ದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್), ಇದೇ ಸಾಲಿನಲ್ಲಿಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿದೆ.

  • ವಿಂಡ್ ಟರ್ಬೈನ್ ತಯಾರಕರ ಸಂಘ (ಐಡಬ್ಲ್ಯುಟಿಎಂಎ) ಚೆನ್ನೈನ ಟ್ರೇಡ್ ಸೆಂಟರ್‌ನಲ್ಲಿ ಆಯೋಜಿಸಿದ್ದ ‘ವಿಂಡ್‌ ಎನರ್ಜಿ ಇಂಡಿಯಾ 2025’ರ ಏಳನೇ ಆವೃತ್ತಿಯಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಅವರು ಕ್ರೆಡಲ್ ಅಧ್ಯಕ್ಷರೂ ಆದ ಶಾಸಕ ಟಿ.ಡಿ. ರಾಜೇಗೌಡ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
  • ನಂತರ ಮಾತನಾಡಿದ ರಾಜೇಗೌಡ, ‘ಇದು ನಮ್ಮ ರಾಜ್ಯಕ್ಕೆ ಹೆಮ್ಮೆಯ ಸಂಗತಿ. ಶುದ್ಧ ಇಂಧನ ಉತ್ಪಾದನೆ ಮತ್ತು ಬಳಕೆಗೆ ಆದ್ಯತೆ ನೀಡಿ, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವ ಎಲ್ಲಾ ಪಾಲುದಾರರ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದರು.
  • ‘ಅನುಷ್ಠಾನ ಹಂತದಲ್ಲಿರುವ ಪವನ ವಿದ್ಯುತ್ ಸಾಮರ್ಥ್ಯದಲ್ಲಿ ಕರ್ನಾಟಕವು ದೇಶದಲ್ಲಿ ಮೊದಲ ಸ್ಥಾನ ಹೊಂದಿದೆ. ಇದನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.
  • ‘ಇಂಧನ ವಲಯದಲ್ಲಿನ ಹೊಸ ನೀತಿಗಳು ರಾಜ್ಯವನ್ನು ನವೀಕರಿಸಬಹುದಾದ ಇಂಧನದ ಶಕ್ತಿ ಕೇಂದ್ರವನ್ನಾಗಿ ರೂಪಿಸುತ್ತಿವೆ’ ಎಂದು ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದ್ದಾರೆ.
  • ‘ನವೀಕರಿಸಬಹುದಾದ ಇಂಧನದ ರಾಷ್ಟ್ರೀಯ ಗುರಿಗಳನ್ನು ಬೆಂಬಲಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಅವಿರತ ಪ್ರಯತ್ನಕ್ಕೆ ಈ ಪ್ರಶಸ್ತಿ ಸಂದಿದೆ’ ಎಂದು ಕೆ.ಪಿ. ರುದ್ರಪ್ಪಯ್ಯ ಅವರು ತಿಳಿಸಿದ್ದಾರೆ.
  • ವೇಣುಗೆಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿ

ಸಂದರ್ಭ: ಕೆಂಧೂಳಿ ಪತ್ರಿಕೆ ನೀಡುವಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿಗೆ ಸಾಹಿತಿ ಬಿ.ಎಲ್. ವೇಣು ಆಯ್ಕೆಯಾಗಿದ್ದಾರೆ.

  • ಈ ಪ್ರಶಸ್ತಿಯು ₹ 10 ಸಾವಿರ ನಗದು ಒಳಗೊಂಡಿದೆ. ಶಿವಕುಮಾರ್ ಕಂಪ್ಲಿ ಅಧ್ಯಕ್ಷತೆಯಲ್ಲಿ ತುರುವನೂರು ಮಂಜುನಾಥ, ಶ್ರೀದೇವಿ ಕೆರೆಮನೆ ಮತ್ತು ಪರಶಿವ ಧನಗೂರು ಅವರ ಸಮಿತಿ ಈ ಆಯ್ಕೆ ಮಾಡಿದೆ. 
  • ‘ಕೆಂಧೂಳಿ ಪತ್ರಿಕೆ ಐದು ವರ್ಷ ಪೂರೈಸಿದ ಈ ಸಂದರ್ಭದಲ್ಲಿ ಸಾಹಿತ್ಯ, ಪತ್ರಿಕೋದ್ಯಮ, ಕೃಷಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಪ್ರತಿ ವರ್ಷ ಪ್ರಶಸ್ತಿ ನೀಡಲು ತೀರ್ಮಾನಿಸಿದೆ’ ಎಂದು ಪತ್ರಿಕೆ ಸಂಪಾದಕ ತುರುವನೂರು ಮಂಜುನಾಥ ತಿಳಿಸಿದ್ದಾರೆ.
  • ನೀರಿನ ಹೆಜ್ಜೆ’ 5ರಂದು ಬಿಡುಗಡೆ

ಸಂದರ್ಭ:ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಜಲ ವಿವಾದಗಳು, ಒಪ್ಪಂದಗಳು, ನ್ಯಾಯಾಲಯದ ತೀರ್ಪುಗಳು, ನೀರಾವರಿ ಯೋಜನೆಗಳು, ಸಮಸ್ಯೆಗಳು ಮತ್ತು ಪರಿಹಾರ ಗಳ ಚಿತ್ರಣವಿರುವ ನಾನು ಬರೆದಿರುವನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ 5ರಂದು ಬಿಡುಗಡೆ ಮಾಡಲಿದ್ದಾರೆ.

  • ‘1956 ಆಗಸ್ಟ್‌ 28ರಂದು ದೇಶದ ನದಿಗಳ ಮತ್ತು ಕಣಿವೆ ವಿವಾದಗಳ ನ್ಯಾಯ ನಿರ್ಣಯಕ್ಕೆ ಜಾರಿಗೊಳಿಸಲಾದ ಅಂತರರಾಷ್ಟ್ರೀಯ ಜಲ ಕಾಯ್ದೆ, ಜಲ ಒಪ್ಪಂದಗಳು ಯಾವುವು, ಆ ದೇಶಗಳು ಕೈಗೊಂಡ ನಿರ್ಧಾರಗಳೇನು? ಭಾರತದ ನಿಲುವುಗಳು ಏನಾಗಿತ್ತು? ದೇಶದ ನದಿಗಳ ಜೋಡಣೆ ಬಿಕ್ಕಟ್ಟು, ಪರಿಹಾರ ಹಾಗೂ ಜೋಡಣೆ ಸಾಧ್ಯವೇ? ದೇಶದಲ್ಲಿನ ನದಿಗಳ ವಿವಾದ ಮತ್ತು ಅಲ್ಲಿನ ಪರಿಸ್ಥಿತಿ ಏನು ಎಂಬುದರ ಬಗ್ಗೆ ಈ ಕೃತಿಯಲ್ಲಿ ದಾಖಲಿಸಿದ್ದೇನೆ. ರಾಜ್ಯದ ಮಹದಾಯಿ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ಬಗ್ಗೆಯೂ ಸಮಗ್ರ ಮಾಹಿತಿಯಿದೆ’ ಎಂದರು.
  • ಬಾಂಗ್ಲಾದೇಶದೊಂದಿಗೆ ಬೇಸಿಗೆ ಅವಧಿಯಲ್ಲಿ ನೀರಿನ ಹರಿವು ಹಂಚಿ ಕೊಳ್ಳಬೇಕೆಂಬ ಒಪ್ಪಂದ ಮಾಡಿಕೊಳ್ಳ ಲಾಗಿತ್ತು.
  • ಮಹಾನದಿ, ಶಾರದಾ ಒಪ್ಪಂದಕ್ಕೆ ಅಂದಿನ ಪ್ರಧಾನಿ ದೇವೇಗೌಡರು ಸಹಿ ಹಾಕಿ, ಪ್ರಮುಖ 12 ಅಧ್ಯಾಯಗಳನ್ನು ಒಳಗೊಂಡ ನಿಯಮಾವಳಿ ರೂಪಿಸಲಾಗಿತ್ತು.
  • 1971ರಲ್ಲಿ ನೀರಾವರಿ ಯೋಜನೆಗಳಿಗೆ ವಿಶ್ವಬ್ಯಾಂಕ್ನೆರವು ನೀಡುವುದಕ್ಕೆ ಆರಂಭಿಸಿತ್ತು.
  • ನಂತರದಲ್ಲಿ ದೇಶದ ನದಿ ಜೋಡಣೆ ವಿಚಾರ ಮುನ್ನೆಲೆಗೆ ಬಂತು. ಕೇಂದ್ರ ಸರ್ಕಾರದ ರಾಷ್ಟ್ರೀಯ ನೀರಾವರಿ ಅಭಿವೃದ್ಧಿ ಸಂಸ್ಥೆಯು ಹಿಮಾಲಯದ 14 ನದಿ, ದಕ್ಷಿಣ ಭಾರತದ 16 ನದಿ ಜೋಡಣೆ ಹಾಗೂ ರಾಜ್ಯದ ಒಳಗಿನ 37 ನದಿ ಜೋಡಣೆಗೆ ವರದಿ ನೀಡಿತ್ತು. ಆ ಎಲ್ಲ ವಿಷಯಗಳು ಈ ಕೃತಿಯಲ್ಲಿದೆ’ ಎಂದು ವಿವರಿಸಿದರು.
  • ‘1952ರ ಸೆ. 29ರಂದು ಕೃಷ್ಣಾ ನದಿ ಅಣೆಕಟ್ಟು ನಿರ್ಮಾಣಕ್ಕೆ ಶಂಕುಸ್ಥಾಪನೆಗೆ ಬಂದಿದ್ದ ಅಂದಿನ ಪ್ರಧಾನಿ ಜವಾಹರ‌ಲಾಲ್ ನೆಹರೂ ಅವರು ಅಣೆಕಟ್ಟುಗಳು ಆಧುನಿಕ ಭಾರತದ ದೇಗುಲಗಳಿದ್ದಂತೆ ಎಂದು ಉಲ್ಲೇಖಿಸಿದ್ದರು. ಅದನ್ನೂ ಉಲ್ಲೇಖಿಸಿ ದ್ದೇನೆ. ಕೃತಿಯಲ್ಲಿ ಯಾರನ್ನೂ ಟೀಕೆ ಮಾಡಿಲ್ಲ. ರಾಜಕೀಯ ವಿಚಾರಗಳ ಬಗ್ಗೆಯೂ ಪ್ರಸ್ತಾಪ ಮಾಡಿಲ್ಲ. ವಾಸ್ತವಾಂಶಗಳನ್ನಷ್ಟೆ ದಾಖಲಿಸಿದ್ದೇನೆ’ ಎಂದೂ ಅವರು ಸ್ಪಷ್ಟಪಡಿಸಿದರು.
  • ನುಗುಸನಿಹ ಅದಿರು ಶೋಧ

ಸಂದರ್ಭ: ಅರಣ್ಯ ಇಲಾಖೆಗೆ ಭಾರತೀಯ ಭೂ ಸರ್ವೇಕ್ಷಣಾ ಸಂಸ್ಥೆ ಪ್ರಸ್ತಾವ: ಅದಿರು ಶೋಧ ಇನ್ನೂ ಪ್ರಸ್ತಾವದ ಹಂತದಲ್ಲಿದ್ದರೂ, ಮಾನವವನ್ಯಜೀವಿ ಸಂಘರ್ಷ ಹೆಚ್ಚಲು ಕಾರಣವಾಗುವ ಇಂಥ ಯೋಜನೆಗಳನ್ನು ಪುರಸ್ಕರಿಸಬಾರದು ಗಿರಿಧರ ಕುಲಕರ್ಣಿ ವನ್ಯಜೀವಿ ಸಂರಕ್ಷಣಾವಾದಿ.

  • ಜಿಲ್ಲೆಯ ಸರಗೂರು ತಾಲ್ಲೂಕಿನ ನುಗು ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯದ ಸನಿಹದಲ್ಲಿರುವ ಅರಣ್ಯ ಪ್ರದೇಶ ಸೇರಿ 13 ಗ್ರಾಮಗಳಲ್ಲಿ ಸಿಲಿಮನೈಟ್ ಮತ್ತು ಕಯನೈಟ್ ಅದಿರಿನ ಶೋಧ ನಡೆಸಲು ಭಾರತೀಯ ಭೂಸರ್ವೇಕ್ಷಣಾ ಸಂಸ್ಥೆಯು (ಜಿಎಸ್‌ಐ) ಅರಣ್ಯ ಇಲಾಖೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರಸ್ತಾವವು ಪರಿಶೀಲನಾ ಹಂತದಲ್ಲಿದೆ.
  • ಒಂದು ವೇಳೆ ಅನುಮತಿ ದೊರೆತಲ್ಲಿ ಸರಗೂರು ತಾಲ್ಲೂಕಿನ ಹೊನಗನಹಳ್ಳಿ ಮತ್ತು ಶಾಂತಿಪುರ ವಲಯದ 499 ಹೆಕ್ಟೇರ್ ಅರಣ್ಯ ಪ್ರದೇಶ ಹಾಗೂ 1,001 ಅರಣ್ಯೇತರ ಭೂಮಿಯಲ್ಲಿ ಉದ್ದೇಶಿತ ಅದಿರು ‍ಅನ್ವೇಷಣೆ ನಡೆಯಲಿದೆ. ಹಿರಿಯ ಭೂವಿಜ್ಞಾನಿ ನೇತೃತ್ವದ ಮೂವರು ಸಿಬ್ಬಂದಿಯನ್ನು ಅ.16ರಂದು ‘ಜಿಎಸ್‌ಐ’ ನಿಯೋಜಿಸಿದೆ. ‘50 ದಿನಗಳಲ್ಲಿ ಶೋಧ ನಡೆಸಿ, ವರದಿ ತಯಾರಿಸಲಿದ್ದಾರೆ’ ಎಂದು ಅರ್ಜಿಯಲ್ಲಿ ಹೇಳಿದೆ.
  • ಎಚ್‌.ಡಿ.ಕೋಟೆ, ಸರಗೂರು ತಾಲ್ಲೂಕುಗಳ ಗಡಿಯಾಗಿ ಹರಿಯುವ ಕಬಿನಿ ನದಿ ತೀರದಲ್ಲಿರುವ ಶಾಂತಿ‍ಪುರ ಗ್ರಾಮದ ಎರಡು ಬೃಹತ್ ಬೆಟ್ಟಗಳ ಅರಣ್ಯ ಭೂಮಿ ಹಾಗೂ ಸುತ್ತಲ ಗ್ರಾಮಗಳಲ್ಲಿ ಶೋಧ ನಡೆಯಲಿದೆ. ಇಲ್ಲಿಂದ ನುಗು ಜಲಾಶಯ 4.5 ಕಿ.ಮೀ ಹಾಗೂ ಕಬಿನಿ ಜಲಾಶಯದ ಅಣೆಕಟ್ಟೆ 6.8 ಕಿ.ಮೀ ದೂರದಲ್ಲಿವೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ನುಗು ವನ್ಯಜೀವಿಧಾಮ ಕೂಡ ಸನಿಹದಲ್ಲಿವೆ. ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಚಿಕ್ಕದೇವಮ್ಮ ಬೆಟ್ಟವೂ 1.5 ಕಿ.ಮೀ ದೂರದಲ್ಲಿದೆ.
  • ‘ಮಾನವ– ವನ್ಯಜೀವಿ ಸಂಘರ್ಷದಲ್ಲಿ ನಲುಗಿರುವ ಪರಿಸರ ಸೂಕ್ಷ್ಮ ವಲಯದ ಈ ಭಾಗದಲ್ಲಿ ಗಣಿಗಾರಿಕೆ ಆರಂಭವಾದರೆ ಪರಿಸ್ಥಿತಿಯು ಮತ್ತಷ್ಟು ಬಿಗಡಾಯಿಸಲಿದೆ’ ಎಂಬ ಆತಂಕವೂ ಇದೇ ವೇಳೆ ಪರಿಸರ ಹೋರಾಟಗಾರರಿಂದ ವ್ಯಕ್ತವಾಗಿದೆ.
  • ‘ವನ್ಯಜೀವಿ ಹಾಗೂ ಜನರ ಮೇಲೆ ಪರಿಣಾಮ ಬೀರುವ ಗಣಿಗಾರಿಕೆ, ವಾಣಿಜ್ಯ ಪ್ರವಾಸೋದ್ಯಮದಂಥ ಯೋಜನೆ ತರುವ ಮೊದಲು ಸ್ಥಳೀಯರು, ಸಂಘ– ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಸೂಕ್ತ’ ಎನ್ನುತ್ತಾರೆ ವನ್ಯಜೀವಿ ಸಂರಕ್ಷಣಾವಾದಿ ಗಿರಿಧರ ಕುಲಕರ್ಣಿ. 
  • ಎಲ್ಲೆಲ್ಲಿ ಶೋಧ?: ಸರಗೂರು ಪಟ್ಟಣಕ್ಕೆ ಸಮೀಪದಲ್ಲೇ ಇರುವ ಶಾಂತಿ‍ಪುರ ಗ್ರಾಮದ ಸರ್ವೆ ಸಂಖ್ಯೆ 49, ಮಂಚಹಳ್ಳಿಯ ಸರ್ವೆ ಸಂಖ್ಯೆ 7, ಹುಣಸೇಹಳ್ಳಿಯ ಸರ್ವೆ ಸಂಖ್ಯೆ 54ರ ಅರಣ್ಯ ಪ್ರದೇಶ, ಅಡಹಳ್ಳಿ, ಹಳೆ ಮಂಚನಹಳ್ಳಿ, ಹುನುಗಹಳ್ಳಿ, ಇಟ್ನ, ಕಾಟೂರು, ಕೂಲ್ಯ, ಕುಂದಾಪಟ್ಟಣ, ಕೆ.ಬೆಳತೂರು, ಲಕ್ಕೂರು, ಮನುಗನಹಳ್ಳಿಯಲ್ಲಿ ಅದಿರು ಶೋಧ ನಡೆಯಲಿದೆ. ‌
  • ವಿದೇಶಿ ಪ್ರವಾಸಿಗರು: ಹಿಂದೆ ಬಿದ್ದ ರಾಜ್ಯ
  • ₹14 ಸಾವಿರ ಕೋಟಿ ವಿದೇಶಿ ಹೂಡಿಕೆ

ಸಂದರ್ಭ: ಸತತ ಮೂರು ತಿಂಗಳುಗಳಿಂದ ದೇಶದ ಬಂಡವಾಳ ಮಾರುಕಟ್ಟೆಗಳಿಂದ ಹಣವನ್ನು ಹಿಂದಕ್ಕೆ ಪಡೆಯುತ್ತಿದ್ದ ವಿದೇಶಿ ಹೂಡಿಕೆದಾರರು (ಎಫ್ಪಿಐ) ಅಕ್ಟೋಬರ್ತಿಂಗಳಲ್ಲಿ ನಿವ್ವಳ ₹14,610 ಕೋಟಿ ಹೂಡಿಕೆ ಮಾಡಿದ್ದಾರೆ.

  • ದೇಶದ ಕಾರ್ಪೊರೇಟ್‌ ಕಂಪನಿಗಳ ವರಮಾನ ಗಳಿಕೆಯು ಚೆನ್ನಾಗಿ ಇರುವುದು, ಅಮೆರಿಕದ ಫೆಡರಲ್‌ ರಿಸರ್ವ್‌ ಬಡ್ಡಿ ದರವನ್ನು ಇಳಿಕೆ ಮಾಡಿರುವುದು ಮತ್ತು ಭಾರತ–ಅಮೆರಿಕ ನಡುವೆ ವಾಣಿಜ್ಯ ಒಪ್ಪಂದವೊಂದು ಶೀಘ್ರವೇ ಸಾಧ್ಯವಾಗ ಬಹುದು ಎಂಬ ಆಶಾಭಾವನೆಯಲ್ಲಿ ಅವರು ಈ ಹೂಡಿಕೆ ಮಾಡಿದ್ದಾರೆ.
  • ವಿದೇಶಿ ಹೂಡಿಕೆದಾರರು ಸೆಪ್ಟೆಂಬರ್‌ನಲ್ಲಿ ₹23,885 ಕೋಟಿ, ಆಗಸ್ಟ್‌ನಲ್ಲಿ ₹34,990 ಕೋಟಿ ಹಾಗೂ ಜುಲೈನಲ್ಲಿ ₹17,700 ಕೋಟಿ ಹೂಡಿಕೆಯನ್ನು ಹಿಂಪಡೆದಿದ್ದರು. ಅಕ್ಟೋಬರ್‌ ತಿಂಗಳಲ್ಲಿ ವಿದೇಶಿ ಹೂಡಿಕೆದಾರರ ನಿಲುವು ಬದಲಾಗಿದೆ. ಅಂದರೆ, ಜಾಗತಿಕ ಹೂಡಿಕೆದಾರರಿಗೆ ಭಾರತದ ಬಂಡವಾಳ ಮಾರುಕಟ್ಟೆಗಳ ಮೇಲೆ ಹೊಸದಾಗಿ ವಿಶ್ವಾಸ ಮೂಡಿದೆ.
  • ದೇಶದ ಷೇರುಪೇಟೆಗಳಲ್ಲಿ ಈಚೆಗೆ ಕಂಡುಬಂದ ಇಳಿಕೆ ಹಾಗೂ ಕಾರ್ಪೊರೇಟ್‌ ಕಂಪನಿಗಳು ಉತ್ತಮ ಫಲಿತಾಂಶ ತೋರಿರುವ ಕಾರಣದಿಂದಾಗಿ ದೇಶದ ಷೇರುಗಳ ಮೌಲ್ಯವು ಆಕರ್ಷಕವಾಗಿ ಕಾಣಲಾರಂಭಿಸಿದೆ. ವಿದೇಶಿ ಹೂಡಿಕೆದಾರರು ಭಾರತದ ಮಾರುಕಟ್ಟೆಗಳತ್ತ ಮತ್ತೆ ಮರಳಿ ರುವುದಕ್ಕೆ ಇದೂ ಒಂದು ಕಾರಣ ಎಂದು ಮಾರ್ನಿಂಗ್‌ಸ್ಟಾರ್‌ ಇನ್ವೆಸ್ಟ್‌ಮೆಂಟ್‌ ರಿಸರ್ಚ್‌ ಇಂಡಿಯಾ ಸಂಸ್ಥೆಯ ಸಂಶೋಧನಾ ನಿರ್ವಾಹಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.
  • ದೇಶದ ಅರ್ಥ ವ್ಯವಸ್ಥೆಯಲ್ಲಿನ ಸ್ಥಿರತೆ, ಜಾಗತಿಕ ಮಟ್ಟದಲ್ಲಿ ಪೂರಕ ಪರಿಸ್ಥಿತಿ ಹಾಗೂ ದೇಶದ ಕಾರ್ಪೊರೇಟ್‌ ಕಂಪನಿಗಳ ವರಮಾನದಲ್ಲಿ ಸ್ಥಿರತೆ ಕಂಡುಬಂದರೆ ಮುಂದಿನ ದಿನಗಳಲ್ಲಿಯೂ ವಿದೇಶಿ ಹೂಡಿಕೆದಾರರು ಹೂಡಿಕೆಯನ್ನು ಮುಂದುವರಿಸಬಹುದು ಎಂದು ಶ್ರೀವಾಸ್ತವ ಹೇಳಿದ್ದಾರೆ.
  • ‘ಕಾರ್ಪೊರೇಟ್‌ ಕಂಪನಿಗಳ ವರಮಾನವು ಸುಧಾರಿಸಿದ ಸ್ಪಷ್ಟ ಲಕ್ಷಣಗಳು ಇವೆ. ಬೇಡಿಕೆಯಲ್ಲಿ ಉತ್ತಮ ಮಟ್ಟವು ಮುಂದುವರಿದರೆ ವರಮಾನವು ಇನ್ನಷ್ಟು ಹೆಚ್ಚಾಗುತ್ತದೆ. ಆಗ ಷೇರುಗಳ ಮೌಲ್ಯವು ಇನ್ನಷ್ಟು ಸಮಾಧಾನಕರವಾಗುತ್ತದೆ. ಹಾಗೆ ಆದಾಗ ವಿದೇಶಿ ಹೂಡಿಕೆದಾರರು ಹೂಡಿಕೆ ಮುಂದುವರಿಸುವ ಸಾಧ್ಯತೆ ಇದೆ’ ಎಂದು ಜಿಯೋಜಿತ್‌ ಇನ್ವೆಸ್ಟ್‌ ಮೆಂಟ್ಸ್‌ ಸಂಸ್ಥೆಯ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್ ಹೇಳಿದ್ದಾರೆ.

ಪ್ರಚಲಿತ ವಿದ್ಯಮಾನಗಳು: 1ನೇ ನವೆಂಬರ್ 2025

  • ಅರಣ್ಯ: ಭೂ ಮಂಜೂರಾತಿಗೆ ಭಂಗ

ಸಂದರ್ಭ: ಅಧಿಸೂಚಿತ ಅರಣ್ಯ ಪ್ರದೇಶಗಳಲ್ಲಿ 1980ರ ನಂತರ ಖಾಸಗಿ ವ್ಯಕ್ತಿಗಳು, ಖಾಸಗಿ ಸಂಸ್ಥೆಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಮಂಜೂರು ಮಾಡಿದ ಎಲ್ಲ ಭೂಮಿಯೂ ಕಾನೂನುಬಾಹಿರ ವಾಗಿದ್ದು, ಇಂತಹ ಪ್ರಕರಣಗಳ ಪಟ್ಟಿಯನ್ನು ಸಿದ್ಧಪಡಿಸಿ, ವರದಿ ಸಲ್ಲಿಸುವಂತೆ ಜಿಲ್ಲಾ ಮಟ್ಟದ ವಿಶೇಷ ತನಿಖಾ ತಂಡಗಳಿಗೆ (ಎಸ್‌ಐಟಿ) ಸರ್ಕಾರ ಸೂಚಿಸಿದೆ.

  • ಜಿಲ್ಲಾ ಮಟ್ಟದ ಎಸ್‌ಐಟಿಗಳು ನಿರ್ವಹಿಸಬೇಕಾದ ಕಾರ್ಯವಿಧಾನ ಕುರಿತು ಅರಣ್ಯ ಇಲಾಖೆಯು ಹೊರಡಿಸಿದ ಸುತ್ತೋಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಅಧಿಸೂಚಿತ ಅರಣ್ಯ ಪ್ರದೇಶಗಳಲ್ಲಿ ಹಂಚಿಕೆ, ಮಂಜೂರು ಮಾಡಿದ ಪ್ರದೇಶಗಳ ಪಟ್ಟಿಯನ್ನು ರಾಜ್ಯ ಮಟ್ಟದ ವಿಶೇಷ ತನಿಖಾ ತಂಡಕ್ಕೆ ಸಲ್ಲಿಸುವಂತೆ ಹೇಳಿದೆ.
  • ಅರಣ್ಯ ಸಂರಕ್ಷಣಾ ಕಾಯಿದೆ–1980ರ ಪೂರ್ವದಲ್ಲಿ ಕಂದಾಯ ಇಲಾಖೆಯು ಅಧಿಸೂಚಿತ ಅರಣ್ಯ ಪ್ರದೇಶಗಳಲ್ಲಿ ಮಾಡಿರುವ ಮಂಜೂರಾತಿಯನ್ನು ಸಕ್ಷಮ ಪ್ರಾಧಿಕಾರದಿಂದ ಮಾಡಲಾಗಿದೆಯೇ? ಒಂದು ವೇಳೆ ಸಕ್ಷಮ ಪ್ರಾಧಿಕಾರದಿಂದ ಮಂಜೂರು ಮಾಡಿದ್ದರೆ ಅಂತಹ ಅಧಿಕಾರವನ್ನು ಯಾವ ಕಾಯ್ದೆ, ನಿಯಮ, ಆದೇಶಗಳ ಮೂಲಕ ನೀಡಲಾಗಿದೆ ಎನ್ನುವ ಕುರಿತು ದಾಖಲೆಗಳನ್ನು ಸಂಗ್ರಹಿಸಬೇಕು. ಕಂದಾಯ ಇಲಾಖೆಯ ಸಕ್ಷಮ ಪ್ರಾಧಿಕಾರ ಹೊರತುಪಡಿಸಿ, ಇತರೆ ಪ್ರಾಧಿಕಾರಗಳು ಮಂಜೂರು ಮಾಡಿದ ವಿವರಗಳನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.
  • 1996ರ ನಂತರ ಸರ್ಕಾರಿ ದಾಖಲೆಗಳಲ್ಲಿ ಅರಣ್ಯ ಎಂದು ನಮೂದಿಸಿ ರುವ ಪ್ರದೇಶಗಳಲ್ಲಿ ಕಂದಾಯ ಇಲಾಖೆ ಭೂ ಮಂಜೂರಾತಿ ಮಾಡಿದ್ದರೆ ಅಂತಹ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು. ಸೂಕ್ತ ಶಿಫಾರಸು ಗಳೊಂದಿಗೆ ರಾಜ್ಯಮಟ್ಟದ ವಿಶೇಷ ತನಿಖಾ ತಂಡಕ್ಕೆ ಸಲ್ಲಿಸಬೇಕು ಎಂದು ವಿವರಿಸಲಾಗಿದೆ.

