Fri. Mar 27th, 2026

Kannada

ಪ್ರಚಲಿತ ವಿದ್ಯಮಾನಗಳು: 13ನೇ ಅಕ್ಟೋಬರ್ 2025

  • ನವಲಗುಂದ ಧುರಿ; ತಯಾರಕರ ಕೊರತೆ

ಸಂದರ್ಭ: ಶತಮಾನಗಳ ಇತಿಹಾಸವುಳ್ಳ ಮತ್ತು ಭೌಗೋಳಿಕ ಮಾನ್ಯತೆ (ಜಿಐ) ಪಡೆದಿರುವ ಧಾರವಾಡ ಜಿಲ್ಲೆ ನವಲಗುಂದದ ಧುರಿಗಳ (ಜಮಖಾನ) ತಯಾರಿಕೆಗೆ ತಯಾರಕರ ಕೊರತೆ ಕಾಡುತ್ತಿದೆ.

  • ನವಲಗುಂದದ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ (ಕಾವೇರಿ ಎಂಪೋರಿಯಂ) ಘಟಕದಲ್ಲಷ್ಟೇ ಸದ್ಯ ಜಮಖಾನಗಳ ಉತ್ಪಾದನೆ ಆಗುತ್ತಿದೆ. ಇವುಗಳ ತಯಾರಿಕೆ ಮಾಡುವವರ ಸಂಖ್ಯೆ 17ಕ್ಕೆ ಇಳಿದಿದೆ.
  • ‘ಪಾರಂಪರಿಕ ನೇಯ್ಗೆ ಕಲೆಯನ್ನು ಮಕ್ತುಲ್‌ ಸಾಬ್‌ ಜಮಖಾನ್ದಾರ್‌ ಅವರು ನಮಗೆ ಕಲಿಸಿದರು. ನಾನು ತರಬೇತಿ ಪಡೆದಾಗ 150ಕ್ಕೂ ಹೆಚ್ಚು ಮಂದಿ ಕಾರ್ಮಿಕರು ತಯಾರಿಸುತ್ತಿದ್ದರು. ಕ್ರಮೇಣ ಅವರ ಸಂಖ್ಯೆ ಕುಸಿಯುತೊಡಗಿತು’ ಎಂದ ನವಲಗುಂದ ನೇಕಾರರ ಸಂಘದ ಅಧ್ಯಕ್ಷೆ.
  • ‘ಜಮಖಾನ ತಯಾರಿಸುವವರಿಗೆ ಸರ್ಕಾರದಿಂದ ವಿಶೇಷ ನೆರವು ಇಲ್ಲ. ಜಮಖಾನ ಮಾರಾಟದಿಂದ ತಿಂಗಳಿಗೆ ₹2 ಲಕ್ಷದವರೆಗೆ ಆದಾಯಗಳಿಸುವ ಸಾಧ್ಯತೆ ಇದ್ದರೂ, ತಯಾರಕರ ಕೊರತೆಯಿಂದ ಅದು ಸಾಧ್ಯವಾಗುತ್ತಿಲ್ಲ. ಒಂದೊಂದು ಜಮಖಾನ ದರ ₹ 1 ಸಾವಿರದಿಂದ ₹ 10 ಸಾವಿರದವರೆಗೆ ಇರುತ್ತದೆ. ಸದ್ಯ ತಿಂಗಳಿಗೆ 100 ರಿಂದ 200 ಜಮಖಾನ ತಯಾರಿಸಲಾಗುತ್ತಿದೆ’.

ಪರಂಪರೆಯೂ ಕಾರಣ

  • ‘ಜಮಖಾನ ತಯಾರಿಕೆ, ಮಾರಾಟದ ಹೊಣೆಯನ್ನು ಸರ್ಕಾರ ವಹಿಸಿಕೊಂಡಿದೆ. ಹೊಸದಾಗಿ ತರಬೇತಿ ಪಡೆದವರು ಆ ಕೆಲಸ ಮುಂದುವರಿಸುವುದಿಲ್ಲ. ಮುಖ್ಯವಾಗಿ ಕೌಶಲ ಗೊತ್ತಿರುವವರು ಮನೆಯ ಹೆಣ್ಣುಮಕ್ಕಳಿಗೆ ಕಲಿಸುವುದಿಲ್ಲ. ಹೊಸ ಪೀಳಿಗೆಗೆ ಈ ಬಗ್ಗೆ ಆಸಕ್ತಿ ಇಲ್ಲ. ತಯಾರಕರ ಸಂಖ್ಯೆ ಕುಸಿಯಲು ಇದೂ ಕಾರಣ’ ಎಂದು ಕೈಮಗ್ಗ ಹಾಗೂ ಜವಳಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.
  • ಗುತ್ತಿಗೆದಾರರಿಗಾಗಿ ವಿದ್ಯುತ್ಪಂಪ್ಡ್ಸ್ಟೋರೇಜ್ಯೋಜನೆ

ಸಂದರ್ಭ: ಗುತ್ತಿದಾರರಿಗೆ ಅನುಕೂಲ ಮಾಡಿಕೊಡಲೆಂದೇ  ಶರಾವತಿ ಮತ್ತು ವಾರಾಹಿ ಪಂಪ್ಡ್ಸ್ಟೋರೇಜ್ಯೋಜನೆಗಳನ್ನು ರೂಪಿಸಲಾಗಿದೆ ಎಂದು ಪರಿಸರ ಹೋರಾಟಗಾರ ಅಖಿಲೇಶ್ಚಿಪ್ಲಿ ಆರೋಪಿಸಿದರು.

  • ಕೇಂದ್ರ ಅರಣ್ಯ, ಪರಿಸರ ಮತ್ತು ವನ್ಯಜೀವಿ ಸಚಿವಾಯಲದಿಂದ ಅನುಮತಿ ಸಿಕ್ಕಿಲ್ಲ. ಈ ಅನುಮತಿಗಾಗಿ ರಾಜ್ಯ ಸರ್ಕಾರವು ಈ ವರ್ಷದ ಜನವರಿಯಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಆದರೆ, 2024ರಲ್ಲಿಯೇ ಆಂಧ್ರಪ್ರದೇಶದ ‘ಮೇಘಾ ಎಂಜಿನಿಯರಿಂಗ್ ವರ್ಕ್ಸ್‌’ ಎಂಬ ಕಂಪನಿಗೆ ಟೆಂಡರ್‌ ಆಗಿದೆ ಎಂದು ಹೇಳಿದರು.
  • ಬ್ಯಾಟರಿ ಸ್ಟೋರೇಜ್‌ ಎನರ್ಜಿ ಸಿಸ್ಟಂ ಮೂಲಕ ಎಲ್ಲಿ ಬೇಕಾದರೂ ವಿದ್ಯುತ್‌ ಸ್ಟೋರೇಜ್‌ ಮಾಡಲು ಅವಕಾಶವಿದೆ. ಆದರೂ ಪಶ್ಚಿಮ ಘಟ್ಟದ ಸಂರಕ್ಷಿತ ಪ್ರದೇಶದಲ್ಲಿ ಶರಾವತಿ ಮತ್ತು ವಾರಾಹಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗಳನ್ನು ಅನುಷ್ಠಾನ ಮಾಡಲು ಸರ್ಕಾರ ಹೊರಟಿದೆ ಎಂದು ಬೇಸರ ವ್ಯಕ್ತಪಡಿಸಿದರು.
  • ಗುಂಡಿಬೈಲು, ಹೆನ್ನಿ, ಹಿರೇಹೆನ್ನಿ ಮುಂತಾದ ಪ್ರದೇಶಗಳಲ್ಲಿ 350ಕ್ಕೂ ಅಧಿಕ ಕುಟುಂಬಗಳು ಯಾವುದೇ ಹಕ್ಕುಪತ್ರ ಇಲ್ಲದೇ ಬಹಳ ವರ್ಷಗಳಿಂದ ಬದುಕುತ್ತಿವೆ. ಈ ಪಂಪ್ಡ್‌ ಸ್ಟೋರೇಜ್‌ ಯೋಜನೆಯಡಿ ಈ ಕುಟುಂಬಗಳನ್ನು ಕೂಡ ಒಕ್ಕಲೆಬ್ಬಿಸಲಾಗುತ್ತದೆ. ಆದರೆ, ಹಕ್ಕುಪತ್ರ ಇಲ್ಲದೇ ಇರುವುದರಿಂದ ಇವರಿಗೆ ಯಾವುದೇ ಪರಿಹಾರ ಸಿಗುವುದಿಲ್ಲ ಎಂದು ಹೇಳಿದರು.
  • 1,800 ಟನ್‌ ಸ್ಫೋಟಕಗಳನ್ನು ಬಳಸಿ ಇಲ್ಲಿ ಸುರಂಗಗಳನ್ನು ನಿರ್ಮಿಸಲಾಗುತ್ತಿದೆ. ಗುರುತ್ವಾಕರ್ಷಣೆಗೆ ವಿರುದ್ಧವಾಗಿ ನೀರನ್ನು ಮೇಲಕ್ಕೆ ಹರಿಸಬೇಕಿರುವುದರಿಂದ ಉತ್ಪಾದನೆಗಿಂತ ಶೇ 25ರಷ್ಟು ಅಧಿಕ ವಿದ್ಯುತ್‌ ಇಲ್ಲಿ ವ್ಯಯವಾಗಲಿದೆ ಎಂದು ವಿವರಿಸಿದರು.
  • ಪರಿಸರವಾದಿ ಶಂಕರ್‌ ಶರ್ಮ ಮಾತನಾಡಿ, ‘ಈ ಯೋಜನೆ ಕುರಿತು ತಯಾರಿಸಿದ ವಿಸ್ತೃತ ಯೋಜನಾ ವರದಿಯು ಹಸಿ ಸುಳ್ಳುಗಳಿಂದ ಕೂಡಿದೆ. ಮಾಡಲೇಬೇಕಾದ ಯೋಜನೆ ಎಂದು ಎಲ್ಲಿಯೂ ಹೇಳಿಲ್ಲ. ಈ ಯೋಜನೆಗಾಗಿ 400 ಎಕರೆ ಕಾಡು ಕಡಿಯಬೇಕಾಗುತ್ತದೆ ಎಂಬುದನ್ನು ಹೇಳಿದ್ದಾರೆ. ವಿನಾಶದ ಅಂಚಿನಲ್ಲಿರುವ ಸಿಂಹಬಾಲದ ಸಿಂಗಲೀಕ ಸಹಿತ ಅನೇಕ ಜೀವಜಂತುಗಳು ನಾಶವಾಗಲಿವೆ. ಹಾಗಾಗಿ ಈ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಪರಿಸರ ಹೋರಾಟಗಾರ ಜೋಸೆಫ್‌ ಹೂವರ್‌ ಉಪಸ್ಥಿತರಿದ್ದರು.
  • ತಾಲಿಬಾನ್: ಪಾಕ್ಗೆ ದೂರ ಭಾರತಕ್ಕೆ ಇನ್ನಷ್ಟು ಹತ್ತಿರ
  • ದೇಶದಲ್ಲಿ ಲಕ್ಷಕ್ಕೂ ಅಧಿಕ ಏಕೋಪಾಧ್ಯಾಯ ಶಾಲೆಗಳು

ಸಂದರ್ಭ: ದೇಶದಲ್ಲಿ ಏಕೋಪಾಧ್ಯಾಯ ಶಾಲೆಗಳ ಸಂಖ್ಯೆ ಒಂದು ಲಕ್ಷಕ್ಕೂ ಅಧಿಕ. ಇಂಥ ಶಾಲೆಗಳಲ್ಲಿ 33 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

  • ಆಂಧ್ರಪ್ರದೇಶದಲ್ಲಿ ಇಂಥ ಶಾಲೆಗಳ ಸಂಖ್ಯೆ ಹೆಚ್ಚು ಇದ್ದು, ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಉತ್ತರ ಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ಕರ್ನಾಟಕ ಹಾಗೂ ಲಕ್ಷದ್ವೀಪ ಇವೆ. ಶಿಕ್ಷಣ ಸಚಿವಾಲಯವು ಬಿಡುಗಡೆ ಮಾಡಿರುವ 2024–25ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದ ದತ್ತಾಂಶದಲ್ಲಿ ಈ ಮಾಹಿತಿ ಇದೆ.
  • ಏಕೋಪಾಧ್ಯಾಯ ಶಾಲೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆಯ ದೃಷ್ಟಿಯಿಂದ ನೋಡಿದಾಗ, ಉತ್ತರ ಪ್ರದೇಶ ಅಗ್ರ ಸ್ಥಾನದಲ್ಲಿದ್ದು, ನಂತರದ ಸ್ಥಾನಗಳಲ್ಲಿ ಜಾರ್ಖಂಡ್, ಪಶ್ಚಿಮ ಬಂಗಾಳ ಹಾಗೂ ಮಧ್ಯಪ್ರದೇಶ ಇವೆ ಎಂದು ಸಚಿವಾಲಯ ತಿಳಿಸಿದೆ.
  • ಡೀಪ್ಫೇಕ್‌, . ನಿಯಂತ್ರಣಕ್ಕೆ ಕಾನೂನು ಅಗತ್ಯ: ನ್ಯಾ. ನಾಗರತ್ನ

ಸಂದರ್ಭ: ಡೀಪ್ಫೇಕ್ಮತ್ತು . ಮೂಲಕ ಮಕ್ಕಳ ಮೇಲೆ ನಡೆಯಬಹುದಾದ ದೌರ್ಜನ್ಯ ಗಳ ನಿಗ್ರಹಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದು ಅತ್ಯಗತ್ಯ ವಾಗಿದೆ ಎಂದು ಸುಪ್ರೀಂ ಕೋರ್ಟ್ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು ಹೇಳಿದರು.

  • ಕಾರ್ಯಕ್ರಮವೊಂದರಲ್ಲಿ ಮಾತ ನಾಡಿದ ಅವರು, ‘ಸೂಕ್ತ ಮುನ್ನೆಚ್ಚ ರಿಕೆಯ ಮೂಲಕ ನಾವು ದೌರ್ಜನ್ಯ ಮತ್ತು ಮಕ್ಕಳ ಕಳ್ಳಸಾಗಾಣಿಕೆಯನ್ನು ತಡೆಯಲು ಸಾಧ್ಯವಿದೆ’ ಎಂದು ತಿಳಿಸಿದರು.
  • ‘ವಿಕಾಸಗೊಳ್ಳುತ್ತಿರುವ ಹೊಸ ತಂತ್ರಜ್ಞಾನಗಳು ಉಂಟು ಮಾಡುತ್ತಿರುವ ಅಪಾಯಗಳು ಜಗತ್ತಿಗೆ ತೂಗುಗತ್ತಿ ಯಂತಾಗಿವೆ. ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ವಿಚಾರ ಗಳ ಮೇಲೆ ನಿಗಾ ಇಡಲು ಮತ್ತು ಆನ್‌ಲೈನ್‌ ವೇದಿಕೆಗಳಲ್ಲಿ ವಯಸ್ಸಿನ ಮಿತಿ ಹೇರಲು ಕಾನೂನು ರೂಪಿಸಬೇಕು’ ಎಂದರು.
  • ‘ಎಐ ಮತ್ತು ಇತರ ತಂತ್ರಜ್ಞಾನಗಳು ಹೆಣ್ಣುಮಕ್ಕಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಮತ್ತು ಅವುಗಳನ್ನು ಹೇಗೆ ನಿಗ್ರಹಿಸಬಹುದು ಎಂಬುವುದರ ಕುರಿತು ಅಧ್ಯಯನಕ್ಕೆ ‘ಹೆಣ್ಣುಮಕ್ಕಳ ವಿರುದ್ಧದ ಎ.ಐ ಸೈಬರ್‌ ಅಪರಾಧಗಳ ನಿಗ್ರಹ ಸಲಹಾ ಸಮಿತಿ’ ರಚನೆಯ ಸಾಧ್ಯತೆಯನ್ನು ಸುಪ್ರೀಂ ಕೋರ್ಟ್‌ ಪರಿಗಣಿಸಬಹುದು’ ಎಂದು ತಿಳಿಸಿದರು.
  • ನೆರವು ಸಾಮಗ್ರಿ: ಗಾಜಾ ಪ್ರವೇಶಕ್ಕೆ ಸಿದ್ಧತೆ

ಸಂದರ್ಭ: ಗಾಜಾ ಪಟ್ಟಿಯೊಳಗೆ ಹೆಚ್ಚಿನ ನೆರವು ಸಾಮಗ್ರಿಗಳನ್ನು ಕೊಂಡೊಯ್ಯುವ ಸಿದ್ಧತೆಗಳು ಭಾನುವಾರ ಆರಂಭಗೊಂಡಿವೆ. ‘ಭಾನುವಾರದಿಂದ ಪ್ರತಿ ದಿನವು ನೆರವು ಸಾಮಗ್ರಿಗಳನ್ನು ಹೊತ್ತ 600 ಟ್ರಕ್ಗಳು ಗಾಜಾ ಪ್ರವೇಶಿಸಲಿವೆ ಎಂದು ಇಸ್ರೇಲ್ಹೇಳಿದೆ.

  • ಕದನ ವಿರಾಮದ ಒಪ್ಪಂದದಂತೆ ಸಕಲ ಸಿದ್ಧತೆ ನಡೆಯುತ್ತಿದೆ. ‘ನಾವು ಸುಮಾರು 400 ಟ್ರಕ್‌ಗಳನ್ನು ಕಳುಹಿಸುತ್ತಿದ್ದೇವೆ’ ಎಂದು ಈಜಿಪ್ಟ್‌ ಹೇಳಿದೆ. ಆದರೆ, ಇಸ್ರೇಲ್‌ ಸೇನೆಯ ಪರಿಶೀಲನೆ ಬಳಿಕವೇ ಎಲ್ಲ ಟ್ರಕ್‌ಗಳು ಗಾಜಾ ಪ್ರವೇಶಿಸಲಿವೆ.
  • ಇಸ್ರೇಲ್‌ ನೆರವು ಕೇಂದ್ರ ಧ್ವಂಸ: ವಿಶ್ವಸಂಸ್ಥೆಯ ನೆರವು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಇಸ್ರೇಲ್‌ ತನ್ನದೇ ನೆರವು ಕೇಂದ್ರಗಳನ್ನು ಸ್ಥಾಪಿಸಿತ್ತು. ಇದಕ್ಕೆ ಅಮೆರಿಕದ ಬೆಂಬಲವೂ ಇತ್ತು. ಇವುಗಳನ್ನು ‘ಗಾಜಾ ಮಾನವೀಯ ನೆರವು ಫೌಂಡೇಶನ್‌’ ನಿರ್ವಹಿಸುತ್ತಿತ್ತು.ಗಾಜಾ ಪಟ್ಟಿಯ ವಿವಿಧೆಡೆ ಸ್ಥಾಪಿಸಲಾಗಿದ್ದ ಈ ಕೇಂದ್ರಗಳನ್ನು ಜನರು ಕಿತ್ತುಹಾಕುತ್ತಿದ್ದಾರೆ. ಈ ಕೇಂದ್ರಕ್ಕೆ ಬರುವ ಜನರನ್ನು ನಿಯಂತ್ರಿಸುವ ಸಲುವಾಗಿ ಅಳವಡಿಸಲಾಗಿದ್ದ ಬೇಲಿಗಳನ್ನೂ ಕಿತ್ತೆಸೆದಿದ್ದಾರೆ.
  • ‘ನೆರವು ಕಾರ್ಯಗಳಲ್ಲಿ ಹಮಾಸ್‌ ಮಧ್ಯ ಪ್ರವೇಶಿಸುತ್ತಿತ್ತು, ಇದನ್ನು ತಡೆಯಲು ಇಂಥ ಕೇಂದ್ರಗಳನ್ನು ತೆರೆಯಲಾಗಿತ್ತು. ಇವುಗಳು ಉತ್ತಮ ಕೆಲಸ ಮಾಡಿವೆ’ ಎಂದು ಇಸ್ರೇಲ್‌ ಮತ್ತು ಅಮೆರಿಕ ಹೊಗಳಿವೆ. ಈ ಕೇಂದ್ರದ ಮುಂದೆ ಆಹಾರಕ್ಕಾಗಿ ನಿಂತಿದ್ದ ನೂರಾರು ಜನರನ್ನು ಇಸ್ರೇಲ್‌ ಸೇನೆ ಹತ್ಯೆ ಮಾಡಿತ್ತು.

ಇಸ್ರೇಲ್‌ಗೆ ಟ್ರಂಪ್‌ ಭೇಟಿ

  • ಕದನ ವಿರಾಮ ಒಪ್ಪಂದಕ್ಕೆ ಬರುವಂತೆ ಇಸ್ರೇಲ್‌ ಮತ್ತು ಹಮಾಸ್‌ ಸಂಘಟನೆಯನ್ನು ಒತ್ತಾಯಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಸೋಮವಾರ ಇಸ್ರೇಲ್‌ಗೆ ಭೇಟಿ ನೀಡಲಿದ್ದಾರೆ. ಒತ್ತೆಯಾಳುಗಳ ಕುಟುಂಬಗಳನ್ನು ಅವರು ಇಸ್ರೇಲ್‌ ಸಂಸತ್ತಿನಲ್ಲಿ ಭೇಟಿ ಮಾಡಲಿದ್ದಾರೆ. ಶ್ವೇತಭವನವು ಬಿಡುಗಡೆ ಮಾಡಿದ ಅಧ್ಯಕ್ಷರ ಕಾರ್ಯಕ್ರಮ  ಪಟ್ಟಿಯಲ್ಲಿ ಈ ಮಾಹಿತಿ ಇದೆ.
  • ಇಸ್ರೇಲ್‌ ಬಳಿಕ ಟ್ರಂಪ್‌ ಅವರು ಈಜಿಪ್ಟ್‌ಗೆ ಭೇಟಿ ನೀಡಲಿದ್ದಾರೆ. ಪ್ರಾದೇಶಿಕ ಹಾಗೂ ಅಂತರರಾಷ್ಟ್ರೀಯ ನಾಯಕರು ಪಾಲ್ಗೊಳ್ಳುವ ‘ಶಾಂತಿ ಶೃಂಗಸಭೆ’ಯಲ್ಲಿ ಟ್ರಂಪ್‌ ಸೋಮವಾರ ಭಾಗವಹಿಸಲಿದ್ದಾರೆ ಎಂದು ಈಜಿಪ್ಟ್‌ ಅಧ್ಯಕ್ಷ ಅಬ್ದುಲ್‌ ಫತ್ತಾಹ್‌ ಅಲ್‌ ಸೀಸಿ ಕಚೇರಿ ಮಾಹಿತಿ ನೀಡಿದೆ.

ಪ್ರಚಲಿತ ವಿದ್ಯಮಾನಗಳು: 12ನೇ ಅಕ್ಟೋಬರ್ 2025

ಭಾರತದ ರಫ್ತುದಾರರಿಗೆ ಲಾಭ?
ಸಂದರ್ಭ: ನವೆಂಬರ್‌ 1ರಿಂದ ಜಾರಿಗೆ ಬರುವಂತೆ ಚೀನಾದ ಸರಕುಗಳ ಆಮದಿನ ಮೇಲೆ ಅಮೆರಿಕ ಹೆಚ್ಚುವರಿಯಾಗಿ ಶೇ 100ರಷ್ಟು ಸುಂಕ ವಿಧಿಸಿದೆ. ಇದೀಗ ಒಟ್ಟು ಸುಂಕ ಶೇ 130ರಷ್ಟಾಗಿದೆ. ಪ್ರಸ್ತುತ ಭಾರತದ ಸರಕುಗಳ ಆಮದಿನ ಮೇಲೆ ಅಮೆರಿಕ ಶೇ 50ರಷ್ಟು ಸುಂಕ ವಿಧಿಸುತ್ತಿದೆ.
  • ‘ಚೀನಾದ ಮೇಲೆ ಅಮೆರಿಕ ವಿಧಿಸಿರುವ ಅಧಿಕ ಸುಂಕದಿಂದ ಭಾರತದ ಸರಕುಗಳಿಗೆ ಬೇಡಿಕೆ ಬರಲಿದೆ. ಈ ಸಮರದಿಂದ ನಾವು ಗಳಿಕೆ ಕಾಣುವ ನಿರೀಕ್ಷೆ ಇದೆ.
  • ಕಳೆದ ಆರ್ಥಿಕ ವರ್ಷದಲ್ಲಿ ಅಮೆರಿಕಕ್ಕೆ ಭಾರತದಿಂದ ₹7.62 ಲಕ್ಷ ಕೋಟಿಯಷ್ಟು ಮೌಲ್ಯದ ಸರಕುಗಳು ರಫ್ತಾಗಿದ್ದವು.
  • ಈ ಸುಂಕ ಹೆಚ್ಚಳದ ಪರಿಣಾಮ ಚೀನಾದ ಸರಕುಗಳ ಬೆಲೆಯು ಅಮೆರಿಕದಲ್ಲಿ ಹೆಚ್ಚಳವಾಗಲಿದೆ. ಇದರಿಂದ ಸ್ಪರ್ಧಾತ್ಮಕತೆ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆ.
  • ಅಮೆರಿಕ ಮತ್ತು ಚೀನಾದ ನಡುವೆ ನಡೆಯುತ್ತಿರುವ ವ್ಯಾಪಾರ ಸಮರವು, ಜಾಗತಿಕ ಮಾರುಕಟ್ಟೆಗಳಲ್ಲಿ ವಿದ್ಯುತ್‌ ಚಾಲಿತ ವಾಹನ, ಪವನ ವಿದ್ಯುತ್‌ ಉತ್ಪಾದನಾ ಯಂತ್ರ, ಸೆಮಿಕಂಡಕ್ಟರ್‌ನ ಬಿಡಿ ಭಾಗಗಳ ಬೆಲೆ ಹೆಚ್ಚಳ ಮಾಡಲಿದೆ ಎಂದು ಗ್ಲೋಬಲ್ ಟ್ರೇಡ್ ರಿಸರ್ಚ್‌ ಇನಿಷಿಯೇಟಿವ್ (ಜಿಟಿಆರ್‌ಐ) ಹೇಳಿದೆ.
  • ಚೀನಾದ ಎಲೆಕ್ಟ್ರಾನಿಕ್ಸ್‌, ಜವಳಿ, ಪಾದರಕ್ಷೆ, ಸೌರ ಫಲಕಗಳನ್ನು ಅಮೆರಿಕ ಹೆಚ್ಚಾಗಿ ಅವಲಂಬಿಸಿದೆ ಎಂದು ಹೇಳಿದೆ.
  • ಸತತ ನಾಲ್ಕು ಆರ್ಥಿಕ ವರ್ಷದಿಂದ ಅಮೆರಿಕವು ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿ ಉಳಿದಿದೆ. 2024–25ರಲ್ಲಿ ದ್ವಿಪಕ್ಷೀಯ ವ್ಯಾಪಾರ ಮೌಲ್ಯ ₹11.69 ಲಕ್ಷ ಕೋಟಿಯಾಗಿದೆ. ದೇಶದ ಒಟ್ಟು ಸರಕುಗಳ ರಫ್ತಿನಲ್ಲಿ ಅಮೆರಿಕದ ಪಾಲು ಶೇ 18ರಷ್ಟಿದೆ. ಆಮದು ಶೇ 6ರಷ್ಟಿದೆ.

ಎರಡು ಕೃಷಿ ಯೋಜನೆಗಳಿಗೆ ಚಾಲನೆ
ಸಂದರ್ಭ: ಒಟ್ಟು ₹35,440 ಕೋಟಿ ಮೊತ್ತದ ಎರಡು ಕೃಷಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ದ್ವಿದಳ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಉದ್ದೇಶದ ಒಂದು ಯೋಜನೆ ಕೂಡ ಇದರಲ್ಲಿ ಸೇರಿದೆ.
  • ಆಮದು ಮೇಲಿನ ಅವಲಂಬನೆ ಕಡಿಮೆ ಮಾಡಲು ಹಾಗೂ ಜಾಗತಿಕ ಬೇಡಿಕೆಗೆ ಸ್ಪಂದಿಸಲು ರೈತರು ಉತ್ಪಾದಕತೆಯನ್ನು ಹೆಚ್ಚಿಸಬೇಕು.
  • ಪ್ರಧಾನಿಯವರು ಚಾಲನೆ ನೀಡಿದ ಎರಡೂ ಯೋಜನೆಗಳಿಗೆ ಕೇಂದ್ರ ಸಂಪುಟವು ಈಗಾಗಲೇ ಅನುಮೋದನೆ ನೀಡಿದ್ದು, ಮುಂಬರುವ ಹಿಂಗಾರು ಬಿತ್ತನೆ ಅವಧಿಯಿಂದ 2030–31ರವರೆಗೆ ಇವು ಜಾರಿಯಲ್ಲಿ ಇರಲಿವೆ. ಈ ಯೋಜನೆಗಳು ದೇಶದ ಲಕ್ಷಾಂತರ ಮಂದಿ ರೈತರ ಹಣೆಬರಹವನ್ನು ಬದಲಿಸಲಿವೆ.
ಯೋಜನೆಗಳು
₹24 ಸಾವಿರ ಕೋಟಿ ಗಾತ್ರದ ‘ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆ’
₹11,400 ಕೋಟಿ ಗಾತ್ರದ ‘ದ್ವಿದಳ ಧಾನ್ಯಗಳಲ್ಲಿ ಆತ್ಮ ನಿರ್ಭರತೆಯ ಯೋಜನೆ’

ಮೂಲಗಳು: ಪ್ರ.ವಾ

ಪ್ರಚಲಿತ ವಿದ್ಯಮಾನಗಳು: 11ನೇ ಅಕ್ಟೋಬರ್ 2025

  • ಲಕ್ಕವಳ್ಳಿ ಜಲಾಶಯಕ್ಕೆ ಹರಿಯಲಿದ್ದಾಳೆ ತುಂಗೆ

ಸಂದರ್ಭ: ಭದ್ರಾ ಮೇಲ್ದಂಡೆ ಯೋಜನೆ ಅಡಿ ಗಾಜನೂರಿನ ತುಂಗಾ ಜಲಾಶಯದಿಂದ ನಾಲೆಯ ಮೂಲಕ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ 17.4 ಟಿಎಂಸಿ ಅಡಿ ನೀರು ಹರಿಸುವ ಯೋಜನೆಯ ಕಾಮಗಾರಿ ಅಂತಿಮ ಹಂತ ತಲುಪಿದೆ. ಬೇಸಿಗೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲು (ಟ್ರಯಲ್ರನ್) ವಿಶ್ವೇಶ್ವರಯ್ಯ ಜಲ ನಿಗಮ (ವಿಜೆಎನ್ಎಲ್‌) ಸಿದ್ಧತೆ ನಡೆಸಿದೆ.

  • ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್.ಪುರ ತಾಲ್ಲೂಕಿನ ಮುತ್ತಿನಕೊಪ್ಪ ಬಳಿ ತುಂಗಾ ಜಲಾಶಯದ ಹಿನ್ನೀರನ್ನು ಆರಂಭದಲ್ಲಿ ಗುರುತ್ವ ಬಲ, ನಂತರ ಪಂಪ್‌ ಮಾಡಿ ನಾಲೆಗೆ ಹರಿಸಿ, ಅಲ್ಲಿಂದ 11.2 ಕಿ.ಮೀ. ಅಂತರದ ನೆಲಗದ್ದೆಗೆ ಕೊಂಡೊಯ್ದು, ಗುರುತ್ವ ಕಾಲುವೆಯ ಮೂಲಕ ಭದ್ರಾ ಜಲಾಶಯಕ್ಕೆ ಹರಿಸಲಾಗುತ್ತದೆ. ಇದಕ್ಕಾಗಿ ಕೆ.ಕಣಬೂರು, ಸಾತಕುಳಿ ಬಳಿ ಪಂಪ್‌ಹೌಸ್‌ ನಿರ್ಮಿಸಲಾಗಿದೆ.
  • ‘ಕಣಬೂರು ಪಂಪ್‌ಹೌಸ್ ಪೂರ್ಣಗೊಂಡಿದೆ. ಸಾತಕುಳಿಯಲ್ಲಿ ಕಾಮಗಾರಿ ಅಂತಿಮ ಹಂತದಲ್ಲಿದೆ. ಪಂಪ್ ಅಳವಡಿಕೆ, ವಿದ್ಯುತ್‌ ಟವರ್‌ ಹಾಕುವ ಕೆಲಸವೂ ಮುಗಿದಿದೆ. ಈಗ ಪಂಪ್‌ಹೌಸ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅರಣ್ಯ ಇಲಾಖೆಯಿಂದ ಅನುಮತಿ ಹಾಗೂ ರೈಸಿಂಗ್‌ ಲೈನ್‌ನಲ್ಲಿ ಒಂದು ಪೈಪ್‌ ಅಳವಡಿಕೆ ಕಾರ್ಯ ಮಾತ್ರ ಬಾಕಿ ಉಳಿದಿದೆ.
  • 15 ವರ್ಷಗಳ ಅವಧಿ: ಪ್ರತಿ ವರ್ಷ ಜೂನ್‌ನಿಂದ ಅಕ್ಟೋಬರ್‌ವರೆಗೆ ತುಂಗಾ ಹಿನ್ನೀರಿನಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸುವ ಯೋಜನೆ, ₹ 324 ಕೋಟಿ ವೆಚ್ಚದ ಈ ಕಾಮಗಾರಿಗೆ 2008ರಲ್ಲಿ ಟೆಂಡರ್ ಕರೆಯಲಾಗಿತ್ತು. 2010ರಲ್ಲಿ ಕೆಲಸ ಆರಂಭವಾಗಿದೆ. ನಿಗದಿಯಂತೆ 2011ರಲ್ಲೇ ಕೆಲಸ ಮುಗಿಯಬೇಕಿತ್ತು. ಅರಣ್ಯ ಪ್ರದೇಶದಲ್ಲಿ ಕಾಮಗಾರಿಗೆ ಅನುಮತಿ, ಹಣ ಬಿಡುಗಡೆಗೆ ವಿಳಂಬದ ಕಾರಣ ಆಗಲಿಲ್ಲ. ಜೂನ್‌ 2020ರ ನಂತರ ಕಾಮಗಾರಿ ವೇಗ ಪಡೆದಿದ್ದು, ಈಗ 15 ವರ್ಷಗಳ ನಂತರ ಯೋಜನೆ ಅಂತಿಮ ಹಂತ ತಲುಪಿದೆ.
  • ಭದ್ರಾ ಮೇಲ್ದಂಡೆ ಯೋಜನೆ ಜಾರಿ ಭಾಗವಾಗಿ 2019ರಿಂದ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರಕ್ಕೆ ಭದ್ರಾ ಜಲಾಶಯದಿಂದ ಬೇಸಿಗೆಯಲ್ಲಿ ಮೂರು ಟಿಎಂಸಿ ಅಡಿ ನೀರು ಹರಿಸಲಾಗುತ್ತಿದೆ.

ತುಂಗೆಯ ಪಾಲೇ ಅಧಿಕ!

  • ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ ಬಯಲು ಸೀಮೆಯ 2,25,515 ಹೆಕ್ಟೇರ್‌ ಪ್ರದೇಶಕ್ಕೆ ಕಾಲುವೆ, ಕೆರೆ ಹಾಗೂ ಹನಿ ನೀರಾವರಿ ಮೂಲಕ 29.9 ಟಿಎಂಸಿ ಅಡಿ ನೀರು ಹರಿಸಲಾಗುತ್ತದೆ.
  • ಅದಕ್ಕೆ ಭದ್ರಾ ನದಿಯಿಂದ 12.5 ಟಿಎಂಸಿ ಅಡಿ ಹಾಗೂ ತುಂಗಾದಿಂದ 17.4 ಟಿಎಂಸಿ ಅಡಿ ನೀರು ಹಂಚಿಕೆ ಮಾಡಲಾಗಿದೆ. ಹೆಸರು ಭದ್ರಾ ಮೇಲ್ದಂಡೆ ಆದರೂ ಯೋಜನೆಗೆ ತುಂಗಾ ನದಿಯ ನೀರಿನ ಪಾಲು ಹೆಚ್ಚಿದೆ.
  • ಎತ್ತಿನಹೊಳೆಗೆ 432 ಎಕರೆ ಅರಣ್ಯ ಬಳಕೆ

ಸಂದರ್ಭ:ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 432 ಎಕರೆ ಅರಣ್ಯ ಬಳಕೆಗೆ ತಾತ್ವಿಕ ಅನುಮೋದನೆ ನೀಡುವಂತೆ ಕೋರಿ ಕರ್ನಾಟಕ ಸರ್ಕಾರವು ಕೇಂದ್ರ ಅರಣ್ಯ ಸಚಿವಾಲಯಕ್ಕೆ ಮತ್ತೆ ಪ್ರಸ್ತಾವ ಸಲ್ಲಿಸಿದೆ.

  • ಹಾಸನ, ತುಮಕೂರು ಜಿಲ್ಲೆಗಳಲ್ಲಿ ಗುರುತ್ವಾಕರ್ಷಣೆ ಕಾಲುವೆ ನಿರ್ಮಿಸಲು ತುಮಕೂರಿನ ಬೆಣ್ಣೆಹಳ್ಳದ ಕಾವಲ್, ಕಂಚಿಗಾನಹಳ್ಳಿ ಹಾಗೂ ಹಾಸನದ ಐದಹಳ್ಳಿ ಕಾವಲ್‌, ಕುಮರಿಹಳ್ಳಿ ಗ್ರಾಮದ ಅರಣ್ಯ ಭೂಮಿ ಬಳಸಲು ಒಪ್ಪಿಗೆ ಕೊಡಬೇಕು ಎಂದು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರು ಅರಣ್ಯ ಸಚಿವಾಲಯದ ಕಾರ್ಯದರ್ಶಿಗೆ ಅಕ್ಟೋಬರ್‌ 8ರಂದು ಪ್ರಸ್ತಾವ ಸಲ್ಲಿಸಿದ್ದಾರೆ.
  • 432 ಎಕರೆ ಅರಣ್ಯ ಬಳಕೆಗೆ ಒಪ್ಪಿಗೆ ಕೋರಿ ರಾಜ್ಯ ಸರ್ಕಾರ ಈ ಹಿಂದೆ ಪ್ರಸ್ತಾವ ಸಲ್ಲಿಸಿತ್ತು. ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ವ್ಯಾಪಕ ಪ್ರಮಾಣದಲ್ಲಿ ನಿಯಮ ಉಲ್ಲಂಘನೆ ಆಗಿದೆ ಎಂಬ ಕಾರಣ ನೀಡಿ ಕೇಂದ್ರ ಅರಣ್ಯ ಸಲಹಾ ಸಮಿತಿ ಅನುಮೋದನೆ ಕೊಟ್ಟಿರಲಿಲ್ಲ. ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಹಾಗೂ ದಂಡ ವಿಧಿಸಬೇಕು ಎಂದು ತಾಕೀತು ಮಾಡಿತ್ತು. ಇದರಿಂದಾಗಿ, ಎತ್ತಿನಹೊಳೆ ಕಾಮಗಾರಿ ಸ್ಥಗಿತವಾಗಿತ್ತು.
  • ಆ ಬಳಿಕ ಹಾಸನ ಹಾಗೂ ತುಮಕೂರು ಜಿಲ್ಲೆಗಳ ಡಿಸಿಎಫ್‌ಗಳು ಸೆಪ್ಟೆಂಬರ್‌ನಲ್ಲಿ ಯೋಜನಾ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರು. ‘ನಿಯಮ ಉಲ್ಲಂಘಿಸಿದವರ ವಿರುದ್ಧ 2019ರಲ್ಲೇ ಎಫ್‌ಐಆರ್ ದಾಖಲಿಸಲಾಗಿದೆ. ಬಯಲುಸೀಮೆ ಜಿಲ್ಲೆಗಳ ನೀರಿನ ದಾಹ ಇಂಗಿಸಲು ಈ ಯೋಜನೆ ಅಗತ್ಯ‘ ಎಂದು ಶಿಫಾರಸು ಮಾಡಿದ್ದರು.
  • ‘ತುಮಕೂರು ಜಿಲ್ಲೆಯ ಮಾರಶೆಟ್ಟಿಹಳ್ಳಿ ಮೀಸಲು ಅರಣ್ಯದಲ್ಲಿ ಕಾಲುವೆ ನಿರ್ಮಿಸಲಾಗುತ್ತಿದೆ. ಇದರಿಂದ ಕಾಡಿಗೆ ಭಾರಿ ಹಾನಿಯಾಗುತ್ತದೆ. ಇದನ್ನು ತಪ್ಪಿಸಲು ನೆಲದಡಿ ಕಾಲುವೆ ನಿರ್ಮಿಸಬೇಕು‘ ಎಂದು ಸಲಹಾ ಸಮಿತಿ ಸೂಚಿಸಿತ್ತು.
  • ‘ಕಾಲುವೆ ನಿರ್ಮಾಣಕ್ಕಾಗಿ 7,500 ಮರಗಳನ್ನು ಕಡಿಯಲು ಉದ್ದೇಶಿಸಲಾಗಿತ್ತು. ಇದೀಗ, ಈ ಭಾಗದಲ್ಲಿ ಕಾಲುವೆಯ ವಿನ್ಯಾಸ ಬದಲಿಸಲಾಗಿದೆ. 4,043 ಮರಗಳನ್ನಷ್ಟೇ ಕಡಿಯಲಾಗುತ್ತದೆ‘ ಎಂದು ತುಮಕೂರು ಡಿಸಿಎಫ್‌ ತಮ್ಮ ವರದಿಯಲ್ಲಿ ತಿಳಿಸಿದ್ದರು. ‘ಈ ಅರಣ್ಯದಲ್ಲಿ ಭೂಗತ ಕಾಲುವೆ ನಿರ್ಮಾಣ ಕಾರ್ಯಸಾಧುವಲ್ಲ. ಇದರಿಂದಾಗಿ, ಭೂಕುಸಿತದಂತಹ ಸಮಸ್ಯೆಗಳು ಸೃಷ್ಟಿಯಾಗಬಹುದು. ವಿನ್ಯಾಸ ಬದಲಿಸಿದ್ದರಿಂದ ರಾಜ್ಯ ಸರ್ಕಾರಕ್ಕೆ ₹170 ಕೋಟಿ ಹೆಚ್ಚುವರಿ ಹೊರೆ ಆಗಲಿದೆ‘ ಎಂದು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.
  • ‘ಕಂದಾಯ ದಾಖಲೆಗಳ ಆಧಾರದಲ್ಲಿ ರೈತರ ಸ್ವಾಧೀನದಲ್ಲಿದ್ದ ಜಾಗಗಳಲ್ಲಿ ಕಾಲುವೆ ನಿರ್ಮಾಣ ಕಾಮಗಾರಿ ನಡೆಸಲಾಗಿತ್ತು. ಈ ಪ್ರದೇಶವು ಅರಣ್ಯ ಭೂಮಿ ಎಂಬುದು ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಗೊತ್ತಿರಲಿಲ್ಲ. ಇದು ಉದ್ದೇಶಪೂರ್ವಕ ಉಲ್ಲಂಘನೆ ಅಲ್ಲ. ಇದಕ್ಕಾಗಿ ಯಾವುದೇ ವ್ಯಕ್ತಿ ಅಥವಾ ಇಲಾಖೆಯನ್ನು ಹೊಣೆಗಾರರನ್ನಾಗಿ ಮಾಡಬಾರದು‘ ಎಂದು ಎಸಿಎಸ್‌ ಅವರು ಪ್ರಸ್ತಾವದಲ್ಲಿ ವಿನಂತಿಸಿದ್ದಾರೆ.
  • . ಕಂಪನಿಗಳ ಗುರುತಿಸಲು ₹100 ಕೋಟಿ

ಸಂದರ್ಭ: ‘ದೇಶದಲ್ಲಿನ ಕೃತಕ ಬುದ್ಧಿಮತ್ತೆ (.) ತಂತ್ರಜ್ಞಾನದ ಅಗ್ರ 50 ಕಂಪನಿಗಳನ್ನು ಗುರುತಿಸಲು ರಾಜ್ಯ ಸರ್ಕಾರವು ₹100 ಕೋಟಿ ನಿಧಿಯನ್ನು ಆರಂಭಿಸಲಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

  • ಕರ್ನಾಟಕ ಇಂದು ಇತರೆ ರಾಜ್ಯಗ ಳೊಂದಿಗೆ ಸ್ಪರ್ಧಿಸುತ್ತಿಲ್ಲ; ನಾವೀನ್ಯ, ಕೌಶಲ ಮತ್ತು ರಾಜಕೀಯ ಇಚ್ಛಾಶಕ್ತಿಯ ಮೂಲಕ ಜಾಗತಿಕ ಪರಿಹಾರಗಳನ್ನು ರೂಪಿಸಲು ನಾವು ನಮ್ಮೊಂದಿಗೆ ಸ್ಪರ್ಧಿಸುತ್ತಿದ್ದೇವೆ.
  • ಕೃಷಿ ತಂತ್ರಜ್ಞಾನದಿಂದ ಬಾಹ್ಯಾಕಾಶದವರೆಗೆ ಪ್ರಗತಿಯನ್ನು ಸಾಧಿಸುವ ಮೂಲಕ ಕರ್ನಾಟಕವು ವಿಶ್ವದ ಅತ್ಯಂತ ನಾವೀನ್ಯ ಕೇಂದ್ರಗಳಲ್ಲಿ ಒಂದಾಗಿ ವಿಕಸನಗೊಂಡಿದೆ. ಕರ್ನಾಟಕ ಕೇವಲ ಹೂಡಿಕೆ ತಾಣವಲ್ಲ, ಜಾಗತಿಕ ಜ್ಞಾನ, ಕೌಶಲದ ಕೇಂದ್ರ. ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯಾದ್ಯಂತ ನಾವೀನ್ಯತೆ ಕ್ಲಸ್ಟರ್‌ ಗಳನ್ನು ನಿರ್ಮಿಸಲು ₹1,000 ಕೋಟಿ ಹೂಡಿಕೆ ಮಾಡುತ್ತಿದ್ದೇವೆ. ಪ್ರಗತಿಯ ಪ್ರಯೋಜನ ಪ್ರತಿ ಪ್ರದೇಶವನ್ನು ತಲುಪು ವಂತೆ ನೋಡಿಕೊಳ್ಳುತ್ತೇವೆ ಎಂ ದರು.
  • ಫಿಲಿಪ್ಪೀನ್ಸ್ನಲ್ಲಿ ಪ್ರಬಲ ಭೂಕಂಪ: ಐವರ ಸಾವು

ಸಂದರ್ಭ: ಫಿಲಿಪ್ಪೀನ್ಸ್ ದಕ್ಷಿಣ ಭಾಗದಲ್ಲಿ ಶುಕ್ರವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿ ಕನಿಷ್ಠ ಐವರು ಸಾವಿಗೀಡಾಗಿದ್ದಾರೆ. ರಿಕ್ಟರ್ಮಾಪಕದಲ್ಲಿ ಭೂಕಂಪನದ ತೀವ್ರತೆ 7.4ರಷ್ಟು ದಾಖಲಾಗಿತ್ತು.

  • ಭೂಮಿ ಕಂಪಿಸಿದ್ದರಿಂದ ಹಲವೆಡೆ ಭೂಕುಸಿತ ಉಂಟಾಗಿದೆ. ಆಸ್ಪತ್ರೆ, ಶಾಲೆಗಳು ಸೇರಿ ಹಲವು ಕಟ್ಟಡಗಳಿಗೆ ಹಾನಿಯಾಗಿದೆ. ಸುನಾಮಿ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕರಾವಳಿ ತೀರದ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ.
  • ಮನಾಯ್‌ ನಗರ ಪೂರ್ವದ ಸಮುದ್ರದಲ್ಲಿ 43 ಕಿ.ಮೀ. ದೂರದಲ್ಲಿ ಕಂಪನ ಕೇಂದ್ರ ದಾಖಲಾಗಿದ್ದು, ಡಾವೋ ನಗರದಲ್ಲಿ ಹೆಚ್ಚು ಹಾನಿಯಾಗಿದೆ ಎಂದು ಅಧ್ಯಕ್ಷ ಫೆರ್ಡಿನಾಂಡ್ ಮಾರ್ಕಸ್ ಜೂನಿಯರ್‌ ತಿಳಿಸಿದ್ದಾರೆ.
  • ಚಾರಿತ್ರಿಕ ಕಂಚು ಜಯಿಸಿದ ಭಾರತ

ಸಂದರ್ಭ: ಆತಿಥೇಯ ಭಾರತ ತಂಡವು ವಿಶ್ವಜೂನಿಯರ್ ಬ್ಯಾಡ್ಮಿಂಟನ್ಮಿಶ್ರ ತಂಡ ಚಾಂಪಿಯನ್ಷಿಪ್ ಸೆಮಿಫೈನಲ್ನಲ್ಲಿ ಶುಕ್ರವಾರ ಹಾಲಿ ಚಾಂಪಿಯನ್ಇಂಡೊನೇಷ್ಯಾ ವಿರುದ್ಧ ಸೋತ ನಂತರ ಚಾರಿತ್ರಿಕ ಕಂಚಿನ ಪದಕದೊಂದಿಗೆ ಅಭಿಯಾನ ಮುಗಿಸಿತು.

