Tue. May 5th, 2026

Kannada

ಪ್ರಚಲಿತ ವಿದ್ಯಮಾನಗಳು: 12ನೇ ಸೆಪ್ಟೆಂಬರ್ 2025

ನದಿ ಜೋಡಣೆ: ಪಾಲು ಹೆಚ್ಚಳಕ್ಕೆ ಪಟ್ಟು

ಸಂದರ್ಭ: ಗೋದಾವರಿ–ಕಾವೇರಿ ನದಿಗಳ ಜೋಡಣೆಯಲ್ಲಿ ನೀರಿನ ಪಾಲು ಹಂಚಿಕೆ ಸೂತ್ರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಸೇರಿದಂತೆ ಪಾಲುದಾರ ರಾಜ್ಯಗಳು, ನೀರಿನ ಪಾಲನ್ನು ನ್ಯಾಯಬದ್ಧವಾಗಿ ಹಂಚಿಕೆ ಮಾಡಿದರಷ್ಟೇ ಕರಡು ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧ ಎಂದು ಸ್ಪಷ್ಟಪಡಿಸಿವೆ.
  • ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ಅಂತರ್‌ ನದಿಗಳ ಜೋಡಣೆಯ ವಿಶೇಷ ಸಮಿತಿಯ 23ನೇ ಸಭೆ ಒಮ್ಮತಾಭಿಪ್ರಾಯಕ್ಕೆ ಬರುವಲ್ಲಿ ವಿಫಲ ಆಯಿತು.
  • ಇನ್ನೊಂದೆಡೆ, ಯೋಜನೆಯ ಅನುಷ್ಠಾನಕ್ಕೆ ತಮಿಳುನಾಡು ಪೂರ್ಣ ಬೆಂಬಲ ವ್ಯಕ್ತಪಡಿಸಿತು. ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿತು.
  • ನದಿ ಜೋಡಣೆಗೆ ತಾತ್ವಿಕ ಒಪ್ಪಿಗೆ ವ್ಯಕ್ತಪಡಿಸಿರುವ ತೆಲಂಗಾಣವು, ಪೋಲವರಂನಿಂದಲೇ ನದಿ ತಿರುವು ಯೋಜನೆ ಕೈಗೆತ್ತಿಕೊಳ್ಳಬೇಕು ಎಂದು ಪಟ್ಟು ಹಿಡಿಯಿತು.
  • ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿ ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಿಗೆ ಕುಡಿಯುವ ನೀರು, ಕೈಗಾರಿಕೆ ಹಾಗೂ ನೀರಾವರಿ ಉದ್ದೇಶಕ್ಕೆ ನೀರಿನ ಹಂಚಿಕೆ ಮಾಡಲಾಗಿದೆ. ಆದರೆ, ಕರ್ನಾಟಕಕ್ಕೆ ಕೈಗಾರಿಕೆ ಹಾಗೂ ಕುಡಿಯುವ ಉದ್ದೇಶಕ್ಕೆ ಮಾತ್ರ ಹಂಚಿಕೆ ಆಗಿದೆ. ರಾಜ್ಯಕ್ಕೆ ನೈಜವಾಗಿ 2.19 ಟಿಎಂಸಿ ಅಡಿ ಮಾತ್ರ ಸಿಗಲಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಲಿದೆ ಎಂಬುದು ಕರ್ನಾಟಕದ ಪ್ರಮುಖ ತಕರಾರು. ಈ ಮಹಾ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರ ಧ್ವನಿ ಎತ್ತಿದೆ.

147 ಟಿಎಂಸಿ ಅಡಿಗಾಗಿ ಜಟಾಪಟಿ

  • ಗೋದಾವರಿಕಾವೇರಿ ನದಿಗಳ ಜೋಡಣೆ ಯೋಜನೆಯಲ್ಲಿ ಗೋದಾವರಿಕೃಷ್ಣಾ (ನಾಗಾರ್ಜುನಸಾಗರ), ಕೃಷ್ಣಾಪೆನ್ನಾರ್ (ಸೋಮಶಿಲಾ) ಹಾಗೂ ಪೆನ್ನಾರ್‌–ಕಾವೇರಿ ನದಿಗಳ ಜೋಡಣೆ ಮಾಡಲಾಗುವುದು.
  • ಗೋದಾವರಿ ಕಣಿವೆಯ ಹೆಚ್ಚುವರಿ 248 ಟಿಎಂಸಿ ಅಡಿ ನೀರನ್ನು ಕೃಷ್ಣಾ, ಪೆನ್ನಾರ್ಹಾಗೂ ಕಾವೇರಿ ಕಣಿವೆಯ ಭಾಗಕ್ಕೆ ಹರಿಸಲು ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ಯೋಜಿಸಿತ್ತು. ಈ ಪ್ರಸ್ತಾವಕ್ಕೆ ರಾಜ್ಯಗಳು ಒಪ್ಪಿರಲಿಲ್ಲ. ಬಳಿಕ ಪರಿಷ್ಕೃತ ಪ್ರಸ್ತಾವ ಸಿದ್ಧಪಡಿಸಲಾಗಿತ್ತು.
  • ಗೋದಾವರಿ ನದಿಯ ಉಪನದಿ ಇಂದ್ರಾವಳಿಯಲ್ಲಿ ಬಳಕೆಯಾಗದ 147.93 ಟಿಎಂಸಿ ಅಡಿ ನೀರನ್ನು ನದಿ ತಿರುವು ಯೋಜನೆಗೆ ಬಳಸಿಕೊಳ್ಳಲು ತೀರ್ಮಾನಿಸಲಾಗಿತ್ತು. ಬೇಡ್ತಿವರದಾ ನದಿ ಜೋಡಣೆಯಿಂದ 18 ಟಿಎಂಸಿ ಅಡಿ ನೀರು ದೊರಕಲಿದೆ ಎಂದು ಅಂದಾಜಿಸಲಾಗಿದೆ.

ವಿಷ್ಣು, ಸರೋಜಾದೇವಿಗೆ ‘ಕರ್ನಾಟಕ ರತ್ನ’

ಸಂದರ್ಭ: ಚಲನಚಿತ್ರ ನಟ ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
  • ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕರ್ನಾಟಕ ರತ್ನಪ್ರಶಸ್ತಿ ಪ್ರದಾನ ಕಾರ್ಯಕ್ರಮದ ದಿನಾಂಕವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸದ್ಯವೇ ನಿಗದಿ ಮಾಡಲಿದೆ ಎಂದು ತಿಳಿಸಿದರು.
  • ‘ವಿಷ್ಣುವರ್ಧನ್ ಅವರು ಕನ್ನಡದ ಮೇರುನಟರ ಪೈಕಿ ಒಬ್ಬರು. ಇವರಿಗೆ ಕರ್ನಾಟಕ ರತ್ನ ನೀಡಬೇಕು’ ಎಂದು ವಿಷ್ಣುವರ್ಧನ್ ಕುಟುಂಬ, ಅಭಿಮಾನಿಗಳ ಸಂಘ ಮತ್ತು ಚಲನಚಿತ್ರ ಕಲಾವಿದರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.
  • ಅಭಿಮಾನ್‌ ಸ್ಟುಡಿಯೊದಲ್ಲಿದ್ದ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಇತ್ತೀಚೆಗೆ ರಾತ್ರೋರಾತ್ರಿ ನೆಲಸಮ ಮಾಡಿದ್ದರಿಂದ ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಮೀನು ನೀಡಬೇಕು ಮತ್ತು ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದ್ದರು.
  • ಅಲ್ಲದೇ, ನಟಿಯರಾದ ಜಯಮಾಲಾ, ಶ್ರುತಿ, ತಾರಾ ಅನೂರಾಧ, ಮಾಳವಿಕಾ ಅವಿನಾಶ್ ಅವರು ವಿಷ್ಣುವರ್ಧನ್ ಮತ್ತು ಬಿ.ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರತ್ನ ನೀಡುವ ತೀರ್ಮಾನ ಕೈಗೊಂಡಿದೆ.

ಕುವೆಂಪುಗೆಭಾರತರತ್ನ: ಶಿಫಾರಸು

  • ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ‘ಭಾರತರತ್ನ’ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಕರ್ನಾಟಕ ರತ್ನ ಪ್ರಶಸ್ತಿ

  • ಕರ್ನಾಟಕ ರತ್ನ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ.
  • ಈ ಪ್ರಶಸ್ತಿಯನ್ನು ೧೯೯೨ರಲ್ಲಿ ಪ್ರಾರಂಭಿಸಲಾಯಿತು. ಒಟ್ಟಾರೆ ಇದುವರೆಗೆ ಹತ್ತು ಗಣ್ಯ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.
  • ಕೊನೆಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ೨೦೨೨ ನವೆಂಬರ್ ೦೧ ರಂದು ನೀಡಲಾಗಿದೆ.

ಸಿನಿಮಾ ಕ್ಷೇತ್ರದ್ದೆ ಮೇಲುಗೈ

  • ಈ ಹಿಂದೆ ನೀಡಿದ 10 ಕರ್ನಾಟಕ ಪ್ರಶಸ್ತಿಗಳು ಹಾಗೂ ಹೊಸದಾಗ ಘೋಷಣೆಯಾಗಿರುವ ಪ್ರಶಸ್ತಿಗಳು ಸೇರಿ ಒಟ್ಟು 12 ಮಂದಿಯಲ್ಲಿ ನಾಲ್ಕು ಮಂದಿ ಸಿನಿಮಾ ಕ್ಷೇತ್ರದವರಾಗಿದ್ದಾರೆ. ಉಳಿದಂತೆ ಸಮಾಜ ಸೇವೆಗೆ ಶಿವಕುಮಾರ ಸ್ವಾಮೀಜಿ, ಡಿ ವೀರೇಂದ್ರ ಗೌಡ, ಸಾಹಿತ್ಯಕ್ಕೆ ಕುವೆಂಪು, ದೇ ಜವರೇಗೌಡ, ವೈದ್ಯಕೀಯ ಸಾಧನೆಗೆ ಖ್ಯಾತ ಹೃದ್ರೋಗ ತಜ್ಞ ದೇವಿಪ್ರಸಾದ್ ಶೆಟ್ಟಿ, ರಾಜಕೀಯ ಸಾಧನೆಗೆ ಎಸ್‌ ನಿಜಲಿಂಗಪ್ಪ, ಸಂಗೀತ ಕ್ಷೇತ್ರದಲ್ಲಿ ಭೀಮಸೇನ ಜೋಷಿ, ವಿಜ್ಞಾನಿ ಸಿಎನ್‌ಆರ್‌ ರಾವ್‌ ಪಡೆದುಕೊಂಡಿದ್ದಾರೆ.

200 ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದರುವ ವಿಷ್ಣು

  • ನಟ ವಿಷ್ಣುವರ್ಧನ್ ಅವರು 220 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, 14 ಬಾರಿ ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 7 ಫಿಲ್ಮ್‌ಫೇರ್ ಪ್ರಶಸ್ತಿಗಳು, 8 ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಅವರ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರವು ವಾರ್ಷಿಕ ಪ್ರಶಸ್ತಿಯನ್ನು ಅವರ ಹೆಸರಿನಲ್ಲಿ ಮರುನಾಮಕರಣ ಮಾಡಿತ್ತು.

ಪಂಚಭಾಷೆ ತಾರೆಗೆ ಒಲಿದ ಪ್ರಶಸ್ತಿ

  • ಬಿ. ಸರೋಜಾದೇವಿ ಅವರು ಬೆಂಗಳೂರು ಮೂಲದ ದಕ್ಷಿಣ ಭಾರತದ ಖ್ಯಾತ ನಟಿ. ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ನಟಿಸಿ, “ಅಭಿನಯ ಸರಸ್ವತಿ” ಎಂದು ಖ್ಯಾತರಾಗಿದ್ದರು. ತಮ್ಮ 17ನೇ ವಯಸ್ಸಿನಲ್ಲಿ ಕನ್ನಡದ “ಮಹಾಕವಿ ಕಾಳಿದಾಸ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು, 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಲಭಿಸಿವೆ. 2025 ರಲ್ಲಿ ಅನಾರೋಗ್ಯ ಕಾರಣಕ್ಕೆ ನಿಧನರಾದರು.

ಸರ್ಕಾರಿ ವ್ಯವಸ್ಥೆಯಡಿ ಐವಿಎಫ್ ಚಿಕಿತ್ಸೆ

ಸಂದರ್ಭ: ನಗರದ ಖಾಸಗಿ ಆಸ್ಪತ್ರೆ ಗಳಲ್ಲಿ ಐವಿಎಫ್ (ಕೃತಕ ಗರ್ಭಧಾರಣೆ) ಚಿಕಿತ್ಸಾ ವೆಚ್ಚ ದುಬಾರಿ ಆಗಿರುವುದ ರಿಂದ, ಸರ್ಕಾರಿ ವ್ಯವಸ್ಥೆಯಡಿ ಐವಿಎಫ್ ಚಿಕಿತ್ಸಾ ಕೇಂದ್ರ ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಎಬಿವಿಎಂಸಿಆರ್‌ಐ) ಈ ಕೇಂದ್ರ ತಲೆಯೆತ್ತಲಿದೆ.
  • ಬದಲಾದ ಜೀವನಶೈಲಿಯಿಂದ ಜನರಲ್ಲಿ ಫಲವತ್ತತೆ ದರ ಕುಸಿಯುತ್ತಿದೆ. ಇದರಿಂದಾಗಿ ಐವಿಎಫ್ ಚಿಕಿತ್ಸೆಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ಈ ಚಿಕಿತ್ಸಾ ವೆಚ್ಚ ಭರಿಸುವುದು ಬಡ, ಮಧ್ಯಮ ವರ್ಗದವರಿಗೆ ಸವಾಲಾಗಿದೆ. ಆದ್ದರಿಂದ ಸರ್ಕಾರಿ ವ್ಯವಸ್ಥೆಯಡಿ ಐವಿಎಫ್ ಚಿಕಿತ್ಸೆ ಪ್ರಾರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ.
  • ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಇರುವ ಎಬಿವಿಎಂಸಿಆರ್‌ಐನಲ್ಲಿ ಈ ಕೇಂದ್ರ ಸ್ಥಾಪಿಸಲಾಗುತ್ತಿದ್ದು, ಸಿವಿಲ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ಆರು ತಿಂಗಳಲ್ಲಿ ಈ ಕೇಂದ್ರ ಕಾರ್ಯಾರಂಭಿಸುವ ಸಾಧ್ಯತೆಯಿದೆ.
  • ಈ ಕೇಂದ್ರವು ತಜ್ಞ ವೈದ್ಯರ ಕೊಠಡಿಗಳು, ಪ್ರಯೋಗಾಲಯ, ನೋಂದಣಿ ಕೌಂಟರ್‌, ಸಮಾಲೋಚನಾ ಕೊಠಡಿ ಸೇರಿ ವಿವಿಧ ವಿಭಾಗಗಳನ್ನು ಹೊಂದಲಿದೆ. ಡೇ ಕೇರ್‌ ಸೆಂಟರ್‌ನಂತೆ (ಹೊರರೋಗಿ ವಿಭಾಗ) ಕಾರ್ಯ ನಿರ್ವಹಿಸಲಿದೆ. ಐವಿಎಫ್‌ಗೆ ನಿಗದಿಪಡಿ ಸಲಾದ ಮಾನದಂಡದ ಅನುಸಾರ ಕೇಂದ್ರವನ್ನು ಸಜ್ಜುಗೊಳಿಸಲಾಗುತ್ತದೆ. ಬಳಿಕ ಸ್ತ್ರೀರೋಗ ತಜ್ಞರು ಒಳಗೊಂಡಂತೆ ಅಗತ್ಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ.
  • ದುಬಾರಿ ಚಿಕಿತ್ಸೆ: ಮಕ್ಕಳಾಗದೇ ಇರುವ ಮಹಿಳೆಯರ ಅಂಡಾಣು ಹಾಗೂ ಪುರುಷರ ವೀರ್ಯಾಣುವನ್ನು ಪ್ರಯೋಗಾಲಯದಲ್ಲಿ ಫಲವತ್ತಾಗಿಸಿ, ನಂತರ ಭ್ರೂಣವನ್ನು ಮಹಿಳೆಯ ಗರ್ಭಕ್ಕೆ ಸೇರಿಸುವ ಕಾರ್ಯವಿಧಾನವೇ ಐವಿಎಫ್. ಬಂಜೆತನದಿಂದ ಬಳಲುತ್ತಿರುವ ದಂಪತಿಗಳಿಗೆ ಮಕ್ಕಳನ್ನು ಹೊಂದಲು ಈ ತಂತ್ರಜ್ಞಾನ ವರದಾನವಾಗಿ ಪರಿಣಮಿಸಿದೆ.
  • ಖಾಸಗಿ ಕ್ಲಿನಿಕ್‌ಗಳಲ್ಲಿ ಈ ಚಿಕಿತ್ಸೆಗೆ ₹1.5 ಲಕ್ಷದಿಂದ ₹5 ಲಕ್ಷದವರೆಗೆ ವೆಚ್ಚವಾಗಲಿದೆ. ಈ ಚಿಕಿತ್ಸೆ ಆರೋಗ್ಯ ವಿಮೆಗಳಡಿ ಸೇರ್ಪಡೆಯಾಗದಿರುವುದರಿಂದ, ಬಡ–ಮಧ್ಯಮ ವರ್ಗದವರಿಗೆ ಚಿಕಿತ್ಸಾ ವೆಚ್ಚ ಭರಿಸುವುದು ಕಷ್ಟಸಾಧ್ಯವಾಗಿದೆ.
  • ಐವಿಎಫ್ ಚಿಕಿತ್ಸಾ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ವಾಣಿವಿಲಾಸ ಆಸ್ಪತ್ರೆ, ಈ ಹಿಂದೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. 2023–24ನೇ ಸಾಲಿನ ಬಜೆಟ್‌ನಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಬೆಂಗಳೂರಿನಲ್ಲಿ ಐವಿಎಫ್ ಚಿಕಿತ್ಸಾ ಕೇಂದ್ರ ನಿರ್ಮಿಸುವುದಾಗಿ ಘೋಷಿಸಿತ್ತು. ಆದರೆ, ಪಕ್ಷ ಅಧಿಕಾರಕ್ಕೆ ಬರದಿರುವುದರಿಂದ ಈ ಘೋಷಣೆ ಕಾರ್ಯಗತವಾಗಿರಲಿಲ್ಲ. ಈಗ ಕಾಂಗ್ರೆಸ್ ನೇತೃತ್ವದ ಸರ್ಕಾರ ನಗರದಲ್ಲಿ ಈ ಕ್ಲಿನಿಕ್ ನಿರ್ಮಿಸುತ್ತಿದೆ.

ಎಬಿಎಆರ್ಕೆಗೆ ಒಳಪಡದ ಚಿಕಿತ್ಸೆ

  • ಐವಿಎಫ್ ಚಿಕಿತ್ಸೆಯು ಸರ್ಕಾರಿ ಆರೋಗ್ಯ ವಿಮೆಯಾದ ‘ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ’ (ಎಬಿ–ಎಆರ್‌ಕೆ) ಯೋಜನೆಯಡಿ ಸೇರ್ಪಡೆಯಾಗಿಲ್ಲ. ಈ ಯೋಜನೆಯಡಿ ಮಂಡಿಚಿಪ್ಪು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಸೇರಿದಂತೆ 1,650 ಚಿಕಿತ್ಸಾ ಪ್ಯಾಕೇಜ್‌ಗಳಿವೆ. ಆದರೆ, ಐವಿಎಫ್‌ಗೆ ಸಂಬಂಧಿಸಿದ ಚಿಕಿತ್ಸೆಗಳು ಒಳಪಟ್ಟಿಲ್ಲ. ಆದ್ದರಿಂದ ಎಬಿವಿಎಂಸಿಆರ್‌ಐನಲ್ಲಿ ಚಿಕಿತ್ಸಾ ಕೇಂದ್ರ ಸಜ್ಜುಗೊಂಡ ಬಳಿಕ, ವೈದ್ಯಕೀಯ ತಜ್ಞರ ಸಮಿತಿ ಕೈಗೆಟುಕುವ ದರ ನಿಗದಿಪಡಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

‘ಕಾಗದ, ನೋಟ್‌ಬುಕ್‌ ಮೇಲಿನ ಜಿಎಸ್‌ಟಿ ಗೊಂದಲ ಬಗೆಹರಿಸಿ’

ಸಂದರ್ಭ: ‘ಪಠ್ಯಪುಸ್ತಕ, ನೋಟ್‌ಬುಕ್‌ಗಳಿಗೆ ಶೂನ್ಯ ಜಿಎಸ್‌ಟಿ, ಕಾಗದಕ್ಕೆ ಶೇ 18 ರಷ್ಟು ಜಿಎಸ್‌ಟಿ ವಿಧಿಸಿರುವುದು ಗೊಂದಲ ಉಂಟು ಮಾಡಿದೆ. ಕಾರ್ಪೊರೇಟ್‌ ಕಂಪನಿಗಳಿಗೆ ಮಾತ್ರ ಲಾಭವಾಗ ಲಿದ್ದು, ಸಣ್ಣ ವ್ಯಾಪಾರಿಗಳು ಮತ್ತು ಗ್ರಾಹಕರಿಗೆ ಯಾವುದೇ ಲಾಭವಿಲ್ಲ’ ಎಂದು ಕರ್ನಾಟಕ ಕಾಗದ ಮತ್ತು ಲೇಖನ ಸಾಮಗ್ರಿಗಳ ಮಾರಾಟಗಾರರ ಸಂಘ ತಿಳಿಸಿದೆ.
  • ‘ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಶೂನ್ಯ ಜಿಎಸ್‌ಟಿ ಮಾಡಿರುವ ಉದ್ದೇಶ ಒಳ್ಳೆಯದಿದೆ. ಆದರೆ, ತಪ್ಪಾದ ನಿಯಮದಿಂದಾಗಿ ಅನುಷ್ಠಾನಕ್ಕೆ ಬರುವುದಿಲ್ಲ. ಬದಲಾಗಿ ಹೆಚ್ಚುವರಿ ಪಾವತಿ ಮಾಡಬೇಕಾಗುತ್ತದೆ’ ಎಂದು ಸಂಘದ ಮಾಜಿ ಕಾರ್ಯದರ್ಶಿ ಶರವಣ್‌ ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.
  • ‘ಮಿಲ್‌ನಿಂದ ಸರಬರಾಜಾಗುವ ಕಾಗದವು ಶಾಲಾ ಪಠ್ಯ ಪುಸ್ತಕಕ್ಕೆ ಬಳಕೆಯಾಗುತ್ತದೆಯೇ? ಇಲ್ಲವೇ? ಎಂಬುದು ಗೊತ್ತಾಗುವುದಿಲ್ಲ. ಅದಕ್ಕೆ ಶೇ 18 ಜಿಎಸ್‌ಟಿ ಕಟ್ಟಬೇಕು. ಶಾಲಾ ಪಠ್ಯ ಅಥವಾ ನೋಟ್‌ ಬುಕ್‌ ತಯಾರಿಸಿದಾಗ ಶೇ 18 ಜಿಎಸ್‌ಟಿ ವಾಪಸ್‌ ಬರುವುದಿಲ್ಲ. ಹಾಗಾಗಿ ₹100 ಪುಸ್ತಕ ಖರೀದಿಸಲು ₹118 ನೀಡಬೇಕಾಗುತ್ತದೆ’ ಎಂದರು.
  • ‘ಹಿಂದೆ ಎಲ್ಲದಕ್ಕೂ ಶೇ 12 ಜಿಎಸ್‌ಟಿ ಇದ್ದಾಗ ಈ ಗೊಂದಲಗಳಿರಲಿಲ್ಲ. ಈಗ ಕಾಗದ ತಯಾರಿ ಮತ್ತು ನೋಟ್‌ಬುಕ್‌, ಪಠ್ಯಪುಸ್ತಕ ತಯಾರಿ ಎಲ್ಲವನ್ನು ಒಂದೇ ಕಡೆ ಮಾಡುವುದು ಕಾರ್ಪೊರೇಟ್‌ ಕಂಪನಿಗಳು ಮಾತ್ರ. ಅವರಿಗೆ ಶೂನ್ಯ ಜಿಎಸ್‌ಟಿಯ ಲಾಭ ಸಿಗಲಿದೆ. ಆ ಪುಸ್ತಕಗಳನ್ನು ಕಡಿಮೆ ವೆಚ್ಚದಲ್ಲಿ ಮಾರಾಟ ಮಾಡಲು ಸಾಧ್ಯ. ಇದರಿಂದ ಸಣ್ಣದಾಗಿ ವ್ಯಾಪಾರ ಮಾಡಿಕೊಂಡಿರುವ ಕಾಗದ ಮತ್ತು ಲೇಖನ ಸಾಮಗ್ರಿಗಳ ಮಾರಾಟಗಾರರು ಅಂಗಡಿಯ ಬಾಗಿಲು ಹಾಕಬೇಕಾದ ಪರಿಸ್ಥಿತಿ ಬರಲಿದೆ’ ಎಂದರು.
  • ಕಾಗದ ಮತ್ತು ಕಾಗದ ಉತ್ಪನ್ನಗಳನ್ನು ಶೇ 5ರ ಜಿಎಸ್‌ಟಿ ಅಡಿಯಲ್ಲಿ ತರಬೇಕು ಎಂದು ಆಗ್ರಹಿಸಿದರು.

ಪೊಲೀಸರ ಆರೋಗ್ಯ ತಪಾಸಣೆಗೆ ‘ಖುಷಿ’ ಯೋಜನೆ   

ಸಂದರ್ಭ: ಹ್ಯಾಪಿಯೆಸ್ಟ್‌ ಹೆಲ್ತ್‌ ಸಂಸ್ಥೆ ಹಾಗೂ ನಗರ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಪೊಲೀಸರ ಆರೋಗ್ಯ ತಪಾಸಣೆಗೆ ‘ಖುಷಿ’ ಯೋಜನೆ ಜಾರಿ ಮಾಡಲಾಗಿದೆ.
  • ನಗರ ಪೊಲೀಸ್‌ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಅವರು ಈ ಯೋಜನೆಗೆ ಚಾಲನೆ ನೀಡಿದರು.
  • ಪೊಲೀಸರ ಆರೋಗ್ಯ ನಿರ್ವಹಣೆಗೆ ರೂಪಿಸಲಾದ ಯೋಜನೆ ಇದಾಗಿದೆ. ಮಧುಮೇಹ, ಅಧಿಕ ರಕ್ತದ ಒತ್ತಡ, ಬೊಜ್ಜು, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ತಪಾಸಣೆ ಮಾಡಿಸಿಕೊಳ್ಳಬಹುದು.
  • ಪೊಲೀಸ್‌ ವೃತ್ತಿಯಲ್ಲಿ ದೀರ್ಘಾವಧಿ ಕೆಲಸ, ಅತಿಯಾದ ಒತ್ತಡದ ವಾತಾವರಣ, ಅನಿಯಮಿತ ದಿನಚರಿಗಳಿರುತ್ತವೆ. ಪೊಲೀಸರ ಆರೋಗ್ಯದ ಕಾಳಜಿ ಹಾಗೂ ನಿರ್ವಹಣೆ ಸುಲಭವಾಗಿಲ್ಲ. ವೈಯಕ್ತಿಕ ಯೋಗಕ್ಷೇಮದ ಜೊತೆಗೆ ವೃತ್ತಿಪರ ದಕ್ಷತೆ ಮತ್ತು ಜೀವನದ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತದೆ.
  • ಜೀವನಶೈಲಿಯ ಸಮಸ್ಯೆಗಳು ಮತ್ತು ಪೊಲೀಸರು ಎದುರಿಸುತ್ತಿರುವ ಅನೇಕ ಆರೋಗ್ಯ ಸವಾಲುಗಳನ್ನು ಗಮನದಲ್ಲಿ ಇರಿಸಿಕೊಂಡು ‘ಖುಷಿ ಯೋಜನೆ’ ಜಾರಿಗೆ ತರಲಾಗಿದೆ ಎಂದು ಹ್ಯಾಪಿಯೆಸ್ಟ್‌ ಹೆಲ್ತ್‌ ಯೋಜನೆ ಅಧಿಕಾರಿಗಳು ತಿಳಿಸಿದರು.
  • ಹ್ಯಾಪಿಯೆಸ್ಟ್‌ ಹೆಲ್ತ್‌ನ ಮುಖ್ಯ ಸಂಪಾದಕ ರವಿ ಜೋಶಿ ಮಾತನಾಡಿ, ‘ಸಮಾಜದ ಬೆನ್ನೆಲುಬು ಆಗಿರುವ ಪೊಲೀಸ್‌ ಸಿಬ್ಬಂದಿ ಸಮತೋಲನ ಜೀವನ ನಡೆಸಲು ಸಹಾಯ ಮಾಡುವುದೇ ಈ ಯೋಜನೆಯ ಉದ್ದೇಶ’ ಎಂದು ಹೇಳಿದರು.
  • ‘ಮಧುಮೇಹ, ಅಧಿಕ ರಕ್ತದ ಒತ್ತಡ ಹಾಗೂ ಬೊಜ್ಜಿನಂತಹ ಸಮಸ್ಯೆಗಳನ್ನು ಪರೀಕ್ಷಿಸದೇ ಬಿಟ್ಟರೆ ಅವುಗಳು ಸದ್ದಿಲ್ಲದೇ ಜೀವನದ ಗುಣಮಟ್ಟ ಹಾಳು ಮಾಡುತ್ತವೆ’ ಎಂದು ಹ್ಯಾಪಿಯೆಸ್ಟ್‌ ಹೆಲ್ತ್‌ನ ಸಿಇಒ ಶ್ರೀನಿವಾಸ್‌ ನಾರಾಯಣ್ ಹೇಳಿದರು.
  • ‘ಪ್ರಾಜೆಕ್ಟ್‌ ಖುಷಿ’ ಯೋಜನೆ ಅಡಿ ಮೂರು ತಿಂಗಳು ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಬಯೊ ಸಿಎನ್‌ಜಿ ಘಟಕಕ್ಕೆ ಜಮೀನು

ಸಂದರ್ಭ: ಪ್ರತಿ ನಿತ್ಯ 300 ಟನ್‌ ಘನತ್ಯಾಜ್ಯವನ್ನು ಬಳಸಿಕೊಂಡು ಬಯೊ ಸಿಎನ್‌ಜಿ (ಕಂಪ್ರೆಸ್ಡ್‌ ನ್ಯಾಚುರಲ್‌ ಗ್ಯಾಸ್) ಉತ್ಪಾದಿಸಲು 18 ಎಕರೆ ಭೂಮಿಯನ್ನು 25 ವರ್ಷಗಳಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.
  • ಗೇಲ್‌ ಇಂಡಿಯಾ ಸಂಸ್ಥೆಯಿಂದ ನಿತ್ಯ 300 ಟನ್‌ ಘನತ್ಯಾಜ್ಯ ಸಿಎನ್‌ಜಿ ಉತ್ಪಾದನೆ.
  • ದಕ್ಷಿಣ ತಾಲ್ಲೂಕು ಬೇಗೂರು ಹೋಬಳಿಯ ಹರಳಗುಂಟೆ ಗ್ರಾಮದಲ್ಲಿ ಹಿಂದಿನ ಬಿಬಿಎಂಪಿ ಮಾಲೀಕತ್ವದಲ್ಲಿರುವ ಸರ್ವೆ ನಂ. 39, 45, 46ರ ಒಟ್ಟು ವಿಸ್ತೀರ್ಣ 29.29 ಎಕರೆಯಲ್ಲಿ 10 ಎಕರೆ ಜಮೀನು ಹಾಗೂ ಕರ್ನಾಟಕ ಸಾವಯವ ಗೊಬ್ಬರ ಅಭಿವೃದ್ಧಿ ನಿಗಮದ (ಕೆಸಿಡಿಸಿ) ಮಾಲೀಕತ್ವದಲ್ಲಿರುವ ಸರ್ವೆ ನಂ. 39, 40, 45, 46ರ ಎಂಟು ಎಕರೆ ಜಮೀನನ್ನು ಗೇಲ್‌ ಇಂಡಿಯಾ ಸಂಸ್ಥೆಗೆ ಗುತ್ತಿಗೆ ನೀಡಲು ಸಮ್ಮತಿಸಲಾಗಿದೆ.
  • ಪ್ರತಿನಿತ್ಯ 300 ಟನ್‌ ಘನತ್ಯಾಜ್ಯ ವನ್ನು ಬಳಸಿಕೊಂಡು ಬಯೊ ಸಿಎನ್‌ಜಿ ಉತ್ಪಾದಿಸುವ ಘಟಕವನ್ನು ಗೇಲ್‌ ಸಂಸ್ಥೆ ಸ್ಥಾಪಿಸಲಿದೆ. ಮುಂದಿನ ದಿನಗಳಲ್ಲಿ ಈ ಘಟಕದ ಸಾಮರ್ಥ್ಯವನ್ನು 500 ಟನ್‌ಗೆ ವಿಸ್ತರಿಸಲೂ ಅನುಮೋದನೆ ನಿಡಲಾಗಿದೆ. ಕಂದಾಯ ಇಲಾಖೆ ಹಾಗೂ ಬಿಎಸ್‌ಡಬ್ಲ್ಯುಎಂಎಲ್‌ ಜಂಟಿ ಸರ್ವೆ ನಡೆಸಿ ಭೂಮಿಯನ್ನು ಹಸ್ತಾಂತರಿಸಬೇಕು. ಭವಿಷ್ಯದಲ್ಲಿ ಉದ್ಭವಿಸ ಬಹುದಾದ ಕಾರ್ಯಾಚರಣೆ ಯಲ್ಲಿನ ತೊಡಕುಗಳನ್ನು ಬಗೆಹರಿಸಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರನ್ನು ಪ್ರಾಧಿಕಾರವನ್ನಾಗಿಸಲು ಸಚಿವ ಸಂಪುಟ ನಿರ್ಧರಿಸಿದೆ.
  • ಎರಡು ಆಸ್ಪತ್ರೆ: ಯಲಹಂಕದ ಬೆಳ್ಳಹಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸುವ ಬದಲು, ತಲಾ 100 ಹಾಸಿಗೆಗಳ ಎರಡು ಆಸ್ಪತ್ರೆಗಳನ್ನು ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಿಸಲು ಸಚಿವ ಸಂಪುಟ ನಿರ್ಣಯಿಸಿದೆ.
  • ಯಲಹಂಕದ ಬೆಳ್ಳಹಳ್ಳಿ ಸರ್ವೆ ನಂ.55ರ ಐದು ಎಕರೆ ಜಮೀನಿನಲ್ಲಿ ₹50 ಕೋಟಿ ವೆಚ್ಚದಲ್ಲಿ ಹಾಗೂ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಪಶುಸಂಗೋಪನೆ ಮತ್ತು ಕೃಷಿ ಇಲಾಖೆಯ ಆವರಣದಲ್ಲಿ ₹50 ಕೋಟಿ ವೆಚ್ಚದಲ್ಲಿ ತಲಾ 100 ಹಾಸಿಗೆಗಳ ಸಾಮರ್ಥ್ಯದ ಅತ್ಯಾಧುನಿಕ ಆಸ್ಪತ್ರೆಗಳನ್ನು ನಿರ್ಮಿಸುವ ಕಾಮಗಾರಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಅಧಿಕಾರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ನೀಡಲು ಸಚಿವ ಸಂಪುಟ ತೀರ್ಮಾನಿಸಿದೆ.

100 ಎಂಎಲ್‌ಡಿ ಎಸ್‌ಟಿಪಿ

  • ಬೆಂಗಳೂರು ಜಲಮಂಡಳಿ ವತಿಯಿಂದ ಬೈರಮಂಗಲದ ಕೆರೆ ದಡದಲ್ಲಿ ಪ್ರತಿ ನಿತ್ಯ 100 ದಶಲಕ್ಷ ಲೀಟರ್‌ (ಎಂಎಲ್‌ಡಿ) ಸಾಮರ್ಥ್ಯದ ದ್ವಿತೀಯ ಹಂತದ ತ್ಯಾಜ್ಯ ನೀರು ಶುದ್ಧೀಕರಣ ಘಟಕ (ಎಸ್‌ಟಿಪಿ) ಹಾಗೂ 25 ಎಂಎಲ್‌ಡಿ ಸಾಮರ್ಥ್ಯದ ತೃತೀಯ ಹಂತದ ಎಸ್‌ಟಿಪಿಗಳ ಏಳು ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಅಂದಾಜು ₹391.82 ಕೋಟಿ ವೆಚ್ಚದ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

3ಡಿ ವಾಯು ಕಣ್ಗಾವಲು ರೇಡಾರ್‌ ನಿರ್ಮಾಣ

ಸಂದರ್ಭ: ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್ ಲಿಮಿಟೆಡ್‌ (ಟಿಎಎಸ್‌ಎಲ್‌) ಎಂಜಿನಿಯರಿಂಗ್‌ ಕ್ಷೇತ್ರದ ಪ್ರಮುಖ ಸಂಸ್ಥೆ ಇಂದ್ರಾ ಸಹಯೋಗದಲ್ಲಿ ಸುಧಾರಿತ ನೌಕಾ ವಾಯು ಕಣ್ಗಾವಲು ರೇಡಾರ್‌ ಅನ್ನು ನಿರ್ಮಿಸಿದೆ.
  • 3ಡಿ ವಾಯು ಕಣ್ಗಾವಲು ರೇಡಾರ್‌ (3ಡಿ–ಎಎಸ್‌ಆರ್‌) ತಯಾರಿಸುವ ಮೂಲಕ ಮುಂದಿನ ಪೀಳಿಗೆಯ ನೌಕಾ ಕಣ್ಗಾವಲು ರೇಡಾರ್‌ ವ್ಯವಸ್ಥೆಯನ್ನು ನಿರ್ಮಿಸುವ ಹಾಗೂ ಸಂಯೋಜಿಸುವ ಸಾಮರ್ಥ್ಯ ಪ್ರದರ್ಶಿಸಿದ ಭಾರತದ ಮೊದಲ ಕಂಪನಿಯಾಗಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆಯಲ್ಲಿ 3ಡಿ–ಎಎಸ್‌ಆರ್‌– ಲಾಂಜಾ–ಎನ್‌ ಅನ್ನು ಯಶಸ್ವಿಯಾಗಿ ನಿಯೋಜಿಸಲಾಗಿದೆ ಎಂದು ಟಿಎಎಸ್‌ಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.
  • ಭಾರತದ ರಕ್ಷಣಾ ಸ್ವಾವಲಂಬನೆಯ ಅನ್ವೇಷಣೆಯಲ್ಲಿ ಇದು ಪ್ರಮುಖ ಮೈಲಿಗಲ್ಲಾಗಿದೆ. ಯುದ್ಧನೌಕೆಯ ಎಲ್ಲ ವ್ಯವಸ್ಥೆಗಳೊಂದಿಗೆ ಹೊಂದಾಣಿಕೆ ಸಾಧಿಸುವಂತೆ ರೇಡಾರ್‌ಅನ್ನು ತಯಾರಿಸಲಾಗಿದೆ. ಕರ್ನಾಟಕದ ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್‌ನಲ್ಲಿ ರೇಡಾರ್‌ನ ಜೋಡಣೆ, ಸಂಯೋಜನೆ ಹಾಗೂ ಪರೀಕ್ಷಾ ಕಾರ್ಯವನ್ನು ನಡೆಸಲಾಗಿದೆ ಎಂದು ಹೇಳಿದೆ.

ಮಾರಿಷಸ್‌ಗೆ ₹6,000 ಕೋಟಿ ಪ್ಯಾಕೇಜ್

ಸಂದರ್ಭ: ಭಾರತವು ಮಾರಿಷಸ್‌ಗೆ ₹6,000 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ಗುರುವಾರ ಘೋಷಿಸಿದೆ. ಕಡಲ ಭದ್ರತೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸಲು ಏಳು ಒಪ್ಪಂ‌ದಗಳಿಗೆ ಸಹಿ ಹಾಕಿದೆ.
  • ಮಾರಿಷಸ್ ಪ್ರಧಾನಿ  ನವೀನ್‌ಚಂದ್ರ ರಾಮಗುಲಾಂ ಅವರೊಂದಿಗೆ ವಾರಾಣಸಿಯಲ್ಲಿ ಗುರುವಾರ ಮಾತುಕತೆ ನಡೆಸಿದ ಮೋದಿ, ‘ಭಾರತ ಮತ್ತು ಮಾರಿಷಸ್‌ ಎರಡು ದೇಶಗಳಾಗಿದ್ದರೂ ಅವುಗಳ ಕನಸು ಮತ್ತು ಗುರಿ ಒಂದೇ. ಭಾರತ ಮತ್ತು ಮಾರಿಷಸ್‌ ಪಾಲುದಾರ ರಾಷ್ಟ್ರಗಳಷ್ಟೇ ಅಲ್ಲ, ಒಂದೇ ಕುಟುಂಬದ ಸದಸ್ಯರಂತೆ. ಮಾರಿಷಸ್‌ನ ವಿಶೇಷ ಆರ್ಥಿಕ ವಲಯದ ಭದ್ರತೆ ಮತ್ತು ಕಡಲ ಸಾಮರ್ಥ್ಯವನ್ನು ಬಲಪಡಿಸಲು ಭಾರತ ಸಂಪೂರ್ಣ ಬದ್ಧವಾಗಿದೆ’ ಎಂದು ಅವರು ಹೇಳಿದರು.
  • ಮಾರಿಷಸ್‌ನಲ್ಲಿ ಯುಪಿಐ ಮತ್ತು ರುಪೇ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದ ಬಳಿಕ ಸ್ಥಳೀಯ ಕರೆನ್ಸಿಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು ಸುಗಮಗೊಳಿಸಲು ಭಾರತ ಮತ್ತು ಮಾರಿಷಸ್‌ ಕೆಲಸ ಮಾಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
  • ವಿಶೇಷ ಆರ್ಥಿಕ ಪ್ಯಾಕೇಜ್‌ ಅಡಿಯಲ್ಲಿ, ಬಂದರು, ವಿಮಾನ ನಿಲ್ದಾಣ, ರಸ್ತೆಗಳಂತಹ ಪ್ರಮುಖ ಮೂಲಸೌಕರ್ಯಗಳನ್ನು ಬಲಪಡಿಸಲು ಹಾಗೂ ಹೊಸ ಆಸ್ಪತ್ರೆಗಳು ಮತ್ತು ಶಾಲೆಗಳನ್ನು ನಿರ್ಮಿಸುವುದು ಸೇರಿದಂತೆ ಕನಿಷ್ಠ 10 ಯೋಜನೆಗಳನ್ನು ಕಾರ್ಯಗತಗೊಳಿಸಲು ಭಾರತ ಮಾರಿಷಸ್‌ಗೆ ಸಹಾಯ ಮಾಡಲಿದೆ.
  • ಈ ಪ್ಯಾಕೇಜ್‌ ಕೇವಲ ಸಹಾಯವಲ್ಲ, ಬದಲಿಗೆ ಭವಿಷ್ಯದ ಹೂಡಿಕೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
  • ಈ ಏಳು ಒಪ್ಪಂದಗಳು ಶಿಕ್ಷಣ, ವಿದ್ಯುತ್, ಜಲವಿಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಅನುಕೂಲವಾಗಲಿವೆ.

ವಲಸೆ ಪ್ರಕ್ರಿಯೆ ತ್ವರಿತ ಕಾರ್ಯಕ್ರಮ ವಿಸ್ತರಣೆ

ಸಂದರ್ಭ: ವಲಸೆ ಅನುಮತಿಗಳನ್ನು ತ್ವರಿತವಾಗಿ ಒದಗಿಸುವ ಎಫ್‌ಟಿಐ–ಟಿಟಿಪಿ (ಫಾಸ್ಟ್‌ಟ್ರ್ಯಾಕ್‌ ವಲಸೆ–ವಿಶ್ವಸನೀಯ ಪ್ರಯಾಣಿಕ ಯೋಜನೆ) ಸೌಲಭ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೆಚ್ಚುವರಿಯಾಗಿ ಐದು ವಿಮಾನ ನಿಲ್ದಾಣಗಳಲ್ಲಿ ಚಾಲನೆ ನೀಡಿದರು.
  • ಈ ಯೋಜನೆಯ ಅಡಿಯಲ್ಲಿ ಭಾರತದ ಪ್ರಜೆಗಳು ಹಾಗೂ ಸಾಗರೋತ್ತರ ಭಾರತೀಯ ಪ್ರಜೆ (ಒಸಿಐ) ಕಾರ್ಡ್ ಇರುವವರಿಗೆ ತ್ವರಿತವಾಗಿ ವಲಸೆ ಅನುಮತಿಗಳನ್ನು ನೀಡಲಾಗುತ್ತದೆ.
  • ಈ ಯೋಜನೆಗೆ ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2024ರ ಜುಲೈನಲ್ಲಿ ಮೊದಲು ಚಾಲನೆ ನೀಡಲಾಗಿತ್ತು. ಈಗ ಇದನ್ನು ಲಖನೌ, ತಿರುವನಂತಪುರ, ತಿರುಚಿರಾಪಳ್ಳಿ, ಕೊಯಿಕ್ಕೋಡ್ ಮತ್ತು ಅಮೃತಸರ ವಿಮಾನ ನಿಲ್ದಾಣಗಳಿಗೆ ಕೂಡ ಗುರುವಾರ ವಿಸ್ತರಣೆ ಮಾಡಲಾಗಿದೆ.
  • ‘ಈ ಯೋಜನೆಯು ವಲಸೆ ಪ್ರಕ್ರಿಯೆಗಳನ್ನು ಸರಳವಾಗಿಸುತ್ತದೆ, ತ್ವರಿತವಾಗಿಸುತ್ತದೆ’ ಎಂದು ಸಚಿವ ಶಾ ಅವರು ಹೇಳಿದ್ದಾರೆ. ಅರ್ಹ ಪ್ರಯಾಣಿಕರಿಗೆ ಇ–ಗೇಟ್ ಸೌಲಭ್ಯವನ್ನು ಬಳಸಲು ಹಾಗೂ ಎಂದಿನ ವಲಸೆ ಸರತಿ ಸಾಲನ್ನು ತಪ್ಪಿಸಿಹೋಗಲು ಅವಕಾಶ ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲು ಬಯಸುವ ಪ್ರಯಾಣಿಕರು ಆನ್‌ಲೈನ್‌ ಮೂಲಕ (www.ftittp.mha.gov.in) ಅರ್ಜಿ ಸಲ್ಲಿಸಿ, ತಮ್ಮ ಬಯೋಮೆಟ್ರಿಕ್ ವಿವರಗಳನ್ನು ನೀಡಬೇಕು. ಅಲ್ಲದೆ, ಇತರ ಕೆಲವು ಮಾಹಿತಿಯನ್ನೂ ಒದಗಿಸಬೇಕು. ಎಫ್‌ಟಿಐ ನೋಂದಣಿಯು ಗರಿಷ್ಠ ಐದು ವರ್ಷಗಳ ಅವಧಿಗೆ ಅಥವಾ ಪಾಸ್‌ಪೋರ್ಟ್‌ನ ಅವಧಿಯವರೆಗೆ (ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ) ಚಾಲ್ತಿಯಲ್ಲಿ ಇರುತ್ತದೆ.