ದಂಡ ವಸೂಲಿಗೆ ಮಾರ್ಗಸೂಚಿ ದರ

  • ಕಾನೂನುಬಾಹಿರವಾಗಿ ಮಂಜೂರು ಮಾಡಿದ ಪ್ರತಿ ಪ್ರಕರಣ ಪಟ್ಟಿ ಮಾಡಿ, ಅಂತಹ ಪ್ರದೇಶಗಳನ್ನು ಮರಳಿ ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಒಂದು ವೇಳೆ ಮಂಜೂರಾತಿ ನೀಡಿದ ಅರಣ್ಯ ಪ್ರದೇಶವನ್ನು ಮರಳಿ ವಶಕ್ಕೆ ಪಡೆಯುವುದು ಸಾರ್ವಜನಿಕ ಹಿತದೃಷ್ಟಿಯಿಂದ ಪೂರಕವಲ್ಲದಿದ್ದರೆ, ಸರ್ಕಾರದ ಮಾರ್ಗಸೂಚಿ ದರಗಳ ಅನುಸಾರ ಭೂಮಾಲೀಕರಿಂದ ದಂಡ ವಸೂಲಿ ಮಾಡುವುದೂ ಸೇರಿದಂತೆ ಅಳಡಿಸಿಕೊಳ್ಳ ಬಹುದಾದ ವಿಧಾನದ ಕುರಿತು ವರದಿಯಲ್ಲಿ ಉಲ್ಲೇಖಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.
  • ಕರ್ನಾಟಕ ರಾಜ್ಯ ದೂರ ಸಂವೇದಿ ಆನ್ವಯಿಕ ಕೇಂದ್ರವು ಅರಣ್ಯ ಭೂಮಿಗಳ ಕ್ರೋಡೀಕೃತ ದಾಖಲೆಗಳನ್ನು ತಯಾರಿಸಲು ಅಭಿವೃದ್ಧಿಪಡಿಸಲಾದ ಪೋರ್ಟಲ್‌ ಅನ್ನು ತಾಲ್ಲೂಕು, ಹೋಬಳಿ, ಗ್ರಾಮ, ಸರ್ವೆ ಸಂಖ್ಯೆ, ವಿಸ್ತೀರ್ಣವನ್ನು ಗುರುತಿಸಲು ಉಪಯೋಗಿಸಿಕೊಳ್ಳಲು ಹೇಳಿದೆ.
  • 6.13 ಕೋಟಿ ಜನರ ಜಾತಿವಾರು ಸಮೀಕ್ಷೆ ಪೂರ್ಣ

ಸಂದರ್ಭ: ಸಾಮಾಜಿಕಶೈಕ್ಷಣಿಕ ಸಮೀಕ್ಷೆ ಭಾಗವಾಗಿ ಈವರೆಗೆ 6.13 ಕೋಟಿ ಜನರ ವಿವರಗಳನ್ನು ಕಲೆ ಹಾಕಲಾಗಿದ್ದು, 4.22 ಲಕ್ಷದಷ್ಟು ಕುಟುಂಬದವರು ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಹೇಳಿದೆ.

  • ಆಯೋಗವು ನಡಸಿದ್ದ ಸಮೀಕ್ಷೆಯ ಮನೆ–ಮನೆ ಭೇಟಿ ಹಂತವು (ಅಕ್ಟೋಬರ್ 31ಕ್ಕೆ) ಕೊನೆಗೊಂಡಿದೆ.
  • ರಾಜ್ಯದಾದ್ಯಂತ ಒಟ್ಟು 6.85 ಕೋಟಿ ಜನರನ್ನು ಸಮೀಕ್ಷೆಗೆ ಒಳಪಡಿಸುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಅದರಲ್ಲಿ 6.13 ಕೋಟಿ ಜನರನ್ನು ಸಮೀಕ್ಷೆಗೆ ಒಳಪಡಿಸಿದ್ದು, 72 ಲಕ್ಷ ಜನರು ಸಮೀಕ್ಷೆಯಲ್ಲಿ ಭಾಗಿಯಾಗಿಲ್ಲ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
  • ರಾಜ್ಯದಾದ್ಯಂತ ನಡೆದ ಸಮೀಕ್ಷೆಯ ವೇಳೆ 34.49 ಲಕ್ಷ ಮನೆಗಳಿಗೆ ಬೀಗ ಹಾಕಲಾಗಿತ್ತು ಇಲ್ಲವೇ ಮನೆಗಳು ಖಾಲಿ ಇದ್ದವು. ಈ ಪೈಕಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲೇ 29 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಖಾಲಿ/ಬೀಗ ಹಾಕಲಾದ/ಸಮೀಕ್ಷೆ ಮಾಡಲಾಗದ ಮನೆಗಳು ಎಂದು ಗುರುತಿಸಲಾಗಿದೆ. ರಾಜ್ಯದಾದ್ಯಂತ ಒಟ್ಟು
  • ಸಮೀಕ್ಷೆಯ ಮನೆ–ಮನೆ ಭೇಟಿ ಹಂತವು ಕೊನೆಗೊಂಡಿದ್ದರೂ, ಆನ್‌ಲೈನ್‌ನಲ್ಲಿ ಮಾಹಿತಿ ನಮೂದಿಸಲು ನವೆಂಬರ್ 10ರವರೆಗೆ ಅವಕಾಶವಿದೆ.
  • ದ್ರಾಕ್ಷಿ: ಕೈಸೇರದ ವಿಮೆ ಪರಿಹಾರ

ಸಂದರ್ಭ: ಫಸಲ್ಬಿಮಾ ಯೋಜನೆ: 31,470 ರೈತರಿಂದ ₹39 ಕೋಟಿ ಪ್ರೀಮಿಯಂ ಪಾವತಿ: ದ್ರಾಕ್ಷಿ ಬೆಳೆಗಾರರ ಬದುಕಿನೊಂದಿಗೆ ವಿಮೆ ಕಂಪನಿಯವರು ಚೆಲ್ಲಾಟವಾಡಬಾರದು. ಪರಿಹಾರ ಪಾವತಿ ವಿಳಂಬ ಮಾಡಬಾರದು ಅಭಯಕುಮಾರ್ನಾಂದ್ರೇಕರ, ಅಧ್ಯಕ್ಷ, ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ.

  • ಬೆಳೆ ವಿಮೆ (ಫಸಲ್‌ ಬಿಮಾ) ಯೋಜನೆಯಡಿ 2024ರ ಏಪ್ರಿಲ್‌ನಿಂದ 2025ರ ಮಾರ್ಚ್‌ ಅವಧಿಯಲ್ಲಿ ದ್ರಾಕ್ಷಿ ಬೆಳೆಗೆ ವಿಮೆ ಮಾಡಿಸಿದ್ದ ರಾಜ್ಯದ 31,470 ಬೆಳೆಗಾರರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ.
  • ದ್ರಾಕ್ಷಿಯನ್ನು ವಿಜಯಪುರ, ಬೆಳಗಾವಿ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ಕೊಪ್ಪಳ, ಯಾದಗಿರಿ, ಬೀದರ್‌, ಕೋಲಾರ ಜಿಲ್ಲೆಗಳಲ್ಲಿ ಹವಾಮಾನ ಆಧಾರಿತ ಬೆಳೆಯಾಗಿ ಬೆಳೆಯಲಾಗುತ್ತದೆರಾಜ್ಯದಲ್ಲಿ 42 ಸಾವಿರ ಹೆಕ್ಟೇರ್ಗಿಂತ ಹೆಚ್ಚಿನ ಪ್ರದೇಶದಲ್ಲಿ ಬೆಳೆ ಇದೆ. ಮಳೆ, ಪ್ರತಿಕೂಲ ಹವಾಮಾನದಿಂದ ಕಳೆದ ವರ್ಷ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು.
  • ಬೆಳೆ ವಿಮೆ ಯೋಜನೆಯಡಿ  31,470 ರೈತರು  ಹೆಕ್ಟೇರ್‌ಗೆ ₹14 ಸಾವಿರ ಕಂತು (ಪ್ರೀಮಿಯಂ) ಪಾವತಿಸಿದ್ದರು. 27,953 ಹೆಕ್ಟೇರ್‌ ವಿಮೆ ಯೋಜನೆಗೆ ಒಳಪಟ್ಟಿತ್ತು. ₹39.13 ಕೋಟಿ ವಿಮೆ ಮೊತ್ತ ಪಾವತಿಯಾಗಿತ್ತು. 
  • ಬೆಳೆ ಹಾನಿಯಾದರೆ ಪ್ರತಿ ಹೆಕ್ಟೇರ್‌ಗೆ ₹2.80 ಲಕ್ಷ ಪರಿಹಾರ ಬರಬೇಕಿತ್ತು. ಆದರೆ, ವಿಮೆ ಅವಧಿ ಮುಗಿದರೂ ಹಣ ಕೈಸೇರಿಲ್ಲ. ಪ್ರಕ್ರಿಯೆ ವಿಳಂಬವಾಗಿದ್ದರಿಂದ ರೈತರು ಇಕ್ಕಟ್ಟಿಗೆ ಸಿಲುಕಿದ್ದಾರೆ.
  • ‘ನಾನು ನಾಲ್ಕು ಎಕರೆಯಲ್ಲಿ ದ್ರಾಕ್ಷಿ ಬೆಳೆದಿದ್ದು, ವಿಮೆಯನ್ನೂ ಮಾಡಿಸಿದ್ದೆ. ಹವಾಮಾನ ವೈಪರೀತ್ಯದಿಂದ ಬೆಳೆ ಕೈಕೊಟ್ಟಿತು. ಈಗ ವಿಮೆ ಪರಿಹಾರವೂ ಸಿಗದೆ ತೊಂದೆರೆಯಾಗಿದೆ’ ಎಂದು ಅಥಣಿ ತಾಲ್ಲೂಕಿನ ತೆಲಸಂಗದ ರೈತ ರವಿ.
  • ‘ಅಕ್ರಮವಾಗಿ ವಿಮೆ ಪರಿಹಾರ ಪಡೆಯಲು ಕೆಲ ರೈತರು ಯತ್ನಿಸಿದ್ದಾರೆ. ದ್ರಾಕ್ಷಿ ಬೆಳೆಯದಿದ್ದರೂ ವಿಮೆ ಮಾಡಿಸಿದ್ದಾರೆ ಎಂಬ ಆರೋಪವಿದೆ. ಪರಿಶೀಲನೆ ನಂತರ ಪರಿಹಾರ ಕೊಡುತ್ತೇವೆ ಎಂದು ವಿಮೆ ಕಂಪನಿ ಅಧಿಕಾರಿಗಳು ಹೇಳುತ್ತಾರೆ’ ಎಂದು ಹೇಳಿದರು.
  • ವಿತ್ತೀಯ ಕೊರತೆ ₹5.73 ಲಕ್ಷ ಕೋಟಿ

ಸಂದರ್ಭ: ಕೇಂದ್ರದಿಂದ ರಾಜ್ಯಗಳಿಗೆ ₹6.31 ಲಕ್ಷ ಕೋಟಿ ತೆರಿಗೆ ಪಾಲು ವರ್ಗಾವಣೆ: ಸಿಜಿಎ ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್ಸೆಪ್ಟೆಂಬರ್ ಅವಧಿಯಲ್ಲಿ ಕೇಂದ್ರ ಸರ್ಕಾರದ ವರಮಾನ ಮತ್ತು ವೆಚ್ಚದ ನಡುವಿನ ಅಂತರವಾದ ವಿತ್ತೀಯ ಕೊರತೆಯು ಇಡೀ ವರ್ಷದ ಗುರಿಯ ಶೇ 36.5ರಷ್ಟಾಗಿದೆ.

  • ಹಣಕಾಸಿನ ಮೌಲ್ಯದ ಲೆಕ್ಕದಲ್ಲಿ ಇದು ₹5.73 ಲಕ್ಷ ಕೋಟಿಯಾಗಿದೆ ಎಂದು ಲೆಕ್ಕಪತ್ರಗಳ ಮಹಾನಿಯಂತ್ರಕರ (ಸಿಜಿಎ) ವರದಿ ಶುಕ್ರವಾರ ತಿಳಿಸಿದೆ.
  • ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ವಿತ್ತೀಯ ಕೊರತೆಯು ₹4.7 ಲಕ್ಷ ಕೋಟಿಯಷ್ಟು (ಶೇ 29) ಇತ್ತು. 2025–26ರಲ್ಲಿ  ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ 4.4ಕ್ಕೆ (ಹಣಕಾಸಿನ ಮೌಲ್ಯದ ಲೆಕ್ಕದಲ್ಲಿ ₹15.69 ಲಕ್ಷ ಕೋಟಿ) ತಗ್ಗಿಸಲು ಸರ್ಕಾರ ಬಜೆಟ್‌ನಲ್ಲಿ ಗುರಿ ನಿಗದಿಪಡಿಸಲಾಗಿದೆ.
  • ಏಪ್ರಿಲ್‌ನಿಂದ ಸೆಪ್ಟೆಂಬರ್‌ ವರೆಗೆ ಸರ್ಕಾರವು ₹17.3 ಲಕ್ಷ ಕೋಟಿ (ಶೇ 49.5) ವರಮಾನ ಸ್ವೀಕರಿಸಿದೆ. ಒಟ್ಟು ವೆಚ್ಚವು ₹23 ಲಕ್ಷ ಕೋಟಿ ಆಗಿದೆ. ಇದು ಬಜೆಟ್‌ ಅಂದಾಜಿನ ಶೇ 45ರಷ್ಟಾಗಿದೆ.
  • ಕೇಂದ್ರ ಸರ್ಕಾರ ಸ್ವೀಕರಿಸಿದ ಒಟ್ಟು ಮೊತ್ತದ ಪೈಕಿ ₹12.29 ಲಕ್ಷ ಕೋಟಿ ತೆರಿಗೆ ವರಮಾನದಿಂದ ಸಂಗ್ರಹಿಸಿದೆ. ₹4.66 ಲಕ್ಷ ಕೋಟಿ ತೆರಿಗೆಯೇತರ ವರಮಾನ ಮತ್ತು ಇತರೆ ಮೂಲಗಳಿಂದ ₹34,770 ಕೋಟಿ ಸಂಗ್ರಹಿಸಿದೆ.
  • ಕೇಂದ್ರ ಸರ್ಕಾರವು, ರಾಜ್ಯ ಸರ್ಕಾರಗಳಿಗೆ ₹6.31 ಲಕ್ಷ ಕೋಟಿಯನ್ನು ತೆರಿಗೆ ಪಾಲಾಗಿ ವರ್ಗಾಯಿಸಿದೆ. ಇದು ಕಳೆದ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ₹86,948 ಕೋಟಿಯಷ್ಟು ಅಧಿಕವಾಗಿದೆ ಎಂದು ತಿಳಿಸಿದೆ.
  • ವಿದೇಶಿ ವಿನಿಮಯ ಸಂಗ್ರಹ ಇಳಿಕೆ

ಸಂದರ್ಭ: ಅಕ್ಟೋಬರ್‌ 24ಕ್ಕೆ ಅಂತ್ಯಗೊಂಡ ವಾರದಲ್ಲಿ ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹದ ಪ್ರಮಾಣವು ₹61,434 ಕೋಟಿಯಷ್ಟು ಕಡಿಮೆ ಆಗಿದೆ.

  • ಪ್ರಸ್ತುತ ಒಟ್ಟು ಮೀಸಲು ಸಂಗ್ರಹ ₹61.69 ಲಕ್ಷ ಕೋಟಿಯಷ್ಟಾಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ತಿಳಿಸಿದೆ.
  • ವಿದೇಶಿ ಕರೆನ್ಸಿಗಳ ಸಂಪತ್ತಿನ ಮೌಲ್ಯ ₹34,266 ಕೋಟಿಯಷ್ಟು ಕಡಿಮೆಯಾಗಿದ್ದು, ₹50.26 ಲಕ್ಷ ಕೋಟಿಯಾಗಿದೆ. ಚಿನ್ನದ ಮೀಸಲು ಸಂಗ್ರಹದಲ್ಲಿ ₹26,706 ಕೋಟಿ ಇಳಿಕೆಯಾಗಿದ್ದು, ₹9.36 ಲಕ್ಷ ಕೋಟಿಯಾಗಿದೆ. ಸ್ಪೆಷಲ್ ಡ್ರಾಯಿಂಗ್ ರೈಟ್ಸ್‌ (ಎಸ್‌ಡಿಆರ್) ₹1.65 ಲಕ್ಷ ಕೋಟಿ ಆಗಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಭಾರತದ ಪಾಲು ₹40,887 ಕೋಟಿಯಾಗಿದೆ ಎಂದು ತಿಳಿಸಿದೆ.

ಪ್ರಚಲಿತ ವಿದ್ಯಮಾನಗಳು: 30 & 31ನೇ ಅಕ್ಟೋಬರ್ 2025

  • ಭಾರತದ ಜೊತೆ ವ್ಯಾಪಾರ ಒಪ್ಪಂದ

ಸಂದರ್ಭ:ಅಮೆರಿಕವು ಭಾರತದ ಜೊತೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ಟ್ರಂಪ್ ಹೇಳಿದ್ದಾರೆ. ಒಪ್ಪಂದದ ವಿಚಾರವಾಗಿ ಅಮೆರಿಕ ಮತ್ತು ಭಾರತದ ಅಧಿಕಾರಿಗಳ ನಡುವೆ ಮಾತುಕತೆ ನಡೆಯುತ್ತಿದೆ.

  • ಏಷ್ಯಾ ಪೆಸಿಫಿಕ್‌ ಆರ್ಥಿಕ ಸಹಕಾರ – ಸಿಇಒ ಶೃಂಗದಲ್ಲಿ ಮಾತನಾಡಿದ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ತಮಗೆ ‘ಅಪಾರ ಗೌರವ ಹಾಗೂ ಪ್ರೀತಿ’ ಇರುವುದಾಗಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ಜೊತೆಗಿನ ತಮ್ಮ ಸ್ನೇಹ ಬಹಳ ದೊಡ್ಡದು ಎಂದೂ ಟ್ರಂಪ್ ಹೇಳಿಕೊಂಡಿದ್ದಾರೆ.ಆದರೆ ವಾಣಿಜ್ಯ ಒಪ್ಪಂದದ ಕುರಿತಾಗಿ ಅವರು ಹೆಚ್ಚಿನ ಮಾಹಿತಿ ನೀಡಲಿಲ್ಲ.
  • ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರನ್ನು ಕ್ವಾಲಾಲಂಪುರದಲ್ಲಿ ಭೇಟಿಯಾಗಿದ್ದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು, ವ್ಯಾಪಾರ ಒಪ್ಪಂದದ ಕುರಿತಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
  • ಆದರೆ, ರಷ್ಯಾದಿಂದ ಕಚ್ಚಾ ತೈಲ ಖರೀದಿಸುತ್ತಿರುವುದಕ್ಕಾಗಿ ಭಾರತದ ಮೇಲೆ ಹೆಚ್ಚುವರಿಯಾಗಿ ವಿಧಿಸಿರುವ ಶೇ 25ರಷ್ಟು ತೆರಿಗೆಯನ್ನು ರದ್ದುಪಡಿಸುವ ಬಗ್ಗೆ ಅಮೆರಿಕದಿಂದ ಭರವಸೆ ಸಿಕ್ಕಿರುವ ಸೂಚನೆ ಇಲ್ಲ. ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದವು ಅಂತಿಮ ಹಂತಕ್ಕೆ ಬಹಳ ಹತ್ತಿರದಲ್ಲಿದೆ ಎಂದು ಭಾರತದ ಅಧಿಕಾರಿಯೊಬ್ಬರು ಕಳೆದ ವಾರ ಹೇಳಿದ್ದಾರೆ.
  • ಶಿರಸಿಯಲ್ಲಿ ಹಿಮಾಲಯದ ಯಾಕ್

ಸಂದರ್ಭ: ಹಿಮಾಲಯದಂಥ ತಂಪಾದ, ಎತ್ತರದ ಪರ್ವತ ಪ್ರದೇಶಗಳಲ್ಲಿ ಕಾಣಸಿಗುವ ಚಮರಿಮೃಗಗಳನ್ನು (ಯಾಕ್) ಶಿರಸಿಯ ಅನಾಥ ಪ್ರಾಣಿಗಳ ಆರೈಕೆ ಕೇಂದ್ರವಾದ ಪೆಟ್ ಪ್ಲಾನೆಟ್ಕೇಂದ್ರದಲ್ಲಿ ಪೋಷಿಸಲಾಗುತ್ತಿದೆ.

  • ‘ಫೆಬ್ರುವರಿಯಲ್ಲಿ ಹಿಮಾಚಲ ಪ್ರದೇಶಕ್ಕೆ ತೆರಳಿದ್ದ ವೇಳೆ ಅಲ್ಲಿನ ಜನರಿಗೆ ಪೆಟ್ ಪ್ಲಾನೆಟ್ ಬಗ್ಗೆ ತಿಳಿಸಿದ್ದೆ. ಅಲ್ಲಿನ ನಿವಾಸಿಗಳು ಹಣದ ಬದಲು ಚಮರಿಮೃಗಗಳನ್ನು ಕೊಡುಗೆ ನೀಡು ತ್ತೇವೆ. ಅವುಗಳನ್ನು ನೋಡಲು ಪ್ರವಾಸಿಗರಿಗೂ ಖುಷಿಯಾಗುತ್ತದೆ ಎಂದು ಮೂರು ಚಮರಿಮೃಗಗಳನ್ನು ವಾಹನದಲ್ಲಿ ಕಳುಹಿಸಿದ್ದು, ಎಲ್ಲವೂ ಆರೋಗ್ಯವಾಗಿವೆ. ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿವೆ’ ಎಂದು ಪ್ಲಾನೆಟ್‌ನ ಪ್ರಮುಖ ರಾಜೇಂದ್ರ ಶಿರ್ಸಿಕರ ಮಾಹಿತಿ ಹಂಚಿಕೊಂಡರು.
  • ‘14 ವರ್ಷ ಮತ್ತು 10 ತಿಂಗಳ ಹೆಣ್ಣು ಮತ್ತು 2 ವರ್ಷದ ಒಂದು ಗಂಡು ಚಮರಿ ಮೃಗವಿದೆ. ಹಿಮಾಚಲದ ವಾತಾ ವರಣದ ಅನುಭವಕ್ಕಾಗಿ ಶೆಡ್ ಫ್ಯಾನ್ ಅಳವಡಿಸ ಲಾಗಿದೆ. ಪಶ್ಚಿಮಘಟ್ಟದ ವಾತಾವರಣಕ್ಕೆ ಬಹುತೇಕ ಎಲ್ಲ ಪ್ರಬೇಧಗಳ ಪ್ರಾಣಿಗಳು ಹೊಂದಿಕೊಳ್ಳುತ್ತವೆ’ ಎಂದರು.
  • ವಿಜಯಪುರದಲ್ಲಿ ಲಘು ಭೂಕಂಪನ

ಸಂದರ್ಭ: ನಗರದಲ್ಲಿ28th Oct 11.41, ರಾತ್ರಿ 12.38 ಮತ್ತು 29th Oct ಬೆಳಿಗ್ಗೆ 5.30ಕ್ಕೆ ಮೂರು ಬಾರಿ ಸರಣಿ ಲಘು ಭೂಕಂಪನದ ಅನುಭವವಾಗಿದೆ.

  • ‘ಗುಡುಗಿದ ಶಬ್ದ ಕೇಳಿಬಂದಿದೆ. ಜೊತೆಗೆ ಭೂಮಿ ಕಂಪಿಸಿದ್ದು, ಭಯದಿಂದ ಜನರು ಮನೆಯಿಂದ ಹೊರಗೆ ಓಡಿಬಂದರು. ಆತಂಕದಲ್ಲೇ ರಾತ್ರಿ ಕಳೆದರು. ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ದೃಶ್ಯ ಸೆರೆಯಾಗಿದೆ.
  • ‘ರಿಕ್ಟರ್‌ ಮಾಪಕದಲ್ಲಿ ಭೂಕಂಪನದ ತೀವ್ರತೆ ದಾಖಲಾಗಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ವಿಜ್ಞಾನಿಗಳು ತಿಳಿಸಿದ್ದಾರೆ’ ಎಂದು ಜಿಲ್ಲಾಡಳಿತ ತಿಳಿಸಿದೆ.
  • ಕ್ವಾಂಟಮ್ಸಿಟಿ: ಹೂಡಿಕೆಗೆ ಸ್ವಿಸ್ಕಂಪನಿಗಳ ಆಸಕ್ತಿ

ಸಂದರ್ಭ: ಬೆಂಗಳೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಕ್ವಾಂಟಮ್ಸಿಟಿಯಲ್ಲಿ ಸಹಭಾಗಿತ್ವಕ್ಕೆ ಸ್ವಿಡ್ಜರ್ಲೆಂಡ್ ಕಂಪನಿಗಳೂ ಸೇರಿ ಜಾಗತಿಕ ಮಟ್ಟದ ಹಲವು ಕಂಪನಿಗಳು ಆಸಕ್ತಿ ತೋರಿವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ಹೇಳಿದರು.

  • ಸ್ವಿಡ್ಜರ್ಲೆಂಡ್‌ನಲ್ಲಿ ಈಚೆಗೆ ನಡೆದ ಸ್ವಿಸ್‌ನೆಕ್ಸ್‌ ಕ್ವಾಂಟಮ್‌ ಸಮಾವೇಶದಲ್ಲಿ ಭಾಗಿಯಾಗಿದ್ದರ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ‘ಕ್ವಾಂಟಮ್‌ ಕ್ಷೇತ್ರದಲ್ಲಿ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ಈ ಕ್ಷೇತ್ರದ ಅಭಿವೃದ್ಧಿಗೆ ಕರ್ನಾಟಕದಲ್ಲಿ ಇರುವ ಅವಕಾಶಗಳ ಬಗ್ಗೆ ಸಮಾವೇಶದಲ್ಲಿ ಭಾಗಿಯಾಗಿದ್ದ ಕಂಪನಿಗಳಿಗೆ ವಿವರಿಸಲಾಗಿದೆ’ ಎಂದು ಹೇಳಿದರು.
  • ‘ದೇಶದ ಮೊದಲ ಕ್ವಾಂಟಮ್‌ ಸಮಾವೇಶ ಬೆಂಗಳೂರಿನಲ್ಲಿ ನಡೆದಿತ್ತು ಮತ್ತು ಅದರಲ್ಲಿ ಘೋಷಿಸಿದ್ದಂತೆ ಕ್ವಾಂಟಮ್‌ ಸಿಟಿ ಸ್ಥಾಪನೆಗೆ ರಾಜ್ಯ ಸರ್ಕಾರವು ಈಗಾಗಲೇ ಜಮೀನು ಮಂಜೂರು ಮಾಡಿದೆ. ಜತೆಗೆ ಕ್ವಾಂಟಮ್‌ ತಂತ್ರಜ್ಞಾನದಲ್ಲಿ ಪರಿಣಿತರನ್ನು ರೂಪಿಸುವ ಉದ್ದೇಶದಿಂದ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಕೋರ್ಸ್‌ಗಳನ್ನು ಆರಂಭಿಸಲಾಗಿದೆ. ಈ ಅಂಶಗಳು ಕ್ವಾಂಟಮ್‌ ಕ್ಷೇತ್ರದ ಜಾಗತಿಕ ಮಟ್ಟದ ಕಂಪನಿಗಳನ್ನು ಆಕರ್ಷಿಸಿವೆ’ ಎಂದರು.
  • ‘ಈ ಪ್ರವಾಸದ ವೇಳೆ ಕ್ವಾಂಟಮ್‌ ಬೇಸೆಲ್‌, ಸಿಇಆರ್‌ಎನ್‌, ಇಟಿಎಚ್‌ ಝ್ಯೂರಿಚ್‌ ಆ್ಯಂಡ್‌ ಝ್ಯೂರಿಚ್‌ ಇನ್‌ಸ್ಟ್ರುಮೆಂಟ್ಸ್‌ ಸಂಸ್ಥೆಗಳಿಗೆ ಭೇಟಿ ನೀಡಲಾಗಿತ್ತು. ಬೆಂಗಳೂರಿನ ಕ್ವಾಂಟಮ್‌ ಸಿಟಿಯಲ್ಲಿ ಹೂಡಿಕೆ ಮಾಡುವಂತೆ ಈ ಕಂಪನಿಗಳಿಗೆ ಆಹ್ವಾನ ನೀಡಲಾಗಿದೆ. ಕಂಪನಿಗಳ ಪ್ರತಿನಿಧಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
  • ಜಿಡಿಪಿ ಪ್ರಗತಿ ಶೇ 7ರಷ್ಟು ನಿರೀಕ್ಷೆ

ಸಂದರ್ಭ: ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 7ಕ್ಕೆ ತಲುಪುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ (ಸಿಇಎ) ವಿ. ಅನಂತ ನಾಗೇಶ್ವರನ್ಹೇಳಿದ್ದಾರೆ.