  • ಭಾರತ ತಂಡವು ಕ್ವಾರ್ಟರ್‌ ಫೈನಲ್‌ನಲ್ಲಿ ಮಾಜಿ ಚಾಂಪಿಯನ್ ದಕ್ಷಿಣ ಕೊರಿಯಾ ತಂಡವನ್ನು ಮಣಿಸಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಐತಿಹಾಸಿಕ ಮೊದಲ ಪದಕ ಖಚಿತ ಪಡಿಸಿಕೊಂಡಿತ್ತು. ನಾಲ್ಕರ ಘಟ್ಟದ ಪಂದ್ಯದಲ್ಲಿ 35-45, 21-45ರಿಂದ ಪ್ರಬಲ ಇಂಡೊನೇಷ್ಯಾ ತಂಡಕ್ಕೆ ಮಣಿಯಿತು.
  • ಮತ್ತೊಂದು ಸೆಮಿಫೈನಲ್‌ನಲ್ಲಿ 14 ಬಾರಿಯ ಚಾಂಪಿಯನ್ ಚೀನಾ ಮತ್ತು ಜಪಾನ್ ಸೆಣಸಲಿದ್ದು, ವಿಜೇತ ತಂಡವನ್ನು ಇಂಡೊ ನೇಷ್ಯಾ ಫೈನಲ್‌ನಲ್ಲಿ ಎದುರಿಸಲಿದೆ.
  • ಪ್ಯಾರಾ ಪವರ್ಲಿಫ್ಟಿಂಗ್‌: ವಿನಯ್ಗೆ ಚಿನ್ನ

ಸಂದರ್ಭ: ಭಾರತದ ವಿನಯ್ಅವರು ಇಲ್ಲಿ ನಡೆಯುತ್ತಿರುವ ವಿಶ್ವ ಪ್ಯಾರಾ ಪವರ್ಲಿಫ್ಟಿಂಗ್ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಗೆದ್ದುಕೊಂಡರು.

  • ಜೂನಿಯರ್‌ ಪುರುಷರ 72 ಕೆ.ಜಿ. ವಿಭಾಗದಲ್ಲಿ ಕಣಕ್ಕಿಳಿದಿದ್ದ ಅವರು, ಎರಡನೇ ಯತ್ನದಲ್ಲಿ 142 ಕೆ.ಜಿ. ಭಾರ ಎತ್ತುವುದರೊಂದಿಗೆ ಸ್ವರ್ಣಕ್ಕೆ ಕೊರಳೊಡ್ಡಿದರು. ಉತ್ತರಪ್ರದೇಶದ ಗೋರಖಪುರದ ವಿನಯ್,  ಮೊದಲ ಯತ್ನದಲ್ಲಿ 137 ಕೆ.ಜಿ. ಭಾರ ಎತ್ತಿದ್ದರು. ಮೂರನೇ ಯತ್ನದಲ್ಲಿ 147 ಕೆ.ಜಿ. ಎತ್ತಿದರಾದರೂ, ರೆಫ್ರಿಗಳು ಅದನ್ನು ಅಸಿಂಧುಗೊಳಿಸಿದರು.
  • ಪೋಲೆಂಡ್‌ನ ಮಿಕೊಲಾಜ್‌ ಕೊಸುಬಿನ್‌ಸ್ಕಿ (141 ಕೆ.ಜಿ.) ಬೆಳ್ಳಿ ಗೆದ್ದರೆ, ಈಕ್ವೆಡಾರ್‌ನ ಸೆಬಾಸ್ಟಿಯನ್‌ ಎಫ್‌ (137 ಕೆ.ಜಿ.) ಅವರು ಕಂಚಿನ ಪದಕ ತಮ್ಮದಾಗಿಸಿಕೊಂಡರು.
  • ವಿನಯ್‌ ಅವರು 2024ರ ಪ್ಯಾರಾ ಪವರ್‌ಲಿಫ್ಟಿಂಗ್‌ ವಿಶ್ವಕಪ್‌ನಲ್ಲಿ ಜೂನಿಯರ್‌ ವಿಭಾಗದ 59 ಕೆ.ಜಿ. ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದರು.
  • ಹಸಿರು ಪಟಾಕಿಗಷ್ಟೇ ಅವಕಾಶ

ಸಂದರ್ಭ: ರಾಜ್ಯದಾದ್ಯಂತಪರಿಸರಸ್ನೇಹಿ ದೀಪಾವಳಿ ಆಚರಣೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿದ್ದು, ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು, ಪೊಲೀಸರಿಗೆ ತಾಕೀತು ಮಾಡಿದೆ.

  • ನಿಷೇಧಿಸಿರುವ ಪಟಾಕಿಗಳನ್ನು ಮಾರಾಟ ಮಾಡುವವರು, ದಾಸ್ತಾನು ಹೊಂದಿರುವವರ ವಿರುದ್ಧ ಪರಿಸರ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ. ಅಲ್ಲದೆ, ಶಬ್ದ ಮಾಲಿನ್ಯವನ್ನು ನಿಯಂತ್ರಿಸಲು 2004ರಲ್ಲಿ ಪ್ರತಿ ಜಿಲ್ಲೆಯಲ್ಲೂ ಸ್ಥಾಪನೆಯಾಗಿರುವ ‘ಜಿಲ್ಲಾ ಪರಿಸರ ಸಂರಕ್ಷಣೆ ಪ್ರಾಧಿಕಾರ’ಕ್ಕೆ ಜವಾಬ್ದಾರಿ ವಹಿಸಲಾಗಿದೆ.
  • ರಾಸಾಯನಿಕ ಹೊಂದಿರುವ ಪಟಾಕಿಗಳ ಬಳಕೆಯಿಂದ ವಾತಾವರಣದಲ್ಲಿ ರಾಸಾಯನಿಕ ಬಿಡುಗಡೆಯಾಗಿ ವಾಯು ಮಾಲಿನ್ಯ ವಾಗುತ್ತದೆ. ಪಟಾಕಿಗಳನ್ನು ಅಸುರಕ್ಷಿತ ಸ್ಥಳಗಳಲ್ಲಿ ಸಂಗ್ರಹಿಸಿ, ಅವುಗಳು ಸ್ಫೋಟಗೊಂಡು ಅನೇಕ ಜನರ ಪ್ರಾಣಹಾನಿ/ ಆರೋಗ್ಯಕ್ಕೆ ತೊಂದರೆಯಾಗಿದೆ. ಹಬ್ಬದ ಸಮಯದ ವಾಯು ಮಾದರಿಗಳಲ್ಲಿ ವಾಯು ಮಾಲಿನ್ಯ ವಿಪರೀತವಾಗಿರುವುದು ಕಂಡುಬಂದಿದೆ. ಇದನ್ನೆಲ್ಲ ಗಮನಿಸಿ ಸುಪ್ರೀಂ ಕೋರ್ಟ್‌ ಮಾಲಿನ್ಯ ತಡೆಗಟ್ಟಲು ತೀರ್ಪು ನೀಡಿರುತ್ತದೆ. ಅದರಂತೆ, ಸರ್ಕಾರವೂ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅವುಗಳನ್ನು ಪರಿಣಾಮ ಕಾರಿಯಾಗಿ ವಿವಿಧ ಇಲಾಖೆಗಳು, ಪ್ರಾಧಿಕಾರಗಳು ಜಾರಿಗೆ ತರಬೇಕು ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.
  • ಆಯುಷ್ಮಾನ್‌’ಗೆ ಎಪಿಎಲ್ ಕುಟುಂಬ ನಿರಾಸಕ್ತಿ

ಸಂದರ್ಭ: ಸರ್ಕಾರಿ ಆಸ್ಪತ್ರೆಗಳಿಂದ ಶಿಫಾರಸು, ಚಿಕಿತ್ಸಾ ವೆಚ್ಚದಲ್ಲಿ ಶೇ 30 ರಷ್ಟು ಮಾತ್ರ ಹಣ ಪಾವತಿ ಸೇರಿ ವಿವಿಧ ಕಾರಣಗಳಿಂದ ರಾಜ್ಯದಲ್ಲಿಆಯುಷ್ಮಾನ್ ಭಾರತ್ಆರೋಗ್ಯ ಕರ್ನಾಟಕ (ಎಬಿಎಆರ್ಕೆ) ಯೋಜನೆಯಡಿ ಚಿಕಿತ್ಸೆ ಪಡೆಯಲು ಎಪಿಎಲ್ ಕುಟುಂಬದ ಸದಸ್ಯರು ನಿರಾಸಕ್ತಿ ತೋರಿದ್ದಾರೆ. ಈವರೆಗೆ ಯೋಜನೆಯಡಿ ಚಿಕಿತ್ಸೆ ಪಡೆದವರಲ್ಲಿ ಶೇ 4ರಷ್ಟು ಮಂದಿ ಮಾತ್ರ ಎಪಿಎಲ್ ಕುಟುಂಬದ ಫಲಾನುಭವಿಗಳಾಗಿದ್ದಾರೆ.

  • ಯೋಜನೆಯಡಿ ಚಿಕಿತ್ಸೆಗೆ ಇರುವ ತೊಡಕುಗಳೇ ನಿರಾಸಕ್ತಿಗೆ ಕಾರಣವಾಗಿವೆ. ಎಪಿಎಲ್ ಕುಟುಂಬದ ಸದಸ್ಯರಿಗೆ ಚಿಕಿತ್ಸಾ ವೆಚ್ಚದಲ್ಲಿ ಶೇ 30ರಷ್ಟು ಹಣವನ್ನು ಮಾತ್ರ ಪಾವತಿಸಲಾಗುತ್ತಿದೆ. ಇದರ ಪ್ರಯೋಜನ ಪಡೆಯಬೇಕಾದರೆ ಫಲಾನುಭವಿಗಳು ಮೊದಲು ಸರ್ಕಾರಿ ಆಸ್ಪತ್ರೆಗೆ ದಾಖಲಾಗಬೇಕು. ಅಲ್ಲಿ ಚಿಕಿತ್ಸೆ ಲಭ್ಯವಿಲ್ಲದಿದ್ದಲ್ಲಿ ಬೇರೆ ಆಸ್ಪತ್ರೆಗೆ ಶಿಫಾರಸು ಆಧಾರದಲ್ಲಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು. ಇದರಿಂದ ಚಿಕಿತ್ಸೆ ವಿಳಂಬವಾಗುವ ಜತೆಗೆ ರೋಗಿಯ ಸ್ಥಿತಿ ಮತ್ತಷ್ಟು ಹದಗೆಡಲಿದೆ. ಆದ್ದರಿಂದ ಯೋಜನೆಯಡಿ ದೊರೆಯುತ್ತಿದ್ದ ಅಲ್ಪ ನೆರವಿಗೆ ಎಪಿಎಲ್ ಕುಟುಂಬಸ್ಥರು ಆಸಕ್ತಿ ತೋರುತ್ತಿಲ್ಲ.
  • ವೆಚ್ಚ ₹10 ಸಾವಿರ ಕೋಟಿ: ಎಪಿಎಲ್ ಬಳಕೆ ₹120 ಕೋಟಿ

ಸಂದರ್ಭ:ಆಯುಷ್ಮಾನ್ ಭಾರತ್ಆರೋಗ್ಯ ಕರ್ನಾಟಕ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ವಹಣೆ ಮಾಡುತ್ತಿದ್ದು, 1,650 ಚಿಕಿತ್ಸಾ ಪ್ಯಾಕೇಜ್ಗಳು ಒಳಗೊಂಡಿವೆ. ಯೋಜನೆಯಡಿ ಈವರೆಗೆ ಚಿಕಿತ್ಸೆಗೆ ಒಟ್ಟು ₹ 10,885 ಕೋಟಿ ವೆಚ್ಚ ಮಾಡಲಾಗಿದೆ. ಚಿಕಿತ್ಸಾ ಮೊತ್ತದಲ್ಲಿ ₹ 10,764 ಕೋಟಿಯನ್ನು ಬಿಪಿಎಲ್ ಕುಟುಂಬದ ಸದಸ್ಯರ ಚಿಕಿತ್ಸೆಗೆ ಬಳಿಸಿದರೆ, ₹ 120 ಕೋಟಿ ಮಾತ್ರ ಎಪಿಎಲ್ ಕುಟುಂಬದ ಸದಸ್ಯರಿಗೆ ಚಿಕಿತ್ಸೆ ಸಂಬಂಧಿಸಿದಂತೆ ಟ್ರಸ್ಟ್ಭರಿಸಿದೆ.

  • ಬೆನ್ನುಹುರಿ ವಿರೂಪಕ್ಕೆ ಸಂಬಂಧಿಸಿದ ಚಿಕಿತ್ಸೆ, ಗಿಲ್ಲೈನ್-ಬರ‍್ರೆ ಸಿಂಡ್ರೋಮ್ (ಜಿಬಿಎಸ್) ಕಾಯಿಲೆಗೆ ನೀಡುವ ‘ಇಂಟ್ರಾವೀನಸ್‌ ಇಮ್ಯುನೋಗ್ಲೋಬಿನ್’ (ಐವಿಐಜಿ) ಥೆರಪಿಯಂತಹ ಚಿಕಿತ್ಸೆಗಳನ್ನು ಯೋಜನೆಯಡಿ ಇತ್ತೀಚೆಗೆ ಸೇರ್ಪಡೆ ಮಾಡಲಾಗಿದೆ. ಯೋಜನೆಯಡಿ ಸರ್ಕಾರಿ ಆಸ್ಪತ್ರೆಗಳಿಗೂ ಚಿಕಿತ್ಸೆಗೆ ಅನುಸಾರ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಹಣ ಬಿಡುಗಡೆ ಮಾಡುತ್ತಿದೆ. ಈ ಹಣವನ್ನು ಆಸ್ಪತ್ರೆಗಳ ಅಭಿವೃದ್ಧಿ ಹಾಗೂ ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಪ್ರೋತ್ಸಾಹ ಧನ ಒದಗಿಸಲು ಬಳಸಿಕೊಳ್ಳಲಾಗುತ್ತಿದೆ.
  • ಈವರೆಗೆ ಚಿಕಿತ್ಸೆ ಒದಗಿಸಲಾದ 1.30 ಕೋಟಿ ಪ್ರಕರಣಗಳಲ್ಲಿ 1.25 ಕೋಟಿ ಪ್ರಕರಣಗಳು ಬಿಪಿಎಲ್‌ ಕುಟುಂಬದ ಸದಸ್ಯರಾದರೆ, 4.94 ಲಕ್ಷ ಪ್ರಕರಣ ಗಳಲ್ಲಿ ಮಾತ್ರ ಚಿಕಿತ್ಸೆ ಪಡೆದವರು ಎಪಿಎಲ್ ಕುಟುಂಬದವರಾಗಿದ್ದಾರೆ.
  • ಆಯುಷ್ಮಾನ್ಭಾರತ್ಆರೋಗ್ಯ ಕರ್ನಾಟಕಯೋಜನೆ‌ 2018ರಲ್ಲಿ ಆರಂಭವಾಗಿದೆ. ಯೋಜನೆಯಡಿಬಿಪಿಎಲ್ ಕುಟುಂಬದವರಿಗೆ ವರ್ಷಕ್ಕೆ ₹5 ಲಕ್ಷದವರೆಗೆ ಆರೋಗ್ಯ ವಿಮೆಗೆ ಅವಕಾಶವಿದೆ. ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದು, ಅವುಆಯುಷ್ಮಾನ್ಭಾರತ್ಯೋಜನೆ ಅಡಿ ಬರಲಿವೆ. 20 ಲಕ್ಷಕ್ಕೂ ಅಧಿಕ ಎಪಿಎಲ್ ಕುಟುಂಬಗಳನ್ನುಆರೋಗ್ಯ ಕರ್ನಾಟಕಯೋಜನೆಯಡಿ ಸೇರ್ಪಡೆ ಮಾಡಲಾಗಿದೆ. ಎಪಿಎಲ್ಕುಟುಂಬದ ಸದಸ್ಯರಿಗೆ ಗರಿಷ್ಠ ₹1.50 ಲಕ್ಷ ಚಿಕಿತ್ಸಾ ವೆಚ್ಚ ನಿಗದಿ ಮಾಡಿದ್ದು, ಶೇ 30ರಷ್ಟು ಹಣವನ್ನು ಪಾವತಿಸಲಾಗುತ್ತದೆ.
  • ಶಿಫಾರಸು ಅಡ್ಡಿ: ಯೋಜನೆಯಡಿ 171 ತುರ್ತು ಚಿಕಿತ್ಸೆಗಳನ್ನು ಸೇರ್ಪಡೆ ಮಾಡಲಾಗಿದೆ. ರಸ್ತೆ ಅಪಘಾತ ಸೇರಿ ವಿವಿಧ ತುರ್ತು ಸಂದರ್ಭದಲ್ಲಿ ಮಾತ್ರ ನೋಂದಾಯಿತ ಖಾಸಗಿ ಆಸ್ಪತ್ರೆಗೂ ನೇರವಾಗಿ ದಾಖಲಾಗಬಹುದಾಗಿದೆ. ಉಳಿದ ಪ್ರಕರಣಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ಶಿಫಾರಸು ಅಗತ್ಯ. ಅದೇ ಸಹಕಾರ ಇಲಾಖೆ ಅನುಷ್ಠಾನ ಮಾಡಿರುವ ಯಶಸ್ವಿನಿ ಯೋಜನೆಯಲ್ಲಿ ನೋಂದಾಯಿತ ಸದಸ್ಯರು ನೇರವಾಗಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಈ ಕಾರಣದಿಂದ ಎಪಿಎಲ್ ಕುಟುಂಬದ ಸದಸ್ಯರು ‘ಆಯುಷ್ಮಾನ್  ಭಾರತ್-ಆರೋಗ್ಯ ಕರ್ನಾಟಕ’ ಯೋಜನೆಯಡಿ ಚಿಕಿತ್ಸೆಗೆ ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ.
  • ‘ಯೋಜನೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಉಚಿತವಾಗಿ ನೀಡುವ ಕಾರ್ಡ್ ಹೊಂದಿರದಿದ್ದರೂ ಪಡಿತರ ಚೀಟಿ ಇದ್ದಲ್ಲಿ ಯೋಜನೆಯಡಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ರಾಜ್ಯದಲ್ಲಿ ಯೋಜನೆ ಅನುಷ್ಠಾನ ಮಾಡುತ್ತಿರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಅಧಿಕಾರಿಯೊಬ್ಬರು ತಿಳಿಸಿದರು.
  • ಮಾರಿಯಾಗೆ ನೊಬೆಲ್ ಶಾಂತಿ ಪುರಸ್ಕಾರ

ಸಂದರ್ಭ: ಓಸ್ಲೊ: ವೆನೆಜುವೆಲಾದ ವಿರೋಧಪಕ್ಷದ ನಾಯಕಿ ಮತ್ತು ಪ್ರಜಾಪ್ರಭುತ್ವ ಪರ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾದೊ ಅವರಿಗೆ ಪ್ರಸಕ್ತ ಸಾಲಿನ ನೊಬೆಲ್ ಶಾಂತಿ ಪುರಸ್ಕಾರ ಒಲಿದಿದೆ.

  • ‘ವೆನೆಜುವೆಲಾದ ಜನರ ಪ್ರಜಾ ಸತ್ತಾತ್ಮಕ ಹಕ್ಕುಗಳನ್ನು ಪ್ರಚುರ ಪಡಿಸಲು ಮತ್ತು ಸರ್ವಾಧಿಕಾರದಿಂದ ಪ್ರಜಾಪ್ರಭುತ್ವದೆಡೆಗೆ ಶಾಂತಿಯುತವಾಗಿ ದೇಶವನ್ನು ಕೊಂಡೊಯ್ಯಲು ನಡೆಸಿದ ಹೋರಾಟಗಳಿಗಾಗಿ ಮಾರಿಯಾ ಅವರಿಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಲಾಗುತ್ತಿದೆ’ ಎಂದು ನಾರ್ವೆಯ ನೊಬೆಲ್ ಸಮಿತಿಯ ಅಧ್ಯಕ್ಷ ಜಾರ್ಗೆನ್‌ ವಾಟ್ನೆ ಫ್ರಿಡ್‌ನೆಸ್‌ ಅವರು ಹೇಳಿದ್ದಾರೆ.
  • ‘ನಿರಂಕುಶ ಆಡಳಿತದಿಂದಾಗಿ ಮಾನವೀಯತೆಯ ಅಧಃಪತನ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ವೆನೆಜುವೆಲಾದಲ್ಲಿ ಸಮರ್ಥ ವಿರೋಧ ಪಕ್ಷವಾಗಿ ಮಾರಿಯಾ ಕಾರ್ಯನಿರ್ವಹಿ ಸಿದ್ದಾರೆ. ಜೀವ ಬೆದರಿಕೆಗಳು ಇದ್ದರೂ ದೇಶಕ್ಕಾಗಿ ದೃಢವಾಗಿ ನಿಂತಿದ್ದಾರೆ. ದೌರ್ಜನ್ಯದ ವಿರುದ್ಧ ನಾಗರಿಕರು ತೋರುವ ಧೈರ್ಯಕ್ಕೆ ಅವರು ಅದ್ಭುತ ಉದಾಹರಣೆಯಾಗಿದ್ದಾರೆ’ ಎಂದು ಫ್ರಿಡ್‌ನೆಸ್‌ ಹೇಳಿದ್ದಾರೆ.
  • ಪ್ರಶಸ್ತಿಯು ಚಿನ್ನದ ಪದಕ, ಪ್ರಶಸ್ತಿಪತ್ರ ಹಾಗೂ 1.2 ಮಿಲಿಯನ್‌ ಡಾಲರ್ (ಅಂದಾಜು ₹10 ಕೋಟಿ) ಒಳಗೊಂಡಿದ್ದು, ಓಸ್ಲೊದಲ್ಲಿ ಡಿಸೆಂಬರ್ 10ರಂದು ಪ್ರದಾನ ಮಾಡಲಾಗುತ್ತದೆ.
  • ತಮಗೆ ನೊಬೆಲ್‌ ಪ್ರಶಸ್ತಿ ಲಭಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಅವರು, ‘ನಾನು ಇದಕ್ಕೆ ಅರ್ಹಳಲ್ಲ. ನಮ್ಮ ದೇಶದ ಜನರಿಗೆ ಸಂದ ಗೌರವವಿದು’ ಎಂದಿದ್ದಾರೆ.
  • ಕಳೆದ ಒಂದು ವರ್ಷದಿಂದ ಮಾರಿಯಾ ಅವರು ಅಜ್ಞಾತವಾಸ ದಲ್ಲಿದ್ದರು. ‘ಪ್ರಜಾಪ್ರಭುತ್ವ ಮತ್ತು ಪ್ರಜಾ ಪ್ರಭುತ್ವಕ್ಕಾಗಿ ಒಬ್ಬ ಮಹಿಳೆ ಹಾಗೂ ದೇಶದ ಜನರು ನಡೆಸುತ್ತಿರುವ ನಿರಂತರ ಹೋರಾಟ ಗುರುತಿಸಿ ನೀಡಿರುವ ಪ್ರಶಸ್ತಿ ಇದು’ ಎಂದು ವಿರೋಧ ಪಕ್ಷದ ನಾಯಕ ಎಡ್ಮಂಡೊ ಗೊನ್ಜಾಲೇಜ್ ಉರುಟಿಯಾ ಹೇಳಿದ್ದಾರೆ.
  • ಕಳೆದ ವರ್ಷ ಮಾರಿಯಾ ಅವರು ಐರೋಪ್ಯ ಒಕ್ಕೂಟದ ಮಾನವ ಹಕ್ಕುಗಳ ಸಂಘಟನೆ ನೀಡುವ ‘ಸಖರೋವ್‌ ಪ್ರಶಸ್ತಿ’ಗೆ ಭಾಜನರಾಗಿ ದ್ದಾರೆ. ಕೌನ್ಸಿಲ್‌ ಆಫ್‌ ಯುರೋಪ್ ನೀಡುವ  ‘ವಕ್ಲಾವ್ ಹ್ಯಾವೆಲ್‌’ ಪ್ರಶಸ್ತಿಯೂ ಅವರಿಗೆ ಸಂದಿದೆ.

  • ವನ್ಯಜೀವಿ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ: ಪಿಣರಾಯಿ

ಸಂದರ್ಭ: ‘ಕೇಂದ್ರದ ವನ್ಯಜೀವಿ ಸಂರಕ್ಷಣಾ ಕಾಯ್ದೆ1972ಕ್ಕೆ ತಿದ್ದುಪಡಿ ತರುವ ಮಸೂದೆಯನ್ನು ಅಂಗೀಕರಿಸಿದ ಮೊದಲ ರಾಜ್ಯ ಕೇರಳ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

  • ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ- ವನ್ಯಮೃಗ ಸಂಘರ್ಷವನ್ನು ಕಡಿಮೆ ಮಾಡುವ ಉದ್ದೇಶವನ್ನು ಹೊಂದಿರುವ ‘ಕೇರಳ ವನ್ಯಜೀವಿ ಸಂರಕ್ಷಣಾ ತಿದ್ದುಪಡಿ ಮಸೂದೆ’ಯನ್ನು ಕೇರಳ ವಿಧಾನಸಭೆಯು ಅಂಗೀಕರಿಸಿದೆ.
  • ‘ಈ ಮಸೂದೆಯು ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಜನರಿಗೆ ನ್ಯಾಯವನ್ನು ಖಾತರಿಪಡಿ ಸುವ ನಿಟ್ಟಿನಲ್ಲಿ ಇಟ್ಟಂತಹ ಪ್ರಮುಖ ಹೆಜ್ಜೆಯಾಗಿದೆ’ ಎಂದು ಮುಖ್ಯಮಂತ್ರಿ ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.
  • ‘ಈ ತಿದ್ದುಪಡಿಯು ಮಾನವ ಜೀವ ಮತ್ತು ವನ್ಯಜೀವಿ ಎರಡನ್ನೂ ಸಂರಕ್ಷಿಸಲು ಕೇರಳ ಸರ್ಕಾರ ಹೊಂದಿರುವ ಬದ್ಧತೆಯನ್ನು ಪುನರು ಚ್ಚರಿಸುತ್ತದೆ. ಜನರು ಮತ್ತು ಪ್ರಕೃತಿಯ ನಡುವೆ ಸಾಮರಸ್ಯವನ್ನು ಬೆಳೆಸುತ್ತದೆ’ ಎಂದು ತಿಳಿಸಿದ್ದಾರೆ.
  • ‘ವನ್ಯಜೀವಿ ಸಂರಕ್ಷಣಾ ಕಾಯ್ದೆ– 1972ಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗದ ಕಾರಣ ಕಾಯ್ದೆಗೆ ನಮ್ಮದೇ ಆದ ತಿದ್ದುಪಡಿ ತರಲು ಮುಂದಾಗಿದ್ದೇವೆ’ ಎಂದು ಅರಣ್ಯ ಸಚಿವ ಎ.ಕೆ.ಶಶೀಂದ್ರನ್‌ ವಿಧಾನಸಭೆಗೆ ತಿಳಿಸಿದ್ದರು.
  • ‘ಮಸೂದೆಯನ್ನು ರಾಜ್ಯಪಾಲ ರಿಗೆ ಕಳುಹಿಸಲಾಗುವುದು. ಇದು ಕೇಂದ್ರದ ಕಾಯ್ದೆ ಆಗಿರುವುದರಿಂದ ರಾಜ್ಯಪಾಲರು ಅದನ್ನು ರಾಷ್ಟ್ರಪತಿಗೆ ಕಳುಹಿಸುವರು’ ಎಂದು ಅಧಿಕೃತ ಮೂಲಗಳು ತಿಳಿಸಿವೆ.
  • ಜಮ್ಮುಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಪ್ರತಿಕ್ರಿಯೆಗೆ 4 ವಾರಗಳ ಗಡುವು

ಸಂದರ್ಭ: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡಲು ಸುಪ್ರೀಂ ಕೋರ್ಟ್ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಗಡುವು ನೀಡಿದೆ.

  • ಜಮ್ಮು– ಕಾಶ್ಮೀರಕ್ಕೆ ಶೀಘ್ರದಲ್ಲಿ ರಾಜ್ಯದ ಸ್ಥಾನಮಾನ ನೀಡಲು ಸೂಚಿಸುವಂತೆ ಕೋರಿ ಶಿಕ್ಷಣ ತಜ್ಞ ಝಹೂರ್‌ ಅಹಮದ್‌ ಭಟ್‌ ಮತ್ತು ಸಾಮಾಜಿಕ ಕಾರ್ಯಕರ್ತ ಅಹಮದ್‌ ಮಲ್ಲಿಕ್ ಸಲ್ಲಿಸಿದ್ದ ಅರ್ಜಿ ಸೇರಿದಂತೆ ಈ ಕುರಿತಾದ ಹಲವು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್‌ ಚಂದ್ರನ್‌ ಅವರ ಪೀಠವು ವಿಚಾರಣೆ ನಡೆಸುತ್ತಿದೆ.
  • ‘ಇದೊಂದು ವಿಭಿನ್ನ ಸಮಸ್ಯೆ ಹಾಗಾಗಿ ಸಮಗ್ರ ಅವಲೋಕನ ಅತ್ಯಗತ್ಯವಾಗಿದೆ. ಈ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ’ ಎಂದು ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್‌ ಜನರಲ್ ತುಷಾರ್‌ ಮೆಹ್ತಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.
  • ಸಂವಿಧಾನದ 37ನೇ ವಿಧಿಯಡಿ ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ 2023 ಡಿ. 11ರಂದು ಎತ್ತಿ ಹಿಡಿದಿತ್ತು. ಆದರೆ, ಕೇಂದ್ರಾಡಳಿತ ಪ್ರದೇಶಗಳಲ್ಲಿ 2024 ಸೆಪ್ಟೆಂಬರ್ಒಳಗಾಗಿ ವಿಧಾನಸಭಾ ಚುನಾವಣೆ ನಡೆಸಬೇಕು ಮತ್ತು ಶೀಘ್ರದಲ್ಲಿ ರಾಜ್ಯದ ಸ್ಥಾನಮಾನ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
  • ಚಂದ್ರನೆಂಬ ಚೆನ್ನಿಗನ ನೋಡೋಣ ಬನ್ನಿ

ಸಂದರ್ಭ: ಹುಣ್ಣಿಮೆಯ ಬೆಳದಿಂಗಳಿನ ಬೆಳಕಿಗೆ ಸಾಟಿಯಿಲ್ಲ. ಅದರಲ್ಲೂ ಶರತ್ಕಾಲದ ಆಶ್ವಯುಜ ಆಕಾಶ ಭವ್ಯವಾಗಿರುತ್ತದೆ. ಬಿಳಿಯಾಗಿ ತೇಲುವ ತಿಳಿ ಮೋಡಗಳ ಮಧ್ಯೆ ಬೆಳ್ಳಂ ಬೆಳದಿಂಗಳ ಚಂದ್ರಮ ನೋಡಲು ಮತ್ತಷ್ಟು ಆಕರ್ಷಕ. ಸುಂದರ ಅನುಭವವನ್ನು ನಮಗೆ ದಕ್ಕಿಸಿಕೊಡುವ ವರ್ಷದಸೂಪರ್ಮೂನ್ ಸರದಿ ಈಗಾಗಲೇ ಪ್ರಾರಂಭವಾಗಿದೆ. ಇದೇ 7ರಂದುಸೂಪರ್ ದರ್ಶನಕ್ಕೆ ಚಂದ್ರಮ ನಾಂದಿ ಹಾಡಿದ್ದಾನೆ. ಇನ್ನುಳಿದ ಸರದಿ ನವೆಂಬರ್ 5 ಹಾಗೂ ಡಿಸೆಂಬರ್‌ 4ರದು. ಅಂದಿನ ಹುಣ್ಣಿಮೆಗಳು ಸಹ ಸೂಪರ್ಮೂನ್ಗಳೇ ಆಗಿರುತ್ತವೆ.

  • ಭೂಮಿ ಹಾಗೂ ಚಂದ್ರನ ನಡುವಿನ ಸರಾಸರಿ ದೂರ 3.84 ಲಕ್ಷ ಕಿ.ಮೀ. ಸೂಪರ್‌ಮೂನ್‌ ದಿನಗಳಲ್ಲಿ ಈ ದೂರ ಸುಮಾರು 3.61 ಲಕ್ಷ ಕಿ.ಮೀ. ಆಗುತ್ತದೆ. ಅಂದರೆ, ಚಂದ್ರನು ಅಂದು ಭೂಮಿಗೆ ಸುಮಾರು 23 ಸಾವಿರ ಕಿ.ಮೀ.ನಷ್ಟು ಸಮೀಪಕ್ಕೆ ಬರುತ್ತಾನೆ. ಹೀಗಾಗಿ, ಸುಮಾರು 18 ಅಂಶಗಳಷ್ಟು ದೊಡ್ಡದಾಗಿ ಕಾಣಿಸುತ್ತಾನೆ. ಸಹಜವಾಗಿಯೇ ಅಂದು ಬೆಳದಿಂಗಳೂ ಹೆಚ್ಚು.
  • ಶರತ್ಕಾಲದ ಸೂಪರ್‌ಮೂನ್‌ನ ಈ ಬೆಳದಿಂಗಳನ್ನು ಖುದ್ದಾಗಿ ಅನುಭವಿಸಿಯೇ ತೀರಬೇಕು. ತೇಲುವ ಮಂಜುಗಡ್ಡೆಗಳಂತಹ ಬಿಳಿ, ಹಳದಿ ವರ್ತುಲದ ಹ್ಯಾಲೊ ಕೂಡಾ ಅಲ್ಲಲ್ಲಿ ಕಾಣಸಿಗಬಹುದು. ಪ್ರಕೃತಿಯ ಈ ವೈಭವವನ್ನು ಆರಾಧಿಸಿ, ಆಸ್ವಾದಿಸಿ.

ಪ್ರಚಲಿತ ವಿದ್ಯಮಾನಗಳು: 10ನೇ ಅಕ್ಟೋಬರ್ 2025

  • ಹಂಗರಿಯ ಲೇಖಕ ಲಾಸ್ಲೊಗೆ ನೊಬೆಲ್ ಸಾಹಿತ್ಯ ಪುರಸ್ಕಾರ

ಸಂದರ್ಭ: ಸ್ಟಾಕ್ಹೋಮ್‌: ಹಂಗರಿಯ ಲೇಖಕ ಲಾಸ್ಲೊ ಕ್ರಾಸ್ನಾಹೊರ್ಕೈ ಅವರಿಗೆ ಸಾಲಿನ ಸಾಹಿತ್ಯ ಕ್ಷೇತ್ರದ ನೊಬೆಲ್ಪ್ರಶಸ್ತಿ ದೊರೆತಿದೆ.

  • ಅವರು ಸರಳ ವಾಕ್ಯಗಳ ಮೂಲಕ, ತಮಾಷೆಯ ವಿವರಣೆಯೊಂದಿಗೆ ತತ್ತ್ವ ಜ್ಞಾನವನ್ನು ಹೇಳುವ ವಿಶಿಷ್ಟ ಕಾದಂಬರಿ ರಚನೆಯ ಮೂಲಕ ಗಮನಸೆಳೆದಿದ್ದಾರೆ.
  • ಅರ್ನೆಸ್ಟ್ಹೆಮ್ಮಿಂಗ್ವೆ, ಆಲ್ಬರ್ಟ್ಕಮು ಹಾಗೂ ಟೋನಿ ಮಾರಿಸನ್ಅವರ ಸಾಹಿತ್ಯಿಕ ಶ್ರೇಷ್ಠ ಕೃತಿಗಳ ಹೆಜ್ಜೆ ಗುರುತುಗಳನ್ನು ಅನುಕರಿಸುವ ಮೂಲಕ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
  • ಸ್ವೀಡಿಶ್ಅಕಾಡೆಮಿ ನೊಬೆಲ್ ಸಮಿತಿಯು ಸಾಹಿತ್ಯ ಪ್ರಶಸ್ತಿಯನ್ನು 117 ಬಾರಿ ಒಟ್ಟು 121 ಮಂದಿಗೆ ನೀಡಿದೆ.
  • ಕಳೆದ ವರ್ಷ ದಕ್ಷಿಣ ಕೊರಿಯಾದ ಲೇಖಕ ಹಾನ್ಕಂಗ್ಅವರಿಗೆ ಸಾಹಿತ್ಯ ಕ್ಷೇತ್ರದ ನೊಬೆಲ್ಪ್ರಶಸ್ತಿ ಸಂದಿತ್ತು.
  • ಅಲ್ಫ್ರೆಡ್ನೊಬೆಲ್ಅವರ ನಿಧನ ಹೊಂದಿದ ದಿನವಾದ ಡಿಸೆಂಬರ್‌ 10ರಂದು ಪ್ರಶಸ್ತಿಯ ಪ್ರದಾನ ಮಾಡಲಾಗುತ್ತದೆ.
  • ಪ್ರಶಸ್ತಿಯು 11 ಸ್ವೀಡಿಶ್ಕ್ರೊನೊರ್‌ (₹10.66 ಕೋಟಿ ನಗದು) ಹಾಗೂ 18 ಕ್ಯಾರೆಟ್ ಚಿನ್ನದ ಪದಕ, ಪ್ರಮಾಣಪತ್ರ ಹೊಂದಿರಲಿದೆ.
  • 2025ರ ನೊಬೆಲ್‌ ಪ್ರಶಸ್ತಿ ವಿಭಾಗದಲ್ಲಿ ವೈದ್ಯಕೀಯ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಭಾಗದಲ್ಲಿ ಈಗಾಗಲೇ ಘೋಷಿಸಲಾಗಿದೆ. ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ಘೋಷಿಸಲಾಗುತ್ತದೆ. ಅರ್ಥಶಾಸ್ತ್ರ ವಿಭಾಗದ ನೊಬೆಲ್‌ ಪ್ರಶಸ್ತಿಯನ್ನು ಘೋಷಿಸಲಾಗುತ್ತದೆ.
  • ಗಿನ್ನಿಸ್ ದಾಖಲೆಯತ್ತಥಟ್ ಅಂತ ಹೇಳಿದಾಪುಗಾಲು

ಸಂದರ್ಭ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಸಪ್ರಶ್ನೆ ಕಾರ್ಯಕ್ರಮ ಐದು ಸಾವಿರ ಸಂಚಿಕೆಯ ಹೊಸ್ತಿಲಲ್ಲಿದ್ದು, ಕಾರ್ಯಕ್ರಮ ಗಿನ್ನಿಸ್ ದಾಖಲೆಯತ್ತ ದಾಪುಗಾಲಿಟ್ಟಿದೆ.

  • 2002ರ ಜ. 4ರಂದು ಪ್ರಾರಂಭ ವಾದ ಈ ಕಾರ್ಯಕ್ರಮ ಅ. 13ರಂದು ಐದು ಸಾವಿರದನೇ ಸಂಚಿಕೆಯ ಪ್ರಸಾರಕ್ಕೆ ಸಜ್ಜಾಗಿದೆ.
  • 23 ವರ್ಷಗಳ ಹಿಂದೆ ಉಷಾಕಿಣಿ ಅವರು ಈ ಕಾರ್ಯಕ್ರಮ ಆರಂಭಿಸಿದ್ದರು. 100ನೇ ಸಂಚಿಕೆಯಲ್ಲಿ ಸಾಹಿತಿ ಸುಧಾಮೂರ್ತಿ ಪಾಲ್ಗೊಂಡಿದ್ದರು. ಕನ್ನಡ ನಾಡು-ನುಡಿ, ನೆಲ-ಜಲ, ಸಾಂಸ್ಕೃತಿಕ ಸೊಗಡನ್ನು ನಾಡಿನ ಜನರಿಗೆ ಉಣ ಬಡಿಸುತ್ತಿರುವ ಥಟ್ ಅಂತ ಹೇಳಿ?! ಕಾರ್ಯಕ್ರಮ 2012ರಲ್ಲಿ ‘ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್’ ಗೌರವಕ್ಕೆ ಪಾತ್ರವಾಗಿತ್ತು.
  • ಕೋವಿಡ್ ಸಮಯದಲ್ಲಿ ಕೆಲಕಾಲ ಹೊರತುಪಡಿಸಿದಂತೆ, ನಿರಂತರವಾಗಿ ಈ ಕಾರ್ಯಕ್ರಮ ಪ್ರಸಾರವಾಗುತ್ತಿದೆ. 75 ಸಾವಿರ ಪ್ರಶ್ನೆಗಳನ್ನು ಕೇಳಲಾಗಿದ್ದು, 15 ಸಾವಿರ ಸ್ಪರ್ಧಿಗಳು ಭಾಗವಹಿಸಿ, ಕನ್ನಡದ 70 ಸಾವಿರ ಪುಸ್ತಕಗಳನ್ನು ಬಹುಮಾನವಾಗಿ ಪಡೆದಿದ್ದಾರೆ.
  • ಕಾರಾಗೃಹ ವಾಸಿಗಳಿಗೆ ವಿಶೇಷ ಸ್ಪರ್ಧೆ, ಅಂಧರು, ಎಚ್.ಐ.ವಿ. ಸೋಂಕಿತರು ಹೀಗೆ ಹಲವು ವಿಭಾಗಗಲ್ಲಿ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗಿದೆ. ಮೆಟ್ರೊ ರೈಲಿನ ಪ್ರಯಾಣಿಕರೊಂದಿಗೆ, ವಿಧಾನ ಪರಿಷತ್ತಿನ ಸದಸ್ಯರೊಂದಿಗೆ ವಿಶೇಷ ಸಂಚಿಕೆಗಳನ್ನು ಬಿತ್ತರಿಸಲಾಗಿದೆ ಎಂದು ಭಾಗ್ಯವಾನ್ ಮಾಹಿತಿ ನೀಡಿದ್ದಾರೆ.
  • ಶೂದ್ರ, ಪ್ರತಿಭಾ ಸೇರಿ ಆರು ಮಂದಿಗೆ ಪ್ರಶಸ್ತಿ

ಸಂದರ್ಭ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಗೌರವ ಹಾಗೂ ಸಾಹಿತ್ಯಶ್ರೀ ಪ್ರಶಸ್ತಿಗೆ 15 ಜನರನ್ನು ಆಯ್ಕೆ ಮಾಡಲಾಗಿದೆ.

  • ಗೌರವ ಪ್ರಶಸ್ತಿಗೆ ಎಂ. ಬಸವಣ್ಣ (ಚಾಮರಾಜನಗರ), ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್ (ಬೆಂಗಳೂರು), ಡಿ.ಬಿ.ನಾಯಕ್ (ಕಲಬುರಗಿ), ವಿಶ್ವನಾಥ್ ಕಾರ್ನಾಡ್ (ಮುಂಬಯಿ) ಅವರನ್ನು ಆಯ್ಕೆ ಮಾಡಲಾಗಿದೆ.
  • ‘ಸಾಹಿತ್ಯಶ್ರೀ’ ಪ್ರಶಸ್ತಿಗೆ ಪದ್ಮಾಲಯ ನಾಗರಾಜ್(ಕೋಲಾರ), ಕೆ.ವೈ. ನಾರಾಯಣಸ್ವಾಮಿ (ಬೆಂಗಳೂರು), ಬಿ.ಎಂ ಪುಟ್ಟಯ್ಯ( ಚಿಕ್ಕಮಗಳೂರು), ‌ ಬಿ.ಯು.ಸುಮಾ (ತುಮಕೂರು), ಮಮತಾ ಸಾಗರ(ಶಿವಮೊಗ್ಗ), ಸಬಿತಾ ಬನ್ನಾಡಿ( ಉಡುಪಿ), ಅಬ್ದುಲ್ ಹೈ ತೋರಣಗಲ್ (ಬಳ್ಳಾರಿ), ಗುರುಲಿಂಗಪ್ಪ ಧಬಾಲೆ(ಅಕ್ಕಲಕೋಟೆ), ಡಾ.ಎಚ್.ಎಸ್. ಅನುಪಮಾ (ಉತ್ತರ ಕನ್ನಡ), ಅಮರೇಶ ಯತಗಲ್ (ರಾಯಚೂರು) ಅವರನ್ನು ಆಯ್ಕೆ ಮಾಡಲಾಗಿದೆ.
  • ಗೌರವ ಪ್ರಶಸ್ತಿಯು ₹50 ಸಾವಿರ ನಗದು, ಸಾಹಿತ್ಯಶ್ರೀ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನವು ₹25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.
  • ‘ನಗರದಲ್ಲಿ ನಡೆದ ಅಕಾಡೆಮಿಯ ಸರ್ವಸದಸ್ಯರ ಸಭೆಯಲ್ಲಿ ಪ್ರಶಸ್ತಿಗಳಿಗೆ ಸಾಹಿತಿಗಳು ಹಾಗೂ ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಮೈಸೂರು, ತುಮಕೂರು ಇಲ್ಲವೇ ಬೆಳಗಾವಿಯಲ್ಲಿ ಸದ್ಯವೇ ಪ್ರಶಸ್ತಿ ಪ್ರದಾನ ಮಾಡಲಾಗುವುದು.
  • ‘ಸಾಹಿತ್ಯ ಅಕಾಡೆಮಿಗೆ ಸರ್ಕಾರ ವಾರ್ಷಿಕ ₹80 ಲಕ್ಷ ಅನುದಾನ ಒದಗಿಸುತ್ತಿದ್ದು, ಇದಲ್ಲದೇ ಬಜೆಟ್‌ನಲ್ಲಿ ಘೋಷಿಸಿದ ಕನ್ನಡ ಭಾರತಿ 150 ಪುಸ್ತಕ ಪ್ರಕಟಣೆಗೆ ₹50 ಲಕ್ಷ, ಸೌಹಾರ್ದ ಕರ್ನಾಟಕ ಕಾರ್ಯಕ್ರಮಕ್ಕೆ ₹50 ಲಕ್ಷ ಒದಗಿಸಿದ್ದು, ಈ ಕಾರ್ಯ ಚಟುವಟಿಕೆಗಳನ್ನು ರೂಪಿಸುತ್ತಿದ್ದೇವೆ.
  • ಭಾರತಬ್ರಿಟನ್‌: ರಕ್ಷಣಾ ಬಂಧ ಇನ್ನಷ್ಟು ಎತ್ತರಕ್ಕೆ 

ಸಂದರ್ಭ: ಕಿಯರ್ ಸ್ಟಾರ್ಮರ್‌ –ನರೇಂದ್ರ ಮೋದಿ ಮಾತುಕತೆ: ದ್ವಿಪಕ್ಷೀಯ ಸಂಬಂಧ, ವಾಯು ರಕ್ಷಣಾ ಸಹಕಾರದ ಬಗ್ಗೆ ಚರ್ಚೆ.