6,856 ಆದಿವಾಸಿ ಕುಟುಂಬಕ್ಕೆ ‘ಗೃಹಭಾಗ್ಯ’

ಸಂದರ್ಭ: ಅರಣ್ಯ ಮತ್ತು ಅರಣ್ಯಾಧಾರಿತ ಆದಿವಾಸಿ ಸಮುದಾಯಗಳ 6,856 ವಸತಿ ರಹಿತ ಕುಟುಂಬಗಳಿಗೆ ‘ಮುಖ್ಯಮಂತ್ರಿ ಆದಿವಾಸಿ ಗೃಹಭಾಗ್ಯ ಯೋಜನೆ’ಯಡಿ ಮನೆಗಳನ್ನು ನಿರ್ಮಿಸಿಕೊಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
  • ಇದಕ್ಕಾಗಿ ₹160 ಕೋಟಿ ಅನುದಾನ ನೀಡಲು ಒಪ್ಪಿಗೆ ನೀಡಲಾಗಿದೆ. ಪ್ರತಿ ಮನೆಯನ್ನು ₹4.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವುದು. ಸೋಲಿಗ, ಹಸಲ, ಗೌಡ್ಲು, ಸಿದ್ದಿ, ಕುಡಿಯ, ಮಲೆಕುಡಿಯ, ಕಾಡು ಕುರುಬ, ಇರುಳಿಗ, ಬೆಟ್ಟ ಕುರುಬ, ಯರವ, ಪಣಿಯನ್ ಮತ್ತಿತರ ಸಮುದಾಯಗಳಿಗೆ ಈ ಸೌಲಭ್ಯ ಸಿಗಲಿದೆ ಎಂದು ಅವರು ಹೇಳಿದರು.
  • ನಿಯಮ ಸರಳೀಕರಣ: ‘ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳ ತಿದ್ದುಪಡಿ’ಗೆ ಒಪ್ಪಿಗೆ ನೀಡಲಾಗಿದೆ.
  • ಈ ತಿದ್ದುಪಡಿಯಿಂದಾಗಿ ಭೂಮಿಯನ್ನು ಸಮತಟ್ಟು ಮಾಡುವಾಗ, ಕೃಷಿ ಯೋಗ್ಯ ಭೂಮಿಯನ್ನಾಗಿ ಮಾಡುವಾಗ, ಕೆರೆಗಳಲ್ಲಿ ಹೂಳು ತೆಗೆಯುವಾಗ, ಕೃಷಿ ಮತ್ತು ಮೀನುಗಾರಿಕೆ ಹೊಂಡ ಗಳ ನಿರ್ಮಾಣ ವೇಳೆ ದೊರೆಯುವ ಮರಳು, ಮತ್ತಿತರ ಉಪಖನಿಜಗಳನ್ನು ಬಳಕೆ ಮಾಡಿದ ನಂತರ ಉಳಿದದ್ದನ್ನು ಸಾಗಣೆಗೆ ಅವಕಾಶ ನೀಡಲಾಗುವುದು. ರಾಜಧನ ಮತ್ತು ಇತರ ಪಾವತಿಗಳಲ್ಲಿ ಸೋರಿಕೆ ಆಗುವುದನ್ನು ತಡೆಯಲು ನಿಯಮ ಸರಳೀಕರಣ ಮಾಡಲಾಗಿದೆ.

ಪ್ರಮುಖ ತೀರ್ಮಾನಗಳು:

  • lಕರ್ನಾಟಕ ಭೌಗೋಳಿಕ ಮಾಹಿತಿ ವ್ಯವಸ್ಥೆ 2.0 (ಕೆ.ಜಿಐಎಸ್‌ 2.0) ಅನ್ನು ಅನುಷ್ಠಾನಗೊಳಿಸಲು  ₹150 ಕೋಟಿ. ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ವತಿಯಿಂದ ಇದನ್ನು ಅನುಷ್ಠಾನಗೊಳಿಸಲಾಗುವುದು. ದತ್ತಾಂಶ ಸಂಗ್ರಹ ಸ್ಥಳ, ಹೋಸ್ಟಿಂಗ್ಮೂಲ ಸೌಕರ್ಯ ಮತ್ತು ಅದರ ಭದ್ರತೆ ಕೈಗೊಳ್ಳಲಾಗುವುದು. ಡ್ರೋನ್ಮತ್ತು ಉಪಗ್ರಹ ಸೆರೆ ಹಿಡಿದ ಚಿತ್ರಗಳನ್ನು ಸ್ವಯಂ ಚಾಲಿತವಾಗಿ ಅಳವಡಿಸಿಕೊಳ್ಳುತ್ತದೆ.
  • lಬಯೋ ಡೀಸೆಲ್‌(ಬಿ–100) ಅನ್ನು ಹೈ ಸ್ಪೀಡ್ಡೀಸೆಲ್ನೊಂದಿಗೆ ಮಿಶ್ರಣ ಮಾಡುವ (ಪರವಾನಗಿ) ಆದೇಶ 2025 ಕರಡು ಅಧಿಸೂಚನೆಗೆ ಅನುಮೋದನೆ.
  • lಪಿಎಂ ಕುಸುಮ್‌–ಬಿ ಯೋಜನೆಯಡಿ ನೆಟ್‌ವರ್ಕ್‌ ಗ್ರಿಡ್‌ನಿಂದ ಎಷ್ಟೇ ದೂರದಲ್ಲಿದ್ದರೂ ಸೋಲಾರ್‌ ಪಂಪ್‌ಸೆಟ್‌ಗಳಿಗೆ ಅದರ ವೆಚ್ಚದ ಶೇ 50 ರಷ್ಟು ಮೊತ್ತವನ್ನು ಸಹಾಯಧನ ನೀಡಲು ತೀರ್ಮಾನ.  ಇದರಿಂದ ರೈತರ ಬೆಳೆಗಳಿಗೆ ಹಗಲು ನೀರು ನೀಡಬೇಕು ಎಂಬ ಬೇಡಿಕೆ ಈಡೇರಲಿದೆ.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್

ಸಂದರ್ಭ: ಡಿಜಿ– ಕಂದಾಯ ಯೋಜನೆಯಡಿ ಕಂದಾಯ ಇಲಾಖೆಯ ಗ್ರಾಮ ಅಧಿಕಾರಿಗಳು, ಕಂದಾಯ ಆಡಳಿತ ಅಧಿಕಾರಿಗಳಿಗೆ 3500 ಕ್ರೋಮ್‌ಬುಕ್ ಖರೀದಿಸಿ, ವಿತರಿಸಲು ತೀರ್ಮಾನಿಸಲಾಗಿದೆ.
  • ಇದರ ಒಟ್ಟು ವೆಚ್ಚ ₹19.25 ಕೋಟಿ. ಪ್ರತಿ ಕ್ರೋಮ್‌ಬುಕ್‌ನ ಬೆಲೆ ₹55,000 ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು
  • ಹಿರಿಯರಿಗೆವಯೋ ವಂದನಾ’: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ 70 ವರ್ಷ ಅದಕ್ಕಿಂತ ಹೆಚ್ಚು ವಯಸ್ಸಿನ ಎಲ್ಲ ಹಿರಿಯರಿಗೆ (ಇಎಸ್‌ಐಎಸ್ ಫಲಾನುಭವಿಗಳು) ಆರೋಗ್ಯ ಸೇವೆಗಳ ಪ್ರಯೋಜನ ವಿಸ್ತರಿಸಲು ಸಂಪುಟ ಒಪ್ಪಿಗೆ ನೀಡಿದೆ.
  • ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ ಮಾರ್ಗಸೂಚಿಗಳ ಪ್ರಕಾರ ‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳು, ಅಂಗನವಾಡಿಗೆ ದಾಖಲಾಗಿರುವ ಮಕ್ಕಳ ಕುಟುಂಬದ ಹಿರಿಯರಿಗೆ ಈ ಸೇವೆ ಲಭ್ಯವಾಗಲಿದೆ ಎಂದು ಪಾಟೀಲ ಹೇಳಿದರು.

ಇವಿಎಂ ಬದಲು ಮತಪತ್ರ ಸುಗ್ರೀವಾಜ್ಞೆ ಇಲ್ಲ

  • ಜಿಬಿಎ ಮತ್ತು ಇತರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ಮತ ಪತ್ರಬಳಸುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸದಿರಲು ಸರ್ಕಾರ ತೀರ್ಮಾನಿಸಿದೆ.
  • ತಿದ್ದುಪಡಿ ಮಾಡಿದ ಬಳಿಕ ಸುಗ್ರೀವಾಜ್ಞೆ ಹೊರಡಿಸಲು ಕಳೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ, ಇಂದು ಈ ವಿಷಯ ಚರ್ಚೆಗೆ ಬರಲಿಲ್ಲ. ‘ಕಾನೂನಿಗೆ ತಿದ್ದುಪಡಿ ಮಾಡಬೇಕು. ಸ್ಥಳೀಯ ಸಂಸ್ಥೆ ಚುನಾವಣೆ ಗಳಲ್ಲಿ ಇವಿಎಂ ಅಥವಾ ಮತಪತ್ರ ಎರಡರಲ್ಲಿ ಯಾವುದಾದರೂ ಒಂದನ್ನು ಬಳಸಬಹುದು ಎಂಬ ಅಂಶ ಸುಪ್ರೀಂಕೋರ್ಟ್ ಒಂದು ತೀರ್ಪಿನಲ್ಲಿದೆ. ಹೀಗಾಗಿ ಸುಗ್ರೀವಾಜ್ಞೆಯ ಅವಶ್ಯ ಬೀಳದು ಎಂಬ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ.

ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ಸಂದರ್ಭ: ರಾಜ್ಯ ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಹಾಗೂ ರಾಷ್ಟ್ರಪತಿ ಅವರು ಅಂಕಿತ ಹಾಕುವುದಕ್ಕೆ ಕಾಲಮಿತಿ ವಿಧಿಸಬಹುದೇ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಳಿರುವ ಪ್ರಶ್ನೆಗಳ ಕುರಿತು 10 ದಿನಗಳವರೆಗೆ ವಾದ–ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್‌, ತೀರ್ಪನ್ನು ಕಾಯ್ದಿರಿಸಿತು.
  • ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ, ನ್ಯಾಯಮೂರ್ತಿ ಗಳಾದ ಸುರ್ಯಕಾಂತ್, ವಿಕ್ರಮ್ ನಾಥ್‌, ಪಿ.ಎಸ್‌.ನರಸಿಂಹ ಮತ್ತು ಎ.ಎಸ್‌.ಚಂದೂರ್ಕರ್‌ ಅವರನ್ನು ಒಳಗೊಂಡ ಸಂವಿಧಾನ ಪೀಠ ಈ ಕುರಿತು ಆಗಸ್ಟ್‌ 19ರಿಂದ ವಿಚಾರಣೆ ಪ್ರಾರಂಭಿಸಿತ್ತು.
  • ಅಟಾರ್ನಿ ಜನರಲ್‌ ಆರ್‌. ವೆಂಕಟರಮಣಿ ಅವರ ವಾದದ ಮುಕ್ತಾಯದೊಂದಿಗೆ ಪೀಠವು ತೀರ್ಪನ್ನು ಕಾಯ್ದಿರಿಸಿತು. ಕೇಂದ್ರದ ಪರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರೂ ತಮ್ಮ ವಾದವನ್ನು ಮುಕ್ತಾಯಗೊಳಿಸಿದರು.
  • ರಾಷ್ಟ್ರಪತಿ ಅವರು ಎತ್ತಿದ್ದ ಪ್ರಶ್ನೆಗಳನ್ನು ಆಕ್ಷೇಪಿಸಿದ ವಿರೋಧ ಪಕ್ಷಗಳ ಆಡಳಿತವಿರುವ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಕರ್ನಾಟಕ, ತೆಲಂಗಾಣ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳ ಪರ ವಕೀಲರು ವಿರೋಧಗಳನ್ನು ದಾಖಲಿಸುವ ಮೂಲಕ ತಮ್ಮ ವಾದ ಅಂತಿಮಗೊಳಿಸಿದರು.
  • ಮಸೂದೆಗಳಿಗೆ ಅಂಕಿತ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಪ್ರಶ್ನಿಸಿದ್ದ ಅರ್ಜಿ ಕುರಿತು ಸುಪ್ರೀಂ ಕೋರ್ಟ್‌ ಏಪ್ರಿಲ್‌ 8ರಂದು ತೀರ್ಪು ನೀಡಿತ್ತು. ಪರಿಶೀಲನೆಗಾಗಿ ರಾಜ್ಯ‍ಪಾಲರಿಂದ ಬಂದ ಮಸೂದೆಗಳ ವಿಚಾರವಾಗಿ ಮೂರು ತಿಂಗಳ ಅವಧಿಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ರಾಷ್ಟ್ರಪತಿಯ ವರಿಗೆ ಕಾಲಮಿತಿ ನಿಗದಿ ಮಾಡಿತ್ತು.  ಇದರ ಬೆನ್ನಲ್ಲೇ, ರಾಷ್ಟ್ರಪತಿಯ ವರು ಸುಪ್ರೀಂ ಕೋರ್ಟ್‌ಗೆ ಐದು ಪುಟಗಳ ಪತ್ರ ಬರೆದು, 14 ಪ್ರಶ್ನೆಗಳನ್ನು ಎತ್ತಿದ್ದರು.

ಸೋನಿಯಾ ವಿರುದ್ಧದ ಅರ್ಜಿ ವಜಾ

  • ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತದ ಪೌರತ್ವ (1983) ಪಡೆಯುವುದಕ್ಕೂ ಮೂರು ವರ್ಷಗಳ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡಿದ್ದರು ಎಂದು ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.
  • ಪೌರತ್ವದ ವಿಷಯವು ಕೇಂದ್ರ ಸರ್ಕಾರದ ವಿಶೇಷ, ಸಾಂವಿಧಾನಿಕ ಮತ್ತು ಶಾಸನಬದ್ಧ ಅಧಿಕಾರ ವ್ಯಾಪ್ತಿಗೆ ಬರುತ್ತದೆ. ಇದರಲ್ಲಿ ಅನಗತ್ಯವಾಗಿ ನ್ಯಾಯಾಲಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ ನ್ಯಾಯಾಧೀಶರು ಅರ್ಜಿಯನ್ನು ವಜಾಗೊಳಿಸಿದರು.
  • ಪಟ್ನಾ ಹೈಕೋರ್ಟ್ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಪವನ್ಕುಮಾರ್ಹೆಸರು ಶಿಫಾರಸು

ಸಂದರ್ಭ: ಪಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯನ್ನಾಗಿ ನೇಮಕ ಮಾಡುವಂತೆ ಕರ್ನಾಟಕ ಹೈಕೋರ್ಟ್‌ನ ನ್ಯಾಯ ಮೂರ್ತಿ ಪವನ್‌ಕುಮಾರ್‌ ಬಿ.ಭಜಂತ್ರಿ ಅವರ ಹೆಸರನ್ನು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದೆ.

  • ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌, ವಿಕ್ರಮ್‌ನಾಥ್‌ ಅವರ ನ್ನೊಳಗೊಂಡ ಕೊಲಿಜಿಯಂ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ.
  • ಇದಲ್ಲದೆ, ಮೇಘಾಲಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯಾಗಿ ಕಲ್ಕತ್ತ ಹೈಕೋರ್ಟ್‌ನ ನ್ಯಾಯಮೂರ್ತಿ ಸೌಮೆನ್‌ ಸೇನ್‌ ಹಾಗೂ ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಮದ್ರಾಸ್‌ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ಸುಂದರ್‌ ಅವರ ಹೆಸರುಗಳನ್ನು ಶಿಫಾರಸು ಮಾಡಿದೆ.
  • 2015ರ ಜನವರಿ 2ರಂದು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2015ರಲ್ಲಿ ಪಂಜಾಬ್‌–ಹರಿಯಾಣ ಹೈಕೋರ್ಟ್‌ಗೆ ವರ್ಗಾವಣೆಗೊಂಡಿದ್ದ ಅವರು, ನಂತರದಲ್ಲಿ ಪಟ್ನಾ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ 2021ರ ಅ.20ರಂದು ವರ್ಗಾವಣೆಗೊಂಡಿದ್ದರು. 2025ರ ಅಕ್ಟೋಬರ್ 22ರಂದು ನಿವೃತ್ತಿ ಹೊಂದಲಿದ್ದಾರೆ.
  • ಸದನ ಇರುವುದು ಜನರ ಒಳಿತಿಗಾಗಿ

ಸಂದರ್ಭ: ಸಂಸತ್ತು ಅಥವಾ ವಿಧಾನ ಮಂಡಲದ ಸದನಗಳು ಇರುವುದು ಜನರ ಸಮಸ್ಯೆ–ಆಗುಹೋಗುಗಳ ಚರ್ಚೆಗೆ. ಅದನ್ನು ರಾಜಕೀಯ ಆರೋಪ–ಪ್ರತ್ಯಾರೋಪಕ್ಕೆ ಬಳಸಿಕೊಳ್ಳಬಾರದು ಎಂಬ ಅಭಿಪ್ರಾಯಕ್ಕೆ ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದ ಉದ್ಘಾಟನಾ ಸಮಾರಂಭದ ವೇದಿಕೆ ಸಾಕ್ಷಿಯಾಯಿತು.

  • ನಗರದಲ್ಲಿ ಇದೇ 12 ಮತ್ತು 13ರಂದು ನಡೆಯಲಿರುವ ಈ ಸಮ್ಮೇಳನದಲ್ಲಿ ಲೋಕಸಭೆಯ ಸ್ಪೀಕರ್ ಮತ್ತು ಉಪಸ್ಪೀಕರ್‌, ಎಲ್ಲ ರಾಜ್ಯಗಳ ವಿಧಾನಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ವಿಧಾನ ಪರಿಷತ್ತಿನ ಸಭಾಪತಿ, ಉಪಸಭಾಪತಿ ಭಾಗಿಯಾಗಲಿದ್ದಾರೆ.
  • ದೇಶದ ಎಲ್ಲ ರಾಜ್ಯಗಳಿಂದ ಬಂದಿದ್ದ ಗಣ್ಯರನ್ನು ಬರಮಾಡಿಕೊಂಡ ನಂತರ ಸಾಕ್ಷ್ಯಚಿತ್ರವೊಂದರ ಮೂಲಕ ಅವರೆಲ್ಲರಿಗೆ ಕರ್ನಾಟಕ ಸಂಸ್ಕೃತಿ–ಪರಂಪರೆ ಮತ್ತು ಹೆಗ್ಗಳಿಕೆಯನ್ನು ಪರಿಚಯಿಸಿಕೊಡಲಾಯಿತು. ದೇಶದ ಮೊದಲ ಸಂಸತ್ತು ‘ಅನುಭವ ಮಂಟಪ’. ಭಾರತದ ಪ್ರಜಾಪ್ರಭುತ್ವದ ತಳಹದಿಯನ್ನು ಕರ್ನಾಟಕದ ವಚನ ಚಳವಳಿಯಿಂದಲೇ ಕಾಣಬಹುದು ಎಂದು ಸಾಕ್ಷ್ಯಚಿತ್ರವು ವಿವರಿಸಿತು.
  • ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌, ‘ಸದನಗಳಲ್ಲಿ ನಡೆಯುವ ಕಲಾಪವನ್ನು ಇನ್ನಷ್ಟು ಉತ್ತಮಗೊಳಿಸುವ ಹಾದಿಗಳನ್ನು ಈ ಸಮ್ಮೇಳನದಲ್ಲಿ ಚರ್ಚಿಸುತ್ತೇವೆ’ ಎಂದರು.
  • ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ‘ಸದನಗಳು ಇರುವುದು ಚರ್ಚೆ ಮತ್ತು ಸಂವಾದದ ಮೂಲಕ ಜನರ ಕಷ್ಟ, ಸಮಸ್ಯೆ, ಆಗುಹೋಗುಗಳ ಬಗ್ಗೆ ಗಮನಹರಿಸಲು. ಜನಪ್ರತಿನಿಧಿಗಳು ಇದೇ ಹಾದಿಯಲ್ಲಿ ನಡೆಯುವಂತೆ ನೋಡಿಕೊಳ್ಳುವ ಗುರುತರ ಹೊಣೆಗಾರಿಕೆ ಸಭಾಧ್ಯಕ್ಷರ ಮೇಲಿದೆ’ ಎಂದರು.
  • ‘ನಮ್ಮ ಸಂವಿಧಾನವನ್ನು ಅಂಗೀಕರಿಸಿಕೊಳ್ಳುವ ಮುನ್ನ ಸುದೀರ್ಘವಾದ ಚರ್ಚೆ ನಡೆದಿದೆ. ವಾದ–ಪ್ರತಿವಾದಗಳು, ಸಮ್ಮತಿ–ಅಸಮ್ಮತಿಗಳು ಹಾಗೂ ಅವೆಲ್ಲವನ್ನು ಒಳಗೊಂಡ ಸಮನ್ವಯವಾದದ ರೂಪವಾಗಿ ಸಂವಿಧಾನ ರೂಪುಗೊಂಡಿದೆ. ಸದನ–ಕಲಾಪವನ್ನು ಇನ್ನಷ್ಟು ಉತ್ತಮವಾಗಿ ಹೇಗೆ ನಡೆಸಬಹುದು ಎಂಬುದರ ಸಾಧ್ಯತೆಗಳನ್ನು ಈ ಎರಡು ದಿನಗಳ ಸಮ್ಮೇಳನದಲ್ಲಿ ಪರಿಶೀಲಿಸೋಣ’ ಎಂದು ಕರೆ ನೀಡಿದರು.
  • ರಾಜ್ಯದ ಸಾಂಸ್ಕೃತಿಕ ಪರಂಪರೆಗೆ ಬಸವಣ್ಣನ ಕೊಡುಗೆಯನ್ನು ರಾಜ್ಯಸಭೆಯ ಉಪಸಭಾಪತಿ ಹರಿವಂಶ ನಾರಾಯಣ್ ಸಿಂಗ್‌ ಪ್ರಸ್ತಾಪಿಸಿದರೆ, ವಿಧಾನ ಪರಿಷತ್ತಿನ ಮಹತ್ವವನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ವಿವರಿಸಿದರು. ಉ‍ಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು.

ಪ್ರಚಲಿತ ವಿದ್ಯಮಾನಗಳು: 11ನೇ ಸೆಪ್ಟೆಂಬರ್ 2025

ಮರುಸಿಂಚನ: 27 ಜಿಲ್ಲೆಗಳಿಗೆ ವಿಸ್ತರಣೆ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗಾಗಿ ರೂಪಿಸಿರುವ ಯೋಜನೆ

ಸಂದರ್ಭ: ಕಲಿಕೆಯಲ್ಲಿ ಹಿಂದುಳಿ ದಿರುವ ಮಕ್ಕಳಿಗಾಗಿ ರೂಪಿಸಿರುವ ಮರುಸಿಂಚನ ಯೋಜನೆಯನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಜಾರಿ ಗೊಳಿಸುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿನ ಸುಮಾರು 18 ಲಕ್ಷ ಮಕ್ಕಳು ಇದರ ಪ್ರಯೋಜನ ಪಡೆಯುವ ಸಾಧ್ಯತೆ ಇದೆ.

  • ‘ಎರಡು ವರ್ಷಗಳ ಹಿಂದೆ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದ ಈ ಯೋಜನೆಯನ್ನು 2025–26ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ 27 ಶೈಕ್ಷಣಿಕ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ.
  • ಕಲಿಕೆಯಲ್ಲಿ ಹಿಂದೆ ಇರುವ ಮಕ್ಕಳನ್ನು ಗುರುತಿಸಿ, ಶಾಲಾ ಅವಧಿಯಲ್ಲೇ ಪರಿಹಾರ ಬೋಧನೆ ಮೂಲಕ ಅವರ ಕಲಿಕಾ ಮಟ್ಟವನ್ನು ಸುಧಾರಿಸಲಾಗುತ್ತದೆ. ಇದಕ್ಕಾಗಿ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕ, ಶಿಕ್ಷಕರಿಗೆ ಮಾಡ್ಯೂಲ್‌ಗಳ ಕೈಪಿಡಿ ನೀಡಲಾಗುತ್ತದೆ. ಅದಕ್ಕೆ ಅನುಗುಣವಾಗಿ ಮಕ್ಕಳಿಗೆ ಕಲಿಸಲಾಗುತ್ತದೆ.
  • ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಕನ್ನಡ ಹಾಗೂ ಇಂಗ್ಲಿಷ್‌ ವಿಷಯಗಳಲ್ಲಿ ಅಭ್ಯಾಸ ಪುಸ್ತಕಗಳನ್ನು ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ (ಡಿಎಸ್‌ಇಆರ್‌ಟಿ) ಸಿದ್ಧಪಡಿಸಲಿದೆ.
  • ಸ್ವಯಂ ಸೇವಾ ಸಂಸ್ಥೆಗಳಾದ ಪೀಪಲ್ಫಾರ್ಆಕ್ಷನ್ಸಂಸ್ಥೆ ಮತ್ತು ಜೆಪಾಲ್ಯೋಜನೆಯ ಅನುಷ್ಠಾನದಲ್ಲಿ ಭಾಗಿಯಾಗಿದ್ದು, ಕಾಲಕಾಲಕ್ಕೆ ಅಗತ್ಯ ಸಲಹೆಗಳನ್ನು ನೀಡಲಿವೆ.
  • ಕಲಿಕೆಯಲ್ಲಿ ಶೇ 40ಕ್ಕಿಂತ ಕಡಿಮೆ ಇರುವ ಅಥವಾ ಶೇ 60ಕ್ಕಿಂತ ಕಡಿಮೆ ಇರುವ ಮಕ್ಕಳಿಗೆ ಮರುಸಿಂಚನ ಯೋಜನೆಯಡಿ ಪರಿಹಾರ ಬೋಧನೆ ತರಗತಿಗಳನ್ನು ನಡೆಸಬೇಕೇ ಎಂಬುದು ಇನ್ನೂ ಅಂತಿಮವಾಗಿಲ್ಲ.
  • ಗುಣಮಟ್ಟ ಸುಧಾರಣೆ: 10ನೇ ತರಗತಿಯಲ್ಲಿ ಕಡಿಮೆ ಫಲಿತಾಂಶ, ಉತ್ತೀರ್ಣರಾಗದೆ ಇರುವುದು ಕಂಡುಬಂದಿದೆ. ಅಲ್ಲದೆ ಮಕ್ಕಳು ಯಾವ ಹಂತದಲ್ಲಿ ಎಷ್ಟು ಕಲಿತಿರಬೇಕೊ, ಅಷ್ಟು ಕಲಿತಿರುವುದಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು  ಆಯಾ ತರಗತಿಯಿಂದಲೇ ಗುಣಮಟ್ಟದಲ್ಲಿ ಸುಧಾರಣೆ ತರಲು ಮರುಸಿಂಚನ ಕಾರ್ಯಕ್ರಮ ರೂಪಿಸಲಾಗಿದೆ.
  • ಅಭ್ಯಾಸ ಪುಸ್ತಕ 80ರಿಂದ 100 ಪುಟ ಇರಲಿದ್ದು, ಮಕ್ಕಳ ಸಾಮರ್ಥ್ಯವನ್ನು ಅರಿತು ಪೂರಕ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಕಲಿಸಲಾಗುತ್ತದೆ. ಸಾಮಾನ್ಯ ತರಗತಿ ಹೊರತುಪಡಿಸಿ, ಹೆಚ್ಚುವರಿಯಾಗಿ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಕಲಿಸುವುದರಿಂದ ಮಕ್ಕಳ ಕಲಿಕಾ ಮಟ್ಟದಲ್ಲಿ ಸುಧಾರಣೆಯಾಗಿರುವುದು ಮೌಲ್ಯಾಂಕನದಿಂದ ದೃಢಪಟ್ಟಿದೆ. ಇದನ್ನು ಆಧರಿಸಿ ವರ್ಷ ಎಲ್ಲ ಸರ್ಕಾರಿ ಶಾಲೆಗಳಿಗೆ ವಿಸ್ತರಣೆ ಮಾಡಲಾಗುತ್ತಿದೆ.

ಪ್ರಾಯೋಗಿಕ ಯೋಜನೆ ಯಶಸ್ವಿ

  • 17 ಜಿಲ್ಲೆಗಳ 93 ತಾಲ್ಲೂಕುಗಳಲ್ಲಿ 9ನೇ ತರಗತಿ ಮಕ್ಕಳಿಗೆ 2023–24ರಲ್ಲಿ ಪ್ರಾಯೋಗಿಕವಾಗಿ ಮರುಸಿಂಚನ ಯೋಜನೆ ಜಾರಿಗೊಳಿಸಲಾಗಿತ್ತು. ಕಳೆದ ವರ್ಷ 6ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ವಿಸ್ತರಿಸಲಾಗಿತ್ತು. ಇದು ಯಶಸ್ವಿಯಾಗಿರುವುದನ್ನು ಗಮನಿಸಿ 27 ಶೈಕ್ಷಣಿಕ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ.
  • ರಾಜ್ಯದಲ್ಲಿ ಒಟ್ಟು 35 ಶೈಕ್ಷಣಿಕ ಜಿಲ್ಲೆಗಳಿವೆ. ಪೈಕಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿರಸಿ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಒಟ್ಟಾರೆ ಶೈಕ್ಷಣಿಕ ಗುಣಮಟ್ಟ ಚೆನ್ನಾಗಿದೆ. ಆ ಜಿಲ್ಲೆಗಳಲ್ಲೂ ಕೆಲವು ಶಾಲೆಗಳಲ್ಲಿನ ಮಕ್ಕಳ ಕಲಿಕಾ ಮಟ್ಟ ಕಡಿಮೆ ಇರಬಹುದು. ಆದರೆ, ಆ ಜಿಲ್ಲೆಗಳಲ್ಲಿ ಮರುಸಿಂಚನ ಜಾರಿ ಮಾಡುವ ಬಗ್ಗೆ ಸದ್ಯಕ್ಕೆ ನಿರ್ಧರಿಸಿಲ್ಲ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮೂಲಗಳು ತಿಳಿಸಿವೆ.
  • ದೇಶದಾದ್ಯಂತ ಎಸ್ಐಆರ್ಗೆ ಸಿದ್ಧತೆ

ಸಂದರ್ಭ: ವರ್ಷಾಂತ್ಯದ ವೇಳೆಗೆ ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸಲು ಮುಂದಾಗಿರುವ ಚುನಾ ವಣಾ ಆಯೋಗ, ಈ ಕುರಿತು ಶೀಘ್ರದಲ್ಲಿಯೇ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.

  • ರಾಷ್ಟ್ರದಾದ್ಯಂತ ಎಸ್‌ಐಆರ್‌ ನಡೆಸಲು ಕೈಗೊಂಡಿರುವ ಸಿದ್ಧತಾ ಕಾರ್ಯಗಳ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಲಾಯಿತು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು, ವಿವೇಕ್‌ ಜೋಶಿ ಅವರೂ ಪಾಲ್ಗೊಂಡಿದ್ದರು.
  • ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ ವಿನೋದ್‌ ಸಿಂಗ್‌ ಗುಂಜಿ ಯಾಲ್‌ ಅವರು, ವಿವಾದಗಳ ನಡುವೆಯೂ ರಾಜ್ಯದಲ್ಲಿ ಎಸ್‌ಐಆರ್‌ ಜಾರಿಗೆ ಅಳವಡಿಸಿಕೊಂಡ ಕಾರ್ಯ ತಂತ್ರ, ನಿಯಮಗಳು, ನಡೆಸಿದ ಕಸರತ್ತಿನ ವಿವರವನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಿದರು.
  • ಮುಂದಿನ ವರ್ಷದ (2026) ಏಪ್ರಿಲ್‌–ಮೇ ತಿಂಗಳಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಬೇಕಿದ್ದು, ಅದಕ್ಕೂ ಮುನ್ನವೇ, ವರ್ಷಾಂತ್ಯದಲ್ಲಿ ಎಸ್ಐಆರ್ಪ್ರಕ್ರಿಯೆಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.
  • ಸಭೆಯಲ್ಲಿ ಹಾಜರಿದ್ದ ಸಿಇಒಗಳು ತಮ್ಮ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟಾರೆ ಮತದಾರರ ಸಂಖ್ಯೆ, ಹಿಂದೆ ನಡೆದಿದ್ದ ಎಸ್‌ಐಆರ್‌ ಮತ್ತು ಮತದಾರರ ಪಟ್ಟಿಯ ಕುರಿತು ವಿವರವಾದ ಮಾಹಿತಿಯನ್ನು ಪ್ರಸ್ತುತ ಪಡಿಸಿದರು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
  • ದೇಶದಾದ್ಯಂತ ಎಸ್‌ಐಆರ್‌ ನಡೆಸಲು ಚುನಾವಣಾ ಆಯೋಗ ಜೂನ್‌ 24ರಂದು ನಿರ್ಧರಿಸಿತ್ತು. ಅಕ್ಟೋಬರ್‌–ನವೆಂಬರ್‌ನಲ್ಲಿ ಚುನಾವಣೆ ನಡೆಯಲಿ ರುವ ಬಿಹಾರದಿಂದ ಅದನ್ನು ಪ್ರಾರಂಭಿಸುವುದಾಗಿ ತಿಳಿಸಿತ್ತು. ದೇಶದ ಇತರ ಭಾಗಗಳಿಗೆ ಮುಂದಿನ ದಿನಗಳಲ್ಲಿ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದೂ ಆಯೋಗ ಹೇಳಿತ್ತು.
  • ದೇಶದಲ್ಲಿ 2003ರಲ್ಲಿ ಕೊನೆಯ ದಾಗಿ ಎಸ್ಐಆರ್ನಡೆಸಲಾಗಿತ್ತು. ನಗರೀಕರಣ, ಹೆಚ್ಚುತ್ತಿರುವ ವಲಸೆ ಯಿಂದಾಗಿ ಮತದಾರರ ಪಟ್ಟಿಯಲ್ಲಿ ಪದೇ ಪದೇ ಬದಲಾವಣೆಗಳು ಆಗುತ್ತಿವೆ. ಹೀಗಾಗಿ ಎಸ್ಐಆರ್ಅಗತ್ಯವಾಗಿದೆಎಂದು ಚುನಾವಣಾ ಆಯೋಗ ಪ್ರತಿಪಾದಿಸಿತ್ತು.
  • ಬಾಂಗ್ಲಾ ಮತ್ತು ಮ್ಯಾನ್ಮಾರ್ಅಕ್ರಮ ವಲಸಿಗರನ್ನು ಹಲವು ರಾಜ್ಯಗಳಲ್ಲಿ ಪತ್ತೆ ಮಾಡಿದ ನಂತರ ವಿದೇಶಿ ಅಕ್ರಮ ವಲಸಿಗರನ್ನು ಪಟ್ಟಿಯಿಂದ ತೆಗೆಯುವುದು ವಿಶೇಷ ಪರಿಷ್ಕರಣೆಯ ಪ್ರಾಥಮಿಕ ಉದ್ದೇಶ.

ಹೊರರಾಜ್ಯಗಳಲ್ಲಿ ನೆಲಸಿರುವವರಿಗೆ ‘ಘೋಷಣಾ ಅರ್ಜಿ’

  • ಹೊರರಾಜ್ಯಗಳಲ್ಲಿ ನೆಲಸಿರುವವರಿಗಾಗಿಯೇ ಹೆಚ್ಚುವರಿ ಯಾಗಿಘೋಷಣಾ ಅರ್ಜಿಯೊಂದನ್ನು ಪರಿಚಯಿಸಲು ಆಯೋಗ ಮುಂದಾಗಿದೆ. 1987 ಜುಲೈ 1 ಮತ್ತು 2004 ಡಿಸೆಂಬರ್ 2 ಮಧ್ಯೆ ಭಾರತದಲ್ಲಿ ಜನಿಸಿರುವ ಬಗ್ಗೆ ಅವರೆಲ್ಲ ದೃಢಪಡಿಸಬೇಕು. ಜನ್ಮ ದಿನಾಂಕ ಮತ್ತು ವಾಸಸ್ಥಳದ ದೃಢೀಕರಣ ಪತ್ರಗಳನ್ನು ಸಲ್ಲಿಸಬೇಕು.
  • ಯಾವುದೇ ಅರ್ಹ ನಾಗರಿಕ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ಈಗಾಗಲೇ ಬಿಹಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಆಯೋಗಕ್ಕೆ ಸೂಚನೆ ನೀಡಿದೆ. ಕೆಲವು ರಾಜ್ಯಗಳು 2002 ಮತ್ತು 2004ರ ಮಧ್ಯೆ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಿದ್ದವು.

ಆಧಾರ್‌ ಪರಿಗಣನೆಗೆ ಸೂಚನೆ

  • ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮತದಾರರ ಗುರುತಿನ ದಾಖಲೆಯಾಗಿ ಆಧಾರ್‌ ಕಾರ್ಡ್‌ ಅನ್ನು ಪರಿಗಣಿಸುವಂತೆ ಚುನಾವಣಾ ಆಯೋಗವು ಬಿಹಾರದ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
  • ಸುಪ್ರೀಂ ಕೋರ್ಟ್‌ ಆದೇಶದ ಬೆನ್ನಲ್ಲೇ ಈ ನಿರ್ದೇಶನ ನೀಡಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿರುವ ಆಯೋಗವು, ಮತದಾರರ ಗುರುತಿಗೆ ಗೊತ್ತುಪಡಿಸಲಾದ 11 ದಾಖಲೆಗಳ ಜೊತೆಗೆ 12ನೇ ದಾಖಲೆಯಾಗಿ ಆಧಾರ್ಕಾರ್ಡ್ಅನ್ನು ಪರಿಗಣಿಸಬಹುದು ಎಂದು ತಿಳಿಸಿದೆ.
  • ಸೈಬರ್ಕಮಾಂಡ್ಘಟಕ ರಚನೆ

ಸಂದರ್ಭ: ‘ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ಗಮನದಲ್ಲಿ ರಿಸಿಕೊಂಡು ರೂಪಿಸಲಾಗಿರುವ ದೇಶದ ಮೊದಲ ಸೈಬರ್ ಕಮಾಂಡ್‌ ಘಟಕವು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತಾಗಬೇಕು’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

  • ನಗರದ ‘ನ್ಯೂಸ್ಪೇಸ್‌ ರಿಸರ್ಚ್‌ ಆ್ಯಂಡ್‌ ಟೆಕ್ನಾಲಜೀಸ್‌ ಪ್ರೈವೆಟ್‌ ಲಿಮಿಟೆಡ್‌ ಕಂಪನಿ’ಯ ಅಧಿಕೃತ ಪ್ರತಿನಿಧಿ ಭಾವನಾ ವಿಜಯಕುಮಾರ್ ಸಲ್ಲಿಸಿದ್ದ ರಿಟ್‌ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಪ್ರಕರಣದಲ್ಲಿ ಇಂತಹದೊಂದು ಸ್ವತಂತ್ರ ಘಟಕವನ್ನು ಸ್ಥಾಪಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.
  • ಈ ಆದೇಶದ ಅನುಪಾಲನೆಯನ್ನು ಪರಿಗಣಿಸಿ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ ಅವರನ್ನು ತೆರೆದ ಕೋರ್ಟ್‌ ಹಾಲ್‌ಗೆ ಬರಮಾಡಿಕೊಂಡ ನ್ಯಾಯಪೀಠ, ಸೈಬರ್ ಕಮಾಂಡ್‌ ಘಟಕ ಅಥವಾ ಸೈಬರ್ ಕಮಾಂಡ್‌ ಸೆಂಟರ್‌ (ಸಿಸಿಸಿ) ರಚನೆಯ ಆದೇಶ ಕೇವಲ ಕಾಗದದಲ್ಲಿ ಉಳಿಯುವಂತಾಗಬಾರದು ಎಂದು ಹೇಳಿತು.
  • ಸೈಬರ್ ಅಪರಾಧಗಳ ತನಿಖೆಯಲ್ಲಿನ ಪ್ರಗತಿ ಅಥವಾ ಎಲ್ಲಾ ಮಾಹಿತಿ ಮತ್ತು ತಂತ್ರಜ್ಞಾನ ಪ್ರಕರಣಗಳನ್ನು ಒಂದೇ ಸೂರಿನಡಿ ತರಬೇಕು. ಸಿಸಿಸಿಯ ಇಂತಹ ಏಕೀಕರಣವನ್ನು ತೋರಿಸುವ ನಿಮ್ಮ ವರದಿಯನ್ನು ಅಮಿಕಸ್ ಕ್ಯೂರಿ ಮೂಲಕ ಈ ನ್ಯಾಯಪೀಠಕ್ಕೆ ಸಲ್ಲಿಸಬೇಕು. ಕೇಂದ್ರದ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಅದಕ್ಕಾಗಿ ಕ್ರಮ ತೆಗೆದುಕೊಳ್ಳುವುದು ಸಿಸಿಸಿಯ ಆದ್ಯ ಕರ್ತವ್ಯವಾಗಿರುತ್ತದೆ ಎಂದು ನ್ಯಾಯಪೀಠ ಹೇಳಿದೆ.
  • ‘ಈ ಸಂಸ್ಥೆ ಅಥವಾ ಕೇಂದ್ರವು ದೇಶದ ಮೊದಲ ಸೈಬರ್‌ ಕಮಾಂಡ್‌ ಘಟಕ (ಸಿಸಿಯು) ಅಥವಾ ಸಿಸಿಸಿ ಎಂಬ ಹೆಗ್ಗಳಿಕೆ ಎಂಬುದನ್ನು ಮರೆಯಬೇಡಿ’ ಎಂದು ಸೂಚಿಸಿತು.
  • ‘ಸೈಬರ್ ಅಪರಾಧಗಳನ್ನು ಎದುರಿಸಲು ಮತ್ತು ಸೈಬರ್ ಭದ್ರತೆಯನ್ನು ಬಲಪಡಿಸಲು ಸ್ಥಾಪಿಸಿರುವ ಸದರಿ ಘಟಕವು, ಹೊಸ ಯುಗದ ತನಿಖಾ ಕೇಂದ್ರಗಳೊಂದಿಗೆ ಹೊಸ ನಮೂನೆಯ ತಾಂತ್ರಿಕ ಯುಗದ ಅಪರಾಧಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ದಾಪುಗಾಲು ಹಾಕಬೇಕು. ಈ ಘಟಕದ ಅಧಿಕಾರಿಗಳು ಅರ್ಥಪೂರ್ಣವಾಗಿ ಕಾರ್ಯನಿರ್ವಹಿಸು ವಂತೆ ಮಾಡಬೇಕು. ಆಗ ಮಾತ್ರ ರಾಜ್ಯವು ಸೈಬರ್ ಅಪರಾಧದಿಂದ ಹೊರಹೊಮ್ಮುತ್ತಿರುವ ಅಪಸವ್ಯಗಳನ್ನು ನಿಯಂತ್ರಿಸಲು ಸಾಧ್ಯ’ ಎಂದು ನ್ಯಾಯಪೀಠ ಎಚ್ಚರಿಸಿದೆ.
  • ‘ಸಿಸಿಸಿ ಅಥವಾ ಸೈಬರ್ ಕಮಾಂಡೊ ಘಟಕ ಸೈಬರ್ ಅಪರಾಧದ ವಿರುದ್ಧದ ಹೋರಾಟದಲ್ಲಿ ಹೊಸ ಉದಯವನ್ನು ಸೂಚಿಸುವ ದೀಪವಾಗಿರಬೇಕು’ ಎಂದು ಸ್ಪಷ್ಟಪಡಿಸಿದೆ. ‘ನ್ಯಾಯಾಲಯ ನೀಡಿರುವ ಈ ಆದೇಶದ ಅನುಪಾಲನೆ ಕುರಿತಂತೆ ಕೈಗೊಳ್ಳಲಾಗುವ ಕ್ರಮಗಳನ್ನು ಇದೇ 24ಕ್ಕೆ ವಿವರಿಸಿ’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
  • 371 ಮರ: ‘ಜೀವವೈವಿಧ್ಯ ಪಾರಂಪರಿಕ ತಾಣ

ಸಂದರ್ಭ: ರೈಲ್ವೆ ಕಂಟೊನ್ಮೆಂಟ್‌ ಕಾಲೊನಿಯಲ್ಲಿ 371 ಮರಗಳಿರುವ ಎಂಟು ಎಕರೆಗೂ ಹೆಚ್ಚು ಪ್ರದೇಶವನ್ನು ‘ಜೀವವೈವಿಧ್ಯ ಪಾರಂಪರಿಕ ತಾಣ’ ಎಂದು ಘೋಷಿಸಿ, ಅರಣ್ಯ ಇಲಾಖೆ ಅಧಿಸೂಚನೆ ಹೊರಡಿಸಿದೆ.