  • ಮೂರು ಜಾಗತಿಕ ರೇಟಿಂಗ್‌ ಸಂಸ್ಥೆಗಳು ಇತ್ತೀಚೆಗೆ ದೇಶದ ರೇಟಿಂಗ್‌ ಹೆಚ್ಚಿಸಿವೆ. ದೇಶವು ಇದೇ ಪಥದಲ್ಲಿ ಮುಂದುವರಿದರೆ ಶೀಘ್ರ ‘ಎ’ ರೇಟಿಂಗ್‌ ವರ್ಗಕ್ಕೆ ಸೇರ್ಪಡೆ ಆಗಬಹುದು ಎಂದು ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
  • ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತೆಗೆದುಕೊಂಡ ಕ್ರಮಗಳು ದೇಶದ ಆರ್ಥಿಕತೆಯನ್ನು ‘ಆರಾಮದಾಯಕ ಸ್ಥಾನದಲ್ಲಿ’ ಇರಿಸುತ್ತವೆ. ಆದಾಯ ತೆರಿಗೆ ವಿನಾಯಿತಿ ಮತ್ತು ಜಿಎಸ್‌ಟಿ ಇಳಿಕೆಯಂತಹ ಆರ್ಥಿಕ ಕ್ರಮಗಳು ದೇಶದ ಆರ್ಥಿಕ ಪ್ರಗತಿಯನ್ನು ಹೆಚ್ಚಿಸಲಿವೆ ಎಂದು ಹೇಳಿದ್ದಾರೆ.
  • ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 6.3ಕ್ಕೆ ಇಳಿಕೆ ಆಗಬಹುದು ಎಂದು  ಫೆಬ್ರುವರಿಯಲ್ಲಿ ಅನಂತ ನಾಗೇಶ್ವರನ್‌ ಹೇಳಿದ್ದರು. ಅಮೆರಿಕದ ಸುಂಕದಿಂದ ಜಿಡಿಪಿ ಶೇ 6ಕ್ಕೆ ಇಳಿಯುವ ನಿರೀಕ್ಷೆ ಇದೆ ಎಂದು ಹೇಳಿದ್ದರು.
  • ಇಂದಿನಿಂದ ಸ್ಟಾರ್ಲಿಂಕ್ಪರೀಕ್ಷಾರ್ಥ ಪ್ರಯೋಗ

ಸಂದರ್ಭ: ಉದ್ಯಮಿ ಇಲಾನ್ಮಸ್ಕ್ಒಡೆತನದ ಸ್ಟಾರ್ಲಿಂಕ್‌, ದೇಶದಲ್ಲಿ ಉಪಗ್ರಹ ಆಧಾರಿತ ಬ್ರಾಡ್ಬ್ಯಾಂಡ್ಸೇವೆ ಆರಂಭಿಸುವುದಕ್ಕೆ ಸಂಬಂಧಿಸಿದ ಪರೀಕ್ಷಾರ್ಥ ಪ್ರಯೋಗವನ್ನು ಅಕ್ಟೋಬರ್‌ 30 ಮತ್ತು 31ರಂದು ಮುಂಬೈನಲ್ಲಿ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

  • ಕಾನೂನು ಜಾರಿ ಪ್ರಾಧಿಕಾರಗಳ ಸಮಕ್ಷಮದಲ್ಲಿ ಈ ಪರೀಕ್ಷಾರ್ಥ ಪ್ರಯೋಗ ನಡೆಸಲಿದೆ. ಇದು ಸ್ಟಾರ್‌ಲಿಂಕ್‌ಗೆ ಹಂಚಿಕೆ ಮಾಡಿರುವ ತಾತ್ಕಾಲಿಕ ತರಂಗಾತರವನ್ನು ಆಧರಿಸಿದೆ ಎಂದು ತಿಳಿಸಿವೆ.
  • ಸ್ಟಾರ್‌ಲಿಂಕ್‌ ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್‌ನೆಟ್‌ ಸೇವೆ ಆರಂಭಿಸಲು  ಈ ಪರೀಕ್ಷಾರ್ಥ ಪ್ರಯೋಗ ಕಡ್ಡಾಯವಾಗಿದೆ. ಸ್ಟಾರ್‌ಲಿಂಕ್ ತನ್ನ ವಾಣಿಜ್ಯ ಸೇವೆ ಆರಂಭಿಸುವುದಕ್ಕೂ ಮುನ್ನ ಅನುಮತಿ ಪಡೆಯವುದು ಅತ್ಯವಶ್ಯಕವಾಗಿದೆ.
  • ಸಕ್ಕರೆ ರಫ್ತಿಗೆ ಅನುಮತಿ ಸಾಧ್ಯತೆ

ಸಂದರ್ಭ: ದಾಸ್ತಾನು ಹೆಚ್ಚಿರುವ ಕಾರಣ ರಫ್ತು ಅನುಮತಿಗೆ ಪರಿಶೀಲನೆ: ಕೇಂದ್ರ ಸರ್ಕಾರವು 2025–26ನೇ ಮಾರುಕಟ್ಟೆ ವರ್ಷದಲ್ಲಿ ಸಕ್ಕರೆ ರಫ್ತಿಗೆ ಅವಕಾಶ ನೀಡುವ ಬಗ್ಗೆ ಪರಿಶೀಲನೆ ನಡೆಸಿದೆ. ಕಾರ್ಖಾನೆಗಳು ಎಥೆನಾಲ್ಉತ್ಪಾದನೆಗೆ ಬಳಸಿದ ಸಕ್ಕರೆಯ ಪ್ರಮಾಣವು ನಿರೀಕ್ಷೆಗಿಂತ ಕಡಿಮೆ ಆಗಿದ್ದ ಕಾರಣದಿಂದಾಗಿ, ಸಕ್ಕರೆ ದಾಸ್ತಾನು ಹೆಚ್ಚಿದೆ. ಹೀಗಾಗಿ ರಫ್ತಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.

  • 2024–25ರಲ್ಲಿ ದೇಶದ ಸಕ್ಕರೆ ಕಾರ್ಖಾನೆಗಳು 34 ಲಕ್ಷ ಟನ್ ಸಕ್ಕರೆಯನ್ನು ಮಾತ್ರ ಎಥೆನಾಲ್‌ ಉತ್ಪಾದನೆಗೆ ಬಳಸಿಕೊಂಡವು. ಆ ವರ್ಷದಲ್ಲಿ ಕಾರ್ಖಾನೆಗಳು 45 ಲಕ್ಷ ಟನ್ ಸಕ್ಕರೆಯನ್ನು ಎಥೆನಾಲ್‌ ಉತ್ಪಾದನೆಗೆ ಬಳಸುವ ನಿರೀಕ್ಷೆ ಇತ್ತು.
  • ಎಥೆನಾಲ್‌ಗೆ ಸಕ್ಕರೆ ಬಳಕೆ ಕಡಿಮೆಯಾದ ಪರಿಣಾಮವಾಗಿ 2025–26ನೇ ಮಾರುಕಟ್ಟೆ ವರ್ಷದ ಆರಂಭದಲ್ಲಿ ಸಕ್ಕರೆ ದಾಸ್ತಾನು ಹೆಚ್ಚಿನ ಮಟ್ಟದಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿ ವರ್ಷದ ಅಕ್ಟೋಬರ್‌ನಿಂದ ಸೆಪ್ಟೆಂಬರ್‌ವರೆಗಿನ ಅವಧಿಯನ್ನು ಮಾರುಕಟ್ಟೆ ವರ್ಷ ಎಂದು ಪರಿಗಣಿಸಲಾಗುತ್ತದೆ.
  • 2025–26ರಲ್ಲಿ ಸಕ್ಕರೆ ಉತ್ಪಾದನೆಯು 3.4 ಕೋಟಿ ಟನ್ ಆಗುವ ನಿರೀಕ್ಷೆ ಇದೆ. ದೇಶಿ ಮಾರುಕಟ್ಟೆ ಯಲ್ಲಿ ವಾರ್ಷಿಕ ಬೇಡಿಕೆಯು 2.85 ಕೋಟಿ ಟನ್ ಇರಲಿದೆ.
  • ಸಕ್ಕರೆ ರಫ್ತಿಗೆ ಅವಕಾಶ ಕಲ್ಪಿಸಬೇಕು ಎಂದು ಕಾರ್ಖಾನೆಗಳು ಆಗ್ರಹಿಸುತ್ತಿವೆ. ಈ ಕುರಿತು ಚೋಪ್ರಾ ಅವರನ್ನು ಪ್ರಶ್ನಿಸಿದಾಗ ‘ನಮ್ಮಲ್ಲಿ ಸಕ್ಕರೆ ದಾಸ್ತಾನು ಹೆಚ್ಚಿರುವುದು ನಿಜ… ರಫ್ತಿಗೆ ಅವಕಾಶ ಕಲ್ಪಿಸುವುದನ್ನು ನಾವು ಪರಿಶೀಲಿಸು ತ್ತಿದ್ದೇವೆ’ ಎಂದು ಉತ್ತರಿಸಿದ್ದಾರೆ.
  • ಈ ವಿಚಾರವಾಗಿ ತೀರ್ಮಾನವು ಶೀಘ್ರವೇ ಆಗಬಹುದು ಎಂದು ಅವರು ಸೂಚ್ಯವಾಗಿ ಹೇಳಿದ್ದಾರೆ. ತೀರ್ಮಾನ ತೆಗೆದುಕೊಳ್ಳಲು ಸಚಿವರ ಸಮಿತಿಯೊಂದು ಮುಂದಿನ ವಾರ ಸಭೆ ಸೇರುವ ಸಾಧ್ಯತೆ ಇದೆ.
  • ಕಳೆದ ಮಾರುಕಟ್ಟೆ ವರ್ಷದಲ್ಲಿ 10 ಲಕ್ಷ ಟನ್ ಸಕ್ಕರೆ ರಫ್ತಿಗೆ ಅನುಮತಿ ನೀಡಲಾಗಿತ್ತು. ಆದರೆ ಆ ವರ್ಷದಲ್ಲಿ ದೇಶದಿಂದ ಒಟ್ಟು 8 ಲಕ್ಷ ಟನ್ ಸಕ್ಕರೆಯನ್ನು ರಫ್ತು ಮಾಡಲಾಗಿದೆ.
  • ಪಿಎಂಶ್ರೀ ಯೋಜನೆ ಅನುಷ್ಠಾನಕ್ಕೆ ತಡೆ

ಸಂದರ್ಭ: ರಾಜ್ಯದಲ್ಲಿಪ್ರಧಾನಮಂತ್ರಿ ಸ್ಕೂಲ್ಫಾರ್ರೈಸಿಂಗ್ಇಂಡಿಯಾ (ಪಿಎಂಶ್ರೀ) ಯೋಜನೆ ಅನುಷ್ಠಾನಗೊಳಿಸುವ ನಿರ್ಧಾರವನ್ನು ತಡೆಹಿಡಿಯಲು ಕೇರಳ ಸರ್ಕಾರ ನಿರ್ಧರಿಸಿದೆ. ಯೋಜನೆಗೆ ಸಿಪಿಐ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕಾರಣ ನಿರ್ಧಾರಕ್ಕೆ ಬಂದಿದೆ.

  • ‘ಏಳು ಮಂದಿ ಸದಸ್ಯರನ್ನು ಒಳಗೊಂಡ ಸಂಪುಟ ಉಪ ಸಮಿತಿಯು ಯೋಜನೆಯನ್ನು ಪರಿಶೀಲಿಸಲಿದೆ. ಸಮಿತಿಯ ವರದಿ ಆಧಾರದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ತಿಳಿಸಿದರು.
  • ಉಪ ಸಮಿತಿ ಪರಿಶೀಲನೆ ನಂತರವೇ ಪಿಎಂ–ಶ್ರೀ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಇಲಾಖೆಗೆ ಪತ್ರದ ಮೂಲಕ ತಿಳಿಸಲಾಗಿದೆ.
  • ಮೊಂಥಾಚಂಡಮಾರುತ: ತಗ್ಗಿದ ಅಬ್ಬರ

ಸಂದರ್ಭ: ‘ಮೊಂಥಾ ಚಂಡಮಾರುತದ ತೀವ್ರತೆ ತಗ್ಗಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ಹೇಳಿದೆ. ಚಂಡಮಾರುತದ ಪರಿಣಾಮವು ಆಂಧ್ರ ಪ್ರದೇಶ ಮತ್ತು ತೆಲಂಗಾಣಕ್ಕೆ ತೀವ್ರವಾಗಿ ತಟ್ಟಿದೆ. ಒಡಿಶಾದಲ್ಲಿ ಭೂಕುಸಿತ ಸಂಭವಿಸಿದೆ, ಜಾರ್ಖಂಡ್ನಲ್ಲಿ ಮಳೆಯಾಗಿದೆ.

  • ‘ಮೊಂಥಾ’ ಕಾರಣದಿಂದಾಗಿ ರಾಜ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ’ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದರು. ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ತಲೆ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ. ಖಮ್ಮಂ ಜಿಲ್ಲೆಯಲ್ಲಿ ಟ್ರಕ್‌ನಲ್ಲಿ ಸಂಚರಿಸುತ್ತಿದ್ದಾಗ ಮಳೆ ನೀರಿನಲ್ಲಿ ಚಾಲಕ ಕೊಚ್ಚಿ ಹೋಗಿದ್ದಾರೆ.
  • ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಭಾರಿ ಮಳೆಯಾಗಿದೆ. ತೆಲಂಗಾಣದ 8 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.
  • ತೀವ್ರ ಮಳೆಗೆ ಒಳಗಾದ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ನಾಯ್ಡು ಅವರು ವೈಮಾನಿಕ ಸಮೀಕ್ಷೆ ನಡೆಸಿದರು. ವೇಗದ ಗಾಳಿ ಬೀಸಿದ್ದರಿಂದ ಆಂಧ್ರದಲ್ಲಿ ಸಾವಿರಾರು ಮರಗಳು ಧರೆಗುರುಳಿವೆ. ನೂರಾರು ವಿದ್ಯುತ್‌ ಕಂಬಗಳು ಬಿದ್ದಿವೆ. ‘380 ಕಿ.ಮೀ ರಸ್ತೆಗಳು, 14 ಸೇತುವೆಗಳಿಗೆ ಹಾನಿಯಾಗಿವೆ’ ಎಂದು ನಾಯ್ಡು ಮಾಹಿತಿ ನೀಡಿದರು. ‘ಒಡಿಶಾದಲ್ಲಿ ‘ಮೊಂಥಾ’ದ ಪರಿಣಾಮವು ಹೆಚ್ಚೇನು ಆಗಿಲ್ಲ’ ಎಂದು ಮುಖ್ಯಮಂತ್ರಿ ಮೋಹನ್‌ ಚರನ್‌ ಮಾಂಝಿ ಹೇಳಿದರು.

50 ಕೆ.ಜಿ ಅಕ್ಕಿ ವಿತರಣೆ

  • lಮೀನುಗಾರರು ಮತ್ತು ನೇಕಾರರಿಗೆ ಬುಧವಾರದಿಂದ ₹50 ಕೆ.ಜಿ ಅಕ್ಕಿ, 1 ಕೆ.ಜಿ ಬೆಳೆ, 1 ಲೀಟರ್‌ ಅಡುಗೆ ಎಣ್ಣೆ, 1 ಕೆ.ಜಿ. ಈರುಳ್ಳಿ, 1 ಕೆ.ಜಿ. ಆಲೂಗೆಡ್ಡೆ ಮತ್ತು 1 ಕೆ.ಜಿ. ಸಕ್ಕರೆ ನೀಡಲು ಆಂಧ್ರ ಸರ್ಕಾರ ನಿರ್ಧರಿಸಿದೆ

ಬೆಳೆ ಹಾನಿ

  • lಆಂಧ್ರದ ಭತ್ತ, ಹತ್ತಿ, ಜೋಳ ಮತ್ತು ಹೆಸರುಕಾಳು ಬೆಳೆಗಳಿಗೆ ಮತ್ತು ತೋಟಗಾರಿಕಾ ಬೆಳೆಗಳಿಗೆ ತೀವ್ರ ಹಾನಿಯಾಗಿದೆ. 87 ಸಾವಿರ ಹೆಕ್ಟೇರ್‌ನಷ್ಟು ಬೆಳೆಗಳು ನಾಶವಾಗಿವೆ.59 ಸಾವಿರ ಹೆಕ್ಟೇರ್‌ ವಿಸ್ತೀರ್ಣದಲ್ಲಿನ ಬೆಳೆಗಳು ನೀರಿನಲ್ಲಿ ಮುಳುಗಿವೆ. ವೇಗದ ಗಾಳಿಗೆ ಕೊನಸೀಮಾ ಜಿಲ್ಲೆಯಲ್ಲಿನ ಭತ್ತ ಮತ್ತು ಬಾಳೆಮರಗಳು ನೆಲಸಮವಾಗಿವೆ
  • lಮಳೆಯ ಕಾರಣ ಭತ್ತ ಮತ್ತು ಹತ್ತಿ ಬೆಳೆಗಳಿಗೆ ಆಗುವ ಹಾನಿಯನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರುಜನ
  • ್ಯಾಂಕಿಂಗ್: ಅಗ್ರಸ್ಥಾನಕ್ಕೆ ರೋಹಿತ್

ಸಂದರ್ಭ: ಭಾರತ ತಂಡದ ನಿಕಟಪೂರ್ವ ನಾಯಕ ರೋಹಿತ್ ಶರ್ಮಾ ಅವರು ಐಸಿಸಿ ಬ್ಯಾಟರ್ಗಳ ್ಯಾಂಕಿಂಗ್ನಲ್ಲಿ ಇದೇ ಮೊದಲ ಬಾರಿ ಅಗ್ರಸ್ಥಾನಕ್ಕೇರಿದ್ದಾರೆ.

  • 38 ವರ್ಷ ವಯಸ್ಸಿನ ಮುಂಬೈ ಆಟಗಾರ ರೋಹಿತ್ ಅವರು ಎರಡು ಸ್ಥಾನ ಬಡ್ತಿ ಪಡೆದಿದ್ದಾರೆ. ಅವರ ವೃತ್ತಿಜೀವನದಲ್ಲಿ ಅಗ್ರಸ್ಥಾನಕ್ಕೇರಿದ್ದು ಇದೇ ಮೊದಲು.
  • ಈಚೆಗೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಅಜೇಯ 121 ರನ್ ಗಳಿಸಿದ್ದರು. ಗೆಲುವಿನ ರೂವಾರಿಯಾಗಿದ್ದರು. ಸರಣಿಶ್ರೇಷ್ಠ ಗೌರವ ಕೂಡ ಗಳಿಸಿದ್ದರು. ರೋಹಿತ್ ಅವರು ಒಟ್ಟು 781 ರೇಟಿಂಗ್ ಪಾಯಿಂಟ್ಸ್‌ ಗಳಿಸಿದ್ದಾರೆ.
  • ರೋಹಿತ್ 2007ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಇತ್ತೀಚೆಗೆ ಅವರು ಟೆಸ್ಟ್ ಮತ್ತು ಟಿ20 ಮಾದರಿಗಳಿಗೆ ನಿವೃತ್ತಿ ಘೋಷಿಸಿದ್ದರು. ಏಕದಿನ ಕ್ರಿಕೆಟ್ ಮಾದರಿ ಯಲ್ಲಿ ಮಾತ್ರ ಮುಂದುವರಿದಿದ್ದಾರೆ.
  • ಈ ಸಾಧನೆಯಿಂದಾಗಿ ಅವರು ಐಸಿಸಿ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದ ಅಫ್ಗಾನಿಸ್ತಾನದ ಇಬ್ರಾಹಿಂ ಝದ್ರಾನ್ ಅವರನ್ನು ಹಿಂದಿಕ್ಕಿದರು. ಭಾರತದ ಶುಭಮನ್ ಗಿಲ್ ಅವರು ಮೂರನೇ ಸ್ಥಾನ ಪಡೆದರು. ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅವರು ಕ್ರಮವಾಗಿ 6 ಮತ್ತು 9ನೇ ಸ್ಥಾನದಲ್ಲಿದ್ದಾರೆ.

  • ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳು
  • ಉಮಾಶ್ರೀಗೆ ರಾಜಕುಮಾರ್ ಪ್ರಶಸ್ತಿ

ಸಂದರ್ಭ: ರಾಜ್ಯ ಸರ್ಕಾರವು 2019ನೇ ಸಾಲಿನ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗೆ ನೀಡಲಾಗುವಡಾ.ರಾಜಕುಮಾರ್ಪ್ರಶಸ್ತಿಗೆ ಹಿರಿಯ ನಟಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ.

  • ‘ಪುಟ್ಟಣ್ಣ ಕಣಗಾಲ್‌ ಪ್ರಶಸ್ತಿ’ಗೆ ನಿರ್ದೇಶಕ ಎನ್‌.ಆರ್‌.ನಂಜುಂಡೇಗೌಡ, ‘ಡಾ.ವಿಷ್ಣುವರ್ಧನ್‌ ಪ್ರಶಸ್ತಿ’ಗೆ ನಿರ್ಮಾಪಕ–ನಿರ್ದೇಶಕ ರಿಚರ್ಡ್‌ ಕ್ಯಾಸ್ಟಲಿನೊ ಅವರು ಆಯ್ಕೆಯಾಗಿದ್ದಾರೆ. ಈ ಮೂರೂ ಪ್ರಶಸ್ತಿಗಳು ತಲಾ 50 ಗ್ರಾಂ ಚಿನ್ನದ ಪದಕ ಮತ್ತು ₹5 ಲಕ್ಷ ನಗದು ಒಳಗೊಂಡಿವೆ.
  • ಅದೇ ಸಾಲಿನ ಚಲನಚಿತ್ರ ಸಾಹಿತ್ಯ ಪ್ರಶಸ್ತಿಗೆ ‘ಪ್ರಜಾವಾಣಿ’ಯ ಅಭಿಮತ ಸಂಪಾದಕ ರಘುನಾಥ ಚ.ಹ. ಅವರು ಬರೆದಿರುವ ‘ಬೆಳ್ಳಿತೊರೆ– ಸಿನಿಮಾ ಪ್ರಬಂಧಗಳು’ ಆಯ್ಕೆಯಾಗಿದೆ. ಪ್ರಶಸ್ತಿಯು ₹20,000 ನಗದು ಮತ್ತು 50 ಗ್ರಾಂ ಬೆಳ್ಳಿಯ ಪದಕ ಒಳಗೊಂಡಿದೆ. ಪುಸ್ತಕದ ಪ್ರಕಾಶಕ, ಅಂಕಿತ ಪುಸ್ತಕದ ಪ್ರಕಾಶ ಕಂಬತ್ತಳ್ಳಿ ಅವರನ್ನೂ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ₹20,000 ನಗದು ಮತ್ತು 50 ಗ್ರಾಂ ಬೆಳ್ಳಿಯ ಪದಕ ಒಳಗೊಂಡಿದೆ.
  • ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗೆ ಶ್ರೀನಾಥ್ ಎಸ್‌. ಹಡಗಲಿ ಅವರ ನಿರ್ದೇಶನದ ‘ಗುಳೆ’ ಕಿರುಚಿತ್ರ ಆಯ್ಕೆಯಾಗಿದೆ. ನಿರ್ದೇಶಕ ಶ್ರೀನಾಥ್ ಮತ್ತು ನಿರ್ಮಾಪಕ ಮನೋಹರ್ ಎಸ್‌.ಐಯರ್ ಅವರಿಗೆ ತಲಾ ₹25,000 ನಗದು ಮತ್ತು 50 ಗ್ರಾಂ ಬೆಳ್ಳಿಯ ಪದಕ ನೀಡಲಾಗುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.
  • ಕಾಯಕ ಗ್ರಾಮಕ್ಕೆ 1,310 ಪಂಚಾಯಿತಿ ಆಯ್ಕೆ

ಸಂದರ್ಭ: ಕೊನೆಯ ಸ್ಥಾನದಲ್ಲಿರುವ 1,310 ಗ್ರಾಮ ಪಂಚಾಯಿತಿಗಳನ್ನುಕಾಯಕ ಗ್ರಾಮ ಯೋಜನೆ ಅಡಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ಖರ್ಗೆ ಹೇಳಿದರು.

  • ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಗ್ರಾಮೀಣಾಭಿವೃದ್ಧಿಯ ಇ-ಆಡಳಿತ ವಿಭಾಗವು ಪಂಚತಂತ್ರ ತಂತ್ರಾಂಶದಲ್ಲಿ ಗ್ರಾಮ ಪಂಚಾಯಿತಿ ಕಾರ್ಯಕ್ಷಮತೆಯ ಶ್ರೇಯಾಂಕ ವರದಿಯಲ್ಲಿ ಗುರುತಿಸುವಂತೆ ಕೊನೆಯ ಸ್ಥಾನಗಳಲ್ಲಿರುವ ಗ್ರಾಮ ಪಂಚಾಯತಿಗಳನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವಿವಿಧ ಇಲಾಖೆಗಳ ಸಮನ್ವಯದಲ್ಲಿ ಸಮಗ್ರ ಅಭಿವೃದ್ಧಿ ಸಾಧಿಸಲಾಗುವುದು. ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದ ಅಧಿಕಾರಿಗಳು ಉಸ್ತುವಾರಿ ನೋಡಿಕೊಳ್ಳುವರು’ ಎಂದರು.
  • ಗ್ರಾಮ ಪಂಚಾಯಿತಿಗಳನ್ನು ಹಿರಿಯ ಅಧಿಕಾರಿಗಳು ದತ್ತು ಪಡೆದು ಅಭಿವೃದ್ಧಿಪಡಿಸಲು ಹೊಸ ಯೋಜನೆ ರೂಪಿಸಲಾಗುವುದು ಎಂದು ಬಜೆಟ್‌ನಲ್ಲಿ ಮುಖ್ಯಮಂತ್ರಿ ಘೋಷಿಸಿದ್ದರು.
  • ಬಸವಣ್ಣನವರ ಕಾಯಕದ ಸಂದೇಶವನ್ನು ಸಾಕಾರಗೊಳಿಸಲು ‘ಕಾಯಕ ಗ್ರಾಮ’ ಯೋಜನೆ ರೂಪಿಸಲಾಗಿದೆ ಎಂದರು.
  • ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳು ಸೇರಿದಂತೆ ಆರು ಅಧಿಕಾರಿಗಳು, ತಾಲ್ಲೂಕು ಮಟ್ಟದಲ್ಲಿ ಮೂವರು ಅಧಿಕಾರಿಗಳು ಹಾಗೂ ರಾಜ್ಯ ಮಟ್ಟದಲ್ಲಿ ಜಿಲ್ಲಾವಾರು ನೇಮಕ ಮಾಡಲಾಗಿರುವ ನೋಡಲ್‌ ಅಧಿಕಾರಿಗಳು ಇರುತ್ತಾರೆ ಎಂದರು.
  • ಕೆಎಸ್ಆರ್ಪಿ: ಪಿಯು ವಿದ್ಯಾರ್ಹತೆ: ನಿಯಮ ತಿದ್ದುಪಡಿಗೆ ಸಚಿವ ಸಂಪುಟದ ಒಪ್ಪಿಗೆ

ಸಂದರ್ಭ: ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ (ಕೆಎಸ್ಆರ್ಪಿ) ಮತ್ತು ಭಾರತೀಯ ಮೀಸಲು ದಳ (ಐಆರ್ಬಿ) ನೇಮಕಾತಿಗೆ ಇರುವ ವಿದ್ಯಾರ್ಹತೆಯನ್ನು ಎಸ್ಎಸ್ಎಲ್ಸಿಯಿಂದ ಪಿಯುಸಿಗೆ ಏರಿಸುವ ವೃಂದ ಮತ್ತು ನೇಮಕಾತಿ ನಿಯಮಕ್ಕೆ ಮಾಡಿರುವ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಚಿವ ಸಂಪುಟ ಸಭೆಯ ತೀರ್ಮಾನಗಳು:

  • lಕರ್ನಾಟಕ ನವೋದ್ಯಮ ನೀತಿ 2022–27ರ ಅಡಿ ಐದು ವರ್ಷಗಳ ಅವಧಿಗೆ ₹80 ಕೋಟಿ ಅನುದಾನ ಹಂಚಿಕೆಯೊಂದಿಗೆ ಒಟ್ಟು ಎಂಟು ಟೆಕ್ನಾಲಜಿ ಇನ್‌ಕ್ಯುಬೇಟರ್‌ 2.0 ಸ್ಥಾಪಿಸಲು ತೀರ್ಮಾನ.
  • lಕಾರವಾರ, ಹಳೆ ಮಂಗಳೂರು(ಬೆಂಗ್ರೆ), ಹಳೆ ಮಂಗಳೂರು(ನಗರ ಬದಿ) ಮತ್ತು ಮಲ್ಪೆಯ ಬರ್ತ್‌ಗಳನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿ ನಿರ್ವಹಿಸಲು ತೀರ್ಮಾನ
  • lಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಾಥಮಿಕ ಹಂತಕ್ಕಾಗಿ ₹23.25 ಕೋಟಿ ಮೊತ್ತದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ, ದುರಸ್ತಿ ಮತ್ತು ನವೀಕರಣ ಕಾಮಗಾರಿ
  • lಕಾರವಾರ ಕ್ಯಾನ್ಸರ್‌ ಕೇರ್ ಘಟಕದ ಸ್ಥಾಪನೆಗೆ ಅಗತ್ಯವಿರುವ ಹೆಚ್ಚುವರಿ ಉಪಕರಣಗಳಿಗೆ ತಗಲುವ ಅನುದಾನವನ್ನು ಈಗಾಗಲೇ ಅನುಮೋದನೆ ಆಗಿರುವ ₹18.25 ಕೋಟಿ ಸರ್ಕಾರದ ವತಿಯಿಂದ ಭರಿಸಲಾಗುವುದು. ಇನ್ನುಳಿದ ಮೊತ್ತ ₹13.38 ಕೋಟಿಯನ್ನು ಸಂಸ್ಥೆಯ ಆಂತರಿಕ ಸಂಪನ್ಮೂಲದಿಂದ ಭರಿಸಲು ಒಪ್ಪಿಗೆ.
  • lತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಕೇರ್‌ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಮೊದಲ ಹಂತದ ಉಪಕರಣಗಳ ಖರೀದಿಗೆ ₹50 ಕೋಟಿ.
  • lಕೆ–ಶೋರ್ ಯೋಜನೆಗೆ ತಾಂತ್ರಿಕ ಮತ್ತು ನಿರ್ವಹಣಾ ಸಲಹೆಗಾರರ ಸೇವೆಗಳನ್ನು ಪಡೆಯಲು ₹20.47 ಕೋಟಿಗೆ ಆಡಳಿತಾತ್ಮಕ ಅನುಮೋದನೆ.
  • lಯಾದಗಿರಿ ಜಿಲ್ಲೆ ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಕನಕಭವನ ನಿರ್ಮಾಣಕ್ಕೆ 300.14 ಚದರ ಮೀಟರ್‌ ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಉಚಿತವಾಗಿ ಮಂಜೂರು ಮಾಡಲು ತೀರ್ಮಾನ
  • l2025–26 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ವಿವಿಧ ಮಾದರಿಯ 241 ವಾಹನಗಳನ್ನು ₹34.95 ಕೋಟಿ ವೆಚ್ಚದಲ್ಲಿ ಖರೀದಿಸಲು ಒಪ್ಪಿಗೆ
  • lಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ, ಉಡುಪಿ ಜಿಲ್ಲೆ ಅಂಜಾರು ಗ್ರಾಮ, ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನಲ್ಲಿ ಕಾಂಗ್ರೆಸ್‌ ಭವನ ನಿರ್ಮಾಣಕ್ಕೆ ಜಮೀನು ಮಂಜೂರು
  • ಕೌಶಲ ಕೇಂದ್ರಕ್ಕೆ ಸರ್ಕಾರದಿಂದ ಜಮೀನು

ಸಂದರ್ಭ:ರಾಜ್ಯದಲ್ಲಿ ಕೌಶಲ ತರಬೇತಿ ಕೇಂದ್ರ ಮತ್ತು ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವವರಿಗೆ ರಾಜ್ಯ ಸರ್ಕಾರದಿಂದಲೇ ಅಗತ್ಯ ಜಮೀನು ಮಂಜೂರು ಮಾಡಲಾಗುವುದು ಎಂದು ಕೌಶಲಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದರು.

  • ಭಾರತೀಯ ಕೈಗಾರಿಕೆಗಳ ಒಕ್ಕೂಟವು ಆಯೋಜಿಸಿದ್ದ ‘ಕೌಶಲ ಶೃಂಗಸಭೆ–2025’ಯಲ್ಲಿ ಅವರು ಮಾತನಾಡಿದರು.
  • ‘ಪದವಿ, ವೃತ್ತಿಪರ ಕೋರ್ಸ್‌ಗಳನ್ನು ಮಾಡಿದ ವಿದ್ಯಾರ್ಥಿಗಳಲ್ಲಿ ಉದ್ಯೋಗಾವಕಾಶವನ್ನು ಹೆಚ್ಚಿಸುವ ಅಗತ್ಯವಿದೆ. ಇದಕ್ಕಾಗಿ ಉದ್ಯಮಗಳ ಸಹಯೋಗದಲ್ಲೇ ತರಬೇತಿ ಕೇಂದ್ರ ಅಥವಾ ಪ್ರಯೋಗಾಲಯಗಳನ್ನು ಸ್ಥಾಪಿಸಬೇಕಿದೆ. ಇದಕ್ಕೆ ಸರ್ಕಾರವು ಅಗತ್ಯ ನೆರವುಗಳನ್ನು ನೀಡಲಿದೆ’ ಎಂದರು.
  • ‘ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾ ಲಯದಲ್ಲಿ ಬಜಾಜ್‌ ಕಂಪನಿಯು ಎಂಜಿನಿಯರಿಂಗ್ ಕೌಶಲ ತರಬೇತಿ ಕೇಂದ್ರವನ್ನು ಆರಂಭಿಸಿದೆ. ಖಾಸಗಿ–ಸರ್ಕಾರಿ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರದಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಮೆಕಾಟ್ರಾನಿಕ್ಸ್‌, ರೊಬೊಟಿಕ್ಸ್‌ ಮೊದಲಾದ ಕ್ಷೇತ್ರಗಳಲ್ಲಿ ಪ್ರಾಯೋಗಿಕ ತರಬೇತಿಯನ್ನು ನೀಡಲಾಗುತ್ತಿದೆ. ರಾಜ್ಯದ ಹಲವೆಡೆ ಇಂತಹ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶಗಳಿವೆ’ ಎಂದು ಹೇಳಿದರು.
  • ‘ಶೈಕ್ಷಣಿಕ ಕಲಿಕೆ ಮತ್ತು ಪ್ರಾಯೋಗಿಕ ತರಬೇತಿ ಎರಡಕ್ಕೂ ಅವಕಾಶವಿರುವ ‘ಡ್ಯುಯಲ್‌ ಅಪ್ರೆಂಟಿಸ್‌ಶಿಪ್‌’ ಕಾರ್ಯಕ್ರಮವನ್ನು ರೂಪಿಸಲಾಗುತ್ತಿದೆ. ಈ ಯೋಜನೆಯನ್ನು ಸಾಕಾರಗೊಳಿಸಲು ಉದ್ಯಮರಂಗದ ಸಹಕಾರ ಅಗತ್ಯ. ಶಿಕ್ಷಣ–ಉದ್ಯಮ ಸಹಯೋಗವನ್ನು ಹೊಸ ಎತ್ತರಕ್ಕೆ ಒಯ್ಯೋಣ’ ಎಂದು ಉದ್ಯಮಿಗಳಿಗೆ ಆಹ್ವಾನ ನೀಡಿದರು.
  • ಜಿಯೊ ಬಳಕೆದಾರರಿಗೆ ಗೂಗಲ್. ಪ್ರೊ ಉಚಿತ

ಸಂದರ್ಭ: ಗೂಗಲ್ಕಂಪನಿಯ .. ಪರಿಕರಗೂಗಲ್ .. ಪ್ರೊ ಚಂದಾದಾರಿಕೆಯು ಅರ್ಹ ಜಿಯೊ ಬಳಕೆದಾರರಿಗೆ 18 ತಿಂಗಳು ಉಚಿತವಾಗಿ ಸಿಗಲಿದೆ ಎಂದು ರಿಲಯನ್ಸ್ಇಂಡಸ್ಟ್ರೀಸ್ತಿಳಿಸಿದೆ.

  • ರಿಲಯನ್ಸ್ ಇಂಡಸ್ಟ್ರೀಸ್‌ನ ಅಂಗಸಂಸ್ಥೆಯಾದ ರಿಲಯನ್ಸ್‌ ಇಂಟೆಲಿಜೆನ್ಸ್‌, ಗೂಗಲ್‌ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ. ಈ ಪಾಲುದಾರಿಕೆಯ ಮೂಲಕ ರಿಲಯನ್ಸ್‌, ಜಿಯೊ 5ಜಿ ಅನ್‌ಲಿಮಿಟೆಡ್‌ ಯೋಜನೆ ಹೊಂದಿರುವ ಬಳಕೆದಾರರಿಗೆ ಈ ಕೊಡುಗೆ ನೀಡಿದೆ.
  • ಹಣಕಾಸಿನ ಮೌಲ್ಯದಲ್ಲಿ ಈ ಕೊಡುಗೆ ಬೆಲೆ ₹35,100 ಆಗಿದೆ ಎಂದು ಕಂಪನಿ ಹೇಳಿದೆ. ಆರಂಭಿಕವಾಗಿ 18–25 ವರ್ಷದ ನಡುವಿನವರಿಗೆ ಈ ಕೊಡುಗೆ ದೊರೆಯಲಿದೆ. ನಂತರ ಎಲ್ಲ ಬಳಕೆದಾರರಿಗೆ ಈ ಸೇವೆ ದೊರೆಯುವಂತೆ ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ.
  • ಈ ಪ್ಲ್ಯಾನ್‌ ಜೊತೆಗೆ ಗೂಗಲ್ ಜೆಮಿನಿ 2.5 ಪ್ರೊ, ಇತ್ತೀಚಿನ  ನ್ಯಾನೋ ಬನಾನಾ ಮತ್ತು ವಿಯೋ 3.1 ಮಾದರಿಗಳೊಂದಿಗೆ ಚಿತ್ರಗಳು ಮತ್ತು ವಿಡಿಯೋಗಳನ್ನು ಸೃಷ್ಟಿಸಲು ಬಳಕೆದಾರರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ.
  • ಅಧ್ಯಯನ  ಮತ್ತು  ಸಂಶೋಧನೆಗಾಗಿ  ನೋಟ್‌ಬುಕ್  ಎಲ್ಎಂಗೆ ಹೆಚ್ಚಿನ ಅವಕಾಶ ಮತ್ತು 2 ಟಿಬಿ ಕ್ಲೌಡ್ ಸಂಗ್ರಹದ ಸೌಲಭ್ಯ ಕೂಡ ದೊರೆಯಲಿದೆ ಎಂದು ತಿಳಿಸಿದೆ.
  • ಛಾಬಹಾರ್ಬಂದರು: 6 ತಿಂಗಳು ವಿನಾಯಿತಿ

ಸಂದರ್ಭ: ಭಾರತ ನಿರ್ವಹಿಸುತ್ತಿರುವ ಇರಾನ್ ಛಾಬಹಾರ್ಬಂದರು ಯೋಜನೆ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧಗಳಿಂದ ಆರು ತಿಂಗಳು ವಿನಾಯಿತಿ ದೊರೆತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ಜೈಸ್ವಾಲ್ಮಾಹಿತಿ ನೀಡಿದರು.

  • ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ಅಕ್ಟೋಬರ್‌ 29ರಿಂದ ಜಾರಿಗೆ ಬರುವಂತೆ ಆರು ತಿಂಗಳವರೆಗೆ ವಿನಾಯಿತಿ ನೀಡಿ ಆದೇಶಿಸಿದ್ದಾರೆ ಎಂದು ಅವರು ಹೇಳಿದರು.
  • ಛಾಬಹಾರ್‌  ಬಂದರಿನ ಕಾರ್ಯನಿರ್ವಹಣೆ ಕುರಿತು ಇರಾನ್‌ ಮತ್ತು ಭಾರತ ಸರ್ಕಾರ ಕಳೆದ ವರ್ಷ ಒಪ್ಪಂದ ಮಾಡಿಕೊಂಡಿವೆ. ಈ ಬಂದರು ಅಭಿವೃದ್ಧಿ ಮತ್ತು ನಿರ್ವಹಣೆ ಸಂಬಂಧ ಎರಡೂ ಸರ್ಕಾರಗಳು 2003, 2015 ಮತ್ತು 2017ರಲ್ಲಿ ಒಪ್ಪಂದ ಮಾಡಿಕೊಂಡಿದ್ದವು. 2018ರಿಂದ ಈ ಬಂದರನ್ನು ಭಾರತವೇ ನಿರ್ವಹಿಸುತ್ತಿದೆ. ಅದನ್ನು 10 ವರ್ಷಗಳಿಗೆ ವಿಸ್ತರಿಸಿ ಕಳೆದ ವರ್ಷ ಒಪ್ಪಂದ ಮಾಡಿಕೊಳ್ಳಲಾಗಿದೆ.
  • ಅಫ್ಗಾನಿಸ್ತಾನದ ಸಾರ್ವಭೌಮತ್ವಕ್ಕೆ ಭಾರತ ಬದ್ಧ: ಪಾಕಿಸ್ತಾನ– ಅಫ್ಗಾನಿಸ್ತಾನ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಅಫ್ಗಾನಿಸ್ತಾನವನ್ನು ಬೆಂಬಲಿಸಿರುವ ಭಾರತವು, ಅಫ್ಗಾನಿಸ್ತಾನದ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಮತ್ತು ಸ್ವಾತಂತ್ರ್ಯವನ್ನು ಪೂರ್ಣವಾಗಿ ಗೌರವಿಸುತ್ತದೆ ಮತ್ತು ಅದಕ್ಕೆ ಬದ್ಧವಾಗಿದೆ ಎಂದು ಪ್ರತಿಪಾದಿಸಿದೆ.
  • ತೈಲ ಖರೀದಿಅಮೆರಿಕ ನಿರ್ಬಂಧ: ಪರಿಣಾಮಗಳ ಬಗ್ಗೆ ಭಾರತ ಅಧ್ಯಯನ

ಸಂದರ್ಭ: ರಷ್ಯಾದ ಬೃಹತ್ತೈಲ ಕಂಪನಿಗಳಾದರೋಸ್ನೆಫ್ಟ್ ಮತ್ತುಲುಕೋಯಿಲ್ ಮೇಲೆ ಇತ್ತೀಚೆಗೆ ಅಮೆರಿಕ ವಿಧಿಸಿರುವ ನಿರ್ಬಂಧದಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಭಾರತ ಅಧ್ಯಯನ ನಡೆಸುತ್ತಿದೆ ಎಂದು ರಣಧೀರ್ಜೈಸ್ವಾಲ್ತಿಳಿಸಿದರು.

  • ‘ಭಾರತವು ಜಾಗತಿಕ ಮಾರುಕಟ್ಟೆಯ ಚಲನಶೀಲತೆಯನ್ನು ಆಧರಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ನಮ್ಮ 140 ಕೋಟಿ ಜನರ ಇಂಧನದ ಅಗತ್ಯಗಳನ್ನು ಪೂರೈಸಲು ವೈವಿಧ್ಯಮಯ ಮೂಲಗಳಿಂದ ಕೈಗೆಟುಕುವ ದರದಲ್ಲಿ ಇಂಧನ ಖರೀದಿಸಲು ಒತ್ತು ನೀಡುತ್ತದೆ’ ಎಂದೂ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
  • ಭಾರತದ ತೈಲ ಖರೀದಿದಾರರು ರಷ್ಯಾದ ಕಚ್ಚಾ ತೈಲ ಖರೀದಿಯನ್ನು ನಿಧಾನವಾಗಿ ಕಡಿಮೆ ಮಾಡುತ್ತಿದ್ದಾರೆ ಮತ್ತು ಅಮೆರಿಕದಿಂದ ಪೆಟ್ರೋಲಿಯಂ ಉತ್ಪನ್ನಗಳ ಆಮದನ್ನು ಎದುರು ನೋಡುತ್ತಿ ದ್ದಾರೆ ಎಂಬ ಮಾಹಿತಿ ಬೆನ್ನಲ್ಲೇ ಜೈಸ್ವಾಲ್‌ ಅವರಿಂದ ಪ್ರತಿಕ್ರಿಯೆ ಬಂದಿದೆ. 
  • ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ಕಾರ್ಯದಲ್ಲಿ ಭಾರತ ಮತ್ತು ಅಮೆರಿಕ ನಿರತವಾಗಿವೆ ಎಂದು ಅವರು ಇದೇ ವೇಳೆ ಪ್ರತಿಕ್ರಿಯಿಸಿದರು.
  • ಉದ್ಯೋಗ ಪರವಾನಗಿ: ಸ್ವಯಂಚಾಲಿತ ವಿಸ್ತರಣೆ ಸೌಲಭ್ಯ ನಿಲ್ಲಿಸಿದ ಅಮೆರಿಕ

ಸಂದರ್ಭ: ಎಚ್1ಬಿ ವೀಸಾಕ್ಕಾಗಿ ಹೊಸದಾಗಿ ಸಲ್ಲಿಕೆ ಯಾಗುವ ಅರ್ಜಿಗೆ ಸಂಬಂಧಿಸಿದ ಶುಲ್ಕವನ್ನು ಹೆಚ್ಚಳ ಮಾಡಿದ್ದ ಅಮೆರಿಕ, ಈಗ ವಿದೇಶಿಗರ ಉದ್ಯೋಗ ಪರವಾನಗಿ ಅವಧಿ ಸ್ವಯಂಚಾಲಿತವಾಗಿ ವಿಸ್ತರಣೆಯಾಗುವ ಸೌಲಭ್ಯವನ್ನು ಕೊನೆಗೊಳಿಸುತ್ತಿರುವುದಾಗಿ ಘೋಷಿಸಿದೆ.

  • ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತದ ಈ ನಡೆಯಿಂದ, ಅಮೆರಿಕದಲ್ಲಿ ಉದ್ಯೋಗದಲ್ಲಿರುವ ಭಾರಿ ಸಂಖ್ಯೆಯ ಭಾರತೀಯರಿಗೆ ತೊಂದರೆಯಾಗಲಿದೆ.
  • ಭದ್ರತಾ ಇಲಾಖೆಯು ಈ ಕುರಿತು ಘೋಷಣೆ ಮಾಡಿದೆ. ‘ವಿದೇಶಿಯರ ಉದ್ಯೋಗ ದೃಢೀಕರಣ ದಾಖಲೆಗಳ (ಇಎಡಿ) ಸಿಂಧುತ್ವವನ್ನು ವಿಸ್ತರಣೆ ಮಾಡುವು ದಕ್ಕೂ ಮುನ್ನ ವ್ಯಾಪಕ ಪರಿಶೀಲನೆ ನಡೆಸಲಾಗುವುದು’ ಎಂದು ಹೇಳಿದೆ.
  • ‘ಹೊಸ ನಿಯಮದ ಪ್ರಕಾರ, 2025ರ ಅಕ್ಟೋಬರ್ 30ರಂದು ಅಥವಾ ನಂತರ ತಮ್ಮ ಇಎಡಿ ನವೀಕರಣಕ್ಕೆ ಅರ್ಜಿ ಸಲ್ಲಿಸುವ ವಿದೇಶಿಯರ ಉದ್ಯೋಗ ಪರವಾನಗಿ ಅವಧಿಯು ಸ್ವಯಂಚಾಲಿತವಾಗಿ ವಿಸ್ತರಣೆ ಆಗುವುದಿಲ್ಲ’ ಎಂದು ಇಲಾಖೆ ತಿಳಿಸಿದೆ.
  • ‘ಅಕ್ಟೋಬರ್‌ 30ರ ಒಳಗಾಗಿ, ಪರವಾನಗಿಯನ್ನು ಸ್ವಯಂಚಾಲಿತ ವಾಗಿ ವಿಸ್ತರಣೆ ಮಾಡಲಾಗಿರುವ ಇಎಡಿಗಳಿಗೆ ಈ ಮಧ್ಯಂತರ ನಿಯಮ ಅನ್ವಯಿಸದು’ ಎಂದು ಸ್ಪಷ್ಟಪಡಿಸಿದೆ.
  • ‘ಇಎಡಿ ಅವಧಿ ಕೊನೆಗೊಳ್ಳುವುದಕ್ಕೂ 180 ದಿನಗಳ ಮೊದಲೇ ನವೀಕರಣಕ್ಕೆ ವಿದೇಶಿಯರು ಅರ್ಜಿ ಸಲ್ಲಿಸಬೇಕು’ ಎಂದೂ ಇಲಾಖೆ ಸೂಚಿಸಿದೆ.
  • ಜೋ ಬೈಡನ್‌ ಅವರು ಅಧ್ಯಕ್ಷ ರಾಗಿದ್ದ ವೇಳೆ, ಇಎಡಿ ನವೀಕರಣ ಕೋರಿ ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸುವ ವಿದೇಶಿಯರ ಉದ್ಯೋಗ ಪರವಾನಗಿಯು ಸ್ವಯಂಚಾಲಿತವಾಗಿ 540 ದಿನಗಳಷ್ಟು ವಿಸ್ತರಣೆಯಾಗುತ್ತಿತ್ತು.
  • .. ಪಠ್ಯಕ್ರಮಕ್ಕೆ ಸಮಿತಿ

ಸಂದರ್ಭ: ಕೃತಕ ಬುದ್ಧಿಮತ್ತೆ (.) ವಿಷಯಾಧಾರಿತ ಪಠ್ಯ ರೂಪಿಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್) ಐಐಟಿ ಮದ್ರಾಸ್ ಪ್ರಾಧ್ಯಾಪಕ  ಕಾರ್ತಿಕ್ ರಮಣ್ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿದೆ.

  • 2026–27ರ ಶೈಕ್ಷಣಿಕ ವರ್ಷದಿಂದ ತನ್ನ ವ್ಯಾಪ್ತಿಯ ಎಲ್ಲ ಶಾಲೆಗಳಲ್ಲಿ ಮೂರನೇ ತರಗತಿಯಿಂದ ಎ.ಐ ಪಠ್ಯಕ್ರಮವನ್ನು ಅಳವಡಿಸುವ ಪ್ರಯತ್ನದ ಭಾಗವಾಗಿ ಸಮಿತಿ ರಚಿಸಲಾಗಿದೆ.
  • ‘ಸಿಬಿಎಸ್‌ಇ, ಎನ್‌ಸಿಇಆರ್‌ಟಿ, ಕೆವಿಎಸ್‌, ಎನ್‌ವಿಎಸ್‌ ತಜ್ಞರು ಮತ್ತು ಬಾಹ್ಯ ತಜ್ಞರೊಂದಿಗೆ ಮಂಡಳಿಯ ಪ್ರಮುಖರು ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಮದ್ರಾಸ್‌ ಐಐಟಿಯ ದತ್ತಾಂಶ ವಿಜ್ಞಾನ (ಡೆಟಾ ಸೈನ್ಸ್) ಮತ್ತು ಎ.ಐ ವಿಭಾಗದ ಪ್ರಾಧ್ಯಾಪಕ ಕಾರ್ತಿಕ್ ರಮಣ್‌ ನೇತೃತ್ವದಲ್ಲಿ ಪಠ್ಯಕ್ರಮ ರಚನಾ ಸಮಿತಿ ರಚಿಸಲಾಯಿತು’ ಎಂದು ಶಾಲಾ ಶಿಕ್ಷಣ ಕಾರ್ಯದರ್ಶಿ ಸಂಜಯ್‌ ಕುಮಾರ್‌ ತಿಳಿಸಿದ್ದಾರೆ.
  • ‘ವಿಶಾಲವಾದ, ಸಮಗ್ರವಾದ ಮತ್ತು ಶಾಲಾ ಶಿಕ್ಷಣದ ರಾಷ್ಟ್ರೀಯ ಪಠ್ಯಕ್ರಮ ಸ್ವರೂಪದ (ಎನ್‌ಸಿಎಫ್‌–ಎಸ್‌ಇ) ಪರಿಧಿಯಲ್ಲಿ ಎಐ ಪಠ್ಯಕ್ರಮ ರಚಿಸಲಾಗುತ್ತದೆ. ಪ್ರತಿಯೊಂದು ಮಗುವಿನ ವಿಶಿಷ್ಟ ಸಾಮರ್ಥ್ಯ ನಮ್ಮ ಆದ್ಯತೆ’ ಎಂದು ಹೇಳಿದರು.
  • ಪ್ರಸ್ತುತ, ದೇಶದ 18,000 ಸಿಬಿಎಸ್‌ಇ ಶಾಲೆಗಳು  6ನೇ ತರಗತಿ ನಂತರ ಕೃತಕ ಬುದ್ಧಿಮತ್ತೆಯನ್ನು ಕೌಶಲ ವಿಷಯದ ರೂಪದಲ್ಲಿ 15 ಗಂಟೆಗಳಷ್ಟು ಕಾಲ ಬೋಧಿಸುತ್ತಿವೆ. 9ರಿಂದ 12ನೇ ತರಗತಿವರೆಗೆ ಇದು ಐಚ್ಛಿಕ ವಿಷಯವಾಗಿದೆ.
  • ಯೂತ್ ಏಷ್ಯನ್ ಕ್ರೀಡಾಕೂಟ: ಭಾರತದ ಪದಕ 41ಕ್ಕೆ ಏರಿಕೆ

ಸಂದರ್ಭ: ಭಾರತದ ಸ್ಪರ್ಧಿಗಳು ಯೂತ್ ಏಷ್ಯನ್ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನ ಮುಂದುವರಿಸಿದರು. ಬಾಕ್ಸಿಂಗ್ನಲ್ಲಿ ಮೂರು ಚಿನ್ನ, ಒಂದು ಬೆಳ್ಳಿ ಹಾಗೂ ಬೀಚ್ಕುಸ್ತಿಯಲ್ಲಿ ಮೂರು ಚಿನ್ನ, ಎರಡು ಬೆಳ್ಳಿ ಪದಕ ಗೆದ್ದು ಪಾರಮ್ಯ ಮೆರೆದರು.