  • ಸೇನಾ ತರಬೇತಿಯಲ್ಲಿ ಸಹಕಾರ, ಸಶಸ್ತ್ರ ಪಡೆಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿ, ಕಡಲ ವಿದ್ಯುತ್‌ ವ್ಯವಸ್ಥೆಗಳ ಅಭಿವೃದ್ಧಿ, ವಾಯು ರಕ್ಷಣಾ ವ್ಯವಸ್ಥೆ ಬಲಪಡಿಸುವಿಕೆ, ಗಡಿ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವುದೂ ಸೇರಿದಂತೆ ರಕ್ಷಣಾ ಮತ್ತು ಭದ್ರತಾ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಭಾರತ ಮತ್ತು ಬ್ರಿಟನ್‌ ನಡುವೆ ಮಾತುಕತೆ ನಡೆಯಿತು.
  • ಎರಡು ದಿನಗಳ ಭಾರತ ಪ್ರವಾಸ ದಲ್ಲಿರುವ ಬ್ರಿಟನ್‌ ಪ್ರಧಾನಿ ಕಿಯರ್ ಸ್ಟಾರ್ಮರ್‌ ನೇತೃತ್ವದ ನಿಯೋಗ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ನಿಯೋಗದ ಸದಸ್ಯರ ನಡುವೆ ಇಲ್ಲಿನ ರಾಜಭವನದಲ್ಲಿ ಗುರುವಾರ ವಿವಿಧ ಕ್ಷೇತ್ರಗಳ ಸಂಬಂಧ ವೃದ್ಧಿ ಕುರಿತು ಚರ್ಚೆ ನಡೆಯಿತು.
  • ಅಲ್ಲದೆ, ಜುಲೈನಲ್ಲಿ ಉಭಯ ದೇಶಗಳ ನಡುವೆ ನಡೆದ ಮುಕ್ತ ವ್ಯಾಪಾರ ಒಪ್ಪಂದ ಅಥವಾ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವನ್ನು (ಸಿಇಟಿಎ) ಇನ್ನಷ್ಟು ಎತ್ತರಕ್ಕೆ ಒಯ್ಯುವ ನಿಟ್ಟಿನಲ್ಲಿ ಸಂವಾದ ನಡೆಯಿತು. ಅಲ್ಲದೆ ಜಂಟಿ ಆರ್ಥಿಕ ಮತ್ತು ವ್ಯಾಪಾರ ಸಮಿತಿಯನ್ನು (ಜೆಇಟಿಸಿಒ) ಮರುಸ್ಥಾಪಿಸುವ ನಿಯಮಗಳಿಗೆ ಸಹಿ ಹಾಕಲಾಯಿತು.
  • ರಾಜಭವನದಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆಗಳ ಜತೆಗೆ ಮೋದಿ ಮತ್ತು ಸ್ಟಾರ್ಮರ್‌ ಅವರು ಭಾರತ–ಬ್ರಿಟನ್‌ ಸಿಇಒ ವೇದಿಕೆ ಮತ್ತು ಗ್ಲೋಬಲ್‌ ಫಿನ್‌ಟೆಕ್‌ ಉತ್ಸವದಲ್ಲೂ ಜಂಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಮೋದಿ ಅವರ ಜತೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌ ಗೋಯಲ್‌, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ ಭಾಗವಹಿಸಿದ್ದರು. ಸ್ಟಾರ್ಮರ್‌ ಅವರ ಜತೆಗೆ ವ್ಯವಹಾರ ಮತ್ತು ವ್ಯಾಪಾರ ಕಾರ್ಯದರ್ಶಿ ಪೀಟರ್‌ ಕೈಲ್‌, ಹೂಡಿಕೆ ಸಚಿವ ಜೇಸನ್ ಸ್ಟಾಕ್‌ವುಡ್‌ ಹಾಜರಿದ್ದರು.
  • ಉಭಯ ದೇಶಗಳ ಸಶಸ್ತ್ರ ಪಡೆಗಳ ನಡುವಿನ ಜಂಟಿ ಸಮರಾಭ್ಯಾಸ, ತರಬೇತಿ ಮತ್ತು ಸಾಮರ್ಥ್ಯ ಹೆಚ್ಚಿಸುವ ಕುರಿತು ಎರಡೂ ನಾಯಕರು ಸಮ್ಮತಿ ಸೂಚಿಸಿದರು. ‘ನಮ್ಮ ನಡುವಿನ ರಕ್ಷಣಾ ಸಹಕಾರ ಆಳವಾಗಿದೆ. ರಕ್ಷಣಾ ಸಲಕರಣೆಗಳ ಸಹ ಉತ್ಪಾದನೆಯ ಜತೆಗೆ ರಕ್ಷಣಾ ಕೈಗಾರಿಕೆಗಳನ್ನು ಸಂಪರ್ಕಿಸುವತ್ತ ಸಾಗುತ್ತಿದ್ದೇವೆ’ ಎಂದು ಮೋದಿ ವಿವರಿಸಿದರು. 
  • ಇಂಡೊ–ಪೆಸಿಫಿಕ್‌ನಲ್ಲಿ ಕಡಲ ಭದ್ರತಾ ಸಹಯೋಗ ವೃದ್ಧಿಸಲು ಎರಡೂ ದೇಶಗಳ ನಾಯಕರು ಬದ್ಧತೆ ವ್ಯಕ್ತಪಡಿಸಿದರು. ಜತೆಗೆ ಪ್ರಾದೇಶಿಕ ಕಡಲ ಭದ್ರತಾ ಕೇಂದ್ರ ಸ್ಥಾಪನೆಗೂ ಸಮ್ಮತಿಸಿದರು.
  • ಭಾರತೀಯ ನೌಕಾ ವೇದಿಕೆಗಳಿಗೆ ಕಡಲ ವಿದ್ಯುತ್‌ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲು ಸಹಕಾರ ನೀಡುವ ಒಪ್ಪಂದವನ್ನು ಅಂತಿಮಗೊಳಿಸುವ ಕುರಿತು ಈ ವೇಳೆ ಚರ್ಚೆ ನಡೆಯಿತು.
  • ಖಾಲಿಸ್ತಾನಿ ಚಟುವಟಿಕೆ– ಮೋದಿ ಕಳವಳ: ಬ್ರಿಟನ್‌ನಲ್ಲಿ ಖಾಲಿಸ್ತಾನಿ ಪರ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟನ್‌ ಪ್ರಧಾನಿ ಕಿಯರ್‌ ಸ್ಟಾರ್ಮರ್‌ ಅವರ ಬಳಿ ಕಳವಳ ವ್ಯಕ್ತಪಡಿಸಿದರು. ತೀವ್ರಗಾಮಿತ್ವ ಮತ್ತು ಹಿಂಸಾತ್ಮಕ ಉಗ್ರವಾದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಅವರು ಸಲಹೆ ನೀಡಿದರು.
  • ಅಕ್ಕಿ ಜತೆ ಬೇಳೆ, ಅಡುಗೆ ಎಣ್ಣೆಇಂದಿರಾ ಆಹಾರ ಕಿಟ್‌’: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಸಂದರ್ಭ: ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ಕುಟುಂಬ ಗಳ ಪಡಿತರ ಫಲಾನು ಭವಿಗಳಿಗೆ ಇನ್ನು ಮುಂದೆಅನ್ನ ಭಾಗ್ಯ ಐದು ಕೆ.ಜಿ ಅಕ್ಕಿ ಜತೆಗೆಇಂದಿರಾ ಆಹಾರ ಕಿಟ್ ನೀಡಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ.

  • ಇಂದಿರಾ ಆಹಾರ ಕಿಟ್‌’ನಲ್ಲಿ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಇರಲಿವೆ.
  • ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್‌ (ಪಿಎಚ್ಎಚ್‌) ಕುಟುಂಬಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪ್ರತಿ ಫಲಾನುಭವಿಗೆ 5 ಕೆ.ಜಿ. ಅಕ್ಕಿ ಜತೆಗೆ, ರಾಜ್ಯ ಸರ್ಕಾರದಅನ್ನಭಾಗ್ಯಯೋಜನೆಯಡಿ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿ ಅಥವಾ ಗೋಧಿ, ರಾಗಿ, ಜೋಳ ಸೇರಿಸಿ ಒಟ್ಟು 10 ಕೆ.ಜಿ ಆಹಾರ ಧಾನ್ಯ ವಿತರಿಸಲಾಗುತ್ತಿತ್ತು. ರಾಜ್ಯದ ಪಾಲಿನ ಅಕ್ಕಿ ಬದಲು ದ್ವಿದಳ ಧಾನ್ಯ, ಅಡುಗೆ ಎಣ್ಣೆ ಮತ್ತಿತರ ವಸ್ತುಗಳನ್ನು ವಿತರಿಸಲಾಗುವುದು.
  • ರಾಜ್ಯ ಸರ್ಕಾರ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿ ವಿತರಿಸುತ್ತಿದೆ. ಇದರಿಂದ ಕೆಲವು ಕುಟುಂಬಗಳು ತಿಂಗಳಿಗೆ 40 ರಿಂದ 50 ಕೆ.ಜಿ ಅಕ್ಕಿ ಪಡೆಯುತ್ತಿವೆ. ಇದು ಕುಟುಂಬದ ಅಗತ್ಯಕ್ಕಿಂತಲೂ ಹೆಚ್ಚಾಗಿದೆ. ಈ ರೀತಿ ಹೆಚ್ಚುವರಿಯಾದ ಅಕ್ಕಿಯು ಬೇರೆ ಉದ್ದೇಶಗಳಿಗೆ ದುರುಪಯೋಗ ವಾಗುತ್ತಿದೆ. ಆದ್ದರಿಂದ ಇಂದಿರಾ ಆಹಾರ ಕಿಟ್‌ ಒದಗಿಸಲು ತೀರ್ಮಾನಿಸಲಾಗಿದೆ.
  • ಇತ್ತೀಚಿನ ದಿನಗಳಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟ ವಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಆದ್ದರಿಂದ, ಹೆಚ್ಚುವರಿ ಅಕ್ಕಿ ನೀಡುವುದರ ಬದಲಿಗೆ ಸಮತೋಲಿತ ಆರೋಗ್ಯ ನೀಡುವ ಆಹಾರದ ಕಿಟ್‌ ನೀಡುವುದು ಸೂಕ್ತ. ಇದರಿಂದ ಅಕ್ಕಿಯ ದುರುಪಯೋಗ ತಡೆಯಲು ಸಾಧ್ಯ ಎಂಬ ಅಭಿಪ್ರಾಯ ಸಚಿವ ಸಂಪುಟ ಸಭೆಯಲ್ಲಿ ವ್ಯಕ್ತವಾಯಿತು.
  • ಅನ್ನಭಾಗ್ಯಯೋಜನೆಯಲ್ಲಿ ವಿತರಿಸಲಾಗುವ ಅಕ್ಕಿಯಿಂದ ಕೇವಲ ಕಾರ್ಬೊಹೈಡ್ರೇಟ್ಮಾತ್ರ ದೊರೆಯುತ್ತಿದೆ. ಆದರೆ ವ್ಯಕ್ತಿಯ ಆರೋಗ್ಯಕ್ಕೆ ಅಗತ್ಯವಿರುವ ಕೊಬ್ಬಿನಾಂಶ, ಪ್ರೋಟೀನ್ಸಿಗುತ್ತಿಲ್ಲ. ಉತ್ತಮ ಆರೋಗ್ಯದ ದೃಷ್ಟಿಯಿಂದ ಎಲ್ಲಾ ಪೌಷ್ಟಿ ಕಾಂಶಗಳನ್ನು ಒಳಗೊಂಡ ಸಮತೋಲಿತ ಆಹಾರ ಒದಗಿಸುವ ಧಾನ್ಯಗಳನ್ನು ಕಿಟ್‌ ಮೂಲಕ ಒದಗಿಸುವುದು ಸರ್ಕಾರದ ಉದ್ದೇಶ.
  • ಪಡಿತರದಾರರು ಅಕ್ಕಿ, ಗೋಧಿ ಬಿಟ್ಟು ಇತರೆ ಆಹಾರ ಧಾನ್ಯಗಳನ್ನು ತಮ್ಮ ಸ್ವಂತ ವೆಚ್ಚದಲ್ಲಿ ಖರೀದಿಸುತ್ತಿದ್ದಾರೆ. ಒಂದು ಕುಟುಂಬಕ್ಕೆ ಸರಿ ಸುಮಾರು ₹500 ರಿಂದ ₹1,000ದ ವರೆಗೆ ವೆಚ್ಚವಾಗುತ್ತಿದೆ. ಸರ್ಕಾರ ಆಹಾರ ಕಿಟ್‌ ವಿತರಿಸುವುದ ರಿಂದ ಸುಮಾರು 1.26 ಕೋಟಿ ಕಾರ್ಡುದಾರರಿಂದ ತಿಂಗಳಿಗೆ ₹630 ಕೋಟಿ ಉಳಿತಾಯವಾಗಲಿದೆ.
  • ಎಷ್ಟು ಸದಸ್ಯರಿರುವ ಕುಟುಂಬಕ್ಕೆ ಎಷ್ಟರ ಪ್ರಮಾಣದಲ್ಲಿ ತೊಗರಿ, ಅಡುಗೆ ಎಣ್ಣೆ, ಸಕ್ಕರೆ ಸಿಗಲಿದೆ ಎಂಬ ಮಾಹಿತಿ ಸರ್ಕಾರದ ಅಧಿಕೃತ ಆದೇಶ ಹೊರಬಿದ್ದ ಬಳಿಕವಷ್ಟೇ ಖಚಿತವಾಗಲಿದೆ.
  • ಒಂದು ದಿನ ವೇತನ ಸಹಿತ ಮುಟ್ಟಿನ ರಜೆ

ಸಂದರ್ಭ: ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಮಾಹಿತಿ ತಂತ್ರಜ್ಞಾನ ಕಂಪನಿಗಳು ಮತ್ತು ಇತರ ಎಲ್ಲ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಮಹತ್ವದ ನಿರ್ಣಯವನ್ನು ಸರ್ಕಾರ ಕೈಗೊಂಡಿದೆ.

  • ಉದ್ದೇಶಕ್ಕಾಗಿ ಋತುಚಕ್ರ ರಜೆ ನೀತಿ–2025’ ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
  • ಮುಟ್ಟಿನ ಆರೋಗ್ಯವನ್ನು ಮಹಿಳೆಯರ ಹಕ್ಕುಗಳು ಮತ್ತು ಕೆಲಸದ ಸ್ಥಳದ ಕಲ್ಯಾಣದ ಮೂಲಭೂತ ಅಂಶವೆಂದು ಪರಿಗಣಿಸಿ ಅದರ ಮಹತ್ವವನ್ನು ಗುರುತಿಸಿದೆ. ಋತುಚಕ್ರ ರಜೆ ನೀತಿಯು ಮಹಿಳೆಯರು ಯಾವುದೇ ಕಳಂಕ ಅಥವಾ ಪರಿಣಾಮಗಳ ಭಯವಿಲ್ಲದೆ ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಬಹುದಾದ ಸಹಾಯಕ ವಾತಾವರಣವನ್ನು ಸೃಷ್ಟಿಸಲು ಸಕ್ರಿಯ ಹೆಜ್ಜೆಯಾಗಿದೆ.
  • ಮುಟ್ಟಿನ ರಜೆಗೆ ನಿರ್ದಿಷ್ಟವಾಗಿ ಯಾವುದೇ ಕಾನೂನು ಇಲ್ಲದಿದ್ದರೂ ಹಲವಾರು ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಕಂಪನಿಗಳು ತಮ್ಮ ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆ ನೀಡುವ ನೀತಿಗಳನ್ನು ಅಳವಡಿಸಿಕೊಂಡಿವೆ.
  • ಗುಣಮಟ್ಟ ತಪಾಸಣೆ: ರಾಷ್ಟ್ರವ್ಯಾಪಿ ಅಭಿಯಾನ

ಸಂದರ್ಭ: ಕೆಮ್ಮಿನ ಸಿರಪ್ಗಳ ಪರೀಕ್ಷೆ ಹಾಗೂ ಅವುಗಳ ತಯಾರಕರ ಕುರಿತು ರಾಷ್ಟ್ರವ್ಯಾಪಿ ತಪಾಸಣೆಗೆ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್ಸಿಒ) ಮುಂದಾಗಿದೆ ಎಂದು ಮೂಲಗಳು ಹೇಳಿವೆ.

  • ಕೆಮ್ಮಿನ ಸಿರಪ್‌ ತಯಾರಕ ಕಂಪನಿಗಳ ಪಟ್ಟಿಯನ್ನು ಒದಗಿಸುವಂತೆ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಗಳಿಗೆ ಸಿಡಿಎಸ್‌ಸಿಒ ಸೂಚನೆಯನ್ನೂ ನೀಡಿದೆ.
  • ‘ಕಲುಷಿತ’ ಕೆಮ್ಮಿನ ಸಿರಪ್‌ ಸೇವನೆಯಿಂದ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸಾವು ಸಂಭವಿಸಿರುವ ಬಗ್ಗೆ ಆರೋಪಗಳು ಕೇಳಿಬಂದ ಕಾರಣ, ಸಿಡಿಎಸ್‌ಸಿಒ ಈ ಅಭಿಯಾನ ಕೈಗೊಂಡಿದೆ.
  • ಸೂಚನೆ ನೀಡಿದ್ದ ಡಿಸಿಜಿಐ: ‘ಕಲುಷಿತ’ ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳು ಮೃತಪಟ್ಟಿರುವ ಆರೋಪಗಳು ಕೇಳಿ ಬಂದ ಬೆನ್ನಲ್ಲೇ, ಭಾರತೀಯ ಔಷಧ ಮಹಾನಿಯಂತ್ರಕ (ಡಿಸಿಜಿಐ) ಸಂಸ್ಥೆಯು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಔಷಧ ನಿಯಂತ್ರಕರಿಗೆ ಕೆಲವು ಸೂಚನೆಗಳನ್ನು ನೀಡಿತ್ತು.
  • ಒತ್ತೆಯಾಳುಗಳ ಬಿಡುಗಡೆಗೆ ಒಪ್ಪಿಗೆ

ಸಂದರ್ಭ: ಗಾಜಾದಲ್ಲಿ ಮೊದಲ ಹಂತದ ಶಾಂತಿ ಸ್ಥಾಪನೆ ಯೋಜನೆ ಜಾರಿಗೆ ಇಸ್ರೇಲ್ಮತ್ತು ಹಮಾಸ್ಬಂಡುಕೋರ ಸಂಘಟನೆ ಒಪ್ಪಿಗೆ ಸೂಚಿಸಿವೆ.

  • ಶಾಂತಿ ಒಪ್ಪಂದದ ಪ್ರಕಾರ ಹಮಾಸ್‌ ತನ್ನ ಬಳಿಯಿರುವ ಉಳಿದ ಎಲ್ಲ 20 ಜೀವಂತ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲಿದ್ದು, ಅದಕ್ಕೆ ಪ್ರತಿಯಾಗಿ ಇಸ್ರೇಲ್‌ ನೂರಾರು ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಲಿದೆ. ಒಪ್ಪಂದದ ಭಾಗವಾಗಿ ಗಾಜಾದ ಕೆಲವು ಪ್ರದೇಶಗಳಿಂದ ಇಸ್ರೇಲ್‌ ತನ್ನ ಸೇನೆಯನ್ನು ಹಿಂತೆಗೆದುಕೊಳ್ಳಲಿದೆ.
  • ಗಾಜಾದಲ್ಲಿ ಯುದ್ಧ ಕೊನೆಗೊಳಿಸಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು 20 ಅಂಶಗಳ ಯೋಜನೆಯನ್ನು ಮುಂದಿಟ್ಟಿದ್ದರು. ಶಾಂತಿ ಸ್ಥಾಪನೆ ಯೋಜನೆಯ ಮೊದಲ ಹಂತದ ಜಾರಿಗೆ ಈಜಿಪ್ಟ್‌ ರಾಜಧಾನಿ ಕೈರೊದ ಶರ್ಮ್‌ ಎಲ್‌ ಶೇಖ್‌ನಲ್ಲಿ ಇಸ್ರೇಲ್‌ ಮತ್ತು ಹಮಾಸ್‌ ನಿಯೋಗದ ನಡುವೆ ಮೂರು ದಿನಗಳಿಂದ ನಡೆದ ಮಾತುಕತೆ ಕೊನೆಗೂ ಫಲಪ್ರದವಾಗಿದೆ.

ಟ್ರಂಪ್ಶಾಂತಿ ಸೂತ್ರ; ಮೊದಲ ಹಂತ ಜಾರಿಗೆ ಹಮಾಸ್ ಇಸ್ರೇಲ್ಸಹಮತ

  • ಎಲ್ಲ ಒತ್ತೆಯಾಳುಗಳು ಸೋಮವಾರ ಬಿಡುಗಡೆ ಆಗಲಿದ್ದಾರೆ. ಗಾಜಾದ ಕೆಲವು ಪ್ರದೇಶಗಳಿಂದ ಇಸ್ರೇಲ್‌ ತನ್ನ ಸೇನೆಯನ್ನು ಹಿಂತೆಗೆದುಕೊಳ್ಳಲಿದೆ ಡೊನಾಲ್ಡ್‌ ಟ್ರಂಪ್, ಅಮೆರಿಕದ ಅಧ್ಯಕ್ಷ ಶಾಂತಿ ಯೋಜನೆ ಜಾರಿಗೆ ಎರಡೂ ಕಡೆಯವರು ಒಪ್ಪಿಕೊಂಡಿರುವುದಾಗಿ ಟ್ರಂಪ್‌ ಘೋಷಿಸಿದ್ದಾರೆ. ‘ನಮ್ಮ ಶಾಂತಿ ಯೋಜನೆಯ ಮೊದಲ ಹಂತದ ಅನುಷ್ಠಾನಕ್ಕೆ ಇಸ್ರೇಲ್ ಮತ್ತು ಹಮಾಸ್ ಸಹಮತ ವ್ಯಕ್ತಪಡಿಸಿವೆ ಎಂದು ಘೋಷಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ’ ಎಂದು ಅವರು ‘ಟ್ರುತ್ ಸೋಷಿಯಲ್‌’ನಲ್ಲಿ ಬರೆದುಕೊಂಡಿದ್ದಾರೆ.
  • ಟ್ರಂಪ್‌ ಅವರ ಶಾಂತಿ ಯೋಜನೆಯ ಇತರ ಕೆಲವು ಅಂಶಗಳ ಜಾರಿ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. ಹಮಾಸ್‌ ಸದಸ್ಯರು ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗಬೇಕು ಮತ್ತು ಗಾಜಾದ ಆಡಳಿತವನ್ನು ನೋಡಿಕೊಳ್ಳುವವರು ಯಾರು – ಮುಂತಾದ ಪ್ರಮುಖ ಆಂಶಗಳ ಬಗ್ಗೆ ಯಾವುದೇ ತೀರ್ಮಾನ ಹೊರಬಿದ್ದಿಲ್ಲ.
  • ಆದರೆ, ಶಾಂತಿ ಯೋಜನೆಯ ಮೊದಲ ಹಂತದ ಜಾರಿಗೆ ಸಹಮತ ಮೂಡಿರುವುದು ಎರಡು ವರ್ಷಗಳಿಂದ ನಡೆಯುತ್ತಿರುವ ಯುದ್ಧಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಇಟ್ಟಿರುವ ಪ್ರಮುಖ ಹೆಜ್ಜೆ ಎಂದು ವಿಶ್ಲೇಷಿಸಲಾಗಿದೆ.
  • ಸುಮಾರು 2,000 ಪ್ಯಾಲೆಸ್ಟೀನಿ ಯನ್ ಕೈದಿಗಳಿಗೆ ಬದಲಾಗಿ ಏಕಕಾಲದಲ್ಲಿ 20 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹಮಾಸ್‌ನ ಮೂಲವೊಂದು ತಿಳಿಸಿದೆ.  ಜೀವಾವಧಿ ಶಿಕ್ಷೆಗೆ ಒಳಗಾಗಿರುವ 250 ಮಂದಿ ಹಾಗೂ ಯುದ್ಧ ಆರಂಭವಾದ ಬಳಿಕ ಇಸ್ರೇಲ್‌ ಬಂಧಿಸಿರುವ 1,700 ಪ್ಯಾಲೆಸ್ಟೀನಿಯರು ಬಿಡುಗಡೆಯಾಗಲಿದ್ದಾರೆ ಎಂದು ಹೇಳಿದೆ.
  • ಒಪ್ಪಂದಕ್ಕೆ ಸಹಿ ಬಿದ್ದ 72 ಗಂಟೆಗಳ ಒಳಗೆ ವಿನಿಮಯ ಪ್ರಕ್ರಿಯೆ ನಡೆಯಲಿದೆ. ‘ಒಪ್ಪಂದದ ಅನುಷ್ಠಾನಕ್ಕೆ ಸಂಪುಟ ಸಭೆ ಅನುಮೋದನೆ ದೊರೆತ ನಂತರವೇ 72 ಗಂಟೆಗಳ ಕೌಂಟ್‌ಡೌನ್ ಪ್ರಾರಂಭವಾಗುತ್ತದೆ’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ತಿಳಿಸಿದೆ.
  • 2023 ಅಕ್ಟೋಬರ್‌ 7ರಂದು ಇಸ್ರೇಲ್ಮೇಲೆ ಹಮಾಸ್ ನಡೆಸಿದ ದಾಳಿಯೊಂದಿಗೆ ಯುದ್ಧ ಆರಂಭಗೊಂಡಿತ್ತು.

ಪ್ರಮುಖ ಅಂಶಗಳು

  • lಒತ್ತೆಯಾಳುಗಳು ಬಿಡುಗಡೆಯಾಗಲಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಟೆಲ್‌ ಅವೀವ್‌ನ ‘ಹಾಸ್ಟೇಜ್ ಸ್ಕ್ವೇರ್‌’ ಬಳಿ ಸಂಭ್ರಮಿಸಿದ ಸಾವಿರಾರು ಮಂದಿ, ಖಾನ್‌ ಯೂನಿಸ್‌ನ ನಾಸೆರ್‌ ಆಸ್ಪತ್ರೆ ಬಳಿ ಪ್ಯಾಲೆಸ್ಟೀನಿಯರಿಂದ ಸಂಭ್ರಮಾಚರಣೆ
  • l  ಶಾಂತಿ ಸೂತ್ರಕ್ಕೆ ಒಪ್ಪಿಗೆ ಸೂಚಿಸಿದ ಬಳಿಕವೂ ಗಾಜಾ ಮೇಲೆ ಮುಂದುವರಿದ ಇಸ್ರೇಲ್‌ ದಾಳಿ
  • l ಮಾತುಕತೆಗೆ ಮಧ್ಯಸ್ಥಿಕೆ ವಹಿಸಿದ ಕತಾರ್‌, ಈಜಿಪ್ಟ್‌ ಮತ್ತು ಟರ್ಕಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ ಡೊನಾಲ್ಡ್‌ ಟ್ರಂಪ್
  • l ಇಸ್ರೇಲ್‌ ಬಿಡುಗಡೆಗೊಳಿಸಬೇಕಾದ ಕೈದಿಗಳ ಪಟ್ಟಿ ನೀಡಿದ ಹಮಾಸ್
  • l ಪಶ್ಚಿಮ ಏಷ್ಯಾದಲ್ಲಿ ಶಾಶ್ವತವಾಗಿ ಶಾಂತಿ ನೆಲೆಸುವ ಆಶಯ ವ್ಯಕ್ತಪಡಿಸಿದ ವಿಶ್ವದ ವಿವಿಧ ದೇಶಗಳ ನಾಯಕರು.
  • ನಮ್ಮ ದಾಳಿಗಳಿಂದ ರಷ್ಯಾದಲ್ಲಿ ಅನಿಲ ಕೊರತೆ: ಝೆಲೆನ್ಸ್ಕಿ

ಸಂದರ್ಭ: ‘ಹೊಸದಾಗಿ ಅಭಿವೃದ್ಧಿಪಡಿಸಿರುವ ದೂರಗಾಮಿ ಕ್ಷಿಪಣಿ ಮತ್ತು ಡ್ರೋನ್‌ಗಳ ದಾಳಿಯಿಂದಾಗಿ ರಷ್ಯಾದಲ್ಲಿ ತೀವ್ರ ಅನಿಲ ಕೊರತೆ ಉಂಟಾಗುತ್ತಿದೆ. ಜೊತೆಗೆ, ನಮ್ಮ ದೇಶದ ಡೊನೆಟ್‌ಸ್ಕ್‌ನ ಪೂರ್ವದಲ್ಲಿರುವ ಪ್ರದೇಶವೊಂದನ್ನು ವಶಪಡಿಸಿಕೊಳ್ಳಲು ಬಂದಿದ್ದ ರಷ್ಯಾದ ವಿಮಾನವನ್ನೂ ನಾವು ಹೊಡೆದುರುಳಿಸಿ ದ್ದೇವೆ’ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದರು.

  • ‘ನಮ್ಮ ಹೊಸ ಕ್ಷಿಪಣಿ ಹಾಗೂ ಡ್ರೋನ್‌ಗಳು ರಷ್ಯಾಕ್ಕೆ ನಷ್ಟವನ್ನುಂಟು ಮಾಡಿವೆ. ರಷ್ಯಾದ ಸಮುದ್ರದ ತಟದಲ್ಲಿರುವ ತೈಲ ಘಟಕದ ಮೇಲೆಯೂ ನಾವು ದಾಳಿ ನಡೆಸಿದ್ದೇವೆ. ಇದು ನಮಗೆ ದೊರೆತ ಅತಿ ದೊಡ್ಡ ಯಶಸ್ಸು’ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
  • ‘ನಮಗಿರುವ ಮಾಹಿತಿ ಪ್ರಕಾರ, ನಮ್ಮ ದಾಳಿ ನಂತರ ರಷ್ಯಾದ ಶೇ 20ರಷ್ಟು ತೈಲ ಪೂರೈಕೆಯು ನಷ್ಟವಾಗಿದೆ. ರಷ್ಯಾವು ಚೀನಾ ಮತ್ತು ಬೆಲರೂಸ್‌ನ ಸಿಕ್ಸ್‌ಫೋಲ್ಡ್‌ ಕಂಪನಿಯಿಂದ ಅನಿಲವನ್ನು ಆಮದು ಮಾಡಿಕೊಳ್ಳುತ್ತಿದೆ. ಇದಕ್ಕಾಗಿ ಆಮದು ಸುಂಕವನ್ನು ತೆಗೆದು ಹಾಕಿದೆ’ ಎಂದರು.
  • ₹20 ಕೋಟಿ ಸಮಗ್ರ ಯೋಜನೆ ಸಿದ್ಧ

ಸಂದರ್ಭ: ರಾಜ್ಯದ ಎರಡನೇ ದೊಡ್ಡ ಪಕ್ಷಿಧಾಮವಾಗಿರುವ ಸುರಪುರ ಸಮೀಪದ ಬೋನಾಳ ಪಕ್ಷಿಧಾಮದಲ್ಲಿನ ಜೀವವೈವಿಧ್ಯದ ಸಂರಕ್ಷಣೆ, ಸಮಗ್ರ ಅಭಿವೃದ್ಧಿ ಹಾಗೂ ಪರಿಸರ ಪ್ರವಾಸೋದ್ಯಮದ ಹಿತದೃಷ್ಟಿಯಿಂದ ಯಾದಗಿರಿ ಪ್ರಾದೇಶಿಕ ಅರಣ್ಯ ವಿಭಾಗವು ₹ 20 ಕೋಟಿ ಮೊತ್ತದ ಸಮಗ್ರ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಿದೆ.

  • ಬೋನಾಳ ಪಕ್ಷಿಧಾಮ 676 ಎಕರೆ ಪ್ರದೇಶದಲ್ಲಿ ವಿಸ್ತರಿಸಿಕೊಂಡಿದ್ದು, ಜಲಮೂಲದ ಸುತ್ತಲೂ ವಿಶಾಲವಾದ ಕೃಷಿ ಭೂಮಿ ಮತ್ತು ಕಲ್ಲಿನ ಬಂಡೆಗಳ ಬೆಟ್ಟಗಳಿಂದ ಕೂಡಿದೆ. ದೇಶ ವಿದೇಶಗಳಿಂದ ಸಾವಿರಾರು ಸಂಖ್ಯೆಯ ನಾನಾ ಬಗೆಯ ಪಕ್ಷಿಗಳು ಸಂತಾನೋತ್ಪತ್ತಿಗಾಗಿ ಇಲ್ಲಿಗೆ ಬರುತ್ತಿದ್ದವು.
  • ಮಾನವನ ಅತಿಯಾದ ಹಸ್ತಕ್ಷೇಪ, ಆಹಾರ ಲಭ್ಯತೆಯ ಕೊರತೆಯಂತಹ ಹಲವು ಕಾರಣಗಳಿಂದ ಅವುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ.
  • ಇದನ್ನು ಮನಗಂಡಿರುವ ಪ್ರಾದೇಶಿಕ ಅರಣ್ಯ ವಿಭಾಗವು 2030ರ ವರೆಗೆ ಹಂತ– ಹಂತವಾಗಿ ಅಭಿವೃದ್ಧಿಪಡಿಸುವ ಯೋಜನೆ ಹಾಕಿಕೊಂಡಿದೆ. ಪಕ್ಷಿಗಳ ಆವಾಸಸ್ಥಾನ ಮತ್ತು ಸುತ್ತಲಿನ ಪರಿಸರ ವ್ಯವಸ್ಥೆಯ ನಿರ್ವಹಣೆಗೆ ₹6.35 ಕೋಟಿ, ಪ್ರವಾಸಿಗರ ಸ್ನೇಹಿ ಮೂಲಸೌಕರ್ಯಗಳಿಗೆ ₹ 10.75 ಕೋಟಿ ಹಾಗೂ ಸಿಬ್ಬಂದಿ ನೇಮಕಕ್ಕೆ ₹ 2.90 ಕೋಟಿ ಸೇರಿ ₹ 20 ಕೋಟಿ ಮೊತ್ತದ ಡಿಪಿಆರ್ ತಯಾರಿಸಿದೆ. ಶೀಘ್ರವೇ ಅರಣ್ಯ ಇಲಾಖೆಗೆ ಸಲ್ಲಿಕೆಯೂ ಮಾಡಲಿದೆ.
  • ಅರಣ್ಯ ಇಲಾಖೆಯು ಸಮ್ಮತಿಸಿ ಅನುದಾನ ಮಂಜೂರು ಮಾಡಿಸಿದರೆ 2026ರಲ್ಲಿ ₹ 4.36 ಕೋಟಿ, 2027ರಲ್ಲಿ ₹ 7.39 ಕೋಟಿ, 2028ರಲ್ಲಿ ₹ 4.17 ಕೋಟಿ, 2029ರಲ್ಲಿ ₹ 1.35 ಕೋಟಿ ಹಾಗೂ 2030ರಲ್ಲಿ ₹ 2.73 ಕೋಟಿ ಅನುದಾನವನ್ನು ವಿನಿಯೋಗಿಸುವ ಯೋಜನೆಯನ್ನು ಅಧಿಕಾರಿಗಳು ಹಾಕಿಕೊಂಡಿದ್ದಾರೆ.
  • ಕೆರೆಯ ಸುತ್ತಲೂ ಹಣ್ಣಿನ ಮತ್ತು ನೆರಳು ಕೊಡುವ ವಿವಿಧ ಜಾತಿಯ ಮರಗಳು ಮತ್ತು ಪೊದೆ ಗಿಡಗಳನ್ನು ನೆಡುವುದು; ಗೂಡು ಕಟ್ಟಿಕೊಳ್ಳಲು ಹಾಗೂ ಮೊಟ್ಟೆಗಳು ಇರಿಸಲು ಅನುಕೂಲ ಆಗುವಂತೆ ಐದು ಮಣ್ಣಿನ ದ್ವೀಪಗಳ ನಿರ್ಮಾಣ; ಪಕ್ಷಿಗಳ ವಿಶ್ರಾಂತಿ ಹಾಗೂ ವೀಕ್ಷಣೆಗಾಗಿ ಎತ್ತರದ 75 ಕೃತಕ ಪಕ್ಷಿಗಳ ಸ್ಟ್ಯಾಂಡ್ ನಿರ್ಮಾಣ; ಪಕ್ಷಿಗಳಿಗೆ ಜೀವಕ್ಕೆ ಎರವಾಗುವ ಪ್ರಭೇದಗಳ ನಿರ್ಮೂಲನೆ; ನೀರಿನ ಗುಣಮಟ್ಟ ಕಾಪಾಡಿ ಹಾಗೂ ಆವಾಸಸ್ಥಾನದ ಸ್ವಾಸ್ಥ್ಯ ಸುಧಾರಣೆಗೆ ಒಟ್ಟು ₹ 6.35 ಕೋಟಿ ಬೇಕಾಗುತ್ತದೆ ಎಂದು ಡಿಪಿಆರ್‌ನಲ್ಲಿ ಉಲ್ಲೇಖಿಸಲಾಗಿದೆ.
  • ಪ್ರವಾಸಿಗರ ಸ್ನೇಹಿಯಾದ ಮೂರು ಪಕ್ಷಿ ವೀಕ್ಷಣೆ ಗೋಪುರ ನಿರ್ಮಾಣ, ಬೋಟಿಂಗ್ ಬೇ, ಕ್ಯಾಂಟೀನ್ ಮತ್ತು ಶೌಚಾಲಯ, ಕೃತಕ ಕಾರಂಜಿಗಳು, ಟಿಕೆಟ್ ಕೌಂಟರ್, ಪ್ರವೇಶದ್ವಾರ ಸೇರಿ ಇತರೆ ಮೂಲಸೌಕರ್ಯಗಳಿಗೆ ₹ 10.75 ಕೋಟಿ ಅಗತ್ಯವಿದೆ. ದೋಣಿ ನಡೆಸುವವರು, ಸ್ವಚ್ಛತಾ ಕಾರ್ಮಿಕರು, ಭದ್ರತಾ ಸಿಬ್ಬಂದಿ, ಕಂಪ್ಯೂಟರ್ ಆಪರೇಟರ್‌ಗಳನ್ನು ನಿಯೋಜನೆಗೆ ಸುಮಾರು ₹ 2.90 ಕೋಟಿಯ ಅವಶ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  • ಆರ್ಟಿಐ ಕಾಯ್ದೆ ಹಾವಿಗೀಗ ಹಲ್ಲಿಲ್ಲ
  • ಫ್ರೀಡಂ ಸನ್ಫ್ಲವರ್ಆಯಿಲ್ಗೆ ರಾಹುಲ್ ದ್ರಾವಿಡ್ ರಾಯಭಾರಿ

ಸಂದರ್ಭ: ಜೆಮಿನಿ ಎಡಿಬಲ್ಸ್ಆ್ಯಂಡ್ಫ್ಯಾಟ್ಸ್ಇಂಡಿಯಾ ಲಿಮಿಟೆಡ್ ಕಂಪನಿಯ ಫ್ರೀಡಂ ರಿಫೈನ್ಡ್ಸನ್ಫ್ಲವರ್ಆಯಿಲ್‌, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ತನ್ನ ಬ್ರ್ಯಾಂಡ್ ರಾಯಭಾರಿಯಾಗಿ ನೇಮಿಸಿದೆ.

  • ಈ ಸಹಯೋಗದ ಕಾರಣದಿಂದಾಗಿ ದ್ರಾವಿಡ್ ಅವರು ‘ಫ್ರೀಡಂ ರಿಫೈನ್ಡ್ ಸನ್‌ಫ್ಲವರ್‌ ಅಡುಗೆ ಎಣ್ಣೆ ಬಳಸಿ ಅಡುಗೆ ಮಾಡುವಂತೆ  ಕುಟುಂಬಗಳನ್ನು  ಪ್ರೇರೇಪಿಸಲಿದ್ದಾರೆ’ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.
  • ತಯಾರಿಕಾ ವಲಯ: ಸದೃಢ ಬೆಳವಣಿಗೆ ನಿರೀಕ್ಷೆಫಿಕ್ಕಿ

ಸಂದರ್ಭ:  ‘ದೇಶದ ತಯಾರಿಕಾ ವಲಯವು ಸದೃಢ ಬೆಳವಣಿಗೆ ಕಾಣುವ ನಿರೀಕ್ಷೆ ಇದೆ ಎಂದು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘದ (ಫಿಕ್ಕಿ) ಸಮೀಕ್ಷೆ ತಿಳಿಸಿದೆ.

  • ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ತಯಾರಿಕಾ ವಲಯದ ಉತ್ಪಾದನೆ ಹೆಚ್ಚಳವಾಗಿದೆ ಅಥವಾ ಅಷ್ಟೇ ಪ್ರಮಾಣದಲ್ಲಿ ಇದೆ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡವರ ಪೈಕಿ ಶೇ 87ರಷ್ಟು ಮಂದಿ ಹೇಳಿದ್ದಾರೆ.
  • ಪ್ರಸಕ್ತ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ತಯಾರಿಕಾ ವಲಯದ ಪ್ರಮುಖ ಎಂಟು ವಿಭಾಗಗಳ ಕಾರ್ಯಾಚರಣೆಯನ್ನು ಫಿಕ್ಕಿ ಮೌಲ್ಯಮಾಪನ ಮಾಡಿದೆ. ‌
  • ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಸರಕುಗಳಿಗೆ ಕಾರ್ಯಾದೇಶ ಹೆಚ್ಚಾಗಿರುವ ನಿರೀಕ್ಷೆ ಇದೆ. ಜಿಎಸ್‌ಟಿ ದರ ಕಡಿತ ಘೋಷಿಸಿದ ನಂತರ ಕಾರ್ಯಾದೇಶ ಇನ್ನೂ ಹೆಚ್ಚಾಗಿರುವ ನಿರೀಕ್ಷೆ ಇದೆ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡವರಲ್ಲಿ ಶೇ 83ರಷ್ಟು ಮಂದಿ ಹೇಳಿದ್ದಾರೆ.
  • ಕಬ್ಬಿಣದ ಅದಿರು, ರಾಸಾಯನಿಕಗಳು, ಪ್ರಮುಖ ಬಿಡಿ ಭಾಗಗಳು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ತಯಾರಿಕಾ ವೆಚ್ಚ ಹೆಚ್ಚಳವಾಗಿದೆ. ಜೊತೆಗೆ ಕಾರ್ಮಿಕ ವೆಚ್ಚ, ಸರಕು ಸಾಗಣೆ, ವಿದ್ಯುತ್‌ ವೆಚ್ಚ ಹೆಚ್ಚಳವಾಗಿದೆ. ಇದರಿಂದ ಪ್ರಸಕ್ತ ಆರ್ಥಿಕ ವರ್ಷದ ಜೂನ್ ಮತ್ತು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಉತ್ಪಾದನೆ ವೆಚ್ಚ ಹೆಚ್ಚಿದೆ.
  • ಮುಂದಿನ ದಿನಗಳಲ್ಲಿ ಹೂಡಿಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೂಡಿಕೆದಾರರಲ್ಲಿ ಸಕಾರಾತ್ಮಕ ಧೋರಣೆ ಇದೆ, ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ 50ಕ್ಕೂ ಹೆಚ್ಚು ಮಂದಿ ಮುಂದಿನ ಆರು ತಿಂಗಳಿನಲ್ಲಿ ಹೂಡಿಕೆ ಮತ್ತು ವಹಿವಾಟನ್ನು ವಿಸ್ತರಣೆ ಮಾಡಿಕೊಳ್ಳುವ ಆಲೋಚನೆ ಹೊಂದಿದ್ದಾರೆ ಎಂದು ತಿಳಿಸಿದೆ.
  • ದ್ವಿದಳ ಧಾನ್ಯ ಮಿಷನ್ಗೆ ಪ್ರಧಾನಿ ನಾಳೆ ಚಾಲನೆ

ಸಂದರ್ಭ: ದ್ವಿದಳ ಧಾನ್ಯ ಮಿಷನ್ ಮತ್ತುಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಚಾಲನೆ ನೀಡಲಿದ್ದಾರೆ.

  • ಧಾನ್ಯಗಳ ಉತ್ಪಾದನೆಯಲ್ಲಿ ದೇಶವು ಸ್ವಾವಲಂಬನೆ ಸಾಧಿಸುವಂತೆ ಮಾಡುವ ಗುರಿಯನ್ನು ಈ ಯೋಜನೆಗಳು ಹೊಂದಿವೆ.
  • ಈ ಎರಡು ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟವು ಈಗಾಗಲೇ ಅನುಮೋದನೆ ನೀಡಿದೆ. ಮುಂದಿನ ಹಿಂಗಾರು ಹಂಗಾಮಿನಿಂದ ಈ ಯೋಜನೆ ಅನುಷ್ಠಾನಗೊಳ್ಳಲಿದೆ. 2030-31ರವರೆಗೆ ಜಾರಿಯಲ್ಲಿ ಇರಲಿವೆ.
  • ಇದೇ ವೇಳೆ ಮೀನುಗಾರಿಕೆ, ಜಾನುವಾರು, ಆಹಾರ ಸಂಸ್ಕರಣೆ ಸೇರಿದಂತೆ ಇತರ ಕ್ಷೇತ್ರಗಳಿಗೆ ಸಂಬಂಧಿಸಿದ ₹3,681 ಕೋಟಿ ಮೌಲ್ಯದ ಯೋಜನೆಗಳನ್ನೂ ಮೋದಿ ಅವರು ಆರಂಭಿಸಲಿದ್ದಾರೆ. ಬಳಿಕ ರೈತರೊಂದಿಗೆ ಮೋದಿ ಅವರು ಮಾತುಕತೆ ನಡೆಸಲಿದ್ದಾರೆ.
  • ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌, ‘ಗೋಧಿ ಮತ್ತು ಅಕ್ಕಿ ಉತ್ಪಾದನೆಯಲ್ಲಿ ದೇಶ ಸ್ವಾವಲಂಬನೆ ಸಾಧಿಸಿದೆ. ಧಾನ್ಯಗಳು, ಎಣ್ಣೆಕಾಳುಗಳು ವಿಷಯದಲ್ಲಿಯೂ ಸ್ವಾವಲಂಬನೆ ಸಾಧಿಸಬೇಕಿದೆ’ ಎಂದು ಹೇಳಿದ್ದಾರೆ.
  • ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆ ಸಾಧಿಸುವ ಯೋಜನೆಗೆ ಮೋದಿ ಅವರು ಚಾಲನೆ ನೀಡಲಿದ್ದಾರೆ. ಪ್ರಸ್ತುತ ದ್ವಿದಳ ಧಾನ್ಯಗಳ ಉತ್ಪಾದನೆ 252.38 ಲಕ್ಷ ಟನ್ಇದೆ. 2030–31 ಬೆಳೆ ವರ್ಷದ ವೇಳೆಗೆ ಇದನ್ನು 350 ಲಕ್ಷ ಟನ್ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು. 
  • ಈ ಯೋಜನೆಯ ಗಾತ್ರ ₹11,440 ಕೋಟಿ. ಹೆಚ್ಚು ಇಳುವರಿ ನೀಡುವ ಮತ್ತು ರೋಗಗಳನ್ನು ತಾಳಿಕೊಂಡು ಹೆಚ್ಚಿನ ಉತ್ಪಾದನೆ ನೀಡುವ ವಿವಿಧ ಮಾದರಿಯ ಬೀಜಗಳನ್ನು ರೈತರಿಗೆ ನೀಡಲಾಗುವುದು ಎಂದರು.
  • ಪ್ರಧಾನ ಮಂತ್ರಿ ಧನ ಧಾನ್ಯ ಯೋಜನೆ ಗಾತ್ರ ₹24 ಸಾವಿರ ಕೋಟಿಯಾಗಿದೆ. ಕಡಿಮೆ ಕೃಷಿ ಚಟುವಟಿಕೆ ಇರುವ 100 ಜಿಲ್ಲೆಗಳಲ್ಲಿ ಯೋಜನೆಯಡಿ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.
  • ಕಂಬಳಕ್ಕೆ ಕ್ರೀಡಾ ಪ್ರಾಧಿಕಾರ ಮಾನ್ಯತೆ

ಸಂದರ್ಭ:ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ಇನ್ನು ರಾಜ್ಯ ಕ್ರೀಡಾ ಸಂಸ್ಥೆ: ಕರಾವಳಿಯ ವಿಶೇಷ ಜಾನಪದ ಕ್ರೀಡೆಯಾದ ಕಂಬಳಕ್ಕೆ ಸರ್ಕಾರದಿಂದ ಈಗ ಅಧಿಕೃತ ಮನ್ನಣೆ ಸಿಕ್ಕಿದಂತಾಗಿದೆ.