  • ವಸಂತನಗರದಲ್ಲಿರುವ ದಂಡು ಪ್ರದೇಶದ ಬಳಿಯ ರೈಲ್ವೆ ಕಾಲೊನಿಯಲ್ಲಿ ವಾಣಿಜ್ಯ ಕೇಂದ್ರ ಅಭಿವೃದ್ಧಿಗೆ 368 ಮರ ತೆರವುಗೊಳಿಸುವುದಕ್ಕೆ ಪರಿಸರ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕಾಗಿ ಹೋರಾಟ ವನ್ನೂ ನಡೆಸಿದ್ದರು. ಪರಿಸರ ಕಾರ್ಯಕರ್ತರ ಒತ್ತಾಸೆ ಹಾಗೂ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರ ಭರವಸೆಯಂತೆ ಈ ಪ್ರದೇಶವು ‘ಜೀವವೈವಿಧ್ಯ ಪಾರಂಪರಿಕ ತಾಣ’ವಾಗಿದೆ.
  • ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದ 167 ಎಕರೆಯನ್ನು ಹಿಂದೆಜೀವವೈವಿಧ್ಯ ಪಾರಂಪರಿಕ ತಾಣಎಂದು ಘೋಷಿಸಲಾಗಿತ್ತು. ಇದರ ನಂತರ, ರೈಲ್ವೆ ಕಂಟೊನ್ಮೆಂಟ್ಕಾಲೊನಿ ಹೆಗ್ಗಳಿಕೆಗೆ ಪಾತ್ರವಾಗಿದೆ.
  • ರಾಜ್ಯ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷರೂ ಆಗಿರುವ ಅರಣ್ಯ ಸಚಿವರ ಅಧ್ಯಕ್ಷತೆಯಲ್ಲಿ ಮಂಡಳಿಯ ವಿಶೇಷ ಸಭೆ ನಡೆಯಿತು. ಬೆಂಗಳೂರಿನ ಕಂಟೊನ್ಮೆಂಟ್ರೈಲು ನಿಲ್ದಾಣಕ್ಕೆ ಹೊಂದಿಕೊಂಡಿರುವ 8.61 ಎಕರೆ ಪ್ರದೇಶವನ್ನು ಹಸಿರು ವಲಯವನ್ನಾಗಿ  ಪರಿಗಣಿಸಿ, ಸಂರಕ್ಷಣೆಯ ಅಗತ್ಯವನ್ನು ಮನಗಂಡು, ಜೀವ ವೈವಿದ್ಯ ಕಾಯ್ದೆ–2002 ನಿಬಂಧನೆಗಳ ಅಡಿಯಲ್ಲಿ ಸ್ಥಳವನ್ನುಜೀವವೈವಿದ್ಯ ಪಾರಂಪರಿಕ ತಾಣ’ (ಬಿಎಚ್ಎಸ್‌) ಎಂದು ಘೋಷಿಸಲು ತೀರ್ಮಾನಿಸಲಾಯಿತು.
  • ರಾಜಧಾನಿಯ ಹೃದಯ ಭಾಗದಲ್ಲಿ 50 ಜಾತಿಯ 371 ಮರಗಳಿದ್ದು, ರಮಣೀಯ ಸೌಂದರ್ಯ, ಹಕ್ಕಿಗಳ ಚಿಲಿಪಿಲಿಯ ಹಸಿರು ತಾಣವಾಗಿದೆ. ನಗರದ ವಾಸಯೋಗ್ಯತೆ ಯನ್ನು ಉತ್ತಮಪಡಿಸಿ, ಹಸಿರುಹಾಸು ಈ ಪ್ರದೇಶದ ಹೆಗ್ಗುರುತಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಹೊರಡಿಸಿರುವ ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಷರತ್ತುಗಳು ಏನು?

lಸೂಕ್ಷ್ಮ ಅನುಮೋದಿತ ನಿರ್ವಹಣಾ ಯೋಜನೆಯಂತೆ ಪಾರಂಪರಿಕ ತಾಣವನ್ನು ನಿರ್ವಹಿಸಬೇಕು

lಸ್ಥಳೀಯರ ಹಕ್ಕುಗಳು ಮತ್ತು ಸವಲತ್ತುಗಳು ಸದಾ ಅಸ್ತಿತ್ವದಲ್ಲಿರುತ್ತವೆ

lಪಾರಂಪರಿಕ ತಾಣದ ನಿರ್ವಹಣೆಯಲ್ಲಿ ಸ್ಥಳೀಯ ಜನರಿಗೆ ಪಾಲ್ಗೊಳ್ಳಲು ಅವಕಾಶ ಇರಬೇಕು

lಜೀವವೈವಿಧ್ಯತೆಯ ಸಂರಕ್ಷಣೆಗೆ ವಿರುದ್ಧವಾದ ಯಾವುದೇ ಚಟುವಟಿಕೆಗಳಿಗೆ ಅವಕಾಶ ಇಲ್ಲ

  • ಇಟಲಿ ಪ್ರಧಾನಿ ಜತೆ ಮೋದಿ ಮಾತುಕತೆ

ಸಂದರ್ಭ: ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು.

  • ‘ಪ್ರಧಾನಿ ಜಾರ್ಜಿಯಾ ಮೆಲೊನಿ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದೆ. ಭಾರತ– ಇಟಲಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಇಮ್ಮಡಿಗೊಳಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದೇವೆ.
  • ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಶೀಘ್ರವಾಗಿ ಕೊನೆಗೊಳಿಸಬೇಕೆಂಬ ಕುರಿತೂ ಮಾತನಾಡಿದೆವು’ ಎಂದು ಮೋದಿ ‘ಎಕ್ಸ್‌’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
  • ‘ಭಾರತ–ಯುರೋಪ್‌ ಒಕ್ಕೂಟದ ವ್ಯಾಪಾರ ಒಪ್ಪಂದ ಮ‌ತ್ತು ‘ಭಾರತ– ಮಧ್ಯಪ್ರಾಚ್ಯ– ಯುರೋಪ್‌ ಆರ್ಥಿಕ ಕಾರಿಡಾರ್‌’ (ಐಎಂಇಇಸಿ) ಅನುಷ್ಠಾನಕುರಿತು ಬೆಂಬಲ ನೀಡಿದ್ದಕ್ಕಾಗಿ ಮೆಲೊನಿ ಅವರಿಗೆ ಧನ್ಯವಾದ ತಿಳಿಸುತ್ತೇನೆ’ ಎಂದೂ ಹೇಳಿದ್ದಾರೆ.  ಭಾರತ ಮತ್ತು ಯುರೋಪ್‌ ಒಕ್ಕೂಟವು ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಬಲಗೊಳಿಸುವತ್ತ ಮುಂದುವರಿದಿವೆ.
  • ಬಿಆರ್ಎಸ್ಗೆ ಅಧಿಕ ಆದಾಯ
  • ಕೈಗಾರಿಕೆಗೆ ಎರಡು ಎಕರೆ: ಭೂಮಿ ಪರಿವರ್ತನೆ ಅಗತ್ಯವಿಲ್ಲ

ಸಂದರ್ಭ: ಕೃಷಿ ಭೂಮಿ ಖರೀದಿ ಸರಳೀಕರಣ ಮತ್ತು ಕೆಲವು ಉದ್ದೇಶ ಗಳಿಗೆ ಭೂಮಿ ಪರಿವರ್ತನೆ ನಿಯಮ ಸಡಿಲಿಕೆಗೆ ಅವಕಾಶ ಕಲ್ಪಿಸುವ ‘ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು (ತಿದ್ದುಪಡಿ)’ ಮಸೂದೆ ಸೇರಿ ವಿವಿಧ ಮಸೂದೆಗಳಿಗೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್ ಅವರು ಅಂಕಿತ ಹಾಕಿದ್ದಾರೆ. ಆ ಬೆನ್ನಲ್ಲೆ, ರಾಜ್ಯ ಸರ್ಕಾರ ಗೆಜೆಟ್‌ ಹೊರಡಿಸಿದೆ.

  • ಶಿಕ್ಷಣ ಸಂಸ್ಥೆಗಳಿಗೆ ಅಥವಾ ಕೈಗಾರಿಕೆ ಗಳಿಗೆ ಎರಡು ಎಕರೆವರೆಗಿನ ಕೃಷಿ ಭೂಮಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡುವ, ಶಿಕ್ಷಣ ಸಂಸ್ಥೆ ಗಳು ಮತ್ತು ಕೈಗಾರಿಕೆಗಳಿಗೆ ನಾಲ್ಕು ಹೆಕ್ಟೇರ್‌ವರೆಗೆ ಕೃಷಿ ಭೂಮಿ ಖರೀದಿಗೆ ಮಿತಿ, ಜಿಲ್ಲಾಧಿಕಾರಿಗಳಿಗೆ ಭೂಮಿ ಖರೀದಿಸುವ ಅಧಿಕಾರ, ಕೃಷಿ ಭೂಮಿ ಯನ್ನು ಅನುಮತಿ ಇಲ್ಲದೆ ಅಥವಾ ಪರಿವರ್ತನೆ ಮಾಡದೆ ಕೃಷಿಯೇತರ ಉದ್ದೇಶಕ್ಕೆ ಬಳಸಿದರೆ ₹ 1 ಲಕ್ಷ ದಂಡ, ನವೀಕರಿಸಬಹುದಾದ ಇಂಧನ ಉತ್ಪಾದನೆಗಾಗಿ ಕೃಷಿ ಭೂಮಿಯ ಸ್ವಯಂ ಚಾಲಿತ ಪರಿವರ್ತನೆ ಪ್ರಮಾಣಪತ್ರ ನೀಡಲು ಕೂಡಾ ಕರ್ನಾಟಕ ಭೂ ಸುಧಾರಣೆ, ಇತರೆ ಕಾನೂನು ಮಸೂದೆ ಅವಕಾಶ ನೀಡಿದೆ.
  • ಇತರ ಮಸೂದೆಗಳು: ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ, ಕೂಡಲ ಸಂಗಮ ಅಭಿವೃದ್ಧಿ ಮಂಡಳಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ, ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ, ಬನವಾಸಿ ಅಭಿವೃದ್ಧಿ ಪ್ರಾಧಿಕಾರಗಳಿಗೆ ಮುಖ್ಯಮಂತ್ರಿ ಅಥವಾ ಕಂದಾಯ ಮಂತ್ರಿ ಅಥವಾ ಮುಖ್ಯಮಂತ್ರಿ ಆಯ್ಕೆ ಮಾಡಿದ ಯಾರಾದರು ಸಚಿವರು ಪದನಿಮಿತ್ತ ಅಧ್ಯಕ್ಷರಾಗಿ ಮಾಡಲು ಅವಕಾಶ ಕಲ್ಪಿಸುವ ತಿದ್ದುಪಡಿ ಮಸೂದೆಗಳಿಗೂ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
  • ಲಿಫ್ಟ್‌, ಎಸ್ಕಲೇಟರ್‌ ಅಥವಾ ಪ್ಯಾಸೆಂಜರ್‌ ಕನ್ವೇಯರ್‌ಗಳನ್ನು ಭಾರತೀಯ ಗುಣಮಟ್ಟ ಬ್ಯೂರೊ ಪದ್ಧತಿ ಗಳ ಅಸ್ತಿತ್ವದಲ್ಲಿರುವ ಸಂಬಂಧಪಟ್ಟ ಸಂಹಿತೆ ಮತ್ತು ಕೇಂದ್ರ ವಿದ್ಯುಚ್ಛಕ್ತಿ ಪ್ರಾಧಿಕಾರ (ಸುರಕ್ಷತೆ ಮತ್ತು ವಿದ್ಯುತ್‌ ಸರಬರಾಜಿಗೆ ಸಂಬಂಧಿಸಿದ ಕ್ರಮಗಳು) ವಿನಿಮಯಗಳ ಅನ್ವಯ ಸ್ಥಾಪಿಸಲು ನಿರ್ದೇಶಿಸುವ ಉದ್ದೇಶದ ‘ಕರ್ನಾಟಕ ಲಿಫ್ಟ್‌ಗಳ, ಎಸ್ಕಲೇಟರ್‌ಗಳ ಮತ್ತು ಪ್ಯಾಸೆಂಜರ್ ಕನ್ವೇಯರ್‌ಗಳ (ತಿದ್ದುಪಡಿ) ಮಸೂದೆ, ಪ್ರವಾಸೋದ್ಯಮ ಉತ್ತೇಜನಕ್ಕೆ ಜಿಲ್ಲಾ ಮಟ್ಟದ ಮೇಲುಸ್ತುವಾರಿ ಸಮಿತಿ ರಚಿಸಲು ಅವಕಾಶ ಕಲ್ಪಿಸಲು ರೂಪಿಸಿದ ‘ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ,ನಿಯಂತ್ರಣ) (ತಿದ್ದುಪಡಿ) ಮಸೂದೆ, ಎಸ್ಮಾ ವಿಧಿಸುವ ಅವಕಾಶ ವನ್ನು ಮುಂದಿನ 20 ವರ್ಷಗಳ ಅವಧಿ ವಿಸ್ತರಿಸಲು ಅವಕಾಶ ನೀಡುವ ‘ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ಮಸೂದೆ, ರಾಜ್ಯದ ಬಹುಮಹಡಿ ಕಟ್ಟಡಗಳಿಗೆ ಶೇ 1ರಷ್ಟು ಅಗ್ನಿ ಸೆಸ್‌ ವಿಧಿಸಲು ಅವಕಾಶ ಮಾಡಿಕೊಡುವ ‘ಕರ್ನಾಟಕ ಅಗ್ನಿಶಾಮಕ ದಳ (ತಿದ್ದುಪಡಿ) ಮಸೂದೆ’ಗೂ ಅಂಕಿತ ಹಾಕಿದ್ದಾರೆ.
  • ಮನೆಮನೆಯ ಕಥೆ: ಪೋಷಕರ ಪಾಲನೆ ಭತ್ಯೆ ಹೆಚ್ಚಳಕ್ಕೆ ಶಿಫಾರಸು
  • ರಾಜ್ಯ ಸ್ಥಾನಮಾನಕ್ಕಾಗಿ ಸತ್ಯಾಗ್ರಹ

ಸಂದರ್ಭ: ಲಡಾಖ್ಗೆ ರಾಜ್ಯ ಸ್ಥಾನಮಾನ ನೀಡುವುದರ ಜೊತೆಗೆ ಅದನ್ನು ಸಂವಿಧಾನದ 6ನೇ ಪರಿಚ್ಛೇದಕ್ಕೆ ಸೇರಿಸುವಂತೆ ಒತ್ತಾಯಿಸಿ ಲೇಹ್‌ನಲ್ಲಿ 35 ದಿನಗಳ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್‌ ತಿಳಿಸಿದ್ದಾರೆ. ಲೇಹ್‌ ಅಪೆಕ್ಸ್‌ ನಿಯೋಗ (ಎಲ್‌ಎಬಿ) ಕೂಡ ಇದನ್ನು ಸ್ಪಷ್ಟಪಡಿಸಿದೆ.

  • ‘ಕಳೆದ ಎರಡು ತಿಂಗಳಿಂದ ನಮ್ಮ ಬೇಡಿಕೆಗಳ ಕುರಿತು ಕೇಂದ್ರ ಗೃಹ ಸಚಿವಾಲಯವು ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧರಿಸಿದ್ದೇವೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ವಾಂಗ್ಚುಕ್‌ ತಿಳಿಸಿದರು.
  • ಲೇಹ್‌ನ ಹಿಲ್‌ ಕೌನ್ಸಿಲ್‌ ಚುನಾವಣೆ ಶೀಘ್ರವೇ ನಡೆಯಲಿದ್ದು, ಕೇಂದ್ರ ಸರ್ಕಾರವು ಕಳೆದ ಬಾರಿಯ ಚುನಾವಣೆಯಲ್ಲೇ ಲಡಾಖ್‌ ಅನ್ನು ಸಂವಿಧಾನದ 6ನೇ ಪರಿಚ್ಛೇದಕ್ಕೆ ಸೇರಿಸುವುದಾಗಿ ಭರವಸೆ ನೀಡಿತ್ತು. ಇದನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.  ಗಾಂಧಿ ಜಯಂತಿಯು ಸತ್ಯಾಗ್ರಹದ ಪ್ರಮುಖ ದಿನವಾಗಲಿದೆ ಎಂದೂ ಅವರು ಹೇಳಿದ್ದಾರೆ.
  • ಕೊಪ್ಪಳದಲ್ಲಿ ಉಕ್ಕು ಘಟಕ ಸ್ಥಾಪನೆಗೆ ₹2,345 ಕೋಟಿ

ಸಂದರ್ಭ: ಬಜಾಜ್‌ ಸಮೂಹದ ಮುಕುಂದ ಸುಮಿ ಸಹಭಾಗಿತ್ವ ದಲ್ಲಿ ಕೊಪ್ಪಳದಲ್ಲಿ ಉಕ್ಕು ತಯಾರಿಕಾ ಘಟಕ ಸ್ಥಾಪನೆಗೆ ಜಪಾನಿನ ಸುಮಿಟಾವೊ ಕಂಪನಿ ₹2,345 ಕೋಟಿ ಹೂಡಿಕೆ ಮಾಡಲಿದೆ.

  • ಬಂಡವಾಳ ಆಕರ್ಷಣೆಗಾಗಿ ಜಪಾನ್‌ ಪ್ರವಾಸದಲ್ಲಿರುವ ಅವರು ಸುಮಿಟಾವೊ ಪ್ರತಿನಿಧಿಗಳ ಜತೆಗಿನ ಸಭೆಯ ನಂತರ ಈ ಮಾಹಿತಿ ನೀಡಿದ್ದಾರೆ. ಘಟಕವು ವಾರ್ಷಿಕ 3.50 ಲಕ್ಷ ಟನ್ ಉಕ್ಕು ತಯಾರಿಸುವ ಸಾಮರ್ಥ್ಯ ಹೊಂದಿರಲಿದೆ. 2028 ವೇಳೆಗೆ ಘಟಕ ಕಾರ್ಯಾರಂಭ ಮಾಡಲಿದೆ. ಅಲ್ಲದೆ ಸುಮಿಟಾವೊ ಕಂಪನಿಯು ರಾಜ್ಯದಲ್ಲಿ ಬಯೊಮಾಸ್‌ ಘಟಕವನ್ನೂ ಸ್ಥಾಪಿಸಲಿದೆ.
  • ‘ಹುಬ್ಬಳ್ಳಿಯಲ್ಲಿರುವ ಎನ್‌ಜಿಇಎಫ್‌ ಕಾರ್ಖಾನೆಯ ಪುನರಾರಂಭದ ಸಂಬಂಧ  ಜೆಎಫ್‌ಇ ಷೋಜಿ ಕಂಪನಿಯ ಪ್ರತಿನಿಧಿಗಳ ಜತೆಗೆ ಮಾತುಕತೆ ನಡೆಸಲಾಗಿದೆ. ₹400 ಕೋಟಿ ಹೂಡಿಕೆ ಮಾಡಲು ಕಂಪನಿ ಮುಂದೆ ಬಂದಿದೆ. ವಿದ್ಯುತ್‌ಚಾಲಿತ ವಾಹನಗಳ ಮೋಟರ್‌ಗಳ ಕೋರ್‌ಗಳನ್ನು ಈ ಕಾರ್ಖಾನೆಯಲ್ಲಿ ತಯಾರಿಸುವ ಬಗ್ಗೆ ಪರಿಶೀಲನೆ ನಡೆಯಲಿದೆ. ಅದರ ಭಾಗವಾಗಿ ಜೆಎಫ್‌ಇ ಷೋಜಿ ಪ್ರತಿನಿಧಿಗಳನ್ನು ಎನ್‌ಜಿಇಎಫ್‌ ಕಾರ್ಖಾನೆ ಭೇಟಿಗೆ ಆಹ್ವಾನಿಸಲಾಗಿದೆ.
  • ಯಸ್ಕಾವಾ ಕಂಪನಿಯು ಬೆಂಗಳೂರಿನಲ್ಲಿ ಮೋಷನ್‌ ಕಂಟ್ರೋಲ್‌ ಮತ್ತು ವೇರಿಯೇಬಲ್‌ ಫ್ರೀಕ್ವೆನ್ಸಿ ಡ್ರೈವ್‌ನ ತಯಾರಕ ಘಟಕ ಸ್ಥಾಪಿಸುವ ಬಗ್ಗೆ ಆಸಕ್ತಿ ತೋರಿಸಿದೆ ಎಂದಿದ್ದಾರೆ.
  • ದೇಶದ ಜಿಡಿಪಿ ಬೆಳವಣಿಗೆ ಅಂದಾಜು ಪರಿಷ್ಕರಣೆ

ಸಂದರ್ಭ: ಪ್ರಸಕ್ತ ವರ್ಷಕ್ಕೆ ಸಂಬಂಧಿಸಿದ ದೇಶದ ಜಿಡಿಪಿ ಬೆಳವಣಿಗೆ ದರದ ಅಂದಾಜನ್ನು ಫಿಚ್ ರೇಟಿಂಗ್ಸ್ ಸಂಸ್ಥೆಯು ಶೇಕಡ 6.9ಕ್ಕೆ ಹೆಚ್ಚಿಸಿದೆ. ಈ ಮೊದಲು ಅದು ಬೆಳವಣಿಗೆ ದರವು ಶೇ 6.5ರಷ್ಟು ಇರಲಿದೆ ಎಂದು ಅಂದಾಜು ಮಾಡಿತ್ತು.

  • ಜೂನ್‌ ತ್ರೈಮಾಸಿಕದ ಜಿಡಿಪಿ ಬೆಳವಣಿಗೆ ದರವು ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ಇದ್ದುದು ಹಾಗೂ ದೇಶಿ ಮಾರುಕಟ್ಟೆಯಲ್ಲಿನ ಬಳಕೆ ಆಧಾರಿತ ಬೇಡಿಕೆಯು ಅಂದಾಜು ಹೆಚ್ಚಿಸುವುದಕ್ಕೆ ಕಾರಣ ಎಂದು ಸಂಸ್ಥೆ ಹೇಳಿದೆ.
  • ಸುಂಕ ಸಂಬಂಧಿ ಅನಿಶ್ಚಿತತೆಗಳ ನಂತರ ಭಾರತದ ಜಿಡಿಪಿ ಬೆಳವಣಿಗೆ ದರದ ಅಂದಾಜನ್ನು ಹಲವು ಸಂಸ್ಥೆಗಳು ತಗ್ಗಿಸಿದ್ದವು. ಈಗ ಭಾರತದ ಜಿಡಿಪಿ ಬೆಳವಣಿಗೆ ದರದ ಅಂದಾಜನ್ನು ಹೆಚ್ಚು ಮಾಡುತ್ತಿರುವ ಮೊದಲ ಜಾಗತಿಕ ರೇಟಿಂಗ್ಸ್ ಸಂಸ್ಥೆ ಫಿಚ್ ಆಗಿದೆ.
  • ಅಮೆರಿಕದ ಜೊತೆಗಿನ ವ್ಯಾಪಾರಕ್ಕೆ ಸಂಬಂಧಿಸಿದ ಬಿಕ್ಕಟ್ಟು ಈಚಿನ ತಿಂಗಳುಗಳಲ್ಲಿ ತೀವ್ರಗೊಂಡಿದೆ. ಅಮೆರಿಕವು ಭಾರತದ ಸರಕುಗಳ ಮೇಲೆ ಒಟ್ಟು ಶೇ 50ರಷ್ಟು ಸುಂಕ ವಿಧಿಸಿದೆ.
  • ‘ಇದು ಕಾಲಕ್ರಮೇಣ ಮಾತುಕತೆ ಮೂಲಕ ಕಡಿಮೆ ಮಟ್ಟಕ್ಕೆ ಬರಲಿದೆ ಎಂಬುದು ನಮ್ಮ ನಿರೀಕ್ಷೆ. ಆದರೆ ವ್ಯಾಪಾರ ಸಂಬಂಧದ ಸುತ್ತಲಿನ ಅನಿಶ್ಚಿತತೆಗಳು ಹೂಡಿಕೆಯ ಮೇಲೆ ಪರಿಣಾಮ ಬೀರಬಹುದು. ಜಿಎಸ್‌ಟಿ ವ್ಯವಸ್ಥೆಗೆ ಸರ್ಕಾರವು ಸುಧಾರಣೆ ತಂದಿದೆ. ಇದು ಗ್ರಾಹಕರು ಈ ವರ್ಷದಲ್ಲಿ ಹಾಗೂ ಮುಂದಿನ ಹಣಕಾಸು ವರ್ಷಗಳಲ್ಲಿ ಹೆಚ್ಚು ವೆಚ್ಚ ಮಾಡುವಂತೆ ಉತ್ತೇಜನ ನೀಡಲಿದೆ’ ಎಂದು ಫಿಚ್ ಹೇಳಿದೆ.
  • ಎಸ್ಎಸ್ಎಲ್ವಿ ತಂತ್ರಜ್ಞಾನ: ಇಸ್ರೊಎಚ್ಎಎಲ್ಒಪ್ಪಂದ

ಸಂದರ್ಭ: ‘ಸಣ್ಣ ಉಪಗ್ರಹ ಉಡ್ಡಯನ ವಾಹನ’ಗಳ (ಎಸ್‌ಎಸ್‌ಎಲ್‌ವಿ) ಉತ್ಪಾದನಾ ತಂತ್ರಜ್ಞಾನ ವರ್ಗಾವಣೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌) ಜತೆ ಒಡಂಬಡಿಕೆ ಮಾಡಿಕೊಂಡಿದೆ.

  • ಇದು ಬಾಹ್ಯಾಕಾಶ ವಲಯದಲ್ಲಿ ಉದ್ಯಮ ಸಹಭಾಗಿತ್ವದ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ ಎಂದು ಬಣ್ಣಿಸಲಾಗಿದೆ.
  • ತಂತ್ರಜ್ಞಾನ ವರ್ಗಾವಣೆ ಕುರಿತ 100ನೇ ಒಪ್ಪಂದಕ್ಕೆ ‘ಇಸ್ರೊ’, ‘ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್‌’ (ಎನ್‌ಎಸ್‌ಐಎಲ್‌), ‘ಇನ್‌ಸ್ಪೇಸ್‌’ ಹಾಗೂ ‘ಎಚ್‌ಎಎಲ್‌’ ಸಹಿ ಮಾಡಿವೆ. 
  • ಈ ಕುರಿತ ಒಪ್ಪಂದಕ್ಕೆ ಸಹಿ ಮಾಡಿದ ದಿನದಿಂದ 24 ತಿಂಗಳುಗಳ ಒಳಗೆ ತಂತ್ರಜ್ಞಾನ ವರ್ಗಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ‘ಇನ್‌ಸ್ಪೇಸ್‌’ ಕೇಂದ್ರ ತಿಳಿಸಿದೆ.  
  • ಈ ಅವಧಿಯಲ್ಲಿ ಎಸ್‌ಎಸ್‌ಎಲ್‌ವಿಗಳಿಗೆ ಸಂಬಂಧಿಸಿದ ತಾಂತ್ರಿಕ ಜ್ಞಾನ ಮತ್ತು ತರಬೇತಿಯನ್ನು ‘ಇಸ್ರೊ’ ಸಂಸ್ಥೆಯು ಎಚ್‌ಎಎಲ್‌ಗೆ ವರ್ಗಾಯಿಸಲಿದೆ ಎಂದು ಅದು ಹೇಳಿದೆ. 
  • ‘ವಾಣಿಜ್ಯ ಉದ್ದೇಶಕ್ಕೆ ಬಾಹ್ಯಾಕಾಶ ವಲಯವನ್ನು ಭಾರತವು ಉದಾರೀಕರಿಸಿರುವುದರಿಂದ ಅವಕಾಶಗಳು ವೃದ್ಧಿಸುತ್ತಿವೆ. ಇದಕ್ಕೆ ಪೂರಕವಾಗಿ ಕ್ರಿಯಾತ್ಮಕ ತಂತ್ರಜ್ಞಾನ ವರ್ಗಾವಣೆ ಕಾರ್ಯವಿಧಾನವನ್ನು ಇಸ್ರೊ ಹೊಂದಿದೆ’ ಎಂದು ‘ಇಸ್ರೊ’ ಅಧ್ಯಕ್ಷ ವಿ.ನಾರಾಯಣನ್‌ ಪ್ರತಿಕ್ರಿಯಿಸಿದ್ದಾರೆ. 
  • ಎಸ್‌ಎಸ್‌ಎಲ್‌ವಿ ತಂತಜ್ಞಾನ ವರ್ಗಾವಣೆಗೆ ಇಸ್ರೊ, ಎಚ್‌ಎಎಲ್‌, ಎನ್‌ಎಸ್‌ಐಎಲ್‌ ಮತ್ತು ಇನ್‌ಸ್ಪೇಸ್‌ ಒಂದಾಗಿರುವುದು ಈ ಕ್ಷೇತ್ರದಲ್ಲಿ ಮಹತ್ವದ ಮುನ್ನಡೆಯನ್ನು ಸೂಚಿಸುತ್ತದೆ. ಇದು ಬಾಹ್ಯಾಕಾಶ ಉದ್ಯಮವನ್ನು ಸಬಲೀಕರಿಸಲು, ಕೈಗೆಟುಕುವ ಮತ್ತು ವಿಶ್ವಾಸಾರ್ಹ ಉಡಾವಣಾ ಸೇವೆಗಳಿಗಾಗಿ ಭಾರತವನ್ನು ಜಾಗತಿಕ ಕೇಂದ್ರವಾಗಿ ಸ್ಥಾಪಿಸಬಯಸಿರುವ ಭಾರತ ಸರ್ಕಾರದ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ ಎಂದು ‘ಇನ್‌ಸ್ಪೇಸ್‌’ನ ಅಧ್ಯಕ್ಷ ಪವನ್‌ ಕುಮಾರ್‌ ಗೋಯೆಂಕಾ ಹೇಳಿದ್ದಾರೆ.

ಪ್ರಚಲಿತ ವಿದ್ಯಮಾನಗಳು: 10ನೇ ಸೆಪ್ಟೆಂಬರ್ 2025

  • ಎನ್ಡಿಎಯ ರಾಧಾಕೃಷ್ಣನ್ದೇಶದ 15ನೇ ಉಪರಾಷ್ಟ್ರಪತಿ

ಸಂದರ್ಭ: ಜಗದೀಪ್‌ ಧನಕರ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಅವರು ನಿರೀಕ್ಷೆಯಂತೆ ಗೆಲುವು ಸಾಧಿಸಿದರು. ಅವರು, ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರಿಗಿಂತ 152 ಹೆಚ್ಚು ಮತಗಳನ್ನು ಪಡೆದು ದೇಶದ 15ನೇ ಉಪ ರಾಷ್ಟ್ರಪತಿಯಾಗಿ ಚುನಾಯಿತರಾದರು.

  • ರಾಧಾಕೃಷ್ಣನ್‌ ಅವರ ಪರವಾಗಿ ಒಟ್ಟು 452 ಮತಗಳು ಚಲಾವಣೆ ಯಾಗಿದ್ದರೆ, ಪ್ರತಿಸ್ಪರ್ಧಿ ಸುದರ್ಶನ ರೆಡ್ಡಿ ಅವರಿಗೆ 300 ಮತಗಳು ಬಂದಿವೆ ಎಂದು ಚುನಾವಣಾ ಅಧಿಕಾರಿ ಪಿ.ಸಿ. ಮೋದಿ ಅವರು ಪ್ರಕಟಿಸಿದರು.
  • ‘ಒಟ್ಟು 767 ಸಂಸದರು (ಶೇ 98.2) ಮತಚಲಾಯಿಸಿದ್ದು, ಅವುಗಳಲ್ಲಿ 752 ಮತಗಳು ಮಾನ್ಯಗೊಂಡಿವೆ ಮತ್ತು 15 ಮತಗಳು ಅಮಾನ್ಯಗೊಂಡಿವೆ. ಅಂಚೆ ಮತಪತ್ರ ಸಲ್ಲಿಸಿದ್ದ ಸಂಸದರೊಬ್ಬರು ‘ಅದನ್ನು ಪರಿಗಣಿಸಬೇಡಿ’ ಎಂದು ಆನಂತರ ಹೇಳಿದ್ದರಿಂದ ಅದನ್ನು ಪರಿಗಣಿಸಿಲ್ಲ.
  • ಅಡ್ಡಮತದಾನದ ಲಾಭ ಬಿಜೆಪಿಗೆ: ‘ರಾಧಾಕೃಷ್ಣನ್‌ ಅವರ ಪರವಾಗಿ ಕೆಲ ಅಡ್ಡಮತದಾನ ನಡೆದಿರುವುದನ್ನು ಫಲಿತಾಂಶ ಸೂಚಿಸುತ್ತದೆ. ವಿರೋಧ ಪಕ್ಷಗಳ ಕನಿಷ್ಠ 15 ಸದಸ್ಯರು ಎನ್‌ಡಿಎ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ’ ಎಂದು ಬಿಜೆಪಿ ನಾಯಕರು ಪ್ರತಿಪಾದಿಸಿದ್ದಾರೆ. ಅದಕ್ಕೂ ಮುನ್ನ ಮಾತನಾಡಿದ್ದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ‘ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಇವೆ. ಎಲ್ಲ 315 ಸಂಸದರು ಮತ ಚಲಾಯಿಸಿದ್ದಾರೆ’ ಎಂದಿದ್ದರು.
  • ಯೋಜನೆಗಳಿಗೆಸುಪ್ರೀಂನಿರ್ಬಂಧಮಹದಾಯಿ-–ಕೋಟಿಗಾಂವ್ ಪ್ರದೇಶದಲ್ಲಿ ಅಭಿವೃದ್ಧಿ ಚಟುವಟಿಕೆ ಕೂಡದು

ಸಂದರ್ಭ: ಮಹದಾಯಿ- ಕೋಟಿಗಾಂವ್ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆ ಅಥವಾ ಯೋಜನೆಗಳನ್ನು ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

  • ಉತ್ತರ ಗೋವಾದಲ್ಲಿರುವ ಮಹದಾಯಿ ವನ್ಯಜೀವಿ ಧಾಮವು ಕಾಳಿ ಹುಲಿ ಮೀಸಲು ಪ್ರದೇಶ, ಭೀಮಘಡ ವನ್ಯಜೀವಿಧಾಮ ಮತ್ತು ಭಗವಾನ್‌ ಮಹಾವೀರ ರಾಷ್ಟ್ರೀಯ ಉದ್ಯಾನ ಒಳಗೊಂಡಂತೆ ಭೌಗೋಳಿಕವಾಗಿ ಕರ್ನಾಟಕದ ಜೊತೆಗೆ ಬೆಸೆದುಕೊಂಡಿದೆ.
  • ವನ್ಯಜೀವಿಧಾಮದಲ್ಲಿ ವಾಣಿಜ್ಯ ಯೋಜನೆಗಳಿಗೆ ಅನುಮತಿ ನೀಡಿರುವುದನ್ನು ಆಕ್ಷೇಪಿಸಿ ಗೋವಾ ಫೌಂಡೇಷನ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠ ಈ ನಿರ್ದೇಶನ ನೀಡಿತು.
  • ಮಹದಾಯಿ ವನ್ಯಜೀವಿ ಅಭಯಾರಣ್ಯ ಮತ್ತು ಪಕ್ಕದ ಪ್ರದೇಶಗಳನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಅಧಿಸೂಚನೆ ಹೊರಡಿಸುವ ಸಂಬಂಧ ಕೇಂದ್ರ ಉನ್ನತಾಧಿಕಾರ ಸಮಿತಿಯು (ಸಿಇಸಿ) ಆರು ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಪೀಠ ನಿರ್ದೇಶಿಸಿದೆ. ಬಳಿಕ ವಿಚಾರಣೆಯನ್ನು ಎಂಟು ವಾರ ಮುಂದೂಡಿದೆ.
  • ಮಹದಾಯಿ ವನ್ಯಜೀವಿಧಾಮ ಹಾಗೂ ಆಸುಪಾಸಿನ ಪ್ರದೇಶಗಳನ್ನುಹುಲಿ ಸಂರಕ್ಷಣಾ ಮೀಸಲು ಅರಣ್ಯವೆಂದು ಮೂರು ತಿಂಗಳಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಬಾಂಬೆ ಹೈಕೋರ್ಟ್ ಗೋವಾ ಪೀಠವು ಗೋವಾ ಸರ್ಕಾರಕ್ಕೆ 2023ರಲ್ಲಿ ನಿರ್ದೇಶನ ನೀಡಿತ್ತು.
  • ವನ್ಯಜೀವಿಧಾಮ ಹಾಗೂ ಸಮೀಪದ ಅರಣ್ಯ ಭಾಗದಲ್ಲಿ ಜನವಸತಿಗಳಿವೆ ಹಾಗೂ ಹುಲಿ ಗೋವಾದ ಸ್ಥಳೀಯ ವನ್ಯಜೀವಿ ಯಲ್ಲ ಎಂಬ ಕಾರಣ ನೀಡಿ ಮೀಸಲು ಅರಣ್ಯವಾಗಿ ಘೋಷಿಸಲು ಗೋವಾ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು.
  • ಕರ್ನಾಟಕ, ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಅರಣ್ಯ ಭಾಗಗಳ ಜೊತೆಗೆ ಭೌಗೋಳಿಕವಾಗಿ ಬೆಸೆದುಕೊಂಡಿರುವ ಮಹದಾಯಿ ವನ್ಯಜೀವಿ ಧಾಮದಲ್ಲಿ ಕೆಲವು ಹುಲಿಗಳು ಕಾಣಿಸಿಕೊಂಡಿದ್ದವು. ಇದನ್ನು ಹುಲಿ ಮೀಸಲು ಪ್ರದೇಶವಾಗಿ ಘೋಷಿಸಬೇಕು ಎಂಬ ಬೇಡಿಕೆ ಎದ್ದಿತ್ತು. ಕೆಲವು ವರ್ಷಗಳ ಹಿಂದೆ ಮಹದಾಯಿ ವನ್ಯಜೀವಿ ಧಾಮದಲ್ಲಿ ನಾಲ್ಕು ಹುಲಿಗಳ ಹತ್ಯೆಯಾಗಿತ್ತು.
  • ಪ್ರದೇಶವು ಹುಲಿ ಸಂತತಿ ವೃದ್ಧಿಗೆ ಸೂಕ್ತವಾದ ಪ್ರದೇಶವಾಗಿದೆ. ಇದನ್ನು ಮೀಸಲು ಅರಣ್ಯವಾಗಿ ಘೋಷಿಸಬೇಕು ಎಂದು ಎನ್ಟಿಸಿಎ ಸಲಹೆ ನೀಡಿತ್ತು.
  • ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳು ಮಹದಾಯಿಯಲ್ಲಿ ತಮ್ಮ ಪಾಲಿನ ನೀರನ್ನು ಬಳಸಿಕೊಳ್ಳುವ ಹಕ್ಕು ಹೊಂದಿವೆ. ಆದರೆ, ಅದಕ್ಕೆ ಪರಿಸರ ಮತ್ತು ಅರಣ್ಯ ಅನುಮತಿಗಳನ್ನು ಪಡೆಯಬೇಕಿದೆ. ಗೋವಾ ಸರ್ಕಾರ ಮತ್ತು ಅಲ್ಲಿನ ಪರಿಸರವಾದಿಗಳ ನಡುವಿನ ಹೋರಾಟವು ಕರ್ನಾಟಕದ ಮೇಲೆ ನೇರ ಪರಿಣಾಮ ಬೀರುವುದಿಲ್ಲ
  • ಜಿಬಿಎ: ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿ ವಿನಾಯಿತಿ

ಸಂದರ್ಭ: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ 1,200 ಚದರ ಅಡಿವರೆಗಿನ ನಿವೇಶನದಲ್ಲಿ ನಿರ್ಮಿಸಿರುವ ಮೂರು ಅಂತಸ್ತಿನ ಕಟ್ಟಡಕ್ಕೆ ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ.

  • ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ–2024ರ ಕಲಂ 241(7)ರಂತೆ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರದ ಅನ್ವಯ ಈ ವಸತಿ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ.
  • 1,200 ಚದರ ಅಡಿ ನಿವೇಶನದಲ್ಲಿ ನೆಲ ಹಾಗೂ 2 ಅಂತಸ್ತು ಅಥವಾ ಸ್ಟಿಲ್ಟ್‌ + ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಲಾಗಿದೆ. ಜಿಬಿಎ ಮುಖ್ಯ ಆಯುಕ್ತರ ಪ್ರಸ್ತಾವವನ್ನು ಕೂಲಂಕಷವಾಗಿ ಪರಿಶೀಲಿಸಿ ಸಣ್ಣ ಪ್ರಮಾಣದ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡುವುದರಿಂದ, ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಲು ಸಹಕಾರಿಯಾದಂತಾಗುತ್ತದೆ ಎಂದು ನಗರಾಭಿವೃದ್ಧಿ ಇಲಾಖೆ ಆದೇಶದಲ್ಲಿ ತಿಳಿಸಿದೆ.
  • ಪ್ರತಿ ವರ್ಷ 1,200 ಚದರಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನಗಳಲ್ಲಿ ಸುಮಾರು ನಾಲ್ಕು ಸಾವಿರ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡಲಾಗುತ್ತಿದೆ.
  • ಧಾರವಾಡದಲ್ಲಿ ಹಿಟಾಚಿ ಘಟಕ

ಸಂದರ್ಭ: ‘ಜಪಾನಿನ ಹಿಟಾಚಿ ಕನ್‌ಸ್ಟ್ರಕ್ಷನ್ ಮಷಿನರಿ ಕಂಪನಿಯು ಧಾರವಾಡದಲ್ಲಿ ನಿರ್ಮಾಣ ಯಂತ್ರೋಪಕರಣಗಳ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲಿದೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ತಿಳಿಸಿದ್ದಾರೆ.

  • ಜಪಾನ್‌ ಪ್ರವಾಸದಲ್ಲಿರುವ ಅವರು ಹಿಟಾಚಿ ಕಂಪನಿಯ ಪ್ರತಿನಿಧಿಗಳ ಭೇಟಿಯ ನಂತರ ಹೊರಡಿಸಿದ ಪ್ರಕಟಣೆ ಯಲ್ಲಿ ಈ ಮಾಹಿತಿ ನೀಡಿದ್ದಾರೆ.
  • ಧಾರವಾಡದಲ್ಲಿ ಕೇಂದ್ರವು 2027 ವೇಳೆಗೆ ಕಾರ್ಯಾರಂಭ ಮಾಡಲಿದೆ. ವಾಹನಗಳ ಏರ್ಬ್ಯಾಗ್ ಬಿಡಿ ಭಾಗಗಳ ತಯಾರಿಕಾ ಕಂಪನಿ ಅಸಾಹಿ ಕಸೆಯಿ ಅಡ್ವಾನ್ಸ್ಡ್ಬೆಂಗಳೂರಿನಲ್ಲಿ ಬಿಡಿ ಭಾಗಗಳ ತಯಾರಿಕಾ ಘಟಕ ಸ್ಥಾಪಿಸುವುದಾಗಿ ಹೇಳಿದೆ’ ಎಂದಿದ್ದಾರೆ.
  • ಅಪರೂಪದ ಶಾಸನ ಪತ್ತೆ

ಸಂದರ್ಭ: ತಾಲ್ಲೂಕಿನ ನಾರಿಹಳ್ಳ ಜಲಾಶಯದ ಹಿನ್ನೀರಿನ ತಟದಲ್ಲಿನ ಗಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಇಲ್ಲಿನ ಉಭಯ ದೇವರುಗಳ ಆರಾಧನೆಯನ್ನು ಉಲ್ಲೇಖಿಸುವ ಅಪರೂಪದ ಅಪ್ರಕಟಿತ ಮ್ಯಾಂಗನೀಸ್ ಶಾಸನ ಪತ್ತೆಯಾಗಿದೆ.

  • 10 ಅಡಿ ಎತ್ತರವಿರುವ ಮ್ಯಾಂಗನೀಸ್ ಬಂಡೆಯಲ್ಲಿ 3 ಅಡಿ ಎತ್ತರ 3 ಅಡಿ ಅಗಲದಲ್ಲಿ ಆರು ಸಾಲುಗಳಲ್ಲಿ ಶಾಸನ ಕೆತ್ತಲಾಗಿದೆ.
  • ಮರುಜನ್ಮ ಮತ್ತು ಮೋಕ್ಷಕ್ಕೆ ಸಂಬಂಧಿಸಿದ ಶಾಸನ ಇದಾಗಿದ್ದು ಮಾನವನಿಗೆ ನೀತಿ ಬೋಧಿಸುವ ಪ್ರತೀಕವಾಗಿದೆ ಎಂದು ಕೃಷ್ಣದೇವರಾಯ ವಿಶ್ವಾವಿದ್ಯಾಲಯದ ಪ್ರೊ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
  • ಮಿಜೋರಾಂ ರಾಜಧಾನಿಗೆ ರೈಲುಮಾರ್ಗ ಸಿದ್ಧ

ಸಂದರ್ಭ: ಮಿಜೋರಾಂ ರಾಜ್ಯದ ರಾಜಧಾನಿ ಐಜ್ವಾಲ್‌ಗೆ ಸಂಪರ್ಕಿಸುವ ರೈಲು ಮಾರ್ಗ ಕಣಿವೆಗಳ ನಡುವೆ ಅತ್ಯಧಿಕ ಸೇತುವೆ ಮತ್ತು ಸುರಂಗಗಳೊಂದಿಗೆ ಸಿದ್ಧಗೊಂಡಿದ್ದು, ಉದ್ಘಾಟನೆಗಾಗಿ ಕಾಯುತ್ತಿದೆ. 