  • 12 ಚಿನ್ನ, 15 ಬೆಳ್ಳಿ ಮತ್ತು 14 ಕಂಚು ಸೇರಿದಂತೆ 41 ಪದಕ ಗೆದ್ದ ಭಾರತ ಪದಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಚೀನಾ (136 ಪದಕ) ಅಗ್ರಸ್ಥಾನದಲ್ಲಿದೆ.
  • ಮಹಿಳಾ ಬಾಕ್ಸರ್‌ಗಳಾದ ಖುಷಿ ಚಂದ್, ಅಹಾನಾ ಶರ್ಮಾ ಮತ್ತು ಚಂದ್ರಿಕಾ ಪೂಜಾರಿ ಅವರು ಚಿನ್ನಕ್ಕೆ ಕೊರಳೊಡ್ಡಿದರು.ಪುರುಷರ ವಿಭಾಗದಲ್ಲಿ ಲ್ಯಾಂಚೆನ್ಬಾ ಸಿಂಗ್  ಬೆಳ್ಳಿ ಪದಕವನ್ನು ಜಯಿಸಿದರು.
  • 46 ಕೆ.ಜಿ ವಿಭಾಗದ ಫೈನಲ್‌ನಲ್ಲಿ ಖುಷಿ 4–1ರಿಂದ ಚೀನಾದ ಲುವೊ ಜಿನ್ಸಿಯು ವಿರುದ್ಧ ಗೆಲುವು ಸಾಧಿಸಿದರು.  ಚಂದ್ರಿಕಾ 54 ಕೆಜಿ ವಿಭಾಗದಲ್ಲಿ 5–0ಯಿಂದ ಉಜ್ಬೇಕಿಸ್ತಾನದ ಮುಹಮ್ಮದೋವಾ ಕುಮ್ರಿನಿಸೊ ಅವರನ್ನು ಮಣಿಸಿದರು. ಅಹಾನಾ 50 ಕೆ.ಜಿ ವಿಭಾಗದ ಪ್ರಶಸ್ತಿ ಸುತ್ತಿನಲ್ಲಿ ಆರ್‌ಎಸ್‌ಸಿ ಆಧಾರದಲ್ಲಿ ಮಾ ಜೊಂಗ್ ಹಯಾಂಗ್ ವಿರುದ್ಧ ಜಯ ಗಳಿಸಿದರು.
  • ಬೀಚ್‌ ಕುಸ್ತಿಯಲ್ಲಿ ಐದು ಪದಕ: ಬೀಚ್ ಕುಸ್ತಿಯಲ್ಲಿ ಅರ್ಜುನ್ ರುಹಿಲ್ (ಬಾಲಕರ 90 ಕೆಜಿ),  ಸಾನಿ ಸುಭಾಷ್ ಫುಲ್ಮಾಲಿ (ಬಾಲಕರ 60 ಕೆಜಿ), ಅಂಜಲಿ (ಬಾಲಕಿಯರ 55 ಕೆಜಿ) ಚಿನ್ನದ ಸಾಧನೆ ಮಾಡಿದರು.

ಪ್ರಚಲಿತ ವಿದ್ಯಮಾನಗಳು: 29ನೇ ಅಕ್ಟೋಬರ್ 2025

  • ಸರ್ಕಾರದ ನಡೆಗೆ ಕೋರ್ಟ್ಅಂಕುಶ

ಸಂದರ್ಭ: ಸರ್ಕಾರಿ ಸ್ಥಳಗಳಲ್ಲಿ 10ಕ್ಕೂ ಹೆಚ್ಚು ಜನರ ಜಮಾವಣೆಗೆ ಪೂರ್ವಾನುಮತಿ ಕಡ್ಡಾಯ ನಿಯಮ: ಸರ್ಕಾರದ ಆದೇಶವು ಸಂವಿಧಾನದ ಅಧ್ಯಾಯ IIIರಲ್ಲಿ ಪ್ರತಿಪಾದಿಸಲಾದ ಹಕ್ಕುಗಳನ್ನು, ಅದರಲ್ಲೂ ನಿರ್ದಿಷ್ಟವಾಗಿ 19(1)() ಮತ್ತು (ಬಿ) ಅಡಿಯಲ್ಲಿ ಕೊಡಮಾಡಲಾಗಿರುವ ಸ್ವಾತಂತ್ರ್ಯಗಳನ್ನು ಉಲ್ಲಂಘಿಸುತ್ತದೆಎಂ.ನಾಗಪ್ರಸನ್ನ, ನ್ಯಾಯಮೂರ್ತಿ.

  • ‘ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆ ಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವ ಮುನ್ನ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು’ ಎಂಬ ರಾಜ್ಯ ಸರ್ಕಾರದ ಆದೇಶ ಅನುಷ್ಠಾನಕ್ಕೆ ಹೈಕೋರ್ಟ್ ತಡೆ ನೀಡಿದೆ.
  • ರಾಜ್ಯ ಸಚಿವ ಸಂಪುಟದ ಈ ನಿರ್ಣಯವನ್ನು ಪ್ರಶ್ನಿಸಿ ಹುಬ್ಬಳ್ಳಿಯ, ‘ಪುನಶ್ಚೇತನ ಸೇವಾ ಸಂಸ್ಥೆ’ ಅಧ್ಯಕ್ಷ ವಿನಾಯಕ ಮತ್ತು ‘ವಿ ಕೇರ್ ಫೌಂಡೇಶನ್’ ಅಧ್ಯಕ್ಷ ಗಂಗಾಧರಯ್ಯ, ಧಾರವಾಡದ ರಾಜೀವ ಮಲ್ಹಾರ ಕುಲಕರ್ಣಿ ಹಾಗೂ ಬೆಳಗಾವಿಯ ಉಮಾ ಸತ್ಯಜಿತ್‌ ಚವಾಣ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಈ ಕುರಿತಂತೆ ಆದೇಶಿಸಿದೆ.
  • ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಅವರ ವಾದ ಆಲಿಸಿದ ನ್ಯಾಯಪೀಠ, ‘ಸರ್ಕಾರದ ಈ ಆದೇಶವು ಸಂವಿಧಾನದ 13(2)ನೇ ವಿಧಿಯ ಸ್ಪಷ್ಟ ಉಲ್ಲಂಘನೆಯಾಗಿದೆ. ಹಾಗಾಗಿ, ಈ ಆಕ್ಷೇಪಾರ್ಹ ಆದೇಶದ ಕಾರ್ಯಾಚರಣೆ ಮತ್ತು ಅದರಿಂದ ಈಗಾಗಲೇ ಹೊರಹೊಮ್ಮಿರುವ ಎಲ್ಲಾ ಪರಿಣಾಮಗಳ ಪ್ರಕ್ರಿಯೆಗಳನ್ನು ಮುಂದಿನ ವಿಚಾರಣೆ ಯವರೆಗೆ ತಡೆಹಿಡಿಯುವುದು ಸೂಕ್ತವೆಂದು ಪರಿಗಣಿಸಿ ಈ ಆದೇಶ ನೀಡಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿತು.
  • ‘ಆಕ್ಷೇಪಾರ್ಹ ಆದೇಶವು ಸಂವಿಧಾನದ 13(2)ನೇ ವಿಧಿಗೆ ವಿರುದ್ಧವಾಗಿದೆ ಮತ್ತು ಈ ಮೂಲಕ 19(1)(ಎ) ಮತ್ತು (ಬಿ) ವಿಧಿಯ ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕರಿಗೆ ಕೊಡಮಾಡಲಾಗಿರುವ ಮೂಲಭೂತ ಹಕ್ಕನ್ನು ಕಸಿದುಕೊಳ್ಳುತ್ತದೆ. ಮೂಲಭೂತ ಹಕ್ಕುಗಳನ್ನು ಕಾರ್ಯಕಾರಿ ಆದೇಶಗಳಿಂದ ಮೊಟಕುಗೊಳಿಸಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.
  • ‘ಸಾರ್ವಜನಿಕ ಸಭೆಗಳು ಮತ್ತು ಮೆರವಣಿಗೆಗಳನ್ನು ನಿಯಂತ್ರಿಸುವ ಬಗ್ಗೆ, ಕರ್ನಾಟಕ ಪೊಲೀಸ್ ಕಾಯ್ದೆ–1963ರ ಕಲಂ 31ರಲ್ಲಿ ಈಗಾಗಲೇ ವಿಶೇಷವಾಗಿ ವಿವರಿಸಲಾಗಿದೆ. ಇಂತಹ ಸಂದರ್ಭಗಳ ನಿಯಂತ್ರಣದ ಬಗ್ಗೆ ಕಲಂ 31ರ ಉಪ ವಿಭಾಗ (6)ರಲ್ಲಿ ಏನೆಲ್ಲಾ ವಿಧಾನಗಳನ್ನು ಅನುಸರಿಸ ಬೇಕೆಂಬುದನ್ನು ನಿಖರವಾಗಿ ಸೂಚಿಸಲಾಗಿದೆ. ಇಂತಹುದೊಂದು ಶಾಸನಬದ್ಧ ಕಲಂ ಅಸ್ತಿತ್ವದಲ್ಲಿ ಇರುವಾಗ ಸರ್ಕಾರದ ಹೊಸ ಆದೇಶ ಸಂವಿಧಾನ ವಿರೋಧಿ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
  • ನೋಟಿಸ್‌: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಕಾರ್ಯದರ್ಶಿ, ಡಿಜಿ-ಐಜಿಪಿ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಶನರ್ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ನವೆಂಬರ್ 17ರ ಮಧ್ಯಾಹ್ನ 2:30ಕ್ಕೆ ನಿಗದಿ ಮಾಡಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಮಲ್ಲಿಕಾರ್ಜುನ ಹಿರೇಮಠ ವಕಾಲತ್ತು ವಹಿಸಿದ್ದಾರೆ.

ಅಶೋಕ ಹಾರನಹಳ್ಳಿ ವಾದಾಂಶ

  • l ಕರ್ನಾಟಕ ರಾಜ್ಯದಾದ್ಯಂತ ನಾಗರಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳು, ನಡಿಗೆದಾರರ ಸಂಘಗಳು, ಯೋಗ ಕ್ಲಬ್‌ಗಳು ಮತ್ತು ಓಟಗಾರರ ಗುಂಪುಗಳು, ಸಾರ್ವಜನಿಕ ಸ್ಥಳಗಳಲ್ಲಿ ತಮ್ಮ ನಿಯಮಿತ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿವೆ. ಆದರೆ, ಸರ್ಕಾರ ಹೊರಡಿಸಿರುವ ಆದೇಶದ ಅನುಸಾರ ಪೂರ್ವಾನುಮತಿ ಕೊರತೆಯಿಂದಾಗಿ ಕ್ರಿಮಿನಲ್ ಕ್ರಮಕ್ಕೆ ಗುರಿಯಾಗಬಹುದು.
  • lಯಾವುದೇ ವ್ಯಕ್ತಿ ಅಥವಾ ವ್ಯಕ್ತಿಗಳಿಂದ ಕೂಡಿದ ಸಂಘ, ಸಂಸ್ಥೆಗಳು, ಅಥವಾ ವ್ಯಕ್ತಿಗಳ ಗುಂಪು ಅಥವಾ ಅವರ ಪರವಾಗಿ ಯಾವುದೇ ಇತರ ವ್ಯಕ್ತಿಯ ಸಂಸ್ಥೆಯು ಈ ಸರ್ಕಾರಿ ಆದೇಶವನ್ನು ಉಲ್ಲಂಘಿಸಿ ಸರ್ಕಾರಿ ಆಸ್ತಿಗಳಲ್ಲಿ ಯಾವುದೇ ಕಾರ್ಯಕ್ರಮ ಅಥವಾ ಮೆರವಣಿಗೆಯನ್ನು ನಡೆಸಿದರೆ, ಅಂತಹುದನ್ನು ಕಾನೂನುಬಾಹಿರ ಎಂದು ಪರಿಗಣಿಸಲಾಗುತ್ತದೆ ಮತ್ತು ಭಾರತೀಯ ನ್ಯಾಯ ಸಂಹಿತೆ–2023ರ (ಬಿಎನ್‌ಎಸ್‌) ಕಲಂಗಳ ಪ್ರಕಾರ ಸಭೆ ಸೇರುವುದನ್ನು ಕಾನೂನುಬಾಹಿರ ಸಭೆ ಎಂದು ಪರಿಗಣಿಸಲಾಗುತ್ತದೆ.
  • l ಸರ್ಕಾರಿ ಆಸ್ತಿ ಎಂದರೆ: ಸ್ಥಳೀಯ ಪ್ರಾಧಿಕಾರ ಅಥವಾ ಇಲಾಖೆ, ಮಂಡಳಿಗಳು, ಬೆಳೆಗಾರರ ಒಡೆತನದಲ್ಲಿರುವ ಮತ್ತು ನಿರ್ವಹಿಸುವ ಯಾವುದೇ ಭೂಮಿ, ಕಟ್ಟಡ, ರಚನೆ, ರಸ್ತೆ, ಉದ್ಯಾನವನ, ಆಟದ ಮೈದಾನ, ಜಲಮೂಲ ಅಥವಾ ಕರ್ನಾಟಕ ಸರ್ಕಾರದ ನಿಯಂತ್ರಣದಲ್ಲಿರುವ ಅಥವಾ ನಿಹಿತವಾಗಿರುವ, ವಹಿಸಲಾಗಿರುವ ಅಥವಾ ನಿರ್ವಹಿಸುವ ಯಾವುದೇ ಇತರ ಸ್ಥಿರ ಆಸ್ತಿ.

ಅರ್ಜಿದಾರರ ಪ್ರಶ್ನೆಯ ಮುಖ್ಯಾಂಶಗಳು 

  • l16.10.2025: ಖಾಸಗಿ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳನ್ನು ದುರುಪಯೋಗ ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ‘ಪರಿಹಾರ ಮತ್ತು ನಿಯಂತ್ರಣ’ಕ್ಕಾಗಿ ಸಂಪುಟ ಸಭೆ ಕೈಗೊಂಡ ನಿರ್ಧಾರ
  • l ಇದಕ್ಕೆ ಅನುಗುಣವಾಗಿ 18.10.2025ರಂದು ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ ಹೊರಡಿಸಿದ ಆದೇಶ.
  • l19.10.2025 ಮತ್ತು 20.10.2025ರಂದು ಕೆಲವು ಸಚಿವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಸಂಪುಟದ ನಿರ್ಧಾರವನ್ನು ಸಮರ್ಥಿಸಿಕೊಂಡರು
  • lಅದರಲ್ಲೂ ಐ.ಟಿ–ಬಿ.ಟಿ ಸಚಿವ ಪ್ರಿಯಾಂಕ್ ಖರ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶಾಖೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ ಸರ್ಕಾರದ ಜಾಗ ಬಳಸಲು ಅನುಮತಿ ನೀಡಲಾಗುವುದಿಲ್ಲ ಎಂದು ಉಚ್ಚರಿಸಿದರು. ಈ ಮಾತುಗಳಲ್ಲಿ ಅವರು ಯಾರನ್ನು ಉದ್ದೇಶಿಸಿ ಈ ನಿರ್ಧಾರ ಕೈಗೊಂಡರು ಎಂಬುದು ಸ್ಪಷ್ಟವಾಗಿದೆ
  • lಕೋರಿಕೆ ಏನು?: ಸರ್ಕಾರಿ ಸ್ಥಳಗಳಲ್ಲಿ ಅನುಮತಿಯಿಲ್ಲದ ಮೆರವಣಿಗೆ, ಸಭೆ ನಡೆಸುವುದನ್ನು ನಿರ್ಬಂಧಿಸಿ ಸರ್ಕಾರ ಇದೇ 18ರಂದು ಹೊರಡಿಸಿರುವ ಆದೇಶವು ಸಂವಿಧಾನದ 13, 14 ಮತ್ತು 19ನೇ ವಿಧಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ, ಆದೇಶವನ್ನು ರದ್ದುಗೊಳಿಸಬೇಕು

ಸರ್ಕಾರಿ ಸ್ಥಳದಲ್ಲಿ ಜನ ಜಮಾವಣೆ ಸ್ವರೂಪ

  • l‘ಮೆರವಣಿಗೆ ಅಥವಾ ರ್‍ಯಾಲಿ’ ಎಂದರೆ ಮದುವೆ ಮತ್ತು ಅಂತ್ಯಕ್ರಿಯೆ ಸಭೆಗಳು ಮತ್ತು ಚಳವಳಿಗಳನ್ನು ಹೊರತುಪಡಿಸಿ, ಸಂಗೀತ ಅಥವಾ ಇತರ ರೀತಿಯಲ್ಲಿ, ಸರ್ಕಾರಿ ಆಸ್ತಿಯ ಮೂಲಕ ಹಾದುಹೋಗುವ ಸಾಮಾನ್ಯ ಚಳವಳಿ ಅಥವಾ ಮಾರ್ಗ ಮೆರವಣಿಗೆಯನ್ನು ನಡೆಸಲು ಸಾಮಾನ್ಯ ಉದ್ದೇಶ ಹೊಂದಿರುವ ಅಥವಾ ಯಾವುದೇ ಇತರ ಚಟುವಟಿಕೆಯೊಂದಿಗೆ ಯಾವುದೇ ಹೆಸರಿನಿಂದ ಕರೆಯಲಾಗುವ 10ಕ್ಕೂ ಹೆಚ್ಚು ಜನರ ಸಭೆ.
  • lಪೂರ್ವಾನುಮತಿ ಇಲ್ಲದೆ 10ಕ್ಕೂ ಹೆಚ್ಚು ವ್ಯಕ್ತಿಗಳು ಸಭೆ ಸೇರುವುದನ್ನು ಸರ್ಕಾರದ ಹೊಸ ಆದೇಶ ನಿಷೇಧಿಸುತ್ತದೆ. ಅಂತಹ ಸಭೆಯನ್ನು ಕಾನೂನುಬಾಹಿರ ಸಭೆ ಎಂದು ಘೋಷಿಸುತ್ತದೆ. ಇದರಿಂದಾಗಿ ಈ ರೀತಿ ಸಭೆಯಲ್ಲಿ ಭಾಗವಹಿಸು ವವರು ಬಿಎನ್‌ಎಸ್‌ ಕಾಯ್ದೆಯ ಅಡಿಯಲ್ಲಿ ದಂಡದ ಪರಿಣಾಮಗಳಿಗೆ ಗುರಿಯಾಗುತ್ತಾರೆ. ಅನುಮತಿ ಉಲ್ಲಂಘಿಸಿ ನಡೆಸುವ ಅಪರಾಧಗಳನ್ನು ತಡೆಗಟ್ಟಲು ಅಥವಾ ವಿಚಾರಣೆಗೆ ಒಳಪಡಿಸಲು ನ್ಯಾಯವ್ಯಾಪ್ತಿಯ ಅನುಸಾರ ಆದೇಶವು ಪೊಲೀಸರಿಗೆ ಅಧಿಕಾರ ನೀಡಲಾಗಿದೆ.
  • 8ನೇ ವೇತನ ಆಯೋಗ: ಸಂಪುಟ ಒಪ್ಪಿಗೆ : 2026 ಜನವರಿ 1ರಿಂದ ಜಾರಿ ಸಾಧ್ಯತೆ

ಸಂದರ್ಭ: 8ನೇ ವೇತನ ಆಯೋಗದ ಶಿಫಾರಸು ಜಾರಿಯು ಮಧ್ಯಂತರ ವರದಿ ಬಂದ ನಂತರ ಖಚಿತವಾಗುತ್ತದೆ. ಆದರೂ, ಇದು 2026 .1ರಿಂದಲೇ ಜಾರಿಗೆ ಬರಬಹುದುಅಶ್ವಿನಿ ವೈಷ್ಣವ್, ಕೇಂದ್ರ ಸಚಿವ 8ನೇ ವೇತನ ಆಯೋಗ ರಚನೆಯ ನಿಯಮ ಮತ್ತು ನಿಬಂಧನೆಗಳಿಗೆ (ಟಿಒಆರ್‌) ಕೇಂದ್ರ ಸಚಿವ ಸಂಪುಟವು ಮಂಗಳವಾರ ಅನುಮೋದನೆ ನೀಡಿದೆ.

  • ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್‌ ದೇಸಾಯಿ ಅಧ್ಯಕ್ಷತೆಯಲ್ಲಿ 8ನೇ ವೇತನ ಆಯೋಗ ರಚಿಸಲಾಗಿದೆ. ಆಯೋಗಕ್ಕೆ ತಾತ್ವಿಕ ಒಪ್ಪಿಗೆ ಲಭಿಸಿ ಒಂಬತ್ತು ತಿಂಗಳಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿನ ಕೇಂದ್ರ ಸಚಿವ ಸಂಪುಟ ‘ಟಿಒಆರ್‌ಗೆ’  ಅನುಮೋದನೆ ನೀಡಿದೆ.
  • ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ.
  • ಆಯೋಗ ರಚನೆಯಾದ ದಿನದಿಂದ 18 ತಿಂಗಳ ಒಳಗಾಗಿ ಅಂತಿಮ ವರದಿ ಸಲ್ಲಿಸಬೇಕಿದೆ. ಆಯೋಗದ ಶಿಫಾರಸುಗಳು 2026ರ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಯಾಗುವ ಸಾಧ್ಯತೆ ಇದೆ.
  • ‘ಕೇಂದ್ರ ಸರ್ಕಾರದ ಸುಮಾರು 50 ಲಕ್ಷದಷ್ಟು ನೌಕರರಿಗೆ, 69 ಲಕ್ಷದಷ್ಟು ಪಿಂಚಣಿದಾರರಿಗೆ 8ನೇ ವೇತನ ಆಯೋಗದ ಶಿಫಾರಸಿನ ಪ್ರಯೋಜನ ಗಳು ದೊರೆಯಲಿವೆ. ಆಯೋಗವು ಕೇಂದ್ರ ಸರ್ಕಾರ ಮತ್ತು ಖಾಸಗಿ ವಲಯದ ನೌಕರರಿಗೆ ಈಗಿರುವ ವೇತನ, ಭತ್ಯೆ ಮತ್ತಿತರೆ ಸೌಲಭ್ಯಗಳು ಹಾಗೂ ದೇಶದ ಆರ್ಥಿಕ ಪರಿಸ್ಥಿತಿ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಲಭ್ಯ ಇರುವ ಸಂಪನ್ಮೂಲಗಳನ್ನು ಗಮನಕ್ಕೆ ತೆಗೆದುಕೊಳ್ಳಲಿದೆ. ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಅಗತ್ಯ ಬದಲಾವಣೆಗಳನ್ನು ಶಿಫಾರಸು ಮಾಡಲಿದೆ. 
  • 8ನೇ ವೇತನ ಆಯೋಗದಲ್ಲಿ ಬೆಂಗಳೂರಿನ ಐಐಎಂನ ಪ್ರೊ. ಪುಲಕ್‌ ಘೋಷ್‌  ಅರೆಕಾಲಿಕ ಸದಸ್ಯರಾಗಿ ಹಾಗೂ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್‌ ಜೈನ್ ಅವರು ಸದಸ್ಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.
  • ರಂಜನಾ ಪ್ರಕಾಶ್‌ ದೇಸಾಯಿ ಅವರು ಭಾರತೀಯ ಪತ್ರಿಕಾ ಮಂಡಳಿಯ ಅಧ್ಯಕ್ಷೆಯೂ ಆಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರ ಪುನರ್‌ವಿಂಗಡಣಾ ಆಯೋಗ ಮತ್ತು ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯ ತಜ್ಞರ ಸಮಿತಿ ಅಧ್ಯಕ್ಷೆಯಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾದ ನಂತರ ಅವರು ವಹಿಸಿಕೊಳ್ಳುತ್ತಿರುವ ನಾಲ್ಕನೆಯ ಮಹತ್ವದ ಹೊಣೆಗಾರಿಕೆ ಇದಾಗಿದೆ.

ರಸಗೊಬ್ಬರ ಸಬ್ಸಿಡಿ ಏರಿಕೆ

  • 2025–26ನೇ ಸಾಲಿನ ಹಿಂಗಾರು ಹಂಗಾಮಿಗೆ ಯೂರಿಯಾ ಹೊರತು ಪಡಿಸಿ, ರಂಜಕ –ಪಿ ಮತ್ತು ಗಂಧಕ–ಎಸ್‌ (ಡಿಎಪಿ, ಎಂಒಪಿ, ಎಸ್‌ಎಸ್‌ಪಿ, ಎನ್‌ಪಿಕೆ, ಕಾಂಪ್ಲೆಕ್ಸ್‌) ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ₹37,952 ಕೋಟಿಗೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
  • ಹಿಂಗಾರು ಹಂಗಾಮು ಅಕ್ಟೋಬರ್‌ 10ರಿಂದ ಆರಂಭಗೊಂಡಿದ್ದು, ಮುಂದಿನ ವರ್ಷದ ಮಾರ್ಚ್‌ 31ಕ್ಕೆ ಕೊನೆಗೊಳ್ಳಲಿದೆ. 2025ರ ಮುಂಗಾರು ಹಂಗಾಮಿನ ರಸಗೊಬ್ಬರ ಸಬ್ಸಿಡಿಗೆ ಹೋಲಿಸಿದರೆ ಈ ಮೊತ್ತವು ₹736 ಕೋಟಿಯಷ್ಟು ಹೆಚ್ಚಿದೆ.
  • ಕೆ.ಜಿಗೆ ₹43.60 ಇದ್ದ ರಂಜಕದ ಸಬ್ಸಿಡಿಯು ಈಗ ₹47.96ಕ್ಕೆ ಏರಿಕೆಯಾಗಿದೆ. ಗಂಧಕದ ಸಬ್ಸಿಡಿ ಕೆ.ಜಿಗೆ ₹1.77ರಿಂದ ₹2.87ಕ್ಕೆ ಏರಿಕೆಯಾಗಿದೆ. ನೈಟ್ರೊಜನ್‌ ಮತ್ತು ಪೊಟ್ಯಾಶ್‌ ರಸಗೊಬ್ಬರದ ಸಬ್ಸಿಡಿಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇವು ಕ್ರಮವಾಗಿ ಕೆ.ಜಿಗೆ ₹43.02 ಮತ್ತು ₹2.38 ಇವೆ. ಡಿಎಪಿ ಮತ್ತು ಟಿಎಸ್‌ಪಿ ರಸಗೊಬ್ಬರದ ದರದಲ್ಲಿ ಸರ್ಕಾರ ಪರಿಷ್ಕರಣೆ ಮಾಡಿಲ್ಲ.

10 ವರ್ಷಗಳಿಗೊಮ್ಮೆ ಶಿಫಾರಸು ಜಾರಿ

  • ಸಾಮಾನ್ಯವಾಗಿ ವೇತನ ಆಯೋಗದ ಶಿಫಾರಸುಗಳನ್ನು ಪ್ರತಿ 10 ವರ್ಷಗಳಿಗೊಮ್ಮೆ ಜಾರಿಗೊಳಿಸಲಾಗುತ್ತದೆ. ಇದೇ ಸಂಪ್ರದಾಯದಂತೆ 8ನೇ ವೇತನ ಆಯೋಗದ ಶಿಫಾರಸುಗಳು 2026ರ ಜ.1ರಿಂದ ಜಾರಿಗೆ ಬರಲಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
  • 7ನೇ ವೇತನ ಆಯೋಗವನ್ನು 2014ರ ಫೆಬ್ರುವರಿಯಲ್ಲಿ ರಚಿಸಲಾಗಿತ್ತು. ಆಯೋಗದ ಶಿಫಾರಸುಗಳು 2016ರ ಜನವರಿ 1ರಿಂದ ಜಾರಿಗೆ ಬಂದಿದ್ದವು.
  • ಆಂಧ್ರಕ್ಕೆ ಅಪ್ಪಳಿಸಿದಮೊಂಥಾ

ಸಂದರ್ಭ: ಮೊಂಥಾ ಚಂಡಮಾರುತವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಂಧ್ರ ಪ್ರದೇಶದ ಮಚಲಿಪಟ್ಟಣ ಮತ್ತು ಕಾಕಿನಾಡ ನಡುವೆ ರಾತ್ರಿ 7 ಹೊತ್ತಿಗೆ ಅಪ್ಪಳಿಸಿದೆ. ವೇಳೆ ಗಾಳಿಯ ವೇಗವು ಗಂಟೆಗೆ 110 ಕಿ.ಮೀನಷ್ಟು ಇತ್ತು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

  • ‘ರಾತ್ರಿ 7.23ರ ಸುಮಾರಿಗೆ ಚಂಡಮಾರುತ ಅಪ್ಪಳಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, ನಂತರದ 6 ತಾಸು ಮುಂದುವರಿದಿದೆ’ ಎಂದು ಇಲಾಖೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಂಡಿದೆ. ಆಂಧ್ರ ಪ್ರದೇಶ ಮತ್ತು ಒಡಿಶಾದ ಮೇಲೆಯೇ ಚಂಡ ಮಾರುತವು ಹೆಚ್ಚು ಪರಿಣಾಮ ಬೀರಲಿದೆ.
  • ‘ಯಾವುದೇ ಸಾವು ನೋವು ಸಂಭವಿಸದಂತೆ ನೋಡಿಕೊಳ್ಳುವುದೇ ಸರ್ಕಾರದ ಗುರಿ’ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್‌ ಚರಣ್ ಮಾಂಝಿ ಹೇಳಿದರು. ತೀವ್ರ ಮಳೆಯಾಗುವ ಪ್ರದೇಶಗಳು, ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸುವ ಕಾರ್ಯವನ್ನು ಈ ರಾಜ್ಯಗಳಲ್ಲಿ ನಡೆಸಲಾಗುತ್ತಿದೆ. ಶಾಲೆಗಳು, ಅಂಗನ ವಾಡಿ‌ಗಳಿಗೆ ಅ.30ರವರೆಗೆ ಇಲ್ಲಿ ರಜೆ ಘೋಷಿಸಲಾಗಿದೆ.