  • ಕಂಬಳ ಕ್ರೀಡೆಗೆ,‌ ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮನ್ನಣೆ ಸಿಕ್ಕಿದೆ. ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ಗೆ ಮಾನ್ಯತೆ ನೀಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದೆ.
  • ಮಾನ್ಯತೆಯು ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಅನ್ವಯ ವಾಗಲಿದೆ ಎಂದು  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಆದೇಶದಲ್ಲಿ ತಿಳಿಸಿದ್ದಾರೆ.
  • ಕರ್ನಾಟಕ ಕ್ರೀಡಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಕಂಬಳ ಅಸೋಸಿ ಯೇಷನ್‌ಗೆ ಅನುದಾನ ನೀಡಲಿದೆ.
  • ಕಂಬಳ ಕ್ರೀಡೆಯನ್ನು ಸಂಘಟಿಸುವ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್‌ಗೆ ಮಾನ್ಯತೆ ನೀಡುವಂತೆ ಕೋರಿ ಸಂಸ್ಥೆಯ ಅಧ್ಯಕ್ಷರು ಕರ್ನಾಟಕ ಕ್ರೀಡಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಅಸೋಸಿಯೇಷನ್‌ಗೆ ಮಾನ್ಯತೆ ನೀಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಿಫಾರಸು ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ 2025ರ ಮೇ 5ರಂದು ನಡೆದ ಸಭೆಯಲ್ಲಿ ರಾಜ್ಯದ ಗ್ರಾಮೀಣ ಕ್ರೀಡೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಹಾಗೂ ಕಂಬಳ ಕ್ರೀಡೆಯ ವಿಶೇಷತೆಯನ್ನು ಪರಿಗಣಿಸಿ ಅದಕ್ಕೆ ಮಾನ್ಯತೆ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು. 
  • ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಂಬಳವನ್ನು ಶಿಸ್ತುಬದ್ಧವಾಗಿ ಸಂಘಟಿಸಲು ಈ  ಅಸೋಸಿಯೇಷನ್‌ ಕ್ರಮ ವಹಿಸುತ್ತದೆ. ಕಂಬಳ ಕ್ರೀಡೆಯ ವೇಳಾ ಪಟ್ಟಿಯನ್ನು ತಯಾರಿಸುತ್ತದೆ.

ಪ್ರಚಲಿತ ವಿದ್ಯಮಾನಗಳು: 9ನೇ ಅಕ್ಟೋಬರ್ 2025

  • ನೀರಿದ್ದರೆ ನಾಳೆಗೆ ಚಾಲನೆ ಇಂದು

ಸಂದರ್ಭ: ಅಂತರ್ಜಲ ಅತಿಬಳಕೆಯ 525 ಗ್ರಾ.ಪಂ.ಗಳಲ್ಲಿ ಯೋಜನೆ: ‘ರಾಜ್ಯದ 16 ಜಿಲ್ಲೆಗಳ, 27 ತಾಲ್ಲೂಕಗಳಲ್ಲಿ ಅಂತರ್ಜಲದ ಅತಿಬಳಕೆಯ ಪಟ್ಟಿಯಲ್ಲಿರುವ 525 ಗ್ರಾಮ ಪಂಚಾಯಿತಿಗಳಲ್ಲಿ ‘ನೀರಿದ್ದರೆ ನಾಳೆ’ ಯೋಜನೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರು ಚಾಲನೆ ನೀಡಲಿದ್ದಾರೆ.

  • ನೀರಿನ ಮಹತ್ವ ತಿಳಿಸುವುದು, ಜಲಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನು ನೀರಿನ ಸಂರಕ್ಷಣೆ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವ ಉದ್ದೇಶದಿಂದ ಈ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ.
  • ಅಭಿಯಾನಕ್ಕೆ ನಟ ವಸಿಷ್ಠ ಸಿಂಹ ಅವರನ್ನು ರಾಯಭಾರಿಯಾಗಿ ನೇಮಿಸಲಾಗಿದೆ’ ಎಂದರು.
  • ‘ಈ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀರಿನ ಭದ್ರತೆಯ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು.
  • ಅಂತರ್ಜಲ ಸಾಕ್ಷರತೆಗೆ ಒತ್ತು ನೀಡಲಾಗುವುದು. ಅಂತರ್ಜಲಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಸ್ತುತ ಪರಿಸ್ಥಿತಿ, ಅಂಕಿ ಅಂಶದ ಲಭ್ಯತೆ ಬಗ್ಗೆ ಶಾಲಾ ಮಟ್ಟಗಳಲ್ಲೇ ಜಾಗೃತಿ ಮೂಡಿಸಲಾಗುವುದು’ ಎಂದು ಹೇಳಿದರು.
  • ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಂತರ್ಜಲದ ಅತಿಬಳಕೆ ಇರುವ 100ಕ್ಕೂ ಹೆಚ್ಚು ಗ್ರಾಮ ಪಂಚಾಯತಿಗಳಲ್ಲಿ ಸಣ್ಣ ನೀರಾವರಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ₹ 200 ಕೋಟಿ ವೆಚ್ಚದಲ್ಲಿ ಅಂತರ್ಜಲ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ.
  • ‘ಕೆರೆ ಬಳಕೆದಾರರ ಸಂಘಗಳ ಮೂಲಕ ಕೆರೆಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಒತ್ತು ನೀಡಲು ಉದ್ದೇಶಿಸ ಲಾಗಿದೆ. ಜಲಮೂಲಗಳ ಸಮಗ್ರ ನಿರ್ವಹಣೆಗೆ ತಂತ್ರಜ್ಞಾನ ಆಧಾರಿತ ಡಿಜಿಟಲ್ ವಾಟರ್ ಸ್ಟಾಕ್ ಅಳವಡಿಕೆಗೆ ಚಿಂತನೆ ನಡೆದಿದೆ. ಈ ಕಾರ್ಯಕ್ರಮದ ಅನುಷ್ಠಾನದ ಮೂಲಕ ಕರ್ನಾಟಕ ರಾಜ್ಯವನ್ನು ಜಲ ಸಮೃದ್ಧಗೊಳಿಸುವ ಗುರಿ ಹೊಂದಲಾಗಿದೆ.
  • ಯುದ್ಧದ ಸಾಧ್ಯತೆ ನಿಜ

ಸಂದರ್ಭ:‘ಭಾರತದೊಂದಿಗೆ ಯುದ್ಧದ ಸಾಧ್ಯತೆ ಇರುವುದು ನಿಜ’ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್‌ ಹೇಳಿದ್ದಾರೆ.

  • ‘ಭವಿಷ್ಯದಲ್ಲಿ ಭಾರತದೊಂದಿಗೆ ಮತ್ತೊಮ್ಮೆ ಶಸ್ತ್ರಾಸ್ತ್ರ ಸಂಘರ್ಷ ಎದುರಾದರೆ ನಮ್ಮ ದೇಶವು ಅದರಲ್ಲಿ ದೊಡ್ಡಮಟ್ಟದ ಯಶಸ್ಸು ಸಾಧಿಸುತ್ತದೆ’ ಎಂದೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
  • ‘ಪಾಕಿಸ್ತಾನಕ್ಕೆ 6 ತಿಂಗಳ ಹಿಂದೆ ಇರುವುದಕ್ಕಿಂತಲೂ ಈಗ ಹೆಚ್ಚಿನ ಸಂಖ್ಯೆಯ ಬೆಂಬಲಿ ಗರಿದ್ದಾರೆ. ಆದರೆ, ಭಾರತವು ಮೇ ಸಂಘರ್ಷದ ನಂತರ ಹಲವು ದೇಶಗಳ ಬೆಂಬಲವನ್ನು ಕಳೆದುಕೊಂಡಿದೆ’ ಎಂದು ಅವರು ಅಮೆರಿಕದ ಹೆಸರು ಉಲ್ಲೇಖಿಸದೇ ಹೇಳಿದ್ದಾರೆ.
  • ‘ಮತ್ತೊಮ್ಮೆ ಶಸ್ತ್ರಾಸ್ತ್ರ ಸಂಘರ್ಷದ ಸಾಧ್ಯತೆ ಇರುವುದರಿಂದ ಪಾಕಿಸ್ತಾನವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಸಂಘರ್ಷ ಉಲ್ಬಣಗೊಳ್ಳುವುದು ನಮಗೆ ಬೇಕಿಲ್ಲ. ಆದರೆ, ಯುದ್ಧದ ಸಾಧ್ಯತೆ ಇರುವುದಂತೂ ನಿಜ. ಇದನ್ನು ನಾನು ಅಲ್ಲಗಳೆಯುವುದಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
  • ‘ಮೊಘಲ್‌ ದೊರೆ ಔರಂಗಜೇಬನ ಅಲ್ಪ ಅವಧಿ ಹೊರತುಪಡಿಸಿ, ಭಾರತವು ಎಂದಿಗೂ ಏಕೀಕೃತ ದೇಶವಾಗಿರಲಿಲ್ಲ. ಆದರೆ, ಪಾಕಿಸ್ತಾನವು ಅಲ್ಲಾಹುವಿನ ಹೆಸರಿನಲ್ಲಿ ಸೃಷ್ಟಿಯಾಗಿದೆ ಮತ್ತು ಹಲವು ಆಂತರಿಕ ಸಮಸ್ಯೆಗಳಿದ್ದರೂ ಮೇ ಸಂಘರ್ಷದ ನಂತರ ಒಗ್ಗಟ್ಟಾಗಿದೆ. ‘ನಮ್ಮ ತವರಿನಲ್ಲಿ ನಾವು ಪರಸ್ಪರ ವಾದಿಸುತ್ತೇವೆ ಮತ್ತು ಸ್ಪರ್ಧಿಸುತ್ತೇವೆ. ಆದರೆ, ಭಾರತದೊಂದಿಗೆ ಹೋರಾಟ ಮಾಡಬೇಕಾಗಿ ಬಂದಾಗ ನಾವು  ಒಂದಾಗುತ್ತೇವೆ’ ಎಂದು ಹೇಳಿದ್ದಾರೆ.
  • ಭಾರತದ ಸೇನಾ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ ಅವರು, ‘ಮತ್ತೆ ದುಸ್ಸಾಹಸಗಳಿಗೆ ಕೈ ಹಾಕದಂತೆ’ ಪಾಕಿಸ್ತಾನಕ್ಕೆ ಇತ್ತೀಚೆಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಖ್ವಾಜಾ ಪ್ರತಿಕ್ರಿಯೆ ಹೊರಬಿದ್ದಿದೆ.
  • 12.54 ಲಕ್ಷ ಹೆಕ್ಟೇರ್ಬೆಳೆ ಹಾನಿ

ಸಂದರ್ಭ: ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪೀಡಿತ ಪ್ರದೇಶದ ರೈತರ ಬೆಳೆ ಹಾನಿಗೆ ಪರಿಹಾರ ಪಾವತಿಗಾಗಿ ₹2,000 ಕೋಟಿ ನಿಗದಿ ಮಾಡಲಾಗಿದ್ದು, 30 ದಿನಗಳ ಒಳಗೆ ರೈತರ ಖಾತೆಗಳಿಗೆ ಪರಿಹಾರದ ಮೊತ್ತ ಪಾವತಿ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

  • ನೈರುತ್ಯ ಮುಂಗಾರು ಅವಧಿಯಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ಒಟ್ಟು 12.54 ಲಕ್ಷ ಹೆಕ್ಟೇರ್‌ ವಿಸ್ತೀರ್ಣದಲ್ಲಿ ಬೆಳೆ ಹಾನಿಯಾಗಿದೆ. ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಪೂರ್ಣಗೊಳಿಸಿದ 9 ಜಿಲ್ಲೆಗಳಲ್ಲಿನ 5.29 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಗೆ ಮೊದಲ ಸುತ್ತಿನ ಪರಿಹಾರ ಪಾವತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
  • ಸೆಪ್ಟೆಂಬರ್‌ ಮೊದಲ ವಾರದವರೆಗೆ ಸುರಿದ ಭಾರಿ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆ ಪ್ರದೇಶಗಳು ಜಲಾವೃತಗೊಂಡು ಸುಮಾರು 5.29 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಳೆ ನಷ್ಟವಾದ ಜಿಲ್ಲೆಗಳು ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಬೆಳೆ ಹಾನಿ ಪರಿಹಾರ ಪಾವತಿಗೆ ಸಿದ್ಧವಾಗಿದ್ದವು. ತದನಂತರ ಸೆಪ್ಟೆಂಬರ್‌ ತಿಂಗಳ ಕೊನೆಯಲ್ಲಿ ಸುರಿದ ಮಳೆ ಹಾಗೂ ಮಹಾರಾಷ್ಟ್ರ ಭಾಗದ ಜಲಾಶಯಗಳಿಂದ ಹೊರ ಹರಿಸಲಾದ ನದಿ ಪ್ರವಾಹದಿಂದ ಕಲಬುರಗಿ, ಯಾದಗಿರಿ, ಬೀದರ್‌ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 7.24 ಲಕ್ಷ ಹೆಕ್ಟೇರ್‌ ಬೆಳೆ ನಷ್ಟಕ್ಕೆ ಕಾರಣವಾಯಿತು ಎಂದು ಹೇಳಿದ್ದಾರೆ.
  • ಈ ನಾಲ್ಕು ಜಿಲ್ಲೆಗಳ ಬೆಳೆ ಹಾನಿ ಜಂಟಿ ಸಮೀಕ್ಷೆಯನ್ನು ಪುನಃ ಮಾಡಬೇಕಾದ ಅಗತ್ಯವಿದೆ. ಬೆಳೆ ಹಾನಿ ಪ್ರದೇಶ ಪರಿಷ್ಕರಣೆಗೊಳ್ಳಲಿದ್ದು, 7.24 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯ ಜಂಟಿ ಸಮೀಕ್ಷೆಯು ಪ್ರಗತಿಯಲ್ಲಿದೆ. 10 ದಿನಗಳಲ್ಲಿ ಬೆಳೆ ಹಾನಿ ಪರಿಹಾರ ಪಾವತಿಸಲಾಗುವುದು. ಒಟ್ಟಾರೆ 2025ರ ನೈರುತ್ಯ ಮುಂಗಾರಿನಲ್ಲಿ ಸುಮಾರು 12.54 ಲಕ್ಷ ಹೆಕ್ಟೇರ್‌ ಬೆಳೆ ಹಾನಿ ಆಗಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್‌ಗೆ ₹8,500 ಹೆಚ್ಚುವರಿ ಪಾವತಿ ಮಾಡಲಿದೆ ಎಂದೂ ಹೇಳಿದ್ದಾರೆ.
  • ಕೆರೆ ಬಫರ್ವಲಯ: ವಿವರಣೆ ಶೀಘ್ರ

ಸಂದರ್ಭ: ಕೆರೆಗಳ ಬಫರ್‌ ವಲಯಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆ ಕುರಿತಂತೆ ಕಾನೂನು ತಜ್ಞರ ಸಲಹೆಯೊಂದಿಗೆ ರಾಜ್ಯಪಾಲರಿಗೆ ವಿವರಣೆಯನ್ನು ಶೀಘ್ರವೇ ಸಲ್ಲಿಸಲಾಗುವುದು.

  • ತಿದ್ದೋಲೆ: ‘ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ– 2025ಕ್ಕೆ ತಿದ್ದೋಲೆಯನ್ನು ತರಲಾಗಿದೆ. ಕೆರೆಯ ಕಂದಾಯ ಗಡಿಯಿಂದ ಬಫರ್‌ ವಲಯವನ್ನು ಮೀಟರ್‌ಗಳಲ್ಲಿ ನಿಗದಿಪಡಿಸಲಾಗಿದೆ.
  • ಪರಿಷ್ಕರಣೆಯಂತೆ,  5 ಗುಂಟೆವರೆಗಿನ ಕೆರೆಗಳಿಗೆ ಬಫರ್‌ ವಲಯ ಇರುವುದಿಲ್ಲ. 100ಕ್ಕೂ ಹೆಚ್ಚು ಎಕರೆಯ ಕೆರೆಗೆ 30 ಮೀಟರ್‌ ಬಫರ್‌ ವಲಯ ನಿಗದಿಪಡಿಸಲಾಗಿದೆ.
  • ವಾಯುಪಡೆಯ ಸಾಮರ್ಥ್ಯ ಬಿಚ್ಚಿಟ್ಟ ಆಪರೇಷನ್ಸಿಂಧೂರ

ಸಂದರ್ಭ:‘ಆಕ್ರಮಣಕಾರಿ ವಾಯು ದಾಳಿಯ ಮೂಲಕ ಕೆಲವೇ ದಿನಗಳಲ್ಲಿ ಸೇನಾ ಕಾರ್ಯಾಚರಣೆಯ ಫಲಿತಾಂಶವನ್ನು ಹೇಗೆ ನಿರ್ಧರಿಸಬಹುದು ಎನ್ನುವುದನ್ನು ಭಾರತೀಯ ವಾಯುಪಡೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಮೂಲಕ ವಿಶ್ವದ ಎದುರು ತೆರೆದಿಟ್ಟಿದೆ’ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್ ಹೇಳಿದ್ದಾರೆ.

  • ಹಿಂಡನ್‌ ವಾಯು ನೆಲೆಯಲ್ಲಿ ನಡೆದ 93ನೇ ವಾಯುಪಡೆ ದಿನಾಚರಣೆಯಲ್ಲಿ ಮಾತನಾಡಿದ ಅವರು,‘ರಾಷ್ಟ್ರೀಯ ಹಿತಾಸಕ್ತಿ ವಿಚಾರ ಬಂದಾಗ ವಾಯುಪಡೆಯ ಸಾಮರ್ಥ್ಯ ಹೇಗೆ ಅನಾವರಣಗೊಂಡಿತು ಎನ್ನುವುದಕ್ಕೆ ಸಿಂಧೂರ ಕಾರ್ಯಾಚರಣೆ ಸ್ಪಷ್ಟ ನಿದರ್ಶನ. ಇದು ನಮಗೆ ವೃತ್ತಿಪರ ಹೆಮ್ಮೆ.
  • ವಾಯುಪಡೆಯು ದಿಟ್ಟವಾದ ಮತ್ತು ನಿಖರವಾದ ದಾಳಿಯು  ಶತ್ರು ಪಾಳಯದ  ಯುದ್ಧ ವಿಮಾನಗಳನ್ನು ಹೊಡೆದುರುಳಿಸಿತು’ ಎಂದರು.
  • ಸಿಂಧೂರ ಕಾರ್ಯಾಚರಣೆಯಲ್ಲಿ ಅಭೂತಪೂರ್ವ ಪ್ರದರ್ಶನ ನೀಡಿದ ರಾಫೇಲ್ಸ್ಕ್ವಾಡ್ರನ್ ಸೇರಿದಂತೆ ವಿವಿಧ ಐಎಎಫ್‌ ಘಟಕಗಳನ್ನು ಅಭಿನಂದಿಸಿದ ಸಿಂಗ್‌, ಪ್ರಶಂಸನಾ ಪತ್ರಗಳನ್ನು ವಿತರಿಸಿದರು.
  • ಸುಧಾರಣಾ ಪ್ರಕ್ರಿಯೆಗೆ ವೇಗ

ಸಂದರ್ಭ:‘1 ಜಿ.ಬಿ. ಡೇಟಾ ಬೆಲೆಯು ಈಗ ಒಂದು ಕಪ್ ಚಹಾದ ಬೆಲೆಗಿಂತ ಕಡಿಮೆ’:ವಿವಿಧ ವಲಯಗಳಲ್ಲಿನ ತಯಾರಿಕಾ ಚಟುವಟಿಕೆ ಭಾರತದಲ್ಲಿಯೇ ನಡೆಯಬೇಕು ಎಂದು ಮತ್ತೊಮ್ಮೆ ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು, ಸುಧಾರಣಾ ಪ್ರಕ್ರಿಯೆಗಳಿಗೆ ಕೇಂದ್ರ ಸರ್ಕಾರವು ವೇಗ ನೀಡುತ್ತಿದೆ ಎಂದರು.

  • ಮೊಬೈಲ್‌ ತಯಾರಿಕೆಯಿಂದ ಆರಂಭಿಸಿ ಸೆಮಿಕಂಡಕ್ಟರ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳವರೆಗೆ ಎಲ್ಲವೂ ಭಾರತದಲ್ಲೇ ತಯಾರಾಗುವಂತೆ ಆಗಬೇಕು ಎಂದು ಅವರು ಹೇಳಿದರು. ಭಾರತವು ಹೂಡಿಕೆಗೆ ಅತ್ಯುತ್ತಮವಾದ ಅವಕಾಶಗಳನ್ನು ನೀಡುತ್ತಿದೆ ಎಂದರು.
  • ‘ಭಾರತೀಯ ಮೊಬೈಲ್‌ ಕಾಂಗ್ರೆಸ್‌’ ಉದ್ಘಾಟಿಸಿ ಮಾತನಾಡಿದ ಅವರು, ‘ಭಾರತದ ಪ್ರಜಾತಾಂತ್ರಿಕ ವ್ಯವಸ್ಥೆ, ಹೂಡಿಕೆಗಳನ್ನು ಸ್ವಾಗತಿಸುವ ಸರ್ಕಾರದ ನಿಲುವು, ಉದ್ಯಮ ನಡೆಸುವುದನ್ನು ಸುಲಲಿತವಾಗಿಸುವ ನೀತಿಗಳು ಭಾರತವು ಹೂಡಿಕೆದಾರ ಸ್ನೇಹಿ ತಾಣ ಎಂಬ ಹೆಸರು ಗಳಿಸುವಂತೆ ಮಾಡಿವೆ’ ಎಂದು ಹೇಳಿದರು.
  • ‘ಭಾರತದಲ್ಲಿ ಹೂಡಿಕೆ ಮಾಡಲು, ಭಾರತದಲ್ಲೇ ತಯಾರಿಸಲು ಇದು ಪ್ರಶಸ್ತವಾದ ಸಮಯ’ ಎಂದು ಮೋದಿ ಅವರು ಹೇಳಿದರು.
  • ದೊಡ್ಡ ಮಟ್ಟದ ಬದಲಾವಣೆಗಳು ಹಾಗೂ ದೊಡ್ಡ ಮಟ್ಟದ ಸುಧಾರಣೆಗಳ ವರ್ಷ ಇದಾಗಿರಲಿದೆ ಎಂದು ತಾವು ಆಗಸ್ಟ್‌ 15ರಂದು ಘೋಷಿಸಿದ್ದನ್ನು ಮೋದಿ ನೆನಪಿಸಿದರು. ‘ಸುಧಾರಣೆಗಳ ವೇಗವನ್ನು ಇನ್ನಷ್ಟು ಹೆಚ್ಚಿಸು ತ್ತಿದ್ದೇವೆ’ ಎಂದು ಅವರು ಹೇಳಿದರು. ಆದರೆ ಈ ಕುರಿತಾಗಿ ಹೆಚ್ಚಿನ ವಿವರ ನೀಡಲಿಲ್ಲ.
  • ಸೆಮಿಕಂಡಕ್ಟರ್‌, ಮೊಬೈಲ್ಮತ್ತು ಎಲೆಕ್ಟ್ರಾನಿಕ್ಸ್ಗಳ ತಯಾರಿಕಾ ವಲಯದಲ್ಲಿ ಭಾರತವು ಅಗಾಧ ಅವಕಾಶಗಳನ್ನು ನೀಡುತ್ತಿದೆ. ಉದ್ಯಮ ಕ್ಷೇತ್ರ, ನವೋದ್ಯಮಗಳು ಈಗ ಮುಂದಡಿ ಇರಿಸಬೇಕು ಎಂದರು.
  • ಡಿಜಿಟಲ್ ಜಗತ್ತಿನಲ್ಲಿ ಭಾರತವು ಒಂದು ದಶಕದಲ್ಲಿ ಸಾಧಿಸಿದ ಪ್ರಗತಿಯನ್ನು ಉಲ್ಲೇಖಿಸಿದ ಪ್ರಧಾನಿ, ಭಾರತದಲ್ಲಿ 1 ಜಿ.ಬಿ. ಡೇಟಾ ಬೆಲೆಯು ಈಗ ಒಂದು ಕಪ್ ಚಹಾದ ಬೆಲೆಗಿಂತ ಕಡಿಮೆ ಆಗಿದೆ ಎಂದರು. ‘ಡಿಜಿಟಲ್ ಸಂಪರ್ಕವು ಇಂದು ಭಾರತದಲ್ಲಿ ಐಷಾರಾಮದ ಸಂಗತಿಯಾಗಿ ಉಳಿದಿಲ್ಲ. ಅದು ಈಗ ಪ್ರತಿ ಭಾರತೀಯನ ಅವಿಭಾಜ್ಯ ಅಂಗವಾಗಿದೆ’ ಎಂದು ಬಣ್ಣಿಸಿದರು.
  • ಮೂವರು ವಿಜ್ಞಾನಿಗಳಿಗೆ ರಸಾಯನ ವಿಜ್ಞಾನ ನೊಬೆಲ್

ಸಂದರ್ಭ: ಜಪಾನ್‌ನ ಸುಸುಮು ಕಿಟಾಗವಾ, ಬ್ರಿಟನ್‌ನ ರಿಚರ್ಡ್‌ ರಾಬ್ಸನ್‌ ಮತ್ತು ಜೋರ್ಡಾನ್‌ನ ಒಮರ್‌ ಎಂ.ಯಾಘಿ ಅವರು 2025ನೇ ಸಾಲಿನ ರಸಾಯನ ವಿಜ್ಞಾನ ನೊಬೆಲ್‌ ಪುರಸ್ಕಾರವನ್ನು ಹಂಚಿಕೊಂಡಿದ್ದಾರೆ.

  • ಲೋಹಸಾವಯವ ಚೌಕಟ್ಟು’ (ಎಂಒಎಫ್‌) ಅಭಿವೃದ್ಧಿಯಲ್ಲಿ ವಿಜ್ಞಾನಿಗಳು ನಡೆಸುತ್ತಿರುವ ಸಂಶೋಧನೆಗಳನ್ನು ಪರಿಗಣಿಸಿ, ನೊಬೆಲ್ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ರಾಯಲ್ ಸ್ವೀಡಿಶ್‌ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಹನ್ಸ್‌ ಎಲೆಗ್ರೆನ್‌ ಇಲ್ಲಿ ತಿಳಿಸಿದ್ದಾರೆ.
  • ಸುಸುಮು ಕಿಟಾಗವಾ ಜಪಾನ್ ಕ್ಯೂಟೊ ವಿಶ್ವವಿದ್ಯಾಲಯದಲ್ಲಿ, ರಿಚರ್ಡ್ರಾಬ್ಸನ್ಆಸ್ಟ್ರೇಲಿಯಾದ ಮೆಲ್ಬರ್ನ್ವಿ.ವಿಯಲ್ಲಿ ಹಾಗೂ ಒಮರ್ಕ್ಯಾಲಿಫೋರ್ನಿಯಾ ವಿ.ವಿಯಲ್ಲಿ  ರಸಾಯನ ವಿಜ್ಞಾನ ಪ್ರಾಧ್ಯಾಪಕರಾಗಿದ್ದಾರೆ. ಈ ಮೂವರೂ ವಿಜ್ಞಾನಿಗಳು ಒಟ್ಟು 1.2 ದಶಲಕ್ಷ ಡಾಲರ್‌ (₹10.65 ಕೋಟಿ) ನೊಬೆಲ್‌ ನಗದು ಪುರಸ್ಕಾರವನ್ನು ಹಂಚಿಕೊಳ್ಳಲಿದ್ದಾರೆ. 
  • ವೈದ್ಯವಿಜ್ಞಾನ ಮತ್ತು ಭೌತವಿಜ್ಞಾನ ಕ್ಷೇತ್ರದ ನೊಬೆಲ್‌ ಪುರಸ್ಕಾರವನ್ನು ಈಗಾಗಲೇ ಘೋಷಿಸಲಾಗಿದೆ. ಸಾಹಿತ್ಯ ಕ್ಷೇತ್ರದ ನೊಬೆಲ್‌ ಪುರಸ್ಕಾರ ಮತ್ತು ನೊಬೆಲ್‌ ಶಾಂತಿ ಪ್ರಶಸ್ತಿ ಹಾಗೂ ಅರ್ಥಶಾಸ್ತ್ರದ ನೊಬೆಲ್‌ ಪುರಸ್ಕಾರ ಅ.13ರಂದು ಪ್ರಕಟಗೊಳ್ಳಲಿವೆ.
  • ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿ ಗೋರ್

ಸಂದರ್ಭ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಆಪ್ತ ಸರ್ಗಿಯೊ ಗೋರ್‌ ಅವರು ಭಾರತಕ್ಕೆ ಅಮೆರಿಕದ ಮುಂದಿನ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.

  • ಪ್ರತಿಸುಂಕದ ವಿಚಾರವಾಗಿ ಅಮೆರಿಕ ಮತ್ತು ಭಾರತ ನಡುವಿನ ಸಂಬಂಧ ಹದಗೆಟ್ಟಿ ರುವ ಸಂದರ್ಭದಲ್ಲಿ ಗೋರ್‌ ಅವರು ರಾಯಭಾರಿ ಯಾಗಿ ಆಯ್ಕೆಯಾಗಿರುವುದು ಗಮನಾರ್ಹ ಸಂಗತಿ.
  • ‘ಅಮೆರಿಕ –ಭಾರತ ನಡುವಿನ ವ್ಯಾಪಾರ ಒಪ್ಪಂದಗಳು ಅಮೆರಿಕದ ಸ್ಫರ್ಧಾತ್ಮಕತೆಯನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಇತರ ದೇಶಗಳ ಮೇಲಿನ ಚೀನಾದ ಆರ್ಥಿಕ ಹತೋಟಿಯನ್ನು ಕಡಿಮೆಗೊಳಿಸುತ್ತವೆ’ ಎಂದು ಗೋರ್‌ ಪ್ರತಿಕ್ರಿಯಿಸಿದ್ದಾರೆ.
  • ಭಾರತಕ್ಕೆ ಆಗಮಿಸಿದ ಸ್ಟಾರ್ಮರ್

ಸಂದರ್ಭ: ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಭಾರತಕ್ಕೆ ಆಗಮಿಸಿದರು. ಇದು ಭಾರತಕ್ಕೆ ಅವರ ಚೊಚ್ಚಲ ಪ್ರವಾಸ.

  • ಜುಲೈನಲ್ಲಿ ಭಾರತ ಮತ್ತು ಬ್ರಿಟನ್‌ ನಡುವೆ ಲಂಡನ್‌ನಲ್ಲಿ ಮಹತ್ವದ ವ್ಯಾಪಾರ ಒಪ್ಪಂದ ಏರ್ಪಟ್ಟಿತ್ತು. ಅದಾದ ಬಳಿಕ ಬ್ರಿಟನ್‌ ಪ್ರಧಾನಿ ಸ್ಟಾರ್ಮರ್‌ ಅವರು ಎರಡು ದಿನಗಳ ಮಟ್ಟಿಗೆ ಭಾರತ ಪ್ರವಾಸ ಕೈಗೊಂಡಿದ್ದಾರೆ.
  • ಭಾರತಕ್ಕೆ ಬರುತ್ತಿದ್ದಂತೆ ಸ್ಟಾರ್ಮರ್‌ ಅವರು, ‘ಭಾರತದಲ್ಲಿ ಅಪೂರ್ವವಾದ ಅವಕಾಶಗಳು ತೆರೆದುಕೊಳ್ಳುತ್ತಿವೆ. ಭಾರತವು 2028 ವೇಳೆಗೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆ ದೇಶವಾಗಿ ಹೊರಹೊಮ್ಮಲಿದೆ. ಅವರೊಂದಿಗಿನ ವ್ಯಾಪಾರವು ತ್ವರಿತ ಮತ್ತು ಅಗ್ಗವಾಗಲಿದ್ದು, ಅಪೂರ್ವವಾದ ಅವಕಾಶಗಳು ದೊರೆಯಲಿವೆ. ಉಭಯ ದೇಶಗಳ ನಡುವಿನ ವ್ಯಾಪಾರ ಒಪ್ಪಂದವು ಪರಸ್ಪರರ ಬೆಳವಣಿಗೆಗೆ ಸಹಕಾರಿಯಾಗಲಿದೆ’ ಎಂದರು.
  • ಇದಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಅವರು, ‘ಭಾರತಕ್ಕೆ ಐತಿಹಾಸಿಕ ಭೇಟಿ ನೀಡಿರುವ ಸ್ಟಾರ್ಮರ್‌ ಅವರಿಗೆ ಸ್ವಾಗತ. ಬ್ರಿಟನ್‌ನಿಂದ ಅತಿದೊಡ್ಡ ವ್ಯಾಪಾರ ನಿಯೋಗದ ಜತೆಗೆ ಬಂದಿರುವ ಅವರು ಎರಡು ದೇಶಗಳ ನಡುವಿನ ಭವಿಷ್ಯವನ್ನು ಸಮೃದ್ಧಗೊಳಿಸುವ ಆಶಯ ಹೊಂದಿದ್ದಾರೆ’ ಎಂದು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ. 

ಯಶ್‌ ರಾಜ್‌ ಫಿಲ್ಮ್‌ ಸ್ಟುಡಿಯೊಗೆ ಭೇಟಿ

  • ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಮುಂಬೈನ ಅಂಧೇರಿಯಲ್ಲಿರುವ ಯಶ್‌ ರಾಜ್‌ ಫಿಲ್ಮ್‌ ಸ್ಟುಡಿಯೊಗೆ ಭೇಟಿ ನೀಡಿದರು. ಇದು ಬಾಲಿವುಡ್‌ನ ಪ್ರಮುಖ ನಿರ್ಮಾಣ ಕೇಂದ್ರ.
  • ಎರಡು ದೇಶಗಳ ನಡುವಿನ ಸಾಂಸ್ಕೃತಿಕ ಸಂಬಂಧ ಬಲಪಡಿಸುವುದು ಮತ್ತು ಬ್ರಿಟನ್‌– ಭಾರತದ ಚಲನಚಿತ್ರೋದ್ಯಮಗಳ ನಡುವಿನ ಸಹಯೋಗವನ್ನು ಉತ್ತೇಜಿಸುವ ಗುರಿಯನ್ನು ಈ ಭೇಟಿ ಹೊಂದಿದೆ. ‘ಮುಂದಿನ ವರ್ಷದಿಂದ ಬ್ರಿಟನ್‌ನಲ್ಲಿ ಬಾಲಿವುಡ್‌ನ ಮೂರು ಹೊಸ ಬ್ಲಾಕ್‌ ಬಸ್ಟರ್‌ಗಳು ನಿರ್ಮಾಣವಾಗಲಿವೆ’ ಎಂದು ಈ ವೇಳೆ ಮಾಹಿತಿ ನೀಡಿದರು.
  • ಬಿ.ಎಸ್‌. ಚಂದ್ರಶೇಖರ್‌, ಬ್ರಯನ್ಲಾರಾಗೆ ಜೀವಮಾನ ಸಾಧನೆ ಪ್ರಶಸ್ತಿ ಗರಿ

ಸಂದರ್ಭ: ಸ್ಪಿನ್ ಬೌಲಿಂಗ್ ದಂತಕಥೆ, ಕನ್ನಡಿಗ ಬಿ.ಎಸ್. ಚಂದ್ರಶೇಖರ್ ಅವರಿಗೆ ಜೀವಮಾನ ಸಾಧನೆಗಾಗಿ ಸಿಯೆಟ್ ಕ್ರಿಕೆಟ್ ರೇಟಿಂಗ್ ಪುರಸ್ಕಾರ ನೀಡಿ ಗೌರವಿಸಲಾಯಿತು.

  • ವೆಸ್ಟ್ ಇಂಡೀಸ್ ತಂಡದ ದಿಗ್ಗಜ ಬ್ಯಾಟರ್ ಬ್ರಯನ್ ಲಾರಾ ಅವರಿಗೂ ಜೀವಮಾನ ಸಾಧನೆ ಗೌರವ ಪ್ರದಾನ ಮಾಡಲಾಯಿತು.
  • ಪ್ರಸ್ತುತ ಭಾರತ ಟಿ20 ತಂಡದ ವಿಕೆಟ್‌ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ಅವರು ವರ್ಷದ ಸಾಧಕರ ಗೌರವ ಗಳಿಸಿದರು.
  • ಭಾರತ ತಂಡದ ನಿಕಟಪೂರ್ವ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶೇಷ ಸ್ಮರಣಿಕೆ ನೀಡಲಾಯಿತು. ಈಚೆಗೆ ಅವರ ನಾಯಕತ್ವದಲ್ಲಿ ಭಾರತ ತಂಡವು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಜಯಿಸಿತ್ತು. ಇದೇ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿದ್ದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರೂ ವಿಶೇಷ ಗೌರವಕ್ಕೆ ಪಾತ್ರರಾದರು.
  • ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ ಗಳಿಸಿರುವ ಎರಡನೇ ಬ್ಯಾಟರ್ ಇಂಗ್ಲೆಂಡ್‌ನ ಜೋ ರೂಟ್ ಅವರಿಗೆ ಪುರುಷರ ವಿಭಾಗದ ಅಂತರ ರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿನೀಡಲಾಯಿತು. ಹ್ಯಾರಿ ಬ್ರೂಕ್ ವರ್ಷದ ಬ್ಯಾಟರ್, ಶ್ರೀಲಂಕಾದ ಪ್ರಭಾತ್ ಜಯಸೂರ್ಯ ಅವರಿಗೆ ವರ್ಷದ ಬೌಲರ್‌ ಗೌರವ ನೀಡಲಾಯಿತು. ಭಾರತ ಮಹಿಳಾ ತಂಡದ ದೀಪ್ತಿ ಶರ್ಮಾ ಅವರಿಗೆ ವರ್ಷದ ಅಂತರ ರಾಷ್ಟ್ರೀಯ ಬೌಲರ್ ಹಾಗೂ ಸ್ಮೃತಿ ಮಂದಾನಗೆ ಉತ್ತಮ ಬ್ಯಾಟರ್‌ ಗೌರವ ಒಲಿಯಿತು.
  • ಕಳೆದ ರಣಜಿ ಟ್ರೋಫಿ ಕ್ರಿಕೆಟ್ ಋತುವಿನಲ್ಲಿ 69 ವಿಕೆಟ್ ಗಳಿಸಿದ ವಿದರ್ಭ ತಂಡದ ಹರ್ಷ್ ದುಬೆ ಅವರಿಗೆ ದೇಶಿ ಕ್ರಿಕೆಟ್‌ ಋತುವಿನ ಉತ್ತಮ ಆಟಗಾರ ಗೌರವ ಸಂದಿತು.
  • ಮುಂಬೈನ ಅಂಗಕ್ರಿಷ್ ರಘುವಂಶಿ ಅವರು ‘ಉದಯೋನ್ಮುಖ ಆಟಗಾರ’ ಪ್ರಶಸ್ತಿ ಗಳಿಸಿದರು.

ಪ್ರಚಲಿತ ವಿದ್ಯಮಾನಗಳು: 8ನೇ ಅಕ್ಟೋಬರ್ 2025

  • 7 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

ಸಂದರ್ಭ: ನರೇಗಾ ಯೋಜನೆ ನೆರವಿನಿಂದ ‘ಜಲ ಸಂಚಯ ಜನ ಭಾಗೀದಾರಿ’ ಅಭಿಯಾನದಡಿ ಜಲ ಸಂರಕ್ಷಣೆಯಲ್ಲಿ ತೊಡಗಿರುವ ರಾಜ್ಯದ ಏಳು ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

  • ಜಲ ಸಂರಕ್ಷಣೆಗಾಗಿ ಗದಗ ಜಿಲ್ಲೆಯಲ್ಲಿ 11,971, ವಿಜಯಪುರ– 11,453, ಬೀದರ್‌- 10,297, ಕೋಲಾರ-8,470, ತುಮಕೂರು ಜಿಲ್ಲೆಯಲ್ಲಿ 9,885, ಮಂಡ್ಯ ಜಿಲ್ಲೆಯಲ್ಲಿ 7,192 ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ 7,815 ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
  • ಆನೆಗಳ ಸಂಖ್ಯೆ 3,170ಕ್ಕೆ

ಸಂದರ್ಭ: ಕಳೆದ ವರ್ಷ ರಾಜ್ಯದಲ್ಲಿ 3,063 ಆನೆಗಳಿದ್ದವು, ಪ್ರಸಕ್ತ ವರ್ಷದಲ್ಲಿ ಆನೆಗಳ ಸಂಖ್ಯೆ 3,170ಕ್ಕೆ ಏರಿಕೆಯಾಗಿದೆ. ನೆರೆಯ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನಡೆಸಿದ ಆನೆ ಸಮೀಕ್ಷೆಯಲ್ಲಿ ಈ ಅಂಕಿಅಂಶಗಳು ಹೊರಬಿದ್ದಿವೆ.

  • ತಮಿಳುನಾಡಿನಲ್ಲಿ ಸತತ ಎರಡನೇ ವರ್ಷವೂ ಕಾಡಾನೆಗಳ ಸಂಖ್ಯೆ ಹೆಚ್ಚಳವಾಗಿದೆ.
  • ಕರ್ನಾಟಕದ ಸಹಕಾರದೊಂದಿಗೆ ಮೇ 23ರಿಂದ 25ರವರೆಗೆ ಸಮೀಕ್ಷೆ ನಡೆಸಲಾಗಿತ್ತು. ರಾಜ್ಯದ ಒಟ್ಟು ಆನೆಗಳ ಪೈಕಿ ವಯಸ್ಕ ಆನೆಗಳ ಸಂಖ್ಯೆ ಶೇ 44ರಷ್ಟಿದೆ.
  • ತಮಿಳುನಾಡಿನಲ್ಲಿ ಇರುವ ಗಂಡು ಮತ್ತು ಹೆಣ್ಣು ಆನೆಗಳ ಲಿಂಗಾನುಪಾತವು ಅಂದಾಜು 1:1.77ರಷ್ಟಿದೆ. ನೆರೆಯ ಕೇರಳ, ಕರ್ನಾಟಕದಲ್ಲಿಯೂ ಆನೆಗಳ ಲಿಂಗಾನುಪಾತ ಬಹುತೇಕ ಇದೇ ರೀತಿ ಇದೆ ಎಂದು ಸಮೀಕ್ಷೆ ವರದಿಯು ತಿಳಿಸಿದೆ.
  • ಹುಲಿ ಸಂರಕ್ಷಿತ ಪ್ರದೇಶಗಳು, ವನ್ಯಜೀವಿ ಸಂರಕ್ಷಣಾಲಯಗಳು, ರಾಷ್ಟ್ರೀಯ ಉದ್ಯಾನ ಸೇರಿದಂತೆ  26 ಅರಣ್ಯ ವಿಭಾಗಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ಅರಣ್ಯ ಇಲಾಖೆಯ 2,043 ಸಿಬ್ಬಂದಿ ಮತ್ತು ಸ್ವಯಂ ಪ್ರೇರಿತರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದರು.
  • ಎಥೆನಾಲ್ ಮಿಶ್ರಣ: ಇಂಧನ ಕ್ರಾಂತಿ?

ಸಂದರ್ಭ: ವಾಹನಗಳಿಗೆ ಬಳಸುವ ಪೆಟ್ರೋಲ್‌ಗೆ ಶೇ 20ರಷ್ಟು ಎಥೆನಾಲ್ ಸಂಯುಕ್ತವನ್ನು ಸೇರಿಸುತ್ತಿರುವುದರ ಕುರಿತು ಚರ್ಚೆಗಳು ನಡೆಯು ತ್ತಿವೆ. ಪೆಟ್ರೋಲ್‌ನಿಂದ ಓಡುವ ಎಲ್ಲಾ ವಾಹನಗಳು ಶೇ 20ರಷ್ಟು ಎಥೆನಾಲ್‌ಯುಕ್ತ ಇಂಧನ ಬಳಸಬೇಕು ಎಂಬ ಕೇಂದ್ರ ಸರ್ಕಾರದ ನಿಯಮವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಂಡಿದೆ. ಆದರೆ, ಎಥೆನಾಲ್ ಸಂಯುಕ್ತ ಮಿಶ್ರಿತ ಪೆಟ್ರೋಲ್‌ನಿಂದ ತಮ್ಮ ವಾಹನಗಳ ಇಂಧನ ಕ್ಷಮತೆ ಕುಸಿದಿದೆ ಎಂದು ಜನ ದೂರುತ್ತಿದ್ದಾರೆ.