  • ಈಶಾನ್ಯ ಭಾರತದ ರಾಜ್ಯಗಳ ರಾಜಧಾನಿಗಳಿಗೆ ರೈಲು ಸಂಪರ್ಕ ಇರಲಿಲ್ಲ.
  • ಅರುಣಾಚಲ ಪ್ರದೇಶವನ್ನು ಹೊರತುಪಡಿಸಿ ಉಳಿದ ಏಳು ರಾಜ್ಯಗಳ ರಾಜಧಾನಿಗಳಿಗೆ ರೈಲು ಸಂಪರ್ಕ ಕಾಮಗಾರಿಗೆ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು.
  • ಮಿಜೋರಾಂನ ರಾಜಧಾನಿ ಐಜ್ವಾಲ್ಕಡಿದಾದ ಬೆಟ್ಟಗಳ ಮೇಲೆ ಇರುವುದರಿಂದ ರೈಲು ಸಂಪರ್ಕ ಕಾಮಗಾರಿ ನಿಧಾನವಾಗಿ ನಡೆದಿದ್ದು, 11 ವರ್ಷಗಳ ಬಳಿಕ ಪೂರ್ಣಗೊಂಡಿದೆ.
  • ಅಸ್ಸಾಂನಿಂದ ಮಿಜೋರಾಂನ ಬೈರಾಬಿವರೆಗೆ ಬ್ರಾಡ್ಗೇಜ್ರೈಲು ಮಾರ್ಗ 2016ರಲ್ಲಿ ನಿರ್ಮಾಣವಾಗಿತ್ತು. ಬೈರಾಬಿಗೆ ಮೊದಲ ಸರಕು ರೈಲು ವರ್ಷ ಬಂದಿತ್ತು. ಇದುವೇ ರಾಜ್ಯದಲ್ಲಿ ಸಂಚರಿಸಿದ ಮೊದಲ ರೈಲು ಆಗಿತ್ತು. ಇದೀಗ ಬೈರಾಬಿಯಿಂದ ಐಜ್ವಾಲ್ ಸೈರಾಂಗ್ವರೆಗೆ ರೈಲು ಮಾರ್ಗವಾಗಿದ್ದು, ಸರಕು ರೈಲುಗಳಲ್ಲದೇ ಪ್ರಯಾಣಿಕರ ರೈಲುಗಳೂ ಸಂಚರಿಸಲಿವೆ.
  • 51.38 ಕಿ.ಮೀ. ಉದ್ದದ ಮಾರ್ಗದಲ್ಲಿ 48 ಸುರಂಗಗಳು, 55 ದೊಡ್ಡ ರೈಲು ಸೇತುವೆಗಳು, 88 ಸಣ್ಣ ಸೇತುವೆಗಳಿವೆ. 1.86 ಕಿ.ಮೀ. ಉದ್ದದ ಸುರಂಗವು ದೊಡ್ಡ ರೈಲು ಸುರಂಗ ಮಾರ್ಗವಾಗಿದ್ದರೆ, 114 ಮೀಟರ್‌ ಎತ್ತರದ ದೊಡ್ಡ ಸೇತುವೆಯೂ ಇದೆ. ಒಟ್ಟು ಆರು ಸೇತುವೆಗಳು ದೆಹಲಿಯ ಕುತುಬ್ಮೀನಾರ್ಗಿಂತ (72 ಮೀಟರ್‌) ಅಧಿಕ ಎತ್ತರವನ್ನು ಹೊಂದಿವೆ
  • ‘ಐಜ್ವಾಲ್‌ ಮತ್ತು ಕೊಲಸಿಬ್‌ ಜಿಲ್ಲೆಗಳಲ್ಲಿ ಸಾಗುವ ಈ ಮಾರ್ಗವನ್ನು ₹8,071 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಬೈರಾಬಿ, ಹೋರ್ಟೋಕಿ, ಕವನ್‌ಪುವಿ, ಮುಆಲ್ಖಾಂಗ್ ಮತ್ತು ಸೈರಾಂಗ್ ನಿಲ್ದಾಣಗಳಿವೆ. ಗಂಟೆಗೆ 100 ಕಿ.ಮೀ. ವೇಗದಲ್ಲಿ ಸಾಗಬಹುದಾದ ಸಾಮರ್ಥ್ಯವನ್ನು ಹೊಂದಿದೆ. ಒಂದೆರಡು ವಾರದಲ್ಲಿ ಉದ್ಘಾಟನೆಗೆ ಪ್ರಧಾನಿ ಕಚೇರಿಯಿಂದ ದಿನಾಂಕ ನಿಗದಿಯಾಗಲಿದೆ’ ಎಂದು ಈಶಾನ್ಯ ಗಡಿನಾಡು ರೈಲ್ವೆ (ನಾರ್ತ್‌ ಈಸ್ಟ್‌ ಫ್ರಾಂಟಿಯರ್‌ ರೈಲ್ವೆ) ಅಧಿಕಾರಿ.
  • ‘ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಇದಾಗಿದ್ದು, ಐಜ್ವಾಲ್‌ನಿಂದ ಗಡಿಭಾಗಗಳಿಗೂ ವಿಸ್ತರಿಸಲು ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ.
  • ರೈಲು ಹಳಿಗಳೇ ಸೌರ ವಿದ್ಯುತ್ಸ್ಥಾವರ

ಸಂದರ್ಭ: ಈ ವರ್ಷದ ಜೂನ್‌ ಅಂತ್ಯದಲ್ಲಿ ಭಾರತೀಯ ರೈಲ್ವೆಗೆ ಸಂಬಂಧಿಸಿದ ಒಂದು ಪೋಸ್ಟ್‌ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿತ್ತು. ‘ಭಾರತವು ರೈಲು ಹಳಿಗಳನ್ನು ವಿದ್ಯುತ್‌ ಸ್ಥಾವರನ್ನಾಗಿ ಪರಿವರ್ತಿಸುತ್ತಿದೆ’ ಎಂದು ಆ ಪೋಸ್ಟ್‌ ಹೇಳಿತ್ತು.

  • ಸುಸ್ಥಿರ ಮೂಲಸೌಕರ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವಂತಹ ಬೆಳವಣಿಗೆ ಇದಾಗಿದ್ದು, ‘ಸನ್‌ ವೇಸ್‌’ (Sun Ways) ಎಂಬ ಭಾರತದ ಸ್ಟಾರ್ಟ್‌ಅಪ್‌ ಕಂಪನಿಯು ರೈಲು ಹಳಿಗಳ ಮಧ್ಯೆ ಸೌರಫಲಕಗಳನ್ನು ಅಳವಡಿಸಿ ಸೌರ ವಿದ್ಯುತ್‌ ಉತ್ಪಾದಿಸಲು ಹೊರಟಿದೆ ಎಂದು ಆ ಪೋಸ್ಟ್‌ನಲ್ಲಿ ಹೇಳಲಾಗಿತ್ತು.
  • ದೇಶದ ಪ್ರಮುಖ ಸುದ್ದಿ ಸಂಸ್ಥೆ ಪಿಟಿಐ, ಜುಲೈ 7ರಂದು ಈ ಪೋಸ್ಟ್‌ ಬಗ್ಗೆ ಫ್ಯಾಕ್ಟ್‌ಚೆಕ್‌ ಮಾಡಿತ್ತು. ‘ಹಳಿಗಳ ನಡುವೆ ಸೌರಫಲಕಗಳನ್ನು ಅಳವಡಿಸುವ ಯೋಜನೆಯನ್ನು ಭಾರತೀಯ ರೈಲ್ವೆಯು ಕೈಗೆತ್ತಿಕೊಂಡಿಲ್ಲ; ಪೋಸ್ಟ್‌ನಲ್ಲಿರುವ ಚಿತ್ರ ಸ್ವಿಟ್ಜರ್ಲೆಂಡ್‌ಗೆ ಸಂಬಂಧಿಸಿ ದ್ದಾಗಿದ್ದು, ಸನ್ವೇ ಕಂಪನಿ ಭಾರತದ್ದಲ್ಲಸ್ವಿಟ್ಜರ್ಲೆಂಡ್ನದ್ದು. ಅಲ್ಲಿ ಅದು ಯೋಜನೆಯನ್ನು ಪ್ರಾಯೋಗಿಕವಾಗಿ ಕೈಗೆತ್ತಿಕೊಂಡಿದೆ ಎಂದು ಫ್ಯಾಕ್ಟ್‌ಚೆಕ್‌ ವರದಿ ತಿಳಿಸಿತ್ತು. 
  • ಇದಾಗಿ, ಒಂದೂವರೆ ತಿಂಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪೋಸ್ಟ್‌ ನಿಜವಾಗಿರುವ ಸುದ್ದಿ ಉತ್ತರ ಪ್ರದೇಶದಿಂದ ಬಂದಿದೆ. ವಾರಾಣಸಿಯಲ್ಲಿರುವ ಭಾರತೀಯ ರೈಲ್ವೆಯ ಬನಾರಸ್ಲೋಕೋಮೋಟಿವ್ವರ್ಕ್ಸ್‌ (ಬಿಎಲ್ಡಬ್ಲ್ಯು) ಘಟಕವು ಸದ್ದಿಲ್ಲದೇ ಹಳಿಗಳ ನಡುವೆ ಸೌರಫಲಕ ಗಳನ್ನು ಯಶಸ್ವಿಯಾಗಿ ಅಳವಡಿಸಿ ಸೂರ್ಯನ ಶಾಖದಿಂದ ವಿದ್ಯುತ್ಉತ್ಪಾದಿಸುವ ಪ್ರಾಯೋಗಿಕ ಯೋಜನೆಯನ್ನು ಆರಂಭಿಸಿದೆ. ಸ್ವಾತಂತ್ರ್ಯೋತ್ಸವದ ದಿನದಂದು ಯೋಜನೆಗೆ ಚಾಲನೆ ನೀಡಲಾಗಿದೆ.
  • 2030 ವೇಳೆಗೆ ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವ ಗುರಿಯನ್ನು ರೈಲ್ವೆ ಹೊಂದಿದ್ದು, ಆ ದಿಸೆಯಲ್ಲಿ ಈ ಪ್ರಾಯೋಗಿಕ ಯೋಜನೆ ಮಹತ್ವದ ಮೈಲಿಗಲ್ಲು ಎಂದು ರೈಲ್ವೆಯ ಅಧಿಕಾರಿಗಳು ಹೇಳಿದ್ದಾರೆ. ರೈಲ್ವೆ ಮಾತ್ರವಲ್ಲ, 2070 ವೇಳೆಗೆ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸುವ ಗುರಿಯನ್ನು ಭಾರತ ಹಾಕಿಕೊಂಡಿದೆ. ಅದನ್ನು ಸಾಧಿಸುವ ನಿಟ್ಟಿನಲ್ಲೂ ಈ ಯೋಜನೆ ಮಹತ್ವದ್ದು. ಸ್ವಿಟ್ಜರ್ಲೆಂಡ್‌ ಬಿಟ್ಟು ಬೇರೆ ದೇಶಗಳಲ್ಲಿ ಇಂತಹ ಪ್ರಯತ್ನ ನಡೆದಂತೆ ಕಾಣುತ್ತಿಲ್ಲ. ಭಾರತದಲ್ಲಂತೂ ಇದು ಮೊದಲ ಪ್ರಯತ್ನ.
  • ಬನಾರಸ್‌ನ ಲೋಕೋಮೋಟಿವ್ ವರ್ಕ್ಸ್‌ನ ಎಂಜಿನಿಯರ್‌ಗಳು ಈ ಯೋಜನೆಯ ರೂವಾರಿಗಳು. ಬಿಎಲ್‌ಡಬ್ಲ್ಯು ವರ್ಕ್ಸ್‌ಶಾಪ್‌ನ ಲೈನ್‌–19ರಲ್ಲಿ 70 ಮೀಟರ್‌ನಷ್ಟು ದೂರಕ್ಕೆ 28 ಸೌರಫಲಕ ಗಳನ್ನು ಅಳವಡಿಸಲಾಗಿದ್ದು, ಇದು 15 ಕಿಲೋ ವಾಟ್ನಷ್ಟು ಸೌರ ವಿದ್ಯುತ್ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಒಂದು ಕಿ.ಮೀ ಉದ್ದಕ್ಕೆ ಫಲಕ ಅಳವಡಿಸಿದರೆ 220 ಕಿಲೋ ವ್ಯಾಟ್ನಷ್ಟು ಸೌರವಿದ್ಯುತ್ಉತ್ಪಾದಿಸಬಹುದು. ಪ್ರತಿ ಕಿ.ಮೀನಲ್ಲಿ ಒಂದು ದಿನಕ್ಕೆ 880 ಯುನಿಟ್ಗಳಂತೆ ಒಂದು ವರ್ಷದಲ್ಲಿ 3.20 ಲಕ್ಷ ಯುನಿಟ್ಗಳಷ್ಟು ವಿದ್ಯುತ್ಉತ್ಪಾದಿಸಬಹುದು ಎಂಬುದು ಅಧಿಕಾರಿಗಳ ಲೆಕ್ಕಾಚಾರ.
  • ದೇಶದಲ್ಲಿ ರೈಲ್ವೆಯ ಜಾಲ 1.2 ಲಕ್ಷ ಕಿ.ಮೀನಷ್ಟು ಉದ್ದವಿದೆ. ಈ ತಂತ್ರಜ್ಞಾನವನ್ನು ರೈಲ್ವೆ ಯಾರ್ಡ್‌ಗಳಲ್ಲಿರುವ ಹೆಚ್ಚು ಬಳಕೆ ಯಲ್ಲಿರದ ಹಳಿಗಳಲ್ಲಿ ಬಳಸಬಹುದು. ಇದರಲ್ಲಿ ಸೌರಫಲಕಗಳ ಅಳವಡಿಕೆಗೆ ಹಳಿಗಳ ನಡುವಿನ ಖಾಲಿ ಜಾಗವನ್ನು ಬಳಸುವುದರಿಂದ ಯೋಜನೆಗಾಗಿ ಭೂಮಿಯನ್ನು ಸ್ವಾಧೀನ ಮಾಡುವ ಅಗತ್ಯವಿಲ್ಲ ಎಂಬುದು ಅಧಿಕಾರಿಗಳ ವಾದ.

ಫಲಕ ತೆರವುಗೊಳಿಸುವ ತಂತ್ರಜ್ಞಾನ

  • ಆಗಸ್ಟ್‌ 15ರಂದು ಯೋಜನೆಗೆ ಚಾಲನೆ ನೀಡುವ ವೇಳೆ ಸೌರಫಲಕಗಳನ್ನು ಅಳವಡಿಸಿದ 78 ಮೀಟರ್‌ ಉದ್ದದ ಹಳಿಯ ಮೇಲೆ ರೈಲು ಎಂಜಿನ್‌ ಅನ್ನು ಓಡಿಸಲಾಗಿತ್ತು. ಫಲಕ ಅಳವಡಿಕೆ ನಂತರ ಎದುರಾಗಬಹುದಾದ ಸವಾಲುಗಳನ್ನು ಪರಿಗಣಿಸಿಯೇ ಇದರ ವಿನ್ಯಾಸ ರೂಪಿಸಲಾಗಿದೆ. ದೇಶೀಯವಾಗಿ ವಿನ್ಯಾಸವನ್ನು ಸಿದ್ಧಪಡಿಸ ಲಾಗಿದೆ. ರೈಲು ಸಂಚರಿಸುವಾಗ ರೈಲು ಹಳಿಗಳು ಅದುರುವುದರಿಂದ, ಇದರ ಪ್ರಭಾವವನ್ನು ಕಡಿಮೆ ಮಾಡುವುದಕ್ಕಾಗಿ ಫಲಕಗಳಿಗೆ ರಬ್ಬರ್‌ ಚೌಕಟ್ಟುಗಳನ್ನು ಹೊಂದಿರುವ ಪ್ಯಾಡ್‌ ಬಳಸಲಾಗಿದೆ. ಹಳಿಯ ಕೆಳಗೆ, ಜಲ್ಲಿ ಮೇಲೆ ಹಾಕಲಾಗಿರುವ ಕಾಂಕ್ರೀಟ್‌ ಪಟ್ಟಿಗೆ ಫಲಕಗಳನ್ನು ಅಂಟಿಸಲಾಗಿದೆ. ಇದಕ್ಕಾಗಿ ಎಪಾಕ್ಸಿ ಅಂಟನ್ನು ಬಳಸಲಾಗಿದೆ. ಹಳಿ ನಿರ್ವಹಣೆ, ಸ್ವಚ್ಛತೆಗಾಗಿ ಫಲಕಗಳನ್ನು ಸುಲಭವಾಗಿ ತೆರವುಗೊಳಿಸಬಹುದು ಎಂಬುದು ಅಧಿಕಾರಿಗಳ ವಿವರಣೆ.

ಶೂನ್ಯ ಇಂಗಾಲ ಗುರಿಯೆಡೆಗೆ

  • ಸುಸ್ಥಿರ ಅಭಿವೃದ್ಧಿ, ನವೀಕರಿಸಬಹುದಾದ ಇಂಧನ ಬಳಕೆಯ ಮೂಲಕ ನಿರ್ವಹಣಾ ವೆಚ್ಚವನ್ನು ಉಳಿತಾಯ ಮಾಡಲು ಯತ್ನಿಸುತ್ತಿರುವ ರೈಲ್ವೆಯು ಸೌರಶಕ್ತಿಯಿಂದ ವಿದ್ಯುತ್‌ ಉತ್ಪಾದಿಸಿ ಶೂನ್ಯ ಇಂಗಾಲದ ಹೊರಸೂಸುವಿಕೆಯ ಗುರಿಯನ್ನು ಸಾಧಿಸುವತ್ತ ದೃಷ್ಟಿ ನೆಟ್ಟಿದೆ. ವರ್ಷದ ಫೆಬ್ರುವರಿ ಅಂಕಿಅಂಶಗಳ ಪ್ರಕಾರ, ರೈಲ್ವೆಯು ಈವರೆಗೆ ದೇಶದಾದ್ಯಂತ ಇರುವ 2,249 ರೈಲ್ವೆ ನಿಲ್ದಾಣಗಳು ಹಾಗೂ ಇತರ ಕಟ್ಟಡಗಳಲ್ಲಿ ಒಟ್ಟು 209 ಮೆಗಾ ವಾಟ್ಸಾಮರ್ಥ್ಯದ ಸೌರ ಘಟಕಗಳನ್ನು ಅಳವಡಿಸಿದೆ.
  • ಹಳಿಗಳ ನಡುವಿನ ಖಾಲಿ ಜಾಗ ಬಳಸಿ ಸೌರ ವಿದ್ಯುತ್‌ ಉತ್ಪಾದಿಸುವ ರೈಲ್ವೆಯ ಯೋಜನೆಯು 2030ರ ವೇಳೆಗೆ ಇಂಗಾಲ ಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸುವ ಗುರಿ ಸಾಧನೆಯ ದಿಸೆಯಲ್ಲಿ ಮತ್ತೊಂದು ಪ್ರಯತ್ನ.
  • ಆಂಧ್ರಪ್ರದೇಶ: ರೋಗಿಯಲ್ಲಿಮೆಲಿಯೊಯಿಡೊಸಿಸ್ದೃಢ

ಸಂದರ್ಭ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತುರಕಪಲೆಂ ಗ್ರಾಮದ ರೋಗಿಯೊಬ್ಬರಲ್ಲಿ ‘ಮೆಲಿಯೊಯಿಡೊಸಿಸ್’ (ಬ್ಯಾಕ್ಟೀರಿ ಯಾದಿಂದ ಹರಡುವ ಸೋಂಕು) ಇರುವುದು ದೃಢಪಟ್ಟಿದೆ.

  • 1,200 ಜನರು ವಾಸಿಸುತ್ತಿರುವ ಈ ಪುಟ್ಟ ಗ್ರಾಮದಲ್ಲಿ ಜುಲೈನಿಂದ ಇದುವರೆಗೆ ನಿಗೂಢ ಆರೋಗ್ಯ ಸಮಸ್ಯೆಗಳಿಂದಾಗಿ 23 ಮಂದಿ ಮೃತ ಪಟ್ಟಿದ್ದರು. ಸರಣಿ ಸಾವುಗಳ ನಡುವೆಯೇ ಬ್ಯಾಕ್ಟೀರಿಯಾ ಸೋಂಕಿನ ಮೊದಲ ಪ್ರಕರಣ ದೃಢಪಟ್ಟಿದೆ.
  • ಗುಂಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 46 ವರ್ಷದ ರೋಗಿಯಲ್ಲಿ ‘ಮೆಲಿಯೊಯಿಡೊಸಿಸ್’ ಸೋಂಕು ಇರುವುದು ದೃಢಪಟ್ಟಿದೆ ಎಂದು ಗುಂಟೂರು ಜಿಲ್ಲಾಧಿಕಾರಿ ಎಸ್‌.ನಾಗಲಕ್ಷ್ಮಿ ಮಂಗಳವಾರ ಹೇಳಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಯಾವುದೇ ತಕ್ಷಣದ ಅಪಾಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  • ಈ ಗ್ರಾಮದಲ್ಲಿ ಜುಲೈ ಮತ್ತು ಆಗಸ್ಟ್‌ನಲ್ಲಿ ತಲಾ 10 ಮಂದಿ ಹಾಗೂ ಸೆಪ್ಟೆಂಬರ್‌ನಲ್ಲಿ ಮೂವರು ಅನಾರೋಗ್ಯದಿಂದ ಮೃತ ಪಟ್ಟಿದ್ದಾರೆ. ಇವರಲ್ಲಿ ಆರಂಭದಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು, ಬಳಿಕ ಅಂಗಾಂಗ ವೈಫಲ್ಯಗೊಂಡು ಕೆಲವೇ ದಿನಗಳಲ್ಲಿ ಮೃತಪಟ್ಟಿದ್ದಾರೆ. ಮೃತರಲ್ಲಿ ಬಹುತೇಕರು 55 ವರ್ಷದವರಾಗಿದ್ದರು.
  • ಪರಿಷ್ಕೃತ ಎಂಆರ್ಪಿ ಪ್ರಕಟಿಸಿ: ಸೂಚನೆ

ಸಂದರ್ಭ: ಉತ್ಪನ್ನಗಳ ತಯಾರಕರು ಮತ್ತು ಆಮದುಗಾರರು ಜಿಎಸ್‌ಟಿ ದರದಲ್ಲಿ ಆಗಿರುವ ಪರಿಷ್ಕರಣೆ ಯನ್ನು ಪ್ರತಿಫಲಿಸುವ ರೀತಿಯಲ್ಲಿ ಹೊಸ ಎಂಆರ್‌ಪಿ ದರವನ್ನು ಉತ್ಪನ್ನಗಳ ಮೇಲೆ ಪ್ರಕಟಿಸಬೇಕು ಎಂದು ಕೇಂದ್ರ ಸರ್ಕಾರವು ಸೂಚನೆ ನೀಡಿದೆ.

  • ಉತ್ಪನ್ನಗಳನ್ನು ಪ್ಯಾಕ್‌ ಮಾಡಲು ಬಳಸುವ ಪೊಟ್ಟಣಗಳ ಮೇಲೆ ಹಳೆಯ ಎಂಆರ್‌ಪಿ ಇದ್ದರೆ, ಅವುಗಳನ್ನು ಡಿಸೆಂಬರ್‌ 31ರವರೆಗೆ ಅಥವಾ ಅವುಗಳ ದಾಸ್ತಾನು ಇರುವವರಿಗೆ (ಇವೆರಡರಲ್ಲಿ ಯಾವುದು ಮೊದಲೋ ಅದು ಅನ್ವಯ) ಬಳಕೆ ಮಾಡಬಹುದು ಎಂದು ಹೇಳಿದೆ. ಆದರೆ, ಇಂತಹ ಪೊಟ್ಟಣಗಳ ಮೇಲೆ ಪರಿಷ್ಕೃತ ಎಂಆರ್‌ಪಿಯನ್ನೂ ಪ್ರಕಟಿಸಬೇಕಾಗುತ್ತದೆ.
  • ವಿವಿಧ ಉತ್ಪನ್ನಗಳು ಹಾಗೂ ಸೇವೆಗಳ ಮೇಲಿನ ಜಿಎಸ್‌ಟಿ ಪ್ರಮಾಣವನ್ನು ಜಿಎಸ್‌ಟಿ ಮಂಡಳಿ ತಗ್ಗಿಸಿದೆ. ಪರಿಷ್ಕೃತ ಜಿಎಸ್‌ಟಿ ದರವು ಸೆಪ್ಟೆಂಬರ್‌ 22ರಿಂದ ಜಾರಿಗೆ ಬರುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರವು ಕಂಪನಿಗಳಿಗೆ ಈ ಸೂಚನೆ ನೀಡಿದೆ.
  • ‘ತಯಾರಕರು, ಪ್ಯಾಕ್ ಮಾಡುವವರು ಮತ್ತು ಆಮದುದಾರರು ಮಾರಾಟವಾಗದ ಉತ್ಪನ್ನಗಳ ಮೇಲಿನ ಎಂಆರ್‌ಪಿ ದರವನ್ನು ಡಿಸೆಂಬರ್‌ 31ರವರೆಗೆ (ಅಥವಾ ದಾಸ್ತಾನು ಖಾಲಿಯಾಗುವವರೆಗೆ) ಪರಿಷ್ಕರಿಸ ಬಹುದು. ಪರಿಷ್ಕರಿಸುವ ದರವು ಜಿಎಸ್‌ಟಿಯಿಂದ ಆದ ಬದಲಾವಣೆಯನ್ನು ಮಾತ್ರ ತೋರಿಸಬೇಕು. ತೆರಿಗೆಯಿಂದ ಆದ ಹೆಚ್ಚಳ ಅಥವಾ ಇಳಿಕೆಯನ್ನು ಮಾತ್ರ ಅದರಲ್ಲಿ ತೋರಿಸಬಹುದು’ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಎಕ್ಸ್‌ ಮೂಲಕ ತಿಳಿಸಿದ್ದಾರೆ.
  • ಸ್ಟಿಕ್ಕರ್ ಬಳಸಿ, ಸ್ಟ್ಯಾಂಪ್ ಬಳಸಿ ಅಥವಾ ಆನ್‌ಲೈನ್‌ ಪ್ರಿಂಟ್ ಮೂಲಕ ಪರಿಷ್ಕೃತ ಎಂಆರ್‌ಪಿಯನ್ನು ತೋರಿಸಬಹುದು. ಜೊತೆಯಲ್ಲೇ, ಮೂಲ ಎಂಆರ್‌ಪಿ ಕೂಡ ಕಾಣುವಂತೆ ಇರಬೇಕು ಎಂದು ಸೂಚಿಸಲಾಗಿದೆ. ಬೆಲೆಯಲ್ಲಿನ ಪರಿಷ್ಕರಣೆಗೆ ಸಂಬಂಧಿಸಿದಂತೆ ತಯಾರ ಕರು, ಪ್ಯಾಕ್‌ ಮಾಡುವವರು ಅಥವಾ ಆಮದುದಾರರು ಕನಿಷ್ಠ ಎರಡು ಜಾಹೀರಾತುಗಳನ್ನು ಒಂದು ಅಥವಾ ಅದಕ್ಕಿಂತ ಹೆಚ್ಚಿನ ಪತ್ರಿಕೆಗಳ ಮೂಲಕ ನೀಡಬೇಕಿದೆ.
  • ಬೆಲೆ ಪರಿಷ್ಕರಣೆ ಬಗ್ಗೆ ಗ್ರಾಹಕರಿಗೆ ಜಾಹೀರಾತು ಹಾಗೂ ಸಾರ್ವಜನಿಕ ನೋಟಿಸ್‌ ಮೂಲಕ ಮಾಹಿತಿ ನೀಡಬೇಕು. ಇದರಿಂದಾಗಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು, ಗ್ರಾಹಕರ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಾಗುತ್ತದೆ ಎಂದು ಜೋಶಿ ಅವರು ಹೇಳಿದ್ದಾರೆ.
  • ರಾಜಕೀಯ ಅಸ್ಥಿರತೆಯ ನೋಟ
  • ನಾಮಕಾವಸ್ಥೆ ಮುಖ್ಯಸ್ಥರುನಿಯಮಗಳ ಪ್ರಕಾರ ರಾಜ್ಯಪಾಲರಿಗೆ ವಿಟೋ ಅಧಿಕಾರ ಇಲ್ಲ: ಕರ್ನಾಟಕ ವಾದ

ಸಂದರ್ಭ: ಸಂವಿಧಾನದ ಪ್ರಕಾರ, ರಾಷ್ಟ್ರಪತಿ ಹಾಗೂ ರಾಜ್ಯಪಾಲರು ಕೇವಲ ನಾಮಕಾವಸ್ಥೆ ಮುಖ್ಯಸ್ಥರು. ಕೇಂದ್ರ ಹಾಗೂ ರಾಜ್ಯ ಸಚಿವ ಸಂಪುಟದ ಸಲಹೆ ಮೇರೆಗೆ ಕಾರ್ಯನಿರ್ವಹಿಸಲು ಬದ್ಧರು ಎಂದು ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಪ್ರತಿಪಾದಿಸಿದೆ.

  • ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ಅಂಕಿತ ಹಾಕುವುದಕ್ಕೆ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ನ್ಯಾಯಾಲಯ ಗಡುವು ನಿಗದಿ ಮಾಡಬಹುದೇ ಎಂಬ ವಿಷಯದ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಕೇಳಿರುವ ಸಲಹೆಗೆ ಸಂಬಂಧಿಸಿದ ವಿಚಾರಣೆ ವೇಳೆ ಕರ್ನಾಟಕ ಈ ಅಭಿಪ್ರಾಯ ವ್ಯಕ್ತಪಡಿಸಿತು. ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಗೋಪಾಲ್ ಸುಬ್ರಹ್ಮಣ್ಯನ್‌ ವಾದ ಮಂಡಿಸಿದರು.
  • ‘ರಾಷ್ಟ್ರಪತಿ ಹಾಗೂ ರಾಜ್ಯಪಾಲರು ಸಚಿವ ಸಂಪುಟದ ನೆರವು ಮತ್ತು ಸಲಹೆಗೆ ಬದ್ಧರಾಗಿದ್ದಾರೆ. ಇದು ಭಾರತದಲ್ಲಿ ಆಡಳಿತದ ಮೂಲಭೂತ ಕಲ್ಪನೆಯಾಗಿದೆ ಮತ್ತು ಸುಪ್ರೀಂ ಕೋರ್ಟ್ ಇದನ್ನು ಅನುಮೋದಿಸಿದೆ‘ ಎಂದು ಅವರು ವಾದಿಸಿದರು.
  • ‘ನಿಯಮಗಳ ಪ್ರಕಾರ ರಾಜ್ಯಪಾಲರಿಗೆ ವಿಟೋ ಅಧಿಕಾರ ಇಲ್ಲ. ರಾಜ್ಯಪಾಲರು ಮಸೂದೆಯನ್ನು ಮರುಪರಿಶೀಲನೆಗಾಗಿ ವಿಧಾನಸಭೆಗೆ ಮರಳಿಸುವ ಉದ್ದೇಶದಿಂದ ಅಂಕಿತ ಹಾಕುವುದನ್ನು ತಡೆಹಿಡಿಯುವ ಅಧಿಕಾರವನ್ನಷ್ಟೇ ಹೊಂದಿದ್ದಾರೆ. ಆದರೆ, ವಿಧಾನಸಭೆಯಲ್ಲಿ ಮತ್ತೊಮ್ಮೆ ಮಸೂದೆ ಅನುಮೋದನೆಗೊಂಡಲ್ಲಿ ರಾಜ್ಯಪಾಲರು ಅಂಕಿತ ನೀಡಲೇಬೇಕ’ ಎಂದು ವಾದಿಸಿದರು. ‘ಸಂಸದೀಯ ಪ್ರಜಾಪ್ರಭುತ್ವವು ಶಾಸಕಾಂಗದ ಮೂಲಕ ವ್ಯಕ್ತವಾಗುವ ಸಾಮೂಹಿಕ ಅಭಿವ್ಯಕ್ತಿಯಾಗಿದೆ. ಕಾರ್ಯಾಂಗವು ಶಾಸಕಾಂಗದಿಂದ ರೂಪುಗೊಳ್ಳುತ್ತದೆ ಮತ್ತು ಅದಕ್ಕೆ ಉತ್ತರದಾಯಿಯಾಗಿರುತ್ತದೆ. ಕಾನೂನನ್ನು ರೂಪಿಸುವ ಅಂತಿಮ ಜವಾಬ್ದಾರಿ ಶಾಸಕಾಂಗದ ಮೇಲಿದೆ‘ ಎಂದು ಅವರು ಹೇಳಿದರು.

ಸೂಕ್ತ ಸಮಯದಲ್ಲಿ ಮಸೂದೆಗೆ ಅಂಗೀಕಾರ: ಸುಪ್ರೀಂ ಸಲಹೆ 

  • ರಾಜ್ಯ ವಿಧಾನಸಭೆಯಲ್ಲಿ ಅನುಮೋದನೆಗೊಂಡ ಮಸೂದೆಗಳಿಗೆ ಅಂಕಿತ ಹಾಕುವ ಅಧಿಕಾರ ನೀಡುವ ಸಂವಿಧಾನದ 200 ನೇ ‍ಪರಿಚ್ಛೇದದಲ್ಲಿ ‘ಸಾಧ್ಯವಾದಷ್ಟು ಬೇಗ’ ಎಂಬ ಅಂಶ ಇಲ್ಲದೆ ಇದ್ದರೂ ಕೂಡ ರಾಜ್ಯಪಾಲರು ‘ಸೂಕ್ತ ಸಮಯ‘ದಲ್ಲಿ ಕ್ರಮ ಕೈಗೊಳ್ಳುವುದನ್ನು ನಿರೀಕ್ಷಿಸಲಾಗುತ್ತಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
  • ಎಂಟನೇ ದಿನದ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಐದು–ಸದಸ್ಯರ ಸಾಂವಿಧಾನಿಕ ಪೀಠ, ‘ಕೇವಲ ಸಂವಿಧಾನವನ್ನಷ್ಟೇ ವಿಶ್ಲೇಷಿಸಲಾಗುವುದು, ವೈಯಕ್ತಿಕ ಪ್ರಕರಣಗಳನ್ನಲ್ಲ’ ಎಂದು ಸ್ಪಷ್ಟಪಡಿಸಿದೆ.
  • ‘ತುರ್ತು ಪ್ರಕರಣಗಳಲ್ಲಿ ರಾಜ್ಯಪಾಲರು 24 ಗಂಟೆಗಳ ಒಳಗೆ ಕಾರ್ಯ ನಿರ್ವಹಿಸಬೇಕಾಗಬಹುದು’ ಎಂದು ಪೀಠ ಹೇಳಿದೆ.
  • ಸಂವಿಧಾನ 200 ಪರಿಚ್ಛೇದವು ರಾಜ್ಯಪಾಲರಿಗೆ ವಿಧಾನಸಭೆಯಲ್ಲಿ ಅನುಮೋದನೆಗೊಂಡ ಮಸೂದೆಗಳಿಗೆ ಅಂಕಿತ ನೀಡುವ, ಮಸೂದೆ ತಡೆ ಹಿಡಿಯುವ ಅಥವಾ ಮಸೂದೆಯನ್ನು ಮರಳಿ ಕಳುಹಿಸುವ ಅಥವಾ ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ಮೀಸಲಿರಿಸುವ ಅಧಿಕಾರ ನೀಡುತ್ತದೆ.
  • ಪರಿಚ್ಛೇದ 200ರ ಮೊದಲ ನಿಯಮದ ಅನುಸಾರ, ರಾಜ್ಯಪಾಲರು ತಮಗೆ ಬಂದ ಮಸೂದೆಯನ್ನು ಸಾಧ್ಯವಾಷ್ಟು ಶೀಘ್ರದಲ್ಲಿ ಅಂಕಿತ ಹಾಕಬೇಕು ಅಥವಾ  ಮರುಪರಿಶೀಲನೆಗಾಗಿ ಸದನಕ್ಕೆ ಮರಳಿ ಕಳುಹಿಸಬೇಕು (ಹಣಕಾಸಿನ ಮಸೂದೆ ಹೊರತುಪಡಿಸಿ). ವಿಧಾನಸಭೆಯಲ್ಲಿ ಅದನ್ನು ಮರುಪರಿಶೀಲಿಸಿ ಕಳುಹಿಸಿದ ನಂತರ ಅದಕ್ಕೆ ಅಂಕಿತ ಹಾಕುವುದಕ್ಕೆ ವಿಳಂಬ ಮಾಡಬಾರದು.
  • ಇಂದೋರ್, ಅಮರಾವತಿ, ದೇವಾಸ್ನಗರ ಪ್ರಥಮ
  • ಹಿಮಾಚಲಕ್ಕೆ ₹1,500 ಕೋಟಿ ನೆರವು

ಸಂದರ್ಭ: ಭಾರಿ ಮಳೆಯಿಂದಾಗಿ ತೀವ್ರ ಹಾನಿಗೆ ಒಳಗಾಗಿರುವ ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದರು. ರಾಜ್ಯಕ್ಕೆ ತಕ್ಷಣಕ್ಕೆ ₹1,500 ಕೋಟಿ ಬಿಡುಗಡೆ ಮಾಡುವುದಾಗಿ ಅವರು ಘೋಷಣೆ ಮಾಡಿದರು.

  • ಜೂನ್‌ 20ರಿಂದ ಸೆಪ್ಟೆಂಬರ್‌ 8ರವರೆಗೆ ರಾಜ್ಯಕ್ಕೆ ಸುಮಾರು ₹4,122 ಕೋಟಿ ನಷ್ಟವಾಗಿದೆ. ಮಳೆ ಸಂಬಂಧಿತ ಅವಘಡ ಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ಹೇಳಿದರು. ಹೆಲಿಕಾಪ್ಟರ್‌ ಮೂಲಕ ಪ್ರಧಾನಿ ಮೋದಿ ಅವರು ವೈಮಾನಿಕ ಸಮೀಕ್ಷೆ ನಡೆಸಿ ಹಾನಿಯ ಮಾಹಿತಿ ಪಡೆದುಕೊಂಡರು.
  • ರಾಜ್ಯ ವಿಪತ್ತು ನಿರ್ವಹಣೆ ಪಡೆ ನಿಧಿಗೆ ಮತ್ತು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಗೆ ಕೇಂದ್ರ ಸರ್ಕಾರವು ನೀಡುವ ಹಣವನ್ನೇ ಮುಂಗಡವಾಗಿ (₹1,500 ಕೋಟಿ) ನೀಡಲಾಗುತ್ತಿದೆ. ಈ ನಿಧಿಗಳಿಗೆ ಎರಡನೇ ಕಂತಿನಲ್ಲಿ ಕೇಂದ್ರವು ಹಣ ಪಾವತಿ ಮಾಡಬೇಕಿತ್ತು.
  • ಮಳೆಹಾನಿ ಅಂದಾಜಿಸಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ಈಗಾಗಲೇ ಸಚಿವರ ತಂಡವನ್ನು ರಾಜ್ಯಕ್ಕೆ ಕಳುಹಿಸಿದೆ. ಈ ತಂಡದ ವರದಿ ಬಂದ ಬಳಿಕ, ಕೇಂದ್ರ ಸರ್ಕಾರವು ಮುಂದಿನ ಹಂತದ ಆರ್ಥಿಕ ನೆರವು ನೀಡಲಿದೆ ಎನ್ನಲಾಗುತ್ತಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟ ಕುಟುಂಬದವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದರು.
  • ‘ಶಿಕ್ಷಣ, ಕೃಷಿ ಸೇರಿದಂತೆ ರಾಜ್ಯದಲ್ಲಿ ಹಲವು ಕ್ಷೇತ್ರಗಳಿಗೆ ಭಾರಿ ನಷ್ಟವಾಗಿದೆ. ಜನರ ಜೀವನ ಸಹಜಸ್ಥಿತಿಗೆ ಮರಳುವಂತೆ ಮಾಡಬೇಕಿದೆ ಇದಕ್ಕಾಗಿ ಬಹು ಆಯಾಮದ ಯೋಜನೆಗಳನ್ನು ರೂಪಿಸಬೇಕು’ ಎಂದು ಪ್ರಧಾನಿ ಹೇಳಿದರು.

ಪಂಜಾಬ್‌ಗೆ ₹1,600 ಕೋಟಿ ನೆರವು

  • ಪ್ರವಾಹದಿಂದ ತೀವ್ರ ಹಾನಿಗೆ ಒಳಗಾಗಿರುವ ಪಂಜಾಬ್‌ಗೆ ಪ್ರಧಾನಿ ಮೋದಿ ಅವರು ₹1,600 ಕೋಟಿ ನೆರವು ಘೋಷಣೆ ಮಾಡಿದರು. ರಾಜ್ಯಕ್ಕೆ ಈಗಾಗಲೇ ₹12 ಸಾವಿರ ಕೋಟಿ ನೆರವನ್ನು ಕೇಂದ್ರ ಸರ್ಕಾರ ನೀಡಿದೆ. ರಾಜ್ಯಕ್ಕೆ ಸುಮಾರು ₹13 ಸಾವಿರ ಕೋಟಿ ನಷ್ಟವಾಗಿದೆ’ ಎಂದು ರಾಜ್ಯ ಸರ್ಕಾರ ಅಂದಾಜಿಸಿದೆ. ಮನೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರಿಗೆ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಲಾಯಿತು.

ಪ್ರಚಲಿತ ವಿದ್ಯಮಾನಗಳು: 9ನೇ ಸೆಪ್ಟೆಂಬರ್ 2025

ಆಧಾರ್ ಪರಿಗಣನೆಗೆ ಸೂಚನೆ

ಸಂದರ್ಭ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮತದಾರರ ಗುರುತಿನ ದಾಖಲೆಯಾಗಿ ಆಧಾರ್‌ ಸಂಖ್ಯೆಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
  • ಪ್ರಸ್ತುತ ಬಿಹಾರದಲ್ಲಿ ಎಸ್ಐಆರ್ಪ್ರಕ್ರಿಯೆಗೆ 11 ದಾಖಲೆಗಳನ್ನು ಗೊತ್ತುಪಡಿಸಲಾಗಿದೆ. ಮತದಾರರು ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಅರ್ಜಿ ನಮೂನೆ ಜೊತೆ ಸಲ್ಲಿಸಬೇಕಿದೆ.
  • ನ್ಯಾಯಮೂರ್ತಿ ಸೂರ್ಯ ಕಾಂತ್ಮತ್ತು ಜಾಯ್ಮಾಲ್ಯ ಬಾಗ್ಚಿ ಅವರನ್ನು ಒಳಗೊಂಡ ನ್ಯಾಯಪೀಠವು, 12ನೇ ದಾಖಲೆಯಾಗಿಆಧಾರ್‌’ ಅನ್ನು ಪರಿಗಣಿಸುವಂತೆ ಹೇಳಿದೆ.
  • ಆದಾಗ್ಯೂ, ಆಧಾರ್ಸಂಖ್ಯೆಯು ಪೌರತ್ವಕ್ಕೆ ಪುರಾವೆ ಅಲ್ಲ. ಅದನ್ನು ಗುರುತಿನ ದಾಖಲೆಯಾಗಿ ಪರಿಗಣಿಸಬಹುದಷ್ಟೆ ಎಂದು ನ್ಯಾಯಪೀಠ ಹೇಳಿದೆ.
  • ಮತದಾರ ಸಲ್ಲಿಸಿದ ಆಧಾರ್‌ ಕಾರ್ಡ್‌ ಅಸಲಿ ಹೌದೇ ಅಲ್ಲವೇ ಎನ್ನುವುದನ್ನು ಆಯೋಗವು ಪರಿಶೀಲಿಸಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
  • ‘ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕೆಂದು ಯಾರೂ ಬಯಸುತ್ತಿಲ್ಲ. ಆಯೋಗವು ನೈಜ ಮತದಾರರಿಗೆ ಮಾತ್ರ ಮತ ಚಲಾವಣೆಗೆ ಅವಕಾಶ ನೀಡಬೇಕು. ನಕಲಿ ದಾಖಲೆಗಳ ಆಧಾರದಲ್ಲಿ ನೈಜ ಪ್ರಜೆಗಳು ಎಂದು ಹೇಳಿಕೊಳ್ಳುತ್ತಿರುವವರನ್ನು ಮತದಾರರ ಪಟ್ಟಿಯಿಂದ ಹೊರಹಾಕಬೇಕು’ ಎಂದು ಕೋರ್ಟ್‌ ಸ್ಪಷ್ಟಪಡಿಸಿತು.
  • ಆಧಾರ್‌ ಅನ್ನು ಗುರುತಿನ ದಾಖಲೆಯಾಗಿ ಸ್ವೀಕರಿಸುವ ಸಂದರ್ಭದಲ್ಲಿ ಅಧಿಕಾರಿಗಳಿಗೆ ಅಗತ್ಯವಿರುವ ನಿರ್ದೇಶನಗಳನ್ನು ನೀಡುವಂತೆ ಆಯೋಗಕ್ಕೆ ನ್ಯಾಯಪೀಠ ಹೇಳಿತು.
  • ಇದೇ ವೇಳೆ, ಆಧಾರ್‌ ಕಾರ್ಡನ್ನು ಗುರುತಿನ ದಾಖಲೆಯಾಗಿ ಸ್ವೀಕರಿಸದ್ದಕ್ಕೆ ಸಂಬಂಧಿಸಿದಂತೆ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ವಿವರಣೆ ನೀಡುವಂತೆ ಕೇಳಿತು. ಆಯೋಗದ ಪರ ಹಾಜರಿದ್ದ ಹಿರಿಯ ವಕೀಲ ರಾಕೇಶ್‌ ದ್ವಿವೇದಿ ಅವರು, 99.6ರಷ್ಟು ಮತದಾರರ ಹೆಸರನ್ನು ಒಳಗೊಂಡ ಕರಡು ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
  • ಗ್ಯಾರಂಟಿಗಳಿಗೆ ₹97,813 ಕೋಟಿ ವೆಚ್ಚ

ಸಂದರ್ಭ: ಗ್ಯಾರಂಟಿ ಯೋಜನೆಯಡಿ ಈವರೆಗೆ ₹97,813 ಕೋಟಿ ಖರ್ಚು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

  • ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದರು.
  • ಈ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ₹50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನು ಭವಿಗಳಿಗೆ ₹18,139 ಕೋಟಿ, ಯುವನಿಧಿ ಯೋಜನೆಯಡಿ 2.55 ಲಕ್ಷ ಫಲಾನುಭವಿಗಳಿಗೆ ₹623 ಕೋಟಿ, ಶಕ್ತಿ ಯೋಜನೆಯಡಿ 544 ಕೋಟಿ ಬಾರಿ ಪ್ರಯಾಣಿಸಿದ್ದಕ್ಕೆ ₹13,903 ಕೋಟಿ ಮತ್ತು ಅನ್ನಭಾಗ್ಯ ಯೋಜನೆಯಡಿ 72.02 ಕೋಟಿ ಫಲಾನುಭವಿ ಗಳಿಗೆ ₹11,821.17 ಕೋಟಿ ವೆಚ್ಚ ಮಾಡಲಾಗಿದೆ ಎಂದು ಹೇಳಿದರು.
  • ಮರಣ ಹೊಂದುವ ಫಲಾನುಭವಿ ಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್‌ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಮಾಹಿತಿ ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು ಎಂದರು.
  • ಆದಾಯ ತೆರಿಗೆ ರಿಟರ್ನ್‌ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು. ಅನರ್ಹ ಬಿಪಿಎಲ್‌ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್‌ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್‌ ಮಟ್ಟದಲ್ಲಿ ನಡೆಸಬೇಕು. ಈ ಕುರಿತ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದರು. ಅನ್ನಭಾಗ್ಯ ಯೋಜನೆಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು  ಸಿದ್ದರಾಮಯ್ಯ ಹೇಳಿದರು.