ಒಡಿಶಾ: ಭೂಕುಸಿತ

  • ‘ಮೊಂಥಾ’ದಿಂದ ಒಡಿಶಾದ ಕರಾವಳಿ ಮತ್ತು ದಕ್ಷಿಣ ಭಾಗದ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿದೆ. ಹಲವು ಮರಗಳು ಧರೆಗೆ ಉರುಳಿದ್ದು, ಕೆಲವು ಮನೆಗಳು ನೆಲಸಮವಾಗಿವೆ.
  • ಗಜಪತಿ ಜಿಲ್ಲೆಯ ಅನಕ ಗ್ರಾ.ಪಂ.ನಲ್ಲಿ ಗುಡ್ಡಗಳಿಂದ ದೊಡ್ಡ ಗಾತ್ರದ ಬಂಡೆಗಳು ರಸ್ತೆಗೆ ಉರುಳಿವೆ. ಇದರಿಂದ ಈ ಭಾಗದ ಐದು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಇದೇ ಜಿಲ್ಲೆಯ ಮತ್ತೊಂದು ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಭೂಕುಸಿತ ವಾಗಿದೆ. ಇದೇ ಜಿಲ್ಲೆಯಲ್ಲಿ ಮಣ್ಣಿನ ಮನೆಯೊಂದು ಕುಸಿದು ಬಿದ್ದು, ವ್ಯಕ್ತಿಗೆ ಗಾಯವಾಗಿದೆ.
  • ಆಂಧ್ರದ ನೆಲ್ಲೂರು ಜಿಲ್ಲೆಯ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಮಳೆ ಸುರಿದಿದೆ. ಒಡಿಶಾದ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಮೊಂಥಾ ಪರಿಣಾಮವು  ರಾಜಸ್ಥಾನದವರೆಗೂ ಹಬ್ಬಿಕೊಂಡಿದ್ದು, ಬೂಂದಿ ಜಿಲ್ಲೆಯಲ್ಲಿ 13 ಸೆಂ.ಮೀ ಮಳೆ ಸುರಿದಿದೆ. ಅ.13ರಂದು ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  • ಆಂಧ್ರದಲ್ಲಿ ಬೆಳೆ ನಾಶ: ‘ತೀವ್ರ ಮಳೆಯ ಕಾರಣ ಆಂಧ್ರಪ್ರದೇಶದ 38 ಸಾವಿರ ಹೆಕ್ಟೇರ್‌ ವಿಸ್ತೀರ್ಣದಲ್ಲಿ ಬೆಳೆ ನಾಶವಾಗಿದೆ ಮತ್ತು 1.38 ಲಕ್ಷ ಹೆಕ್ಟೇರ್‌ ನಲ್ಲಿನ ತೋಟಗಾರಿಕಾ ಬೆಳೆ ನಾಶವಾಗಿದೆ’ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.
  • ನೆರೆ ರಾಜ್ಯಗಳ ಜವಳಿ ನೀತಿ ಅಧ್ಯಯನ

ಸಂದರ್ಭ: ಮಧ್ಯಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಜವಳಿ ನೀತಿಯನ್ನು ಅಧ್ಯಯನ ಮಾಡಿ, ಸಮಗ್ರ ವರದಿ ಸಿದ್ಧಪಡಿಸಲು ಜವಳಿ ಸಚಿವ ಶಿವಾನಂದ ಪಾಟೀಲ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

  • ಕರ್ನಾಟಕ ನೂತನ ಜವಳಿ ಮತ್ತು ಸಿದ್ದ ಉಡುಪು ನೀತಿ ಅನುಷ್ಠಾನ ಕುರಿತ ಉನ್ನತ ಮಟ್ಟದ ಸಬಲೀಕರಣ ಸಮಿತಿ ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದ ಅವರು, ‘ನೆರೆ ರಾಜ್ಯಗಳ ಜವಳಿ ಉದ್ಯಮಿಗಳನ್ನು ಆಕರ್ಷಿಸಲು ಅಧ್ಯಯನ ವರದಿ ಅಗತ್ಯವಿದೆ. ಇತರೆ ರಾಜ್ಯಗಳು ಉದ್ಯಮಿಗಳಿಗೆ ಯಾವ ಸವಲತ್ತುಗಳನ್ನು ನೀಡುತ್ತಿವೆ ಎಂಬ ಮಾಹಿತಿಯ ಆಧಾರದಲ್ಲಿ ರಾಜ್ಯದ ನೀತಿಗಳನ್ನು ಬದಲಾವಣೆ ಮಾಡಲಾಗುವುದು’ ಎಂದರು.
  • ‘ಬಾಂಗ್ಲಾದೇಶದ ಪ್ರತಿಕೂಲ ಪರಿಸ್ಥಿತಿ ಪರಿಣಾಮ ಅಲ್ಲಿನ ಜವಳಿ ಉದ್ಯಮ ಬೇರೆಡೆಗೆ ಸ್ಥಳಾಂತರವಾಗುತ್ತಿದೆ. ಅಲ್ಲಿನ ಉದ್ಯಮಿಗಳನ್ನು ಕರ್ನಾಟಕಕ್ಕೆ ಸೆಳೆಯಲು ಯೋಜನೆ ರೂಪಿಸಲಾಗುತ್ತಿದೆ. ತಮಿಳುನಾಡಿನಲ್ಲಿ ಉದ್ಯಮ ಸುಸ್ಥಿತಿಯಲ್ಲಿದೆ. ಬಹುತೇಕ ಉದ್ಯಮಿಗಳು ತಮಿಳುನಾಡಿನಲ್ಲಿ ಹೂಡಿಕೆಗೆ ಆಸಕ್ತಿ ತೋರುತ್ತಿದ್ದಾರೆ. ಅವರನ್ನು ಕರ್ನಾಟಕ ರಾಜ್ಯದತ್ತ ಸೆಳೆಯಲು ಏನು ಮಾಡಬೇಕು ಎನ್ನುವ ಕುರಿತು ಅಧ್ಯಯನ ಮಾಡಬೇಕಿದೆ. ಮಹಾರಾಷ್ಟ್ರ ಸರ್ಕಾರ ವಿದ್ಯುತ್‌ ಬಿಲ್‌ನಲ್ಲೇ ಸಹಾಯಧನ ನೀಡುತ್ತಿದೆ. ನಮ್ಮಲ್ಲಿಯೂ ಈ ಪದ್ಧತಿ ಅನುಸರಿಸಿದರೆ ಮಹಾರಾಷ್ಟ್ರದ ಜವಳಿ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಸಿದ್ಧರಿದ್ದಾರೆ’ ಎಂದು ಮಾಹಿತಿ ನೀಡಿದರು.

ಪಿಎಂ ಮಿತ್ರ ಪಾರ್ಕ್ಗೆ ಸಾವಿರ ಎಕರೆ

  • ‘ಪಿಎಂ ಮಿತ್ರ ಪಾರ್ಕ್‌’ ಯೋಜನೆಗೆ ರಾಜ್ಯ ಸರ್ಕಾರ ಒಂದು ಸಾವಿರ ಎಕರೆ ಭೂಮಿ ಜಮೀನು ನೀಡಿದ್ದು, ಮೂಲಸೌಕರ್ಯ ಕಲ್ಪಿಸಲು ಅನುದಾನ ಬಿಡುಗಡೆ ಮಾಡಿದೆ. ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಸೂಚಿಸಲಾಗಿದೆ’ ಎಂದು ಶಿವಾನಂದ ಪಾಟೀಲ ಹೇಳಿದರು.
  • ‘ನೂರಾರು ವರ್ಷಗಳಿಂದ ಮನೆಯಲ್ಲೇ ಕೈಮಗ್ಗ ಹಾಕಿಕೊಂಡವರಿಗೆ, ಪೂರ್ಣ ಪ್ರಮಾಣದಲ್ಲಿ ಇರುವ ನೇಕಾರರ ಕಾಲೊನಿಗಳಿಗೆ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿನಾಯಿತಿ ಕೊಡಿಸುವ ಪ್ರಯತ್ನ ಆಗಬೇಕಿದೆ. ಬೆಂಗಳೂರಿನ ಕಬ್ಬನ್‌ ಪೇಟೆ, ಕಾಟನ್‌ ಪೇಟೆ ಮತ್ತಿತರ ಕಡೆ ಇರುವ ನೇಕಾರರಿಗೆ ಸಮಸ್ಯೆಯಾಗಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳಲಾಗುತ್ತಿದೆ’ ಎಂದು ಹೇಳಿದರು.
  • ವಿಮಾನ ತಯಾರಿಕೆ: ರಷ್ಯಾಎಚ್ಎಎಲ್ಒಪ್ಪಂದಕ್ಕೆ ಸಹಿ

ಸಂದರ್ಭ: ಪ್ರಾದೇಶಿಕ ಸಂಪರ್ಕ ಯೋಜನೆಗಳ ವಿಸ್ತರಣೆಯೊಂದಿಗೆ ಭಾರತದಲ್ಲಿ ವಿಮಾನಯಾನ ಮಾರುಕಟ್ಟೆ ವೃದ್ಧಿಯಾಗುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನದ ವಾಣಿಜ್ಯ ತಯಾರಿಕೆಗಾಗಿ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೊನಾಟಿಕ್ಸ್ಲಿಮಿಟೆಡ್‌(ಎಚ್ಎಲ್‌), ರಷ್ಯಾದ ಪ್ರಮುಖ ವಾಣಿಜ್ಯ ವಿಮಾನ ಉತ್ಪಾದಕ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

  • ಮಾಸ್ಕೊದ ಯುನೈಟೆಡ್ ಏರ್ ಕಾರ್ಪೊರೇಷನ್‌ನೊಂದಿಗೆ ಎಚ್‌ಎಎಲ್‌ ಸಂಸ್ಥೆ ಸೋಮವಾರ ಈ ಒಪ್ಪಂದಕ್ಕೆ ಸಹಿ ಹಾಕಿದೆ. ಎಚ್‌ಎಎಲ್‌ ಸಿಎಂಡಿ ಡಿ.ಕೆ ಸುನೀಲ್ ಮತ್ತು ಯುಎಸಿ ಕಂಪನಿಯ ಮಹಾನಿರ್ದೇಶಕ ವಾಡಿಮ್ ಬಡೇಖಾ ಅವರ ಸಮ್ಮುಖದಲ್ಲಿ ಎಚ್‌ಎಲ್‌ನ ಪ್ರಭಾತ್ ರಂಜನ್ ಮತ್ತು ಯುಎಸಿ ಕಂಪನಿಯ ಒಲೆಗ್‌ ಬೊಗೊಮೊಲೊವ್‌ ಈ ಒಪ್ಪಂದಕ್ಕೆ ಸಹಿ ಹಾಕಿದರು.
  • ಈ ಒಪ್ಪಂದದ ಪ್ರಕಾರ ಎಚ್‌ಎಲ್‌, ದೇಶೀಯ ಗ್ರಾಹಕರಿಗಾಗಿ ಡಬ್ಬಲ್‌ ಎಂಜಿನ್ ಹೊಂದಿರುವ, ಸಣ್ಣ ಗಾತ್ರದ, ಎಸ್‌–ಜೆ 100(SJ-100) ವಿಮಾನವನ್ನು ತಯಾರಿಸಲಿದೆ. ಈಗಾಗಲೇ 200 ಕ್ಕೂ ಹೆಚ್ಚು ಎಸ್‌ಜೆ–100 ವಿಮಾನಗಳನ್ನು ತಯಾರಿಸಲಾಗಿದ್ದು, ವಿಶ್ವದ 16 ಕ್ಕೂ ಹೆಚ್ಚು ವಾಣಿಜ್ಯ ವಿಮಾನಯಾನ ಕಂಪನಿಗಳು ಇವುಗಳನ್ನು ಬಳಸುತ್ತಿವೆ.
  • ‘ಎಸ್‌ಜೆ–100 ವಿಮಾನವು, ಭಾರತದಲ್ಲಿ ‘ಉಡಾನ್‌’ ಯೋಜನೆಯಡಿಯಲ್ಲಿ ಕಡಿಮೆ ದೂರ ಸಂಪರ್ಕದಲ್ಲಿ ಗೇಮ್ ಚೇಂಜರ್ ಆಗಲಿದೆ’ ಎಂದು ಎಚ್‌ಎಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.
  • ಈ ವಿಮಾನವು ರಷ್ಯಾದ ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿದ್ದು, ಅಲ್ಲಿನ ಒಂಬತ್ತು ವಿಮಾನಯಾನ ಸಂಸ್ಥೆಗಳು ಈ ಇವುಗಳನ್ನು ಬಳಕೆ ಮಾಡುತ್ತಿವೆ. ಇದು ಗರಿಷ್ಠ 103 ಆಸನಗಳ ಸಾಮರ್ಥ್ಯ ವನ್ನು ಹೊಂದಿದ್ದು, 3500 ಕಿ.ಮೀ.ಗಿಂತ ಹೆಚ್ಚಿನ ವ್ಯಾಪ್ತಿಯ ರೇಂಜ್‌ ಹೊಂದಿದೆ.
  • ‘ಎಸ್‌ಜೆ–100 ವಿಮಾನಗಳ ತಯಾರಿಕೆಯು ಭಾರತೀಯ ವಾಯುಯಾನ ಉದ್ಯಮದ ಇತಿಹಾಸದಲ್ಲಿ ಹೊಸ ಅಧ್ಯಾಯದ ಆರಂಭದ ಸೂಚನೆಯಾಗಿದೆ. ಇದು ಖಾಸಗಿ ವಲಯವನ್ನು ಬಲಪಡಿಸುತ್ತದೆ. ಮಾತ್ರವಲ್ಲ, ವಾಯುಯಾನ ಉದ್ಯಮದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತದೆ’ ಎಂದು ಎಚ್‌ಎಎಲ್‌ ಹೇಳಿದೆ.
  • ಇಸ್ರೇಲ್‌–ಹಮಾಸ್ಮಧ್ಯೆ ಮತ್ತೆ ಸಂಘರ್ಷ

ಸಂದರ್ಭ: ಗಾಜಾ ಮೇಲೆ ಕೂಡಲೇಪ್ರಬಲವಾದ ದಾಳಿ ನಡೆಸಲು ಸೇನೆಗೆ ಆದೇಶ ನೀಡಿರುವುದಾಗಿ ಇಸ್ರೇಲ್ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹೇಳಿದ್ದಾರೆ.

  • ಇದಕ್ಕೆ ಪ್ರತಿಕ್ರಿಯಿಸಿರುವ ಹಮಾಸ್‌, ಒತ್ತೆಯಾಳುಗಳ ಮೃತದೇಹ ಹಸ್ತಾಂತರ ಪ್ರಕ್ರಿಯೆಯನ್ನು ವಿಳಂಬ ಮಾಡುವುದಾಗಿ ಹೇಳಿದೆ.
  • ಈ ಹಠಾತ್‌ ಬೆಳವಣಿಗೆಯು ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆದಿದ್ದ ಇಸ್ರೇಲ್‌–ಹಮಾಸ್‌ ಕದನ ವಿರಾಮ ಒಪ್ಪಂದ ಮುರಿಯಲು ಕಾರಣವಾಗುವ ಸಾಧ್ಯತೆ ಇದೆ.  ಗಾಜಾ ನಗರ ಮತ್ತು ದೀರ್‌ ಅಲ್‌–ಬಲಾಹ್‌ ಸೇರಿದಂತೆ ಗಾಜಾದ ಹಲವೆಡೆ ಟ್ಯಾಂಕರ್‌ ದಾಳಿ ಮತ್ತು ಸ್ಫೋಟದ ಸದ್ದು ಕೇಳಿಬಂದಿದೆ.
  • ಹಮಾಸ್‌ ಬಂಡುಕೋರರು ದಕ್ಷಿಣ ಗಾಜಾದಲ್ಲಿ ಇಸ್ರೇಲ್‌ ಸೇನಾಪಡೆಗಳ ಮೇಲೆ ದಾಳಿ ನಡೆಸಿದ್ದಾಗಿ ಇಸ್ರೇಲ್ ಅಧಿಕಾರಿಗಳು ಹೇಳಿದ ಬೆನ್ನಲ್ಲೇ ನೆತನ್ಯಾಹು ಅವರು ಈ ಆದೇಶ ನೀಡಿದ್ದಾರೆ.
  • ಬನ್ನೇರುಘಟ್ಟ ಉದ್ಯಾನದಲ್ಲಿ ಸೌರ ಪಾರ್ಕ್

ಸಂದರ್ಭ: ಪ್ರಾಣಿಗಳ ತಾಣದಲ್ಲಿ ವಿದ್ಯುತ್ಸ್ವಾವಲಂಬಿ ಯೋಜನೆ ಜಾರಿಗೆ ಸಿದ್ಧತೆ: ಬನ್ನೇರುಘಟ್ಟ ಜೈವಿಕ ಉದ್ಯಾನದ ಭವಿಷ್ಯದ ಇಂಧನ ಅಗತ್ಯವನ್ನು ಸೌರ ವಿದ್ಯುತ್ನಿಂದಲೇ ಪೂರೈಸುವ ಯೋಜನೆಗೆ ಮುಂದಿನ ವಾರ ಚಾಲನೆ ನೀಡಲಾಗುವುದುಈಶ್ವರ ಬಿ. ಖಂಡ್ರೆ, ಅರಣ್ಯ ಸಚಿವ.

  • ರಾಜಧಾನಿಯ ಹೊರವಲಯದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವು ವಿದ್ಯುತ್ ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ‌ಸೌರ ವಿದ್ಯುತ್ ಸ್ಥಾವರ ಸ್ಥಾಪಿಸಲು ಮುಂದಾಗಿದೆ.
  • ‌ಸೌರ ವಿದ್ಯುತ್‌ ಒದಗಿಸುವ ವಾಹನ ಮತ್ತು ಉಪಕರಣಗಳನ್ನು ಮೃಗಾಲಯಗಳಲ್ಲಿ ಬಳಸುತ್ತಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದಿಸುವ ಘಟಕ ಇರಲಿಲ್ಲ. ಇದಕ್ಕಾಗಿ ಯೋಜನೆ ರೂಪಿಸಲಾಗಿದ್ದು, ಮುಂದಿನ ವಾರ ಸೌರ ವಿದ್ಯುತ್‌ ಘಟಕಕ್ಕೆ ಚಾಲನೆ ಸಿಗಲಿದೆ. ಐದಾರು ತಿಂಗಳಲ್ಲಿ ಸುಸಜ್ಜಿತ ವಿದ್ಯುತ್‌ ಘಟಕ ಸೇವೆಗೆ ಅಣಿಯಾಗಲಿದೆ. ಬಳಕೆ ಪ್ರಮಾಣ ನೋಡಿಕೊಂಡು ಘಟಕದ ಸಾಮರ್ಥ್ಯ ಹೆಚ್ಚಿಸಲು ಬನ್ನೇರುಘಟ್ಟ ಜೈವಿಕ ಉದ್ಯಾನದ ಆಡಳಿತ ಮಂಡಳಿ ನಿರ್ಧರಿಸಿದೆ.
  • ಸಾಮಾಜಿಕ ಹೊಣೆಗಾರಿಕೆ ನಿಧಿ ( ಸಿಎಸ್ಆರ್‌) ಬಳಸಿಕೊಂಡು ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಇದರ ಅನುಷ್ಠಾನದ ಜವಾಬ್ದಾರಿ ಯನ್ನು ಐಸಿಐಸಿಐ ಫೌಂಡೇಷನ್‌ ಹೊತ್ತುಕೊಂಡಿದೆ. ಉದ್ಯಾನದ ಒಳಗೆ ಮೂರು ಎಕರೆ ವಿಶಾಲ ಪ್ರದೇಶದಲ್ಲಿ ವಿದ್ಯುತ್‌ ಉತ್ಪಾದನೆ ಘಟಕವನ್ನು ಆರಂಭಿಸಲಾಗುತ್ತಿದೆ.
  • ಬನ್ನೇರುಘಟ್ಟ ಜೈವಿಕ ಉದ್ಯಾನವೇ ವಿದ್ಯುತ್‌ ವಿತರಣೆಗೆ ಬೇಕಾದ ಗ್ರಿಡ್‌ ಅನ್ನು ನಿರ್ಮಿಸಿಕೊಳ್ಳಲಿದೆ. ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ) ವಿದ್ಯುತ್‌ ಬಳಕೆ, ಹೆಚ್ಚುವರಿ ವಿದ್ಯುತ್‌ ಸರಬರಾಜಿಗೆ ಬೇಕಾದ ಅನುಮತಿ ಪಡೆಯುವ ಹೊಣೆ ಹೊತ್ತುಕೊಳ್ಳಲಿದೆ.
  • ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಅವಿಭಾಜ್ಯ ಅಂಗವಾಗಿ ರುವ ಜೈವಿಕ ಉದ್ಯಾನವು 2002ರಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರಮುಖ ಪ್ರವಾಸಿ ಕೇಂದ್ರವಾಗಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವು 780 ಹೆಕ್ಟೇರ್ ಪ್ರದೇಶದಲ್ಲಿ ಹರಡಿಕೊಂಡಿದೆ.
  • ಉದ್ಯಾನಗಳ ನಿರ್ವಹಣೆ ಸಹಿತ ಹಲವು ಉದ್ದೇಶಗಳಿಗೆ ವಿದ್ಯುತ್‌ ಬಳಸಲಾಗುತ್ತಿದೆ. ಪ್ರತಿವರ್ಷ ವಿದ್ಯುತ್‌ ನಿರ್ವಹಣೆಗೆ ₹40 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಬೆಸ್ಕಾಂನಿಂದಲೇ ವಿದ್ಯುತ್‌ ಅನ್ನು ಪಡೆದುಕೊಳ್ಳಲಾಗುತ್ತಿದೆ. ತುರ್ತು ಬಳಕೆಗೆ ಜನರೇಟರ್ ವ್ಯವಸ್ಥೆಯಿದೆ.
  • ಸೌರ ವಿದ್ಯುತ್‌ ಘಟಕ ಸ್ಥಾಪನೆಯಾದರೆ ವಿದ್ಯುತ್‌ ವೆಚ್ಚ ಉಳಿತಾಯವಾಗಲಿದೆ. ಅಲ್ಲದೇ ಹೆಚ್ಚುವರಿ ವಿದ್ಯುತ್‌ ಅನ್ನು ಮಾರಾಟ ಮಾಡಿ ಅದರಲ್ಲೂ ಆದಾಯ ಪಡೆಯುವ ಉದ್ಧೇಶ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
  • ‘ದೇಶದ ಯಾವುದೇ ಜೈವಿಕ ಉದ್ಯಾನ, ಮೃಗಾಲಯದಲ್ಲೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೌರ ವಿದ್ಯುತ್‌ ಉತ್ಪಾದನೆ ಮಾಡುವ ಘಟಕವಿಲ್ಲ. ಅಗತ್ಯ ನೋಡಿಕೊಂಡು ಯೋಜನೆ ವಿಸ್ತರಿಸಲಾಗುವುದು’ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಎ.ವಿ. ಸೂರ್ಯಸೇನ್‌ ತಿಳಿಸಿದರು.

ಮೆಗಾವಾಟ್ ಮೊದಲ ಕೇಂದ್ರ

  • ಚೆನ್ನೈನ ವ್ಯಾಂಡಲೂರ್‌ ಮೃಗಾಲಯದಲ್ಲಿ ಸೌರ ವಿದ್ಯುತ್‌ ಉತ್ಪಾದನೆ ಘಟಕ ವಿದ್ದರೂ ಅಲ್ಲಿ ಬರೀ 100 ಕಿಲೋ ವಾಟ್‌ ವಿದ್ಯುತ್‌ ಮಾತ್ರ ಉತ್ಪಾದಿಸಲಾಗುತ್ತಿದೆ. ಅದನ್ನು ಬಿಟ್ಟರೆ ಭಾರತದಲ್ಲಿರುವ ಪ್ರಮುಖ ಮೃಗಾಲಯ ಹಾಗೂ ಜೈವಿಕ ಉದ್ಯಾನಗಳಲ್ಲಿ 1 ಮೆಗಾವಾಟ್‌ ಸೌರ ವಿದ್ಯುತ್ ಉತ್ಪಾದಿಸುವ ಮೊದಲ ಕೇಂದ್ರವೆಂಬ ಹೆಗ್ಗಳಿಕೆಗೆ ಬನ್ನೇರುಘಟ್ಟ ಉದ್ಯಾನ ಪಾತ್ರವಾಗಲಿದೆ.
  • ಸೋಲಿಗೆ ಸೋಲದ ಸುಸುಮು: ನೊಬೆಲ್ವಿಜ್ಞಾನಿಗಳು 3

ಸಂದರ್ಭ: ಅದು ಯಾವುದೇ ಕ್ಷೇತ್ರವಿರಲಿ, ಗೆದ್ದವರು ಮತ್ತು ಸೋತವರ ನಡುವೆ ಒಂದು ಸ್ಪಷ್ಟ ವ್ಯತ್ಯಾಸವಿರುತ್ತದೆ; ಅದೇ, ಅವರ ಮನೋಬಲ. ನಾವು ಸೋಲುವುದು ಯಾವಾಗ? ಮತ್ತ್ಯಾರೋ ಗೆದ್ದಾಗ ಅಲ್ಲ, ನಾವು ಸೋಲನ್ನು ಒಪ್ಪಿಕೊಂಡಾಗ ಮಾತ್ರ, ಅಲ್ಲವೇ? ಸವಾಲುಗಳೆಂದರೆ ಹೆದರಿ ಹಿಂದೋಡದೆ, ಸವಾಲಿನ ಹಿಂದೋಡಿ, ಅದಕ್ಕೆ ಸರಿಯಾದ ಜವಾಬು ನೀಡುವವರೆಗೂ ಕೈಕಟ್ಟಿಕೂರದ ವಿಜ್ಞಾನಿಯ ಬಗ್ಗೆ ತಿಳಿಯೋಣ ಬನ್ನಿ.