  • ಪೆಟ್ರೋಲ್ನಲ್ಲಿ ಶೇ 20ರಷ್ಟು ಎಥೆನಾಲ್ಸಂಯುಕ್ತವನ್ನು ಸೇರಿಸುವುದರಿಂದ ಬಳಕೆದಾರರಿಗೆ ಸದ್ಯಕ್ಕೆ ಅನನುಕೂಲ ಆಗುತ್ತಿದ್ದರೂ, ಅದರಿಂದ ಅನುಕೂಲಗಳೂ ಇವೆ.
  • ಇಲ್ಲಿಯವರೆಗೆ ವಾಹನ ಗಳಲ್ಲಿ ತುಂಬಿಸುತ್ತಿದ್ದ ಪೆಟ್ರೋಲ್ನಲ್ಲಿ ಶೇ 10ರಷ್ಟು ಎಥೆನಾಲ್ ಇರುತ್ತಿತ್ತು. ಈಗ ಅದರ ಪ್ರಮಾಣ ದುಪ್ಪಟ್ಟಾಗಿದೆ. ಇದರಿಂದ ದೇಶದ ಆರ್ಥಿಕತೆ ಮೇಲಿನ ಹೊರೆ ತಕ್ಕಮಟ್ಟಿಗೆ ಕಡಿಮೆ ಆಗುತ್ತದೆ ಮತ್ತು ವಾತಾವರಣಕ್ಕೆ ಸೇರುವ ಇಂಗಾಲದ ಡೈಆಕ್ಸೈಡ್ ಪ್ರಮಾಣವೂ ತಗ್ಗುತ್ತದೆ. ಅಂದರೆ, ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಎಥೆನಾಲ್‌ಯುಕ್ತ ಪೆಟ್ರೋಲ್‌ ಮಹತ್ವದ ಪಾತ್ರ ವಹಿಸುತ್ತದೆ.
  • ಈ ಅನುಕೂಲಕ್ಕೆ ಹೋಲಿಸಿದರೆ, ಪ್ರಸ್ತುತ ಬಳಕೆದಾರರು ಎದುರಿಸುತ್ತಿರುವ ತೊಂದರೆಗಳು ಅನಿವಾರ್ಯವಾಗಿ ಸಹಿಸಿಕೊಳ್ಳಬೇಕಾದವು ಎನ್ನಿಸುತ್ತದೆ. ಅಲ್ಲದೆ, ಎಥೆನಾಲ್‌ಗೆ ಪೂರಕವಾದ ತಂತ್ರಜ್ಞಾನವನ್ನು ವಾಹನಗಳಲ್ಲಿ ಅಳವಡಿಸಿಕೊಳ್ಳುವ ಮೂಲಕ ಸದ್ಯದ ಸಮಸ್ಯೆಗೆ ‍ಪರಿಹಾರ ಕಂಡುಕೊಳ್ಳಬಹುದಾಗಿದೆ.
  • ರಾಷ್ಟ್ರೀಯ ಜೈವಿಕ ಇಂಧನ ನೀತಿ–2018’ ಪ್ರಕಾರ, ಪೆಟ್ರೋಲ್ಗೆ ಶೇ 20ರಷ್ಟು ಎಥೆನಾಲ್ ಸೇರಿಸುವ ಯೋಜನೆ, 2030 ವೇಳೆಗೆ ಜಾರಿಗೆ ಬರಬೇಕಿತ್ತು. ಇದಕ್ಕಾಗಿ ರೋಡ್ ಮ್ಯಾಪ್ ತಯಾರಿಸಿದ ಕೇಂದ್ರ ಸರ್ಕಾರದ ತಜ್ಞ ಸಮಿತಿಯು 2021ರಲ್ಲಿ ವರದಿ ನೀಡಿ, 2022ಕ್ಕೆ–10’ ಮತ್ತು 2023–25 ಅವಧಿಯಲ್ಲಿ–20’ ಮಿಶ್ರಿತ ಇಂಧನ ಬಳಸಲು ಶಿಫಾರಸು ಮಾಡಿತ್ತು. ಇದಕ್ಕೆ ಪೂರಕವಾಗಿ, ಮಾರುಕಟ್ಟೆಗೆ ಬರುವ ಹೊಸ ವಾಹನಗಳು ಶೇ 20 ಎಥೆನಾಲ್ ಬಳಸಿಕೊಂಡು ಓಡುವ  ಕ್ಷಮತೆ ಪಡೆದಿರಬೇಕು ಎಂದೂ ಹೇಳಿತ್ತು. 2070ರ ಶೂನ್ಯ ಇಂಗಾಲ ಉತ್ಸರ್ಜನೆ ಗುರಿ ತಲುಪಲು ಇದು ಅನಿವಾರ್ಯ ಎಂದು ಸಮಿತಿ ನಿರ್ಧರಿಸಿತ್ತು
  • ಎಥೆನಾಲ್ ಒಂದು ಬಗೆಯ ಆಲ್ಕೋಹಾಲ್. ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ ಮತ್ತು ಅಕ್ಕಿಯಂತಹ ಬೆಳೆಗಳಿಂದ ತಯಾರಿಸಲಾಗುವ ಜೈವಿಕ ಇಂಧನ. ರಸಾಯನ ವಿಜ್ಞಾನದಲ್ಲಿ ಇದನ್ನು ಈಥೈಲ್ ಆಲ್ಕೋಹಾಲ್ ಎನ್ನುತ್ತೇವೆ. ಕಾರು ಮತ್ತು ಬೈಕುಗಳಿಗೆ ತುಂಬಿಸುವ ಪೆಟ್ರೋಲ್‌ಗೆ ಇದನ್ನು ಸೇರಿಸುವುದರಿಂದ, ಇಂಧನ ಕ್ಷಮತೆ ಕಡಿಮೆ ಆಗಿರುವುದು ನಿಜ. 2023ಕ್ಕೂ ಮುಂಚೆ ತಯಾರಾದ ವಾಹನಗಳು ಎಥೆನಾಲ್‌ಯುಕ್ತ ಇಂಧನ ಬಳಕೆಗೆ ಯೋಗ್ಯವಲ್ಲ ಎಂಬುದೂ ಸಮಸ್ಯೆಯಾಗಿ ಪರಿಣಮಿಸಿದೆ.
  • ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಕಡಿಮೆ ದಹನ ಶಕ್ತಿಯನ್ನು ಹೊಂದಿರುವುದರಿಂದ, ಮೈಲೇಜ್‌ನಲ್ಲಿ ಕುಸಿತವಾಗುತ್ತದೆ ಎಂದು ಭಾರತೀಯ ಆಟೋಮೊಬೈಲ್ ತಯಾರಕರ ಸೊಸೈಟಿ ಹೇಳಿದೆ. ಎಥೆನಾಲ್ ಬಳಕೆಗೆ ಯೋಗ್ಯವಿರುವ ನಾಲ್ಕು ಚಕ್ರ ವಾಹನಗಳ ಇಂಧನ ಕ್ಷಮತೆ ಶೇ 6ರಿಂದ 8ರಷ್ಟು ಮತ್ತು ದ್ವಿಚಕ್ರ ವಾಹನಗಳ ಮೈಲೇಜ್ ಶೇ 3ರಿಂದ 4ರಷ್ಟು ಕಡಿಮೆಯಾಗಿದೆ. ಈ ವಾಹನಗಳು ಶೇ 5ರಿಂದ 10ರಷ್ಟು ಎಥೆನಾಲ್ ಬಳಕೆಗೆ ಸೂಕ್ತವಾಗಿದ್ದವು ಎನ್ನಲಾಗಿದೆ. ಇದ್ದಕ್ಕಿದ್ದಂತೆ ಶೇ 20ರಷ್ಟು ಎಥೆನಾಲ್‌ಯುಕ್ತ ಇಂಧನ ಕಡ್ಡಾಯದ ಸರ್ಕಾರದ ಕ್ರಮದಿಂದ ಕೋಟ್ಯಂತರ ವಾಹನ ಸವಾರರು ಆತಂಕದಲ್ಲಿದ್ದಾರೆ.
  • ಎಥೆನಾಲ್ ಬಳಕೆಯಿಂದ ಶೇ 65ರಷ್ಟು ಇಂಗಾಲದ ಡೈಆಕ್ಸೈಡ್ ಉತ್ಸರ್ಜನೆ ಕಡಿಮೆ ಆಗುತ್ತದೆ ಎಂದು ನೀತಿ ಆಯೋಗ ಹೇಳುತ್ತದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಪ್ರಕಾರ, ಶೇ 20 ಎಥೆನಾಲ್ ಬಳಕೆಯಿಂದಾಗಿ ವಾರ್ಷಿಕ ಸುಮಾರು 10 ದಶಲಕ್ಷ ಟನ್‌ಗಳಷ್ಟು ಶಾಖವರ್ಧಕ ಅನಿಲಗಳ ಹೊರಸೂಸುವಿಕೆ ಕಡಿಮೆ ಮಾಡಬಹುದು. ನಿವ್ವಳ ಶೂನ್ಯ ಹೊರಸೂಸುವಿಕೆ (ನೆಟ್‌ ಜೀರೊ ಎಮಿಷನ್) ಗುರಿಯನ್ನು ಇಟ್ಟುಕೊಂಡಿರುವ ನಾವು, ಎಥೆನಾಲ್ ಬಳಕೆಗೆ ಮುಂದಾಗಿರುವುದು ಹಲವರ ಮೆಚ್ಚುಗೆಗೆ ಪಾತ್ರವಾಗಿದೆ
  • ಭಾರತವು ತನ್ನ ಕಚ್ಚಾ ತೈಲ ಅಗತ್ಯಗಳಿಗಾಗಿ ಶೇ 85ಕ್ಕೂ ಹೆಚ್ಚು ಪ್ರಮಾಣದಲ್ಲಿ ಆಮದಿನ ಮೇಲೆ ಅವಲಂಬಿತವಾಗಿದೆ. ಇದರಿಂದ ದೇಶದ ವಿದೇಶಿ ವಿನಿಮಯ ಮೀಸಲು ತಗ್ಗುತ್ತದೆ ಮತ್ತು ರೂಪಾಯಿ ಮೌಲ್ಯ ಕುಸಿಯತ್ತದೆ. ಎಥೆನಾಲ್ ಮಿಶ್ರಣವು ತೈಲ ಆಮದನ್ನು ಕಡಿಮೆ ಮಾಡಲು ನೇರವಾಗಿ ಸಹಾಯ ಮಾಡುತ್ತದೆ. ಪ್ರತಿ ವರ್ಷ ಕೋಟ್ಯಂತರ ರೂಪಾಯಿಗಳ ಆಮದು ವೆಚ್ಚ ಕಡಿಮೆಯಾಗಿ, ದೇಶದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿಗಳ ವಿದೇಶಿ ವಿನಿಮಯ ಉಳಿತಾಯವಾಗುತ್ತದೆ ಮತ್ತು ಇಂಧನ ಭದ್ರತೆ ಹೆಚ್ಚಾಗುತ್ತದೆ. ಇದು ಪರಿಸರವನ್ನು ರಕ್ಷಿಸುವುದರ ಜೊತೆಗೆ, ರೈತರಿಗೆ ಆರ್ಥಿಕ ಶಕ್ತಿಯನ್ನು ನೀಡುವ ಶಕ್ತಿ ಪಡೆದಿದೆ. ‘ಇ–20’ ಗುರಿ ಸಾಧನೆಯಿಂದ 2024ರಿಂದೀಚೆಗೆ ಎಥೆನಾಲ್ ಕಾರ್ಯಕ್ರಮದಿಂದ ದೇಶಕ್ಕೆ ಸುಮಾರು ₹1.44 ಲಕ್ಷ ಕೋಟಿಗೂ ಹೆಚ್ಚು ವಿದೇಶಿ ವಿನಿಮಯ ಉಳಿದಿದೆ.
  • ತೈಲ ಆಮದಿನ ವೆಚ್ಚವು ದೇಶದ ಒಟ್ಟು ರಫ್ತು ಆದಾಯಕ್ಕಿಂತ ಹೆಚ್ಚಾದಾಗ ಚಾಲ್ತಿ ಖಾತೆ ಕೊರತೆ (ಸಿಎಡಿ) ಗಣನೀಯವಾಗಿ ಹೆಚ್ಚಾಗುತ್ತದೆ. ಕಚ್ಚಾ ತೈಲ ಬೆಲೆ ಏರಿಕೆಯಾದಾಗ, ಸಾರಿಗೆ ವೆಚ್ಚ ಹೆಚ್ಚಾಗಿ– ಆಹಾರ, ಸರಕು ಸಾಗಣೆ ಮತ್ತು ಸೇವೆಗಳ ಬೆಲೆಗಳು ಏರಿಕೆಗೊಂಡು, ದೇಶದಲ್ಲಿ ಹಣದುಬ್ಬರ ಹೆಚ್ಚಾಗುತ್ತದೆ. ಈ ಆರ್ಥಿಕ ಹೊರೆಯಿಂದ ಪಾರಾಗಲು ಮತ್ತು ಇಂಧನ ಭದ್ರತೆಯನ್ನು ಸಾಧಿಸಲು ಎಥೆನಾಲ್ ಮಿಶ್ರಣ ಆಪತ್ಬಾಂಧವನಂತೆ ಕಾಣಿಸುತ್ತಿದೆ.
  • ಎಥೆನಾಲ್ ಮಿಶ್ರಣದಿಂದ ಹಳೆಯ ವಾಹನಗಳ ಎಂಜಿನ್‌ಗಳು ಮತ್ತು ಭಾಗಗಳು ಹಾನಿಗೊಳ ಗಾಗುತ್ತವೆ. ರಬ್ಬರ್, ಪ್ಲಾಸ್ಟಿಕ್ ಮತ್ತು ಕೆಲವು ಲೋಹದ ಘಟಕಗಳನ್ನು ಎಥೆನಾಲ್ ವೇಗವಾಗಿ ಸವೆಸುತ್ತದೆ. ‘ಇ–20’ ಇಂಧನಕ್ಕೆ ಹೊಂದಿಕೊಳ್ಳುವಂತೆ ವಾಹನ ತಯಾರಕರು ಹೊಸ ಎಂಜಿನ್‌ಗಳನ್ನು ವಿನ್ಯಾಸಗೊಳಿಸುವುದು ಸದ್ಯದ ತುರ್ತುಗಳಲ್ಲೊಂದು. ಸುಧಾರಿತ ಎಂಜಿನ್ ತಂತ್ರಜ್ಞಾನ (ಫ್ಲೆಕ್ಸ್–ಫ್ಯೂಯೆಲ್ ಎಂಜಿನ್‌ಗಳು) ಅಳವಡಿಕೆಯಿಂದ ಈ ಸಮಸ್ಯೆಯನ್ನು ನಿವಾರಿಸಬಹುದು. ಅಮೆರಿಕ, ಬ್ರೆಜಿಲ್ ಮತ್ತು ಕೆನಡಾಗಳಲ್ಲಿ ‘ಇ–20’ರಿಂದ ‘ಇ–100’ವರೆಗಿನ ಎಥೆನಾಲ್ ಬಳಸಿ ಓಡುವ ವಾಹನಗಳಿವೆ. ಟಿವಿಎಸ್ ಕಂಪನಿಯು ಪುಣೆಯ ತನ್ನ ಘಟಕದಲ್ಲಿ ‘ಇ–80’ರಿಂದ ‘ಇ–100’ ಬಳಸಿ ಓಡುವ ‘ಅಪಾಚೆ’ ಹೆಸರಿನ ದ್ವಿಚಕ್ರ ವಾಹನ ತಯಾರಿಸುವಲ್ಲಿ ಯಶಸ್ವಿಯಾಗಿದೆ.
  • ಎಥೆನಾಲ್ ಉತ್ಪಾದನೆಗೆ ಧಾನ್ಯಗಳನ್ನು ಬಳಸು ವುದರಿಂದ ಆಹಾರ ಭದ್ರತೆಗೆ ಧಕ್ಕೆ ಬರುತ್ತದೆ ಮತ್ತು ಆಹಾರ ಬೆಳೆಗಳಿಗೆ ಮೀಸಲಾದ ಜಮೀನು ಒತ್ತುವರಿ ಯಾಗುತ್ತದೆ ಎಂಬ ಅಭಿಪ್ರಾಯವಿದೆ. ಕಬ್ಬು ಮತ್ತು ಮೆಕ್ಕೆಜೋಳದಂತಹ ಬೆಳೆಗಳ ಅಗತ್ಯ ಹೆಚ್ಚಾದಾಗ, ಅವುಗಳ ಕೃಷಿಗೆ ಹೆಚ್ಚಿನ ಪ್ರಮಾಣದ ನೀರು ಬೇಕಾಗು ತ್ತದೆಂಬ ಆತಂಕವೂ ಇದೆ. ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ದತ್ತಾಂಶವು ಈ ಹೇಳಿಕೆಯನ್ನು ನಿರಾಕರಿಸುತ್ತದೆ. ಧಾನ್ಯ ಆಧಾರಿತ ಎಥೆನಾಲ್ ಉತ್ಪಾದನೆಯಲ್ಲಿ ಹೆಚ್ಚುವರಿ ಮತ್ತು ಮಾನವ ಬಳಕೆಗೆ ಅನರ್ಹವಾದ, ಹಾನಿಗೊಳಗಾದ ಆಹಾರೇತರ ಧಾನ್ಯಗಳನ್ನು ಬಳಸಲಾಗುತ್ತದೆ. ಇದರಿಂದ ಆಹಾರ ತ್ಯಾಜ್ಯ ಕಡಿಮೆಯಾಗುತ್ತದೆ ಮತ್ತು ಆಹಾರ ಲಭ್ಯತೆಗೆ ಧಕ್ಕೆಯಾಗುವುದಿಲ್ಲ. ಆಹಾರ ಧಾನ್ಯಗಳನ್ನು ಇಂಧನ ತಯಾರಿಕೆಗೆ ಬಳಸಿಯೂ ಭಾರತ ಧಾನ್ಯಗಳ ನಿವ್ವಳ ರಫ್ತುದಾರನಾಗಿದ್ದು, ಅಕ್ಕಿಯ ರಫ್ತಿನ ಪ್ರಮಾಣವು ಒಟ್ಟು ಉತ್ಪಾದನೆಯ ಶೇ 12ರಷ್ಟಿದೆ. ಕಳೆದೆರಡು ವರ್ಷಗಳಲ್ಲಿ ಭಾರತದ ಒಟ್ಟು ಕೃಷಿ ಪ್ರದೇಶವು 18 ದಶಲಕ್ಷ ಹೆಕ್ಟೇರ್‌ನಷ್ಟು ಹೆಚ್ಚಾಗಿದೆ.
  • ಪ್ರಸ್ತುತ ಧಾನ್ಯ ಆಧಾರಿತ ಎಥೆನಾಲ್ ಉತ್ಪಾದನೆ ಶೇ 51ರಷ್ಟಿದೆ. ದೇಶದ 90,000 ಪೆಟ್ರೋಲ್ ಬಂಕ್‌ಗಳಲ್ಲಿ ‘ಇ–20’ ಇಂಧನ ಲಭ್ಯವಿದೆ. ಎಥೆನಾಲ್ ಉತ್ಪಾದನೆಗೆ ಕಬ್ಬಿನ ಮೇಲಿನ ಅವಲಂಬನೆ ಕಡಿಮೆಯಾಗಿ, ಉತ್ಪಾದನಾ ವೆಚ್ಚವು ಕಡಿಮೆಯಾಗಿದೆ. ಆದರೆ, ಪೆಟ್ರೋಲ್ ದರ ಮಾತ್ರ 10 ಪೈಸೆಯೂ ಕಡಿಮೆಯಾಗಿಲ್ಲ.
  • ಕಬ್ಬು, ಜೋಳದಂತಹ ಬೆಳೆಗಳನ್ನು ಎಥೆನಾಲ್ ಉತ್ಪಾದನೆಗೆ ಬಳಸುವುದರಿಂದ, ರೈತರಿಗೆ ತಮ್ಮ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಸಿಗುತ್ತದೆ. ಇದು ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಿ, ಗ್ರಾಮೀಣ ಆರ್ಥಿಕತೆಗೆ ಚೈತನ್ಯ ತುಂಬಿ, ಕೃಷಿಕರ ಕಲ್ಯಾಣಕ್ಕೆ ಮತ್ತು ಆದಾಯ ಹೆಚ್ಚಳಕ್ಕೆ ಕೊಡುಗೆ ನೀಡುತ್ತದೆ. ಭಾರತದ ವಾರ್ಷಿಕ ಧಾನ್ಯ ಉತ್ಪಾದನೆಯು ಸರಿಸುಮಾರು 3,000 ಲಕ್ಷ ಟನ್‌ಗಳಷ್ಟಿದ್ದರೆ, ದೇಶೀಯ ಬಳಕೆ ಸುಮಾರು 2,000 ಲಕ್ಷ ಟನ್‌ಗಳಷ್ಟಿದೆ. ಈ ಹೆಚ್ಚುವರಿಯು, ಬಳಕೆ ಮತ್ತು ಎಥೆನಾಲ್ ಉತ್ಪಾದನೆ ಎರಡಕ್ಕೂ ಸಾಕಾಗುತ್ತದೆ.
  • ಪೆಟ್ರೋಲ್‌ಗೆ ಶೇ 20 ಎಥೆನಾಲ್ ಮಿಶ್ರಣ ಮಾಡುವ ಸರ್ಕಾರದ ನಿರ್ಧಾರವು ದೂರದೃಷ್ಟಿಯುಳ್ಳ ಕ್ರಮವಾಗಿದ್ದು, ಪಳೆಯುಳಿಕೆ ಇಂಧನಗಳ ಮೇಲಿನ ಭಾರತದ ಅವಲಂಬನೆಯನ್ನು ಕಡಿಮೆ ಮಾಡುವತ್ತ ಇಟ್ಟಿರುವ ಪ್ರಮುಖ ಹೆಜ್ಜೆಯಾಗಿದೆ. ಈ ಬದಲಾವಣೆ ಯಶಸ್ವಿ ಆಗಬೇಕಾದರೆ, ಮೈಲೇಜ್ ಕಡಿತ ಮತ್ತು ಹಳೆಯ ವಾಹನಗಳ ‘ಇ–20’ ಹೊಂದಾಣಿಕೆಯ ಸವಾಲುಗಳನ್ನು ವಿಳಂಬವಿಲ್ಲದೆ ಪರಿಹರಿಸಬೇಕು. ಹಾಗೆಯೇ, ಆಹಾರ ಮತ್ತು ನೀರಿನ ಸಂಪನ್ಮೂಲಗಳ ಮೇಲೆ ವ್ಯತಿರಿಕ್ತ ಪರಿಣಾಮ ಆಗದಂತೆ ಎಥೆನಾಲ್ ಉತ್ಪಾದನಾ ನೀತಿಗಳನ್ನು ಸರ್ಕಾರ ರೂಪಿಸಬೇಕು. ಒಟ್ಟಿನಲ್ಲಿ, ದೂರಗಾಮಿ ಪರಿಣಾಮಗಳನ್ನುಳ್ಳ ಈ ಇಂಧನ ಕ್ರಾಂತಿಯು ಭಾರತಕ್ಕೆ ಬಹುದೊಡ್ಡ ಲಾಭ ತರಬಲ್ಲದು. ಆದರೆ, ಪೆಟ್ರೋಲ್‌ನಲ್ಲಿ ಹೆಚ್ಚಿನ ಎಥೆನಾಲ್‌ ಬಳಕೆಗೆ ಸಂಬಂಧಿಸಿದ ನೀತಿಯಲ್ಲಿ ಸರ್ಕಾರ ಸಮತೋಲನ ಕಾಪಾಡಿಕೊಳ್ಳುವುದು ಹಾಗೂ ಬಳಕೆದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅಗತ್ಯ.
  • ಸರ್ ಕ್ರೀಕ್ಜೌಗು ನೆಲ ಜಗಳ
  • ಭಾರತದ ಜಿಡಿಪಿ ಬೆಳವಣಿಗೆ ಅಂದಾಜು ಪರಿಷ್ಕರಣೆ

ಸಂದರ್ಭ: ಪ್ರಸಕ್ತ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಭಾರತದ ಅರ್ಥ ವ್ಯವಸ್ಥೆಯ ಬೆಳವಣಿಗೆ ಅಂದಾಜನ್ನು ವಿಶ್ವಬ್ಯಾಂಕ್‌ ಪರಿಷ್ಕರಿಸಿದ್ದು, ಬೆಳವಣಿಗೆ ಪ್ರಮಾಣವು ಶೇ 6.5ರಷ್ಟು ಇರಲಿದೆ ಎಂದು ಹೇಳಿದೆ. ಈ ಮೊದಲಿನ ಅಂದಾಜಿನಲ್ಲಿ ವಿಶ್ವಬ್ಯಾಂಕ್‌, ಬೆಳವಣಿಗೆ ಪ್ರಮಾಣವು ಶೇ 6.3ರಷ್ಟು ಆಗಬಹುದು ಎಂದು ಹೇಳಿತ್ತು.

  • ಪ್ರಮುಖ ಅರ್ಥ ವ್ಯವಸ್ಥೆಗಳ ಪೈಕಿ ಅತ್ಯಂತ ವೇಗದ ಬೆಳವಣಿಗೆಯನ್ನು ಭಾರತವು ದಾಖಲಿಸುವ ನಿರೀಕ್ಷೆ ಇದೆ ಎಂದು ಕೂಡ ಅದು ಹೇಳಿದೆ. ಬೇಡಿಕೆಯಲ್ಲಿನ ಹೆಚ್ಚಳವು ದೇಶದ ಆರ್ಥಿಕ ಬೆಳವಣಿಗೆಗೆ ಒತ್ತಾಸೆಯಾಗಿ ನಿಲ್ಲಲಿದೆ.
  • ಭಾರತದ ಸರಕುಗಳಿಗೆ ಅಮೆರಿಕವು ಶೇ 50ರಷ್ಟು ಸುಂಕವನ್ನು ವಿಧಿಸಿರುವ ಪರಿಣಾಮವು ಮುಂದಿನ ವರ್ಷದಲ್ಲಿ ಕಾಣಿಸಲಿದೆ ಎಂದು ವಿಶ್ವ ಬ್ಯಾಂಕ್‌ ಅಂದಾಜಿಸಿದೆ. ಹೀಗಾಗಿ, 2026–27ನೇ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ದೇಶದ ಜಿಡಿಪಿ ಬೆಳವಣಿಗೆ ಪ್ರಮಾಣದ ಅಂದಾಜನ್ನು ತಗ್ಗಿಸಲಾಗಿದ್ದು, ಅದು ಶೇ 6.3ರಷ್ಟು ಇರಲಿದೆ ಎಂದು ಹೇಳಿದೆ.
  • ಕೃಷಿ ಉತ್ಪಾದನೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕೂಲಿ ಮೊತ್ತವು ನಿರೀಕ್ಷೆಗಿಂತ ಹೆಚ್ಚಾಗಿದೆ. ಜಿಎಸ್‌ಟಿ ದರವನ್ನು ತಗ್ಗಿಸುವ ಮೂಲಕ ಸರ್ಕಾರ ತಂದಿರುವ ಸುಧಾರಣೆಗಳು ಆರ್ಥಿಕ ಚಟುವಟಿಕೆಗಳಿಗೆ ನೆರವಾಗುವ ನಿರೀಕ್ಷೆ ಇದೆ ಎಂದು ಹೇಳಿದೆ.
  • ಮೂವರಿಗೆ ಭೌತವಿಜ್ಞಾನ ನೊಬೆಲ್

ಸಂದರ್ಭ: ‘ಕ್ವಾಂಟಮ್‌ ಮೆಕ್ಯಾನಿಕಲ್‌ ಟನಲಿಂಗ್‌’ ಸಂಬಂಧಿತ ಮಹತ್ವದ ಸಂಶೋಧನೆಗಾಗಿ ಮೂವರು ವಿಜ್ಞಾನಿಗಳನ್ನು 2025ನೇ ಸಾಲಿನ ಭೌತವಿಜ್ಞಾನ ಕ್ಷೇತ್ರದ ಪ್ರತಿಷ್ಠಿತ ನೊಬೆಲ್‌ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ರಾಯಲ್ ಸ್ವೀಡಿಶ್‌ ಅಕಾಡೆಮಿ ಘೋಷಿಸಿದೆ.

  • ಬ್ರಿಟನ್‌ನ ಜಾನ್‌ ಕ್ಲಾರ್ಕ್‌, ಫ್ರಾನ್ಸ್‌ನ ಮೈಕಲ್‌ ಎಚ್‌. ಡೆವೊರೆಟ್‌ ಮತ್ತು ಅಮೆರಿಕದ ಜಾನ್‌ ಎಂ. ಮಾರ್ಟಿನಿಸ್‌ ನೊಬೆಲ್ ಪುರಸ್ಕಾರವನ್ನು ಹಂಚಿಕೊಂಡಿದ್ದಾರೆ. ಈ ಮೂವರೂ ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಭೌತವಿಜ್ಞಾನ ಉಪನ್ಯಾಸಕರಾಗಿದ್ದಾರೆ.
  • ಆಲ್ಫ್ರೆಡ್‌ ನೊಬೆಲ್‌ ಅವರ ಪುಣ್ಯತಿಥಿ ಅಂಗವಾಗಿ ಡಿ.10ರಂದು ನಡೆಯುವ ಕಾರ್ಯಕ್ರಮದಲ್ಲಿ ವಿಜ್ಞಾನಿಗಳಿಗೆ ಪ್ರಶಸ್ತಿ ಪ್ರಧಾನ ನಡೆಯಲಿದೆ. ಪುರಸ್ಕಾರವು 1.2 ದಶಲಕ್ಷ ಡಾಲರ್‌ (ಅಂದಾಜು ₹10.65 ಕೋಟಿ) ನಗದು ಪುರಸ್ಕಾರವನ್ನು ಒಳಗೊಂಡಿದೆ.
  • 1901ರಿಂದ 2024ರವರೆಗೆ ಭೌತವಿಜ್ಞಾನ ಕ್ಷೇತ್ರದ ನೊಬೆಲ್ ಪುರಸ್ಕಾರಕ್ಕೆ 226 ವಿಜ್ಞಾನಿಗಳು ಪಾತ್ರರಾಗಿದ್ದಾರೆ. ಕೃತಕ ಬುದ್ಧಿಮತ್ತೆ ಕ್ಷೇತ್ರದ ಸಂಶೋಧನೆಗಳಿಗಾಗಿ ಕಳೆದ ಬಾರಿ ಜಾನ್‌ ಹಾಪ್‌ಫೀಲ್ಡ್ ಮತ್ತು ಜಾಫ್ರಿ ಹಿಂಟನ್‌ ಅವರಿಗೆ ಭೌತವಿಜ್ಞಾನ ಕ್ಷೇತ್ರದ ನೊಬೆಲ್ ಪುರಸ್ಕಾರ ಲಭಿಸಿತ್ತು.
  • ಮೇರಿ ಬ್ರಂಕೋ, ಫ್ರೆಡ್‌ ರಾಮ್ಸ್‌ಡೆಲ್‌ ಹಾಗೂ ಜಪಾನ್‌ನ ಶಿಮೊನ್‌ ಸಕಾಗುಚಿ ಅವರಿಗೆ ಪ್ರಸಕ್ತ ಸಾಲಿನ ವೈದ್ಯಕೀಯ ಕ್ಷೇತ್ರದ ನೊಬೆಲ್‌ ಪ್ರಶಸ್ತಿ ಘೋಷಣೆಯಾಗಿತ್ತು.

ಪ್ರಚಲಿತ ವಿದ್ಯಮಾನಗಳು: 7ನೇ ಅಕ್ಟೋಬರ್ 2025

  • ಬೌದ್ಧಧರ್ಮ ಸೇರಿದ್ದರೆ ಎಸ್ಸಿ ಪ್ರಮಾಣಪತ್ರ

ಸಂದರ್ಭ: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಪರಿಶಿಷ್ಟ ಜಾತಿಯವರ ‍ಪೈಕಿ ಯಾರಾದರೂ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದರೆ, ಅಂಥವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ರಾಜ್ಯ ಸರ್ಕಾರ ಮತ್ತೊಮ್ಮೆ ಆದೇಶ ಹೊರಡಿಸಿದೆ.

  • ಕೇಂದ್ರ ಸರ್ಕಾರ 1990ರ ನ. 20ರಂದು ಬರೆದ ಪತ್ರದಲ್ಲಿದ್ದ ಸೂಚನೆಯಂತೆ, ‘ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಪರಿಶಿಷ್ಟ ಜಾತಿಯವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ಮತ್ತು ಧರ್ಮದ ಕಾಲಂನಲ್ಲಿ ಬೌದ್ದ ಧರ್ಮ ಎಂದು ನಮೂದಿಸುವಂತೆ ಜಾತಿ ಪ್ರಮಾಣಪತ್ರ ನೀಡುವ ಪ್ರಾಧಿಕಾರಿಗಳಿಗೆ ರಾಜ್ಯ ಸರ್ಕಾರ 2013ರ ಡಿ. 9ರಂದೇ ಆದೇಶ ನೀಡಿತ್ತು.
  • ಆದರೆ, ಹೀಗೆ ಮತಾಂತರ ಗೊಂಡವರಿಗೆ ಜಾತಿ ಪ್ರಮಾಣಪತ್ರ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿ ಆದೇಶ ಹೊರಡಿಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಹಲವು ಸಂಘಸಂಸ್ಥೆಗಳು ಮನವಿ ಸಲ್ಲಿಸಿದ್ದವು.
  • ಈ ಕಾರಣಕ್ಕೆ ಮತ್ತೆ ಆದೇಶ ಹೊರಡಿಸಿರುವ ಇಲಾಖೆ, ‘ಪರಿಶಿಷ್ಟ ಜಾತಿಯಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡವರು ಜಾತಿ ಪ್ರಮಾಣಪತ್ರ ಪಡೆಯಲು ಸಲ್ಲಿಸುವ ಅರ್ಜಿಗಳಲ್ಲಿ ಧರ್ಮದ ಕಾಲಂನಲ್ಲಿ ‘ಬೌದ್ಧ’ (ಬುದ್ಧಿಸಂ) ಎಂದು ನಮೂದಿಸಲು ಅವಕಾಶ ಕಲ್ಪಿಸಬೇಕು. ಅರ್ಜಿದಾರರು ಅಥವಾ ಪೋಷಕರು ಇಚ್ಚಿಸಿದರೆ ಶಾಲಾ ಶಿಕ್ಷಣ ಇಲಾಖೆಯ ಅಡಿಯಲ್ಲಿರುವ ಸರ್ಕಾರಿ, ಖಾಸಗಿ ಶಾಲೆಗಳು ಮತ್ತು ಇತರ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿನ ದಾಖಲೆಗಳಲ್ಲಿ ಧರ್ಮದ ಕಾಲಂನಲ್ಲಿಯೂ ಬೌದ್ಧ ಎಂದು ನಮೂದಿಸಲು ಅವಕಾಶ ನೀಡಬೇಕು. ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು ನಿಗಮ ಮಂಡಳಿಗಳು, ಇತರ ಸಂಸ್ಥೆಗಳು ಈ ಆದೇಶದಂತೆ ಕ್ರಮ ವಹಿಸಬೇಕು’ ಎಂದು ತಿಳಿಸಿದೆ.
  • ಅಪರಾಧ ಹೆಚ್ಚು, ಶಿಕ್ಷೆ ಕಡಿಮೆ
  • ಸೇವಾ ವಲಯ ಪ್ರಗತಿ ಇಳಿಕೆ

ಸಂದರ್ಭ: ದೇಶದ ಸೇವಾ ವಲಯದ ಚಟುವಟಿಕೆ ಸೆಪ್ಟೆಂಬರ್‌ ತಿಂಗಳಿನಲ್ಲಿ ಇಳಿಕೆಯಾಗಿದೆ ಎಂದು ಮಾಸಿಕ ಸಮೀಕ್ಷೆಯ ವರದಿಯೊಂದು ತಿಳಿಸಿದೆ.

  • ಎಚ್‌ಎಸ್‌ಬಿಸಿ ಇಂಡಿಯಾ ಸರ್ವಿಸಸ್ ಪಿಎಂಐ ಬ್ಯುಸಿನೆಸ್ ಆ್ಯಕ್ಟಿವಿಟಿ ಸೂಚ್ಯಂಕವು ಸೆಪ್ಟೆಂಬರ್‌ನಲ್ಲಿ 60.9 ದಾಖಲಾದೆ. ಇದು ಆಗಸ್ಟ್‌ನಲ್ಲಿ 62.9ರಷ್ಟಿತ್ತು. ಆಗಸ್ಟ್‌ನ ಮಟ್ಟವು 15 ವರ್ಷಗಳ ಗರಿಷ್ಠವಾಗಿತ್ತು.
  • ಪಿಎಂಐ ಸೂಚ್ಯಂಕವು 50ಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇದ್ದರೆ ಅದನ್ನು ಬೆಳವಣಿಗೆ ಎಂದು ಗುರುತಿಸಲಾಗುತ್ತದೆ.
  • ‘ದೇಶದ ಸೇವಾ ವಲಯದ ಚಟುವಟಿಕೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆಯು ತೀವ್ರಗತಿಯಲ್ಲಿ ಹೆಚ್ಚುತ್ತಿಲ್ಲ. ಹೀಗಾಗಿ ಆಗಸ್ಟ್‌ ತಿಂಗಳಿಗೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ ಸೂಚ್ಯಂಕವು ಇಳಿಕೆ ಕಂಡಿದೆ’ ಎಂದು ಎಚ್‌ಎಸ್‌ಬಿಸಿ ಇಂಡಿಯಾದ ಮುಖ್ಯ ಅರ್ಥಶಾಸ್ತ್ರಜ್ಞೆ ಪ್ರಾಂಜುಲ್‌ ಭಂಡಾರಿ ಹೇಳಿದ್ದಾರೆ.
  • ಮೂವರಿಗೆ ವೈದ್ಯಕೀಯ ಕ್ಷೇತ್ರದ ನೊಬೆಲ್

ಸಂದರ್ಭ: ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸಂಬಂಧಿಸಿದ ಸಂಶೋಧನೆಗಾಗಿ ವಿಜ್ಞಾನಿಗಳಾದ ಅಮೆರಿಕದ ಮೇರಿ ಈ. ಬ್ರಂಕೋ, ಫ್ರೆಡ್‌ ರಾಮ್ಸ್‌ಡೆಲ್‌ ಹಾಗೂ ಜಪಾನ್‌ನ ಶಿಮೋನ್‌ ಸಕಾಗುಚಿ ಅವರಿಗೆ 2025ನೇ ಸಾಲಿನ ವೈದ್ಯಕೀಯ ಕ್ಷೇತ್ರದ ನೊಬೆಲ್‌ ಪ್ರಶಸ್ತಿ ಘೋಷಿಸಲಾಗಿದೆ.

  • ಸ್ಟಾಕ್‌ಹೋಮ್‌ನ ಕರೊಲಿನ್ಸ್ಕಾ ಇನ್‌ಸ್ಟಿಟ್ಯೂಟ್‌ನಲ್ಲಿ ವೈದ್ಯಕೀಯ ನೊಬೆಲ್‌ ಪುರಸ್ಕೃತರ ಹೆಸರುಗಳನ್ನು ಪ್ರಕಟಿಸುವುದರೊಂದಿಗೆ ಈ ವರ್ಷದ ನೊಬೆಲ್‌ ಪುರಸ್ಕಾರ ಘೋಷಣೆಗೆ ಚಾಲನೆ ಸಿಕ್ಕಂತಾಗಿದೆ.
  • ಕ್ಯಾನ್ಸರ್‌ಗೆ ಹೊಸ ವಿಧಾನದಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗಬಲ್ಲ ‘ಮೈಕ್ರೋಆರ್‌ಎನ್‌ಎ’ ಆವಿಷ್ಕಾರಕ್ಕಾಗಿ ಅಮೆರಿಕದ ವಿಕ್ಟರ್‌ ಆ್ಯಂಬ್ರೊಸ್ ಮತ್ತು ಗ್ಯಾರಿ ರುವ್ಕನ್‌ ಅವರಿಗೆ ಕಳೆದ ವರ್ಷ ವೈದ್ಯಕೀಯ ಕ್ಷೇತ್ರದ ನೊಬೆಲ್‌ ಪುರಸ್ಕಾರ ದೊರೆತಿತ್ತು.
  • ಭೌತವಿಜ್ಞಾನ, ರಸಾಯನ ವಿಜ್ಞಾನ ಕ್ಷೇತ್ರಗಳ ಪ್ರಶಸ್ತಿ ವಿಜೇತರ ಹೆಸರನ್ನು ಕ್ರಮವಾಗಿ ಹಾಗೂ ಬುಧವಾರ ಪ್ರಕಟಿಸಲಾಗುತ್ತದೆ.
  • ಸಾಹಿತ್ಯ ಕ್ಷೇತ್ರದ ಪುರಸ್ಕಾರವನ್ನು ಹಾಗೂ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ಘೋಷಿಸಲಾ ಗುತ್ತದೆ. ಅ.13ರಂದು ಅರ್ಥಶಾಸ್ತ್ರ ನೊಬೆಲ್‌ ಪುರಸ್ಕಾರ ಘೋಷಿಸಲಾಗುತ್ತದೆ. ಡಿಸೆಂಬರ್‌ 10ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
  • ಇಸ್ರೇಲ್‌–ಹಮಾಸ್ಮಾತುಕತೆ ಆರಂಭ

ಸಂದರ್ಭ: ಯುದ್ಧ ಅಂತ್ಯಗೊಳಿಸಲು ಅಮೆರಿಕವು ಸಿದ್ಧಪಡಿಸಿದ ಶಾಂತಿ ಯೋಜನೆ ಕುರಿತು ಇಸ್ರೇಲ್‌ ಹಾಗೂ ಹಮಾಸ್‌ ಬಂಡುಕೋರ ಸಂಘಟನೆಯ ನಿಯೋಗಗಳು ಈಜಿಪ್ಟ್‌ನ ರೆಸಾರ್ಟ್‌ವೊಂದರಲ್ಲಿ ಮಧ್ಯಾಹ್ನ ದಿಂದ ಮಾತುಕತೆ ಆರಂಭಿಸಿವೆ. ಈಜಿಪ್ಟ್‌ ಹಾಗೂ ಕತಾರ್‌ ಮಾತುಕತೆಯ ಮಧ್ಯಸ್ಥಿಕೆ ವಹಿಸಿವೆ.

  • ಯುದ್ಧವು ಆರಂಭಗೊಂಡು ಅ.7ಕ್ಕೆ ಎರಡು ವರ್ಷ ಪೂರೈಸ ಲಿದೆ. ಈ ಸಭೆಯಲ್ಲಿ ಅಮೆರಿಕದ ಮಧ್ಯಪ್ರಾಚ್ಯದ ರಾಯಭಾರಿ ಸ್ಟೀವ್‌ ವಿಟ್‌ಆಫ್‌ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಅಳಿಯ ಜರೆಡ್‌ ಕುಶ್ನರ್ ಅವರೂ ಭಾಗಿಯಾಗಲಿದ್ದಾರೆ.
  • ಮೊದಲ ಹಂತದಲ್ಲಿ ಯಾವ ರೀತಿಯಲ್ಲಿ ಕದನವಿರಾಮ ಇರ ಬೇಕು ಎನ್ನುವ ಕುರಿತು ಚರ್ಚೆ ನಡೆಯಲಿದೆ. ಗಾಜಾ ಪಟ್ಟಿಯಿಂದ ಇಸ್ರೇಲ್‌ ಸೇನೆಯು ಭಾಗಶಃ ವಾಪಸಾಗಬೇಕು. ಇಸ್ರೇಲ್‌ ವಶದಲ್ಲಿರುವ ಪ್ಯಾಲೆಸ್ಟೀನ್‌ನ ಕೈದಿಗಳ ಬಿಡುಗಡೆಗೆ ಪ್ರತಿಯಾಗಿ ಹಮಾಸ್‌ ವಶದಲ್ಲಿ ಇರುವ ಇಸ್ರೇಲ್‌ ಒತ್ತೆಯಾಳುಗಳು ಬಿಡುಗಡೆ ಮಾಡುವುದರ ಕುರಿತೂ ಮಾತುಕತೆ ನಡೆಯಲಿದೆ.
  • 3 ರಾಜ್ಯಗಳಿಗೆ ಎನ್ಎಚ್ಆರ್ಸಿ ನೋಟಿಸ್

ಸಂದರ್ಭ: ಮಕ್ಕಳಲ್ಲಿ ಕೆಮ್ಮಿನ ಔಷಧಿಗಳ ಬಳಕೆಯ ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿದ ಕೇರಳ ಸರ್ಕಾರ

ಮಕ್ಕಳ ದುರಂತ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಮೋಹನ್ ಯಾದವ್ ಮುಖ್ಯಮಂತ್ರಿ, ಮಧ್ಯಪ್ರದೇಶ.

  • ಕೆಮ್ಮಿನ ಸಿರಪ್‌ ಸೇವನೆಯಿಂದ ಮಕ್ಕಳು ಮೃತಪಟ್ಟಿದ್ದಾರೆ ಎಂಬ ಆರೋಪಗಳಿಗೆ ಸಂಬಂಧಿಸಿ ರಾಷ್ಟ್ರೀಯ ಮಾನವಹಕ್ಕುಗಳ ಆಯೋಗವು (ಎನ್‌ಎಚ್ಆರ್‌ಸಿ) ಮಧ್ಯಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ನೋಟಿಸ್‌ ನೀಡಿದೆ.
  • ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಮತ್ತು ಕಲಬೆರಕೆ ಔಷಧಗಳ ಮಾರಾಟವನ್ನು ತಕ್ಷಣದಿಂದಲೇ ನಿಷೇಧಿಸುವಂತೆ ನಿರ್ದೇಶಿಸಿದೆ.
  • ಕಲಬೆರಕೆ ಔಷಧಗಳ ಪೂರೈಕೆ ಬಗ್ಗೆಯೂ ತನಿಖೆ ನಡೆಸಲು ಆದೇಶಿಸುವಂತೆ ಹಾಗೂ ಅಂತಹ ಔಷಧಗಳ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷಾ ವರದಿ ನೀಡಲು ಎಲ್ಲ ಪ್ರಾದೇಶಿಕ ಪ್ರಯೋಗಾಲಯಗಳಿಗೆ ಸೂಚನೆ ನೀಡಲು, ಭಾರತೀಯ ಔಷಧ ನಿಯಂತ್ರಣ ವಿಭಾಗ, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ,ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಮತ್ತು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಎನ್‌ಎಚ್‌ಆರ್‌ಸಿ ಆದೇಶಿಸಿದೆ.
  • ಕಲಬೆರಕೆ ಔಷಧಿಗಳನ್ನು ನಿಷೇಧಿಸಿರುವ ಕುರಿತು ವರದಿ ನೀಡಲು ಮೂರು ರಾಜ್ಯಗಳ ಮುಖ್ಯ ಔಷಧ ನಿಯಂತ್ರಕರಿಗೆ ಆದೇಶ ನೀಡುವಂತೆಯೂ ಸೂಚಿಸಿದೆ.
  • ಔಷಧ ನಿಯಂತ್ರಕರ ವರ್ಗಾವಣೆ (ಛಿಂದ್ವಾಢ ವರದಿ): ಕೆಮ್ಮಿನ ಸಿರಪ್‌ ಸೇವನೆ ಬಳಿಕ ಮೂತ್ರಪಿಂಡ ವೈಫಲ್ಯದಿಂದ 14 ಮಕ್ಕಳು ಮೃತಪಟ್ಟ ಪ್ರಕರಣದ ತನಿಖೆ ನಡೆದಿರುವಾಗಲೇ, ರಾಜ್ಯದ ಔಷಧ ನಿಯಂತ್ರಕರಾದ ದಿನೇಶ್‌ ಮೌರ್ಯ ಅವರನ್ನು ಮಧ್ಯಪ್ರದೇಶ ಸರ್ಕಾರ ವರ್ಗಾಯಿಸಿದೆ.
  • ಛಿಂದ್ವಾಢದಲ್ಲಿ ಡ್ರಗ್‌ ಇನ್ಸ್‌ಪೆಕ್ಟರ್‌ ಆಗಿದ್ದ ಗೌರವ್ ಶರ್ಮಾ, ಜಬಲ್‌ಪುರದಲ್ಲಿ ಡ್ರಗ್‌ ಇನ್ಸ್‌ಪೆಕ್ಟರ್‌ ಆಗಿದ್ದ ಶರದ್‌ ಕುಮಾರ್ ಜೈನ್ ಹಾಗೂ ಆಹಾರ ಮತ್ತು ಔಷಧ ಆಡಳಿತದ ಉಪ ನಿರ್ದೇಶಕ ಶೋಭಿತ್ ಕೋಸ್ಟಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
  • ಎಸ್‌ಐಟಿ ರಚನೆ: ಪ್ರಕರಣದ ತನಿಖೆಗಾಗಿ ಮಧ್ಯಪ್ರದೇಶ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.
  • ವೈದ್ಯರು ಶಿಫಾರಸಿಗೆ ಮಾತ್ರ ಔಷಧಿ ಕೊಡಿ

ಸಂದರ್ಭ: ವೈದ್ಯರು ಶಿಫಾರಸು ಮಾಡಿದರೆ ಮಾತ್ರ 12 ವರ್ಷದ ಒಳಗಿನ ಮಕ್ಕಳಿಗೆ ಔಷಧ ನೀಡಬೇಕು ಎಂದು ಕೇರಳ ಆರೋಗ್ಯ ಇಲಾಖೆ ಆದೇಶಿಸಿದೆ.

  • ಮಕ್ಕಳಲ್ಲಿ ಕೆಮ್ಮಿನ ಔಷಧಿಗಳ ಬಳಕೆಯ ಅಧ್ಯಯನ ಮಾಡಲು ಮೂವರು ತಜ್ಞರ ಸಮಿತಿ ರಚಿಸಿದ್ದು, ತುರ್ತು ವರದಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಅವರು ಉನ್ನತ ಮಟ್ಟದ ಸಭೆಯ ನಂತರ ಇಲ್ಲಿ ತಿಳಿಸಿದರು. ರಾಜ್ಯ ಔಷಧ ನಿಯಂತ್ರಕ, ಮಕ್ಕಳ ಆರೋಗ್ಯ ನೋಡಲ್‌ ಅಧಿಕಾರಿ ಮತ್ತು ಭಾರತೀಯ ಮಕ್ಕಳ ತಜ್ಞರ ಅಕಾಡೆಮಿಯ ರಾಜ್ಯ ಘಟಕದ ಅಧ್ಯಕ್ಷರು ಸಮಿತಿಯ ಸದಸ್ಯರಾಗಿದ್ದಾರೆ.
  • ಈ ಸಮಿತಿ ನೀಡುವ ವರದಿಯು ಮಕ್ಕಳಲ್ಲಿ ಕೆಮ್ಮು ಸಿರಪ್‌ ಬಳಕೆಗೆ ಹೊಸ ಮಾರ್ಗಸೂಚಿ ರೂಪಿಸಲು ಸಹಾಯ ಮಾಡಲಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • ‘ವೈದ್ಯರು ಈ ಹಿಂದೆಯೇ ನೀಡಿದ್ದ ಔಷಧ ಸಲಹಾ ಚೀಟಿಗಳನ್ನು ಬಳಸಿಕೊಂಡು ಔಷಧಿಗಳನ್ನು ವಿತರಿಸಬಾರದು. ಈ ಕುರಿತಂತೆ ಔಷಧ ನಿಯಂತ್ರಕರಿಗೆ ನಿರ್ದೇಶನ ನೀಡಲಾಗಿದೆ’ ಎಂದೂ ವೀಣಾ ಹೇಳಿದ್ದಾರೆ.
  • ಎಸ್‌ಆರ್‌–13 ಬ್ಯಾಚ್‌ನ ಕೋಲ್ಡ್ರಿಫ್‌ ಸಿರಪ್‌ ಸೇವಿಸಿದ ಕೆಲವು ಮಕ್ಕಳು ಬೇರೆ ರಾಜ್ಯಗಳಲ್ಲಿ ಮೃತಪಟ್ಟಿದ್ದರಿಂದ, ಡ್ರಗ್ಸ್‌ ನಿಯಂತ್ರಣ ಇಲಾಖೆಯು ರಾಜ್ಯದಲ್ಲಿ ಅದರ ಮಾರಾಟವನ್ನು ಸ್ಥಗಿತಗೊಳಿಸಿದೆ.
  • ವಿಷಕಾರಿ ಅಂಶವನ್ನು ಹೊಂದಿರುವ ಕೋಲ್ಡ್ರಿಫ್‌ ಕಂಪನಿಯ ಕೆಮ್ಮಿನ ಸಿರಪ್‌ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವಂತೆ ತೆಲಂಗಾಣ ಸರ್ಕಾರವು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಿದೆ.