ವಿಶ್ವದಾಖಲೆ ಸೃಷ್ಟಿಸಿದ ಶಕ್ತಿ ಯೋಜನೆ

  • ‘ರಾಜ್ಯದಲ್ಲಿ ‘ಶಕ್ತಿ’ ಯೋಜನೆಯಡಿ 500 ಕೋಟಿಗೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ. ಇದು ‘ಗೋಲ್ಡನ್‌ ಬುಕ್ ಆಫ್‌ ರೆಕಾರ್ಡ್ಸ್‌’ ನಲ್ಲಿ ದಾಖಲಾಗಿದೆ. ಇದಕ್ಕೆ ಪ್ರಮಾಣ ಪತ್ರ ಸಿಕ್ಕಿದೆ’ ಎಂದು ಸಭೆಯಲ್ಲಿ ಹೇಳಿದ  ಸಚಿವ ರಾಮಲಿಂಗಾರೆಡ್ಡಿ ಅವರು ಸಭೆಯಲ್ಲಿ ಪ್ರಮಾಣ ಪತ್ರ ಪ್ರದರ್ಶಿಸಿ ಹರ್ಷ ವ್ಯಕ್ತಪಡಿಸಿದರು.
  • ಮತಪತ್ರಕಡ್ಡಾಯ: 4 ಮಸೂದೆ ಸಿದ್ಧ

ಸಂದರ್ಭ: ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬದಲು, ರಹಸ್ಯ ಮತದಾನ ವ್ಯವಸ್ಥೆಗೆ ‘ಮತಪತ್ರ’ (ಬ್ಯಾಲಟ್ ಪೇಪರ್) ಬಳಕೆ ಕಡ್ಡಾಯಗೊಳಿಸಲು ಸಂಬಂಧಪಟ್ಟ ಕಾಯ್ದೆಗಳ ತಿದ್ದುಪಡಿಗೆ ನಾಲ್ಕು ಮಸೂದೆ ಗಳನ್ನು ರಾಜ್ಯ ಸರ್ಕಾರ ಸಿದ್ಧಪಡಿಸಿದೆ.

  • ಇದೇ 11ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಸೂದೆಗಳ ಕರಡನ್ನು ಮಂಡನೆ ಮಾಡಲಾಗುತ್ತಿದೆ. ಬಳಿಕ ಸುಗ್ರೀವಾಜ್ಞೆ ಹೊರಡಿಸಲು ಉದ್ದೇಶಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
  • ತನ್ನ ವ್ಯಾಪ್ತಿಯಲ್ಲಿರುವ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಕೆ ಹಾಗೂ ರಾಜ್ಯ ಚುನಾವಣಾ ಆಯೋಗದ ನೇತೃತ್ವ ದಲ್ಲಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿ ಸುವ ಮಹತ್ವದ ನಿರ್ಣಯವನ್ನು ಸೆ. 4ರಂದು ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿತ್ತು.

ಸರ್ಕಾರದ ಸಮರ್ಥನೆಗಳೇನು?:

  • ಮತಪತ್ರದ ಗೌಪ್ಯತೆಯು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ಮೂಲ ಆಧಾರವಾಗಿದ್ದು, ಪ್ರಜಾಸತ್ತಾತ್ಮಕ ಪ್ರಕ್ರಿ ಯೆಯ ಪಾವಿತ್ರ್ಯವನ್ನು ಕಾಪಾಡುವ ಮೂಲಕ ಮತದಾರರನ್ನು ಬಲವಂತ, ಬೆದರಿಕೆ ಮತ್ತು ಅನುಚಿತ ಪ್ರಭಾವದಿಂದ ರಕ್ಷಿಸುತ್ತದೆ ಎಂದು ಹಲವು ತೀರ್ಪುಗ ಳಲ್ಲಿ ಸುಪ್ರೀಂ ಕೋರ್ಟ್‌ ಹೇಳಿದೆ. ಕುಲದೀಪ್‌ ನಾಯರ್‌ ವಿರುದ್ಧದ ಕೇಂದ್ರ ಸರ್ಕಾರ (2006) ಪ್ರಕರಣದಲ್ಲಿ ‘ಮತದಾರರ ಸ್ವಾಯತ್ತತೆಯನ್ನು ಖಚಿತಪಡಿಸಿ ಕೊಳ್ಳಲು ಮತ್ತು ಬಾಹ್ಯ ಒತ್ತಡಗಳನ್ನು ತಡೆಯಲು ಸಾರ್ವತ್ರಿಕ ಚುನಾವಣೆಗಳಿಗೆ ರಹಸ್ಯ ಮತದಾನ ಅತ್ಯಗತ್ಯವಾಗಿದೆ’ ಎಂದೂ ಸ್ಪಷ್ಟಪಡಿ ಸಿದೆ. ಆ ಮೂಲಕ, ಮುಕ್ತ ಚುನಾವಣೆಗಳ ಸಾಂವಿಧಾನಿಕ ಆದೇಶ ಎತ್ತಿ ಹಿಡಿದಿದೆ.
  • ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರ ವಿಶ್ವಾಸದ ಮಹತ್ವವನ್ನು ಸುಪ್ರೀಂ ಕೋರ್ಟ್‌ ಒತ್ತಿ ಹೇಳಿದ್ದು, ಮತ ಪತ್ರದ ಗೌಪ್ಯತೆ ಕಾಪಾಡುವಾಗ ಪಾರ ದರ್ಶಕತೆ ಹೆಚ್ಚಿಸಲು ಇವಿಎಂಗಳಲ್ಲಿ ದಾಖಲಾಗುವ ಮತಗಳ ಪರಿಶೀಲನೆಗೆ ವೆರಿಫೈಯಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್ ) ಪರಿಚಯಿಸಿತ್ತು. ಅಲ್ಲದೆ, ಇವಿಎಂ ವ್ಯವಸ್ಥೆಯಲ್ಲಿನ ದೌರ್ಬಲ್ಯಗಳನ್ನು ಪರಿಹರಿಸಲು ನಿರಂತರ ಸುಧಾರಣೆಗಳ ಅಗತ್ಯವನ್ನೂ ಎತ್ತಿ ತೋರಿಸಿದೆ. ಆದರೆ, ಇವಿಎಂಗಳಲ್ಲಿನ ದೌರ್ಬಲ್ಯಗಳು ಮತ್ತು ಮತದಾರರ ಪಟ್ಟಿಗಳಲ್ಲಿನ ವ್ಯತ್ಯಾಸಗಳ ಮೂಲಕ ಚುನಾವಣಾ ಕುತಂತ್ರಗಳ ಸಾಧ್ಯತೆಯ ಕುರಿತು ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿರುವುದರಿಂದ, ಸಾರ್ವಜನಿಕ ನಂಬಿಕೆಯನ್ನು ಮರು ಸ್ಥಾಪಿ ಸಲು ಸದೃಢವಾದ ರಹಸ್ಯ ಮತಪತ್ರ ವ್ಯವಸ್ಥೆಗೆ ಮರಳುವ ಅಗತ್ಯ ಉಂಟಾಗಿದೆ ಎಂದು ರಾಜ್ಯ ಸರ್ಕಾರ ಸಮರ್ಥನೆ ನೀಡಿದೆ.
  • ಈ ಕಳವಳಗಳ ಕಾರಣಕ್ಕೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಗದ ಮತಪತ್ರ ವ್ಯವಸ್ಥೆಗೆ ಮರಳಲು ನಿರ್ಧರಿಸಲಾಗಿದೆ.  ಕಾಗದ ಮತಪತ್ರಗಳು ಅಥವಾ ಇತರ ಗೌಪ್ಯ ಕಾರ್ಯವಿಧಾನ ಗಳ ಬಳಕೆಯ ಮೂಲಕ ರಹಸ್ಯ ಮತ ದಾನ ವ್ಯವಸ್ಥೆಯು, ಮತದಾರರು ಪ್ರತೀ ಕಾರದ ಭಯ ಇಲ್ಲದೆ ತಮ್ಮ ಮತ ಚಲಾ ಯಿಸಬಹುದು ಎಂಬುದನ್ನು ಖಚಿತಪಡಿಸುತ್ತದೆ ಎಂದೂ ವಿವರಿಸಿದೆ.

ತಿದ್ದುಪಡಿ ಮಸೂದೆಗಳು ಯಾವುವು?

  • l ಗ್ರೇಟರ್‌ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ)
  • l ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ)
  • l ಕರ್ನಾಟಕ ನಗರ ಪಾಲಿಕೆಗಳು (ಎರಡನೇ ತಿದ್ದುಪಡಿ)
  • l ಕರ್ನಾಟಕ ಪುರಸಭೆಗಳು (ತಿದ್ದುಪಡಿ)

ವಿಧಾನ ಮಂಡಲಕ್ಕೆ ಅಧಿಕಾರವಿದೆ

  • ‘ಸ್ಥಳೀಯ ಪ್ರಾಧಿಕಾರಗಳಿಗೆ ಮುಕ್ತ, ನ್ಯಾಯಯುತ ಮತ್ತು ಪಾರದರ್ಶಕ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು, ಕಾಗದ ಮತಪತ್ರಗಳನ್ನು ಬಳಸಿಕೊಂಡು ರಹಸ್ಯ ಮತದಾನ ವ್ಯವಸ್ಥೆ ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲು ಸಂಬಂಧಿತ ಕಾಯ್ದೆಗಳಿಗೆ ತಿದ್ದುಪಡಿ ಮಾಡಬೇಕಿದೆ. ಆ ಮೂಲಕ, ರಾಜ್ಯ ಚುನಾವಣಾ ಆಯೋಗವು ಮತದಾರರ ಗೌಪ್ಯತೆ ಮತ್ತು ಚುನಾವಣಾ ಸಮಗ್ರತೆಯೊಂದಿಗೆ ಚುನಾವಣೆಗಳನ್ನು ನಡೆಸಲು ಅನುಕೂಲ ಕಲ್ಪಿಸಲು ಉದ್ದೇಶಿಸಲಾಗಿದೆ.
  • ಮಸೂದೆ ರೂಪಿಸಲು ರಾಜ್ಯ ವಿಧಾನ ಮಂಡಲಕ್ಕೆ ಅಧಿಕಾರವಿದೆ. ಮಸೂದೆಯಲ್ಲಿರುವ ಉಪಬಂಧಗಳು ಕೇಂದ್ರದ ಜಾರಿಯಲ್ಲಿರುವ ಯಾವುದೇ ಕಾಯ್ದೆಯ ಉಪಬಂಧಗಳಿಗೆ ವ್ಯತಿರಿಕ್ತ ಆಗುವುದಿಲ್ಲ. ಹೀಗಾಗಿ, ಮಸೂದೆಗಳನ್ನು ರಾಷ್ಟ್ರಪತಿಯ ಅಂಕಿತಕ್ಕೆ ಕಾಯ್ದಿರಿಸುವ ಅಗತ್ಯವೂ ಇಲ್ಲ’ ಎಂದು ಕಾನೂನು ಮತ್ತು ಸಂಸದೀಯ ಇಲಾಖೆ ಪ್ರತಿಪಾದಿಸಿದೆ.
  • ಹಿಮಾಲಯದಲ್ಲಿಪಲ್ಲಾಸ್ಕ್ಯಾಟ್‌’

ಸಂದರ್ಭ: ಅರುಣಾಚಲ ಪ್ರದೇಶದ ಹಿಮಾಚ್ಛಾದಿತ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ‘ಪಲ್ಲಾಸ್‌ ಕ್ಯಾಟ್’ ಎಂಬ ವಿರಳ ಜಾತಿಯ ಕಾಡುಬೆಕ್ಕಿನ ಚಿತ್ರಗಳು ಇದೇ ಮೊದಲ ಬಾರಿ ಸೆರೆಯಾಗಿವೆ.

  • ಇದರೊಂದಿಗೆ ಹಿಮಾಲಯದಲ್ಲಿ 4,200 ಮೀಟರ್ಗಿಂತ ಹೆಚ್ಚಿನ ಎತ್ತರದಲ್ಲಿ 6 ವಿವಿಧ ಜಾತಿಯ ಕಾಡಿನ ಬೆಕ್ಕುಗಳ ಇರುವಿಕೆಯು ಪತ್ತೆಯಾದಂತಾಗಿದೆ ಎಂದು ವಿಶ್ವ ವನ್ಯಜೀವಿ ಸಂಸ್ಥೆಯ ಭಾರತ ಘಟಕವು ತಿಳಿಸಿದೆ.
  • ಈವರೆಗೆ 5 ವಿಧದ ಕಾಡು ಬೆಕ್ಕಿನ ಚಿತ್ರಗಳನ್ನು ಸೆರೆಹಿಡಿಯಲಾಗಿದೆ. ಅವುಗಳೆಂದರೆ: ಸ್ನೋ ಲೆಪರ್ಡ್, ಕ್ಲೌಡೆಡ್ಲೆಪರ್ಡ್, ಲೆಪರ್ಡ್ ಕ್ಯಾಟ್‌, ಕಾಮನ್ಲೆಪರ್ಡ್ ಮತ್ತು ಮಾರ್ಬಲ್ಡ್ಕ್ಯಾಟ್ಗಳು.
  • ಭಾರತದ ವಿಶ್ವ ವನ್ಯಜೀವಿ ಸಂಸ್ಥೆಯು ಹಿಮಾಲಯದಲ್ಲಿನ ವನ್ಯಜೀವಿ ಪರಿಸರದ ಕುರಿತು ತವಾಂಗ್‌ ಹಾಗೂ ಪಶ್ಚಿಮ ಕಮೆಂಗ್‌ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸುತ್ತಿದೆ.
  • ಸಮುದ್ರ ಮಟ್ಟದಿಂದ 4,000 ಮೀಟರ್‌ಗಿಂತ ಹೆಚ್ಚಿನ ಎತ್ತರದಲ್ಲಿ ವನ್ಯಜೀವಿಗಳ ಇರುವಿಕೆಯು ದೇಶದ ಮಹತ್ವದ ದಾಖಲೆಯಾಗಿದ್ದು, ನೂತನ ಅಧ್ಯಯನಕ್ಕೆ ದಾರಿಯಾಗಿದೆ.
  • ರಾಜ್ಯ ಅರಣ್ಯ ಇಲಾಖೆಯ ಬೆಂಬಲ ಹಾಗೂ ಸ್ಥಳೀಯರ ಬೆಂಬಲದೊಂದಿಗೆ ಸಂಸ್ಥೆಯು‘ರಿವೈವಿಂಗ್‌ ಟ್ರಾನ್ಸ್‌–ಹಿಮಾಲಯನ್‌ ರೇಂಜ್‌ಲ್ಯಾಂಡ್ಸ್– ಎ ಕಮ್ಯುನಿಟಿ– ಲೆಡ್ ವಿಶನ್‌ ಫಾರ್‌ ಪೀಪಲ್‌ ಆ್ಯಂಡ್‌ ನೇಚರ್’ ಯೋಜನೆಯಡಿ ಸಮೀಕ್ಷೆ ನಡೆಸುತ್ತಿವೆ.
  • 2024ರ ಸೆಪ್ಟೆಂಬರ್‌ನಲ್ಲಿ ಹಿಮಾಲಯದ 2,000 ಚದರ ಅಡಿ ಕಿ.ಮೀ ಎತ್ತರದಲ್ಲಿ 83 ಕಡೆ 136 ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.
  • ಲಿಪುಲೇಖ್ವ್ಯಾಪಾರ ಒಪ್ಪಂದ ರದ್ದುಪಡಿಸಿ
  • ಲಿಪುಲೇಖ್‌ ಪಾಸ್‌ ಗಡಿಭಾಗದ ಮೂಲಕ ವ್ಯಾಪಾರವನ್ನು ಪುನರಾರಂಭಿಸಲು ಭಾರತ ಹಾಗೂ ಚೀನಾ ಇತ್ತೀಚೆಗೆ ಮಾಡಿಕೊಂಡಿರುವ ಒಪ್ಪಂದವನ್ನು ರದ್ದುಪಡಿಸಬೇಕು ಎಂದು ನೇಪಾಳದ ಆಡಳಿತಾರೂಢ ಪಕ್ಷವಾದ ಸಿಪಿಎನ್‌–ಯುಎಂಎಲ್‌ ಒತ್ತಾಯಿಸಿದೆ.
  • ಕೋಲಾರದಲ್ಲಿ .ವಿ ತಯಾರಿಕೆ

ಸಂದರ್ಭ: ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಜಪಾನಿನ ಹೋಂಡಾ ಕಂಪನಿಯು ಸುಮಾರು ₹600 ಕೋಟಿ ವೆಚ್ಚದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕವನ್ನು ಶೀಘ್ರದಲ್ಲಿಯೇ ಆರಂಭಿಸಲಿದೆ.

  • ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗ ಜಪಾನ್ ಪ್ರವಾಸದಲ್ಲಿದ್ದು, ಅಲ್ಲಿ ಹೋಂಡಾ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ನೋರಿಯಾ ಕೈಹರಾ ಅವರನ್ನು ಭೇಟಿ ಮಾಡಿ ಚರ್ಚಿಸಿತು.
  • ಈ ವೇಳೆ, ನೋರಿಯಾ ಅವರು ಈ ವಿಷಯ ತಿಳಿಸಿದರು. ಇದರಿಂದ ರಾಜ್ಯದಲ್ಲಿ ವಾಹನ ತಯಾರಿಕಾ ವಲಯದಲ್ಲಿ ಉದ್ಯೋಗ ಅವಕಾಶಗಳು ಹೆಚ್ಚಲಿವೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.
  • ಭಾರತದಲ್ಲಿನ ತನ್ನ ಮೊದಲ ವಿದ್ಯುತ್ಚಾಲಿತ ದ್ವಿಚಕ್ರ ವಾಹನ ತಯಾರಿಕಾ ಘಟಕವು ನರಸಾಪುರದಲ್ಲಿ ಕಾರ್ಯಾರಂಭ ಮಾಡಲಿದೆ. ಫೆಬ್ರುವರಿಯಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಈ ಒಪ್ಪಂದಕ್ಕೆ ಸದ್ಯದಲ್ಲೇ ಚಾಲನೆ ದೊರೆಯಲಿದೆ ಎಂದು ಕಂಪನಿಯು ನಿಯೋಗಕ್ಕೆ ಮಾಹಿತಿ ನೀಡಿದೆ.
  • ಸಚಿವರ ನೇತೃತ್ವದ ನಿಯೋಗವು, ಸೆಮಿಕಂಡಕ್ಟರ್‌, ಎಲೆಕ್ಟ್ರಾನಿಕ್ಸ್‌ ಮತ್ತು ಅತ್ಯಾಧುನಿಕ ತಯಾರಿಕಾ ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಲ್ಲಿಯ ಬಹುರಾಷ್ಟ್ರೀಯ ಪ್ರಮುಖ ಕಂಪನಿಗಳ ಜೊತೆಗೆ ಮಾತುಕತೆ ನಡೆಸಿತು.
  • ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳಿಂದ ಹೆಚ್ಚುವರಿ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ನಿಯೋಗವು ಜಪಾನ್‌ಗೆ ಭೇಟಿ ನೀಡಿದೆ. ಟೋಕಿಯೊ ಎಲೆಕ್ಟ್ರಾನ್‌, ಮಿತ್ಸುಬಿಸಿ ಎಲೆಕ್ಟ್ರಿಕ್‌, ಹೋಂಡಾ, ಯೋಕೊಗವಾ ಎಲೆಕ್ಟ್ರಿಕ್‌ ಮತ್ತು ರೆಸ್ಟರ್‌ ಹೋಲ್ಡಿಂಗ್ಸ್‌ ಕಂಪನಿಗಳ ಜೊತೆಗೆ ವಾಣಿಜ್ಯ ಬಾಂಧವ್ಯ ಬಲಪಡಿಸುವ ಮತ್ತು ಹೊಸ ಬಂಡವಾಳ ಹೂಡಿಕೆ ಸಾಧ್ಯತೆಗಳನ್ನು ಪ್ರಮುಖವಾಗಿ ಚರ್ಚಿಸಲಾಗಿದೆ.
  • ಮಿತ್ಸುಬಿಸಿ ಎಲೆಕ್ಟ್ರಿಕ್‌ ಜೊತೆಗಿನ ಭೇಟಿ ಸಂದರ್ಭದಲ್ಲಿ, ಕಂಪನಿಯು ಕರ್ನಾಟಕದಲ್ಲಿನ ತನ್ನ ತಯಾರಿಕಾ ಚಟುವಟಿಕೆಗಳ ಮಾಹಿತಿ ಹಂಚಿಕೊಂಡಿತು. ಕಂಪನಿಯ ಭವಿಷ್ಯದ ವಿಸ್ತರಣಾ ಯೋಜನೆಗಳಿಗೆ ಅಗತ್ಯ ನೆರವು ಕಲ್ಪಿಸಿಕೊಡುವುದಾಗಿ ಸಚಿವರು ಭರವಸೆ ನೀಡಿದರು.
  • ಕರ್ನಾಟಕದಲ್ಲಿನ ತನ್ನ ತಯಾರಿಕಾ ಸಾಮರ್ಥ್ಯವು ಶೀಘ್ರದಲ್ಲಿಯೇ ಪೂರ್ಣ ಪ್ರಮಾಣಕ್ಕೆ ತಲುಪಲಿದ್ದು, ವಿಸ್ತರಣಾ ಅವಕಾಶಗಳನ್ನು ಪರಿಶೀಲಿಸುತ್ತಿ ರುವುದಾಗಿ ಯೋಕೊಗವಾ ಎಲೆಕ್ಟ್ರಿಕ್‌ ತಿಳಿಸಿದೆ.
  • ನಿಯೋಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಆಯುಕ್ತೆ ಗುಂಜನ್ ಕೃಷ್ಣ ಇದ್ದಾರೆ.

ಇಎಂಎಸ್ಸೇವೆಗೆ ಮನವಿ

  • ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ಸ್‌ ತಯಾರಿಕಾ ಸೇವೆಗಳನ್ನು (ಇಎಂಎಸ್‌) ಆರಂಭಿಸಲು ಮುಂದಾಗಬೇಕು ಎಂದು ಜಪಾನಿನ ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ವಲಯದ ಪ್ರಮುಖ ಕಂಪನಿಯಾಗಿರುವ ರೆಸ್ಟರ್‌ ಹೋಲ್ಡಿಂಗ್ಸ್‌ಗೆ ಸಚಿವರು ಮನವಿ ಮಾಡಿದ್ದಾರೆ.
  • ಇಸ್ರೇಲ್ ಜೊತೆ ಹೂಡಿಕೆ ಒಪ್ಪಂದಕ್ಕೆ ಸಹಿ

ಸಂದರ್ಭ: ಭಾರತ ಮತ್ತು ಇಸ್ರೇಲ್‌ ನಡುವೆ ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ (ಬಿಐಟಿ) ಸಹಿ ಹಾಕಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಹೇಳಿದೆ. ಈ ಒಪ್ಪಂದವು ಎರಡೂ ದೇಶಗಳ ನಡುವೆ ಹೂಡಿಕೆಗಳಿಗೆ ಉತ್ತೇಜನ ನೀಡಲು ನೆರವಾಗಲಿದೆ ಎಂದು ಅದು ತಿಳಿಸಿದೆ.

  • ‘ಒಪ್ಪಂದಕ್ಕೆ ನವದೆಹಲಿಯಲ್ಲಿ ಸಹಿ ಮಾಡಲಾಗಿದೆ’ ಎಂದು ಹಣಕಾಸು ಸಚಿವಾಲಯವು ಎಕ್ಸ್‌ ಮೂಲಕ ತಿಳಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇಸ್ರೇಲ್‌ನ ಹಣಕಾಸು ಸಚಿವ ಬೆಜಲೆಲ್ ಸ್ಮೊಟ್ರಿಕ್ ಅವರು ಒಪ್ಪಂದಕ್ಕೆ ಸಹಿ ಮಾಡಿದ್ದಾರೆ.
  • ದಕ್ಷಿಣ ಪಿನಾಕಿನಿ: ನ್ಯಾಯಮಂಡಳಿಗೆ ತಮಿಳುನಾಡು ಪಟ್ಟು

ಸಂದರ್ಭ: ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸಬೇಕು ಎಂದು ತಮಿಳುನಾಡು ಸರ್ಕಾರ ಮತ್ತೆ ಪಟ್ಟು ಹಿಡಿದಿದೆ.

  • ವಿವಾದ ಬಗೆಹರಿಸಲು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರು ಕರೆದಿದ್ದ ಎರಡು ಸಭೆಗಳನ್ನು ತಮಿಳುನಾಡು ಬಹಿಷ್ಕರಿಸಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲೂ ತಮಿಳುನಾಡು ಇದೇ ನಿಲುವು ತಳೆಯಿತು.
  • ದಕ್ಷಿಣ ಪಿನಾಕಿನಿ ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ. ಬೆಂಗಳೂರಿನ ಎಲೆ ಮಲ್ಲಪ್ಪ ಚೆಟ್ಟಿ ಕೆರೆಯಿಂದ ಹೊಸಕೋಟೆಯವರೆಗೆ ನೀರು ಹರಿಸುವ ಕಾಮಗಾರಿ, ಬ್ಯಾಲಹಳ್ಳಿ ಗ್ರಾಮದ ಹತ್ತಿರ ಪಿನಾಕಿನಿ ನದಿಯಿಂದ ನೀರು ಹರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್ಗೆ 2018 ಮೇ 18ರಂದು ಅರ್ಜಿ ಸಲ್ಲಿಸಿತ್ತು. ಜಲವಿವಾದ ನ್ಯಾಯ ಮಂಡಳಿ ಸ್ಥಾಪಿಸುವಂತೆ ಒತ್ತಾಯಿಸಿ ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರಕ್ಕೆ 2019 ನವೆಂಬರ್ತಿಂಗಳಲ್ಲಿ ಮನವಿ ಮಾಡಿತ್ತು.
  • ಜಲಶಕ್ತಿ ಸಚಿವಾಲಯವು 2020ರಲ್ಲಿ ಸಂಧಾನ ಸಭೆ ನಡೆಸಿತ್ತು. ಆದರೆ, ರಾಜ್ಯ ಸರ್ಕಾರಗಳು ಒಮ್ಮತಕ್ಕೆ ಬಂದಿರಲಿಲ್ಲ. ಹೊಸದಾಗಿ ಸಂಧಾನ ನಡೆಸುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ 2024ರ ಜೂನ್‌ನಲ್ಲಿ ಒತ್ತಾಯಿಸಿತ್ತು. ಈ ನಡುವೆ, ಸುಪ್ರೀಂ ಕೋರ್ಟ್‌ ನಿರ್ದೇಶನದ ಪ್ರಕಾರ, ಕೇಂದ್ರ ಜಲ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ಜಲಶಕ್ತಿ ಸಚಿವಾಲಯವು ಹೊಸ ಸಂಧಾನ ಸಮಿತಿ ರಚಿಸಿತ್ತು. ಈ ಸಮಿತಿಯು ಉಭಯ ರಾಜ್ಯಗಳ ನಡುವೆ ಒಂಬತ್ತು ಸಭೆಗಳನ್ನು ನಡೆಸಿತ್ತು ಹಾಗೂ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.
  • ಆರ್ಥಿಕ ನೀತಿಗಳು ಪಾರದರ್ಶಕವಾಗಿರಲಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್

ಸಂದರ್ಭ: ಜಾಗತಿಕ ಆರ್ಥಿಕ ನೀತಿಗಳು ನ್ಯಾಯಯುತ, ಪಾರದರ್ಶಕ ಮತ್ತು ಎಲ್ಲರಿಗೂ ಪ್ರಯೋಜನವಾಗುವಂತೆ ಇರಬೇಕು ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಪ್ರತಿಪಾದಿಸಿದರು.

  • ‘ಬ್ರಿಕ್ಸ್‌’ ರಾಷ್ಟ್ರಗಳ ನಾಯಕರ ವರ್ಚುವಲ್‌ ಶೃಂಗಸಭೆಯಲ್ಲಿ ಮಾತನಾಡಿದ ಅವರು, ‘ವ್ಯಾಪಾರ ಮತ್ತು ಹೂಡಿಕೆಗಾಗಿ ಜಗತ್ತು ಇಂದು ಸ್ಥಿರ ವಾತಾವರಣವನ್ನು ಬಯಸುತ್ತಿದೆ’ ಎಂದರು.
  • ‘ಅಂತರರಾಷ್ಟ್ರೀಯ ವ್ಯಾಪಾರ ನೀತಿಯು ಮುಕ್ತ, ನಿಷ್ಪಕ್ಷಪಾತ, ಎಲ್ಲರನ್ನೂ ಒಳಗೊಳ್ಳುವ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ವಿಶೇಷ ಒತ್ತು ನೀಡುವ ತತ್ವಗಳನ್ನು ಆಧರಿಸಿರಬೇಕು’ ಎಂದು ಹೇಳಿದರು.
  • ಜೈಶಂಕರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿನಿಧಿಯಾಗಿ ಶೃಂಗಸಭೆಯಲ್ಲಿ ಪಾಲ್ಗೊಂಡರು. ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರೂ ಶೃಂಗದಲ್ಲಿ ಭಾಗವಹಿಸಿದ್ದಾರೆ.
  • ಅರ್ಜಿ ವರ್ಗಾವಣೆಗೆಸುಪ್ರೀಂಒಪ್ಪಿಗೆಆನ್ಲೈನ್ಗೇಮಿಂಗ್ನಿಷೇಧ: ಮನವಿ ಸಲ್ಲಿಸಿದ್ದ ಕೇಂದ್ರ ಸರ್ಕಾರ

ಸಂದರ್ಭ: ‘ಆನ್‌ಲೈನ್‌ ಗೇಮಿಂಗ್‌ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ’ ಪ್ರಶ್ನಿಸಿ ಮೂರು ಹೈಕೋರ್ಟ್‌ಗಳಿಗೆ ಸಲ್ಲಿಕೆ ಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್‌ ಪುರಸ್ಕರಿಸಿದೆ.

  • ದೆಹಲಿ, ಕರ್ನಾಟಕ ಮತ್ತು ಮಧ್ಯಪ್ರದೇಶ ಹೈಕೋರ್ಟ್‌ಗಳ ಮುಂದೆ ಬಾಕಿ ಇರುವ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಿತು.
  • ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾ ಗಿರುವ ಅರ್ಜಿಗಳು ಮತ್ತು ಇದುವರೆಗೆ ನಡೆದಿರುವ ವಿಚಾರಣೆಯ ಸಂಪೂರ್ಣ ದಾಖಲೆಗಳನ್ನು ಒಂದು ವಾರದೊಳಗೆ ವರ್ಗಾಯಿಸುವಂತೆ ಪೀಠವು ಸಂಬಂಧಪಟ್ಟ ಹೈಕೋರ್ಟ್‌ಗಳಿಗೆ ನಿರ್ದೇಶಿಸಿತು.
  • ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಮತ್ತು ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲರಾದ ಸಿ.ಎ.ಸುಂದರಂ ಹಾಗೂ ಅರವಿಂದ ದಾತಾರ್‌ ಅವರ ವಾದ ಅಲಿಸಿದ ಪೀಠ, ‘ಸಮಯವನ್ನು ಉಳಿಸಲಿಕ್ಕಾಗಿ ಈ ವರ್ಗಾವಣೆ ಪ್ರಕ್ರಿಯೆ ಡಿಜಿಟಲ್‌ ರೂಪದಲ್ಲಿ ನಡೆಯಲಿ’ ಎಂದು ಹೇಳಿತು.
  • ಹೈಕೋರ್ಟ್‌ಗಳಿಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮನವಿ ಮಾಡಿತ್ತು.
  • ಕಾನೂನಿನಲ್ಲಿರುವ ಅಂಶಗಳ ಕುರಿತು ಒಂದೇ ರೀತಿಯ ಪ್ರಶ್ನೆಗಳನ್ನು ಎತ್ತಿರುವ ಹಲವು ಅರ್ಜಿಗಳು ವಿವಿಧ ಹೈಕೋರ್ಟ್‌ಗಳ ಮುಂದೆ ಬಾಕಿಯಿರು ವುದರಿಂದ, ಅಭಿಪ್ರಾಯಗಳ ಭಿನ್ನತೆ ಅಥವಾ ಬಹುವಿಧದ ವಿಚಾರಣೆಗಳನ್ನು ತಪ್ಪಿಸಲು ಅದನ್ನು ಈ ನ್ಯಾಯಾಲಯ (ಸುಪ್ರೀಂ ಕೋರ್ಟ್‌) ಅಥವಾ ಯಾವುದಾದರೂ ಹೈಕೋರ್ಟ್‌ಗೆ ವರ್ಗಾಯಿಸುವುದು ಒಳ್ಳೆಯದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
  • ಆನ್‌ಲೈನ್ ಜೂಜು ನಿಷೇಧಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯನ್ನು ಪ್ರಶ್ನಿಸಿ ಹೆಡ್‌ ಡಿಜಿಟಲ್‌ ವರ್ಕ್ಸ್‌ ಪ್ರೈವೆಟ್‌ ಲಿಮಿಟೆಡ್‌, ಬಘೀರಾ ಕೇರಮ್ ಪ್ರೈವೆಟ್‌ ಲಿಮಿಟೆಡ್‌ ಮತ್ತು ಕ್ಲಬ್‌ಬೂಮ್‌ ಇಲೆವೆನ್ ಸ್ಪೋರ್ಟ್ಸ್‌ ಆ್ಯಂಡ್‌ ಎಂಟರ್‌ಟೇನ್‌ಮೆಂಟ್ ಪ್ರೈವೆಟ್‌ ಲಿಮಿಟೆಡ್‌ ಕಂಪನಿಗಳು ಕ್ರಮವಾಗಿ ಕರ್ನಾಟಕ ಹೈಕೋರ್ಟ್‌, ದೆಹಲಿ ಹೈಕೋರ್ಟ್‌ ಹಾಗೂ ಮಧ್ಯ ಪ್ರದೇಶ ಹೈಕೋರ್ಟ್‌ಗಳಿಗೆ ಅರ್ಜಿ ಸಲ್ಲಿಸಿವೆ.
  • ಅಲ್ಕರಾಜ್ಗೆ ಅಮೆರಿಕ ಓಪನ್ ಕಿರೀಟ

ಸಂದರ್ಭ: ಕಾರ್ಲೋಸ್‌ ಅಲ್ಕರಾಜ್ ಅವರು ನಾಲ್ಕು ಸೆಟ್‌ಗಳ ಫೈನಲ್‌ ಸೆಣಸಾಟದಲ್ಲಿ ಯಾನಿಕ್ ಸಿನ್ನರ್ ಅವರನ್ನು ಸೋಲಿಸಿ ಅಮೆರಿಕ ಓಪನ್ ಸಿಂಗಲ್ಸ್‌ ಪ್ರಶಸ್ತಿ ಗೆದ್ದುಕೊಂಡರು. ಬದ್ಧ ಎದುರಾಳಿಗಳ ಸೆಣಸಾಟದಲ್ಲಿ ಸ್ಪೇನ್‌ನ ಆಟಗಾರ ತಮ್ಮ ಪ್ರಭುತ್ವವನ್ನು ಮತ್ತೊಮ್ಮೆ ಸ್ಥಾಪಿಸಿದರು.

  • 22 ವರ್ಷ ವಯಸ್ಸಿನ ಅಲ್ಕರಾಜ್ ಫೈನಲ್ನಲ್ಲಿ 6–2, 3–6, 6–1, 6–4 ರಿಂದ ಗೆಲುವು ಸಾಧಿಸಿ ಎರಡನೇ ಸಲ ಅಮೆರಿಕ ಓಪನ್ ಪ್ರಶಸ್ತಿ ಗೆದ್ದುಕೊಂಡರು. ಒಟ್ಟಾರೆ ಅವರಿಗೆ ಇದು ಆರನೇ ಗ್ರ್ಯಾನ್ಸ್ಲಾಮ್ಪ್ರಶಸ್ತಿಯಾಗಿದೆ.
  • ಜುಲೈ ತಿಂಗಳಲ್ಲಿ ವಿಂಬಲ್ಡನ್ ಫೈನಲ್‌ನಲ್ಲಿ ಅಗ್ರ ಶ್ರೇಯಾಂಕದ ಆಟಗಾರನ ಕೈಲಿ ಅನುಭವಿಸಿದ ಸೋಲಿಗೆ ಅಲ್ಕರಾಜ್‌ ಇಲ್ಲಿ ಸೇಡು ತೀರಿಸಿಕೊಂಡರು. ಅದು ಪ್ರಮುಖ ಟೂರ್ನಿಗಳ ಫೈನಲ್‌ನಲ್ಲಿ ಅವರಿಗೆ ಮೊದಲ ಸೋಲಾಗಿತ್ತು.
  • ಅಗ್ರಪಟ್ಟ: ಇಲ್ಲಿ ಪಡೆದ ಪ್ರಶಸ್ತಿಯೊಂದಿಗೆ ಅಲ್ಕರಾಜ್ ಅವರು ಸೆಪ್ಟೆಂಬರ್‌ 2023ರ ನಂತರ ವಿಶ್ವ ಕ್ರಮಾಂಕಪಟ್ಟಿಯಲ್ಲಿ ಸಿನ್ನರ್ ಅವರನ್ನು ಹಿಂದೆಹಾಕಿ ಮರಳಿ ಅಗ್ರಸ್ಥಾನಕ್ಕೇರಿದರು. ಮಾತ್ರವಲ್ಲ, ಹಾರ್ಡ್ಕೋರ್ಟ್ನಲ್ಲಿ 25 ವರ್ಷದ ಸಿನ್ನರ್ ಅವರ ಸತತ 27 ಗೆಲುವುಗಳ ಸರಪಣಿಯನ್ನು ತುಂಡರಿಸಿದರು.
  • ಅಲ್ಕರಾಜ್ ಅವರು ಸಿನ್ನರ್ ಎದುರಿನ ಈ ಹಿಂದಿನ ಎಂಟು ಮುಖಾಮುಖಿಗಳಲ್ಲಿ ಏಳನ್ನು ಗೆದ್ದಂತಾಗಿದೆ. ಒಟ್ಟಾರೆ ಸಿನ್ನರ್ ವಿರುದ್ಧ ಅವರು 10–5 ಗೆಲುವಿನ ದಾಖಲೆ ಹೊಂದಿದ್ದಾರೆ.
  • ಕಳೆದ ಎಂಟು ಗ್ರ್ಯಾನ್‌ಸ್ಲಾಮ್‌ಗಳಲ್ಲಿ ಇವರಿಬ್ಬರು ತಲಾ ನಾಲ್ಕನ್ನು ಹಂಚಿಕೊಂಡಿದ್ದಾರೆ. ಆ ಮೂಲಕ ವಿಶ್ವ ಟೆನಿಸ್‌ನಲ್ಲಿ ಹಳೆಯ ಹುಲಿ ನೊವಾಕ್ ಜೊಕೊವಿಚ್‌ ಅವರನ್ನೂ ಸೇರಿದಂತೆ ಎಲ್ಲರ ಮೇಲೂ ಪ್ರಾಬಲ್ಯ ಮೆರೆದಿದ್ದಾರೆ.
  • ಫ್ಲಷಿಂಗ್ ಮಿಡೋಸ್‌ನಲ್ಲಿ ದಶಕಕ್ಕೂ ಹೆಚ್ಚು ಸಮಯದಿಂದ ಯಾರೂ ಪ್ರಶಸ್ತಿ ಉಳಿಸಿಕೊಂಡಿಲ್ಲ. ಕಳೆದ ಸಲದ ವಿಜೇತ ಸಿನ್ನರ್ ಸಹ ಆ ಸಾಲಿಗೆ ಸೇರಿದರು. ರೋಜರ್ ಫೆಡರರ್‌ ಅವರು 2004 ರಿಂದ 08ರವರೆಗೆ ಸತತ ಐದು ಸಲ ಪ್ರಶಸ್ತಿ ಗೆದ್ದಿದ್ದರು. ನಂತರ ಯಾರೂ ಇಲ್ಲಿ ಸತತವಾಗಿ ಚಾಂಪಿಯನ್ ಆಗಿಲ್ಲ.
  • ಜಾವೆಲಿನ್ಥ್ರೋ: ನೀರಜ್ದಾಖಲೆ ಮುರಿದ ಶಿವಂ

ಸಂದರ್ಭ: ಜಾವೆಲಿನ್ ಥ್ರೋಪಟು ಶಿವಂ ಲೋಹಕರೆ ಅವರು ಜಾಲಹಳ್ಳಿಯಲ್ಲಿ ನಡೆದ ಇಂಟರ್ ಸರ್ವೀಸಸ್ ಅಥ್ಲೆಟಿಕ್ಸ್ ಚಾಂಪಿಯನ್‌ ಷಿಪ್‌ನಲ್ಲಿ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರು.

  • ಆರ್ಮಿ ರೆಡ್‌ ತಂಡವನ್ನು ಪ್ರತಿನಿಧಿಸಿದ 20 ವರ್ಷದ ಶಿವಂ (ಮಹಾರಾಷ್ಟ್ರ) ಅವರು 84.31 ಮೀಟರ್‌ ದೂರ ಈಟಿಯನ್ನು ಎಸೆದರು. ಮೂಲಕ ನೀರಜ್ಚೋಪ್ರಾ (83.80 ಮೀ) ಹೆಸರಿನಲ್ಲಿದ್ದ ಕೂಟ ದಾಖಲೆಯನ್ನು ಅವರು ಮುರಿದರು. ಈ ಕೂಟವು ವಿಶ್ವ ಅಥ್ಲೆಟಿಕ್ಸ್‌ನಿಂದ ಮಾನ್ಯತೆ ಪಡೆಯದ ಕಾರಣ ವೈಯಕ್ತಿಕ ಶ್ರೇಷ್ಠ ದಾಖಲೆಗೆ ಪರಿಗಣಿಸುವುದಿಲ್ಲ.
  • ಕರ್ನಾಟಕದ ಮಣಿಕಂಠ ಹೋಬಳಿದಾರ್ ಅವರು ಆರ್ಮಿ ರೆಡ್ ತಂಡವನ್ನು ಪ್ರತಿನಿಧಿಸಿ 100 ಮೀ, 200 ಮೀ ಮತ್ತು 4×100 ಮೀ ರಿಲೆ ಸ್ಪರ್ಧೆಯಲ್ಲಿ ಚಿನ್ನದ ಪದಕಗಳನ್ನು ಗೆದ್ದರು.
  • ಫುಟ್ಬಾಲ್‌: ಭಾರತಕ್ಕೆ 3ನೇ ಸ್ಥಾನ    

ಸಂದರ್ಭ: ಹಿಸೋರ್ (ತಾಜಿಕಿಸ್ತಾನ), (ಪಿಟಿಐ): ಭಾರತ, ಸಿಎಎಫ್‌ಎ ನೇಷನ್ಸ್‌ ಕಪ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ತನಗಿಂತ ಮೇಲಿನ ಕ್ರಮಾಂಕದ ಒಮಾನ್ ತಂಡವನ್ನು ಪೆನಾಲ್ಟಿಯಲ್ಲಿ 3–2 ಗೋಲುಗಳಿಂದ ಸೋಲಿಸಿ ಪದಾರ್ಪಣೆ ಯಲ್ಲಿ ಮೂರನೇ ಸ್ಥಾನ ಗಳಿಸಿತು.