  • ‘ಯಾವುದೇ ಒಂದು ಕೆಲಸವನ್ನು ಅಸಾಧ್ಯ ಎಂದು ನೀವು ಒಪ್ಪಲು ತಯಾರಿಲ್ಲದಿದ್ದರೆ, ಅದು ಹೇಗೆ ಅಸಾಧ್ಯವಾಗಲು ಸಾಧ್ಯ?’ ಎನ್ನುತ್ತಾರೆ, ಡಾ. ಸುಸುಮು ಕಿಟಾಗವಾ. ಈ ಬಾರಿ ರಸಾಯನ ವಿಜ್ಞಾನದಲ್ಲಿ ರಿಚರ್ಡ್ ರಾಬ್ಸನ್ ಮತ್ತು ಓಮರ್ ಯಾಘಿಯವರ ಜೊತೆಗೆ ನೊಬೆಲ್ ಪ್ರಶಸ್ತಿಗೆ ಭಾಜನರಾದ ಸುಸುಮು ಅವರ ಮಾತುಗಳನ್ನು ಕೇಳಿದರೆ, ಸ್ಥೈರ್ಯಗುಂದಿದ ಯಾರೇ ಆದರೂ, ಮತ್ತೊಮ್ಮೆ ಫೀನಿಕ್ಸ್‌ನಂತೆ ಎದ್ದುನಿಲ್ಲುವಂತಾಗುತ್ತದೆ; ಅಷ್ಟು ಧನಾತ್ಮಕತೆ, ಅಷ್ಟು ಗುರಿ ಕೇಂದ್ರೀಕೃತ ಮನಸ್ಸು ಮತ್ತು ಅಂತಹ ಛಲ ಬಿಡದ ಮನೋಭಾವ ಇವರದ್ದು.
  • 2025 ರಸಾಯನವಿಜ್ಞಾನ ನೊಬೆಲ್ ದೊರೆತಿದ್ದು ಲೋಹಸಾವಯವ ಚೌಕಟ್ಟುಗಳಿಗೆ ಎಂಬುದು ನಿಮಗೆ ಈಗಾಗಲೇ ತಿಳಿದಿದೆಯಲ್ಲವೇ? ಅದರ ರಚನೆಯ ಹಿಂದಿನ ಸಿದ್ಧಾಂತ, ರಿಚರ್ಡ್ ರಾಬ್ಸನ್ ಅವರದ್ದು, ಚೌಕಟ್ಟಿಗೆ ಭೌತಿಕ ಬಲ ತುಂಬಿದ್ದು ಓಮರ್ ಯಾಘಿ ಅವರ ಸಂಶೋಧನೆ ಮತ್ತು ಚೌಕಟ್ಟುಗಳ ಆನ್ವಯಿಕತೆಯನ್ನು ಸಾಧ್ಯವಾಗಿಸಿದ್ದು ಸುಸುಮು ಕಿಟಾಗವಾ ಅವರ ಪ್ರಯೋಗಗಳು.
  • ಜಗತ್ತನ್ನು ಪೊರೆದದ್ದು ಅಚಾನಕ್ಕಾಗಿ ಆದ ಅನೇಕ ಆವಿಷ್ಕಾರಗಳು ಎಂಬ ಮಾತಿದೆ. ಏನೋ ಮಾಡಲು ಹೋಗಿ ಮತ್ತೇನೋ ಆದ ಕಥೆಗಳು ವಿಜ್ಞಾನಲೋಕದಲ್ಲಿ ಸಾಮಾನ್ಯ. ‘ಪೆನಿಸಿಲಿನ್’ ಎಂಬ ಮೊದಲ ಆ್ಯಂಟಿಬಯೋಟಿಕ್, ಎಕ್ಸ್–ರೇ, ಪೇಸ್‌ಮೇಕರ್, ಮೈಕ್ರೋವೇವ್ ಓವನ್ – ಹೀಗೆ ಪಟ್ಟಿ ದೊಡ್ಡದಿದೆ. ‘ಅಂತಹದ್ದೇ ಒಂದು ಅಚಾನಕ್ಕಾಗಿ ಆದ ಆವಿಷ್ಕಾರವೇ ಈ ಲೋಹ-ಸಾವಯವ ಚೌಕಟ್ಟುಗಳೊಳಗೆ ರಂಧ್ರಗಳಿವೆ ಮತ್ತು ಅವುಗಳನ್ನು ಅನಿಲದ ಅಣುಗಳನ್ನು, ಲೋಹದ ಅಣುಗಳನ್ನು ಹಿಡಿದಿಡಲು ಬಳಸಬಹುದು ಎಂಬುದು’ ಎನ್ನುತ್ತಾರೆ. ಸುಸುಮು.

ಹಿನ್ನೆಲೆ

  • 1951ರ ಜುಲೈ 4ರಂದು ಜಪಾನಿನ ಕ್ಯೋಟೋದಲ್ಲಿ ಜನಿಸಿದ ಸುಸುಮು ಅವರು, ಚಿಕ್ಕಂದಿನಿಂದಲೂ ವಿಜ್ಞಾನದಲ್ಲಿ ಅಪಾರ ಆಸಕ್ತಿ ಹೊಂದಿದ್ದವರು; ಕ್ಯೋಟೋದಲ್ಲಿಯೇ ತಮ್ಮ ಶಿಕ್ಷಣ ಮತ್ತು ಸಂಶೋಧನೆಯನ್ನು ನಡೆಸಿದರು. ಅಸಾವಯವ ರಸಾಯನವಿಜ್ಞಾನ ಇವರ ಕಾರ್ಯಕ್ಷೇತ್ರ. ಕಿಂಡೈ ವಿಶ್ವವಿದ್ಯಾಲಯ, ಟೋಕ್ಯೋ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಾ, ಟೆಕ್ಸಸ್ ಮತ್ತು ನ್ಯೂಯಾರ್ಕ್ ವಿಶ್ವವಿದ್ಯಾಲಯಗಳಲ್ಲೂ ಗುರುತರ ಜವಾಬ್ದಾರಿಗಳನ್ನು ನಿರ್ವಹಿಸಿದರು; ತಮ್ಮ ವೃತ್ತಿಬದುಕಿನಲ್ಲಿ ವಿದ್ಯಾರ್ಥಿಗಳನ್ನು ಸಂಶೋಧನೆಯೆಡೆಗೆ ಸೆಳೆಯುವ ಮತ್ತು ವೈಜ್ಞಾನಿಕ ಮನೋಭಾವವನ್ನು ಅವರಲ್ಲಿ ಹಾಸುಹೊಕ್ಕಾಗಿಸುವ ಜವಾಬ್ದಾರಿಯನ್ನು ಹೊತ್ತ ಸುಸುಮು ಅವರು, ಐ.ಸಿ.ಇ.ಎಂ.ಎಸ್. ಸೇರಿದಂತೆ ಅನೇಕ ವಿಜ್ಞಾನ ಸಂಸ್ಥೆಗಳ ಸದಸ್ಯರಾಗಿ, ಅಧ್ಯಕ್ಷರಾಗಿಯೂ ಕಾರ್ಯಪ್ರವೃತ್ತರಾಗಿದ್ದರು. ನೊಬೆಲ್ ಪ್ರಶಸ್ತಿ ಘೋಷಣೆಯಾದ ನಂತರ ನಡೆದ ಇವರ ಸಂದರ್ಶನದಲ್ಲಿ, ಸುಸುಮು ಕಿಟಾಗವಾ ಅವರು ನಗುತ್ತಾ, ‘ಯಾರಾದರೂ ಅಸಾಧ್ಯವೆಂದದ್ದನ್ನು ಸಾಧ್ಯ ಮಾಡಿತೋರಿಸಲು ನನಗೆ ಬಹಳ ಹುರುಪು’ ಎಂದು ಹೇಳಿದ್ದು, ಸಣ್ಣ ಸೋಲುಗಳಿಗೆ, ಚಿಕ್ಕ ಟೀಕೆಯೊಂದಕ್ಕೇ ಕೈಚೆಲ್ಲುವ ಹಲವರಿಗೆ ಸ್ಫೂರ್ತಿ ನೀಡುವಂತಿದೆ.
  • 90ರ ದಶಕದಲ್ಲಿ ಲೋಹ-ಸಾವಯವ ಚೌಕಟ್ಟಿನ ರಂಧ್ರಗಳೊಳಗೆ ಅನಿಲದ ಅಣುಗಳನ್ನು ಹಿಡಿದಿಡಬಹುದು ಎಂದು ಸುಸುಮು ಮತ್ತು ಇನ್ನಿತರ ರಸಾಯನವಿಜ್ಞಾನಿಗಳು ಪ್ರತಿಪಾದಿಸಿದಾಗ, ಅದನ್ನು ಒಪ್ಪಲು ಬಹುಪಾಲು ವಿಜ್ಞಾನಿಗಳು ತಯಾರಿರಲಿಲ್ಲ. ‘ಅವರ ಅಪನಂಬಿಕೆಯೇ ನನ್ನ ಬಲವಾಯ್ತು’ ಎನ್ನುತ್ತಾರೆ, ಸುಸುಮು. ಬೇರೆ ಯಾವುದೇ ಸಂಶೋಧನೆ ಮಾಡುತ್ತಿದ್ದರೂ, ಈ ವಿಷಯವೊಂದು ಅವರ ಮನಸ್ಸಿನ ಮೂಲೆಯಲ್ಲಿ ಕುಳಿತು ಕುದಿಯುತ್ತಲೇ ಇತ್ತು. ಮತ್ತೇನೋ ವಿಷಯದ ಸಲುವಾಗಿ, ಲೋಹ-ಸಾವಯವ ಚೌಕಟ್ಟಿನ ಸ್ಫಟಿಕದ ರಚನೆಯನ್ನು ವಿಶ್ಲೇಷಣೆ ಮಾಡಲು ಖಾಸಗಿ ವಿಶ್ವವಿದ್ಯಾಲಯವೊಂದಕ್ಕೆ ಸುಸುಮು ಹೋಗಿದ್ದರು. ಅಲ್ಲಿ ಕಂಪ್ಯೂಟರ್ ಕೇಂದ್ರದಲ್ಲಿ, ಸ್ಫಟಿಕದ ವಿಶ್ಲೇಷಣೆಯ ಸಮಯದಲ್ಲಿ, ಈ ಲೋಹ-ಸಾವಯವ ಚೌಕಟ್ಟಿನಲ್ಲಿರುವ ವಿಶಿಷ್ಟ, ನಿರ್ದಿಷ್ಟ ಬಗೆಯ ರಂಧ್ರಗಳು ಅಚಾನಕ್ಕಾಗಿ ಕಣ್ಣಿಗೆ ಬಿದ್ದವು. ಇಂತಹ ಅಚಾನಕ್ ಆವಿಷ್ಕಾರವೇ, ನಿಜಜೀವನದಲ್ಲಿ ಅನೇಕ ಕ್ಷೇತ್ರಗಳಲ್ಲಿ ಲೋಹ-ಸಾವಯವ ಚೌಕಟ್ಟಿನ ಸಾರ್ಥಕ ಅನ್ವಯಿಕೆಗೆ, ನೊಬೆಲ್ ಪ್ರಶಸ್ತಿಯು ಒಲಿಯುವುದಕ್ಕೆ, ಜನರ ಅಪನಂಬಿಕೆಯನ್ನು ಹುಸಿಯಾಗಸಲು ದಾರಿ ಮಾಡಿಕೊಟ್ಟಿತು.
  • ಒಂದೇ ಗುಂಗಿನಲ್ಲಿ, ಅಪರಿಮಿತ ಏಕಾಗ್ರತೆಯಲ್ಲಿ ಸಂಶೋಧನೆಯಲ್ಲಿ ತೊಡಗುವುದು ಎಷ್ಟು ಮುಖ್ಯವೋ, ಸಂಶೋಧನಾ ಪರಿಸರವೂ ಅಷ್ಟೇ ಮುಖ್ಯ ಎಂಬ ಸುಸುಮು ಅವರ ಮಾತನ್ನು ಎಲ್ಲ ವಿಜ್ಞಾನಿಗಳೂ ಖಂಡಿತವಾಗಿ ಒಪ್ಪುತ್ತಾರೆ. ಜಪಾನಿಗೆ ವಿಜ್ಞಾನದಲ್ಲಿ ನೊಬೆಲ್ ತಂದುಕೊಟ್ಟ ಅನೇಕ ಸಂಶೋಧಕರು ಸುಸುಮು ಅವರ ಮಾರ್ಗದರ್ಶಿಗಳು ಮತ್ತು ಒಡನಾಡಿಗಳು. ನೊಬೆಲ್ ವಿಜೇತ ಕೆನಿಚಿ ಫುಕುಯಿ ಅವರನ್ನಂತೂ ಸುಸುಮು ಅವರು ತಮ್ಮ ‘ಶೈಕ್ಷಣಿಕ ಪಿತಾಮಹ’ ಎಂದೇ ಬಣ್ಣಿಸುತ್ತಾರೆ.
  • ಕೆನಿಚಿ ಫುಕುಯಿ, ಅಕಿರಾ ಯೊಶಿನೋರಂತಹ ವಿಜ್ಞಾನಲೋಕದ ದಿಗ್ಗಜಗಳು ಕಾರ್ಯನಿರ್ವಹಿಸಿದ ಪ್ರಯೋಗಾಲಯಗಳಲ್ಲೇ ತಾವೂ ಸಂಶೋಧನೆ ಮಾಡುತ್ತಾ, ಅವರ ಪರಂಪರೆಯಿಂದ ಸ್ಫೂರ್ತಿ ಪಡೆಯುತ್ತಾ, ಮುಂದಿನ ತಲೆಮಾರಿಗೆ ಪ್ರೇರಣೆ ಒದಗಿಸಿದ್ದಾರೆ, ಸುಸುಮು ಕಿಟಾಗವಾ. ಇವರ ಲೋಹ-ಸಾವಯವ ಚೌಕಟ್ಟುಗಳು ಅನಿಲದ ಅಣುಗಳನ್ನು, ವೇಗವರ್ಧಕಗಳನ್ನು ಹಿಡಿದಿಟ್ಟುಕೊಳ್ಳುವ ಹಾಗೆ, ಇವರ ಕಾರ್ಯವೈಖರಿಯು ಯುವಜನರನ್ನೂ ಸೆಳೆದು, ವಿಜ್ಞಾನದೆಡೆಗೆ ಗಮನ ಹರಿಯುವಂತೆ ಮಾಡಿದ ಇವರಿಗೆ ಅಭಿನಂದನೆಗಳು ಸಲ್ಲಿಸಲೇಬೇಕು. v
  • ಮತ್ತೆರಡು ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಪ್ರಸ್ತಾವ

ಸಂದರ್ಭ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅಲ್ಲದೇ ಬೆಳಗಾವಿ ಜಿಲ್ಲೆ ಸವದತ್ತಿ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಗೆತ್ತಿ ಕೊಳ್ಳುವ ಪ್ರಸ್ತಾವ ಇದೆ ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ (ಕೆಪಿಸಿಎಲ್) ಕಾರ್ಯಪಾಲಕ ಎಂಜಿನಿಯರ್ ವಿ.ಎಂ.ವಿಜಯ ತಿಳಿಸಿದರು.

  • ‘ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ 1,600 ಮೆಗಾ ವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆಯ ಪ್ರಸ್ತಾವಕ್ಕೆ ಸಮ್ಮತಿ ಸಿಕ್ಕಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ‘ರಾಜ್ಯದಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚುವ ಅವಧಿಯಲ್ಲಿ ತಡೆರಹಿತ ವಿದ್ಯುತ್ ಪೂರೈಕೆಗೆ 2 ಸಾವಿರ ಮೆಗಾ ವ್ಯಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ. ಆದರೆ, ಈ ಯೋಜನೆಗೆ ಪರಿಸರ, ವನ್ಯಜೀವಿ ಮತ್ತು ಅರಣ್ಯ ಅನುಮತಿ ಸಿಗುವುದು ಬಾಕಿ ಇದೆ’ ಎಂದರು.
  • ಡ್ರಗ್ಸ್ಕಡಿವಾಣಕ್ಕೆ ಎಎನ್ಟಿಎಫ್

ಸಂದರ್ಭ: ಪೊಲೀಸ್ ಕಾನ್ಸ್ಟೆಬಲ್ಗಳಿಗೆ ಪೀಕ್ಕ್ಯಾಪ್ ವಿತರಣೆ: 8,500 ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಇನ್ನೊಂದು ವಾರದಲ್ಲಿ ಕುರಿತು ಅಧಿಸೂಚನೆ ಹೊರಡಿಸಲಾಗುವುದುಜಿ.ಪರಮೇಶ್ವರ, ಗೃಹ ಸಚಿವ.

  • ಮಾದಕವಸ್ತು (ಡ್ರಗ್ಸ್‌) ಪೂರೈಕೆ, ಮಾರಾಟ ದಂಧೆಗೆ ಸಂಪೂರ್ಣ ಕಡಿವಾಣ ಹಾಕಲು ರಾಷ್ಟ್ರೀಯ ಮಾದಕವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಮಾದರಿಯಲ್ಲಿಯೇ ರಾಜ್ಯದಲ್ಲೂ ‘ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ’ (ಎಎನ್‌ಟಿಎಫ್‌) ಅಸ್ತಿತ್ವಕ್ಕೆ ಬಂದಿದೆ.
  • ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಜಿ.ಪರಮೇಶ್ವರ ಅವರು ಕಾರ್ಯಪಡೆಗೆ ಚಾಲನೆ ನೀಡಿದರು. ಇದೇ ವೇಳೆ ಪೊಲೀಸ್ ಸಿಬ್ಬಂದಿಗೆ ‘ಪೀಕ್‌ ಕ್ಯಾಪ್’ ವಿತರಿಸಿದರು.
  • ಸಿದ್ದರಾಮಯ್ಯ ಮಾತನಾಡಿ, ‘‌ಎಡಿಜಿಪಿ ಮಟ್ಟದ ಅಧಿಕಾರಿ ಕಾರ್ಯಪಡೆ ಮುಖ್ಯಸ್ಥರಾಗಿ ಇರಲಿದ್ದು, ಎಸ್‌ಪಿ, ಎಎಸ್‌ಪಿ, ಡಿವೈಎಸ್‌ಪಿ ಸೇರಿ 56 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ’ ಎಂದರು.
  • ‘ಐದು ದಶಕಗಳ ಬಳಿಕ ಪೊಲೀಸ್ ಸಿಬ್ಬಂದಿಯ ಕ್ಯಾಪ್‌ನಲ್ಲಿ ಬದಲಾವಣೆ ಆಗಿದೆ. ಕಾರ್ಯಕ್ಷಮತೆಯೂ ಬದಲಾಗಬೇಕು. ದಕ್ಷವಾಗಿ ಕಾರ್ಯ ನಿರ್ವಹಿಸುವ ಮೂಲಕ ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ಕಡಿಮೆ ಮಾಡಬೇಕು ಮತ್ತು ಸರ್ಕಾರಕ್ಕೂ ಒಳ್ಳೆಯ ಹೆಸರು ತರಬೇಕು’ ಎಂದು ಕಿವಿಮಾತು ಹೇಳಿದರು.
  • ‘ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪೀಕ್‌ ಕ್ಯಾಪ್‌’ಗಳನ್ನು ಆಯ್ಕೆ ಮಾಡಿದ್ದು ನಾನೇ. ಇಂಡಿಯಾ ಜಸ್ಟೀಸ್ ವರದಿಯಂತೆ ಅತ್ಯುತ್ತಮ ಪೊಲೀಸ್ ಪಡೆಗಳಲ್ಲಿ ಕರ್ನಾಟಕ ನಂಬರ್‌ ಒನ್‌ ಸ್ಥಾನ ಪಡೆದಿರುವುದು ರಾಜ್ಯದ ಘನತೆ ಹೆಚ್ಚಿಸಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
  • ಮಂಗಳೂರು ಗಲಭೆಪೀಡಿತ ನಗರವಾಗಿತ್ತು. ಪೊಲೀಸ್ ಅಧಿಕಾರಿ ಗಳನ್ನು ಬದಲಾವಣೆ ಮಾಡಿದ್ದರಿಂದ ನಿಯಂತ್ರಣಕ್ಕೆ ಬಂದಿದೆ. ಕೆಲವು ಪೊಲೀಸರು ರಿಯಲ್ ಎಸ್ಟೇಟ್​ ಉದ್ಯಮಿಗಳ ಜತೆ ಶಾಮೀಲಾಗುತ್ತಾರೆ. ಡ್ರಗ್ಸ್ ಪೆಡ್ಲರ್​ಗಳು, ಯಾರು ರೌಡಿಗಳು ಎಂದು ಗೊತ್ತಿದ್ದರೂ ಅವರನ್ನು ಬಂಧಿಸದೇ ಪೊಲೀಸರು ಬಿಟ್ಟುಬಿಡುತ್ತಾರೆ. ಇವರನ್ನು ಮೊಳಕೆಯಲ್ಲಿ ಚಿವುಟಿ ಹಾಕಬೇಕು. ಇಲ್ಲದಿದ್ದರೆ ದೊಡ್ಡ ಕ್ರಿಮಿನಲ್​ಗಳಾಗುತ್ತಾರೆ ಎಂದು ಎಚ್ಚರಿಸಿದರು. ‘ಅಪರಾಧಿ ಹಾಗೂ ಕ್ರಿಮಿನಲ್​ಗಳೊಂದಿಗೆ ಸಂಬಂಧ ಇಟ್ಟುಕೊಳ್ಳ ಬಾರದು. ದಿನೇ ದಿನೇ ಪೊಲೀಸರೆಂದರೆ ಕ್ರಿಮಿನಲ್​ಗಳಿಗೆ ಭಯ ಕಡಿಮೆಯಾ ಗುತ್ತಿದೆ. ಯಾಕೆ ಕಡಿಮೆಯಾಗಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಿ’ ಎಂದರು.
  • ಡಿ.ಕೆ.ಶಿವಕುಮಾರ್ ಮಾತನಾಡಿ, ‘ಬೆಂಗಳೂರು ನಗರ ಹಾಗೂ ಇತರೆ ನಗರ ಪ್ರದೇಶಗಳಲ್ಲಿ ಪ್ರತಿ ಮನೆಯಲ್ಲಿ ಮನೆಗೆಲಸದವರು, ಚಾಲಕರು, ಕಾವಲುಗಾರರ ಮಾಹಿತಿ ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಆಗ ಎಷ್ಟೋ ಮಟ್ಟಿಗೆ ಅಪರಾಧ ನಿಯಂತ್ರಣಕ್ಕೆ ಬರುತ್ತದೆ. ನೆರೆ ಮನೆಯ ಆದಿಕೇಶವಲು ಮನೆಯಲ್ಲಿ ಕಳ್ಳತನವಾಗಿ ಎಷ್ಟೋ ದಿನಗಳಾದರೂ ಅವರಿಗೆ ಗೊತ್ತಾಗಿರಲಿಲ್ಲ. ಆಭರಣ ಮಾರಾಟವಾಗಿ ಬೇರೆಯವರು ಧರಿಸಿದ್ದನ್ನು ನೋಡಿದ ಬಳಿಕ ಮನೆಯಲ್ಲಿ ಬಂದು ಹುಡುಕುತ್ತಾರೆ. ಮೂರು ವರ್ಷಗಳ ಬಳಿಕ ಕಳ್ಳತನವಾಗಿದೆ ಎಂದು ತಿಳಿಯಿತು. ಹೀಗಾಗಿ ನೀವು ಪ್ರತಿ ಮನೆಯಲ್ಲಿ ಕೆಲಸ ಮಾಡುವವರ ದಾಖಲೆ ಇಟ್ಟುಕೊಳ್ಳಿ. ಈ ಬಗ್ಗೆ ಆಲೋಚನೆ ಮಾಡಿ’ ಎಂದು ಸಲಹೆ ನೀಡಿದರು.
  • ‘ಯಾವುದೇ ಸರ್ಕಾರ ಬಂದರೂ ಆತ್ಮವಿಶ್ವಾಸ ಹಾಗೂ ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬಾರದು. ಒಂದು ವೇಳೆ ರಾಜಿ ಮಾಡಿಕೊಂಡರೆ ಸಂಪೂರ್ಣವಾಗಿ ವ್ಯವಸ್ಥೆ ಕುಸಿಯಲಿದೆ. ರಾಜಕಾರಣಿಗಳ ಹಿಂಬಾಲಕರಾದರೇ ಆಗ ನಿಮ್ಮನ್ನು ಯಾರು ನಂಬುತ್ತಾರೆ? ಹೀಗಾಗಿ ಇಂತಹ ಪದ್ಧತಿಗೆ ಅವಕಾಶ ಮಾಡಿಕೊಡಬೇಡಿ’ ಎಂದು ಕಿವಿ ಮಾತು ಹೇಳಿದರು.
  • ‘ಬೆಂಗಳೂರಿನಲ್ಲಿ 1.40 ಕೋಟಿ ಜನರಿದ್ದಾರೆ. 1.23 ಕೋಟಿ ವಾಹನಗಳಿವೆ. ಇಂತಹ ಪರಿಸ್ಥಿತಿಯಲ್ಲಿ ರಸ್ತೆ ವಿಸ್ತರಣೆ ಕಷ್ಟವಾಗಿದೆ. ಎಐ ತಂತ್ರಜ್ಞಾನ ಬಳಸಿಕೊಂಡು ಸಂಚಾರ ದಟ್ಟಣೆ ನಿವಾರಣೆಗೆ ಇರುವ ಸಲಹೆಗಳನ್ನು ಸರ್ಕಾರಕ್ಕೆ ಸಲ್ಲಿಸಿ’ ಎಂದು ತಿಳಿಸಿದರು.
  • ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಮಾತನಾಡಿ, ‘ಪೊಲೀಸ್ ಇಲಾಖೆಯಲ್ಲಿ ಶೇಕಡ 85ರಷ್ಟು ಸಿಬ್ಬಂದಿಯ ಬಹುವರ್ಷಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಇದರಿಂದ ಸಿಬ್ಬಂದಿಯ ಆತ್ಮವಿಶ್ವಾಸ ಹೆಚ್ಚಾಗಲಿದೆ’ ಎಂದರು.
  • ಶಾಸಕ ರಿಜ್ವಾನ್ ಅರ್ಷದ್, ವಿಧಾನಸಭೆಯಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಡಿಜಿಪಿಗಳಾದ ರಾಮಚಂದ್ರರಾವ್, ಪ್ರಣವ್ ಮೊಹಾಂತಿ ಹಾಜರಿದ್ದರು.

ಸನ್ಮಿತ್ರ ಪರಿಚಯ

  • ಮಾದಕ ವಸ್ತು ಸೇವನೆ ಪ್ರಕರಣ ದಲ್ಲಿ ಶಿಕ್ಷೆ ಅನುಭವಿಸಿ ಹೊರ ಬಂದ ವ್ಯಕ್ತಿ ಮತ್ತೆ ವ್ಯಸನಕ್ಕೆ ಒಳಗಾಗದಂತೆ ನಿಗಾವಹಿಸಲು ಪೊಲೀಸ್ ಇಲಾಖೆಯು ‘ಸನ್ಮಿತ್ರ’ ಕಾರ್ಯಕ್ರಮವನ್ನು ಪರಿಚಯಿಸಿದೆ. ಮತ್ತೆ ಡ್ರಗ್ಸ್‌ ಚಟಕ್ಕೆ ಬೀಳಬಾರದು ಹಾಗೂ  ಸಮಾಜದ ಮುಖ್ಯವಾಹಿನಿಗೆ ತರುವ ಸಲುವಾಗಿ ಆ ವ್ಯಕ್ತಿಯ ಮೇಲೆ ನಿಗಾ ಇಡಲು ಪೊಲೀಸ್ ಕಾನ್‌ಸ್ಟೆಬಲ್‌ ಒಬ್ಬರನ್ನು ನಿಯೋಜಿಸಲಾಗು ತ್ತದೆ. ಮೂರು ವರ್ಷದವರೆಗೆ ಈ ವ್ಯಕ್ತಿಯ ಮೇಲೆ ಪೊಲೀಸರು ನಿಗಾವಹಿಸಲಿದ್ದು, ಅವರಿಗೆ ಚಿಕಿತ್ಸೆ, ಪುನರ್ವಸತಿ ಮತ್ತು ಆರೈಕೆಗೆ ನೆರವು ನೀಡಲಿದ್ದಾರೆ.
  • ಆಂಧ್ರ, ಒಡಿಶಾ ಮೊಂಥಾ ಮೊರೆತ

ಮೊಂಥಾ ಚಂಡಮಾರುತವು ಅಬ್ಬರಿಸಲು ಶುರುವಿಟ್ಟಿದೆ. ರಸ್ತೆಗಳ ಇಕ್ಕೆಲಗಳಲ್ಲಿ ಬುಡ ಮೇಲಾಗಿ ಬಿದ್ದ ಮರಗಳು. ಸಮುದ್ರ ತೀರದಲ್ಲಿ ಕಟ್ಟೆಚ್ಚರ. ಎತ್ತರದ ಅಲೆಗಳಿಗೆ ಮುಖ ಮಾಡಿ ಓಡುವ ಜನರನ್ನು ಕೂಗಿ ಕರೆದು, ಮನೆಗೆ ಕಳುಹಿಸುತ್ತಿರುವ ಪೊಲೀಸರು. ಸಮುದ್ರ ತೀರದ ರಸ್ತೆಗಳ ಮೇಲೆ ಹರಿದು ಸಾಗುತ್ತಿರುವ ಸಮುದ್ರದ ಅಲೆಗಳು. ಹೀಗೆ ಹರಿಯುವಾಗ ರಸ್ತೆಗಳ ಮೇಲೆಲ್ಲಾ ಕಲ್ಲುಗಳನ್ನು ಹೊತ್ತು ತರುತ್ತಿರುವ ಅಲೆಗಳು. ತೀರದಲ್ಲಿ ವಿರಮಿಸುತ್ತಿರುವ ಮೀನುಗಾರಿಕೆ ದೋಣಿಗಳು… ‘ಮೊಂಥಾ’ದಿಂದಾಗಿ ಆಂಧ್ರ ಪ್ರದೇಶ ಮತ್ತು ಒಡಿಶಾ ರಾಜ್ಯಗಳ ಕರಾವಳಿ ಜಿಲ್ಲೆಗಳಲ್ಲಿ ಕಂಡುಬಂದ ಚಿತ್ರಣವಿದು.