ಪ್ರಚಲಿತ ವಿದ್ಯಮಾನಗಳು: 6ನೇ ಅಕ್ಟೋಬರ್ 2025

  • ಕೆಮ್ಮಿನ ಸಿರಪ್ ಗುಣಮಟ್ಟದ ಸುತ್ತ

ಸಂದರ್ಭ: 2019ರ ಮಳೆಗಾಲದಲ್ಲಿ ಜಮ್ಮು ಪ್ರಾಂತ್ಯದಲ್ಲಿ ಕೆಮ್ಮು, ನೆಗಡಿಯಿಂದ ಬಳಸುತ್ತಿದ್ದ ಕೆಲವು ಮಕ್ಕಳಿಗೆ ವೈದ್ಯರು ಕೆಮ್ಮಿನ ಸಿರಪ್ ನೀಡಿದ್ದರು. ಕೆಲವೇ ದಿನಗಳಲ್ಲಿ ಅವರ ಕಿಡ್ನಿಗಳು ವಿಫಲವಾಗಿ 11 ಮಕ್ಕಳು ಸತ್ತುಹೋದರು. ಸತ್ತವರು ಆರು ತಿಂಗಳಿನಿಂದ ಹಿಡಿದು 6 ವರ್ಷದ ಒಳಗಿನವರಾಗಿದ್ದರು. ಕೆಮ್ಮಿನ ಸಿರಪ್‌ನ ಮಾದರಿಗಳನ್ನು ಪರೀಕ್ಷಿಸಿದಾಗ, ಅದರಲ್ಲಿ ಡೈಎಥಿಲೀನ್ ಗ್ಲೈಕಾಲ್ (ಡಿಇಜಿ) ಎನ್ನುವ ಅಪಾಯಕಾರಿ ರಾಸಾಯನಿಕ ಇದ್ದುದು ದೃಢಪಟ್ಟಿತ್ತು.

  • ಅಂದಿನಿಂದಲೂ ಭಾರತದಲ್ಲಿ ತಯಾರಾಗುವ ಕೆಲವು ಕೆಮ್ಮಿನ ಸಿರಪ್‌ಗಳ ಗುಣಮಟ್ಟದ ಬಗ್ಗೆ ಪ್ರಶ್ನೆಗಳು ಏಳುತ್ತಲೇ ಇವೆ. ಅದನ್ನು ಪುಷ್ಟೀಕರಿಸುವಂತೆ, ದೇಶದ ಒಳಗೆ ಮತ್ತು ಹೊರದೇಶಗಳಲ್ಲಿ ಕೆಮ್ಮಿನ ಸಿರಪ್ ಕುಡಿದ ಮಕ್ಕಳು ಸಾವಿಗೀಡಾಗುವ ಪ್ರಕರಣಗಳು ಆಗಿಂದಾಗ್ಗೆ ವರದಿಯಾಗುತ್ತಲೇ ಇವೆ.
  • ಕೆಮ್ಮಿನ ಸಿರಪ್‌ಗಳಿಂದ ಸಾವುಗಳು ಸಂಭವಿಸುತ್ತಿರುವುದಕ್ಕೆ ಎರಡು ಮುಖ್ಯ ಕಾರಣಗಳನ್ನು ಗುರುತಿಸಲಾಗುತ್ತದೆ. ಮೊದಲನೆಯದು, ಸಿರಪ್ಗಳ ಕಳಪೆ ಗುಣಮಟ್ಟ. ಎರಡನೆಯದು, ಭಾರತದಲ್ಲಿ ಔಷಧಗಳ ಗುಣಮಟ್ಟ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳು.
  • ದೇಶದಲ್ಲಿ ಬೃಹತ್ ಪ್ರಮಾಣದಲ್ಲಿ ಔಷಧಗಳು ತಯಾರಾಗುತ್ತಿದ್ದರೂ ಅವುಗಳ ಗುಣಮಟ್ಟ ಪರೀಕ್ಷೆಗೆ ಸೂಕ್ತ ವ್ಯವಸ್ಥೆ ಇಲ್ಲ ಎನ್ನುವ ದೂರು ಇದೆ. ಹೊಸ ಔಷಧಗಳಿಗೆ ಅನುಮತಿ ನೀಡುವುದು, ಅವುಗಳ ಕ್ಲಿನಿಕಲ್ ಟ್ರಯಲ್ಸ್, ಆಮದು, ರಫ್ತು ಇತ್ಯಾದಿ ಅಧಿಕಾರ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಔಷಧಗಳ ಗುಣಮಟ್ಟ ನಿಯಂತ್ರಣದ ಉಸ್ತುವಾರಿಯನ್ನು ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಘ (ಸಿಡಿಎಸ್‌ಎಸ್‌ಒ) ವಹಿಸುತ್ತದೆ. ಗುಣಮಟ್ಟ ಪರೀಕ್ಷೆಗಾಗಿ ಏಳು ಕೇಂದ್ರೀಯ ಔಷಧ ಪರೀಕ್ಷಾ ಪ್ರಯೋಗಾಲಯಗಳಿವೆ. ಆದರೆ, ಇವುಗಳಲ್ಲಿ ಮೂಲಸೌಕರ್ಯಗಳು ಮತ್ತು ಸಿಬ್ಬಂದಿಯ ಕೊರತೆ ಇದ್ದು, ನಿರೀಕ್ಷೆಯಂತೆ ಗುಣಮಟ್ಟ ಪರೀಕ್ಷೆ ನಡೆಯುತ್ತಿಲ್ಲ ಎನ್ನುವ ಆರೋಪಗಳಿವೆ.
  • 2007 ಮತ್ತು 2020ರ ನಡುವೆ ದೇಶದ ಆರು ರಾಜ್ಯ ಮತ್ತು ಆರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಗ್ರಹಿಸಲಾಗಿದ್ದ 7,500 ಔಷಧ ಮಾದರಿಗಳು ಅಗತ್ಯ ಗುಣಮಟ್ಟ ಹೊಂದಿಲ್ಲ ಎಂದು ವರದಿಯಾಗಿತ್ತು. ಆದರೆ, ಹೀಗೆ ಕಳಪೆ ಗುಣಮಟ್ಟ ಎಂದು ಕಂಡುಬಂದ ನಂತರ ಅವುಗಳನ್ನು ಮಾರುಕಟ್ಟೆಯಿಂದ ವಾಪಸ್ ಪಡೆಯುವ ವ್ಯವಸ್ಥೆ ಇಲ್ಲ ಎನ್ನಲಾಗುತ್ತಿದೆ. ಇಂಥ ಕಳಪೆ ಔಷಧಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮಾರಾಟವಾಗುತ್ತವೆ ಎಂದೂ ಕೆಲವು ವರದಿಗಳು ಹೇಳುತ್ತವೆ.
  • ಕೇಂದ್ರದ ನಿರಾಕರಣೆ: ಆದರೆ, ಈಗಿನ ಪ್ರಕರಣ ಮತ್ತು ಈ ಹಿಂದಿನ ಪ್ರಕರಣಗಳಲ್ಲಿಯೂ ಕೆಮ್ಮಿನ ಸಿರಪ್‌ಗಳು ಕಳಪೆ ಗುಣಮಟ್ಟದಿಂದ ಕೂಡಿದ್ದುದೇ ಮಕ್ಕಳ ಸಾವಿಗೆ ಕಾರಣ ಎನ್ನುವ ವಾದವನ್ನು ಕೇಂದ್ರ ಸರ್ಕಾರವು ನಿರಾಕರಿಸುತ್ತಲೇ ಬಂದಿದೆ.
  • ಭಾರತವು ‘ಜಗತ್ತಿನ ಗುಣಮಟ್ಟದ ಔಷಧಾಲಯ’ ಆಗಿದೆ ಎಂದು ಪ್ರತಿಪಾದಿಸಿದ್ದ ಕೇಂದ್ರ ಸರ್ಕಾರವು ಗುಣಮಟ್ಟ ಕಾಯ್ದುಕೊಳ್ಳಲು ಸರ್ವ ಪ್ರಯತ್ನಗಳನ್ನೂ ಮಾಡುತ್ತಿರುವುದಾಗಿಯೂ ಹೇಳಿದೆ. ಸಾವುಗಳಿಗೆ ವೈದ್ಯರ ತಪ್ಪುಗಳು ಕಾರಣವಾಗಿರಬಹುದು ಎನ್ನುವುದು ಅದರ ವಾದ.
  • ಭಾರತದ ಔಷಧಗಳು ಕಳ‍ಪೆ ಎನ್ನುವುದರ ಬಗ್ಗೆ ಹೆಚ್ಚಿನ ವಿವರ ನೀಡುವಂತೆ ಡಬ್ಲ್ಯುಎಚ್‌ಒ ಅನ್ನು ಕೇಳಿದ್ದೇವೆ. ಆದರೆ, ನಮಗೆ ಇದುವರೆಗೂ ಅದರ ವಿವರಗಳು ಸಿಕ್ಕಿಲ್ಲ ಎಂದು 2023ರಲ್ಲಿ ಆಗಿನ ಕೇಂದ್ರ ಆರೋಗ್ಯ ಸಚಿವರಾಗಿದ್ದ ಮನ್ಸುಖ್‌ ಮಾಂಡವೀಯ ಹೇಳಿದ್ದರು.

ಮಾರಕವಾದ ಕೆಮ್ಮಿನ ಸಿರಪ್

  • l 2019–20ರಲ್ಲಿ ಜಮ್ಮು ಪ್ರದೇಶದಲ್ಲಿ ಕೆಮ್ಮಿನ ಸಿರಪ್‌ ಸೇವಿಸಿದ್ದ 11 ಮಕ್ಕಳು ಸಾವು. ಡಿಜಿಟಲ್‌ ವಿಷನ್‌ ಎಂಬ ಕಂಪನಿ ಈ ಸಿರಪ್ ತಯಾರಿಸಿತ್ತು. ಬಣ್ಣ, ಶಾಯಿ, ಬ್ರೇಕ್‌ ಆಯಿಲ್‌ ತಯಾರಿಕೆಗೆ ಬಳಸುವ ಡೈಎಥಿಲೀನ್‌ ಗ್ಲೈಕಾಲ್‌ (ಡಿಇಜಿ) ಎಂಬ ರಾಸಾಯನಿಕ ಈ ಸಿರಪ್‌ನಲ್ಲಿ ಇರುವುದು ಪತ್ತೆಯಾಗಿತ್ತು
  • l 2022ರಲ್ಲಿ ಪಶ್ಚಿಮ ಆಫ್ರಿಕಾದ ದೇಶವಾದ ಗ್ಯಾಂಬಿಯಾದಲ್ಲಿ ಭಾರತದಿಂದ ಆಮದು ಮಾಡಿಕೊಂಡಿದ್ದ ನಾಲ್ಕು ಕೆಮ್ಮಿನ ಸಿರಪ್‌ಗಳನ್ನು ಸೇವಿಸಿ 66 ಮಕ್ಕಳು ಮೃತಪಟ್ಟಿದ್ದರು. ಮೈಡೆನ್‌ ಫಾರ್ಮಾಸ್ಯುಟಿಕಲ್ಸ್‌ ಕಂಪನಿ ತಯಾರಿಸಿದ್ದ ಸಿರಪ್‌ನಲ್ಲಿ ಡೈಎಥಿಲೀನ್‌ ಗ್ಲೈಕಾಲ್‌ ಮಿತಿ ಮೀರಿದ ಪ್ರಮಾಣದಲ್ಲಿತ್ತು
  • l 2022ರ ಡಿಸೆಂಬರ್‌ನಲ್ಲಿ ಉಜ್ಬೇಕಿಸ್ತಾನದಲ್ಲಿ ಭಾರತದ ಕಂಪನಿಯೊಂದು ತಯಾರಿಸಿದ ಎರಡು ಕೆಮ್ಮಿನ ಸಿರಪ್‌ಗಳನ್ನು ಸೇವಿಸಿ 22 ಮಕ್ಕಳು ಕೊನೆಯುಸಿರೆಳೆದಿದ್ದರು. ಮ್ಯಾರಿಯನ್‌ ಬಯೊಟೆಕ್‌ ಕಂಪನಿ ತಯಾರಿಸಿದ್ದ ಈ ಸಿರಪ್‌ಗಳಲ್ಲಿ ಡಿಇಜಿ ಪ್ರಮಾಣ ಹೆಚ್ಚಿದ್ದುದು ಕಂಡು ಬಂದಿತ್ತು

ಕಳಪೆ, ಕಲಬೆರಕೆ

  • ಜಗತ್ತಿನ ಅತಿದೊಡ್ಡ ಔಷಧ ಉತ್ಪಾದಕ ರಾಷ್ಟ್ರಗಳಲ್ಲಿ ಭಾರತವು ಮೂರನೇ ಸ್ಥಾನ ಪಡೆದಿದೆ.
  • ದೇಶದಲ್ಲಿ ಸುಮಾರು ಮೂರು ಸಾವಿರ ಕಂಪನಿಗಳು 10 ಸಾವಿರಕ್ಕೂ ಹೆಚ್ಚು ತಯಾರಿಕಾ ಘಟಕಗಳನ್ನು ಹೊಂದಿದ್ದು, ಜೆನರಿಕ್ ಔಷಧ ತಯಾರಿಕೆಯಲ್ಲಿ ತೊಡಗಿವೆ. ಹೀಗೆ ಬೃಹತ್ ಪ್ರಮಾಣದಲ್ಲಿ ತಯಾರಾಗುತ್ತಿರುವ ಔಷಧಗಳನ್ನು ಕಡಿಮೆ ಬೆಲೆಗೆ ವಿದೇಶಗಳಿಗೆ ರಫ್ತು ಮಾಡುತ್ತಿದೆ. 2024–25ರಲ್ಲಿ ಭಾರತವು ರಫ್ತು ಮಾಡಿರುವ ಔಷಧಗಳ ಮೌಲ್ಯ ₹2.66 ಲಕ್ಷ ಕೋಟಿ (3,000 ಕೋಟಿ ಡಾಲರ್‌).
  • ಜಾಗತಿಕ ಲಸಿಕೆಗಳ ಬೇಡಿಕೆಯಲ್ಲಿ ಶೇ 50, ಅಮೆರಿಕದ ಜೆನರಿಕ್ ಔಷಧಗಳ ಪೈಕಿ ಶೇ 40ರಷ್ಟು ಮತ್ತು ಇಂಗ್ಲೆಂಡ್‌ನ ಎಲ್ಲ ರೀತಿಯ ಔಷಧಗಳ ಪೈಕಿ ಶೇ 25ರಷ್ಟನ್ನು ಭಾರತವೇ ಪೂರೈಸುತ್ತಿದೆ. ಕಡಿಮೆ ಆದಾಯ ಮತ್ತು ಮಧ್ಯಮ ಆದಾಯದ ಅನೇಕ ದೇಶಗಳಿಗೆ, ವೈದ್ಯರ ಚೀಟಿ ಇಲ್ಲದೇ ಮಾರಾಟವಾಗುವ (ಓವರ್ ದ ಕೌಂಟರ್) ಔಷಧಗಳಲ್ಲಿ ಗಣನೀಯ ಪಾಲನ್ನು ಭಾರತವೇ ಪೂರೈಸುತ್ತದೆ. 200ರಷ್ಟು ದೇಶಗಳಿಗೆ ಭಾರತವು ಔಷಧ ಮತ್ತು ಲಸಿಕೆಗಳನ್ನು ರಫ್ತು ಮಾಡುತ್ತದೆ. ಎಚ್‌ಐವಿ ಚಿಕಿತ್ಸೆಯಲ್ಲಿ ಬಳಸಲಾಗುವ ಔಷಧಗಳ ಪೈಕಿ ಮೂರನೇ ಎರಡರಷ್ಟು ಪಾಲನ್ನು ಭಾರತವೇ ಪೂರೈಸುತ್ತದೆ.
  • ಆದರೆ, ಭಾರತದಲ್ಲಿ ತಯಾರಾಗುವ ಔಷಧಗಳ ಗುಣಮಟ್ಟದ ಕುರಿತು ಜಾಗತಿಕ ಮಟ್ಟದಲ್ಲಿ ಆಗಾಗ ಆಕ್ಷೇಪಗಳು ಕೇಳಿ ಬಂದಿವೆ. ಹಲವು ದೇಶಗಳು ಭಾರತದಿಂದ ಆಮದು ಮಾಡಲಾಗುವ ಕೆಲವು ಔಷಧಗಳಿಗೆ ನಿಷೇಧ ಹೇರಿದ ಉದಾಹರಣೆಗಳೂ ಇವೆ. ಐರೋಪ್ಯ ಒಕ್ಕೂಟವು ಭಾರತದ 700 ಜೆನರಿಕ್‌ ಔಷಧಗಳನ್ನು ನಿಷೇಧಿಸಿದ್ದು ತೀರಾ ಇತ್ತೀಚೆಗಿನ ಉದಾಹರಣೆ. ವೈಜ್ಞಾನಿಕ ಕಾರಣಗಳಿಗಾಗಿ ಔಷಧಗಳನ್ನು ನಿರ್ಬಂಧಿಸಲಾಗಿದೆ ಎಂದು ಒಕ್ಕೂಟ ಹೇಳಿದೆ.
  • ಭಾರತದ ಕಂಪನಿಗಳು ತಯಾರಿಸಿದ ಕೆಮ್ಮಿನ ಸಿರಪ್‌ಗಳನ್ನು ಕುಡಿದು ಗ್ಯಾಂಬಿಯಾ ಮತ್ತು ಉಜ್ಬೇಕಿಸ್ತಾನದಲ್ಲಿ ಮಕ್ಕಳು ಮೃತಪಟ್ಟಾಗ ಈ ಸಿರಪ್‌ಗಳನ್ನು ಬಳಸುವುದರ ವಿರುದ್ಧ ಜಗತ್ತಿನ ಇತರ ದೇಶಗಳಿಗೆ ವಿಶ್ವ ಆರೋಗ್ಯ ಸಂಸ್ಥೆಯೇ (ಡಬ್ಲ್ಯುಎಚ್‌ಒ) ಎಚ್ಚರಿಕೆ ನೀಡಿತ್ತು. ಈ ಎರಡು ದೇಶಗಳಲ್ಲಿ ನಡೆದ ಘಟನೆಯ ಬಳಿಕ ಹಲವು ರಾಷ್ಟ್ರಗಳು ಭಾರತದ ಔಷಧಗಳಿಗೆ ನಿಷೇಧ ಹೇರಿದ್ದವು.
  • ಔಷಧಗಳ ತಯಾರಿಕಾ ಹಂತದಲ್ಲಿನ ಕೊರತೆಗಳ ಕಾರಣಕ್ಕೆ ಅಮೆರಿಕ ಕೂಡ ಈ ಹಿಂದೆ ಭಾರತ ಪೂರೈಸುತ್ತಿದ್ದ ಕೆಲವು ಜೆನರಿಕ್‌ ಔಷಧಗಳಿಗೆ (ರ‍್ಯಾನ್‌ಬಾಕ್ಸಿ ಕಂಪನಿಯ ಕೆಲವು ಔಷಧಗಳು) ನಿರ್ಬಂಧ ಹೇರಿತ್ತು. ಅಲ್ಲದೇ ಈ ಕಂಪನಿಗೆ ದೊಡ್ಡ ಮೊತ್ತದ ದಂಡವನ್ನೂ ವಿಧಿಸಿತ್ತು.
  • 2023ರಲ್ಲಿ ಮಾರ್ಷಲ್‌ ದ್ವೀಪಗಳು ಮತ್ತು ಮೈಕ್ರೊನೇಸಿಯಾಗೆ ಭಾರತದಿಂದ ಪೂರೈಕೆಯಾಗಿದ್ದ ಔಷಧಗಳು ಕಲಬೆರಕೆಗೊಂಡಿವೆ ಎಂಬ ಸಂಗತಿ ಆಸ್ಟ್ರೇಲಿಯಾದ ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದ್ದರಿಂದ, ಆ ಔಷಧಗಳನ್ನು ಭಾರತ ವಾಪಸ್‌ ತರಿಸಿಕೊಂಡಿತ್ತು.
  • 2023ರ ಆರಂಭದಲ್ಲಿ ಲೈಬೇರಿಯಾ ದೇಶವು ಭಾರತದಿಂದ ಆಮದು ಮಾಡಿಕೊಂಡಿದ್ದ ಕೆಮ್ಮಿನ ಸಿರಪ್‌ ಕೂಡ ಕಲಬೆರಕೆಗೊಂಡಿದ್ದು ದೃಢಪಟ್ಟಿತ್ತು. ಅದೃಷ್ಟವಶಾತ್‌ ಅಲ್ಲಿ ಯಾವುದೇ ಸಾವು ಸಂಭವಿಸಿರಲಿಲ್ಲ.

ಅಗ್ಗದ ವಿಷಕಾರಿ ರಾಸಾಯನಿಕ ಬಳಕೆ

  • ಔಷಧಗಳ ಕಚ್ಚಾ ವಸ್ತುಗಳು ದುಬಾರಿ ಎಂಬ ಕಾರಣಕ್ಕೆ ಕೆಲವು ಕಂಪನಿಗಳು ಅವುಗಳಿಗೆ ನಕಲಿ ರಾಸಾಯನಿಕ ವಸ್ತುಗಳನ್ನು ಬಳಸುತ್ತವೆ ಎಂಬುದು ತಜ್ಞರ ವಿವರಣೆ.
  • ಉದಾಹರಣೆಗೆ ಕೆಮ್ಮಿನ ಸಿರಪ್‌ನಲ್ಲಿ ಸಾಮಾನ್ಯವಾಗಿ ಪ್ರೊಪಿಲೀನ್‌ ಗ್ಲೈಕಾಲ್‌ ಅನ್ನು ಬಳಸಲಾಗುತ್ತದೆ. ಆದರೆ, ಇದು ಕೊಂಚ ದುಬಾರಿ. ಹೀಗಾಗಿ, ಅಗ್ಗದ ಎಥಿಲೀನ್‌ ಗ್ಲೈಕಾಲ್‌ ಮತ್ತು ಡೈಎಥಿಲೀನ್‌ ಗ್ಲೈಕಾಲ್‌ ಅನ್ನು ಪರ್ಯಾಯವಾಗಿ ಬಳಸಲಾಗುತ್ತಿದೆ.
  • ವಿಷಕಾರಿ ರಾಸಾಯನಿಕಗಳಾಗಿರುವ ಬ್ರೇಕ್‌ ಆಯಿಲ್‌ ಹಾಗೂ ಇನ್ನಿತರ ವಸ್ತುಗಳ ತಯಾರಿಕೆಯಲ್ಲಿ ಬಳಸುವ ಇವುಗಳು ಮನುಷ್ಯರ ಸೇವನೆಗೆ ಯೋಗ್ಯವಲ್ಲ ಎಂದು ವಿವರಿಸುತ್ತಾರೆ ಅವರು.
  • ರಾಜ್ಯಪಾಲರ ವಿರುದ್ಧಸುಪ್ರೀಂಗೆ
  • ಕಲೈನಾರ್‌ ವಿಶ್ವವಿದ್ಯಾಲಯ ಮಸೂದೆ–2025ಕ್ಕೆ ಅನುಮೋದನೆ ನೀಡದೆ ವಿಳಂಬ ಮಾಡುತ್ತಿರುವ ರಾಜ್ಯಪಾಲರ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.
  • ‘ಮಸೂದೆ ಕುರಿತ ನಿರ್ಧಾರವನ್ನು ಪ್ರಕಟಿಸಲು ನಿರ್ದೇಶನ ನೀಡುವಂತೆ ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಜೊತೆಗೆ, ಸಚಿವ ಸಂಪುಟದ ಸಲಹೆಯ ಅನುಸಾರ ಮತ್ತು ಸಂವಿಧಾನದ 200ನೇ ವಿಧಿಯ ಪ್ರಕಾರ ನಡೆದುಕೊಳ್ಳುವಂತೆ ರಾಜ್ಯಪಾಲರಿಗೆ ಸೂಚಿಸುವಂತೆಯೂತಿಳಿಸಿದೆ.
  • ಚಿಲಿ, ಪೆರು ಜೊತೆ ಶೀಘ್ರ ವ್ಯಾಪಾರ ಮಾತುಕತೆ

ಸಂದರ್ಭ: ಭಾರತ ಹಾಗೂ ಚಿಲಿ, ಪೆರು ದೇಶಗಳ ನಡುವಿನ ಮುಂದಿನ ಸುತ್ತಿನ ಪ್ರಸ್ತಾವಿತ ವ್ಯಾಪಾರ ಒಪ್ಪಂದ ಮಾತುಕತೆಯು ಕ್ರಮವಾಗಿ ಅಕ್ಟೋಬರ್ ಹಾಗೂ ನವೆಂಬರ್‌ ತಿಂಗಳಿನಲ್ಲಿ ನಡೆಯಲಿದೆ.

  • ಅಕ್ಟೋಬರ್‌ 27ರಿಂದ ಚಿಲಿ ದೇಶ ದೊಂದಿಗಿನ  5 ದಿನದ ಮಾತುಕತೆಯು ಸ್ಯಾಂಟಿಯಾಗೊದಲ್ಲಿ ಆರಂಭವಾಗಲಿದೆ. ನವೆಂಬರ್‌ 3ರಿಂದ ಪೆರು ಜೊತೆ ಮೂರು ದಿನಗಳ ಮಾತುಕತೆ ಲಿಮಾದಲ್ಲಿ ನಡೆಯ ಲಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  • ಚಿಲಿ ಜೊತೆ ನಡೆಯಲಿರುವ ಮಾತು ಕತೆಯು ಎರಡನೇ ಸುತ್ತಿನದ್ದು, ಪೆರು ಜೊತೆಗಿನ ಮಾತುಕತೆ ಎಂಟನೇ ಸುತ್ತಿನ ದ್ದಾಗಿದೆ. 2006ರಲ್ಲಿ ಭಾರತ ಮತ್ತು ಚಿಲಿ ಆದ್ಯತಾ ವ್ಯಾಪಾರ ಒಪ್ಪಂದವನ್ನು (ಪಿಟಿಎ) ಮಾಡಿಕೊಂಡಿದ್ದವು. ಇದೀಗ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ (ಸಿಇಪಿಎ) ಮುಂದಾಗಿವೆ.
  • 2024–25ರ ಆರ್ಥಿಕ ವರ್ಷದಲ್ಲಿ ಭಾರತವು ಚಿಲಿಗೆ ₹10,200 ಕೋಟಿಯಷ್ಟು ಮೌಲ್ಯದ ಸರಕುಗಳನ್ನು ರಫ್ತು ಮಾಡಿತ್ತು. ಇದು 2023–24ರ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ 2.46ರಷ್ಟು ಕಡಿಮೆ. ಕಳೆದ ಆರ್ಥಿಕ ವರ್ಷದಲ್ಲಿ ಆಮದು ಪ್ರಮಾಣ ಶೇ 72ರಷ್ಟು ಏರಿಕೆಯಾಗಿ, ₹23 ಸಾವಿರ ಕೋಟಿಯಷ್ಟಾಗಿತ್ತು.
  • ಪೆರುಗೆ ದೇಶದ ರಫ್ತು ಶೇ 9ರಷ್ಟು ಹೆಚ್ಚಳವಾಗಿದ್ದು,₹8,870 ಕೋಟಿಯಷ್ಟಾಗಿತ್ತು. ಆಮದು ಪ್ರಮಾಣ ಶೇ 60ರಷ್ಟು ಏರಿಕೆಯಾಗಿ, ₹44,200 ಕೋಟಿಯಾಗಿದೆ.
  • ಭಾರತಕ್ಕೆ ಕಚ್ಚಾ ತೈಲ ಪೂರೈಕೆ: ರಷ್ಯಾ ನಂ.1

ಸಂದರ್ಭ: ಭಾರತಕ್ಕೆ ಕಚ್ಚಾ ತೈಲ ಪೂರೈಸುವ ರಾಷ್ಟ್ರಗಳ ಸಾಲಿನಲ್ಲಿ ರಷ್ಯಾ ಮುಂದಿನ ದಿನಗಳಲ್ಲಿಯೂ ಮೊದಲ ಸ್ಥಾನದಲ್ಲಿ ಇರಲಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

  • ಸೆಪ್ಟೆಂಬರ್‌ನಲ್ಲಿ ರಷ್ಯಾದಿಂದ ಕಚ್ಚಾ ತೈಲ ಆಮದು ಪ್ರಮಾಣ ಸ್ವಲ್ಪ ಕಡಿಮೆ ಆಗಿದೆ. ರಷ್ಯಾದಿಂದ ತೈಲ ಖರೀದಿಸುವುದರ ವಿಚಾರವಾಗಿ ಅಮೆರಿಕ ಹೇರಿರುವ ಒತ್ತಡದ ನಡುವೆಯೂ ದೇಶದ ಒಟ್ಟು ತೈಲ ಖರೀದಿಯಲ್ಲಿ ರಷ್ಯಾದ ಪಾಲು ಮೂರನೇ ಒಂದು ಭಾಗದಷ್ಟಿದೆ.
  • ಜಾಗತಿಕ ವ್ಯಾಪಾರ ವಿಶ್ಲೇಷಣಾ ಸಂಸ್ಥೆ ಕೆಪ್ಲರ್‌ ಪ್ರಕಾರ, ಸೆಪ್ಟೆಂಬರ್‌ ನಲ್ಲಿ ಪ್ರತಿ ದಿನ ಅಂದಾಜು 47 ಲಕ್ಷ ಬ್ಯಾರೆಲ್‌ನಷ್ಟು ಕಚ್ಚಾ ತೈಲವನ್ನು ಭಾರತ ಖರೀದಿಸಿದೆ. ರಷ್ಯಾದಿಂದ 16 ಲಕ್ಷ ಬ್ಯಾರೆಲ್ ಖರೀದಿಸಿದೆ. ಇದು ಒಟ್ಟು ಖರೀದಿಯಲ್ಲಿ ಶೇ 34ರಷ್ಟಾಗಿದೆ. ಇರಾಕ್‌ನಿಂದ 8.81 ಲಕ್ಷ ಬ್ಯಾರೆಲ್, ಸೌದಿ ಅರೇಬಿಯಾ 6.03 ಲಕ್ಷ ಬ್ಯಾರೆಲ್, ಯುಎಇಯಿಂದ 5.94 ಲಕ್ಷ ಬ್ಯಾರೆಲ್ ಮತ್ತು ಅಮೆರಿಕದಿಂದ ನಿತ್ಯ 2.06 ಲಕ್ಷ ಬ್ಯಾರೆಲ್ ಖರೀದಿಸುತ್ತಿದೆ.
  • 2022ರಲ್ಲಿ ರಷ್ಯಾ–ಉಕ್ರೇನ್‌ ಯುದ್ಧ ಆರಂಭವಾದ ಬಳಿಕ ಭಾರತವು ರಷ್ಯಾದಿಂದ ಹೆಚ್ಚಿನ ಪ್ರಮಾಣದಲ್ಲಿ ಕಚ್ಚಾ ತೈಲ ಖರೀದಿಸುತ್ತಿದೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ಆರಂಭಿಸುವ ಮೊದಲು ಭಾರತವು ರಷ್ಯಾದಿಂದ ಖರೀದಿಸುವ ತೈಲದ ಪ್ರಮಾಣವು ಒಟ್ಟು ಖರೀದಿಯ ಶೇ 1ರಷ್ಟು ಮಾತ್ರ ಆಗಿತ್ತು. ಅದು ಈಗ ಶೇ 40ಕ್ಕೆ ಹೆಚ್ಚಿದೆ.

ಕಚ್ಚಾ ತೈಲ ಉತ್ಪಾದನೆ ಹೆಚ್ಚಳಕ್ಕೆ ನಿರ್ಧಾರ

  • ಕಚ್ಚಾ ತೈಲ ಉತ್ಪಾದನೆಯನ್ನು ಪ್ರತಿನಿತ್ಯ 1.37 ಲಕ್ಷ ಬ್ಯಾರೆಲ್‌ನಷ್ಟು ಹೆಚ್ಚಿಸಲು ಒಪೆಕ್‌+ ಒಕ್ಕೂಟದ ಎಂಟು ರಾಷ್ಟ್ರಗಳು ಭಾನುವಾರ ನಡೆದ ಸಭೆಯಲ್ಲಿ ನಿರ್ಧರಿಸಿವೆ. ನವೆಂಬರ್‌ನಲ್ಲಿ ಈ ಹೆಚ್ಚಳ ಆಗಲಿದೆ.
  • ಒಪೆಕ್‌+ ಒಕ್ಕೂಟದ ಸದಸ್ಯ ರಾಷ್ಟ್ರಗಳಾದ ಸೌದಿ ಅರೇಬಿಯಾ, ರಷ್ಯಾ ಸೇರಿ ಆರು ರಾಷ್ಟ್ರಗಳು ಉತ್ಪಾದನೆ ಹೆಚ್ಚು ಮಾಡಲು ತೀರ್ಮಾನಿಸಿವೆ. ಮಾರುಕಟ್ಟೆಯಲ್ಲಿ ತಮ್ಮ ಪಾಲನ್ನು ಹೆಚ್ಚಿಸಿಕೊಳ್ಳುವ ಗುರಿಯೊಂದಿಗೆ ಉತ್ಪಾದನೆ ಹೆಚ್ಚಿಸುವ ತೀರ್ಮಾನ ತೆಗೆದುಕೊಂಡಿವೆ.
  • ಸಿಮ್ರನ್‌, ಪ್ರೀತಿ, ನವದೀಪ್ಗೆ ಬೆಳ್ಳಿ : ವಿಶ್ವ ಪ್ಯಾರಾ ಅಥ್ಲೆಟಿಕ್ಸ್ಚಾಂಪಿಯನ್ಷಿಪ್‌: ಭಾರತಕ್ಕೆ 22 ಪದಕ

ಸಂದರ್ಭ: ಬಳಲಿಕೆ ಮತ್ತು ಬೆನ್ನುನೋವಿನ ನಡುವೆಯೂ ಸ್ಫೂರ್ತಿಯಿಂದ ಓಡಿದ ಸಿಮ್ರನ್ ಶರ್ಮಾ ಅವರು ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಮಹಿಳೆಯರ 200 ಮೀ. (ಟಿ12 ಕ್ಲಾಸ್) ಓಟದಲ್ಲಿ ಬೆಳ್ಳಿ ಪದಕ ಗೆದ್ದರು. ಈ ಚಾಂಪಿಯನ್‌ಷಿಪ್‌ನಲ್ಲಿ ಭಾರತ ದಾಖಲೆಯ 22 ಪದಕಗಳನ್ನು ಗೆದ್ದುಕೊಂಡಿತು.

  • ಕೊನೆಯ ದಿನ ಆತಿಥೇಯ ಅಥ್ಲೀಟುಗಳು ಮೂರು ಬೆಳ್ಳಿ ಮತ್ತು ಒಂದು ಕಂಚಿನ ಪದಕಗಳನ್ನು ಪಡೆದರು. ಭಾರತ ಒಟ್ಟು 6 ಚಿನ್ನ, 9 ಬೆಳ್ಳಿ ಮತ್ತು 7 ಕಂಚಿನ ಪದಕಗಳನ್ನು ಗಳಿಸಿ ಪದಕ ಪಟ್ಟಿಯಲ್ಲಿ 10ನೇ ಸ್ಥಾನ ಪಡೆಯಿತು. ಆದರೆ ಶನಿವಾರದ ಸ್ಪರ್ಧೆಯಲ್ಲಿ ಪ್ರವೀಣ್‌ ಮತ್ತು ಭಾನುವಾರ ನವದೀಪ್‌ ತಮ್ಮ ಸ್ಪರ್ಧೆಗಳಲ್ಲಿ ಚಿನ್ನ ಗೆದ್ದಿದ್ದಲ್ಲಿ ಭಾರತ ನಾಲ್ಕನೇ ಸ್ಥಾನಕ್ಕೇರುತಿತ್ತು.‌
  • ಬ್ರೆಜಿಲ್‌ ತಂಡ 44 ಪದಕಗಳೊಡನೆ (15–20–9) ಪದಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರೆ, ಚೀನಾ 52 ಪದಕಗಳೊಡನೆ (13–22–17) ಎರಡನೇ ಸ್ಥಾನ ಗಳಿಸಿತು. ಇರಾನ್ 16 ಪದಕ ಗಳಿಸಿ (9–2–5) ಮೂರನೇ ಸ್ಥಾನದಲ್ಲಿ ಗಳಿಸಿತು.
  • ಮಹಿಳೆಯರ 100 ಮೀ. (ಟಿ35) ಓಟದಲ್ಲಿ ಪ್ರೀತಿ ಪಾಲ್‌ ಗಟ್ಟಿ ಮನೋಬಲ ಪ್ರದರ್ಶಿಸಿ ಬೆಳ್ಳಿ ಪದಕ ಗೆದ್ದರು. ಈ ಓಟದ ಆರಂಭದಲ್ಲಿ ಸ್ಟಾರ್ಟರ್‌ ಅವರ ಪಿಸ್ತೂಲ್ ಕೈಕೊಟ್ಟಿದ್ದರಿಂದ ಅರ್ಧ ಓಟದಿಂದ ಹಿಂತಿರುಗಿ ಮತ್ತೊಮ್ಮೆ ಓಡಬೇಕಾಯಿತು. ಈ ಕ್ಲಾಸ್‌ನಲ್ಲಿ ಅಥ್ಲೀಟುಗಳು ಸಹಾಯಕರ ನೆರವು ಪಡೆಯಬೇಕಾಗುತ್ತದೆ. ಸೆರೆಬ್ರಲ್ ಪಾಲ್ಸಿಯಂಥ ಸಮಸ್ಯೆಯಿರುವವರು ಇಲ್ಲಿ ಕಣದಲ್ಲಿರುತ್ತಾರೆ.
  • ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ ಚಿನ್ನ ವಿಜೇತ ನವದೀಪ್‌ ಸಿಂಗ್‌ ಎಫ್‌41 ಜಾವೆಲಿನ್ ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಫೇವರಿಟ್‌ ಆಗಿದ್ದರು. ಆದರೆ ಅವರೂ ಬೆಳ್ಳಿ ಪದಕ ಗೆಲ್ಲಲಷ್ಟೇ ಶಕ್ತರಾದರು. 24 ವರ್ಷ ವಯಸ್ಸಿನ ನವದೀಪ್ 45.46 ಮೀ. ದೂರ ಎಸೆದರು. ಇರಾನ್‌ನ ಸದೆಗ್ ಬಿಯೆತ್ ಸಯಾ (48.46) ಅವರಿಗೆ ಚಿನ್ನ ಗೆಲ್ಲುವ ಹಾದಿಯಲ್ಲಿ ಪೈಪೋಟಿ ಎದುರಾಗಲಿಲ್ಲ.
  • ಪುರುಷರ 200 ಮೀ. (ಟಿ44 ಕ್ಲಾಸ್‌) ಓಟದಲ್ಲಿ ಸಂದೀಪ್‌ 23.60 ಸೆ.ಗಳಲ್ಲಿ ಓಡಿ ಕಂಚಿನ ಪದಕ ಗೆದ್ದರು. ಈ ವಿಭಾಗದಲ್ಲಿ ಓಡುವ ಅಥ್ಲೀಟುಗಳ ಒಂದು ಕಾಲು ಮಾತ್ರ ಸುಸ್ಥಿತಿಯಲ್ಲಿದ್ದು, ಇನ್ನೊಂದು ಮೊಣಕಾಲಿನವರೆಗೆ ಮಾತ್ರ ಇರುತ್ತದೆ.
  • ಎರಡನೇ ಪದಕ: ಟಿ12ನಲ್ಲಿ 100 ಮೀ. ಚಿನ್ನ ಗೆದ್ದಿದ್ದ ಉತ್ತರಪ್ರದೇಶದ ಸಿಮ್ರನ್‌ 200 ಮೀ. ಓಟವನ್ನು 24.46 ಸೆ.ಗಳಲ್ಲಿ ಕ್ರಮಿಸಿ ಬೆಳ್ಳಿ ಗೆದ್ದರು. ಇದು ಅವರಿಗೆ ವಿಶ್ವಕೂಟದಲ್ಲಿ ಮೂರನೇ ಪದಕ. ಕೋಬೆಯಲ್ಲಿ (2024) ಅವರು ಇದೇ ಓಟದಲ್ಲಿ ಸ್ವರ್ಣ ಗೆದ್ದಿದ್ದರು. ಬ್ರೆಜಿಲ್‌ನ ಕ್ಲಾರಾ ಬಾರೋಸ್‌ ಡಿಸಿಲ್ವ (24.42 ಸೆ.) ಚಿನ್ನ ಗೆದ್ದರು.
  • ಮಹಿಳೆಯರ ಟಿ35 ಕ್ಲಾಸ್‌ನ 100 ಮೀ. ಓಟದಲ್ಲಿ ಪ್ರೀತಿ ಪಾಲ್‌ 14.33 ಸೆ.ಗಳಲ್ಲಿ ಗುರಿಮುಟ್ಟಿದರು. ಚೀನಾದ ಗುವೊ (14.24) ಮೊದಲಿಗರಾದರು.
  • ಶ್ರೀಯಾಂಶಿಗೆ ಚೊಚ್ಚಲ ಪ್ರಶಸ್ತಿ

ಸಂದರ್ಭ: ಭಾರತದ ಯುವ ಪ್ರತಿಭಾನ್ವಿತ  ಆಟಗಾರ್ತಿ ಶ್ರೀಯಾಂಶಿ ವಲಿಶೆಟ್ಟಿ ಅವರು ಬಿಡಬ್ಲ್ಯುಎಫ್ ಸೂಪರ್‌ 100 ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ ಪ್ರಶಸ್ತಿ ಗೆದ್ದುಕೊಂಡರು.

  • ಫೈನಲ್‌ನಲ್ಲಿ ತೆಲಂಗಾಣದ 18 ವರ್ಷದ ಶ್ರೀಯಾಂಶಿ 15-21, 22-20, 21-7ರಿಂದ ಭಾರತದವರೇ ಆದ ತಸ್ನೀಮ್ ಮೀರ್ ವಿರುದ್ಧ ಜಯಿಸಿದರು.
  • ಪಂದ್ಯವು 49 ನಿಮಿಷ ನಡೆಯಿತು.  ಮೊದಲ ಗೇಮ್‌ನಲ್ಲಿ ಶ್ರೀಯಾಂಶಿ ಸೋತರು. ಈ ಗೇಮ್‌ ಆರಂಭದಲ್ಲಿ ಶ್ರೀಯಾಂಶಿ 8–4ರ ಮುನ್ನಡೆ ಹೊಂದಿದ್ದರು. ಇದರ ನಂತರ ಚೇತರಿಸಿಕೊಂಡ ತಸ್ನೀಂ ಅವರು 14–9ರ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾದರು. ಅಲ್ಲಿಂದ ಮುಂದೆಯೂ ಬಿಗಿಹಿಡಿತ ಸಾಧಿಸಿದ ಗುಜರಾತ್ ಹುಡುಗಿ ತಸ್ನೀಂ ದೊಡ್ಡ ಅಂತರದ ಜಯ ಸಾಧಿಸಿದರು.
  • ಎರಡನೇ  ಗೇಮ್‌ನಲ್ಲಿಯೂ ಕಠಿಣ ಪೈಪೋಟಿ ಎದುರಿಸಿದ ಅವರು ಟೈಬ್ರೇಕರ್‌ನಲ್ಲಿ ಮೇಲುಗೈ ಸಾಧಿಸಿದರು. ನಂತರ ಕೊನೆಯ ಮತ್ತು ನಿರ್ಣಾಯಕ ಗೇಮ್‌ನಲ್ಲಿ ಪಾರಮ್ಯ ಮೆರೆದ ಶ್ರೀಯಾಂಶಿ ತಮ್ಮ ಎದುರಾಳಿಯನ್ನು ಸೋಲಿಸಿದರು. ಶ್ರೀಯಾಂಶಿ ಅವರು ಪುಲ್ಲೇಲ ಗೋಪಿಚಂದ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಪ್ರಚಲಿತ ವಿದ್ಯಮಾನಗಳು: 5ನೇ ಅಕ್ಟೋಬರ್ 2025

ಸಾವಿಗೆ ಕೆಮ್ಮಿನ ಸಿರಪ್‌ ನಂಟು ತನಿಖೆ ಚುರುಕು

ನವದೆಹಲಿ/ಹೈದರಾಬಾದ್/ಚೆನ್ನೈ (ರಾಯಿಟರ್ಸ್‌/ಪಿಟಿಐ): ಮಧ್ಯಪ್ರದೇಶ ಹಾಗೂ ರಾಜಸ್ಥಾನ ದಲ್ಲಿ ಒಟ್ಟು 11 ಮಕ್ಕಳ ಸಾವಿಗೆ ಕಲುಷಿತ ಕೆಮ್ಮಿನ ಸಿರಪ್‌ ಕಾರಣವೇ ಎಂಬ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ತಮಿಳುನಾಡಿನಲ್ಲಿ ತಯಾರಾದ ಕೆಮ್ಮಿನ ಸಿರಪ್‌ ‘ಕೋಲ್ಡ್ರಿಫ್’ನ ಮಾದರಿಗಳಲ್ಲಿ ‘ಡೈಇಥಿಲೀನ್ ಗ್ಲೈಕೋಲ್(ಡಿಇಜಿ) ಎಂಬ ದ್ರಾವಣದ ಪ್ರಮಾಣ ಅನುಮತಿಸಿದ ಮಿತಿಗಿಂತಲೂ ಅಧಿಕ ಮಟ್ಟದಲ್ಲಿ ಇತ್ತು ಎಂಬುದು ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ, ಮಕ್ಕಳ ಸಾವಿಗೂ, ಈ ಕೆಮ್ಮಿನ ಸಿರಪ್‌ಗೂ ನಂಟು ಇದೆಯೇ ಎಂಬುದನ್ನು ಪತ್ತೆ ಮಾಡಲು ತನಿಖೆ ನಡೆಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. ಕಾಂಚಿಪುರಂ ಜಿಲ್ಲೆಯ ಸುಂಗುವರಛತ್ರಂನಲ್ಲಿರುವ ಸ್ರೇಸನ್ ಫಾರ್ಮಾ ಕಂಪನಿಯ ಘಟಕದಲ್ಲಿ ‘ಕೋಲ್ಡ್ರಿಫ್‌’ ಅನ್ನು ತಯಾರಿಸಲಾಗುತ್ತಿದೆ. ಈ ಸಿರಪ್‌ಅನ್ನು ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಪುದುಚೇರಿಗೆ ಪೂರೈಸ ಲಾಗುತ್ತಿದೆ.

ಮಧ್ಯಪ್ರದೇಶದ ಛಿಂದ್ವಾರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ 9 ಮಕ್ಕಳು ಹಾಗೂ ರಾಜಸ್ಥಾನದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಈ ಸಾವುಗಳಿಗೆ ಕೆಮ್ಮಿನ ಸಿರಪ್‌ ಸೇವನೆಯೇ ಕಾರಣ ಎಂಬ ಶಂಕೆಯೂ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ, ಸಚಿವಾಲಯ ತನಿಖೆಗೆ ಮುಂದಾಗಿದೆ. ‘ಡಿಇಜಿ’ ವಿಷಕಾರಿ ದ್ರಾವಣ ವಾಗಿದ್ದು, ಅದನ್ನು ವಿವಿಧ ಕೈಗಾರಿಕೆಗಳಲ್ಲಿ ಬಳಸಲಾಗುತ್ತದೆ. ಅನೇಕ ದೇಶ ಗಳಲ್ಲಿ ಸಂಭವಿಸಿದ ಸಾವುಗಳಿಗೆ ಈ ದ್ರಾವಣ ಕಾರಣ ಎಂದು ಹೇಳಲಾಗು ತ್ತಿದೆ. ಅನುಮತಿಸಿದ ಮಿತಿಗಿಂತಲೂ ಅಧಿಕ ಪ್ರಮಾಣದಲ್ಲಿ ‘ಡಿಇಜಿ’ ಹಾಗೂ ಇಥಿಲೀನ್‌ ಗ್ಲೈಕೋಲ್‌(ಇಜಿ) ಬಳಕೆ ಮೂತ್ರಪಿಂಡಕ್ಕೆ ಹಾನಿ ತರುತ್ತದೆ.