  • ಆಧಾರ್ ಪರಿಗಣನೆಗೆ ಸೂಚನೆ

ಸಂದರ್ಭ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮತದಾರರ

ಗುರುತಿನ ದಾಖಲೆಯಾಗಿ ಆಧಾರ್‌ ಸಂಖ್ಯೆಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

  • ಪ್ರಸ್ತುತ ಬಿಹಾರದಲ್ಲಿ ಎಸ್ಐಆರ್ಪ್ರಕ್ರಿಯೆಗೆ 11 ದಾಖಲೆಗಳನ್ನು ಗೊತ್ತುಪಡಿಸಲಾಗಿದೆ. ಮತದಾರರು ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಅರ್ಜಿ ನಮೂನೆ ಜೊತೆ ಸಲ್ಲಿಸಬೇಕಿದೆ.
  • ನ್ಯಾಯಮೂರ್ತಿ ಸೂರ್ಯ ಕಾಂತ್ಮತ್ತು ಜಾಯ್ಮಾಲ್ಯ ಬಾಗ್ಚಿ ಅವರನ್ನು ಒಳಗೊಂಡ ನ್ಯಾಯಪೀಠವು, 12ನೇ ದಾಖಲೆಯಾಗಿಆಧಾರ್‌’ ಅನ್ನು ಪರಿಗಣಿಸುವಂತೆ ಹೇಳಿದೆ.
  • ಆದಾಗ್ಯೂ, ಆಧಾರ್ಸಂಖ್ಯೆಯು ಪೌರತ್ವಕ್ಕೆ ಪುರಾವೆ ಅಲ್ಲ. ಅದನ್ನು ಗುರುತಿನ ದಾಖಲೆಯಾಗಿ ಪರಿಗಣಿಸಬಹುದಷ್ಟೆ ಎಂದು ನ್ಯಾಯಪೀಠ ಹೇಳಿದೆ.
  • ಮತದಾರ ಸಲ್ಲಿಸಿದ ಆಧಾರ್‌ ಕಾರ್ಡ್‌ ಅಸಲಿ ಹೌದೇ ಅಲ್ಲವೇ ಎನ್ನುವುದನ್ನು ಆಯೋಗವು ಪರಿಶೀಲಿಸಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
  • ‘ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕೆಂದು ಯಾರೂ ಬಯಸುತ್ತಿಲ್ಲ. ಆಯೋಗವು ನೈಜ ಮತದಾರರಿಗೆ ಮಾತ್ರ ಮತ ಚಲಾವಣೆಗೆ ಅವಕಾಶ ನೀಡಬೇಕು. ನಕಲಿ ದಾಖಲೆಗಳ ಆಧಾರದಲ್ಲಿ ನೈಜ ಪ್ರಜೆಗಳು ಎಂದು ಹೇಳಿಕೊಳ್ಳುತ್ತಿರುವವರನ್ನು ಮತದಾರರ ಪಟ್ಟಿಯಿಂದ ಹೊರಹಾಕಬೇಕು’ ಎಂದು ಕೋರ್ಟ್‌ ಸ್ಪಷ್ಟಪಡಿಸಿತು.
  • ಆಧಾರ್‌ ಅನ್ನು ಗುರುತಿನ ದಾಖಲೆಯಾಗಿ ಸ್ವೀಕರಿಸುವ ಸಂದರ್ಭದಲ್ಲಿ ಅಧಿಕಾರಿಗಳಿಗೆ ಅಗತ್ಯವಿರುವ ನಿರ್ದೇಶನಗಳನ್ನು ನೀಡುವಂತೆ ಆಯೋಗಕ್ಕೆ ನ್ಯಾಯಪೀಠ ಹೇಳಿತು.
  • ಇದೇ ವೇಳೆ, ಆಧಾರ್‌ ಕಾರ್ಡನ್ನು ಗುರುತಿನ ದಾಖಲೆಯಾಗಿ ಸ್ವೀಕರಿಸದ್ದಕ್ಕೆ ಸಂಬಂಧಿಸಿದಂತೆ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ವಿವರಣೆ ನೀಡುವಂತೆ ಕೇಳಿತು. ಆಯೋಗದ ಪರ ಹಾಜರಿದ್ದ ಹಿರಿಯ ವಕೀಲ ರಾಕೇಶ್‌ ದ್ವಿವೇದಿ ಅವರು, 99.6ರಷ್ಟು ಮತದಾರರ ಹೆಸರನ್ನು ಒಳಗೊಂಡ ಕರಡು ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
  • ಗ್ಯಾರಂಟಿಗಳಿಗೆ ₹97,813 ಕೋಟಿ ವೆಚ್ಚ

ಸಂದರ್ಭ: ಗ್ಯಾರಂಟಿ ಯೋಜನೆಯಡಿ ಈವರೆಗೆ ₹97,813 ಕೋಟಿ ಖರ್ಚು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

  • ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದರು.
  • ಈ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ₹50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನು ಭವಿಗಳಿಗೆ ₹18,139 ಕೋಟಿ, ಯುವನಿಧಿ ಯೋಜನೆಯಡಿ 2.55 ಲಕ್ಷ ಫಲಾನುಭವಿಗಳಿಗೆ ₹623 ಕೋಟಿ, ಶಕ್ತಿ ಯೋಜನೆಯಡಿ 544 ಕೋಟಿ ಬಾರಿ ಪ್ರಯಾಣಿಸಿದ್ದಕ್ಕೆ ₹13,903 ಕೋಟಿ ಮತ್ತು ಅನ್ನಭಾಗ್ಯ ಯೋಜನೆಯಡಿ 72.02 ಕೋಟಿ ಫಲಾನುಭವಿ ಗಳಿಗೆ ₹11,821.17 ಕೋಟಿ ವೆಚ್ಚ ಮಾಡಲಾಗಿದೆ ಎಂದು ಹೇಳಿದರು.
  • ಮರಣ ಹೊಂದುವ ಫಲಾನುಭವಿ ಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್‌ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಮಾಹಿತಿ ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು ಎಂದರು.
  • ಆದಾಯ ತೆರಿಗೆ ರಿಟರ್ನ್‌ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು. ಅನರ್ಹ ಬಿಪಿಎಲ್‌ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್‌ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್‌ ಮಟ್ಟದಲ್ಲಿ ನಡೆಸಬೇಕು. ಈ ಕುರಿತ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದರು. ಅನ್ನಭಾಗ್ಯ ಯೋಜನೆಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು  ಸಿದ್ದರಾಮಯ್ಯ ಹೇಳಿದರು.

ವಿಶ್ವದಾಖಲೆ ಸೃಷ್ಟಿಸಿದ ಶಕ್ತಿ ಯೋಜನೆ

  • ‘ರಾಜ್ಯದಲ್ಲಿ ‘ಶಕ್ತಿ’ ಯೋಜನೆಯಡಿ 500 ಕೋಟಿಗೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ. ಇದು ‘ಗೋಲ್ಡನ್‌ ಬುಕ್ ಆಫ್‌ ರೆಕಾರ್ಡ್ಸ್‌’ ನಲ್ಲಿ ದಾಖಲಾಗಿದೆ. ಇದಕ್ಕೆ ಪ್ರಮಾಣ ಪತ್ರ ಸಿಕ್ಕಿದೆ’ ಎಂದು ಸಭೆಯಲ್ಲಿ ಹೇಳಿದ  ಸಚಿವ ರಾಮಲಿಂಗಾರೆಡ್ಡಿ ಅವರು ಸಭೆಯಲ್ಲಿ ಪ್ರಮಾಣ ಪತ್ರ ಪ್ರದರ್ಶಿಸಿ ಹರ್ಷ ವ್ಯಕ್ತಪಡಿಸಿದರು.
  • ಮತಪತ್ರಕಡ್ಡಾಯ: 4 ಮಸೂದೆ ಸಿದ್ಧ

ಸಂದರ್ಭ: ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬದಲು, ರಹಸ್ಯ ಮತದಾನ ವ್ಯವಸ್ಥೆಗೆ ‘ಮತಪತ್ರ’ (ಬ್ಯಾಲಟ್ ಪೇಪರ್) ಬಳಕೆ ಕಡ್ಡಾಯಗೊಳಿಸಲು ಸಂಬಂಧಪಟ್ಟ ಕಾಯ್ದೆಗಳ ತಿದ್ದುಪಡಿಗೆ ನಾಲ್ಕು ಮಸೂದೆ ಗಳನ್ನು ರಾಜ್ಯ ಸರ್ಕಾರ ಸಿದ್ಧಪಡಿಸಿದೆ.

  • ಇದೇ 11ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಸೂದೆಗಳ ಕರಡನ್ನು ಮಂಡನೆ ಮಾಡಲಾಗುತ್ತಿದೆ. ಬಳಿಕ ಸುಗ್ರೀವಾಜ್ಞೆ ಹೊರಡಿಸಲು ಉದ್ದೇಶಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
  • ತನ್ನ ವ್ಯಾಪ್ತಿಯಲ್ಲಿರುವ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಕೆ ಹಾಗೂ ರಾಜ್ಯ ಚುನಾವಣಾ ಆಯೋಗದ ನೇತೃತ್ವ ದಲ್ಲಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿ ಸುವ ಮಹತ್ವದ ನಿರ್ಣಯವನ್ನು ಸೆ. 4ರಂದು ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿತ್ತು.

ಸರ್ಕಾರದ ಸಮರ್ಥನೆಗಳೇನು?:

  • ಮತಪತ್ರದ ಗೌಪ್ಯತೆಯು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ಮೂಲ ಆಧಾರವಾಗಿದ್ದು, ಪ್ರಜಾಸತ್ತಾತ್ಮಕ ಪ್ರಕ್ರಿ ಯೆಯ ಪಾವಿತ್ರ್ಯವನ್ನು ಕಾಪಾಡುವ ಮೂಲಕ ಮತದಾರರನ್ನು ಬಲವಂತ, ಬೆದರಿಕೆ ಮತ್ತು ಅನುಚಿತ ಪ್ರಭಾವದಿಂದ ರಕ್ಷಿಸುತ್ತದೆ ಎಂದು ಹಲವು ತೀರ್ಪುಗ ಳಲ್ಲಿ ಸುಪ್ರೀಂ ಕೋರ್ಟ್‌ ಹೇಳಿದೆ. ಕುಲದೀಪ್‌ ನಾಯರ್‌ ವಿರುದ್ಧದ ಕೇಂದ್ರ ಸರ್ಕಾರ (2006) ಪ್ರಕರಣದಲ್ಲಿ ‘ಮತದಾರರ ಸ್ವಾಯತ್ತತೆಯನ್ನು ಖಚಿತಪಡಿಸಿ ಕೊಳ್ಳಲು ಮತ್ತು ಬಾಹ್ಯ ಒತ್ತಡಗಳನ್ನು ತಡೆಯಲು ಸಾರ್ವತ್ರಿಕ ಚುನಾವಣೆಗಳಿಗೆ ರಹಸ್ಯ ಮತದಾನ ಅತ್ಯಗತ್ಯವಾಗಿದೆ’ ಎಂದೂ ಸ್ಪಷ್ಟಪಡಿ ಸಿದೆ. ಆ ಮೂಲಕ, ಮುಕ್ತ ಚುನಾವಣೆಗಳ ಸಾಂವಿಧಾನಿಕ ಆದೇಶ ಎತ್ತಿ ಹಿಡಿದಿದೆ.
  • ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರ ವಿಶ್ವಾಸದ ಮಹತ್ವವನ್ನು ಸುಪ್ರೀಂ ಕೋರ್ಟ್‌ ಒತ್ತಿ ಹೇಳಿದ್ದು, ಮತ ಪತ್ರದ ಗೌಪ್ಯತೆ ಕಾಪಾಡುವಾಗ ಪಾರ ದರ್ಶಕತೆ ಹೆಚ್ಚಿಸಲು ಇವಿಎಂಗಳಲ್ಲಿ ದಾಖಲಾಗುವ ಮತಗಳ ಪರಿಶೀಲನೆಗೆ ವೆರಿಫೈಯಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್ ) ಪರಿಚಯಿಸಿತ್ತು. ಅಲ್ಲದೆ, ಇವಿಎಂ ವ್ಯವಸ್ಥೆಯಲ್ಲಿನ ದೌರ್ಬಲ್ಯಗಳನ್ನು ಪರಿಹರಿಸಲು ನಿರಂತರ ಸುಧಾರಣೆಗಳ ಅಗತ್ಯವನ್ನೂ ಎತ್ತಿ ತೋರಿಸಿದೆ. ಆದರೆ, ಇವಿಎಂಗಳಲ್ಲಿನ ದೌರ್ಬಲ್ಯಗಳು ಮತ್ತು ಮತದಾರರ ಪಟ್ಟಿಗಳಲ್ಲಿನ ವ್ಯತ್ಯಾಸಗಳ ಮೂಲಕ ಚುನಾವಣಾ ಕುತಂತ್ರಗಳ ಸಾಧ್ಯತೆಯ ಕುರಿತು ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿರುವುದರಿಂದ, ಸಾರ್ವಜನಿಕ ನಂಬಿಕೆಯನ್ನು ಮರು ಸ್ಥಾಪಿ ಸಲು ಸದೃಢವಾದ ರಹಸ್ಯ ಮತಪತ್ರ ವ್ಯವಸ್ಥೆಗೆ ಮರಳುವ ಅಗತ್ಯ ಉಂಟಾಗಿದೆ ಎಂದು ರಾಜ್ಯ ಸರ್ಕಾರ ಸಮರ್ಥನೆ ನೀಡಿದೆ.
  • ಈ ಕಳವಳಗಳ ಕಾರಣಕ್ಕೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಗದ ಮತಪತ್ರ ವ್ಯವಸ್ಥೆಗೆ ಮರಳಲು ನಿರ್ಧರಿಸಲಾಗಿದೆ.  ಕಾಗದ ಮತಪತ್ರಗಳು ಅಥವಾ ಇತರ ಗೌಪ್ಯ ಕಾರ್ಯವಿಧಾನ ಗಳ ಬಳಕೆಯ ಮೂಲಕ ರಹಸ್ಯ ಮತ ದಾನ ವ್ಯವಸ್ಥೆಯು, ಮತದಾರರು ಪ್ರತೀ ಕಾರದ ಭಯ ಇಲ್ಲದೆ ತಮ್ಮ ಮತ ಚಲಾ ಯಿಸಬಹುದು ಎಂಬುದನ್ನು ಖಚಿತಪಡಿಸುತ್ತದೆ ಎಂದೂ ವಿವರಿಸಿದೆ.

ತಿದ್ದುಪಡಿ ಮಸೂದೆಗಳು ಯಾವುವು?

  • l ಗ್ರೇಟರ್‌ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ)
  • l ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ)
  • l ಕರ್ನಾಟಕ ನಗರ ಪಾಲಿಕೆಗಳು (ಎರಡನೇ ತಿದ್ದುಪಡಿ)
  • l ಕರ್ನಾಟಕ ಪುರಸಭೆಗಳು (ತಿದ್ದುಪಡಿ)

ವಿಧಾನ ಮಂಡಲಕ್ಕೆ ಅಧಿಕಾರವಿದೆ

  • ‘ಸ್ಥಳೀಯ ಪ್ರಾಧಿಕಾರಗಳಿಗೆ ಮುಕ್ತ, ನ್ಯಾಯಯುತ ಮತ್ತು ಪಾರದರ್ಶಕ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು, ಕಾಗದ ಮತಪತ್ರಗಳನ್ನು ಬಳಸಿಕೊಂಡು ರಹಸ್ಯ ಮತದಾನ ವ್ಯವಸ್ಥೆ ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲು ಸಂಬಂಧಿತ ಕಾಯ್ದೆಗಳಿಗೆ ತಿದ್ದುಪಡಿ ಮಾಡಬೇಕಿದೆ. ಆ ಮೂಲಕ, ರಾಜ್ಯ ಚುನಾವಣಾ ಆಯೋಗವು ಮತದಾರರ ಗೌಪ್ಯತೆ ಮತ್ತು ಚುನಾವಣಾ ಸಮಗ್ರತೆಯೊಂದಿಗೆ ಚುನಾವಣೆಗಳನ್ನು ನಡೆಸಲು ಅನುಕೂಲ ಕಲ್ಪಿಸಲು ಉದ್ದೇಶಿಸಲಾಗಿದೆ.
  • ಮಸೂದೆ ರೂಪಿಸಲು ರಾಜ್ಯ ವಿಧಾನ ಮಂಡಲಕ್ಕೆ ಅಧಿಕಾರವಿದೆ. ಮಸೂದೆಯಲ್ಲಿರುವ ಉಪಬಂಧಗಳು ಕೇಂದ್ರದ ಜಾರಿಯಲ್ಲಿರುವ ಯಾವುದೇ ಕಾಯ್ದೆಯ ಉಪಬಂಧಗಳಿಗೆ ವ್ಯತಿರಿಕ್ತ ಆಗುವುದಿಲ್ಲ. ಹೀಗಾಗಿ, ಮಸೂದೆಗಳನ್ನು ರಾಷ್ಟ್ರಪತಿಯ ಅಂಕಿತಕ್ಕೆ ಕಾಯ್ದಿರಿಸುವ ಅಗತ್ಯವೂ ಇಲ್ಲ’ ಎಂದು ಕಾನೂನು ಮತ್ತು ಸಂಸದೀಯ ಇಲಾಖೆ ಪ್ರತಿಪಾದಿಸಿದೆ.
  • ಹಿಮಾಲಯದಲ್ಲಿಪಲ್ಲಾಸ್ಕ್ಯಾಟ್‌’

ಸಂದರ್ಭ: ಅರುಣಾಚಲ ಪ್ರದೇಶದ ಹಿಮಾಚ್ಛಾದಿತ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ‘ಪಲ್ಲಾಸ್‌ ಕ್ಯಾಟ್’ ಎಂಬ ವಿರಳ ಜಾತಿಯ ಕಾಡುಬೆಕ್ಕಿನ ಚಿತ್ರಗಳು ಇದೇ ಮೊದಲ ಬಾರಿ ಸೆರೆಯಾಗಿವೆ.

  • ಇದರೊಂದಿಗೆ ಹಿಮಾಲಯದಲ್ಲಿ 4,200 ಮೀಟರ್ಗಿಂತ ಹೆಚ್ಚಿನ ಎತ್ತರದಲ್ಲಿ 6 ವಿವಿಧ ಜಾತಿಯ ಕಾಡಿನ ಬೆಕ್ಕುಗಳ ಇರುವಿಕೆಯು ಪತ್ತೆಯಾದಂತಾಗಿದೆ ಎಂದು ವಿಶ್ವ ವನ್ಯಜೀವಿ ಸಂಸ್ಥೆಯ ಭಾರತ ಘಟಕವು ತಿಳಿಸಿದೆ.
  • ಈವರೆಗೆ 5 ವಿಧದ ಕಾಡು ಬೆಕ್ಕಿನ ಚಿತ್ರಗಳನ್ನು ಸೆರೆಹಿಡಿಯಲಾಗಿದೆ. ಅವುಗಳೆಂದರೆ: ಸ್ನೋ ಲೆಪರ್ಡ್, ಕ್ಲೌಡೆಡ್ಲೆಪರ್ಡ್, ಲೆಪರ್ಡ್ ಕ್ಯಾಟ್‌, ಕಾಮನ್ಲೆಪರ್ಡ್ ಮತ್ತು ಮಾರ್ಬಲ್ಡ್ಕ್ಯಾಟ್ಗಳು.
  • ಭಾರತದ ವಿಶ್ವ ವನ್ಯಜೀವಿ ಸಂಸ್ಥೆಯು ಹಿಮಾಲಯದಲ್ಲಿನ ವನ್ಯಜೀವಿ ಪರಿಸರದ ಕುರಿತು ತವಾಂಗ್‌ ಹಾಗೂ ಪಶ್ಚಿಮ ಕಮೆಂಗ್‌ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸುತ್ತಿದೆ.
  • ಸಮುದ್ರ ಮಟ್ಟದಿಂದ 4,000 ಮೀಟರ್‌ಗಿಂತ ಹೆಚ್ಚಿನ ಎತ್ತರದಲ್ಲಿ ವನ್ಯಜೀವಿಗಳ ಇರುವಿಕೆಯು ದೇಶದ ಮಹತ್ವದ ದಾಖಲೆಯಾಗಿದ್ದು, ನೂತನ ಅಧ್ಯಯನಕ್ಕೆ ದಾರಿಯಾಗಿದೆ.
  • ರಾಜ್ಯ ಅರಣ್ಯ ಇಲಾಖೆಯ ಬೆಂಬಲ ಹಾಗೂ ಸ್ಥಳೀಯರ ಬೆಂಬಲದೊಂದಿಗೆ ಸಂಸ್ಥೆಯು‘ರಿವೈವಿಂಗ್‌ ಟ್ರಾನ್ಸ್‌–ಹಿಮಾಲಯನ್‌ ರೇಂಜ್‌ಲ್ಯಾಂಡ್ಸ್– ಎ ಕಮ್ಯುನಿಟಿ– ಲೆಡ್ ವಿಶನ್‌ ಫಾರ್‌ ಪೀಪಲ್‌ ಆ್ಯಂಡ್‌ ನೇಚರ್’ ಯೋಜನೆಯಡಿ ಸಮೀಕ್ಷೆ ನಡೆಸುತ್ತಿವೆ.
  • 2024ರ ಸೆಪ್ಟೆಂಬರ್‌ನಲ್ಲಿ ಹಿಮಾಲಯದ 2,000 ಚದರ ಅಡಿ ಕಿ.ಮೀ ಎತ್ತರದಲ್ಲಿ 83 ಕಡೆ 136 ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.
  • ಲಿಪುಲೇಖ್ವ್ಯಾಪಾರ ಒಪ್ಪಂದ ರದ್ದುಪಡಿಸಿ
  • ಲಿಪುಲೇಖ್‌ ಪಾಸ್‌ ಗಡಿಭಾಗದ ಮೂಲಕ ವ್ಯಾಪಾರವನ್ನು ಪುನರಾರಂಭಿಸಲು ಭಾರತ ಹಾಗೂ ಚೀನಾ ಇತ್ತೀಚೆಗೆ ಮಾಡಿಕೊಂಡಿರುವ ಒಪ್ಪಂದವನ್ನು ರದ್ದುಪಡಿಸಬೇಕು ಎಂದು ನೇಪಾಳದ ಆಡಳಿತಾರೂಢ ಪಕ್ಷವಾದ ಸಿಪಿಎನ್‌–ಯುಎಂಎಲ್‌ ಒತ್ತಾಯಿಸಿದೆ.
  • ಕೋಲಾರದಲ್ಲಿ .ವಿ ತಯಾರಿಕೆ

ಸಂದರ್ಭ: ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಜಪಾನಿನ ಹೋಂಡಾ ಕಂಪನಿಯು ಸುಮಾರು ₹600 ಕೋಟಿ ವೆಚ್ಚದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕವನ್ನು ಶೀಘ್ರದಲ್ಲಿಯೇ ಆರಂಭಿಸಲಿದೆ.

  • ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗ ಜಪಾನ್ ಪ್ರವಾಸದಲ್ಲಿದ್ದು, ಅಲ್ಲಿ ಹೋಂಡಾ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ನೋರಿಯಾ ಕೈಹರಾ ಅವರನ್ನು ಭೇಟಿ ಮಾಡಿ ಚರ್ಚಿಸಿತು.
  • ಈ ವೇಳೆ, ನೋರಿಯಾ ಅವರು ಈ ವಿಷಯ ತಿಳಿಸಿದರು. ಇದರಿಂದ ರಾಜ್ಯದಲ್ಲಿ ವಾಹನ ತಯಾರಿಕಾ ವಲಯದಲ್ಲಿ ಉದ್ಯೋಗ ಅವಕಾಶಗಳು ಹೆಚ್ಚಲಿವೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.
  • ಭಾರತದಲ್ಲಿನ ತನ್ನ ಮೊದಲ ವಿದ್ಯುತ್ಚಾಲಿತ ದ್ವಿಚಕ್ರ ವಾಹನ ತಯಾರಿಕಾ ಘಟಕವು ನರಸಾಪುರದಲ್ಲಿ ಕಾರ್ಯಾರಂಭ ಮಾಡಲಿದೆ. ಫೆಬ್ರುವರಿಯಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಈ ಒಪ್ಪಂದಕ್ಕೆ ಸದ್ಯದಲ್ಲೇ ಚಾಲನೆ ದೊರೆಯಲಿದೆ ಎಂದು ಕಂಪನಿಯು ನಿಯೋಗಕ್ಕೆ ಮಾಹಿತಿ ನೀಡಿದೆ.
  • ಸಚಿವರ ನೇತೃತ್ವದ ನಿಯೋಗವು, ಸೆಮಿಕಂಡಕ್ಟರ್‌, ಎಲೆಕ್ಟ್ರಾನಿಕ್ಸ್‌ ಮತ್ತು ಅತ್ಯಾಧುನಿಕ ತಯಾರಿಕಾ ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಲ್ಲಿಯ ಬಹುರಾಷ್ಟ್ರೀಯ ಪ್ರಮುಖ ಕಂಪನಿಗಳ ಜೊತೆಗೆ ಮಾತುಕತೆ ನಡೆಸಿತು.
  • ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳಿಂದ ಹೆಚ್ಚುವರಿ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ನಿಯೋಗವು ಜಪಾನ್‌ಗೆ ಭೇಟಿ ನೀಡಿದೆ. ಟೋಕಿಯೊ ಎಲೆಕ್ಟ್ರಾನ್‌, ಮಿತ್ಸುಬಿಸಿ ಎಲೆಕ್ಟ್ರಿಕ್‌, ಹೋಂಡಾ, ಯೋಕೊಗವಾ ಎಲೆಕ್ಟ್ರಿಕ್‌ ಮತ್ತು ರೆಸ್ಟರ್‌ ಹೋಲ್ಡಿಂಗ್ಸ್‌ ಕಂಪನಿಗಳ ಜೊತೆಗೆ ವಾಣಿಜ್ಯ ಬಾಂಧವ್ಯ ಬಲಪಡಿಸುವ ಮತ್ತು ಹೊಸ ಬಂಡವಾಳ ಹೂಡಿಕೆ ಸಾಧ್ಯತೆಗಳನ್ನು ಪ್ರಮುಖವಾಗಿ ಚರ್ಚಿಸಲಾಗಿದೆ.
  • ಮಿತ್ಸುಬಿಸಿ ಎಲೆಕ್ಟ್ರಿಕ್‌ ಜೊತೆಗಿನ ಭೇಟಿ ಸಂದರ್ಭದಲ್ಲಿ, ಕಂಪನಿಯು ಕರ್ನಾಟಕದಲ್ಲಿನ ತನ್ನ ತಯಾರಿಕಾ ಚಟುವಟಿಕೆಗಳ ಮಾಹಿತಿ ಹಂಚಿಕೊಂಡಿತು. ಕಂಪನಿಯ ಭವಿಷ್ಯದ ವಿಸ್ತರಣಾ ಯೋಜನೆಗಳಿಗೆ ಅಗತ್ಯ ನೆರವು ಕಲ್ಪಿಸಿಕೊಡುವುದಾಗಿ ಸಚಿವರು ಭರವಸೆ ನೀಡಿದರು.
  • ಕರ್ನಾಟಕದಲ್ಲಿನ ತನ್ನ ತಯಾರಿಕಾ ಸಾಮರ್ಥ್ಯವು ಶೀಘ್ರದಲ್ಲಿಯೇ ಪೂರ್ಣ ಪ್ರಮಾಣಕ್ಕೆ ತಲುಪಲಿದ್ದು, ವಿಸ್ತರಣಾ ಅವಕಾಶಗಳನ್ನು ಪರಿಶೀಲಿಸುತ್ತಿ ರುವುದಾಗಿ ಯೋಕೊಗವಾ ಎಲೆಕ್ಟ್ರಿಕ್‌ ತಿಳಿಸಿದೆ.
  • ನಿಯೋಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಆಯುಕ್ತೆ ಗುಂಜನ್ ಕೃಷ್ಣ ಇದ್ದಾರೆ.

ಇಎಂಎಸ್ಸೇವೆಗೆ ಮನವಿ

  • ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ಸ್‌ ತಯಾರಿಕಾ ಸೇವೆಗಳನ್ನು (ಇಎಂಎಸ್‌) ಆರಂಭಿಸಲು ಮುಂದಾಗಬೇಕು ಎಂದು ಜಪಾನಿನ ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ವಲಯದ ಪ್ರಮುಖ ಕಂಪನಿಯಾಗಿರುವ ರೆಸ್ಟರ್‌ ಹೋಲ್ಡಿಂಗ್ಸ್‌ಗೆ ಸಚಿವರು ಮನವಿ ಮಾಡಿದ್ದಾರೆ.
  • ಇಸ್ರೇಲ್ ಜೊತೆ ಹೂಡಿಕೆ ಒಪ್ಪಂದಕ್ಕೆ ಸಹಿ

ಸಂದರ್ಭ: ಭಾರತ ಮತ್ತು ಇಸ್ರೇಲ್‌ ನಡುವೆ ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ (ಬಿಐಟಿ) ಸಹಿ ಹಾಕಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಹೇಳಿದೆ. ಈ ಒಪ್ಪಂದವು ಎರಡೂ ದೇಶಗಳ ನಡುವೆ ಹೂಡಿಕೆಗಳಿಗೆ ಉತ್ತೇಜನ ನೀಡಲು ನೆರವಾಗಲಿದೆ ಎಂದು ಅದು ತಿಳಿಸಿದೆ.

  • ‘ಒಪ್ಪಂದಕ್ಕೆ ನವದೆಹಲಿಯಲ್ಲಿ ಸಹಿ ಮಾಡಲಾಗಿದೆ’ ಎಂದು ಹಣಕಾಸು ಸಚಿವಾಲಯವು ಎಕ್ಸ್‌ ಮೂಲಕ ತಿಳಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇಸ್ರೇಲ್‌ನ ಹಣಕಾಸು ಸಚಿವ ಬೆಜಲೆಲ್ ಸ್ಮೊಟ್ರಿಕ್ ಅವರು ಒಪ್ಪಂದಕ್ಕೆ ಸಹಿ ಮಾಡಿದ್ದಾರೆ.
  • ದಕ್ಷಿಣ ಪಿನಾಕಿನಿ: ನ್ಯಾಯಮಂಡಳಿಗೆ ತಮಿಳುನಾಡು ಪಟ್ಟು

ಸಂದರ್ಭ: ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸಬೇಕು ಎಂದು ತಮಿಳುನಾಡು ಸರ್ಕಾರ ಮತ್ತೆ ಪಟ್ಟು ಹಿಡಿದಿದೆ.

  • ವಿವಾದ ಬಗೆಹರಿಸಲು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರು ಕರೆದಿದ್ದ ಎರಡು ಸಭೆಗಳನ್ನು ತಮಿಳುನಾಡು ಬಹಿಷ್ಕರಿಸಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲೂ ತಮಿಳುನಾಡು ಇದೇ ನಿಲುವು ತಳೆಯಿತು.
  • ದಕ್ಷಿಣ ಪಿನಾಕಿನಿ ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ. ಬೆಂಗಳೂರಿನ ಎಲೆ ಮಲ್ಲಪ್ಪ ಚೆಟ್ಟಿ ಕೆರೆಯಿಂದ ಹೊಸಕೋಟೆಯವರೆಗೆ ನೀರು ಹರಿಸುವ ಕಾಮಗಾರಿ, ಬ್ಯಾಲಹಳ್ಳಿ ಗ್ರಾಮದ ಹತ್ತಿರ ಪಿನಾಕಿನಿ ನದಿಯಿಂದ ನೀರು ಹರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್ಗೆ 2018 ಮೇ 18ರಂದು ಅರ್ಜಿ ಸಲ್ಲಿಸಿತ್ತು. ಜಲವಿವಾದ ನ್ಯಾಯ ಮಂಡಳಿ ಸ್ಥಾಪಿಸುವಂತೆ ಒತ್ತಾಯಿಸಿ ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರಕ್ಕೆ 2019 ನವೆಂಬರ್ತಿಂಗಳಲ್ಲಿ ಮನವಿ ಮಾಡಿತ್ತು.
  • ಜಲಶಕ್ತಿ ಸಚಿವಾಲಯವು 2020ರಲ್ಲಿ ಸಂಧಾನ ಸಭೆ ನಡೆಸಿತ್ತು. ಆದರೆ, ರಾಜ್ಯ ಸರ್ಕಾರಗಳು ಒಮ್ಮತಕ್ಕೆ ಬಂದಿರಲಿಲ್ಲ. ಹೊಸದಾಗಿ ಸಂಧಾನ ನಡೆಸುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ 2024ರ ಜೂನ್‌ನಲ್ಲಿ ಒತ್ತಾಯಿಸಿತ್ತು. ಈ ನಡುವೆ, ಸುಪ್ರೀಂ ಕೋರ್ಟ್‌ ನಿರ್ದೇಶನದ ಪ್ರಕಾರ, ಕೇಂದ್ರ ಜಲ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ಜಲಶಕ್ತಿ ಸಚಿವಾಲಯವು ಹೊಸ ಸಂಧಾನ ಸಮಿತಿ ರಚಿಸಿತ್ತು. ಈ ಸಮಿತಿಯು ಉಭಯ ರಾಜ್ಯಗಳ ನಡುವೆ ಒಂಬತ್ತು ಸಭೆಗಳನ್ನು ನಡೆಸಿತ್ತು ಹಾಗೂ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.
  • ಆರ್ಥಿಕ ನೀತಿಗಳು ಪಾರದರ್ಶಕವಾಗಿರಲಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್

ಸಂದರ್ಭ: ಜಾಗತಿಕ ಆರ್ಥಿಕ ನೀತಿಗಳು ನ್ಯಾಯಯುತ, ಪಾರದರ್ಶಕ ಮತ್ತು ಎಲ್ಲರಿಗೂ ಪ್ರಯೋಜನವಾಗುವಂತೆ ಇರಬೇಕು ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಪ್ರತಿಪಾದಿಸಿದರು.

  • ‘ಬ್ರಿಕ್ಸ್‌’ ರಾಷ್ಟ್ರಗಳ ನಾಯಕರ ವರ್ಚುವಲ್‌ ಶೃಂಗಸಭೆಯಲ್ಲಿ ಮಾತನಾಡಿದ ಅವರು, ‘ವ್ಯಾಪಾರ ಮತ್ತು ಹೂಡಿಕೆಗಾಗಿ ಜಗತ್ತು ಇಂದು ಸ್ಥಿರ ವಾತಾವರಣವನ್ನು ಬಯಸುತ್ತಿದೆ’ ಎಂದರು.
  • ‘ಅಂತರರಾಷ್ಟ್ರೀಯ ವ್ಯಾಪಾರ ನೀತಿಯು ಮುಕ್ತ, ನಿಷ್ಪಕ್ಷಪಾತ, ಎಲ್ಲರನ್ನೂ ಒಳಗೊಳ್ಳುವ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ವಿಶೇಷ ಒತ್ತು ನೀಡುವ ತತ್ವಗಳನ್ನು ಆಧರಿಸಿರಬೇಕು’ ಎಂದು ಹೇಳಿದರು.
  • ಜೈಶಂಕರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿನಿಧಿಯಾಗಿ ಶೃಂಗಸಭೆಯಲ್ಲಿ ಪಾಲ್ಗೊಂಡರು. ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರೂ ಶೃಂಗದಲ್ಲಿ ಭಾಗವಹಿಸಿದ್ದಾರೆ.
  • ಅರ್ಜಿ ವರ್ಗಾವಣೆಗೆಸುಪ್ರೀಂಒಪ್ಪಿಗೆಆನ್ಲೈನ್ಗೇಮಿಂಗ್ನಿಷೇಧ: ಮನವಿ ಸಲ್ಲಿಸಿದ್ದ ಕೇಂದ್ರ ಸರ್ಕಾರ

ಸಂದರ್ಭ: ‘ಆನ್‌ಲೈನ್‌ ಗೇಮಿಂಗ್‌ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ’ ಪ್ರಶ್ನಿಸಿ ಮೂರು ಹೈಕೋರ್ಟ್‌ಗಳಿಗೆ ಸಲ್ಲಿಕೆ ಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್‌ ಪುರಸ್ಕರಿಸಿದೆ.

  • ದೆಹಲಿ, ಕರ್ನಾಟಕ ಮತ್ತು ಮಧ್ಯಪ್ರದೇಶ ಹೈಕೋರ್ಟ್‌ಗಳ ಮುಂದೆ ಬಾಕಿ ಇರುವ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಿತು.
  • ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾ ಗಿರುವ ಅರ್ಜಿಗಳು ಮತ್ತು ಇದುವರೆಗೆ ನಡೆದಿರುವ ವಿಚಾರಣೆಯ ಸಂಪೂರ್ಣ ದಾಖಲೆಗಳನ್ನು ಒಂದು ವಾರದೊಳಗೆ ವರ್ಗಾಯಿಸುವಂತೆ ಪೀಠವು ಸಂಬಂಧಪಟ್ಟ ಹೈಕೋರ್ಟ್‌ಗಳಿಗೆ ನಿರ್ದೇಶಿಸಿತು.
  • ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಮತ್ತು ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲರಾದ ಸಿ.ಎ.ಸುಂದರಂ ಹಾಗೂ ಅರವಿಂದ ದಾತಾರ್‌ ಅವರ ವಾದ ಅಲಿಸಿದ ಪೀಠ, ‘ಸಮಯವನ್ನು ಉಳಿಸಲಿಕ್ಕಾಗಿ ಈ ವರ್ಗಾವಣೆ ಪ್ರಕ್ರಿಯೆ ಡಿಜಿಟಲ್‌ ರೂಪದಲ್ಲಿ ನಡೆಯಲಿ’ ಎಂದು ಹೇಳಿತು.
  • ಹೈಕೋರ್ಟ್‌ಗಳಿಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮನವಿ ಮಾಡಿತ್ತು.
  • ಕಾನೂನಿನಲ್ಲಿರುವ ಅಂಶಗಳ ಕುರಿತು ಒಂದೇ ರೀತಿಯ ಪ್ರಶ್ನೆಗಳನ್ನು ಎತ್ತಿರುವ ಹಲವು ಅರ್ಜಿಗಳು ವಿವಿಧ ಹೈಕೋರ್ಟ್‌ಗಳ ಮುಂದೆ ಬಾಕಿಯಿರು ವುದರಿಂದ, ಅಭಿಪ್ರಾಯಗಳ ಭಿನ್ನತೆ ಅಥವಾ ಬಹುವಿಧದ ವಿಚಾರಣೆಗಳನ್ನು ತಪ್ಪಿಸಲು ಅದನ್ನು ಈ ನ್ಯಾಯಾಲಯ (ಸುಪ್ರೀಂ ಕೋರ್ಟ್‌) ಅಥವಾ ಯಾವುದಾದರೂ ಹೈಕೋರ್ಟ್‌ಗೆ ವರ್ಗಾಯಿಸುವುದು ಒಳ್ಳೆಯದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
  • ಆನ್‌ಲೈನ್ ಜೂಜು ನಿಷೇಧಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯನ್ನು ಪ್ರಶ್ನಿಸಿ ಹೆಡ್‌ ಡಿಜಿಟಲ್‌ ವರ್ಕ್ಸ್‌ ಪ್ರೈವೆಟ್‌ ಲಿಮಿಟೆಡ್‌, ಬಘೀರಾ ಕೇರಮ್ ಪ್ರೈವೆಟ್‌ ಲಿಮಿಟೆಡ್‌ ಮತ್ತು ಕ್ಲಬ್‌ಬೂಮ್‌ ಇಲೆವೆನ್ ಸ್ಪೋರ್ಟ್ಸ್‌ ಆ್ಯಂಡ್‌ ಎಂಟರ್‌ಟೇನ್‌ಮೆಂಟ್ ಪ್ರೈವೆಟ್‌ ಲಿಮಿಟೆಡ್‌ ಕಂಪನಿಗಳು ಕ್ರಮವಾಗಿ ಕರ್ನಾಟಕ ಹೈಕೋರ್ಟ್‌, ದೆಹಲಿ ಹೈಕೋರ್ಟ್‌ ಹಾಗೂ ಮಧ್ಯ ಪ್ರದೇಶ ಹೈಕೋರ್ಟ್‌ಗಳಿಗೆ ಅರ್ಜಿ ಸಲ್ಲಿಸಿವೆ.
  • ಅಲ್ಕರಾಜ್ಗೆ ಅಮೆರಿಕ ಓಪನ್ ಕಿರೀಟ

ಸಂದರ್ಭ: ಕಾರ್ಲೋಸ್‌ ಅಲ್ಕರಾಜ್ ಅವರು ನಾಲ್ಕು ಸೆಟ್‌ಗಳ ಫೈನಲ್‌ ಸೆಣಸಾಟದಲ್ಲಿ ಯಾನಿಕ್ ಸಿನ್ನರ್ ಅವರನ್ನು ಸೋಲಿಸಿ ಅಮೆರಿಕ ಓಪನ್ ಸಿಂಗಲ್ಸ್‌ ಪ್ರಶಸ್ತಿ ಗೆದ್ದುಕೊಂಡರು. ಬದ್ಧ ಎದುರಾಳಿಗಳ ಸೆಣಸಾಟದಲ್ಲಿ ಸ್ಪೇನ್‌ನ ಆಟಗಾರ ತಮ್ಮ ಪ್ರಭುತ್ವವನ್ನು ಮತ್ತೊಮ್ಮೆ ಸ್ಥಾಪಿಸಿದರು.

  • 22 ವರ್ಷ ವಯಸ್ಸಿನ ಅಲ್ಕರಾಜ್ ಫೈನಲ್ನಲ್ಲಿ 6–2, 3–6, 6–1, 6–4 ರಿಂದ ಗೆಲುವು ಸಾಧಿಸಿ ಎರಡನೇ ಸಲ ಅಮೆರಿಕ ಓಪನ್ ಪ್ರಶಸ್ತಿ ಗೆದ್ದುಕೊಂಡರು. ಒಟ್ಟಾರೆ ಅವರಿಗೆ ಇದು ಆರನೇ ಗ್ರ್ಯಾನ್ಸ್ಲಾಮ್ಪ್ರಶಸ್ತಿಯಾಗಿದೆ.
  • ಜುಲೈ ತಿಂಗಳಲ್ಲಿ ವಿಂಬಲ್ಡನ್ ಫೈನಲ್‌ನಲ್ಲಿ ಅಗ್ರ ಶ್ರೇಯಾಂಕದ ಆಟಗಾರನ ಕೈಲಿ ಅನುಭವಿಸಿದ ಸೋಲಿಗೆ ಅಲ್ಕರಾಜ್‌ ಇಲ್ಲಿ ಸೇಡು ತೀರಿಸಿಕೊಂಡರು. ಅದು ಪ್ರಮುಖ ಟೂರ್ನಿಗಳ ಫೈನಲ್‌ನಲ್ಲಿ ಅವರಿಗೆ ಮೊದಲ ಸೋಲಾಗಿತ್ತು.
  • ಅಗ್ರಪಟ್ಟ: ಇಲ್ಲಿ ಪಡೆದ ಪ್ರಶಸ್ತಿಯೊಂದಿಗೆ ಅಲ್ಕರಾಜ್ ಅವರು ಸೆಪ್ಟೆಂಬರ್‌ 2023ರ ನಂತರ ವಿಶ್ವ ಕ್ರಮಾಂಕಪಟ್ಟಿಯಲ್ಲಿ ಸಿನ್ನರ್ ಅವರನ್ನು ಹಿಂದೆಹಾಕಿ ಮರಳಿ ಅಗ್ರಸ್ಥಾನಕ್ಕೇರಿದರು. ಮಾತ್ರವಲ್ಲ, ಹಾರ್ಡ್ಕೋರ್ಟ್ನಲ್ಲಿ 25 ವರ್ಷದ ಸಿನ್ನರ್ ಅವರ ಸತತ 27 ಗೆಲುವುಗಳ ಸರಪಣಿಯನ್ನು ತುಂಡರಿಸಿದರು.
  • ಅಲ್ಕರಾಜ್ ಅವರು ಸಿನ್ನರ್ ಎದುರಿನ ಈ ಹಿಂದಿನ ಎಂಟು ಮುಖಾಮುಖಿಗಳಲ್ಲಿ ಏಳನ್ನು ಗೆದ್ದಂತಾಗಿದೆ. ಒಟ್ಟಾರೆ ಸಿನ್ನರ್ ವಿರುದ್ಧ ಅವರು 10–5 ಗೆಲುವಿನ ದಾಖಲೆ ಹೊಂದಿದ್ದಾರೆ.
  • ಕಳೆದ ಎಂಟು ಗ್ರ್ಯಾನ್‌ಸ್ಲಾಮ್‌ಗಳಲ್ಲಿ ಇವರಿಬ್ಬರು ತಲಾ ನಾಲ್ಕನ್ನು ಹಂಚಿಕೊಂಡಿದ್ದಾರೆ. ಆ ಮೂಲಕ ವಿಶ್ವ ಟೆನಿಸ್‌ನಲ್ಲಿ ಹಳೆಯ ಹುಲಿ ನೊವಾಕ್ ಜೊಕೊವಿಚ್‌ ಅವರನ್ನೂ ಸೇರಿದಂತೆ ಎಲ್ಲರ ಮೇಲೂ ಪ್ರಾಬಲ್ಯ ಮೆರೆದಿದ್ದಾರೆ.
  • ಫ್ಲಷಿಂಗ್ ಮಿಡೋಸ್‌ನಲ್ಲಿ ದಶಕಕ್ಕೂ ಹೆಚ್ಚು ಸಮಯದಿಂದ ಯಾರೂ ಪ್ರಶಸ್ತಿ ಉಳಿಸಿಕೊಂಡಿಲ್ಲ. ಕಳೆದ ಸಲದ ವಿಜೇತ ಸಿನ್ನರ್ ಸಹ ಆ ಸಾಲಿಗೆ ಸೇರಿದರು. ರೋಜರ್ ಫೆಡರರ್‌ ಅವರು 2004 ರಿಂದ 08ರವರೆಗೆ ಸತತ ಐದು ಸಲ ಪ್ರಶಸ್ತಿ ಗೆದ್ದಿದ್ದರು. ನಂತರ ಯಾರೂ ಇಲ್ಲಿ ಸತತವಾಗಿ ಚಾಂಪಿಯನ್ ಆಗಿಲ್ಲ.
  • ಜಾವೆಲಿನ್ಥ್ರೋ: ನೀರಜ್ದಾಖಲೆ ಮುರಿದ ಶಿವಂ

ಸಂದರ್ಭ: ಜಾವೆಲಿನ್ ಥ್ರೋಪಟು ಶಿವಂ ಲೋಹಕರೆ ಅವರು ಜಾಲಹಳ್ಳಿಯಲ್ಲಿ ನಡೆದ ಇಂಟರ್ ಸರ್ವೀಸಸ್ ಅಥ್ಲೆಟಿಕ್ಸ್ ಚಾಂಪಿಯನ್‌ ಷಿಪ್‌ನಲ್ಲಿ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರು.