ಈ ರಾಜ್ಯಗಳು ‘ಮೊಂಥಾ’ವನ್ನು ಎದುರಿಸಲು ಸಜ್ಜುಗೊಂಡಿವೆ. ಆಂಧ್ರ ಪ್ರದೇಶದ 19 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ. ಚಂಡಮಾರುತದ ಕಾರಣ ಕರಾವಳಿ ಜಿಲ್ಲೆಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭಾರಿ ವಾಹನ ಸಂಚಾರವನ್ನು ಆಂಧ್ರ ಪ್ರದೇಶದಲ್ಲಿ ರದ್ದು ಮಾಡಲಾಗಿದೆ. ಒಡಿಶಾಕ್ಕೆ ಚಂಡಮಾರುತವು ಹೊಸ ವಿಚಾರವೇನೂ ಅಲ್ಲ. ಭಾರಿ ಚಂಡಮಾರುತಗಳನ್ನು ಎದುರಿಸಿರುವ ಅನುಭವಿಯಾದ ಒಡಿಶಾವು ‘ಮೊಂಥಾ’ಕ್ಕೂ ಸಕಲ ತಯಾರಿ ನಡೆಸಿದೆ. ಎರಡೂ ರಾಜ್ಯಗಳಲ್ಲಿ ‘ಮೊಂಥಾ’ ಪರಿಣಾಮದ ಜಿಲ್ಲೆಗಳಲ್ಲಿನ ಪ್ರವಾಸಿತಾಣಗಳಿಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ.

ಎರಡನೇ ಚಂಡಮಾರುತ

ಈ ವರ್ಷ ದೇಶದ ಪಶ್ಚಿಮ ಹಾಗೂ ಪೂರ್ವ ಕರಾವಳಿಯಲ್ಲಿ ಹಲವು ಬಾರಿ ವಾಯುಭಾರ ಕುಸಿತ ಉಂಟಾಗಿದ್ದರೂ ಅದು ಚಂಡಮಾರುತವಾಗಿ ಪರಿವರ್ತನೆಯಾಗಿದ್ದು ಎರಡು ಬಾರಿ ಮಾತ್ರ. ಈ ತಿಂಗಳ ಮೊದಲ ವಾರದಲ್ಲಿ ಅರಬ್ಬೀ ಸಮುದ್ರದಲ್ಲಿ ಉಂಟಾದ ‘ಶಕ್ತಿ’ ಮೊದಲನೆಯದ್ದಾದರೆ, ಈಗಿನ ‘ಮೊಂಥಾ’ ಎರಡನೆಯದ್ದು. ‘ಶಕ್ತಿ’ ಚಂಡಮಾರುತವು ಪ್ರತಿ ಗಂಟೆಗೆ 100 ಕಿ.ಮೀಗಿಂತಲೂ ಹೆಚ್ಚು ವೇಗದಲ್ಲಿ ಮಹಾರಾಷ್ಟ್ರ, ಗುಜರಾತ್‌, ಗೋವಾ ಕರಾವಳಿಗೆ ಅಪ್ಪಳಿಸಿತ್ತು. ಗುಜರಾತ್‌ ಕರಾವಳಿ ಪ್ರದೇಶದಲ್ಲಿ ಇದರ ತೀವ್ರತೆ ಹೆಚ್ಚಾಗಿತ್ತು. ರಾಜ್ಯಗಳು ಮುನ್ನೆಚ್ಚರಿಕೆ ವಹಿಸಿದ್ದರಿಂದ ಹೆಚ್ಚಿನ ಹಾನಿಯಾಗಿರಲಿಲ್ಲ. 

ಅರಬ್ಬೀ ಸಮುದ್ರದಲ್ಲೂ ವಾಯುಭಾರ ಕುಸಿತ

ಬಂಗಾಳ ಕೊಲ್ಲಿಯಲ್ಲಿ ‘ಮೊಂಥಾ’ ಚಂಡಮಾರುತದ ವೇಗ ತೀವ್ರಗೊಳ್ಳುವ ಹೊತ್ತಿನಲ್ಲೇ ಪಶ್ಚಿಮದ ಅರಬ್ಬೀ ಸಮುದ್ರದಲ್ಲೂ ವಾಯುಭಾರ ಕುಸಿತ ಕಂಡುಬಂದಿದೆ. ಇದರ ಪರಿಣಾಮದಿಂದಾಗಿ ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ. ಆದರೆ, ಗಾಳಿಯ ತೀವ್ರತೆ ಹೆಚ್ಚಿಲ್ಲ. ಮಂಗಳವಾರ ಬೆಳಿಗ್ಗೆ ಸಮುದ್ರದ ಪೂರ್ವ–ಕೇಂದ್ರ ಪ್ರದೇಶದಲ್ಲಿ ಕಂಡು ಬಂದಿದ್ದ ವಾಯುಭಾರ ಕುಸಿತವು ಪ್ರತಿ ಗಂಟೆಗೆ 7 ಕಿ.ಮೀ ವೇಗದಲ್ಲಿ ಈಶಾನ್ಯದತ್ತ ಸಾಗಿದೆ. ಮುಂದಿನ 24 ಗಂಟೆಗಳಲ್ಲಿ ಅದೇ ದಿಕ್ಕಿನಲ್ಲಿ ಸಾಗುವ ಅಂದಾಜು ಇದೆ. ಪ್ರತಿ ಗಂಟೆಗೆ 46ರಿಂದ 65 ಕಿ.ಮೀವರೆಗೆ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

l ಚಂಡಮಾರುತಕ್ಕೆ ಆಂಧ್ರಪ್ರದೇಶ, ಒಡಿಶಾ ಮತ್ತು ತೆಲಂಗಾಣದಲ್ಲಿನ ಇಲಾಖೆಯ ಸಿದ್ಧತೆಯನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಮಂಗಳವಾರ ಪರಿಶೀಲನೆ ನಡೆಸಿದರು. ಪೂರ್ವ ಕರಾವಳಿ ರೈಲ್ವೆ ವಲಯದ ಹಲವು ರೈಲುಗಳ ಸಂಚಾರವನ್ನು ಮಂಗಳವಾರ ರದ್ದು ಮಾಡಲಾಗಿತ್ತು

l ವಿಶಾಖಪಟ್ಟಣ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ 32 ವಿಮಾನಗಳ (ದೇಶೀಯ ಹಾಗೂ ಅಂತರರಾಷ್ಟ್ರೀಯ) ಹಾರಾಟವನ್ನು ಮಂಗಳವಾರ ರದ್ದು ಮಾಡಲಾಯಿತು

l ಆಂಧ್ರಪ್ರದೇಶ ಮತ್ತು ಒಡಿಶಾ ಸೇರಿದಂತೆ ಚಂಡಮಾರುತ ಬಾಧಿತ ರಾಜ್ಯಗಳಲ್ಲಿ ಒಟ್ಟು 45 ತಂಡಗಳನ್ನು ಎನ್‌ಡಿಆರ್‌ಎಫ್‌ ನಿಯೋಜಿಸಲಾಗಿದೆ

l ಆಂಧ್ರ ಪ್ರದೇಶದಲ್ಲಿ ಸಮುದ್ರದ ಅಲೆಗಳು 4.7 ಮೀ. ಎತ್ತರಕ್ಕೆ ಏಳಲಿವೆ ಎಂದು ಸಾಗರ ಮಾಹಿತಿ ಸೇವೆಗಳ ರಾಷ್ಟ್ರೀಯ ಕೇಂದ್ರ ಹೇಳಿದೆ

ಚಂಡಮಾರುತಗಳಿಗೆ ಹೇಗೆ ಹೆಸರಿಡಲಾಗುತ್ತದೆ? 

ನವದೆಹಲಿಯ ಪ್ರಾದೇಶಿಕ ವಿಶೇಷ ಹವಾಮಾನ ಕೇಂದ್ರವು (ಆರ್‌ಎಸ್‌ಎಂಸಿ) ಉತ್ತರ ಹಿಂದೂ ಮಹಾಸಾಗರದಲ್ಲಿ ಕಾಣಿಸಿಕೊಳ್ಳುವ ಚಂಡಮಾರುತಗಳ ನಾಮಕರಣವನ್ನು ಮಾಡುತ್ತದೆ. ಆರ್‌ಎಸ್‌ಎಂಸಿಯನ್ನು ವಿಶ್ವ ಹವಾಮಾನ ಸಂಸ್ಥೆ (ಡಬ್ಲ್ಯುಎಂಒ) ಮತ್ತು ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಆಯೋಗದ (ಏಷ್ಯಾ ಮತ್ತು ಪೆಸಿಫಿಕ್‌) ಉಸ್ತುವಾರಿಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನಿರ್ವಹಿಸುತ್ತದೆ.   

ಚಂಡಮಾರುತಗಳ ಹೆಸರುಗಳನ್ನು ಆ ಪ್ರದೇಶದ ವ್ಯಾಪ್ತಿಯಲ್ಲಿರುವ 13 ದೇಶಗಳು ಸರತಿ ಪ್ರಕಾರ ನಿರ್ಧರಿಸುತ್ತವೆ. ಈ ಪ್ರದೇಶದಲ್ಲಿರುವ ಭಾರತ, ಬಾಂಗ್ಲಾದೇಶ, ಮಾಲ್ದೀವ್ಸ್, ಮ್ಯಾನ್ಮಾರ್, ಒಮಾನ್, ಪಾಕಿಸ್ತಾನ, ಶ್ರೀಲಂಕಾ, ಥಾಯ್ಲೆಂಡ್, ಯೆಮನ್, ಇರಾನ್, ಕತಾರ್, ಸೌದಿ ಅರೇಬಿಯಾ ಮತ್ತು ಯುಎಇ ಮುಂತಾದ ದೇಶಗಳು ಹೆಸರುಗಳನ್ನು ಸೂಚಿಸುತ್ತವೆ. ಪ್ರತಿ ದೇಶವೂ 13 ಹೆಸರುಗಳ ಪಟ್ಟಿಯನ್ನು ಪೂರ್ವಭಾವಿಯಾಗಿಯೇ ಸಲ್ಲಿಸಿರುತ್ತದೆ. ಹೊಸ ಚಂಡಮಾರುತ ಕಾಣಿಸಿಕೊಂಡಾಗ, 169 ಹೆಸರುಗಳ ಪಟ್ಟಿಯಿಂದ ಒಂದು ಹೆಸರನ್ನು ಸರತಿಯ ಪ್ರಕಾರ ಐಎಂಡಿ ಆಯ್ಕೆ ಮಾಡುತ್ತದೆ.

ಥಾಯ್ ಭಾಷೆಯಲ್ಲಿ ಮೊಂಥಾ ಎಂದರೆ, ಸುಂದರವಾದ ಅಥವಾ ಸುವಾಸನೆಯುಕ್ತ ಹೂವು.

  • ದೆಹಲಿ: ಮೋಡಬಿತ್ತನೆ

ಸಂದರ್ಭ: ಚಳಿಗಾಲದಲ್ಲಿ ದೆಹಲಿಯಲ್ಲಿ ಉಂಟಾಗುವ ವಾಯುಮಾಲಿನ್ಯ ತಡೆಗಟ್ಟುವುದಕ್ಕಾಗಿ ಐಐಟಿಕಾನ್ಪುರದ ಸಹಯೋಗದಲ್ಲಿ ದೆಹಲಿ ಸರ್ಕಾರ ನಗರದ ಸುತ್ತಮುತ್ತ ಲಿನ ಪ್ರದೇಶದಲ್ಲಿ ಮೋಡಬಿತ್ತನೆ ಕಾರ್ಯ ಕೈಗೊಂಡಿದೆ.

  • ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರದೇಶದಲ್ಲಿ ಈ ಪ್ರಯೋಗವನ್ನು ವಿಸ್ತರಿಸಲಾಗುವುದು ಎಂದು ಪರಿಸರ ಇಲಾಖೆ ಸಚಿವ ಮಜಿಂದರ್ ಸಿಂಗ್ ಸಿರ್ಸಾ ಹೇಳಿದ್ದಾರೆ.
  • ಮೋಡಬಿತ್ತನೆ ಮಾಡುವ ವಿಮಾನವು ಕಾನ್ಪುರದಿಂದ ಹಾರಾಟ ಆರಂಭಿಸಿ, ದೆಹಲಿ ಸುತ್ತಮುತ್ತಲಿನ ಪ್ರದೇಶಗಳಾದ ಬುರಾರಿ, ಉತ್ತರ ಕರೋಲ್ ಬಾಘ್‌ ಮತ್ತು ಮಯೂರ್‌ ವಿಹಾರ ಪ್ರದೇಶಗಳಲ್ಲಿ ಕಾರ್ಯಾಚರಣೆ ಪೂರ್ಣಗೊಳಿಸಿ, ಮೀರತ್‌ ವಾಯ ನೆಲೆಯಲ್ಲಿ ಇಳಿಯಿತು.
  • ‘ಎಂಟು ಗನ್‌ಗಳ ಮೂಲಕ ಅರ್ಧ ಗಂಟೆಗಳ ಕಾಲ ರಾಸಾಯನಿಕವನ್ನು ವಾತಾವರಣಕ್ಕೆ ಬಿಡುಗಡೆ ಮಾಡಿತು’ ಎಂದು ಸಚಿವ ಸಿರ್ಸಾ ವಿಡಿಯೊ ಮೂಲಕ ಮಾಹಿತಿ ನೀಡಿದ್ದಾರೆ.
  • ಮೋಡ ಬಿತ್ತನೆಯ ಎರಡನೇ ಪ್ರಯೋಗ ದೆಹಲಿಯ ಹೊರವಲಯದಲ್ಲಿ ನಡೆಸಲಾಗುತ್ತದೆ. ಇಂಥ ಸುಮಾರು ಹತ್ತು ಪ್ರಯೋಗಗಳನ್ನು ದೆಹಲಿಯ ಸುತ್ತಮುತ್ತ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು.
  • ‘ಮಾಲಿನ್ಯವನ್ನು ತಗ್ಗಿಸಲು ಸರ್ಕಾರ ತೆಗೆದುಕೊಂಡ ಒಂದು ದೊಡ್ಡ ಹೆಜ್ಜೆಯಾಗಿದೆ. ಈ ಪ್ರಯೋಗಗಳು ಯಶಸ್ವಿಯಾದರೆ, ದೀರ್ಘಾವಧಿಯಲ್ಲಿ ಯೋಜನೆಯನ್ನು ರೂಪಿಸಲಿದ್ದೇವೆ’ ಎಂದು ಸಿರ್ಸಾ ಭವಿಷ್ಯದ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.
  • ಕಳೆದ ವಾರ ಬುರಾರಿ ಪ್ರದೇಶದಲ್ಲಿ ಪರೀಕ್ಷಾರ್ಥವಾಗಿ ಮೋಡಬಿತ್ತನೆ ಕಾರ್ಯವನ್ನು ನಡೆಸಲಾಗಿತ್ತು. ಮೋಡಬಿತ್ತನೆಗೆ ಬಳಸುವ ಸಿಲ್ವರ್ ಅಯೋಡೈಡ್ ಮತ್ತು ಸೋಡಿಯಂ ಕ್ಲೋರೈಡ್ ಸಂಯುಕ್ತಗಳ ರಾಸಾಯನಿಕ ವನ್ನು ಅಲ್ಪ ಪ್ರಮಾಣದಲ್ಲಿ ಸಿಂಪಡಿಸಲಾಗಿತ್ತು.
  • ಕೈಗಾರಿಕಾ ಉತ್ಪಾದನೆ ಪ್ರಮಾಣ ಸ್ಥಿರ

ಸಂದರ್ಭ: ಜಿಎಸ್ಟಿ ಇಳಿಕೆ, ತಯಾರಿಕಾ ವಲಯದ ಚುರುಕಿನ ಚಟುವಟಿಕೆ ಪರಿಣಾಮ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ದರ ಪರಿಷ್ಕರಣೆ ಹಾಗೂ ಹಬ್ಬಗಳ ಸಂದರ್ಭದಲ್ಲಿನ ಬೇಡಿಕೆ ಹೆಚ್ಚಳವು ತಯಾರಿಕಾ ವಲಯದ ಮೇಲೆ ಸಕಾರಾತ್ಮಕ ಪರಿಣಾಮ ಉಂಟುಮಾಡಿದೆ.

  • ತಯಾರಿಕಾ ವಲಯದಲ್ಲಿ ಉತ್ತಮ ಪ್ರಮಾಣದ ಚಟುವಟಿಕೆ ಕಂಡುಬಂದ ಕಾರಣದಿಂದಾಗಿ ದೇಶದ ಕೈಗಾರಿಕಾ ಉತ್ಪಾದನೆಯ ಬೆಳವಣಿಗೆ ಪ್ರಮಾಣವು ಸೆಪ್ಟೆಂಬರ್‌ನಲ್ಲಿ ಶೇಕಡ 4ರಷ್ಟು ಆಗಿದೆ.
  • ಹಿಂದಿನ ವರ್ಷದ ಸೆಪ್ಟೆಂಬರ್‌ನಲ್ಲಿ ಕೈಗಾರಿಕಾ ಉತ್ಪಾದನೆಯ ಸೂಚ್ಯಂಕವು (ಐಐಪಿ) ಶೇ 3.2ರಷ್ಟು ಬೆಳವಣಿಗೆ ಕಂಡಿತ್ತು ಎಂದು ಕೇಂದ್ರ ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಮಂಗಳವಾರ ಬಿಡುಗಡೆ ಮಾಡಿರುವ ಅಂಕಿ–ಅಂಶಗಳು ಹೇಳುತ್ತಿವೆ.
  • ‘ಜಿಎಸ್‌ಟಿ ದರದಲ್ಲಿ ಆಗಿರುವ ಪರಿಷ್ಕರಣೆ, ಹಬ್ಬಗಳ ಋತು ಬೇಗನೆ ಶುರುವಾಗಿದ್ದುದು ಒಟ್ಟಾರೆ ಬೇಡಿಕೆಯನ್ನು ಹೆಚ್ಚಿಸಿರುವಂತಿವೆ. ಅಕ್ಟೋಬರ್‌ ತಿಂಗಳಲ್ಲಿಯೂ ತಯಾರಿಕಾ ವಲಯದ ಚಟುವಟಿಕೆಗಳು ಹೆಚ್ಚಿನ ಮಟ್ಟದಲ್ಲಿ ಇರುವ ನಿರೀಕ್ಷೆ ಇದೆ’ ಎಂದು ಐಸಿಆರ್‌ಎ ಸಂಸ್ಥೆಯ ಮುಖ್ಯ ಅರ್ಥ ಶಾಸ್ತ್ರಜ್ಞೆ ಅದಿತಿ ನಾಯರ್ ಹೇಳಿದ್ದಾರೆ.
  • ಜಿಎಸ್‌ಟಿ ದರ ಪರಿಷ್ಕರಣೆಯು ಸಣ್ಣ ಮೊತ್ತದ, ದಿನಬಳಕೆಯ ಉತ್ಪನ್ನ ಗಳಿಗೆ ಬೇಡಿಕೆಯನ್ನು ಉತ್ತಮ ಮಟ್ಟದಲ್ಲಿ ಇರಿಸುತ್ತದೆ. ಆದರೆ ಹೆಚ್ಚಿನ ಬೆಲೆಯ ಉತ್ಪನ್ನಗಳಿಗೆ ಬೇಡಿಕೆಯು ಉಳಿದು ಕೊಳ್ಳುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ ಎಂದು ನಾಯರ್ ಹೇಳಿದ್ದಾರೆ.
  • ಸೆಪ್ಟೆಂಬರ್‌ನಲ್ಲಿ ಐಐಪಿ ಹೆಚ್ಚಳ ಕಂಡಿದ್ದರೂ, ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ (ಏಪ್ರಿಲ್‌–ಸೆಪ್ಟೆಂಬರ್‌ ಅವಧಿ) ಕೈಗಾರಿಕಾ ಉತ್ಪಾದನೆಯು ಶೇ 3ರಷ್ಟು ಮಾತ್ರ ಬೆಳವಣಿಗೆ ಕಂಡಿದೆ. ಹಿಂದಿನ ವರ್ಷದ ಮೊದಲಾರ್ಧದಲ್ಲಿ ಇದು ಶೇ 4.1ರಷ್ಟು ಬೆಳವಣಿಗೆ ದಾಖಲಿಸಿತ್ತು.
  • ಚಾಟ್ಜಿಪಿಟಿ ಗೊಒಂದು ವರ್ಷ ಉಚಿತ

ಸಂದರ್ಭ: ಹೆಚ್ಚಿನ ಪ್ರಶ್ನೆಗಳನ್ನು ಕೇಳಲು ಹಾಗೂ ಹೆಚ್ಚು ಚಿತ್ರಗಳನ್ನು ಸೃಷ್ಟಿಸಿಕೊಳ್ಳಲು ಅವಕಾಶ ನೀಡುವಚಾಟ್ಜಿಪಿಟಿ ಗೊ ಆವೃತ್ತಿಯನ್ನು ಭಾರತದ ಬಳಕೆ ದಾರರಿಗೆ1 ವರ್ಷದ ಅವಧಿಗೆ ಉಚಿತ ವಾಗಿ ನೀಡುವುದಾಗಿ ಓಪನ್ಎಐ ಕಂಪನಿ ಮಂಗಳವಾರ ಹೇಳಿದೆ.

  • ನವೆಂಬರ್‌ 4ರಿಂದ ಆರಂಭವಾಗುವ ಸೀಮಿತ ಅವಧಿಯ ಕೊಡುಗೆ ಸಂದರ್ಭದಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಬಳಕೆ ದಾರರಿಗೆ ಮಾತ್ರ ಇದು ಸಿಗಲಿದೆ.
  • ‘ಚಾಟ್‌ಜಿಪಿಟಿ ಗೊ’ ಆವೃತ್ತಿಯನ್ನು ಚಂದಾ ಆಧಾರದಲ್ಲಿ ಓ‍‍ಪನ್‌ಎಐ ಕಂಪನಿಯು ಆಗಸ್ಟ್‌ನಲ್ಲಿ ಅನಾವರಣ ಮಾಡಿದೆ. ಅನಾವರಣಗೊಳಿಸಿದ ಒಂದೇ ತಿಂಗಳಲ್ಲಿ ಭಾರತದಲ್ಲಿ ಚಾಟ್‌ಜಿಪಿಟಿ ಚಂದಾದಾರರ ಸಂಖ್ಯೆಯು ಎರಡು ಪಟ್ಟಿಗಿಂತ ಹೆಚ್ಚಳ ಕಂಡಿದೆ. ಓಪನ್‌ಎಐ ಪಾಲಿಗೆ ಭಾರತವು ಎರಡನೆಯ ಅತಿದೊಡ್ಡ ಮಾರುಕಟ್ಟೆಯಾಗಿದೆ.‘ಚಾಟ್‌ಜಿಪಿಟಿ ಗೊ’ ಆವೃತ್ತಿಗೆ ಈಗಾಗಲೇ ಚಂದಾದಾರರಾಗಿರುವ ಭಾರತೀಯರು 12 ತಿಂಗಳ ಉಚಿತ ಕೊಡುಗೆಗೆ ಅರ್ಹರು.
  • ರಷ್ಯಾ ತೈಲ ಖರೀದಿ ನಿಲ್ಲದು

ಸಂದರ್ಭ: ಇಂಡಿಯನ್ಆಯಿಲ್ ಕಾರ್ಪೊರೇಷನ್ (ಐಒಸಿ) ಹಾಗೂ ಭಾರತದ ಇತರ ತೈಲ ಸಂಸ್ಕರಣಾ ಕಂಪನಿಗಳು ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದನ್ನು ಸಂಪೂರ್ಣವಾಗಿ ಕೈಬಿಡುವ ಸಾಧ್ಯತೆ ಇಲ್ಲ.

  • ಅಮೆರಿಕವು ನಿರ್ಬಂಧ ವಿಧಿಸಿರುವುದು ರಷ್ಯಾದ ಕೆಲವು ಕಂಪನಿಗಳ ಮೇಲೆ; ನಿರ್ಬಂಧವು ರಷ್ಯಾದ ಕಚ್ಚಾ ತೈಲದ ಮೇಲೆ ಇಲ್ಲ. ಹೀಗಾಗಿ ನಿರ್ಬಂಧ ಇಲ್ಲದ ಕಂಪನಿಗಳ ಮೂಲಕ ಖರೀದಿಯು ಮುಂದುವರಿಯುವ ಸಾಧ್ಯತೆ ಇದೆ.
  • ರೊಸ್ನೆಫ್ಟ್‌ ಸೇರಿ ರಷ್ಯಾದ ನಾಲ್ಕು ಕಂಪನಿಗಳ ಮೇಲೆ ಇದುವರೆಗೆ ನಿರ್ಬಂಧ ಹೇರಲಾಗಿದೆ. ಆದರೆ ರೊಸ್ನೆಫ್ಟ್ ಕಂಪನಿಯು ತೈಲ ಉತ್ಪಾದಕ ಅಲ್ಲ; ಅದು ಉತ್ಪಾದಕರಿಂದ ಕಚ್ಚಾ ತೈಲವನ್ನು ಗ್ರಾಹಕರಿಗೆ ಒದಗಿಸಿಕೊಡುವ ಕಂಪನಿ. ರೊಸ್ನೆಫ್ಟ್‌ ಮಾಡುವ ಕೆಲಸವನ್ನು ರಷ್ಯಾದಲ್ಲಿ ಇತರ ಕಂಪನಿಗಳು ಮಾಡಬಹುದು, ಆಗ ಕಚ್ಚಾ ತೈಲದ ಪೂರೈಕೆಗೆ ಅಡ್ಡಿ ಇರುವುದಿಲ್ಲ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
  • ರೊಸ್ನೆಫ್ಟ್‌ ಮತ್ತು ಲುಕಾಯಿಲ್ ಕಂಪನಿಗಳ ಮೇಲೆ ನಿರ್ಬಂಧವಿದೆ. ರಷ್ಯಾದ ಕಚ್ಚಾ ತೈಲದ ಮೇಲೆ ನಿರ್ಬಂಧ ಇಲ್ಲ. ನಿರ್ಬಂಧಕ್ಕೆ ಗುರಿಯಾಗಿರದ ರಷ್ಯಾದ ಇತರ ಕಂಪನಿಗಳಿಂದ ಖರೀದಿಯನ್ನು ಪರಿಗಣಿಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
  • ‘ನಿರ್ಬಂಧದ ನಿಯಮಗಳನ್ನು ಪಾಲಿಸಲಾಗುತ್ತದೆ. ಆದರೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದನ್ನು ನಾವು ನಿಲ್ಲಿಸುವುದಿಲ್ಲ. ರಷ್ಯಾದ ಕಚ್ಚಾ ತೈಲದ ಮೇಲೆ ನಿರ್ಬಂಧ ಇಲ್ಲ’ ಎಂದು ಐಒಸಿ ನಿರ್ದೇಶಕ ಅನುಜ್ ಜೈನ್ ಹೇಳಿದ್ದಾರೆ.
  • ಸ್ಮೃತಿ ಜೀವನಶ್ರೇಷ್ಠ ರೇಟಿಂಗ್
  • ಭಾರತ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಐಸಿಸಿ ಏಕದಿನ ಕ್ರಿಕೆಟ್‌ ಬ್ಯಾಟಿಂಗ್‌ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ತವರಿನಲ್ಲಿ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯಲ್ಲಿ ಮಿಂಚುತ್ತಿರುವ ಅವರು ತಮ್ಮ ವೃತ್ತಿಜೀವನದಲ್ಲೇ ಅತ್ಯುತ್ತಮ ರೇಟಿಂಗ್‌ ಪಾಯಿಂಟ್ಸ್‌ ಗಳಿಸಿದ್ದಾರೆ.

29 ವರ್ಷದ ಎಡಗೈ ಬ್ಯಾಟರ್‌ ಮಂದಾನ ತಮ್ಮ ಕೊನೆಯ ಎರಡು ಪಂದ್ಯಗಳಲ್ಲಿ ಕ್ರಮವಾಗಿ ನ್ಯೂಜಿಲೆಂಡ್ ವಿರುದ್ಧ 109 ರನ್‌ ಮತ್ತು ಬಾಂಗ್ಲಾದೇಶ ವಿರುದ್ಧ ಔಟಾಗದೇ 34 ರನ್ ಗಳಿಸಿದ್ದಾರೆ. ಇದರೊಂದಿಗೆ ರೇಟಿಂಗ್‌ ಪಾಯಿಂಟ್ಸ್‌ಗಳನ್ನು  828ಕ್ಕೆ ಹೆಚ್ಚಿಸಿಕೊಂಡಿದ್ದಾರೆ.