ಪರಿಶೀಲನೆ: ಆರು ರಾಜ್ಯಗಳಲ್ಲಿರುವ 19 ಔಷಧ ತಯಾರಿಕೆ ಘಟಕಗಳಲ್ಲಿ ಉತ್ಪಾದನೆಯಾಗುತ್ತಿರುವ ಕೆಮ್ಮಿನ ಸಿರಪ್‌ ಹಾಗೂ ಆ್ಯಂಟಿಬಯೊಟಿಕ್‌ ಸೇರಿ ಇತರ ಔಷಧಿಗಳು ಎಷ್ಟರ ಮಟ್ಟಿಗೆ ಸುರಕ್ಷಿತ ಎಂಬುದನ್ನು ಪರಿಶೀಲಿಸುವ ಕಾರ್ಯಕ್ಕೆ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು (ಸಿಡಿಎಸ್‌ಸಿಒ) ಚಾಲನೆ ನೀಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಎನ್‌ಐವಿ, ಐಸಿಎಂಆರ್‌, ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ, ಸಿಡಿಎಸ್‌ಸಿಒ ಹಾಗೂ ನಾಗ್ಪುರದ ಎಐಐಎಂಎಸ್‌ನ ತಜ್ಞರ ತಂಡವು, ಮಕ್ಕಳ ಸಾವಿಗೆ ಕಾರಣ ಎನ್ನಲಾದ ಕೆಮ್ಮಿನ ಸಿರಪ್‌ನ ಮಾದರಿಗಳ ವಿಶ್ಲೇಷಣೆ ಕೈಗೊಂಡಿದೆ.

‘ತಮಿಳುನಾಡಿನ ಸಿರಪ್‌ ಕಲುಷಿತ’

ಮಧ್ಯಪ್ರದೇಶ ಸರ್ಕಾರದ ಮನವಿ ಮೇರೆಗೆ ತಮಿಳುನಾಡು ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣೆ ಇಲಾಖೆಯು, ಕೆಮ್ಮಿನ ಸಿರಪ್‌ ‘ಕೋಲ್ಡ್ರಿಫ್’ನ ಮಾದರಿಗಳ ಪರೀಕ್ಷೆ ನಡೆಸಿದೆ. ಈ ಮಾದರಿಗಳಲ್ಲಿ, ಅನುಮತಿಸಿದ ಮಿತಿಗಿಂತ ಅಧಿಕ ಪ್ರಮಾಣದಲ್ಲಿ ‘ಡಿಇಜಿ’ ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ತಮಿಳುನಾಡು ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣೆ ಇಲಾಖೆ ಅಧಿಕಾರಿಯೊಬ್ಬರು ಕೂಡ ಇದೇ ಮಾಹಿತಿ ನೀಡಿದ್ದಾರೆ.

ತಮಿಳುನಾಡಿನ ಕಾಂಚಿಪುರಂನಲ್ಲಿರುವ ಸ್ರೇಸನ್‌ ಫಾರ್ಮಾ ಕಂಪನಿಯ ಘಟಕದಲ್ಲಿ ಈ ಸಿರಪ್‌ ಅನ್ನು ತಯಾರಿಸಲಾಗುತ್ತಿದೆ.

ತನ್ನ ಘಟಕದಲ್ಲಿ ತಯಾರಾಗುವ ಕೆಮ್ಮಿನ ಸಿರಪ್‌ನಲ್ಲಿ ‘ಡಿಇಜಿ’ ಪ್ರಮಾಣ ಅಪಾಯಕಾರಿ ಮಟ್ಟದಲ್ಲಿ ಇರುವ ಕುರಿತು ಸ್ರೇಸನ್‌ ಫಾರ್ಮಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರಾಯಿಟರ್ಸ್‌ ವರದಿ ಮಾಡಿದೆ.

‘ಕೆಮ್ಮಿನ ಸಿರಪ್‌ ಪರೀಕ್ಷಾ ವರದಿ ಕೈಸೇರಿದ ಬೆನ್ನಲ್ಲೇ, ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ರಾಜ್ಯದಲ್ಲಿ ‘ಕೋಲ್ಡ್ರಿಫ್’ ಮಾರಾಟವನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಮಾರುಕಟ್ಟೆಯಿಂದ ಈ ಸಿರಪ್‌ ಅನ್ನು ಹಿಂಪಡೆಯುವಂತೆಯೂ ಸೂಚಿಸಿದೆ’ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಸಿಡಿಎಸ್‌ಸಿಒ ಆರು ಹಾಗೂ ಮಧ್ಯಪ್ರದೇಶದ ಆಹಾರ ಮತ್ತು ಔಷಧ ನಿರ್ವಹಣೆ(ಎಂಪಿಎಫ್‌ಡಿಎ) ಇಲಾಖೆ ಮೂರು ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿತ್ತು. ಈ ಮಾದರಿಗಳಲ್ಲಿ ಡೈಇಥಿಲೀನ್‌ ಗ್ಲೈಕೋಲ್(ಡಿಇಜಿ) ಮತ್ತು ಇಥಿಲೀನ್‌ ಗ್ಲೈಕೋಲ್‌(ಇಜಿ) ಕಂಡುಬಂದಿಲ್ಲ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ಹೇಳಿತ್ತು.

ಪ್ರಮುಖ ಅಂಶಗಳು

l ‘ಕೋಲ್ಡ್ರಿಫ್‌’ ಉತ್ಪಾದನೆ ಸ್ಥಗಿತಗೊಳಿಸುವಂತೆ ಸ್ರೇಸನ್ ಫಾರ್ಮಾ ಕಂಪನಿಗೆ ತಮಿಳುನಾಡು ಸರ್ಕಾರ ಸೂಚನೆ

l ಸದ್ಯ, ಛಿಂದ್ವಾರ ಹಾಗೂ ನಾಗ್ಪುರದಲ್ಲಿ ದಾಖಲಾಗಿರುವ ಮಕ್ಕಳು ಸೇರಿ ಪಟ್ಟು 13 ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಛಿಂದ್ವಾರದಲ್ಲಿ ‘ಕೋಲ್ಡ್ರಿಫ್‌’ ಸಿರಪ್‌ ಸೇವಿಸಿ ಮಕ್ಕಳು ಮೃತಪಟ್ಟಿರುವುದು ಹೃದಯ ವಿದ್ರಾವಕ. ಮಧ್ಯಪ್ರದೇಶದಲ್ಲಿ ಈ ಸಿರಪ್‌ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ಸಿರಪ್‌ ತಯಾರಿಸಿರುವ ಕಂಪನಿಯ ಇತರ ಉತ್ಪನ್ನಗಳ ಮಾರಾಟವನ್ನು ಕೂಡ ನಿಷೇಧಿಸಲಾಗುತ್ತದೆ

ಮೋಹನ್‌ ಯಾದವ್, ಮಧ್ಯಪ್ರದೇಶ ಮುಖ್ಯಮಂತ್ರಿ

ಕೆಮ್ಮಿನ ಸಿರಪ್‌ ಕೋಲ್ಡ್ರಿಫ್‌ ಕಲಬೆರಕೆಯಾಗಿರುವುದು ಮಾದರಿಗಳ ಪರೀಕ್ಷೆಯಿಂದ ತಿಳಿದುಬಂದಿದ್ದು, ಈ ಬಗ್ಗೆ ವಿವರಣೆ ಕೇಳಲಾಗಿದೆ. ಕಂಪನಿಯು ತೃಪ್ತಿಕರ ವಿವರಣೆ ನೀಡುವವರೆಗೆ ಈ ಸಿರಪ್‌ ಉತ್ಪಾದನೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ

ತಮಿಳುನಾಡು ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣೆ ಇಲಾಖೆ

ಶಂಕಿತ ಮೂತ್ರಪಿಂಡ ಸಮಸ್ಯೆಯಿಂದಾಗಿ ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ 9 ಮಕ್ಕಳು ಮೃತಪಟ್ಟಿವೆ. ಬ್ರೇಕ್‌ ಆಯಿಲ್ ದ್ರಾವಣ ಮಿಶ್ರಿತ ಕೆಮ್ಮಿನ ಸಿರಪ್‌ ಕೊಟ್ಟಿದ್ದೇ ಮಕ್ಕಳ ಸಾವಿಗೆ ಕಾರಣ

ಕಮಲ್‌ ನಾಥ್, ಕಾಂಗ್ರೆಸ್‌ನ ಹಿರಿಯ ನಾಯಕ

ಕೆಮ್ಮು, ನೆಗಡಿ ನಿವಾರಣೆಗಾಗಿ ಬಳಸುವ ಡೆಕ್ಸ್‌ಟ್ರೊಮಿಥೋರ್ಫನ್ ಔಷಧವನ್ನು ನಾಲ್ಕು ವರ್ಷ ಒಳಗಿನ ಮಕ್ಕಳಿಗೆ ನೀಡದಂತೆ ಕೇಂದ್ರ ಸರ್ಕಾರ 2021ರಲ್ಲಿಯೇ ಸಲಹೆ ನೀಡಿದೆ

ಗಾಯತ್ರಿ ರಾಥೋರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜಸ್ಥಾನ

ಕೇರಳದಲ್ಲಿ ಕೆಮ್ಮಿನ ಸಿರಪ್‌ ‘ಕೋಲ್ಡ್ರಿಫ್‌’ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆ. ಕಲುಷಿತಗೊಂಡಿದೆ ಎನ್ನಲಾದ ಬ್ಯಾಚ್‌ನ ಈ ಸಿರಪ್‌ಅನ್ನು ರಾಜ್ಯದಲ್ಲಿ ಮಾರಾಟ ಮಾಡಲಾಗುತ್ತಿರಲಿಲ್ಲ. ಆದಾಗ್ಯೂ, ಸುರಕ್ಷತಾ ಕ್ರಮವಾಗಿ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆ

ವೀಣಾ ಜಾರ್ಜ್‌, ಆರೋಗ್ಯ ಸಚಿವೆ, ಕೇರಳ

ರಾಜಸ್ಥಾನ: ಔಷಧ ನಿಯಂತ್ರಕ ಅಮಾನತು

ಜೈಪುರ: ಕೆಮ್ಮಿನ ಸಿರಪ್‌ ಸೇವನೆಯಿಂದಾಗಿ ರಾಜ್ಯದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಿಸಿ, ರಾಜ್ಯದ ಔಷಧ ನಿಯಂತ್ರಕ ರಾಜಾರಾಮ್ ಶರ್ಮಾ ಅವರನ್ನು ಅಮಾನತು ಮಾಡಿ ರಾಜಸ್ಥಾನ ಸರ್ಕಾರ ಶನಿವಾರ ಆದೇಶಿಸಿದೆ.

ಅಲ್ಲದೇ, ಜೈಪುರ ಮೂಲದ ಕೆಸನ್ಸ್‌ ಫಾರ್ಮಾ ಕಂಪನಿ ಉತ್ಪಾದಿಸುವ 19 ಔಷಧಗಳು ಹಾಗೂ ಡೆಕ್ಸ್‌ಟ್ರೊಮಿಥೋರ್ಫನ್ ಹೊಂದಿರುವ ಇತರ ಎಲ್ಲ ಕೆಮ್ಮಿನ ಸಿರಪ್‌ಗಳ ಮಾರಾಟವನ್ನು ಸಹ ಸ್ಥಗಿತಗೊಳಿಸಿ ಆದೇಶಿಸಲಾಗಿದೆ.

ರಾಜಾರಾಮ್‌ ಶರ್ಮಾ, ಔಷಧಗಳ ಗುಣಮಟ್ಟ ಪತ್ತೆ ಪ್ರಕ್ರಿಯೆ ಮೇಲೆ ಪ್ರಭಾವ ಬೀರಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ. ಈ ಕಾರಣಕ್ಕಾಗಿ ಅವರನ್ನು ಅಮಾನತು ಮಾಡಲಾಗಿದೆ ಎಂದು ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಹೇಳಿದೆ.

ಈ ಬೆಳವಣಿಗೆಗಳ ಬೆನ್ನಲ್ಲೇ, ಸಮಗ್ರ ತನಿಖೆಗೆ ಮುಖ್ಯಮಂತ್ರಿ ಭಜನ್‌ ಲಾಲ್‌ ಶರ್ಮಾ ಆದೇಶಿಸಿದ್ದಾರೆ.

‘ಸಿ’ ವರ್ಗದ ದೇವಸ್ಥಾನಗಳ ಅಭಿವೃದ್ಧಿಗೆ ‘ವಿಷನ್‌ ಗ್ರೂಪ್‌’

ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆಯಡಿ (ಮುಜರಾಯಿ) ಇರುವ ‘ಸಿ’ ವರ್ಗದ ದೇವಾಲಯಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗಾಗಿ ಸರ್ಕಾರವು ‘ವಿಷನ್‌ ಗ್ರೂಪ್‌’ ರಚಿಸಿದೆ.

ಕೆ.ಇ. ರಾಧಾಕೃಷ್ಣ, ಕೆ.ಸಿ. ರಾಮಮೂರ್ತಿ, ಶಕುಂತಲಾ ಶೆಟ್ಟಿ, ಮಹಾಂತೇಶ್ ಬಿರಾದಾರ್‌, ಶ್ರೀಪಾದ ಎಸ್‌.ಬಿ., ಶ್ರೀನಿವಾಸ ಪಿ.ಸಿ., ಯತಿರಾಜ ಸಂಪತ್‌ ಕುಮಾರನ್‌ ಎಸ್‌.ಎನ್‌. ಅವರನ್ನು ‘ವಿಶನ್‌ ಗ್ರೂಪ್‌’ ಸದಸ್ಯರನ್ನಾಗಿ ಮಾಡಿದೆ.

ರಾಜ್ಯದಲ್ಲಿ 34,563 ಮುಜರಾಯಿ ದೇವಸ್ಥಾನಗಳಿವೆ. ಅದರಲ್ಲಿ ‘ಎ’ ವರ್ಗದ 205, ‘ಬಿ’ ವರ್ಗದ 193 ದೇವಸ್ಥಾನಗಳಾಗಿದ್ದು, ಕಡಿಮೆ ಆದಾಯ ಇರುವ 34,165 ಪುರಾತನ ದೇವಸ್ಥಾನಗಳನ್ನು ‘ಸಿ’ ವರ್ಗ ಎಂದು ಗುರುತಿಸಲಾಗಿದೆ. ಇವುಗಳ ಅಭಿವೃದ್ಧಿಗೆ ಅಗತ್ಯ ಸಂದರ್ಭದಲ್ಲಿ ಸರ್ಕಾರದಿಂದ ಹಾಗೂ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಅನುದಾನ ನೀಡಲಾಗುತ್ತಿದೆ. ದೇವಾಲಯಗಳ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಅವುಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ರಾಜ್ಯ ಧಾರ್ಮಿಕ ಪರಿಷತ್‌ ನಿರ್ದೇಶನ ನೀಡಿತ್ತು.

ಅದರಂತೆ ‘ವಿಷನ್‌ ಗ್ರೂಪ್‌’ ರಚಿಸುವುದಾಗಿ ಸರ್ಕಾರವು ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು.

ಚಿತ್ರದುರ್ಗ: ಅರಣ್ಯದಲ್ಲಿ ಅದಿರಿಗೆ ಶೋಧ

ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಮೀಸಲು ಅರಣ್ಯದಲ್ಲಿ ಮ್ಯಾಂಗನೀಸ್‌ ಹಾಗೂ ಕಬ್ಬಿಣದ ಅದಿರಿನ ಅನ್ವೇಷಣೆ ನಡೆಸಲು ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ (ಕೆಐಒಸಿಎಲ್‌) ಕರ್ನಾಟಕ ಅರಣ್ಯ ಇಲಾಖೆ ಅನುಮತಿ ನೀಡಿದೆ.

ತಾಲ್ಲೂಕಿನ ನೀರ್ತಡಿ ಮೀಸಲು ಅರಣ್ಯದಲ್ಲಿ 64.7 ಹೆಕ್ಟೇರ್ ಪ್ರದೇಶದಲ್ಲಿ ಕಂಪನಿಯು ಒಂದು ವರ್ಷ ಅದಿರಿನ ಹುಡುಕಾಟ ನಡೆಸಲಿದೆ. ಈಗಾಗಲೇ ಗಣಿಗಾರಿಕೆ ನಡೆದಿರುವ (ಬ್ರೋಕನ್‌ ಲ್ಯಾಂಡ್‌) 37.59 ಹೆಕ್ಟೇರ್‌ನಲ್ಲಿ ಮತ್ತೆ ಗಣಿಗಾರಿಕೆ ನಡೆಸಲು ಸಾಧ್ಯವೇ ಎಂಬುದನ್ನು ಕಂಪನಿ ಪರಿಶೀಲನೆ ನಡೆಸಲಿದೆ. ಜತೆಗೆ, 27.16 ಹೆಕ್ಟೇರ್‌ ದಟ್ಟ ಅರಣ್ಯದಲ್ಲಿ ಪ್ರಕ್ರಿಯೆ ನಡೆಸಲಿದೆ. ಈ ಪ್ರಸ್ತಾವಕ್ಕೆ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್‌) ಒಪ್ಪಿಗೆ ನೀಡಿ ಕೇಂದ್ರ ಅರಣ್ಯ ಸಚಿವಾಲಯಕ್ಕೆ ಸಲ್ಲಿಸಿದ್ದಾರೆ. ಕೇಂದ್ರ ಅರಣ್ಯ ಸಚಿವಾಲಯದಿಂದ ಇನ್ನಷ್ಟೇ ಅನುಮೋದನೆ ಸಿಗಬೇಕಿದೆ.

ಅದಿರು ಅನ್ವೇಷಣೆಗೆ ಇಲ್ಲಿ ಕೆಐಒಸಿಎಲ್‌ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ನಿಗದಿತ ಸ್ಥಳದಲ್ಲಿ ಅದಿರಿನ ನಿಕ್ಷೇಪ ಇದೆಯೇ ಇಲ್ಲವೇ ಎಂಬುದನ್ನು ಏಜೆನ್ಸಿ ಪತ್ತೆ ಮಾಡಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ವರದಿ ಸಲ್ಲಿಸುತ್ತದೆ. ಒಂದು ವೇಳೆ ಅದಿರು ದಾಸ್ತಾನು ಇದ್ದರೆ ಗಣಿ ಇಲಾಖೆಯು ಬ್ಲಾಕ್‌ ರಚಿಸಿ, ಅದನ್ನು ಹರಾಜಿಗೆ ಇಡುತ್ತದೆ.

ಕಾಶಿಮೂರ್ತಿ ಶೆಟ್ಟಿ ಹಾಗೂ ಮಕ್ಕಳು ಹೊಂದಿರುವ ಗಣಿ ಅನುಮತಿ (ಸಂಖ್ಯೆ–1177) ಅಡಿಯಲ್ಲಿ ಅದಿರು ಅನ್ವೇಷಣೆ ಕಾರ್ಯ ನಡೆಸಲು ಕೆಐಒಸಿಎಲ್‌ನ ಉಪ ಮುಖ್ಯ ವ್ಯವಸ್ಥಾಪಕರು ಅರಣ್ಯ ಇಲಾಖೆಗೆ 2024ರ ಜೂನ್‌ನಲ್ಲಿ ಪ್ರಸ್ತಾವ ಸಲ್ಲಿಸಿದ್ದರು. ರಾಜ್ಯ ಸರ್ಕಾರದ ಯೋಜನಾ ಪರಿಶೀಲನಾ ಸಮಿತಿ ಇದಕ್ಕೆ ಒಪ್ಪಿಗೆ ನೀಡಿದ ಬಳಿಕ ಅರಣ್ಯ ಇಲಾಖೆಗೆ ಕಳುಹಿಸಲಾಗಿತ್ತು.

ಚಿತ್ರದುರ್ಗ ಡಿಸಿಎಫ್ ಅವರು ಯೋಜನಾ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರು. ‘ಈ ಅರಣ್ಯವು ಇಳಿಜಾರಿನ ಪ್ರದೇಶವಾಗಿದ್ದು, ಕಂಪನಿಯು ಈ ಪ್ರದೇಶದಲ್ಲಿ ಮಣ್ಣು ಹಾಗೂ ತೇವಾಂಶ ಸಂರಕ್ಷಣಾ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗ ಬಹುದು. ಆದಾಗ್ಯೂ, ಈ ಶೋಧ ಕಾರ್ಯಾಚರಣೆಯು ಅಂತಿಮವಾಗಿ ಗಣಿಗಾರಿಕೆ ಕಾರ್ಯಾಚರಣೆಗೆ ಕಾರಣವಾಗುತ್ತದೆ. ಆದ್ದರಿಂದ ಈ ಶೋಧದ ಭಾಗವಾಗಿ ಎಸ್‌ಎಂಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದ ರಿಂದ ದೀರ್ಘಾವಧಿಯಲ್ಲಿ ಉದ್ದೇಶ ಈಡೇರುವುದಿಲ್ಲ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಜತೆಗೆ, ಗಣಿ ಹುಡುಕಾಟ ನಡೆಸಲು ಶಿಫಾರಸು ಮಾಡಿದ್ದರು. ಇದಕ್ಕೆ ಬಳ್ಳಾರಿ ಸಿಸಿಎಫ್‌ ಸಹಮತ ವ್ಯಕ್ತಪಡಿಸಿದ್ದರು.

ಮುಖ್ಯಾಂಶಗಳು

lಅದಿರಿನ ಹುಡುಕಾಟದ ಸಂದರ್ಭದಲ್ಲಿ 700–1000 ಮರಗಳ ಹನನ ಮಾಡಲಾಗುತ್ತದೆ

lಅದಿರಿನ ಅನ್ವೇಷಣೆ ವೇಳೆ 24 ಕಂದಕಗಳನ್ನು ಹಾಗೂ 34 ಕೊಳವೆಬಾವಿಗಳನ್ನು ಕೊರೆಯಲಾಗುತ್ತದೆ

lಸಾದರಹಳ್ಳಿ ಹಾಗೂ ಕೇಶವಪುರ ಅರಣ್ಯ ವ್ಯಾಪ್ತಿಯಲ್ಲಿ ಸಂಪರ್ಕ ರಸ್ತೆ ನಿರ್ಮಿಸಲಾಗುತ್ತದೆ

lಈ ಅರಣ್ಯದಲ್ಲಿ ಕರಡಿ, ಚಿರತೆ, ನರಿ, ಕಾಡುಹಂದಿ, ಮುಳ್ಳು ಹಂದಿ ಮತ್ತಿತರ ಕಾಡುಪ್ರಾಣಿಗಳಿವೆ

lಗಣಿ ಹುಡುಕಾಟಕ್ಕೆ ಪ್ರತಿಯಾಗಿ ಕಂಪನಿಯು 9.4 ಹೆಕ್ಟೇರ್‌ನ ನಿವ್ವಳ ಒಟ್ಟು ಮೌಲ್ಯ ಪಾವತಿಸಲು ಒಪ್ಪಿದೆ

ವಿಧಿಸಿರುವ ಷರತ್ತುಗಳು

lಅರಣ್ಯ ಭೂಮಿಯ ಕಾನೂನಾತ್ಮಕ ಸ್ಥಿತಿಗತಿ ಬದಲಾಗುವಂತಿಲ್ಲ

lಪ್ರಸ್ತಾವಿತ ಪ್ರದೇಶದ ಮತ್ತು ಸುತ್ತಮುತ್ತಲಿನ ಸಸ್ಯ, ಪ್ರಾಣಿಗಳಿಗೆ ಯಾವುದೇ ಹಾನಿ ಮಾಡುವಂತಿಲ್ಲ

lಈ ಅರಣ್ಯ ಭೂಮಿಯನ್ನು ಉಪಗುತ್ತಿಗೆ ನೀಡುವಂತಿಲ್ಲ ಹಾಗೂ ಅಡಮಾನ ಇಡುವಂತಿಲ್ಲ

lಅರಣ್ಯ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆ ನಡೆಸುವಂತಿಲ್ಲ

lಕಾಡಿನಲ್ಲಿ ಕಲ್ಲುಗಳನ್ನು ಪುಡಿ ಮಾಡುವಂತಿಲ್ಲ ಹಾಗೂ ಒಡೆಯುವಂತಿಲ್ಲ

ಸರ್ಬಿ: ಅತಿ ಕಡಿಮೆ ಜನಸಂಖ್ಯೆಯ ಜಾತಿ

ಪ್ರಜಾವಾಣಿ ವಾರ್ತೆ

ಚಿಕ್ಕಬಳ್ಳಾ‍ಪುರ: ರಾಜ್ಯದಲ್ಲಿಯೇ ಅತ್ಯಂತ ಕಡಿಮೆ ಸಂಖ್ಯೆಯ ಜನರನ್ನು ಹೊಂದಿರುವ ರಾಜಸ್ಥಾನ ಮೂಲದ ಜಾತಿಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಪತ್ತೆಯಾಗಿದೆ. ಮೂಲದ ಪ್ರಕಾರ ರಾಜ್ಯದ ಬೇರೆ ಯಾವ ಜಿಲ್ಲೆಗಳಲ್ಲೂ ಈ ಜಾತಿಯ ಜನರು ಇಲ್ಲ ಎಂದು ಗೊತ್ತಾಗಿದೆ.

ಜಿಲ್ಲೆಯ ಮಂಚೇನಹಳ್ಳಿ ತಾಲ್ಲೂಕು ಕೇಂದ್ರದಲ್ಲಿ ‘ಸರ್ಬಿ’ ಜಾತಿಗೆ ಸೇರಿದ ಎರಡು ಕುಟುಂಬ ಸಮೀಕ್ಷೆಯಲ್ಲಿ ಕಂಡುಬಂದಿವೆ. ಈ ಎರಡು ಕುಟುಂಬಗಳಲ್ಲಿ ಒಟ್ಟು ಏಳು ಸದಸ್ಯರು ಇದ್ದಾರೆ.

ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಜನರನ್ನು ಹೊಂದಿರುವ ಜಾತಿಯೂ ಇದಾಗಿದೆ. ಹಿಂದುಳಿದ ವರ್ಗಗಳ ಆಯೋಗವು ಹೊರಡಿಸಿರುವ ಸಮೀಕ್ಷೆಯ ಜಾತಿಗಳ ಪಟ್ಟಿಯಲ್ಲಿ ‘ಸರ್ಬಿ’ ಜಾತಿಯ ಹೆಸರು ಇಲ್ಲ.

ಈ ಜಾತಿ ಕೋಡ್ ಸಹ ಇಲ್ಲ. ಈ ಬಗ್ಗೆ ಮಾಹಿತಿ ನೀಡುವಂತೆ ಮತ್ತು ಯಾವ ಪಟ್ಟಿಯಲ್ಲಿ ‘ಸರ್ಬಿ’ ಜಾತಿ ನಮೂದಿಸಬೇಕು ಎಂದು ಜಿಲ್ಲಾಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಆಯೋಗಕ್ಕೆ ಪತ್ರ ಬರೆದಿತ್ತು. ಆಯೋಗವು ‘ಸರ್ಬಿ’ ಜಾತಿಯನ್ನು ಇತರ ಕಾಲಂನಲ್ಲಿ ನಮೂದಿಸುವಂತೆ ತಿಳಿಸಿದೆ.

‘ಸರ್ಬಿ ಜಾತಿ ರಾಜಸ್ಥಾನ ಮೂಲದ್ದು ಎನ್ನಲಾಗುತ್ತಿದೆ. ರಾಜ್ಯದ ಬೇರೆ ಯಾವ ಜಿಲ್ಲೆಗಳಲ್ಲಿ ಈ ಜಾತಿಯ ಜನರು ಇಲ್ಲ. ಸಮೀಕ್ಷೆ ಜಾತಿಯ ಪಟ್ಟಿಯಲ್ಲಿ ಇದರ ಹೆಸರು ಇರಲಿಲ್ಲ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದೆವು. ಇತರೆ ಕಾಲಂನಲ್ಲಿ ನಮೂದಿಸಲು ತಿಳಿಸಿದ್ದಾರೆ’ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮುನಿರತ್ನಮ್ಮ ‘ಪ್ರಜಾವಾಣಿ’ಗೆ ತಿಳಿಸಿದರು. .

ಅಂಕಸಮುದ್ರ: ವಲಸೆ ಹಕ್ಕಿಗಳ ಪಾರುಪತ್ಯ
ವಿಜಯನಗರ ಜಿಲ್ಲೆಯ ಪಕ್ಷಿಧಾಮ l ವಿವಿಧೆಡೆಯಿಂದ ಬಂದ ಬಾನಾಡಿಗಳ ಕಲರವ
ಪಕ್ಷಿಗಳನ್ನು ವೀಕ್ಷಿಸಲು ಕಳೆದ ವರ್ಷದಿಂದ ಬೆಂಗಳೂರಿನಿಂದ ಕುಟುಂಬ ಸಮೇತ ಬರುತ್ತಿದ್ದೇನೆ. ಇಲ್ಲಿನ ಹಕ್ಕಿಗಳ ಸೌಂದರ್ಯ ಅದ್ಭುತಬದ್ರೀಶ್, ಪಕ್ಷಿ ವೀಕ್ಷಕ, ಬೆಂಗಳೂರು

ಇಲ್ಲಿನ ಅಂಕಸಮುದ್ರ ಪಕ್ಷಿಧಾಮದಲ್ಲಿ ಈ ಬಾರಿ ನಿಗದಿತ ಅವಧಿಗಿಂತಲೂ ಮೊದಲೇ ವಿದೇಶಿ ಹಕ್ಕಿಗಳ ಕಲರವ ಅನುರಣಿಸುತ್ತಿದೆ. ಜಾಲಿಮರಗಳ ಮೇಲೆ ದೇಶಿ ಹಕ್ಕಿಗಳ ಗೂಡು ಕಟ್ಟಿದ್ದು, ಪಾರುಪತ್ಯ ನಡೆಸಿವೆ.

ಬಹುಸಂಖ್ಯೆಯ ಇಂಡಿಯನ್ ಕಾರ್ಮೋರೆಂಟ್ (ನೀರು ಕಾಗೆ), ಲಿಟಲ್ ಕಾರ್ಮೋರೆಂಟ್ (ಸಣ್ಣ ನೀರು ಕಾಗೆ), ಬ್ಲ್ಯಾಕ್‌ ಹೆಡೆಡ್ ಐಬೀಸ್ (ಕರಿತಲೆ ಕೆಂಬರಲು), ಗ್ಲೋಸಿ ಐಬೀಸ್(ಮಿಂಚು ಕೆಂಬರಲು), ವರಟೆ ಬಾತು (ಸ್ಪಾಟ್ ಬಿಲ್ ಡಕ್) ಸಂತಾನನೋತ್ಪತ್ತಿ ಕಾರ್ಯದಲ್ಲಿ ನಿರತವಾಗಿವೆ. ಇವುಗಳ ಸಂಖ್ಯೆ ಸಾವಿರ ದಾಟಿದೆ. ಪಕ್ಷಿಧಾಮದ ಮರಗಳಲ್ಲಿ ಮರಿಗಳಿಗೆ ಬಾಯಿತುತ್ತು ನೀಡುವ ದೃಶ್ಯ, ಗೂಡುಗಳಿಂದ ಹೊರಬಂದ ಚಿಣ್ಣರ ಚಿನ್ನಾಟದ ಚಿಲಿಪಿಲಿ ಸಂಗೀತದ ನಿನಾದವಂತೂ ಪಕ್ಷಿ ಪ್ರೇಮಿಗಳನ್ನು ಧ್ಯಾನಸ್ಥರನ್ನಾಗಿ ಮಾಡುತ್ತಿವೆ.

ಯುರೋಪ್‌ ಮೂಲದ ಹಕ್ಕಿಗಳಾದ ಬಿಳಿ ಹುಬ್ಬಿನ ಬಾತು (ಗಾರ್ಗೆನಿ), ಜೌಗು ಸೆಳೆವ (ಮಾರ್ಷ್ ಹ್ಯಾರಿಯರ್), ಬಿಳಿಕತ್ತಿನ ಉಲಿಯಕ್ಕಿ (ಲೆಸರ್ ವೈಟ್‍ತ್ರೋಟ್), ಇಡುನಾ ರಾಮ (ಸೈಕ್ಸ್ ನ ವಾರ್ಬ್ಲರ್‌), ಬೂದು ಉಲಿಯಕ್ಕಿ (ಬ್ಲಿಥ್ಸ್ರೀಡ್ ವಾರ್ಬ್ಲರ್‌), ಹಳದಿ ಸಿಪಿಲೆ (ಯಲ್ಲೊ ವಾಗ್‍ಟೆಲ್) ಹಕ್ಕಿಗಳೂ ಇಲ್ಲಿಗೆ ಈಗಾಗಲೇ ಬಂದಿವೆ.

ಯುರೋಪ್‌ನಿಂದ ಹಕ್ಕಿಗಳು ಈ ಬಾರಿ ತಿಂಗಳ ಮುಂಚೆಯೇ ಬಂದಿವೆ. ಒಂದು ವಾರದಿಂದ ಈ ವಿದೇಶಿ ಬಾನಾಡಿ ಅತಿಥಿಗಳಿಗೆ ಸ್ಥಳೀಯ ಹಕ್ಕಿಗಳು ಆತಿಥ್ಯ ನೀಡಿವೆ. ಮುಂದಿನ ಏಪ್ರಿಲ್‌ವರೆಗೆ ಅವು ಇಲ್ಲಿಯೇ ನೆಲೆಯೂರಲಿವೆ.

ಶಿಳ್ಳೆಬಾತು ಆಕರ್ಷಣೆ: ಪಕ್ಷಿಧಾಮಕ್ಕೆ ಮೊದಲ ಬಾರಿಗೆ ಉತ್ತರ ಭಾರತ ದಿಂದ ವಲಸೆ ಬಂದಿರುವ ಅಪರೂಪದ ದೊಡ್ಡ ಗಾತ್ರದ ಶಿಳ್ಳೆಬಾತು (ಫುಲ್ವೆಸ್ ವಿಸಿಲಿಂಗ್ ಡಕ್) ತನ್ನ ಸಂಖ್ಯೆಯನ್ನು 20ಕ್ಕೆ ಏರಿಸಿಕೊಂಡಿದೆ. ಈ ಪಕ್ಷಿ ಸದಾ ಸಂಗಾತಿಯೊಂದಿಗೆ ಇರುತ್ತದೆ.

ತುಂಗಭದ್ರಾ ಹಿನ್ನೀರಿನ ಏತ ನೀರಾವರಿ ಮೂಲಕ ನೀರು ಹರಿದ ಪರಿಣಾಮ ಅಂಕಸಮುದ್ರ ಪಕ್ಷಿಧಾಮದ ಒಡಲು ಸಂಪೂರ್ಣ ಭರ್ತಿ ಆಗಿದೆ. ಪಕ್ಷಿಗಳ ಕಲರವ ಹೆಚ್ಚಾಗಿದೆ. ರಾಜ್ಯದ ವಿವಿಧೆಡೆಯಿಂದ ಬರುವ ಪ್ರವಾಸಿಗರು, ವಿದೇಶಿಯರ ಸಂಖ್ಯೆಯೂ ಹೆಚ್ಚಾಗಿದೆ.

ಟೋಲ್‌: ಯುಪಿಐ ಬಳಸಿದರೆ ಶುಲ್ಕ ಕಡಿಮೆ

ಸಕ್ರಿಯ ಫಾಸ್ಟ್‌ಟ್ಯಾಗ್ ಇಲ್ಲದೆ ಟೋಲ್‌ ಪ್ಲಾಜಾ ಪ್ರವೇಶಿಸುವ ವಾಹನಗಳು ಯುಪಿಐ ಮೂಲಕ ಶುಲ್ಕ ಪಾವತಿ ವಿಧಾನ ಆಯ್ಕೆ ಮಾಡಿಕೊಂಡರೆ, ಸಾಮಾನ್ಯ ಟೋಲ್ ಶುಲ್ಕದ 1.25 ಪಟ್ಟು ಶುಲ್ಕ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.

ಈ ಹೊಸ ನಿಯಮ ನವೆಂಬರ್ 15ರಿಂದ ಜಾರಿಗೆ ಬರಲಿದೆ. ಪ್ರಸ್ತುತ, ಫಾಸ್ಟ್‌ಟ್ಯಾಗ್ ಇಲ್ಲದವರು ಟೋಲ್‌ನಲ್ಲಿ, ಶುಲ್ಕವನ್ನು ನಗದು ರೂಪದಲ್ಲಿ ಪಾವತಿಸುವುದಾದರೆ ಎರಡು ಪಟ್ಟು ಹೆಚ್ಚು ಪಾವತಿಸಬೇಕಿದೆ.

ಈ ಹೊಸ ನಿಯಮದಿಂದ ಟೋಲ್‌ನಲ್ಲಿ ನಗದು ವಹಿವಾಟು ಕಡಿಮೆ ಆಗಲಿದೆ. ಅಲ್ಲದೆ, ಡಿಜಿಟಲ್ ಪಾವತಿಗೆ ಉತ್ತೇಜನ ನೀಡಲು, ಟೋಲ್‌ ಕಾರ್ಯಾಚರಣೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಈ ನಿಯಮ ಜಾರಿಗೆ ತರಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.

ವಿದೇಶಿ ವಿನಿಮಯ ಸಂಗ್ರಹ ಇಳಿಕೆ

ಮುಂಬೈ (ಪಿಟಿಐ): ಸೆಪ್ಟೆಂಬರ್‌ 26ಕ್ಕೆ ಅಂತ್ಯಗೊಂಡ ವಾರದಲ್ಲಿ ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹದ ಪ್ರಮಾಣವು ₹20,700 ಕೋಟಿಯಷ್ಟು ಕಡಿಮೆ ಆಗಿದೆ.

ಒಟ್ಟು ಮೀಸಲು ಸಂಗ್ರಹ ₹62.15 ಲಕ್ಷ ಕೋಟಿಯಷ್ಟಾಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ತಿಳಿಸಿದೆ.

ವಿದೇಶಿ ಕರೆನ್ಸಿಗಳ ಸಂಪತ್ತಿನ ಮೌಲ್ಯ ₹38,994 ಕೋಟಿಯಷ್ಟು ಕಡಿಮೆಯಾಗಿದ್ದು, ₹51.63 ಲಕ್ಷ ಕೋಟಿಯಾಗಿದೆ. ಚಿನ್ನದ ಮೀಸಲು ಸಂಗ್ರಹದಲ್ಲಿ ಹೆಚ್ಚಳವಾಗಿದ್ದು, ₹19,865 ಕೋಟಿಯಾಗಿದ್ದು, ₹8.43 ಲಕ್ಷ ಕೋಟಿಯಾಗಿದೆ. ಸ್ಪೆಷಲ್ ಡ್ರಾಯಿಂಗ್ ರೈಟ್ಸ್‌ (ಎಸ್‌ಡಿಆರ್) ₹798 ಕೋಟಿ ಕಡಿಮೆ ಆಗಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಭಾರತದ ಪಾಲು ₹41,479 ಕೋಟಿಯಾಗಿದೆ ಎಂದು ತಿಳಿಸಿದೆ.

ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಸನೆ ತಾಕೈಚಿ?

ಜಪಾನ್‌ನ ಇತಿಹಾಸದಲ್ಲಿ ಮೊದಲ ಬಾರಿ ಮಹಿಳೆಯೊಬ್ಬರು ಪ್ರಧಾನಿ ಹುದ್ದೆ ಅಲಂಕರಿಸುವುದು ಬಹುತೇಕ ಖಚಿತವಾಗಿದೆ.

ಆಡಳಿತರೂಢ ಲಿಬರಲ್‌ ಡೆಮಾಕ್ರಟಿಕ್‌ ಪಕ್ಷದ (ಎಲ್‌ಡಿಪಿ) ಕಟ್ಟಾ ಸಂಪ್ರದಾಯ ವಾದಿಯಾಗಿರುವ ಸನೆ ತಾಕೈಚಿ ಅವರನ್ನು ಹೊಸ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಸನೆ ತಾಕೈಚಿ ಅವರನ್ನು ಸ್ತ್ರೀವಾದ ಪ್ರತಿಪಾದಿಸುವ ದೃಷ್ಟಿಯಿಂದ ಆಯ್ಕೆ ಮಾಡಿಲ್ಲ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ನಡೆದ ಚುನಾವಣೆಯಲ್ಲಿ 54 ವರ್ಷದ ಸನೆ ತಾಕೈಚಿ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ದೇಶದ ರಕ್ಷಣೆ ಹಾಗೂ ಆರ್ಥಿಕತೆ ವಿಚಾರದಲ್ಲಿ ಕೇಂದ್ರಿಕರಿಸಿ, ಕಠಿಣ ನಿಲುವಿನ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.

ಪಕ್ಷದ ಆಂತರಿಕ ಚುನಾವಣೆಯಲ್ಲಿ ದೇಶದ ಜನಪ್ರಿಯ ಮಾಜಿ ಪ್ರಧಾನಿ ಜುನಿಚಿರೊ ಕೊಯ್ಚುಮಿ ಅವರ ಪುತ್ರ ಹಾಗೂ ಕೃಷಿ ಸಚಿವ 44 ವರ್ಷದ ಶಿಂಜಿರೊ ಕೊಯ್ಚುಮಿ ಅವರನ್ನು ಸನೆ ತಾಕೈಚಿ ಮಣಿಸಿದರು. ಸಂಸತ್ತಿನಲ್ಲಿ ಅವರಿಗೆ ಅನುಮೋದನೆ ಸಿಕ್ಕ ಬಳಿಕ ಸನೆ ತಾಕೈಚಿ ಅವರು ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಅಧಿಕಾರಕ್ಕೇರುವುದು ಖಚಿತವಾಗಿದೆ.

ನಾಯಕಿಯಾಗಿ ಆಯ್ಕೆಯಾಗು ತ್ತಿದ್ದಂತೆಯೇ, ದೇಶದಲ್ಲಿ ‘ಹೊಸ ಯುಗ’ ಆರಂಭಗೊಂಡಿದೆ ಎಂದು ಶ್ಲಾಘಿಸಿದರು.

ಮಾರ್ಗರೆಟ್‌ ಥ್ಯಾಚರ್‌ ಅವರನ್ನು ತನ್ನ ನಾಯಕಿ ಎಂದು ಪರಿಗಣಿಸಿರುವ ತಾಕೈಚಿ, ಎಲ್‌ಡಿಪಿ ಪಕ್ಷದ ಗತವೈಭವವನ್ನು ಮರುಸ್ಥಾಪಿಸಲು ಬೆಟ್ಟದಷ್ಟು ಕೆಲಸಗಳು ಬಾಕಿ ಉಳಿದಿವೆ ಎಂದು ತಿಳಿಸಿದ್ದಾರೆ.

ಟ್ರಂಪ್‌ ಶಾಂತಿ ಸೂತ್ರ: ಹಮಾಸ್ ಭಾಗಶಃ ಒಪ್ಪಿಗೆ

ಗಾಜಾದಲ್ಲಿ ಯುದ್ಧ ಕೊನೆಗೊಳಿಸಲು ಮತ್ತು ಉಳಿದ ಒತ್ತೆಯಾಳುಗಳ ಬಿಡುಗಡೆಗೆ ಸಂಬಂಧಿಸಿದಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಸ್ತಾಪಿಸಿರುವ ಶಾಂತಿ ಯೋಜನೆಯ ಕೆಲವು ಅಂಶಗಳನ್ನು ಒಪ್ಪಿಕೊಳ್ಳುತ್ತೇವೆ’ ಎಂದು ಹಮಾಸ್‌ ತಿಳಿಸಿದೆ.

ಆದರೆ, ಇತರ ವಿಷಯಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಮಾತುಕತೆ ನಡೆಸಬೇಕಿದೆ ಎಂದೂ ಅದು ಶನಿವಾರ ಹೇಳಿದೆ.

ಹಮಾಸ್‌ ಹೇಳಿಕೆ ಹೊರಬಿದ್ದ ಬೆನ್ನಲ್ಲೇ, ಟ್ರಂಪ್‌ ಅವರ ಯೋಜನೆಯ ಮೊದಲ ಹಂತದ ಅನುಷ್ಠಾನಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರು ವುದಾಗಿ ಇಸ್ರೇಲ್‌ ಸೇನೆ ಶನಿವಾರ ಮಾಹಿತಿ ನೀಡಿದೆ.

‘ಇಸ್ರೇಲ್‌ನ ನಾಯಕರು ಯೋಜನೆ ಅನುಷ್ಠಾನಕ್ಕೆ ಸಿದ್ಧತಾ ಕಾರ್ಯವನ್ನು ಮುಂದುವರಿಸಲು ಸೂಚಿಸಿದ್ದಾರೆ’ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಮುಂದುವರಿದ ಕಾರ್ಯಾಚರಣೆ: ಗಾಜಾ ಮೇಲೆ ದಾಳಿ ನಡೆಸದಂತೆ ಟ್ರಂಪ್‌ ಅವರು ಇಸ್ರೇಲ್‌ಗೆ ಸೂಚಿಸಿದ ಬಳಿಕವೂ, ಇಸ್ರೇಲ್‌ ಪಡೆಗಳು ಗಾಜಾಪಟ್ಟಿಯಲ್ಲಿ ಶನಿವಾರ ಕಾರ್ಯಾಚರಣೆ ಮುಂದುವರಿಸಿವೆ. ಅಲ್ಲದೆ ನಿವಾಸಿಗಳಿಗೆ ಅಲ್ಲಿಂದ ತೆರಳದಂತೆ ಸೇನೆ ಎಚ್ಚರಿಕೆಯನ್ನೂ ನೀಡಿದೆ. ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿ, ಬಾಂಬ್‌ ದಾಳಿಯಲ್ಲಿ 20ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ ಎಂದು ಮೂಲಗಳು ತಿಳಿಸಿವೆ.

ತನ್ನ ಯೋಜನೆಯ ಕೆಲ ಅಂಶಗಳನ್ನು ಒಪ್ಪಿಕೊಂಡಿರುವುದಾಗಿ ಹಮಾಸ್‌ ಹೇಳಿದ ಬಳಿಕ, ಟ್ರಂಪ್‌ ಅವರು ಗಾಜಾ ಮೇಲಿನ ಬಾಂಬ್‌ ದಾಳಿಯನ್ನು ನಿಲ್ಲಿಸುವಂತೆ ಇಸ್ರೇಲ್‌ಗೆ ಸೂಚಿಸಿದ್ದರು. ‘ಯೋಜನೆಯ ಕೆಲ ಅಂಶಗಳನ್ನು ಒಪ್ಪಿಕೊಳ್ಳುವುದಾಗಿ ಹಮಾಸ್‌ ನೀಡಿರುವ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಅವರು ಸಹ ಶಾಶ್ವತ ಶಾಂತಿಗೆ ಸಿದ್ಧರಾಗಿದ್ದಾರೆ ಎಂಬುದಾಗಿ ನಾನು ನಂಬುತ್ತೇನೆ’ ಎಂದು ಟ್ರಂಪ್‌ ಪ್ರತಿಕ್ರಿಯಿಸಿದ್ದರು.

ಇಸ್ರೇಲ್‌–ಹಮಾಸ್‌ ನಡುವಿನ ಯುದ್ಧವನ್ನು ಕೊನೆಗೊಳಿಸಲು ಮತ್ತು ಒತ್ತೆಯಾಳುಗಳ ವಿನಿಮಯ ಕುರಿತ ಟ್ರಂಪ್‌ ಈ ವಾರದ ಆರಂಭದಲ್ಲಿ ಪ್ರಸ್ತಾವ ಮುಂದಿಟ್ಟಿದ್ದರು. ಅದಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ವ್ಯಕ್ತವಾಗಿತ್ತು. ಅಲ್ಲದೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಹ ಟ್ರಂಪ್‌ ಯೋಜನೆಯನ್ನು ಅನುಮೋದಿಸಿ, ‘ಯುದ್ಧ ಅಂತ್ಯಗೊಳಿಸಲು ಇಸ್ರೇಲ್‌ ಬದ್ಧವಾಗಿದೆ’ ಎಂದೂ ಹೇಳಿದ್ದರು.

ಹಮಾಸ್‌ ಬಳಿ ಇರುವ ಒತ್ತೆಯಾಳುಗಳ ಬಿಡುಗಡೆ ಮತ್ತು ಇಸ್ರೇಲ್‌ ಬಂಧನದಲ್ಲಿ ಇರುವ ನೂರಾರು ಪ್ಯಾಲೆಸ್ಟೀನಿಯನ್‌ ಕೈದಿಗಳ ಬಿಡುಗಡೆ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಈಜಿಪ್ಟ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒತ್ತೆಯಾಳುಗಳ ಬಿಡುಗಡೆಗೆ ಸಿದ್ಧ: ಹಮಾಸ್‌

ದೀರ್ ಅಲ್–ಬಲಾಹ್ (ಎಪಿ/ಎಎಫ್‌ಪಿ): ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಶಾಂತಿ ಯೋಜನೆ ಅನ್ವಯ, ತನ್ನ ಬಳಿ ಇರುವ ಇಸ್ರೇಲ್‌ನ ಎಲ್ಲ ಜೀವಂತ ಒತ್ತೆಯಾಳುಗಳನ್ನು ಮತ್ತು ಕೆಲ ಒತ್ತೆಯಾಳುಗಳ ಮೃತ ದೇಹಗಳನ್ನು ಹಿಂದಿರುಗಿಸಲು ಸಿದ್ಧ ಇರುವುದಾಗಿ ಹಮಾಸ್‌ ತಿಳಿಸಿದೆ.