  • ಆರ್ಮಿ ರೆಡ್‌ ತಂಡವನ್ನು ಪ್ರತಿನಿಧಿಸಿದ 20 ವರ್ಷದ ಶಿವಂ (ಮಹಾರಾಷ್ಟ್ರ) ಅವರು 84.31 ಮೀಟರ್‌ ದೂರ ಈಟಿಯನ್ನು ಎಸೆದರು. ಮೂಲಕ ನೀರಜ್ಚೋಪ್ರಾ (83.80 ಮೀ) ಹೆಸರಿನಲ್ಲಿದ್ದ ಕೂಟ ದಾಖಲೆಯನ್ನು ಅವರು ಮುರಿದರು. ಈ ಕೂಟವು ವಿಶ್ವ ಅಥ್ಲೆಟಿಕ್ಸ್‌ನಿಂದ ಮಾನ್ಯತೆ ಪಡೆಯದ ಕಾರಣ ವೈಯಕ್ತಿಕ ಶ್ರೇಷ್ಠ ದಾಖಲೆಗೆ ಪರಿಗಣಿಸುವುದಿಲ್ಲ.
  • ಕರ್ನಾಟಕದ ಮಣಿಕಂಠ ಹೋಬಳಿದಾರ್ ಅವರು ಆರ್ಮಿ ರೆಡ್ ತಂಡವನ್ನು ಪ್ರತಿನಿಧಿಸಿ 100 ಮೀ, 200 ಮೀ ಮತ್ತು 4×100 ಮೀ ರಿಲೆ ಸ್ಪರ್ಧೆಯಲ್ಲಿ ಚಿನ್ನದ ಪದಕಗಳನ್ನು ಗೆದ್ದರು.
  • ಫುಟ್ಬಾಲ್‌: ಭಾರತಕ್ಕೆ 3ನೇ ಸ್ಥಾನ    

ಸಂದರ್ಭ: ಹಿಸೋರ್ (ತಾಜಿಕಿಸ್ತಾನ), (ಪಿಟಿಐ): ಭಾರತ, ಸಿಎಎಫ್‌ಎ ನೇಷನ್ಸ್‌ ಕಪ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ತನಗಿಂತ ಮೇಲಿನ ಕ್ರಮಾಂಕದ ಒಮಾನ್ ತಂಡವನ್ನು ಪೆನಾಲ್ಟಿಯಲ್ಲಿ 3–2 ಗೋಲುಗಳಿಂದ ಸೋಲಿಸಿ ಪದಾರ್ಪಣೆ ಯಲ್ಲಿ ಮೂರನೇ ಸ್ಥಾನ ಗಳಿಸಿತು.

  • ಭಾರತಕ್ಕೆ, ಪಶ್ಚಿಮ ಏಷ್ಯಾದ ರಾಷ್ಟ್ರ ಒಮಾನ್ ವಿರುದ್ಧ ಇದು ಮೊದಲ ಗೆಲುವು.  ಹಿಸೋರ್ ಸೆಂಟ್ರಲ್ ಸ್ಟೇಡಿಯಂನಲ್ಲಿ ನಿಗದಿ ಅವಧಿಯ ಆಟ 1–1 ಸಮಬಲಗೊಂಡಿತ್ತು. ಒಮಾನ್ ಪರ ಜಮೀಲ್‌ ಅಲ್‌ ಯಹ್ಮದಿ 55ನೇ ನಿಮಿಷ ಗೋಲು ಗಳಿಸಿದರು. ಆದರೆ ಉದಾಂತ ಸಿಂಗ್ ಕುಮಮ್80ನೇ ನಿಮಿಷ ಗೋಲು ಗಳಿಸಿದ್ದರಿಂದ ಸ್ಕೋರ್ ಸಮನಾಯಿತು.
  • ಪೆನಾಲ್ಟಿಯಲ್ಲಿ ಲಾಲಿಯನ್‌ ಝುವಾಲ ಚಾಂಗ್ಟೆ, ರಾಹುಲ್‌ ಭೆಕೆ ಮತ್ತು ಜಿತಿನ್ ಎಂ.ಎಸ್‌. ತಮ್ಮ ಯತ್ನಗಳಲ್ಲಿ ಯಶಸ್ಸು ಕಂಡರು.

ಪ್ರಚಲಿತ ವಿದ್ಯಮಾನಗಳು: 8ನೇ ಸೆಪ್ಟೆಂಬರ್ 2025

ಭಾರತಕ್ಕೆ ಏಷ್ಯಾ ಕಪ್ ಗರಿ ವಿಶ್ವಕಪ್ ಟೂರ್ನಿಗೆ ರಹದಾರಿ

ಸಂದರ್ಭ: ರಾಜಗೀರ್, ಬಿಹಾರ (ಪಿಟಿಐ): ಭಾರತ ಪುರುಷರ ಹಾಕಿ ತಂಡವು ಭಾನುವಾರ ಇಲ್ಲಿ ನಡೆದ ಏಷ್ಯಾ ಕಪ್ ಟೂರ್ನಿಯ ಫೈನಲ್‌ನಲ್ಲಿ ದಕ್ಷಿಣ ಕೊರಿಯಾ ಎದುರು ಜಯಿಸಿತು. ಇದರೊಂದಿಗೆ ಮುಂದಿನ ವರ್ಷ ನಡೆಯಲಿರುವ   ಟೂರ್ನಿಗೆ ರಹದಾರಿ ಗಿಟ್ಟಿಸಿತು.

  • ದಿಲ್‌ಪ್ರೀತ್ ಸಿಂಗ್ ಅವರು ಹೊಡೆದ ಎರಡು ಗೋಲುಗಳ ಬಲದಿಂದ ಭಾರತ ಹಾಕಿ ತಂಡವು ಏಷ್ಯಾ ಕಪ್ ಗೆದ್ದು ಕೊಂಡಿತು. ಇದರೊಂದಿಗೆ ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಳಿಸಿಕೊಂಡಿತು.
  • ಇಲ್ಲಿ ನಡೆದ ಫೈನಲ್‌ನಲ್ಲಿ ಭಾರತ ತಂಡವು 4–1ರಿಂದ ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾದ ವಿರುದ್ಧ ಗೆದ್ದಿತು. ಇದು ಭಾರತಕ್ಕೆ ನಾಲ್ಕನೇ ಏಷ್ಯನ್ ಟ್ರೋಫಿ ಆಗಿದೆ. ಈ ಟೂರ್ನಿಯ ಇತಿಹಾಸದಲ್ಲಿ ಅತ್ಯಧಿಕ ಟ್ರೋಫಿಗಳನ್ನು ಜಯಿಸಿದ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಐದು ಬಾರಿ ಗೆದ್ದಿರುವ ದಕ್ಷಿಣ ಕೊರಿಯಾ ಮೊದಲ ಸ್ಥಾನದಲ್ಲಿದೆ. ಭಾರತ ತಂಡವು 2003 (ಕೌಲಾಲಂಪುರ), 2007 (ಚೆನ್ನೈ) ಮತ್ತು 2017ರಲ್ಲಿ ಢಾಕಾದಲ್ಲಿ ಏಷ್ಯಾ ಕಪ್ ಜಯಿಸಿತ್ತು.
  • ಮುಂದಿನ ವರ್ಷದ ಆಗಸ್ಟ್ 14ರಿಂದ 30ರವರೆಗೆ ಬೆಲ್ಜಿಯಂ ಮತ್ತು ನೆದರ್ಲೆಂಡ್ಸ್ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಎಫ್‌ಐಎಚ್ ವಿಶ್ವಕಪ್ ಟೂರ್ನಿಗೆ ಭಾರತವು ನೇರಪ್ರವೇಶ ಪಡೆಯಿತು.
  • ಭಾರತ ತಂಡದ ದಿಲ್‌ಪ್ರೀತ್  ಅವರು 28ನೇ ನಿಮಿಷ ಮತ್ತು 45ನೇ ನಿಮಿಷದಲ್ಲಿ ಗೋಲು ಗಳಿಸಿದರು. ಸುಖಜೀತ್ ಸಿಂಗ್ ಅವರು ಮೊದಲ ನಿಮಿಷದಲ್ಲಿಯೇ ಗೋಲು ಹೊಡೆದು ತಂಡಕ್ಕೆ ಉತ್ತಮ ಆರಂಭ ನೀಡಿದ್ದರು. ಅಮಿತ್ ರೋಹಿದಾಸ್ (50ನೇ ನಿ) ಒಂದು ಗೋಲು ಹೊಡೆದು ಮುನ್ನಡೆ ಒದಗಿಸಿದರು. 
  • ಕೊರಿಯಾ ತಂಡದ ಏಕೈಕ ಗೋಲನ್ನು ಡಯಾನ್ ಸನ್ (51ನೇ ನಿ) ದಾಖಲಿಸಿದರು.

ಜೊಮಾಟೊ, ಸ್ವಿಗ್ಗಿ ಪ್ಲಾಟ್‌ಫಾರ್ಮ್‌ ಶುಲ್ಕ ಏರಿಕೆ

ಸಂದರ್ಭ: ಊಟ, ತಿಂಡಿಯನ್ನು ಹೋಟೆಲ್‌ಗಳಿಂದ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಜೊಮಾಟೊ, ಸ್ವಿಗ್ಗಿ ಮತ್ತು ಮ್ಯಾಜಿಕ್‌ಪಿನ್‌ ಪ್ರತಿ ಆರ್ಡರ್‌ ಮೇಲೆ ವಿಧಿಸುವ ಶುಲ್ಕವನ್ನು (ಪ್ಲಾಟ್‌ಫಾರ್ಮ್‌ ಫೀ) ಏರಿಕೆ ಮಾಡಿವೆ. ಹಬ್ಬಗಳ ಋತು ಆರಂಭವಾಗಿರುವ ಈ ಹೊತ್ತಿನಲ್ಲಿ ಕಂಪನಿಗಳು ದರ ಹೆಚ್ಚಳ ಮಾಡಿವೆ.

  • ಅಲ್ಲದೆ, ಈ ಕಂಪನಿಗಳು ಊಟ, ತಿಂಡಿಯನ್ನು ಮನೆಬಾಗಿಲಿಗೆ ತಲುಪಿಸುವ ಸೇವೆಗೆ ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ಶೇಕಡ 18ರಷ್ಟು ತೆರಿಗೆ ಸೆಪ್ಟೆಂಬರ್‌ 22ರಿಂದ ಜಾರಿ ಬರಲಿರುವ ಕಾರಣಕ್ಕೆ, ಅದರ ಹೊರೆಯೂ ಗ್ರಾಹಕರಿಗೆ ವರ್ಗಾವಣೆ ಆಗುವ ನಿರೀಕ್ಷೆ ಇದೆ.
  • ಸ್ವಿಗ್ಗಿ ಕಂಪನಿಯು ತನ್ನ ಪ್ಲಾಟ್‌ಫಾರ್ಮ್‌ ಶುಲ್ಕವನ್ನು ಆಯ್ದ ನಗರಗಳಲ್ಲಿ ಪ್ರತಿ ಆರ್ಡರ್‌ಗೆ ₹15ಕ್ಕೆ ಹೆಚ್ಚಿಸಿದೆ. ಇದರಲ್ಲಿ ಜಿಎಸ್‌ಟಿ ಸೇರಿದೆ. ಜೊಮಾಟೊ ಜಿಎಸ್‌ಟಿ ಹೊರತುಪಡಿಸಿ ₹12.50ಕ್ಕೆ ಹೆಚ್ಚಿಸಿದೆ. ಮ್ಯಾಜಿಕ್‌ಪಿನ್‌ ₹10ಕ್ಕೆ ಏರಿಕೆ ಮಾಡಿದೆ.
  • ಒಂದು ಅಂದಾಜಿನ ಪ್ರಕಾರ, ಶೇ 18ರಷ್ಟು ಜಿಎಸ್‌ಟಿ ಪರಿಣಾಮವಾಗಿ ಜೊಮಾಟೊ ಮತ್ತು ಸ್ವಿಗ್ಗಿ ಗ್ರಾಹಕರು ಕ್ರಮವಾಗಿ ₹2 ಮತ್ತು ₹2.60 ಹೆಚ್ಚುವರಿ ಶುಲ್ಕವನ್ನು ಪ್ರತಿ ಆರ್ಡರ್‌ಗೆ ನೀಡಬೇಕಾಗುತ್ತದೆ. ದರ ಹೆಚ್ಚಳದ ಬಗ್ಗೆ ಸ್ವಿಗ್ಗಿ ಮತ್ತು ಜೊಮಾಟೊ ಪ್ರತಿಕ್ರಿಯೆ ನೀಡಿಲ್ಲ.
  • ‘ಆಹಾರ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸುವ ಸೇವೆಗೆ ನಾವು ಈಗಾಗಲೇ ಶೇ 18ರಷ್ಟು ಜಿಎಸ್‌ಟಿ ಪಾವತಿಸುತ್ತಿದ್ದೇವೆ. ಈಗಿನ ಜಿಎಸ್‌ಟಿ ಪರಿಷ್ಕರಣೆ ನಮ್ಮ ಮೇಲೆ ಪರಿಣಾಮ ಬೀರದು. ಗ್ರಾಹಕರ ಮೇಲೂ ಜಿಎಸ್‌ಟಿ ಪರಿಷ್ಕರಣೆಯು ಪರಿಣಾಮ ಬೀರದು. ನಮ್ಮ ಪ್ಲಾಟ್‌ಫಾರ್ಮ್‌ ಶುಲ್ಕವು ₹10 ಇದೆ. ಇದು ಇತರೆ ಪ್ರಮುಖ ಕಂಪನಿಗಳ ಶುಲ್ಕಕ್ಕಿಂತ ಕಡಿಮೆ’ ಎಂದು ಮ್ಯಾಜಿಕ್‌ಪಿನ್‌ ಕಂಪನಿಯ ವಕ್ತಾರರು ತಿಳಿಸಿದ್ದಾರೆ.

‘ರಾಜ್ಯದ ಎರಡನೇ ಅಧಿಕೃತ ಭಾಷೆ ತುಳು: ಸಂಪುಟದಲ್ಲಿ ಚರ್ಚೆ’

ಸಂದರ್ಭ:‘ರಾಜ್ಯದ ಎರಡನೇ ಅಧಿಕೃತ ಭಾಷೆ ತುಳು ಎಂದು ಘೋಷಿಸಬೇಕು ಎಂಬ ಬೇಡಿಕೆಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

  • ಇಲ್ಲಿ ನಡೆದ ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
  • ‘ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ’ ಎಂದು ಹಾಸ್ಯ ಚಟಾಕಿ ಹಾರಿಸಿದರು.
  • ‘ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್‌ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ’ ಎಂದರು.
  • ‘ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಆ ಭಾಗದ ಶಾಸಕರು, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಜೊತೆ ನಾನು ಚರ್ಚೆ ಮಾಡಿದ್ದೇನೆ’ ಎಂದು ತಿಳಿಸಿದರು.

ಪ್ರಚಲಿತ ವಿದ್ಯಮಾನಗಳು: 7ನೇ ಸೆಪ್ಟೆಂಬರ್ 2025


ಸಾಮಾನ್ಯ ಅಧ್ಯಯನ 2: ಅನಿವಾಸಿ ಭಾರತೀಯ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲೂ ಎನ್‌ಆರ್‌ಐ ಕೋಟಾ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲೂ ಇನ್ನು ಮುಂದೆ ಅನಿವಾಸಿ ಭಾರತೀಯರಿಗೆ (ಎನ್‌ಆರ್‌ಐ) ಶೇ 15ರಷ್ಟು ಸೀಟುಗಳನ್ನು ಮೀಸಲಿಡಲಾಗುತ್ತಿದೆ.

  • 2025-26ನೇ ಸಾಲಿನಿಂದಲೇ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ಹೊರಡಿಸಿದೆ. 400 ಸರ್ಕಾರಿ ಕಾಲೇಜುಗಳಿಗೆ ಸಿಕ್ಕಿವೆ.
  • ಈ ವರ್ಷ ಹೊಸ 400 ಸೀಟುಗಳಲ್ಲಿ ಎನ್‌ಆರ್‌ಐ ಕೋಟಾ ನಿಗದಿಪಡಿಸ ಲಾಗಿದೆ. ₹25 ಲಕ್ಷ ಶುಲ್ಕ ನಿಗದಿಮಾಡಲಾಗಿದೆ. ಇದರಿಂದ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಸರ್ಕಾರದ ಅನುದಾನದ ಮೇಲೆ ಹೆಚ್ಚು ಅವಲಂಬಿತವಾಗದೆ ಸ್ವಾವಲಂಬನೆ ಸಾಧಿಸಲು ನೆರವಾಗಲಿದೆ ಎಂದರು.

ಸಾಮಾನ್ಯ ಅಧ್ಯಯನ 2: ವಿಶ್ವಸಂಸ್ಥೆಯ ಸಾಮಾನ್ಯ ಸಭೆ

ಯುಎನ್‌ಜಿಎ: ಮೋದಿ ಬದಲು ಜೈಶಂಕರ್ ಭಾಷಣ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 80ನೇ ಅಧಿವೇಶನದ ಉನ್ನತ ಮಟ್ಟದ ಸಾಮಾನ್ಯ ಚರ್ಚೆಯಲ್ಲಿ (ಯುಎನ್‌ಜಿಎ) ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಇರುವುದಿಲ್ಲ. ಭಾಷಣಗಾರರ ತಾತ್ಕಾಲಿಕ ಪರಿಷ್ಕೃತ ಪಟ್ಟಿ ಪ್ರಕಟಿಸಲಾಗಿದ್ದು, ಅದರಲ್ಲಿ ಭಾರತದ ಪ್ರಧಾನಿಯ ಹೆಸರಿಲ್ಲ. ಭಾರತದಿಂದ ಒಬ್ಬ ‘ಸಚಿವ’ ಪ್ರತಿನಿಧಿಸುತ್ತಾರೆ ಎಂಬ ಮಾಹಿತಿ ಪಟ್ಟಿಯಲ್ಲಿದೆ.

  • ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನ ಇದೇ 9ರಿಂದ ಆರಂಭವಾಗಲಿದೆ. ಈ ಅಧಿವೇಶನದಲ್ಲಿ ವಾಡಿಕೆಯಂತೆ ಮೊದಲು ಮಾತನಾಡುವ ಅವಕಾಶ ಬ್ರೆಜಿಲ್‌ ನಂತರ ಅಮೆರಿಕಕ್ಕೆ ಇದೆ.
  • ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ‘ಯುಎನ್‌ಜಿಎ’ ವೇದಿಕೆಯಲ್ಲಿ ವಿಶ್ವ ಮುಖಂಡರನ್ನು ಉದ್ದೇಶಿಸಿ ಇದೇ 23ರಂದು ಭಾಷಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬದಲು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಇದೇ 27ರಂದು ಭಾಷಣ ಮಾಡಲಿದ್ದಾರೆ.
  • ಇಸ್ರೇಲ್‌, ಚೀನಾ, ಪಾಕಿಸ್ತಾನ, ಬಾಂಗ್ಲಾದೇಶಕ್ಕೆ ‘ಯುಎನ್‌ಜಿಎ’ ವೇದಿಕೆಯಲ್ಲಿ ಮಾತನಾಡಲು ಇದೇ 26ರಂದು ಅವಕಾಶ ನೀಡಲಾಗಿದೆ. 
  • ಇಸ್ರೇಲ್‌–ಹಮಾಸ್‌ ಸಂಘರ್ಷ, ರಷ್ಯಾ–ಉಕ್ರೇನ್‌ ಯುದ್ಧದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ಸಾಮಾನ್ಯ ಅಧ್ಯಯನ 2:

ಅಮೆರಿಕ: ರಕ್ಷಣಾ ಇಲಾಖೆ ಹೆಸರು ‘ಯುದ್ಧ’ ಎಂದು ನಾಮಕರಣ

ವಿಶ್ವದಾದ್ಯಂತ ಯುದ್ಧ ನಿಲ್ಲಿಸುವ ಕುರಿತು ಶಾಂತಿ ಪ್ರಚಾರ ಮಾಡುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ಇದೀಗ ತಮ್ಮ ದೇಶದ ರಕ್ಷಣಾ ಇಲಾಖೆಯ ಹೆಸರನ್ನೇ ‘ಯುದ್ಧ ಇಲಾಖೆ’ಯನ್ನಾಗಿ ಮರುನಾಮಕರಣ ಮಾಡಿ ಆದೇಶ ಹೊರಡಿಸಿದ್ದಾರೆ. 

  • ‘ಅಮೆರಿಕವು ವಿಶ್ವದ ಶಕ್ತಿಶಾಲಿ ರಾಷ್ಟ್ರ ಎಂಬ ಸಂದೇಶ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಗೆಲುವು ಮತ್ತು ಪ್ರಬಲ ಸಾಮರ್ಥ್ಯದ ಸಂದೇಶವನ್ನು ನೀಡುತ್ತದೆ ಎಂದು ಭಾವಿಸಿದ್ದೇನೆ’ ಎಂದು ಟ್ರಂಪ್‌ ಪ್ರತಿಕ್ರಿಯಿಸಿದ್ದಾರೆ. 
  • ಕಾಂಗ್ರೆಸ್ (ಅಮೆರಿಕ ಸಂಸತ್ತು) ಸಂಸದರು ಮರುನಾಮಕರಣಕ್ಕೆ ಔಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಮರುನಾಮಕರಣ ಆದೇಶದ ಬಳಿಕ ರಕ್ಷಣಾ ಇಲಾಖೆಯ ಕಚೇರಿಯ ಆವರಣದಲ್ಲಿನ ಫಲಕ ಹಾಗೂ ವೆಬ್‌ಸೈಟ್‌ ಸೇರಿದಂತೆ ಎಲ್ಲಾ ಕಡೆ ಹೆಸರು ಬದಲಾವಣೆ ಮಾಡಲಾಗಿದೆ. 

ಸಾಮಾನ್ಯ ಅಧ್ಯಯನ 2: ಕೇಂದ್ರ ಚುನಾವಣಾ ಆಯೋಗ; ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್‌)

ದೇಶವ್ಯಾಪಿ ‘ಎಸ್‌ಐಆರ್‌’ಗೆ ಸಿದ್ಧತೆ

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್‌) ವಿರೋಧ ವ್ಯಕ್ತವಾಗಿರುವಾಗಲೇ, ದೇಶದಾದ್ಯಂತ ‘ಎಸ್‌ಐಆರ್‌’ ಜಾರಿಗೊಳಿಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. 

  • ದೇಶವ್ಯಾಪಿ ‘ಎಸ್‌ಐಆರ್‌’ ಜಾರಿಗೆ ಕೈಗೊಳ್ಳಬೇಕಿರುವ ಸಿದ್ಧತೆಗಳ ಕುರಿತು ಚರ್ಚಿಸಲು ಆಯೋಗದ ಉನ್ನತ ಅಧಿಕಾರಿಗಳು ಸೆಪ್ಟೆಂಬರ್‌ 10ರಂದು ವಿವಿಧ ರಾಜ್ಯಗಳ ಚುನಾವಣಾ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. 
  • ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್‌ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ, ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ನಡೆಸುತ್ತಿರುವ ಮೂರನೆಯ ಸಭೆ ಇದಾಗಿದೆ.  
  • ಬಿಹಾರದ ನಂತರ ದೇಶದ ಉಳಿದ ರಾಜ್ಯಗಳಲ್ಲೂ ‘ಎಸ್‌ಐಆರ್‌’ ಜಾರಿಗೊಳಿಸುವುದಾಗಿ ಚುನಾವಣಾ ಆಯೋಗ ಈ ಹಿಂದೆಯೇ ಹೇಳಿತ್ತು. 2026ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದಕ್ಕೂ ಮುನ್ನ ಅಂದರೆ, ಈ ವರ್ಷಾಂತ್ಯದಿಂದಲೇ ಈ ರಾಜ್ಯಗಳಲ್ಲಿ ‘ಎಸ್‌ಐಆರ್‌’ ಪ್ರಕ್ರಿಯೆಗಳು ಆರಂಭಗೊಳ್ಳುವ ಸಾಧ್ಯತೆ ಇದೆ. 

‘ಎಸ್‌ಐಆರ್‌’ ಉದ್ದೇಶ

  • l ಜನ್ಮಸ್ಥಳ ಪರಿಶೀಲನೆಯ ಮೂಲಕ ವಿದೇಶಿ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ಹೊರಗಿಡುವುದು
  • l ಬಾಂಗ್ಲಾದೇಶ, ಮ್ಯಾನ್ಮಾರ್‌ ಸೇರಿ ದೇಶದಲ್ಲಿ ನುಸುಳಿರುವ ವಿದೇಶಿ ಅಕ್ರಮ ವಲಸಿಗರನ್ನು ಗುರುತಿಸುವುದು
  • l ಮತದಾರರ ಪಟ್ಟಿಯ ಸಮಗ್ರತೆ ರಕ್ಷಿಸಲು, ಸಾಂವಿಧಾನಿಕ ಆದೇಶ ನಿರ್ವಹಿಸಲು ಆಯೋಗದ ಕ್ರಮ 
  • l ಮತಗಟ್ಟೆ ಅಧಿಕಾರಿಗಳು ಬೂತ್‌ ಮಟ್ಟದಲ್ಲಿ ಪ್ರತಿ ಮನೆಗೆ ಭೇಟಿ ನೀಡಿ, ಮತದಾರರ ವಿವರವನ್ನು ಸಂಗ್ರಹಿಸಿ, ಖಚಿತಪಡಿಸಿಕೊಳ್ಳುವುದು  

ಘೋಷಣಾ ಪತ್ರ– ಹೊಸ ನಮೂನೆ

  • ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು ಬಯಸುವವರಿಗೆ ಮತ್ತು ಹೊರ ರಾಜ್ಯಗಳಿಗೆ ಸ್ಥಳಾಂತರಗೊಂಡವರಿಗೆ ‘ಎಸ್‌ಐಆರ್‌’ನಲ್ಲಿ ‘ಘೋಷಣಾ ಪತ್ರ’ ಎಂಬ ಹೊಸ ನಮೂನೆಯನ್ನು ಪರಿಚಯಿಸಲಾಗಿದೆ. 
  • ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವವರು 1987ರ ಜುಲೈ 1ರ ಮೊದಲು ಜನಿಸಿದವರಾಗಿದ್ದರೆ, ಭಾರತದಲ್ಲಿ ಜನಿಸಿದ್ದೇವೆ ಎನ್ನುವುದಕ್ಕೆ ಜನ್ಮ ದಿನಾಂಕ ಮತ್ತು ಜನ್ಮಸ್ಥಳದ ದಾಖಲೆ ಒದಗಿಸಬೇಕು. 1987ರ ಜುಲೈ 1ರಿಂದ 2004ರ ಡಿಸೆಂಬರ್‌ 2ರ ಒಳಗೆ ಜನಿಸಿದವರು ತಮ್ಮ ಪೋಷಕರ ಜನ್ಮದಿನಾಂಕ, ಜನ್ಮಸ್ಥಳದ ದಾಖಲೆಯನ್ನೂ ಒದಗಿಸಬೇಕು.

ಸುಪ್ರೀಂಕೋರ್ಟ್ ಸೂಚನೆ 

  • ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಮತ್ತು ಮತದಾನದ ಹಕ್ಕಿನಿಂದ ವಂಚಿತರಾಗುತ್ತಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂಕೋರ್ಟ್‌ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. 
  • ಕೆಲವು ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳು ಈಗಾಗಲೇ ತಮ್ಮ ರಾಜ್ಯಗಳಲ್ಲಿ ಕೊನೆಯ ಬಾರಿ ಪರಿಷ್ಕರಣೆ ಆಗಿರುವ ಮತದಾರರ ಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತಿದ್ದಾರೆ. ಹೆಚ್ಚಿನ ರಾಜ್ಯಗಳು 2002–2004ರ ಅವಧಿಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿದ್ದವು. 

ಪ್ರಚಲಿತ ವಿದ್ಯಮಾನಗಳು: 6ನೇ ಸೆಪ್ಟೆಂಬರ್ 2025

ಶಾಲೆಗಳ ಅಭಿವೃದ್ಧಿಗೆ ಇನ್ನು ‘ಸಿಎಸ್‌ಆರ್‌ ನಿಧಿ’

ಸಂದರ್ಭ: ‘ಕಾರ್ಪೊರೇಟ್‌ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಬಳಸಿ ಕೊಂಡು ಸರ್ಕಾರಿ ಶಾಲೆಗಳ ಸ್ಥಾಪನೆ, ಅಭಿವೃದ್ಧಿ ಮಾಡುವ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

  • ‘ಸರ್ಕಾರಿ ಶಾಲೆಗಳ ಸ್ಥಾಪನೆ, ಅತ್ಯುತ್ತಮ ಕಟ್ಟಡಗಳನ್ನು ನಿರ್ಮಿಸಿ ಕೊಡುವ ಕಂಪನಿಗಳ ಹೆಸರನ್ನೇ ಶಾಲೆಗೆ ಇಡಲು ಅನುಮತಿ ನೀಡಲಾಗುವುದು. ನಗರದ ಮಾದರಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿಬಿಎಸ್‌ಇ ಮಾದರಿ ಶಿಕ್ಷಣ ಪಡೆಯಲು ಅವಕಾಶಕಲ್ಪಿಸಲಾಗುವುದು.
  • ‘ಈಗಾಗಲೇ ಒಂದಷ್ಟು ಶಾಲೆಗಳು ಪ್ರಾರಂಭವಾಗಿವೆ. ಮುಂದಿನ ಶೈಕ್ಷಣಿಕ ವರ್ಷದ ಒಳಗೆ 2,000 ಶಾಲೆಗಳ ನಿರ್ಮಾಣದ ಗುರಿ ಇಟ್ಟುಕೊಂಡಿದ್ದೇವೆ. ರಾಜ್ಯದಲ್ಲಿ ₹7,800 ಕೋಟಿಯಷ್ಟು ಸಿಎಸ್‌‌ಆರ್‌ ಹಣ ಲಭ್ಯವಿದೆ. ನನ್ನ ಕ್ಷೇತ್ರದಲ್ಲಿ ಟೊಯೊಟಾ ಕಂಪನಿ ತಲಾ‌ ₹10 ಕೋಟಿ ವೆಚ್ಚದಲ್ಲಿ ಏಳು ಕೆಪಿಎಸ್‌ ಶಾಲೆ ಕಟ್ಟಡ ನಿರ್ಮಾಣ ಮಾಡುತ್ತಿದೆ. ಅದೇ ರೀತಿ ಇತರೆ ಉದ್ಯಮಿಗಳನ್ನೂ ಉತ್ತೇಜಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಮೂರು ಪಂಚಾಯಿತಿಗಳಿಗೆ ಒಂದು‌ ಕೆಪಿಎಸ್‌ ಶಾಲೆ ಆರಂಭಿಸಲಾಗುವುದು. ಮಕ್ಕಳು ಸರ್ಕಾರಿ ಶಾಲೆಗಳನ್ನು ತೊರೆಯದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು.

‘ಜಿಎಸ್‌ಟಿ ಪರಿಷ್ಕರಣೆ: ಲಾಭ ಗ್ರಾಹಕರಿಗೆ’

ಸಂದರ್ಭ: ಜಿಎಸ್‌ಟಿ ದರಗಳ ಪರಿಷ್ಕರಣೆಯ ಪ್ರಯೋಜನಗಳನ್ನು ಗ್ರಾಹಕರಿಗೆ ಸಂಪೂರ್ಣವಾಗಿ ವರ್ಗಾಯಿಸುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿಗಾವಹಿಸಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್.

  • ವಿವಿಧ ವಸ್ತುಗಳ ಮೇಲಿನ ತೆರಿಗೆ ಇಳಿಕೆಯು ಅವುಗಳ ಬೆಲೆಗಳಲ್ಲಿ ಪ್ರತಿಫಲಿಸಲಿವೆ ಎಂಬ ಭರವಸೆಯನ್ನು ಉದ್ಯಮ ಕ್ಷೇತ್ರ ನೀಡಿರುವುದಾಗಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  • ನಿತ್ಯ ಬಳಕೆಯ ಹತ್ತು ಹಲವು ಉತ್ಪನ್ನಗಳು, ಸೇವೆಗಳ ಮೇಲಿನ ತೆರಿಗೆ ಪ್ರಮಾಣವನ್ನು ಕಡಿಮೆ ಮಾಡುವ ತೀರ್ಮಾನವನ್ನು ಜಿಎಸ್‌ಟಿ ಮಂಡಳಿಯು ಇತ್ತೀಚೆಗೆ ತೆಗೆದುಕೊಂಡಿದ್ದು, ಈ ತೀರ್ಮಾನಗಳು ನವರಾತ್ರಿಯ ಮೊದಲ ದಿನವಾದ ಇದೇ 22ರಿಂದಲೇ ಜಾರಿಗೆ ಬರಲಿವೆ.

‘ಚಿಲ್ಲರೆ ಹಣದುಬ್ಬರ ಇಳಿಕೆ ನಿರೀಕ್ಷೆ’

ಸಂದರ್ಭ: ಜಿಎಸ್‌ಟಿ ಸರಳೀಕರಣದಿಂದ ಮುಂದಿನ ಆರ್ಥಿಕ ವರ್ಷದಲ್ಲಿ ದೇಶದ ಚಿಲ್ಲರೆ ಹಣದುಬ್ಬರವು

ಶೇ 0.65ರಿಂದ ಶೇ 0.75ರಷ್ಟು ಇಳಿಕೆ ಆಗಲಿದೆ ಎಂದು ಎಸ್‌ಬಿಐ ರಿಸರ್ಚ್‌ ತಿಳಿಸಿದೆ.

  • ಮನೆ ಬಳಕೆಯ ಅಗತ್ಯ ವಸ್ತುಗಳು ಮತ್ತು ಸೇವೆಗಳ ಮೇಲಿನ ತೆರಿಗೆಯು ಜಿಎಸ್‌ಟಿ ಸರಳೀಕರಣದಿಂದ ಕಡಿಮೆ ಆಗಲಿದೆ. ಇದು ಚಿಲ್ಲರೆ ಹಣದುಬ್ಬರ ಇಳಿಕೆಗೆ ನೆರವಾಗಲಿದೆ ಎಂದು ತಿಳಿಸಿದೆ.
  • ಅಗತ್ಯ ವಸ್ತುಗಳ (ಅಂದಾಜು 295 ಸರಕುಗಳು) ಮೇಲಿನ ತೆರಿಗೆ ಶೇ 12ರಿಂದ ಶೇ 5ಕ್ಕೆ ಇಳಿದಿದೆ ಅಥವಾ ಶೂನ್ಯವಾಗಿದೆ. ಹೀಗಾಗಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 0.25ರಿಂದ ಶೇ 0.30ರಷ್ಟು ಕಡಿಮೆಯಾಗಲಿದೆ.
  • ಅಲ್ಲದೆ, ಸರಕು ಮತ್ತು ಸೇವೆಗಳ ಮೇಲಿನ ತೆರಿಗೆ ಸಹ ಇಳಿಕೆಯಾಗಿದ್ದು, ಶೇ 0.40ರಿಂದ ಶೇ 0.45ರಷ್ಟು ಹಣದುಬ್ಬರ ಕಡಿಮೆಯಾಗಲಿದೆ. ಒಟ್ಟಾರೆ, ಮುಂದಿನ ಆರ್ಥಿಕ ವರ್ಷದ ವೇಳೆಗೆ ಹಣದುಬ್ಬರ ಶೇ 0.65ರಿಂದ ಶೇ 0.75ರಷ್ಟು ಇಳಿಕೆ ಆಗಲಿದೆ ಎಂದು ತಿಳಿಸಿದೆ.

ಟಾಟಾ ಮೋಟರ್ಸ್ ವಾಹನ ಬೆಲೆ ಇಳಿಕೆ

  • ದೇಶದ ವಾಹನ ತಯಾರಿಕಾ ಕಂಪನಿ ಟಾಟಾ ಮೋಟರ್ಸ್‌ ಸೆಪ್ಟೆಂಬರ್‌ 22ರಿಂದ ಜಾರಿಗೆ ಬರುವಂತೆ ತನ್ನ ಪ್ರಯಾಣಿಕ ವಾಹನಗಳ ಬೆಲೆಯನ್ನು ಕಡಿತಗೊಳಿಸಿದೆ.
  • ಟಿಯಾಗೊ ಕಾರಿನ ಬೆಲೆಯನ್ನು ₹75 ಸಾವಿರ ಕಡಿಮೆ ಮಾಡಿದೆ. ಟಿಗಾರ್‌ (₹80 ಸಾವಿರ), ಆಲ್ಟ್ರೋಜ್ (₹1.10 ಲಕ್ಷ), ಪಂಚ್‌ (₹85 ಸಾವಿರ), ನೆಕ್ಸಾನ್‌ (₹1.55 ಲಕ್ಷ), ಹ್ಯಾರಿಯರ್‌ ₹1.4 ಲಕ್ಷ ಮತ್ತು ಸಫಾರಿ ದರ ₹1.45 ಲಕ್ಷದವರೆಗೆ ಕಡಿಮೆ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.
  • ಜಿಎಸ್‌ಟಿ ಕಡಿತದ ಪೂರ್ಣ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲಾಗು ವುದು ಎಂದು ಟಾಟಾ ಮೋಟರ್ಸ್ ತಿಳಿಸಿದೆ.

‘ವ್ಯಾಪಾರ ಒಪ್ಪಂದ: ಭಾರತದ ಜೊತೆ ಶೀಘ್ರ ಮಾತುಕತೆ’

ಸಂದರ್ಭ: ವ್ಯಾಪಾರ ಒಪ್ಪಂದ ಕುರಿತಂತೆ ಅಮೆರಿಕದೊಂದಿಗೆ ಭಾರತ ಶೀಘ್ರವೇ ಮಾತುಕತೆ ನಡೆಸಲಿದೆ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೋವರ್ಡ್ ಲುಟ್ನಿಕ್‌ ಹೇಳಿದ್ದಾರೆ.

  • ‘ಒಂದು ಅಥವಾ ಎರಡು ತಿಂಗಳ ಒಳಗಾಗಿ ಭಾರತ ಮಾತುಕತೆಗೆ ಮುಂದಾಗಲಿದೆ. ಕ್ಷಮೆ ಕೋರುವ ಜೊತೆಗೆ ಟ್ರಂಪ್‌ ಅವರೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಕೂಡ ಯತ್ನಿಸಲಿದೆ.
  • ಪ್ರಧಾನಿ ಮೋದಿ ಅವರೊಂದಿಗಿನ ಒಪ್ಪಂದ ಯಾವ ರೀತಿಯದ್ದಾಗಿರಬೇಕು ಎಂಬುದನ್ನು ಟ್ರಂಪ್‌ ಅವರೇ ನಿರ್ಧರಿಸುವರು’ ಎಂದು ಬ್ಲೂಮ್‌ಬರ್ಗ್‌ಗೆ ನೀಡಿದ ಸಂದರ್ಶನದಲ್ಲಿ ಲುಟ್ನಿಕ್ ಹೇಳಿದ್ದಾರೆ.
  • ‘ಉಕ್ರೇನ್‌ ಮತ್ತು ರಷ್ಯಾ ನಡುವಿನ ಯುದ್ಧಕ್ಕೂ ಮೊದಲು ರಷ್ಯಾದಿಂದ ಭಾರತ ಖರೀದಿಸುತ್ತಿದ್ದ ತೈಲದ ಪ್ರಮಾಣ ಶೇ2ಕ್ಕಿಂತಲೂ ಕಡಿಮೆ ಇತ್ತು. ಈಗ, ಭಾರತ ತನ್ನ ಬೇಡಿಕೆಯ ಶೇ40ರಷ್ಟು ತೈಲವನ್ನು ರಷ್ಯಾದಿಂದ ಖರೀದಿ ಮಾಡುತ್ತಿದೆ’ ಎಂದಿದ್ದಾರೆ.

‘ಹಣ ಮರುಪಾವತಿ: ಹಕ್ಕು ವಿವಾದ ಇತ್ಯರ್ಥಪಡಿಸಿ’

ಸಂದರ್ಭ: ಭವಿಷ್ಯನಿಧಿ ವಂತಿಗೆ ಪಾವತಿಸುವಲ್ಲಿ ವಿಫಲವಾಗಿರುವ ಅಕ್ರೊಪೆಟಲ್ ಟೆಕ್ನಾಲಜೀಸ್ ಪ್ರೈವೆಟ್‌ ಲಿಮಿಟೆಡ್‌ ಕಂಪನಿಯ ಸ್ವತ್ತುಗಳ ಮಾರಾಟದಿಂದ ಸಂಗ್ರಹವಾಗಿರುವ ಹಣದ ಮೇಲೆ, ಇಪಿಎಫ್‌ಒ ಹಾಗೂ ಸಾಲ ನೀಡಿರುವ ‌ಎಕ್ಸಿಸ್‌ ಬ್ಯಾಂಕ್‌ ಮತ್ತು ಇತರ ಎರಡು ಬ್ಯಾಂಕುಗಳ ಪೈಕಿ ಯಾರು ಮೊದಲು ಹಕ್ಕು ಹೊಂದಿದ್ದಾರೆ ಎಂಬ ಬಗ್ಗೆ  ನಿರ್ಧರಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

  • ಈ ವಿಚಾರವಾಗಿ ಎಡೆಲ್‌ವೀಸ್ ಅಸೆಟ್ ರಿಕನ್‌ಸ್ಟ್ರಕ್ಷನ್ ಲಿಮಿಟೆಡ್‌ನ(ಇಎಆರ್‌ಎಲ್) ಮೇಲ್ಮನವಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಫೆಬ್ರುವರಿ 1ರಂದು ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ.
  • ನ್ಯಾಯಮೂರ್ತಿಗಳಾದ ವಿಕ್ರಮನಾಥ್, ಸಂಜಯ ಕರೋಲ್‌ ಹಾಗೂ ಸಂದೀಪ್ ಮೆಹ್ತಾ ಅವರು ಇದ್ದ ನ್ಯಾಯಪೀಠವು,ಇಎಆರ್‌ಎಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.
  • ಈ ವಿವಾದಕ್ಕೆ ಸಂಬಂಧಿಸಿ ಕಕ್ಷಿದಾರರ‌ರಾಗಿರುವ ಎಲ್ಲ ಸಂಸ್ಥೆಗಳು ಹೈಕೋರ್ಟ್‌ ಮುಂದೆ ತಮ್ಮ ವಾದ ಮಂಡಿಸಲು ಸ್ವತಂತ್ರವಾಗಿವೆ ಎಂದೂ ಪೀಠ ಹೇಳಿದೆ.
  • ವಿಚಾರಣೆ ವೇಳೆ, ಇಎಆರ್‌ಎಲ್‌ ಪರ ಹಿರಿಯ ವಕೀಲ ಕೃಷ್ಣನ್ ವೇಣುಗೋಪಾಲ್, ‘ಬಾಕಿ ಇರುವ ವಂತಿಗೆ ಹಣದ ಮೇಲೆ ಇ‍ಪಿಎಫ್‌ಒಗೆ ಮೊದಲ ಹಕ್ಕು ಇದೆ’ ಎಂದರು.
  • ‘ಕಂಪನಿಗೆ ಸಾಲ ನೀಡಿರುವ ಬ್ಯಾಂಕುಗಳ ಪೈಕಿ ಎಕ್ಸಿಸ್‌ ಬ್ಯಾಂಕ್, ಒಂದು ಸ್ವತ್ತನ್ನು ₹12 ಕೋಟಿಗೆ ಮಾರಾಟ ಮಾಡಿದೆ. ಕಂಪನಿಯು ಎರಡು ಸ್ವತ್ತುಗಳನ್ನು ಒಟ್ಟು ₹7 ಕೋಟಿಗೆ ಮಾರಾಟ ಮಾಡಿದೆ. ಹೀಗಾಗಿ, ಇಪಿಎಫ್‌ಒ ತನಗೆ ಬರಬೇಕಾದ ಬಾಕಿ ಮೊತ್ತವನ್ನು ಎಕ್ಸಿಸ್‌ ಬ್ಯಾಂಕ್‌ನಿಂದ ವಸೂಲು ಮಾಡಿಕೊಳ್ಳಬಹುದು’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
  • ‘ಪಿಎಫ್‌ ಕಾಯ್ದೆಯಡಿ, ಬಾಕಿ ಮೊತ್ತವನ್ನು ಎಕ್ಸಿಸ್‌ ಬ್ಯಾಂಕಿನಿಂದ ಮಾಡಿಕೊಳ್ಳಬೇಕೇ ಹೊರತು ಮೇಲ್ಮನವಿದಾರರಿಂದಲ್ಲ’ ಎಂದೂ ವಾದಿಸಿದರು.
  • ಇಪಿಎಫ್‌ಒ ಪರ ಹಾಜರಿದ್ದ ವಕೀಲ ದುಷ್ಯಂತ ಪರಾಶರ, ‘ಮೇಲ್ಮನವಿದಾರರ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್‌ನ ಕ್ರಮ ಸರಿಯಾಗಿಯೇ ಇದೆ’ ಎಂದರು.
  • ‘ಎಸ್‌ಎಆರ್‌ಎಫ್‌ಎಇಎಸ್‌ಐ ಕಾಯ್ದೆಯ ಸೆಕ್ಷನ್ 35ರ ಪ್ರಕಾರ, ಬ್ಯಾಂಕಿನ ಸಾಲ ಮರುಪಾವತಿಯೇ ಆದ್ಯತೆಯಾಗಲಿದೆ. ಹೀಗಾಗಿ, ಭವಿಷ್ಯನಿಧಿ ವಂತಿಗೆ ಸಂಬಂಧಿಸಿ ಬ್ಯಾಂಕಿನಿಂದ ಯಾವುದೇ ವಸೂಲಾತಿ ಮಾಡುವ ಹಾಗಿಲ್ಲ’ ಎಂದು ಎಕ್ಸಿಸ್‌ ಬ್ಯಾಂಕ್‌ ಪರ ಹಾಜರಿದ್ದ ಹಿರಿಯ ವಕೀಲ ಗೋಪಾಲ್‌ ಜೈನ್‌, ಪೀಠಕ್ಕೆ ತಿಳಿಸಿದರು.
  • ಎಲ್ಲ ಕಕ್ಷಿದಾರರ ವಾದ ಆಲಿಸಿದ ಪೀಠ, ‘ವಸೂಲಾಗಬೇಕಾದ ಬಾಕಿ ಮೊತ್ತದ ಮೇಲೆ ಇಪಿಎಫ್‌ಒ, ಎಕ್ಸಿಸ್‌ ಬ್ಯಾಂಕ್‌, ಎಸ್‌ಬಿಐ ಹಾಗೂ ಸ್ಟೇಟ್‌ ಬ್ಯಾಂಕ್‌ ಆಫ್‌ ಟ್ರಾವಂಕೂರ್(ಈಗ ಎಸ್‌ಬಿಐನಲ್ಲಿ ವಿಲೀನವಾಗಿದೆ) ಪೈಕಿ ಯಾರಿಗೆ ಮೊದಲ ಹಕ್ಕು ಇದೆ ಎಂಬ ಬಗ್ಗೆ ಹೈಕೋರ್ಟ್‌ ನಿರ್ಧರಿಸಲಿದೆ’ ಎಂದು ಪೀಠ, ಅರ್ಜಿ ವಿಲೇವಾರಿ ಮಾಡಿತು.