ಯೋಜನೆ ಪ್ರಕಾರ, ಹಮಾಸ್‌ ತನ್ನ ಬಳಿ ಇರುವ 48 ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕಿದೆ. ಈ ಪೈಕಿ 20 ಜನರು ಜೀವಂತ ಇದ್ದಾರೆ ಎಂದು ನಂಬಲಾಗಿದೆ. ಈ ಪ್ರಕ್ರಿಯೆ ಮೂರು ದಿನಗಳಲ್ಲಿ ನೆರವೇರಬೇಕು ಎಂದು ಹೇಳಲಾಗಿದೆ. ಇದಲ್ಲದೆ, ಹಮಾಸ್‌ ಅಧಿಕಾರವನ್ನು ಬಿಡಬೇಕು ಮತ್ತು ನಿಶ್ಶಸ್ತ್ರಗೊಳ್ಳಬೇಕು ಎಂದೂ ಪ್ರಸ್ತಾಪಿತ ಯೋಜನೆಯಲ್ಲಿ ಉಲ್ಲೇಖಿಸಲಾಗಿದೆ.

‘ಒತ್ತೆಯಾಳುಗಳ ಬಿಡುಗಡೆಗೆ ಸಮ್ಮತಿಸಿರುವ ಹಮಾಸ್‌, ಗಾಜಾ ಭವಿಷ್ಯ ಮತ್ತು ಪ್ಯಾಲೆಸ್ಟೀನಿಯರ ಹಕ್ಕು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮತ್ತಷ್ಟು ಮಾತುಕತೆ ಬಾಕಿ ಇದೆ ಎಂಬುದಾಗಿ ಅದು ತಿಳಿಸಿದೆ’ ಎಂದು ಮೂಲಗಳು ಹೇಳಿವೆ.

‘ಎಲ್ಲ ವಿಷಯಗಳನ್ನು ಪರಿಹರಿಸುವುದಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ಮಾತುಕತೆ ನಡೆಸಲಾಗುವುದು’ ಎಂದು ಹಮಾಸ್‌ನ ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.

2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ದಾಳಿ ನಡೆಸಿದ ಹಮಾಸ್‌, ಒಟ್ಟು 1,200 ಜನರನ್ನು ಕೊಂದಿತ್ತು. ಅಲ್ಲದೆ 251 ಜನರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿತ್ತು. ಈ ಸಂಬಂಧ ಗಾಜಾ ಪಟ್ಟಿಯಲ್ಲಿ ನಡೆದ ಯುದ್ಧದಲ್ಲಿ 66,000ಕ್ಕೂ ಹೆಚ್ಚು ಪ್ಯಾಲೆಸ್ಟೀನ್‌ ಜನರು ಮೃತಪಟ್ಟಿದ್ದಾರೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚು ಎಂದು ಗಾಜಾದ ಆರೋಗ್ಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಆಧಾರ್‌ ಅಪ್‌ಡೇಟ್‌ ಮಕ್ಕಳಿಗೆ ಶುಲ್ಕ ಮನ್ನಾ

ನವದೆಹಲಿ (ಪಿಟಿಐ): ಆಧಾರ್‌ ಕಾರ್ಡ್‌ನಲ್ಲಿ ಮಕ್ಕಳ ಬಯೋಮೆಟ್ರಿಕ್‌ ಅಪ್‌ಡೇಟ್‌ ಮಾಡಲು ವಿಧಿಸಲಾಗುತ್ತಿದ್ದ ಶುಲ್ಕವನ್ನು ವರ್ಷದ ಮಟ್ಟಿಗೆ ಮನ್ನಾ ಮಾಡಲಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಶನಿವಾರ ತಿಳಿಸಿದೆ.

ಅಕ್ಟೋಬರ್‌ 1ರಿಂದ ಇದು ಜಾರಿಗೆ ಬಂದಿದ್ದು, ಒಂದು ವರ್ಷದವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ಹೇಳಿದೆ.

ಮಕ್ಕಳ ‘ಕಡ್ಡಾಯ ಬಯೊಮೆಟ್ರಿಕ್‌ ನವೀಕರಣ’ಕ್ಕೆ (ಎಂಬಿಯು) ಶುಲ್ಕ ಮನ್ನಾ ಮಾಡಿರುವುದರಿಂದ 6 ಕೋಟಿ ಮಕ್ಕಳಿಗೆ ಉಪಯುಕ್ತವಾಗಲಿದೆ ಎಂದು ಅದು ತಿಳಿಸಿದೆ.

ಐದು ವರ್ಷದೊಳಗಿನ ಮಕ್ಕಳ ಭಾವಚಿತ್ರ, ಹೆಸರು, ಜನ್ಮ ದಿನಾಂಕ, ಲಿಂಗ, ವಿಳಾಸ ಮತ್ತು ಜನನ ಪ್ರಮಾಣ ಪತ್ರವನ್ನು ಒದಗಿಸಿ ಆಧಾರ್‌ಗೆ ನೋಂದಾಯಿಸಬಹುದು. ಈ ವಯಸ್ಸಿನ ಮಕ್ಕಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಪಾಪೆ (ಐರಿಸ್‌) ಅಷ್ಟಾಗಿ ಪಕ್ವವಾಗಿರುವುದಿಲ್ಲ. ಹೀಗಾಗಿ ಅವರ ಬಯೋಮೆಟ್ರಿಕ್‌ ದಾಖಲಿಸಲು ಆಗುವುದಿಲ್ಲ.

ಹಾಲಿ ನಿಯಮದ ಪ್ರಕಾರ ಮಕ್ಕಳಿಗೆ ಐದು ವರ್ಷಗಳು ತುಂಬಿದ ಬಳಿಕ ಅವರ ಬೆರಳಚ್ಚು, ಕಣ್ಣಿನ ಪಾಪೆ ಮತ್ತು ಭಾವಚಿತ್ರಗಳನ್ನು ಆಧಾರ್‌ನಲ್ಲಿ ಅಪ್‌ಡೇಟ್‌ ಮಾಡಬೇಕು. ಆ ಮಕ್ಕಳು 15ರಿಂದ 17ರ ನಡುವಿನ ವಯಸ್ಸಿನಲ್ಲಿ ಇರುವಾಗ ಎರಡನೇ ಬಾರಿಗೆ ಅವುಗಳನ್ನು ಅಪ್‌ಡೇಟ್‌ ಮಾಡಬೇಕು. ಹೀಗೆ 5ರಿಂದ 7 ವರ್ಷ ಮತ್ತು 15ರಿಂದ 17 ವರ್ಷದ ನಡುವಿನ ಮಕ್ಕಳ ಬಯೋಮೆಟ್ರಿಕ್‌ ಅಪ್‌ಡೇಟ್‌ಗೆ ಈಗ ಶುಲ್ಕ ವಿಧಿಸುವುದಿಲ್ಲ. ಆ ನಂತರ ಪ್ರತಿ ಅಪ್‌ಡೇಟ್‌ಗೆ ₹125 ವಿಧಿಸಲಾಗುತ್ತದೆ ಎಂದು ಪ್ರಾಧಿಕಾರ ಹೇಳಿದೆ. ಪ್ರಾಧಿಕಾರದ ಈ ನಿರ್ಧಾರದಿಂದ 5ರಿಂದ 17 ವರ್ಷದೊಳಗಿನ ಎಲ್ಲ ಮಕ್ಕಳಿಗೂ ‘ಕಡ್ಡಾಯ ಬಯೋಮೆಟ್ರಿಕ್‌ ಅಪ್‌ಡೇಟ್‌’ ವರ್ಷದ ಮಟ್ಟಿಗೆ ಉಚಿತವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪೂರ್ವಭಾವಿ ಪರೀಕ್ಷೆ ಬಳಿಕ ತಾತ್ಕಾಲಿಕ ಕೀ–ಉತ್ತರ ಪ್ರಕಟ: ಯುಪಿಎಸ್‌ಸಿ

ನವದೆಹಲಿ (ಪಿಟಿಐ): ಪೂರ್ವಭಾವಿ (ಪ್ರಿಲಿಮಿನರಿ) ಪರೀಕ್ಷೆ ಬಳಿಕ ತಾತ್ಕಾಲಿಕ ಕೀ–ಉತ್ತರಗಳನ್ನು ಪ್ರಕಟಿಸಲು ನಿರ್ಧರಿ ಸಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಪ್ರತಿಷ್ಠಿತ ನಾಗರಿಕ ಸೇವಾ ಪರೀಕ್ಷೆಗಳೂ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸುವ ಯುಪಿಎಸ್‌ಸಿ, ಕಳೆದ ತಿಂಗಳು ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ. ಅಂತಿಮ ಫಲಿತಾಂಶದ ಬಳಿಕ ಅಂತಿಮ ಕೀ– ಉತ್ತರಗಳನ್ನು ಪ್ರಕಟಿಸಲಾಗುವುದು ಎಂದು ಅದು ಮಾಹಿತಿ ನೀಡಿದೆ.

ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹೆಚ್ಚಿಸುವ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಆಯೋಗ ಪ್ರಮಾಣ ಪತ್ರ ಸಲ್ಲಿಸಿದೆ.

ಈ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ನೇಮಿಸಿದ್ದ ಅಮಿಕಸ್‌ ಕ್ಯೂರಿಯ ಸಲಹೆಗಳನ್ನು ಪಡೆದು, ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ, ಪ್ರಮಾಣ ಪತ್ರ ಸಲ್ಲಿಸಿರುವುದಾಗಿ ಆಯೋಗ ತಿಳಿಸಿದೆ.

‘ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಶೀಲಿಸಲಾಗುವುದು. ಅಭ್ಯರ್ಥಿಗಳು ಕೀ– ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸುವಾಗ, ಪ್ರತಿ ಆಕ್ಷೇಪಣೆಗೆ ಮೂರು ಅಧಿಕೃತ ಮೂಲಗಳ ದಾಖಲೆಗಳನ್ನು ಸಲ್ಲಿಸಬೇಕು. ಆ ದಾಖಲೆಗಳು ಪೂರಕ ಎಂದು ಕಂಡು ಬರದಿದ್ದರೆ ಅವುಗಳನ್ನು ತಿರಸ್ಕರಿಸಲಾ ಗುವುದು ಎಂದು ಆಯೋಗ ಹೇಳಿದೆ.

‘ಅಭ್ಯರ್ಥಿಗಳು ಸಲ್ಲಿಸಿದ ದಾಖಲೆಗಳು ಅಧಿಕೃತವೋ ಅಥವಾ ಅಲ್ಲವೋ ಎಂಬುದನ್ನು ಆಯೋಗ ನಿರ್ಧರಿಸುತ್ತದೆ’ ಎಂದು ಅದು ಉಲ್ಲೇಖಿಸಿದೆ.

‘ಇದಕ್ಕಾಗಿ ವಿಷಯ ತಜ್ಞರ ತಂಡವನ್ನು ರಚಿಸಲಾಗುತ್ತದೆ. ಅದು ಅಭ್ಯರ್ಥಿಗಳ ಆಕ್ಷೇಪಣೆಗಳು, ಮೂಲ ದಾಖಲೆಗಳನ್ನು ಪರಾಮರ್ಶಿಸಿ ಅಂತಿಮ ಕೀ– ಉತ್ತರಗಳನ್ನು ಸಿದ್ಧಪಡಿಸುತ್ತದೆ. ಅದನ್ನು ಆಧರಿಸಿಯೇ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗು ತ್ತದೆ. ಈ ವಿಧಾನಗಳನ್ನು ಸಾಧ್ಯವಾದಷ್ಟು ಬೇಗ ಅನುಸರಿಸಲು ಆಯೋಗ ಬಯಸುತ್ತದೆ’ ಎಂದು ವಿವರಿಸಿದೆ.

ಏಕ್ತಾಗೆ ಬೆಳ್ಳಿ, ಪ್ರವೀಣ್‌ಗೆ ಕಂಚಿನ ಪದಕ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ ಚಾಂಪಿಯನ್ ಪ್ರವೀಣ್ ಕುಮಾರ್ ಅವರು ಶನಿವಾರ ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನ ಟಿ64 ಹೈಜಂಪ್‌ನಲ್ಲಿ ಚಿನ್ನ ಗೆಲ್ಲಲಾಗದಿದ್ದರೂ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಕ್ಲಬ್‌ ಥ್ರೊನಲ್ಲಿ ಏಕತಾ ಭ್ಯಾನ್ ಬೆಳ್ಳಿ ಗೆದ್ದರು.

ಭಾರತದ ಅಥ್ಲೀಟುಗಳು ಒಂಬತ್ತನೇ ದಿನವಾದ ಶನಿವಾರ ಒಟ್ಟು ಮೂರು ಪದಕಗಳನ್ನು ಪಡೆದರು. ಆದರೆ ಬಂಗಾರ ಒಲಿಯಲಿಲ್ಲ.

ಭಾನುವಾರ ಈ ಕೂಟದ ಕೊನೆಯ ದಿನವಾಗಿದ್ದು, ಆತಿಥೇಯ ತಂಡ ಈಗಾಗಲೇ 18 ಪದಕಗಳನ್ನು ಗೆದ್ದುಕೊಂಡು ಪದಕಪಟ್ಟಿಯಲ್ಲಿ ಇದುವರೆಗಿನ ಅತ್ಯುತ್ತಮ ಸಾಧನೆ ದಾಖಲಿಸಿದೆ. ಇದರಲ್ಲಿ ಆರು ಚಿನ್ನ, ಏಳು ಬೆಳ್ಳಿ, ಐದು ಕಂಚಿನ ಪದಕಗಳು ಒಳಗೊಂಡಿವೆ. ಬ್ರೆಜಿಲ್ 37 ಪದಕಗಳೊಡನೆ (12–18–7) ಅಗ್ರಸ್ಥಾನದಲ್ಲಿದೆ. ಭಾರತದ ಈ ಹಿಂದಿನ ಶ್ರೇಷ್ಠ ಸಾಧನೆ ಜಪಾನ್‌ನ ಕೋಬೆ (2024) ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ದಾಖಲಾಗಿತ್ತು. ಅಲ್ಲಿ 17 ಪದಕಗಳನ್ನು (6–5–6) ಗೆದ್ದುಕೊಂಡಿತ್ತು.

‌ಭಾರತಕ್ಕೆ ದಿನದ ಮೂರನೇ ಪದಕವನ್ನು ಪುರುಷರ ಷಾಟ್‌ಪಟ್‌ ಎಫ್‌57 ವಿಭಾಗದಲ್ಲಿ ಸೋಮನ್ ರಾಣಾ ತಂದುಕೊಟ್ಟರು. ಸೇನೆಯಲ್ಲಿರುವ 42 ವರ್ಷದ ಸೋಮನ್ 14.69 ಮೀ. ದೂರ ಎಸೆ ದರು. ಹಾಂಗ್‌ಝೌ ಏಷ್ಯನ್ ಕ್ರೀಡೆಗಳಲ್ಲಿ ಬೆಳ್ಳಿ ಗೆದ್ದಿದ್ದ ಅವರು ನಾಲ್ಕನೆ ಥ್ರೊನಲ್ಲಿ ಈ ದೂರ ದಾಖಲಿಸಿದರು. ಈ ವಿಭಾಗದಡಿ ಸ್ಪರ್ಧಿಗಳು ಕಾಲಿನ ಊನದಿಂದಾಗಿ ಕುಳಿತ ಸ್ಥಿತಿಯಲ್ಲೇ ಸ್ಪರ್ಧಿಸಬೇಕಾಗುತ್ತದೆ.

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದ ಪ್ರವೀಣ್ ಇಲ್ಲೂ ಫೇವರಿಟ್ ಆಗಿದ್ದರು. ಆದರೆ ಅವರು 2.00 ಮೀ. ಎತ್ತರ ಜಿಗಿಯಲು ಮಾತ್ರ ಸಾಧ್ಯವಾಯಿತು. ಉಜ್ಬೇಕಿಸ್ತಾನದ ತೆಮುರ್ಬೆಕ್‌ ಗಿಯಾಝೋವ್ (2.03 ಮೀ.) ಚಿನ್ನ ಗೆದ್ದರು. ಬ್ರಿಟನ್‌ನ ಜೊನಾಥನ್ ಬ್ರೂಮ್–ಎಡ್ವರ್ಡ್ಸ್ ಸಹ 2.00 ಮೀ. ಜಿಗಿದರೂ ಬೆಳ್ಳಿ ಪಡೆದರು. 37 ವರ್ಷ ವಯಸ್ಸಿನ ಎಡ್ವರ್ಡ್ಸ್‌ ಮೊದಲ ಯತ್ನದಲ್ಲೇ 2.00 ಮೀ. ಜಿಗಿದರೆ, ಪ್ರವೀಣ್ ಎರಡನೇ ಯತ್ನದಲ್ಲಿ ಈ ಎತ್ತರ ದಾಖಲಿಸಿದ್ದರು.

‘10–12 ದಿನಗಳಿಂದ ಪೃಷ್ಠದ ನೋವು ಕಾಡುತ್ತಿದೆ. ಹೀಗಾಗಿ ರನ್‌ಅಪ್‌ ಕೂಡ ಮೊಟಕುಗೊಳಿಸಿದ್ದೆ’ ಎಂದು 22 ವರ್ಷ ವಯಸ್ಸಿನ ಪ್ರವೀಣ್ ಹೇಳಿದರು. ಈ ವಿಭಾಗದಲ್ಲಿ ಸ್ಪರ್ಧಿಸುವವರ ಒಂದು ಕಾಲು ಮಾತ್ರ ಸುಸ್ಥಿತಿಯಲ್ಲಿರುತ್ತದೆ.

ಭ್ಯಾನ್‌ಗೆ ಬೆಳ್ಳಿ: ಮಹಿಳೆಯರ ಎಫ್‌ 51 ಕ್ಲಬ್‌ ಥ್ರೊನಲ್ಲಿ ಏಕತಾ ಆರನೇ ಹಾಗೂ ಅಂತಿಮ ಯತ್ನದಲ್ಲಿ 19.80 ಮೀ. ದೂರ ದಾಖಲಿಸಿದರು. ಉಕ್ರೇನಿನ ಝೊಯಾ ಒವಿಸಿ (24.03 ಮೀ.) ಚಿನ್ನ ಗೆದ್ದರೆ, ತಟಸ್ಥ ದೇಶಗಳ ತಂಡದ ಏಕತೆರಿನಾ ಪೊಟಪೊವಾ (18.60 ಮೀ.) ಕಂಚು ಗೆದ್ದರು. ಕೈ ಅಥವಾ ಕಾಲುಗಳಲ್ಲಿ ಹೆಚ್ಚಿನ ಊನ ಇದ್ದವರು ಈ ವಿಭಾಗದಡಿ ಸ್ಪರ್ಧಿಸುತ್ತಾರೆ.

ಪ್ರಚಲಿತ ವಿದ್ಯಮಾನಗಳು: 4ನೇ ಅಕ್ಟೋಬರ್ 2025

  • ರಕ್ಷಿತ್‌, ಅರ್ಚನಾ ಅತ್ಯುತ್ತಮ ನಟನಟಿ

ಸಂದರ್ಭ: 2021ನೇ ಸಾಲಿನ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಶುಕ್ರವಾರ ಪ್ರಕಟಗೊಂಡಿದ್ದು, ರಕ್ಷಿತ್‌ ಶೆಟ್ಟಿ ಅವರು ‘ಚಾರ್ಲಿ 777’ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದು, ಅರ್ಚನಾ ಜೋಯಿಸ್‌ ‘ಮ್ಯೂಟ್‌’ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

  • ದಿವಂಗತ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಯುವರತ್ನ’ ಅತ್ಯುತ್ತಮ ಮನರಂಜನಾ ಚಿತ್ರ’ ಎಂಬ ಹಿರಿಮೆಗೆ ಪಾತ್ರವಾಗಿದೆ.
  • ರಘು ಕೆ.ಎಂ ನಿರ್ದೇಶನದ ‘ದೊಡ್ಡಹಟ್ಟಿ ಬೋರೇಗೌಡ’ ಮೊದಲನೇ ಅತ್ಯುತ್ತಮ ಚಿತ್ರವಾಗಿದ್ದು, ಕಿರಣ್‌ ರಾಜ್‌ ನಿರ್ದೇಶನದ ‘ಚಾರ್ಲಿ 777’ ಎರಡನೇ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ.
  • ಹೃದಯ ಶಿವ ನಿರ್ದೇಶನದ ‘ಬಿಸಿಲು ಕುದುರೆ’ ಮೂರನೇ ಅತ್ಯುತ್ತಮ ಚಿತ್ರವಾಗಿದೆ. ಕೃಷ್ಣಮೂರ್ತಿ ಚಮರಂ ನಿರ್ದೇಶನದ ‘ಭಾರತೀಯ ಪ್ರಜೆಗಳಾದ ನಾವು’ ಅತ್ಯುತ್ತಮ ಸಾಮಾಜಿಕ ಕಳಕಳಿಯ ಚಿತ್ರವಾಗಿ ಆಯ್ಕೆಗೊಂಡಿದೆ.
  • ‘ರತ್ನನ್‌ ಪ್ರಪಂಚ’ ಚಿತ್ರಕ್ಕಾಗಿ ಪ್ರಮೋದ್‌ ಅತ್ಯುತ್ತಮ ಪೋಷಕ ನಟ ಹಾಗೂ ಉಮಾಶ್ರೀ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪತ್ರಕರ್ತ ಸದಾಶಿವ ಶೆಣೈ ಅಧ್ಯಕ್ಷತೆಯಲ್ಲಿ ಆಯ್ಕೆ ಸಲಹಾ ಸಮಿತಿ ರಚಿಸಲಾಗಿತ್ತು.
  • ಕೆಎಸ್ಆರ್ಟಿಸಿಶಕ್ತಿವಿಶ್ವದಾಖಲೆ

ಸಂದರ್ಭ: ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಯಾದ ‘ಶಕ್ತಿ’ ಯೋಜನೆಯಡಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್‌ಗಳಲ್ಲಿ ಮಹಿಳೆಯರು 500 ಕೋಟಿ‌ ಬಾರಿ ಉಚಿತವಾಗಿ ಪ್ರಯಾಣ ಮಾಡಿರುವುದು ವಿಶ್ವದಾಖಲೆಗೆ ಸೇರ್ಪಡೆಯಾಗಿದೆ.

  • ಇತ್ತೀಚೆಗಷ್ಟೇ ಗೋಲ್ಡನ್ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್‌ಗೆ ಸೇರ್ಪಡೆಯಾಗಿದ್ದ ಉಚಿತ ಪ್ರಯಾಣವು ಈಗ ಇಂಟರ್‌ ನ್ಯಾಷನಲ್‌ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ವರ್ಲ್ಡ್‌ ರೆಕಾರ್ಡ್ ಆಫ್‌ ಎಕ್ಸೆಲೆನ್ಸ್‌ ಆಗಿ ದಾಖಲಾಗಿದೆ.
  • ನಿಗಮಗಳ ಅಧಿಕಾರಿಗಳು, ನೌಕರರ ಪರಿಶ್ರಮ ಮತ್ತು ಪ್ರಯಾಣಿಕರ ಬೆಂಬಲದಿಂದ ಈ ಸಾಧನೆ ಆಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
  • ಚಿನ್ನದ ಬೆಲೆ ಅನಿಶ್ಚಿತತೆಯ ಮಾಪಕ

ಸಂದರ್ಭ:  ‘ಕಚ್ಚಾ ತೈಲದ ಬೆಲೆಯು ತೀರಾ ಈಚಿನವರೆಗೆ ಜಾಗತಿಕ ಅನಿಶ್ಚಿತತೆಗಳ ಮಾಪಕದಂತೆ ಕೆಲಸ ಮಾಡು ತ್ತಿತ್ತು. ಈಗ ಆ ಸ್ಥಾನವನ್ನು ಚಿನ್ನದ ಬೆಲೆಯು ಆಕ್ರಮಿಸಿಕೊಂಡಿರುವಂತೆ ಕಾಣುತ್ತಿದೆ’ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಹೇಳಿದ್ದಾರೆ.

  • ವಿತ್ತೀಯ ದೃಷ್ಟಿಯಿಂದ ಈ ಸಂದರ್ಭದಲ್ಲಿ ಜಗತ್ತಿನ ಬಹುತೇಕ ದೇಶಗಳು ಒತ್ತಡಕ್ಕೆ ಸಿಲುಕಿವೆ. ಇಂದಿನ ವ್ಯಾಪಾರ ನೀತಿಗಳು ಕೆಲವು ದೇಶಗಳ ಆರ್ಥಿಕ ಬೆಳವಣಿಗೆಯನ್ನು ಹಾಳು ಮಾಡಬಹುದು. ಜಾಗತಿಕ ಮಟ್ಟದಲ್ಲಿ ಷೇರುಪೇಟೆಗಳಲ್ಲಿ ಒಂದಿಷ್ಟು ಕುಸಿತ ಎದುರಾಗಬಹುದು ಎಂದು ಮಲ್ಹೋತ್ರಾ ಅವರು ಎಚ್ಚರಿಕೆ ನೀಡಿದ್ದಾರೆ.
  • ರೆಪೊ ದರವನ್ನು ಶೇಕಡ 5.5ರ ಮಟ್ಟದಲ್ಲಿ ಕಾಯ್ದುಕೊಳ್ಳುವ ತೀರ್ಮಾನವನ್ನು ಬುಧವಾರ ತೆಗೆದುಕೊಂಡ ಸಂದರ್ಭದಲ್ಲಿ ಆರ್‌ಬಿಐ, ಜಾಗತಿಕ ಅರ್ಥ ವ್ಯವಸ್ಥೆಯು ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ಗಟ್ಟಿತನವನ್ನು ತೋರಿಸಿದೆಯಾದರೂ, ಮುನ್ನೋಟವು ಅಷ್ಟೊಂದು ಸ್ಪಷ್ಟವಾಗಿಲ್ಲ ಎಂದು ಹೇಳಿದೆ.
  • ‘ಹಿಂದಿನ ದಶಕದಲ್ಲಿ ಜಾಗತಿಕ ಮಟ್ಟದ ಬಿಕ್ಕಟ್ಟುಗಳು ಕಚ್ಚಾ ತೈಲ ಬೆಲೆ ಏರಿಕೆಗೆ ಕಾರಣವಾಗುತ್ತಿದ್ದವು. ಅಂತಹ ಬಿಕ್ಕಟ್ಟುಗಳು ಈಗ ಎದುರಾಗಿದ್ದರೂ, ಕಚ್ಚಾ ತೈಲದ ಬೆಲೆಯು ಒಂದು ಹಂತದಲ್ಲಿ ಮಾತ್ರ ಏರಿಳಿತ ಕಾಣುತ್ತಿದೆ. ದೇಶದ ಒಟ್ಟು ಜಿಡಿಪಿಯಲ್ಲಿ ಕಚ್ಚಾ ತೈಲದ ಮಹತ್ವವು ಕಡಿಮೆ ಆಗಿರುವುದು ಇದಕ್ಕೆ ಕಾರಣ ಆಗಿರಬಹುದು. ಇದು ಭಾರತದಲ್ಲಿ ಮಾತ್ರವಲ್ಲದೆ, ವಿಶ್ವದ ಇತರೆಡೆಗಳಲ್ಲಿಯೂ ಆಗಿದೆ’ ಎಂದು ಮಲ್ಹೋತ್ರಾ ಹೇಳಿದ್ದಾರೆ. ‘ಬಹುಶಃ ಈಗ ಚಿನ್ನದ ಬೆಲೆಯು ಜಾಗತಿಕ ಅನಿಶ್ಚಿತತೆಯ ಮಾಪಕದಂತೆ ಕೆಲಸ ಮಾಡುತ್ತಿದೆ’ ಎಂದು ಅವರು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶದಲ್ಲಿ ಹೇಳಿದ್ದಾರೆ.
  • ತಂತ್ರಜ್ಞಾನ ವಲಯದ ಕೆಲವು ಷೇರುಗಳ ಬೆಲೆಯು ಜಾಗತಿಕ ಷೇರುಪೇಟೆ ಗಳ ಒಟ್ಟಾರೆ ಏರಿಕೆಗೆ ಕಾರಣವಾಗಿರುವ ಬಗ್ಗೆ ಅನಿಸಿಕೆ ಹಂಚಿಕೊಂಡ ಅವರು, ‘ಷೇರುಪೇಟೆಗಳಲ್ಲಿ ಕುಸಿತವೊಂದು ಎದುರಾಗಬಹುದು’ ಎಂದು ಎಚ್ಚರಿಸಿದ್ದಾರೆ.
  • ದೇಶದ ಅರ್ಥ ವ್ಯವಸ್ಥೆಯ ಮೂಲಭೂತ ಅಂಶಗಳು ಬಲಿಷ್ಠವಾಗಿ ಇವೆ. ಜಗತ್ತಿನಲ್ಲಿ ಅನಿಶ್ಚಿತತೆ ಇದ್ದರೂ ಭಾರತದಲ್ಲಿ ಸ್ಥಿರತೆ ಇದೆ ಎಂದು ಮಲ್ಹೋತ್ರಾ ಹೇಳಿದ್ದಾರೆ.
  • ಹಣದುಬ್ಬರ ಕಡಿಮೆ ಇರುವುದು, ವಿದೇಶಿ ವಿನಿಮಯ ಸಂಗ್ರಹವು ಚೆನ್ನಾಗಿ ಇರುವುದು ಹಾಗೂ ಬ್ಯಾಂಕ್‌ ಮತ್ತು ಕಾರ್ಪೊರೇಟ್ ಕಂಪನಿಗಳ ಲೆಕ್ಕಪತ್ರವು ಸುಸ್ಥಿತಿಯಲ್ಲಿ ಇರುವುದು ಇದಕ್ಕೆ ಕಾರಣ ಎಂದಿದ್ದಾರೆ.
  • ಭಾರತದೊಂದಿಗೆ ವ್ಯಾಪಾರಅಸಮತೋಲನ ಸರಿಪಡಿಸಿ

ಸಂದರ್ಭ: ಅಧಿಕ ಪ್ರಮಾಣದ ಕಚ್ಚಾತೈಲ ಖರೀದಿಸುತ್ತಿರುವ ಭಾರತದೊಂದಿಗೆ ವ್ಯಾಪಾರ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಉತ್ಪನ್ನ ಹಾಗೂ ಔಷಧವನ್ನು ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌ ತನ್ನ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

  • ಇದೇ ಡಿಸೆಂಬರ್‌ನಲ್ಲಿ ನಡೆಯುವ ವಾರ್ಷಿಕ ಶೃಂಗಸಭೆಗೆ ಭಾರತಕ್ಕೆ ಭೇಟಿ ನೀಡುವುದನ್ನು ಖಚಿತಪಡಿಸಿದ ಬೆನ್ನಲ್ಲೇ ಪುಟಿನ್‌ ಈ ಘೋಷಣೆ ಮಾಡಿದ್ದಾರೆ.
  • ರಷ್ಯಾ ದಕ್ಷಿಣ ಭಾಗದ ಸೋಚಿ ಪಟ್ಟಣದಲ್ಲಿರುವ ‘ಬ್ಲ್ಯಾಕ್‌ ಸೀ’ ರೆಸಾರ್ಟ್‌ನಲ್ಲಿ ಗುರುವಾರ ತಡರಾತ್ರಿ ನಡೆದ ಭಾರತ ಸೇರಿದಂತೆ 140 ದೇಶದ ಭದ್ರತೆ ಹಾಗೂ ಭೌಗೋಳಿಕ ರಾಜಕೀಯ ತಜ್ಞರನ್ನು ಒಳಗೊಂಡ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.
  • ‘ರಷ್ಯಾದಿಂದ ಕಚ್ಚಾತೈಲ ಖರೀದಿಸುತ್ತಿರುವ ಭಾರತದ ಮೇಲೆ ಅಮೆರಿಕವು ಹೆಚ್ಚಿನ ಸುಂಕ ಹೇರಿದ್ದರಿಂದ ಉಂಟಾದ ನಷ್ಟಕ್ಕೆ ಪ್ರತಿಯಾಗಿ ಅಲ್ಲಿಂದ ಹೆಚ್ಚಿನ ವಸ್ತುಗಳನ್ನು ಖರೀದಿಸುವ ಮೂಲಕ ಸಮತೋಲನಗೊಳಿಸಲಾಗುತ್ತದೆ. ಆ ಮೂಲಕ ಸಾರ್ವಭೌಮ ರಾಷ್ಟ್ರ ಪ್ರತಿಷ್ಠೆಯೂ ಹೆಚ್ಚಲಿದೆ’ ಎಂದು ತಿಳಿಸಿದ್ದಾರೆ.
  • ರಷ್ಯಾದಿಂದ ಕಚ್ಚಾತೈಲ ಖರೀದಿಸುತ್ತಿರುವ ಭಾರತದ ಮೇಲೆ ಅಮೆರಿಕವು ಶೇ 25ರಷ್ಟು ಹೆಚ್ಚುವರಿ ಸುಂಕ ವಿಧಿಸುತ್ತಿದ್ದು, ಶೇಕಡಾ 50ರಷ್ಟು ತೆರಿಗೆ ವಿಧಿಸಿದಂತಾಗಿದೆ. ಇದರಿಂದ ಭಾರತದಿಂದ ಅಮೆರಿಕಕ್ಕೆ ರಫ್ತು ಮಾಡುವ ವಸ್ತುಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ.
  • ಈ ವಿಚಾರವನ್ನು ಉಲ್ಲೇಖಿಸಿದ ಪುಟಿನ್‌, ‘ವ್ಯಾಪಾರ ಅಸಮತೋಲನ ತೆಗೆದುಹಾಕುವ ನಿಟ್ಟಿನಲ್ಲಿ ಭಾರತದ ಕೃಷಿ, ಔಷಧಗಳನ್ನು ಹೆಚ್ಚಿನ ಸಂಖ್ಯೆಯನ್ನು ಖರೀದಿಸಲಾಗುತ್ತದೆ. ಔಷಧ, ಔಷಧ ಉತ್ಪನ್ನಗಳ ವಿಚಾರದಲ್ಲಿ ನಮ್ಮ ಕಡೆಯಿಂದ ಕ್ರಮ ಕೈಗೊಳ್ಳಬಹುದು’ ಎಂದು ತಿಳಿಸಿದ್ದಾರೆ.
  • ಮೊದಲ ಮಹಿಳಾ ಆರ್ಚ್ ಬಿಷಪ್ಸೆರಾ

ಸಂದರ್ಭ: ಮೊಟ್ಟ ಮೊದಲ ಬಾರಿಗೆ ಮಹಿಳಾ ಆರ್ಚ್‌ಬಿಷಪ್‌ ನೇಮಕ ಮಾಡುವ ಮೂಲಕ ಚರ್ಚ್‌ ಆಫ್‌ ಇಂಗ್ಲೆಂಡ್‌ ಇತಿಹಾಸ ನಿರ್ಮಾಣ ಮಾಡಿದೆ. ಕ್ಯಾಂಟರ್‌ಬರಿ ಚರ್ಚ್‌ನ ಆರ್ಚ್‌ಬಿಷಪ್‌ ಆಗಿ ಸೆರಾ ಮುಲ್ಲಲಿ ಅವರನ್ನು ಶುಕ್ರವಾರ ಘೋಷಣೆ ಮಾಡಲಾಗಿದೆ.

  • ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಗುರಿಯಾಗಿ ರೆವರೆಂಡ್ ಜಸ್ಟಿನ್‌ ವಿಲ್ಬೆ ಅವರು ಕಳೆದ ವರ್ಷ ರಾಜೀನಾಮೆ ನೀಡಿದ್ದರಿಂದ ಈ ಸ್ಥಾನ ತೆರವಾಗಿತ್ತು. ಸೆರಾ ಅವರು 2018ರಿಂದ ಬಿಷಪ್‌ ಆಗಿದ್ದರು.
  • 106ನೇ ಆರ್ಚ್‌ಬಿಷಪ್‌ ಆಗಿ ಸೆರಾ ಅವರ ನೇಮಕಕ್ಕೆ ಮೂರನೇ ಕಿಂಗ್‌ ಚಾರ್ಲ್ಸ್‌ ಅಧಿಕೃತ ಒಪ್ಪಿಗೆ ನೀಡಿದ್ದರು. ಶುಶ್ರೂಷಕಿಯಾಗಿದ್ದ ಸೆರಾ ಅವರ ನೇಮಕವನ್ನು ಇಂಗ್ಲೆಂಡ್‌ ಪ್ರಧಾನಿ ಕೀರ್ ಸ್ಟಾರ್ಮರ್‌ ಸ್ವಾಗತಿಸಿದ್ದಾರೆ.
  • 63 ವರ್ಷದ ಸೆರಾ 106ನೇ ಆರ್ಚ್‌ಬಿಷಪ್‌ ಆಗಲಿದ್ದಾರೆ. ಮುಂದಿನ ವರ್ಷ ಜನವರಿಯಲ್ಲಿ ಅವರ ನೇಮಕವನ್ನು ದೃಢೀಕರಿಸಲಾಗುತ್ತದೆ.
  • ಶಾಂತಿ ಒಪ್ಪಂದಕ್ಕೆ ಸಹಿ: ಹಮಾಸ್ಗೆ ಗಡುವು

ಸಂದರ್ಭ: ಗಾಜಾದಲ್ಲಿ ಯುದ್ಧ ಕೊನೆಗೊಳಿಸುವ ಉದ್ದೇಶದಿಂದ ಸಿದ್ಧಪಡಿಸಿರುವ 20 ಅಂಶಗಳ ಯೋಜನೆಗೆ, ಅಮೆರಿಕ ಕಾಲಮಾನದ ಪ್ರಕಾರ ಭಾನುವಾರ ಸಂಜೆ 6 ಗಂಟೆಯೊಳಗೆ (ಭಾರತೀಯ ಕಾಲಮಾನ ನಸುಕಿನ ಜಾವ 3.30) ಸಹಿ ಹಾಕಬೇಕು ಎಂದು ಹಮಾಸ್‌ ಸಂಘಟನೆಗೆ ಅಮೆರಿಕ ಅಧ್ಯಕ್ಷ ಟ್ರಂಪ್‌ ತಾಕೀತು ಮಾಡಿದ್ದಾರೆ.

  • ‘ಇದು ಕೊನೆಯ ಅವಕಾಶ. ಒಂದು ವೇಳೆ ಹಮಾಸ್‌ ಈ ಒಪ್ಪಂದಕ್ಕೆ ಸಹಿ ಹಾಕದಿ ದ್ದರೆ ಹಿಂದೆಂದೂ ಕಂಡಿರದಂತಹ ಭೀಕರ ದಾಳಿಗಳನ್ನು ಹಮಾಸ್‌ ಎದುರಿಸಬೇಕಾಗುತ್ತದೆ’ ಎಂದೂ ಎಚ್ಚರಿಕೆ ನೀಡಿದ್ದಾರೆ.
  • ಈ ಕುರಿತು ಅವರು ಪೋಸ್ಟ್‌ ಮಾಡಿದ್ದು, ‘ಅಮಾಯಕ ಪ್ಯಾಲೆಸ್ಟೀನಿಯನ್ನರು ಕೂಡಲೇ ಗಾಜಾದಿಂದ ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕು’ ಎಂದೂ ಅವರು ಹೇಳಿದ್ದಾರೆ.

‘ಕಾಲಾವಕಾಶ ಅಗತ್ಯ’

  • ಗಾಜಾಪಟ್ಟಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಸ್ತಾಪಿಸಿರುವ 20 ಅಂಶಗಳ ಯೋಜನೆಯನ್ನು ಅಧ್ಯಯನ ನಡೆಸಲು ಇನ್ನಷ್ಟು ಕಾಲಾವಕಾಶ ಬೇಕು ಎಂದು ಹಮಾಸ್‌ ಸಂಘಟನೆ ಹೇಳಿದೆ. ‘ಟ್ರಂಪ್‌ ಅವರ ಯೋಜನೆ ಬಗ್ಗೆ ಹಮಾಸ್‌ ಸಮಾಲೋಚನೆ ನಡೆಸುತ್ತಿದೆ. ಇದಕ್ಕಾಗಿ ಸ್ವಲ್ಪ ಕಾಲಾವಕಾಶ ಅಗತ್ಯವಿರುವ ಬಗ್ಗೆ ಸಂಧಾನಕಾರರಿಗೆ ಮಾಹಿತಿ ನೀಡಲಾಗಿದೆ’ ಎಂದು ಹೆಸರು ಹೇಳಲು ಇಚ್ಛಿಸದ, ಹಮಾಸ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
  • ವೇಟ್ಲಿಫ್ಟಿಂಗ್‌: ಮೀರಾಗೆ ಬೆಳ್ಳಿ

ಸಂದರ್ಭ: ಅನುಭವಿ ಮೀರಾಬಾಯಿ ಚಾನು ಅವರು ವಿಶ್ವ ವೇಟ್‌ಲಿಫ್ಟಿಂಗ್‌ ಚಾಂಪಿಯನ್‌ ಷಿಪ್‌ನ ಮಹಿಳೆಯರ 48 ಕೆ.ಜಿ. ವಿಭಾಗ ದಲ್ಲಿ ಬೆಳ್ಳಿ ಪದಕ ಗೆದ್ದು ಕೊಂಡರು. ಇದು ವಿಶ್ವ ಚಾಂಪಿಯನ್‌ಷಿಪ್‌ಗಳಲ್ಲಿ ಅವರಿಗೆ ಮೂರನೇ ಪದಕ.

  • ಈ ಹಿಂದೆ 2017 ಮತ್ತು 2022ರಲ್ಲೂ ಅವರು ರಜತ ಪದಕ ಜಯಿಸಿದ್ದರು. ಅವರು ಒಟ್ಟು 199 ಕೆ.ಜಿ. ಭಾರ ಎತ್ತಿದರು. 31 ವರ್ಷ ವಯಸ್ಸಿನ ಚಾನು ಸ್ನಾಚ್‌ನಲ್ಲಿ 84 ಕೆ.ಜಿ ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ115 ಕೆ.ಜಿ ಎತ್ತಿದರು.
  • ಸ್ನಾಚ್‌ ಸ್ಪರ್ಧೆಯ ವೇಳೆ ಅವರು ಪರದಾಡಿದರು. 87 ಕೆ.ಜಿ. ಎತ್ತಲು ಹೋಗಿ ಎರಡು ಸಲ ವಿಫಲರಾದರು. ಆದರೆ ಕ್ಲೀನ್ ಮತ್ತು ಜರ್ಕ್‌ನಲ್ಲಿ ಅವರು ಮೂರೂ ಯತ್ನಗಳಲ್ಲಿ (109, 112 ಮತ್ತು 115 ಕೆ.ಜಿ) ಸರಾಗವಾಗಿ ಭಾರ ಎತ್ತಿದರು. ಅವರು 115 ಕೆ.ಜಿ. ಭಾರವನ್ನು ಇದಕ್ಕಿಂತ ಮೊದಲು ಟೋಕಿಯೊ ಒಲಿಂಪಿಕ್ಸ್‌ನಲ್ಲಿ (2021) ಎತ್ತಿದ್ದರು.
  • ಉತ್ತರ ಕೊರಿಯಾದ ರಿ ಸಾಂಗ್ ಗುಮ್ 213 ಕೆ.ಜಿ. ಭಾರ (91 ಕೆ.ಜಿ+ 122 ಕೆ.ಜಿ) ಎತ್ತಿ ಚಿನ್ನ ಗೆದ್ದರಲ್ಲದೇ, ಆ ಹಾದಿಯಲ್ಲಿ ಕ್ಲೀನ್ ಆ್ಯಂಡ್‌ ಜರ್ಕ್‌ ಮತ್ತು ಒಟ್ಟು ತೂಕ ವಿಭಾಗದಲ್ಲಿ ನೂತನ ವಿಶ್ವ ದಾಖಲೆಯನ್ನು ಸ್ಥಾಪಿಸಿದರು.
  • ಥಾಯ್ಲೆಂಡ್‌ನ ಥಾನ್ಯಥಾನ್ ಸುಕ್ಚೆರೋನ್‌ ಒಟ್ಟು 198 ಕೆ.ಜಿ. ಭಾರ (88+110 ಕೆ.ಜಿ) ಎತ್ತಿ ಕಂಚಿನ ಪದಕ ತಮ್ಮದಾಗಿಸಿಕೊಂಡರು.
  • ನಿಶಾದ್ಕುಮಾರ್‌, ಸಿಮ್ರನ್ಗೆ ಚಿನ್ನ

ಸಂದರ್ಭ: ಭಾರತದ ನಿಶಾದ್ ಕುಮಾರ್‌ ಅವರು ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನ ಹೈಜಂಪ್‌ ಟಿ47 ಸ್ಪರ್ಧೆಯಲ್ಲಿ ನೂತನ ಏಷ್ಯನ್ ದಾಖಲೆಯೊಡನೆ ಚಿನ್ನ ಗೆದ್ದರು. ಈ ಕೂಟದ ಏಳನೇ ದಿನ ಸಿಮ್ರನ್‌ ಶರ್ಮಾ ಅವರು ವೈಯಕ್ತಿಕ ಶ್ರೇಷ್ಠ ಅವಧಿಯೊಡನೆ ಮಹಿಳೆಯರ 100 ಮೀ. (ಟಿ12) ಸ್ಪರ್ಧೆಯಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

  • ಈ ಹಿಂದೆ ಹಲವು ಅಂತರ ರಾಷ್ಟ್ರೀಯ ಕೂಟಗಳಲ್ಲಿ ಎರಡನೇ ಸ್ಥಾನ ಗಳಿಸಿದ್ದ ನಿಶಾದ್‌ 2.14 ಮೀ. ಜಿಗಿಯುವ  ಮೂಲಕ ಮೊದಲ ಬಾರಿ ವಿಶ್ವ ಕೂಟದಲ್ಲಿ ಚಿನ್ನ ಗೆದ್ದರು. ಅವರು  ಟೋಕಿಯೊ ಮತ್ತು ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಮತ್ತು ಎರಡು ವಿಶ್ವ ಚಾಂಪಿಯನ್‌ಷಿಪ್‌ಗಳಲ್ಲಿ ಬೆಳ್ಳಿ ಗೆದ್ದಿದ್ದರು. ಮೂರು ಬಾರಿಯ ವಿಶ್ವ ಚಾಂಪಿಯನ್ ಅಮೆರಿಕದ ರೊಡೆರಿಕ್‌ ಟೌನ್ಸೆಂಡ್ (2.03 ಮೀ.) ಎರಡನೇ ಸ್ಥಾನಕ್ಕೆ ಸರಿದರು.
  • ಇಲ್ಲಿ ಚಿನ್ನ ಖಚಿತವಾದ ನಂತರ ನಿಶಾದ್ ಅವರು ವಿಶ್ವ ದಾಖಲೆಗೆ ಯತ್ನಿಸಿದರೂ 2.18 ಮೀ. ಜಿಗಿಯಲು ಹೋಗಿ ವಿಫಲರಾದರು. ಮುಂಗೈ ಕಳೆದುಕೊಂಡ ಸ್ಪರ್ಧಿಗಳು ಈ ವಿಭಾಗದಲ್ಲಿ ಸ್ಪರ್ಧಿಸುತ್ತಾರೆ.
  • ಸಿಮ್ರನ್‌ 100 ಮೀ. ಓಟವನ್ನು 11.95 ಸೆ.ಗಳಲ್ಲಿ ಕ್ರಮಿಸಿದರು. ಈ ವಿಭಾಗದ ಅಥ್ಲೀಟುಗಳು ಭಾಗಶಃ ದೃಷ್ಟಿದೋಷ ಹೊಂದಿರುತ್ತಾರೆ.
  • ಭಾರತದ ಪ್ರೀತಿ ಪಾಲ್ 30.903 ಸೆ.ಗಳೊಂದಿಗೆ 200 ಮೀ. ಓಟದಲ್ಲಿ (ಟಿ35) ಕಂಚಿನ ಪದಕ ಗೆದ್ದುಕೊಂಡರು.