‘ದಾಖಲೆ ಇಲ್ಲದ ವಹಿವಾಟು: ಅಲ್ಲಗಳೆಯಲಾಗದು’

  • ಚೆಕ್‌, ಬ್ಯಾಂಕ್‌ ವರ್ಗಾವಣೆ ದಾಖಲೆ ಅಥವಾ ರಶೀದಿ ಇಲ್ಲ ಎಂಬ ಕಾರಣಕ್ಕೆ ಹಣಕಾಸಿನ ವಹಿವಾಟು ನಡೆದೇ ಇಲ್ಲ ಎನ್ನಲಾಗದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.
  • ‘ಹಣದ ವಹಿವಾಟು ಎಂದಮೇಲೆ ಅದರಲ್ಲಿ ನಗದು ಕೂಡ ಇರಬಹುದು. ಅದು ಅಸಹಜವೇನೂ ಅಲ್ಲ’ ಎಂದು ಕೋರ್ಟ್‌ ತಿಳಿಸಿದೆ.
  • ವ್ಯಕ್ತಿಯೊಬ್ಬರು ಅಧಿಕೃತ ವಿಧಾನಗಳ ಮೂಲಕ (ನೆಗೋಶಿಯಬಲ್ ಇನ್‌ಸ್ಟ್ರುಮೆಂಟ್ಸ್‌ ಅಥವಾ ಬ್ಯಾಂಕ್‌ ವಹಿವಾಟು) ಹಣ ವರ್ಗಾವಣೆಯನ್ನು ಸಾಬೀತುಪಡಿಸಲು ಸಾಧ್ಯವಾಗದೇ ಇದ್ದರೆ, ಅಂತಹ ಮೊತ್ತವನ್ನು ನಗದು ಮೂಲಕ ಪಾವತಿಸಲಾಗಿಲ್ಲ ಎಂಬ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಅದರಲ್ಲೂ ಸಾಲ ಮರುಪಾವತಿ ಕುರಿತು ಸ್ಪಷ್ಟವಾಗಿ ವಚನಪತ್ರ ಇದ್ದಲ್ಲಿ ಹಾಗೆ ನಿರ್ಧರಿಸಲು ಆಗುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್‌ ಅಮಾನುಲ್ಲಾ ಮತ್ತು ವಿಪುಲ್‌.ಎಂ ಪಾಂಚೋಲಿ ಅವರ ಪೀಠ ಹೇಳಿದೆ.

ಪ್ರಚಲಿತ ವಿದ್ಯಮಾನಗಳು: 5ನೇ ಸೆಪ್ಟೆಂಬರ್ 2025

ಸಾಮಾನ್ಯ ಅಧ್ಯಯನ 1: ಇ–ಕಾಮರ್ಸ್‌ ; ಬ್ಯಾಂಕ್‌ ಮತ್ತು ಬ್ಯಾಂಕೇತರ ಸಂಸ್ಥೆ

ಗ್ರಾಹಕರಿಗೆ ನೇರವಾಗಿ ಸಾಲ ಪರವಾನಗಿ ಪಡೆದ ಅಮೆಜಾನ್

ಸಂದರ್ಭ: ಬೆಂಗಳೂರು ಮೂಲದ ಬ್ಯಾಂಕೇತರ ಹಣಕಾಸು ಕಂಪನಿ ಆಕ್ಸಿಯೊ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಜಾಗತಿಕ ಇ–ಕಾಮರ್ಸ್‌ ಕಂಪನಿ ಅಮೆಜಾನ್‌ ತಿಳಿಸಿದೆ. ಅಲ್ಲದೆ, ದೇಶದಲ್ಲಿ ನೇರವಾಗಿ ಗ್ರಾಹಕರಿಗೆ ಸಾಲ ನೀಡುವ ಪರವಾನಗಿ ಪಡೆಯಲಾಗಿದೆ ಎಂದು ತಿಳಿಸಿದೆ.

  • ಆಕ್ಸಿಯೊ 12 ವರ್ಷದ ಹಳೆಯದಾದ ಫಿನ್‌ಟೆಕ್‌ ಕಂಪನಿಯಾಗಿದೆ. ಸಣ್ಣ ಗ್ರಾಹಕರು ಮತ್ತು ಸಣ್ಣ ಉದ್ದಿಮೆಗಳಿಗೆ ಸಾಲವನ್ನು ನೀಡುತ್ತದೆ.
  • 2018ರಿಂದ ಅಮೆಜಾನ್‌, ಆಕ್ಸಿಯೊ ಜೊತೆಗೆ ಒಪ್ಪಂದ ಮಾಡಿಕೊಂಡು ಸಾಲವನ್ನು ನೀಡುತ್ತಿತ್ತು. ಕಳೆದ ಡಿಸೆಂಬರ್‌ನಿಂದ ಸ್ವಾಧೀನ ಪ್ರಕ್ರಿಯೆ ಮಾತುಕತೆ ನಡೆಯುತ್ತಿತ್ತು. ಜೂನ್‌ನಲ್ಲಿ ಆರ್‌ಬಿಐ ಒಪ್ಪಂದಕ್ಕೆ ಅನುಮೋದಿಸಿದೆ.
  • ಆಕ್ಸಿಯೊ ಸ್ವಾಧೀನದಿಂದ ಅಮೆಜಾನ್‌ ತನ್ನ ವೇದಿಕೆಯ ಮೂಲಕ ಗ್ರಾಹಕರಿಗೆ ಮತ್ತು ಸಣ್ಣ ಹಾಗೂ ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ ವಿವಿಧ ರೀತಿಯ ಸಾಲವನ್ನು ನೀಡಲು ಯೋಜಿಸಿದೆ.
  • ದೇಶದಲ್ಲಿ ಫ್ಲಿಪ್‌ಕಾರ್ಟ್‌ ಸೇರಿದಂತೆ ಬಹುತೇಕ ಇ–ಕಾಮರ್ಸ್‌ ಕಂಪನಿಗಳು ಬ್ಯಾಂಕ್‌ ಮತ್ತು ಬ್ಯಾಂಕೇತರ ಸಂಸ್ಥೆಗಳ ಜೊತೆ ಪಾಲುದಾರಿಕೆ ಮಾಡಿಕೊಂಡು ಸಾಲ ನೀಡುತ್ತವೆ. ಆದರೆ, ಅಮೆಜಾನ್‌ ಈಗ ನೇರವಾಗಿ ಸಾಲ ನೀಡುವ ಪರವಾನಗಿ ಪಡೆದಿದೆ.

ಸಾಮಾನ್ಯ ಅಧ್ಯಯನ 1:

ಜಿಎಸ್‌ಟಿ: ತುಟ್ಟಿಯಾಗಲಿರುವ ಐಪಿಎಲ್‌ ಟಿಕೆಟ್

ಸಂದರ್ಭ: ಮುಂದಿನ ಆವೃತ್ತಿಯಿಂದ ಐಪಿಎಲ್‌ ಪಂದ್ಯ ವೀಕ್ಷಿಸಲು ಹೋಗುವವರು ಟಿಕೆಟ್‌ಗೆ ಹೆಚ್ಚಿನ ಹಣ ತೆರ ಬೇಕಾಗುತ್ತದೆ. ಸರ್ಕಾರ, ಇಂಥ ಪಂದ್ಯಗಳ ಟಿಕೆಟ್‌ಗೆ ವಿಧಿಸುವ ಜಿಎಸ್‌ಟಿಯನ್ನು ಶೇ 28 ರಿಂದ 40ರ ವ್ಯಾಪ್ತಿಗೆ ತಂದಿದೆ.

  • ‘ಕ್ಯಾಸಿನೊ, ರೇಸ್‌ ಕ್ಲಬ್‌ಗಳ ಪ್ರವೇಶ ಅಥವಾ ಐಪಿಎಲ್‌ನಂಥ ಕ್ರೀಡಾ ಕಾರ್ಯ ಕ್ರಮಗಳಿಗೆ ಪ್ರವೇಶದ ಟಿಕೆಟ್‌ಗಳ ಮೇಲೆ ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌ ಜೊತೆ ಶೇ 40 ಜಿಎಸ್‌ಟಿ ವಿಧಿಸಲಾಗುತ್ತಿದೆ.
  • ₹500 ಮೂಲದರದ ಟಿಕೆಟ್‌ಗೆ ಈ ಹಿಂದೆ ಶೇ 28 ಜಿಎಸ್‌ಟಿ ಸೇರಿ ₹640 ಆಗುತಿತ್ತು. ಈಗ ಶೇ 40 ಜಿಎಸ್‌ಟಿ ಹೇರಿಕೆ ಯಿಂದ ಟಿಕೆಟ್‌ ದರ ₹700 ಆಗಲಿದೆ.
  • ಐಪಿಎಲ್‌ ಟಿಕೆಟ್‌ಗಳನ್ನು ‘ಐಷಾರಾಮಿ ಸರಕು’ಗಳ ವ್ಯಾಪ್ತಿಗೆ ತರಲಾಗಿದೆ.
  • ಆದರೆ ಅಂತರರಾಷ್ಟ್ರೀಯ ಪಂದ್ಯಗಳ ಟಿಕೆಟ್‌ ದರ ಕೊಂಚ ಅಗ್ಗವಾಗಲಿದೆ. ಇತರೆ ಕ್ರೀಡಾ ಚಟುವಟಿಕೆಯಡಿ ಬರುವುದರಿಂದ ಈ ಪಂದ್ಯಗಳ ಟಿಕೆಟ್‌ ಮೇಲೆ ಶೇ 18 ಜಿಎಸ್‌ಟಿ ಮಾತ್ರ ವಿಧಿಸಲಾಗುತ್ತದೆ.

ಸಾಮಾನ್ಯ ಅಧ್ಯಯನ 2: ರಾಜ್ಯ ಚುನಾವಣಾ ಆಯೋಗ; ಸ್ಥಳೀಯ ಸಂಸ್ಥೆಗಳ ಚುನಾವಣೆ

ಪ್ರತ್ಯೇಕ ಮತ ಪಟ್ಟಿ, ಬ್ಯಾಲಟ್ ಪೇಪರ್

ಸಂದರ್ಭ: ತನ್ನ ವ್ಯಾಪ್ತಿಯಲ್ಲಿರುವ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬದಲು ಮತ ಪತ್ರ (ಬ್ಯಾಲಟ್ ಪೇಪರ್) ಬಳಕೆ ಹಾಗೂ ರಾಜ್ಯ ಚುನಾವಣಾ ಆಯೋಗದ ನೇತೃತ್ವದಲ್ಲಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ.

  • ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ವೂ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳಿಗೆ ಹೊಸ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕಾರ ನೀಡಲು ಸರ್ಕಾರ ತೀರ್ಮಾನಿಸಿದೆ.
  • ಈ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತ ಯಂತ್ರ (ಇವಿಎಂ) ಬದಲಿಗೆ ಮತ ಪತ್ರ (ಬ್ಯಾಲಟ್ ಪೇಪರ್) ಬಳಸಿ ಮತ ಚಲಾಯಿಸುವ ವ್ಯವಸ್ಥೆಯನ್ನು ಜಾರಿ ಮಾಡಲು ನಿರ್ಧರಿಸಲಾಗಿದೆ.
  • ಇವೆರಡೂ ವಿಷಯಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗುವುದು. ಮತದಾರರ ಪಟ್ಟಿ ಪರಿಷ್ಕರಿಸಿ, ಹೊಸ ಪಟ್ಟಿ ತಯಾರಿಸಲು ಕಾಯ್ದೆಗೆ ಅಗತ್ಯ ತಿದ್ದುಪಡಿಗಳನ್ನು ಮಾಡಿ ಹೊಸ ನಿಯಮಾವಳಿಗಳನ್ನು ರೂಪಿಸಲಾಗುವುದು’, ನಿಯಮಗಳನ್ನು ಅಂತಿಮಗೊಳಿಸಿ ಸುಗ್ರೀವಾಜ್ಞೆ ಹೊರಡಿಸಲಾಗುವುದು.
  • ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್‌.ಸಂಗ್ರೇಶಿ ಅವರು ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ 2024ರ ಸೆಕ್ಷನ್‌ 35 ಅನ್ನು ಉಲ್ಲೇಖಿಸಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು.
  • ಅದರ ಆಧಾರದ ಮೇರೆಗೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪಂಚಾಯತ್‌ರಾಜ್‌ ಕಾಯ್ದೆ, ಮುನಿಸಿಪಾಲಿಟಿ ಕಾಯ್ದೆಯಲ್ಲೂ ಈ ಅವಕಾಶ ಕಲ್ಪಿಸಲಾಗಿದೆ.
  • ಅಲ್ಲದೇ, ಕೇಂದ್ರ ಚುನಾವಣಾ ಆಯೋಗದಂತೆ ರಾಜ್ಯ ಚುನಾವಣಾ ಆಯೋಗವೂ ಸ್ವಾಯತ್ತ ಸಂಸ್ಥೆ. ಕೇಂದ್ರ ಚುನಾವಣಾ ಆಯೋಗದಷ್ಟೇ ರಾಜ್ಯ ಚುನಾವಣಾ ಆಯೋಗಕ್ಕೂ ಅಧಿಕಾರ ಇದೆ. ಮತದಾರರ ಪಟ್ಟಿಯನ್ನೂ ಸ್ವತಂತ್ರವಾಗಿ ತಯಾರಿಸಬಹುದಾಗಿದೆ.
  • 2010 ಮತ್ತು 2015ರಲ್ಲಿ ನಡೆದ ಬಿಬಿಎಂಪಿ ಚುನಾವಣೆಗಳಲ್ಲಿ ಇವಿಎಂಗಳನ್ನು ಬಳಸಲಾಗಿತ್ತು. ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಇವಿಎಂಗಳನ್ನು ಬಳಸಲಾಗುತ್ತಿತ್ತು. ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಮತಪತ್ರ ಬಳಸಲಾಗುತ್ತಿದೆ. ವಿಧಾನಪರಿಷತ್ ಚುನಾವಣೆಗಳಲ್ಲಿ ಮತಪತ್ರಗಳನ್ನು ಬಳಸಲಾಗುತ್ತಿತ್ತು.

ಸಾಮಾನ್ಯ ಅಧ್ಯಯನ 2: ಲಿಂಗತ್ವ ಅಲ್ಪಸಂಖ್ಯಾತರ ಮತ್ತು ಮಾಜಿ ದೇವದಾಸಿಯರ ಮರು ಸಮೀಕ್ಷೆ

2 ಸಮೀಕ್ಷೆಗಳಿಗೆ ಸಿ.ಎಂ ಚಾಲನೆ

ಸಂದರ್ಭ: ರಾಜ್ಯದಲ್ಲಿ ಸೆ. 15ರಿಂದ ಒಟ್ಟು 45 ಕೆಲಸದ ದಿನ, ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಮತ್ತು 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಮರು ಸಮೀಕ್ಷೆ ನಡೆಯಲಿದೆ. ದೇಶದಲ್ಲೇ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ನಡೆಯುತ್ತಿರುವುದು ವಿಶೇಷ.

  • ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಯಲಿರುವ ಈ ಸಮೀಕ್ಷೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
  • ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ ಈ ಸಮೀಕ್ಷೆಗಳನ್ನು ನಡೆಸಲು ಸರ್ಕಾರ ಉದ್ದೇಶಿಸಿದೆ. ಎರಡೂ ಸಮೀಕ್ಷೆಗಳು ಪ್ರತ್ಯೇಕವಾಗಿ ನಡೆಯಲಿವೆ.
  • ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ‘ಕರ್ಮಣಿ ವೆಬ್ ಅಪ್ಲಿಕೇಷನ್‌’ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಸೇವಾ ಸಿಂಧು ಮೂಲಕ ‘ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ವೆಬ್ ಅಪ್ಲಿಕೇಷನ್‌’ ಸಿದ್ಧಪಡಿಸಲಾಗಿದೆ. 
  • ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಯನ್ನು ಎಲ್ಲ ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳು ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಸಲಾಗುವುದು.
  • ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯು ಅದೇ ಸಮುದಾಯದವರ ಮೂಲಕವೇ ನಡೆಯಲಿರುವುದು ವಿಶೇಷವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಗಳು ತಿಳಿಸಿವೆ.
  • ಮಾಜಿ ದೇವದಾಸಿ ಯರ ಮರು ಸಮೀಕ್ಷೆಯನ್ನು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಳ ಕಚೇರಿಯಲ್ಲಿ ನಡೆಸಲಾಗು ವುದು.

ಸಮೀಕ್ಷೆಗಳ ವೈಶಿಷ್ಟ್ಯ

  • lಮೊಬೈಲ್‌ ಆ್ಯಪ್‌ ಬಳಕೆ
  • lಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಒಳಗೊಂಡ ಸಮಿತಿ
  • lಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಮಾಜಿ ದೇವದಾಸಿ ಮಹಿಳೆಯರ ಸಂಘಟನೆಗಳ ಪ್ರತಿನಿಧಿಗಳನ್ನು ಸೇರಿಸಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಆಂತರಿಕ ಸಮಿತಿ.

ಮಾಜಿ ದೇವದಾಸಿ ಸಮೀಕ್ಷೆ ಎಲ್ಲೆಲ್ಲಿ?

  • ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳು.

ಸಾಮಾನ್ಯ ಅಧ್ಯಯನ 2:

ಡಿ.ಕೆ ಶಿವಕುಮಾರ್‌ ದೇಶದ ಎರಡನೇ ಶ್ರೀಮಂತ ಸಚಿವ

ಸಂದರ್ಭ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇಶದ ಎರಡನೇ ಶ್ರೀಮಂತ ಸಚಿವ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಹೇಳಿದೆ.

  • ರಾಜ್ಯ ವಿಧಾನಸಭೆಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವರು ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಪ್ರಮಾಣಪತ್ರ ಗಳನ್ನು ವಿಶ್ಲೇಷಿಸಿ ಎಡಿಆರ್ ವರದಿ ಬಿಡುಗಡೆ ಮಾಡಿದೆ. 27 ವಿಧಾನಸಭೆಗಳು, 3 ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರದ 652 ಸಚಿವರ ಪೈಕಿ 643 ಸಚಿವರು ಸಲ್ಲಿಸಿರುವ ಪ್ರಮಾಣಪತ್ರಗಳನ್ನು ವಿಶ್ಲೇಷಿಸಲಾಗಿದೆ.
  • ಕರ್ನಾಟಕದಲ್ಲಿ ನೂರು ಕೋಟಿಗಿಂತ ಹೆಚ್ಚು ಆಸ್ತಿ ಇರುವ ಎಂಟು ಸಚಿವರು ಇದ್ದಾರೆ. ಆಂಧ್ರ ಪ್ರದೇಶವು ನಂತರದ ಸ್ಥಾನದಲ್ಲಿದೆ.
  • 643 ಸಚಿವರ ಪೈಕಿ 302 ಮಂದಿ (ಶೇ 47) ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿವೆ. 174 ಸಚಿವರ ವಿರುದ್ಧ (ಶೇ 27) ಗಂಭೀರ ಅಪರಾಧ ಪ್ರಕರಣಗಳಿವೆ. ಈ ಸಚಿವರು ಕೊಲೆ, ಕೊಲೆಯತ್ನ, ಅಪಹರಣ, ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸಚಿವ ಸಂಪುಟದ 72ರಲ್ಲಿ 29 (ಶೇ 40) ಮಂದಿ ವಿರುದ್ಧ ಪ್ರಕರಣಗಳಿವೆ.

ಸಾಮಾನ್ಯ ಅಧ್ಯಯನ 2:

ಐಐಎಸ್‌ಸಿ ಅತ್ಯುತ್ತಮ ವಿವಿ

ಸಂದರ್ಭ: ಕೇಂದ್ರ ಶಿಕ್ಷಣ ಇಲಾಖೆಯು ಬಿಡುಗಡೆಗೊಳಿಸಿದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಸಮಿತಿ–2025ರ (ಎನ್‌ಐಆರ್‌ಎಫ್) ಪಟ್ಟಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು (ಐಐಎಸ್‌ಸಿ) ಸತತ 10ನೇ ವರ್ಷವೂ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಹಿರಿಮೆಗೆ ಪಾತ್ರವಾಗಿದೆ. 

  • ಎನ್‌ಐಆರ್‌ಎಫ್‌ನ 10ನೇ ಆವೃತ್ತಿಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರಕಟಿಸಿದರು.
  • ‘ಸಮಗ್ರ’ ವಿಭಾಗದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ ಮದ್ರಾಸ್‌ (ಐಐಟಿ ಮದ್ರಾಸ್‌) ಸತತ 7ನೇ ವರ್ಷವೂ ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಈ ವಿಭಾಗದಲ್ಲಿ ಬೆಂಗಳೂರಿನ ಐಐಎಸ್‌ಸಿ 2ನೇ ಸ್ಥಾನದಲ್ಲಿದ್ದರೆ, ಐಐಟಿ ಬಾಂಬೆ ಹಾಗೂ ಐಐಟಿ ದೆಹಲಿ ನಂತರದ ಸ್ಥಾನದಲ್ಲಿವೆ.
  • ವಿಶ್ವವಿದ್ಯಾಲಯಗಳ ವಿಭಾಗದಲ್ಲಿ ಬೆಂಗಳೂರಿನ ಐಐಎಸ್‌ಸಿ ಅಗ್ರಸ್ಥಾನದಲ್ಲಿದೆ. ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದ ಈ ಸಂಸ್ಥೆಯು, ಎನ್‌ಐಆರ್‌ಎಫ್ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನಗಳಲ್ಲಿ ಸ್ಥಾನ ಪಡೆದ ಮೊದಲ ಖಾಸಗಿ ಶಿಕ್ಷಣ ಸಂಸ್ಥೆಯಾಗಿದೆ. ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯ ಎರಡನೇ ಸ್ಥಾನದಲ್ಲಿದೆ.
  • ಕಾಲೇಜುಗಳ ವಿಭಾಗದಲ್ಲಿ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜು ಮೊದಲ ಹಾಗೂ ಮಿರಾಂಡಾ ಹೌಸ್‌ ಎರಡನೇ ಸ್ಥಾನದಲ್ಲಿವೆ. ಹಂಸರಾಜ್‌ ಕಾಲೇಜು ಮತ್ತು ಕಿರೋರಿ ಮಾಲ್‌ ಕಾಲೇಜು ನಂತರದ ಸ್ಥಾನದಲ್ಲಿವೆ.
  • ಎಂಜಿನಿಯರಿಂಗ್ ಕಾಲೇಜುಗಳ ಮೊದಲ 10 ಸ್ಥಾನದಲ್ಲಿವೆ 9 ಐಐಟಿಗಳಿವೆ. ಐಐಟಿ ಮದ್ರಾಸ್, ಐಐಟಿ ಬಾಂಬೆ ಹಾಗೂ ಐಐಟಿ ದೆಹಲಿ ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿವೆ. ತಿರುಚನಾಪಳ್ಳಿಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯು (ಎನ್‌ಐಟಿ) ಪಟ್ಟಿಯಲ್ಲಿರುವ ಐಐಟಿಯೇತರ ಸಂಸ್ಥೆಯಾಗಿದೆ.
  • ರಾಜ್ಯದ ಸಂಸ್ಥೆಗಳಿಗೆ ಗೌರವ: ಸುರತ್ಕಲ್‌ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರಶಾಸ್ತ್ರ ಸಂಸ್ಥೆ,  ಕ್ರಮವಾಗಿ 54ನೇ ಹಾಗೂ 60ನೇ ಸ್ಥಾನ ಗಳಿಸಿವೆ. ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಜೆಎಸ್‌ಎಸ್ ಅಕಾಡೆಮಿ 38ನೇ ಮತ್ತು ಕ್ರೈಸ್ಟ್ ವಿಶ್ವವಿದ್ಯಾಲಯ 96ನೇ ಸ್ಥಾನ ಪಡೆದಿವೆ.
  • ಸರ್ಕಾರಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ 50ನೇ ಸ್ಥಾನ ಪಡೆದಿದ್ದು, ರಾಜ್ಯದ ಯಾವುದೇ ಸರ್ಕಾರಿ ಕಾಲೇಜು ಟಾಪ್ 100ರಲ್ಲಿ ಸ್ಥಾನ ಪಡೆದಿಲ್ಲ.
  • ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಇನೋವೇಶನ್‌ ಸಂಸ್ಥೆಗಳಲ್ಲಿ ಎಂ.ಎಸ್. ರಾಮಯ್ಯ ಟೆಕ್ನಾಲಜಿ, ಕ್ರೈಸ್ಟ್‌ ವಿಶ್ವವಿದ್ಯಾಲಯ, ಐಐಟಿ ಧಾರವಾಡ, ಮ್ಯಾನೇಜ್ಮೆಂಟ್‌ ಕಾಲೇಜುಗಳಲ್ಲಿ ಅಲಯನ್ಸ್‌ ವಿಶ್ವವಿದ್ಯಾಲಯ, ವೈದ್ಯಕೀಯ ಸಂಸ್ಥೆಗಳಲ್ಲಿ ಮಣಿಪಾಲ–ಮಂಗಳೂರಿನ ಕಸ್ತೂರಬಾ ಮೆಡಿಕಲ್ ಕಾಲೇಜುಗಳು, ಬೆಂಗಳೂರಿನ ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಬೆಳಗಾವಿಯ ಜೆಎನ್‌ಎಂಸಿ, ಎಂ.ಎಸ್. ರಾಮಯ್ಯ ಕಾಲೇಜು ಸ್ಥಾನ ಪಡೆದಿವೆ.
  • ‘ಕೆಲ ವಿಶ್ವವಿದ್ಯಾಲಯಗಳು ಎನ್‌ಐಆರ್‌ಎಫ್‌ಗೆ ಅರ್ಜಿ ಸಲ್ಲಿಸಿಲ್ಲ. ಬೋಧಕ ಸಿಬ್ಬಂದಿ ಕೊರತೆ, ಸಂಶೋಧನಾ ಚಟುವಟಿಕೆಗಳ ಸ್ಥಗಿತದ ಕಾರಣ ಕೆಲವು ಮಾನ್ಯತೆ ಕಳೆದುಕೊಂಡಿವೆ. ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು ಭಾಗಿಯಾದರೆ ರಾಜ್ಯಕ್ಕೆ ಇನ್ನೂ ಹೆಚ್ಚಿನ ಸ್ಥಾನಗಳು ಲಭಿಸಲಿವೆ’ ಎನ್ನುತ್ತಾರೆ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು.

ಪ್ರಮುಖ ವಿಭಾಗಗಳು

  • lಮ್ಯಾನೇಜ್‌ಮೆಂಟ್‌ ಕಾಲೇಜುಗಳ ವಿಭಾಗದಲ್ಲಿ ಅಹಮದಾಬಾದ್‌ನ ಐಐಎಂ ಮೊದಲ ಸ್ಥಾನಲ್ಲಿದ್ದರೆ ಐಐಎಂ ಬೆಂಗಳೂರು 2ನೇ ಸ್ಥಾನದಲ್ಲಿದೆ
  • lಕಾನೂನು ವಿಭಾಗದಲ್ಲಿ ‘ನ್ಯಾಷನಲ್‌ ಲಾ ಸ್ಕೂಲ್ ಆಫ್‌ ಇಂಡಿಯಾ ಯೂನಿವರ್ಸಿಟಿ’ಯು ಮೊದಲ ಸ್ಥಾನ ಪಡೆದುಕೊಂಡಿದೆ. ದೆಹಲಿಯ ನ್ಯಾಷನಲ್‌ ಲಾ ಯೂನಿವರ್ಸಿಟಿ ಹಾಗೂ ಹೈದರಾಬಾದ್‌ನ ಎನ್‌ಎಎಲ್‌ಎಸ್‌ಎಆರ್‌ ಯೂನಿವರ್ಸಿಟಿ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ
  • lಸಂಶೋಧನಾ ಸಂಸ್ಥೆಗಳ ವಿಭಾಗದಲ್ಲಿ ಬೆಂಗಳೂರಿನ ಐಐಎಸ್‌ಸಿ ಮೊದಲ ಹಾಗೂ ಐಐಟಿ ಮದ್ರಾಸ್‌ 2ನೇ ಸ್ಥಾನದಲ್ಲಿವೆ
  • lಮುಕ್ತ ವಿಶ್ವವಿದ್ಯಾಲಯ ವಿಭಾಗದಲ್ಲಿ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿವಿ ಮೊದಲ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿವಿ ಮೈಸೂರು ಎರಡನೇ ಸ್ಥಾನದಲ್ಲಿದೆ

ಸಾಮಾನ್ಯ ಅಧ್ಯಯನ 2:

ಕುಕಿ ಸಂಘಟನೆ ಜತೆ ಕೇಂದ್ರ ಒಪ್ಪಂದ

ಸಂದರ್ಭ: ಮಣಿಪುರದಲ್ಲಿ ಶಾಶ್ವತ ಶಾಂತಿ ಮತ್ತು ಸ್ಥಿರತೆ ಸ್ಥಾಪಿಸು ವುದೂ ಸೇರಿದಂತೆ ಹಲವು ನಿಯಮಗಳ ಕುರಿತ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಹಾಗೂ ಎರಡು ಪ್ರಮುಖ ಕುಕಿ ಸಂಘಟನೆ ಗಳು ಸಹಿ ಹಾಕಿದವು.

  • ‘ಕುಕಿ ರಾಷ್ಟ್ರೀಯ ಸಂಘಟಣೆ (ಕೆಎನ್‌ಒ) ಮತ್ತು ಯುನೈಟೆಡ್ ಪೀಪಲ್ಸ್ ಫ್ರಂಟ್ (ಯುಪಿಎಫ್) ಕಾರ್ಯಾಚರಣೆ ನಿಗ್ರಹ (ಎಸ್‌ಒಒ) ಒಪ್ಪಂದಕ್ಕೆ ಸಹಿ ಹಾಕಿವೆ.
  • ಕಳೆದ ಕೆಲ ದಿನಗಳಿಂದ ಗೃಹ ಸಚಿವಾಲಯದ ಅಧಿಕಾರಿಗಳು ಮತ್ತು ಕುಕಿ ಗುಂಪುಗಳ ನಿಯೋಗದ ನಡುವೆ ನಡೆದ ಸರಣಿ ಸಭೆಗಳ ಬಳಿಕ ಈ ಒಪ್ಪಂದ ನಡೆದಿದೆ ಎಂದು ಗೃಹ ಸಚಿವಾಲಯ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
  • ದೆಹಲಿಯಲ್ಲಿ ಗೃಹ ಸಚಿವಾಲಯ, ಮಣಿಪುರ ಸರ್ಕಾರ, ಕೆಎನ್‌ಒ ಮತ್ತು ಯುಪಿಎಫ್ ಪ್ರತಿನಿಧಿಗಳ ನಡುವೆ ತ್ರಿಪಕ್ಷೀಯ ಸಭೆ ನಡೆಯಿತು. ಒಪ್ಪಂದಕ್ಕೆ ಸಹಿ ಹಾಕಿದ ದಿನದಿಂದ ಒಂದು ವರ್ಷದ ಅವಧಿಗೆ ಜಾರಿಗೆ ಬರುವಂತೆ ನಿಯಮಗಳು ಮತ್ತು ಷರತ್ತು ಗಳ ಅನ್ವಯ ಎಲ್ಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ’ ಎಂದು ಗೃಹ ಸಚಿವಾಲಯ ತಿಳಿಸಿದೆ.
  • ಮಣಿಪುರದ ಪ್ರಾದೇಶಿಕ ಸಮಗ್ರತೆ ಯನ್ನು ಕಾಪಾಡಿಕೊಳ್ಳಲು ಮತ್ತು ಮಾತುಕತೆಯ ಮೂಲಕ ಶಾಶ್ವತ ಶಾಂತಿ ಮತ್ತು ಸ್ಥಿರತೆಯನ್ನು ತರಲು ಎಲ್ಲರೂ ಒಪ್ಪಿಕೊಂಡಿದ್ದಾರೆ.
  • ಸಂಘರ್ಷ ಪೀಡಿತ ಪ್ರದೇಶಗಳಿಂದ ಏಳು ಶಿಬಿರಗಳನ್ನು ಸ್ಥಳಾಂತರಿಸಬೇಕು. ನಿರಾಶ್ರಿತರ ಶಿಬಿರಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕು. ಹತ್ತಿರದ ಸಿಆರ್‌‍ಪಿಎಫ್‌ ಮತ್ತು ಬಿಎಸ್‌ಎಫ್‌ ಶಿಬಿರ ಗಳಿಗೆ ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸ ಬೇ‌ಕು. ವಿದೇಶಿ ಪ್ರಜೆಗಳನ್ನು ಪಟ್ಟಿಯಿಂದ ತೆಗೆದುಹಾಕುವುದು ಮತ್ತು‌ ಸಂಘಟನೆಯ ಸದಸ್ಯರನ್ನು ಭದ್ರತಾ ಪಡೆಗಳ ಕಟ್ಟುನಿಟ್ಟಿನ ತನಿಖೆಗೆ ಒಳಪಡಿಸಲು ಕೆಎನ್ಒ ಮತ್ತು ಯುಪಿಎಫ್ ಒಪ್ಪಿಕೊಂಡಿವೆ.
  • 2008ರಲ್ಲಿ ಮೊದಲ ಬಾರಿಗೆ ಎಸ್ಒಒ ಒಪ್ಪಂದ ನಡೆದಿತ್ತು. ಬಳಿಕ ಅದನ್ನು ನಿಗದಿತ ಅವಧಿಗೆ ನವೀಕರಿಸ ಲಾಗುತ್ತಿತ್ತು. ಆದರೆ, ಜನಾಂಗೀಯ ಕಲಹದಿಂದಾಗಿ ಫೆಬ್ರುವರಿ 2024ರಿಂದ ಈ ಒಪ್ಪಂದ ಮುಂದುವರಿದಿರಲಿಲ್ಲ.

ಸಾಮಾನ್ಯ ಅಧ್ಯಯನ 2:

ಜೆಪಿಸಿ ರಚನೆ; ಮತ್ತಷ್ಟು ವಿಳಂಬ: ಸಮಿತಿಯಲ್ಲಿ ಸೇರದಿರಲು ಹಲವು ಪಕ್ಷಗಳ ನಿರ್ಧಾರ

ಸಂದರ್ಭ: ಬಂಧನಕ್ಕೆ ಒಳಗಾಗಿ 30 ದಿನ ಜೈಲಿನಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಪದಚ್ಯುತಿಗೊಳಿಸುವುದಕ್ಕೆ ಅನುವು ಮಾಡಿಕೊಡುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಎರಡು ವಾರಗಳು ಕಳೆದಿವೆ. ಆದರೆ ಮಸೂದೆಯನ್ನು ಪರಿಶೀಲಿಸಲಿ ರುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸದಸ್ಯರ ಹೆಸರು ಇನ್ನೂ ಅಂತಿಮಗೊಂಡಿಲ್ಲ.

  • ವಕ್ಫ್‌ (ತಿದ್ದುಪಡಿ) ಮಸೂದೆ– 2024 ಮತ್ತು ‘ಒಂದು ರಾಷ್ಟ್ರ–ಒಂದು ಚುನಾವಣೆ’ಗೆ ಸಂಬಂಧಿಸಿದ ಮಸೂದೆಗಳ ಪರಿಶೀಲನೆಗೆ ಜೆಪಿಸಿ ರಚನೆ ಪ್ರಕ್ರಿಯೆ ತ್ವರಿತವಾಗಿ ನಡೆದಿತ್ತು. ಆದರೆ ಈ ಮಸೂದೆಯ ವಿಚಾರದಲ್ಲಿ ಜೆಪಿಸಿ ರಚನೆ ವಿಳಂಬವಾಗಿದೆ.
  • ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಹುದ್ದೆಯಿಂದ ಪದಚ್ಯುತಿ ಗೊಳಿಸಲು ಸಾಧ್ಯವಾಗುವಂತಹ ಮೂರು ಮಸೂದೆಗಳನ್ನು ಗೃಹ ಸಚಿವ ಅಮಿತ್ ಶಾ ಅವರು ಆಗಸ್ಟ್‌ 20ರಂದು ಲೋಕಸಭೆಯಲ್ಲಿ ಮಂಡಿಸಿದ್ದರು. ಸಂವಿಧಾನ (130ನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಸರ್ಕಾರ ತಿದ್ದುಪಡಿ ಮಸೂದೆ, ಜಮ್ಮು ಮತ್ತು ಕಾಶ್ಮೀರ ಪುನರ್‌ರಚನೆ ತಿದ್ದುಪಡಿ ಮಸೂದೆ– 2025 ಗಳನ್ನು ಪರಿಶೀಲನೆಗೆ ಜೆಪಿಸಿಗೆ ಒಪ್ಪಿಸಲಾಗಿದೆ ಎಂದು ಶಾ ಹೇಳಿದ್ದರು.
  • ತೃಣಮೂಲ ಕಾಂಗ್ರೆಸ್‌ (ಟಿಎಂಸಿ), ಸಮಾಜವಾದಿ ಪಾರ್ಟಿ (ಎಸ್‌ಪಿ), ಎಎಪಿ ಮತ್ತು ಶಿವಸೇನಾ (ಯುಬಿಟಿ) ಪಕ್ಷಗಳು ಜೆಪಿಸಿ ಸೇರುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿವೆ. ಈ ಮಸೂದೆ ‘ರಾಜಕೀಯ ಅಸ್ತ್ರ’ವಾಗಿ ಬಳಕೆಯಾಗಬಹುದು ಎಂಬುದು ಈ ಪಕ್ಷಗಳ ಆರೋಪ.
  • ಜೆಪಿಸಿ ಸೇರುವ ಕುರಿತು ಕಾಂಗ್ರೆಸ್ ಪಕ್ಷ ಇದುವರೆಗೂ ಲೋಕಸಭಾ ಸಚಿವಾಲಯಕ್ಕೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಸಮಿತಿ ಸೇರುವ ಬಗ್ಗೆ ಪಕ್ಷದೊಳಗೆ ಹಾಗೂ ‘ಇಂಡಿಯಾ’ ಮೈತ್ರಿಕೂಟ ದಲ್ಲಿ ಭಿನ್ನಾಭಿಪ್ರಾಯ ಇದೆ. ತನ್ನ ನಿರ್ಧಾರವನ್ನು ಇನ್ನೂ ಬಹಿರಂಗಪಡಿಸ ದಿರುವ ಆರ್‌ಜೆಡಿಗೆ ಕೂಡ ಸಮಿತಿಗೆ ಸೇರುವ ಇಷ್ಟವಿಲ್ಲ.

ಸಾಮಾನ್ಯ ಅಧ್ಯಯನ 3: ಎ.ಐ ನಗರ

ಬಿಡದಿಯಲ್ಲಿ ದೇಶದ ಮೊದಲ ಎ.ಐ ನಗರ

ಸಂದರ್ಭ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಬಿಡದಿಯಲ್ಲಿ ನಿರ್ಮಾಣವಾಗಲಿರುವ ಬಿಡದಿ ಸಮಗ್ರ ಉಪನಗರ ಯೋಜನೆ ಅಡಿ ‘ಕೆಲಸ, ವಾಸ, ಉಲ್ಲಾಸ’ ಪರಿಕಲ್ಪನೆ ಅಡಿ ದೇಶದಲ್ಲೇ ಮೊದಲ ಕೃತಕ ಬುದ್ಧಿಮತ್ತೆ (ಎ.ಐ) ನಗರವನ್ನು ಅಭಿವೃದ್ಧಿಪಡಿಸಲಾಗುವುದು.

  • ಯೋಜನೆಗಾಗಿ ಒಂಬತ್ತು ಗ್ರಾಮಗಳ 8,493 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗುವುದು. ಭೂಮಿ ಕೊಟ್ಟವರಿಗೆ 2013ರ ಭೂ ಸ್ವಾಧೀನ ಕಾಯ್ದೆ ಅಡಿ ಪ್ರಸಕ್ತ ಮಾರುಕಟ್ಟೆ ದರದಲ್ಲಿ ಪ್ರತಿ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೆ ಪರಿಹಾರ ನೀಡಲಾಗುವುದು. ಒಪ್ಪಿಗೆ ಪತ್ರ ಕೊಟ್ಟವರಿಗೆ ಮೂರು ದಿನದಲ್ಲಿ ಪರಿಹಾರದ ಚೆಕ್ ವಿತರಿಸಲಾಗುವುದು ಎಂದು ಭರವಸೆ ನೀಡಿದರು.
  • ‘ಪರಿಹಾರದ ಬದಲು ಯೋಜನೆಯ ಸಹಭಾಗಿತ್ವ ಪಡೆಯಲು ಮುಂದೆ ಬರುವ ರೈತರಿಗೆ, ವಸತಿ ಉದ್ದೇಶಕ್ಕೆ ಅಭಿವೃದ್ಧಿಪಡಿಸುವ ಬಡಾವಣೆಗಳಲ್ಲಿ 50:50 ಅನುಪಾತದಲ್ಲಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಅಭಿವೃದ್ಧಿ ಪಡಿಸುವ ಪ್ರದೇಶದಲ್ಲಿ 45:55 ಅನುಪಾತದಲ್ಲಿ ನಿವೇಶನ ಒದಗಿಸಲಾಗುವುದು.
  • ಯೋಜನೆಯ ಅಂತಿಮ ಅಧಿಸೂಚನೆ ದಿನಾಂಕದಿಂದ ಪರಿಹಾರ ನೀಡುವುವರೆಗೆ ಹಾಗೂ ಅಭಿವೃದ್ಧಿ ಪಡಿಸಿದ ಜಾಗವನ್ನು ಮಾಲೀಕರಿಗೆ ಹಸ್ತಾಂತರ ಮಾಡುವವರೆಗೆ ಜೀವನೋಪಾಯದ ಬೆಂಬಲಕ್ಕಾಗಿ ಪ್ರತ್ಯೇಕವಾಗಿ ವಾರ್ಷಿಕ ಪರಿಹಾರ ನೀಡಲಾಗುವುದು.
  • ವರ್ಷಕ್ಕೆ ಪ್ರತಿ ಎಕರೆ ಖುಷ್ಕಿ ಜಮೀನಿಗೆ (ಒಣಭೂಮಿ) ₹30 ಸಾವಿರ, ತರಿಗೆ ಜಮೀನಿಗೆ (ಮಳೆ ಅಥವಾ ನೀರಾವರಿಯಿಲ್ಲದೆ ವ್ಯವಸಾಯ ಮಾಡುವ ಭೂಮಿ) ₹40 ಸಾವಿರ, ಭಾಗಾಯ್ತು ಭೂಮಿಗೆ (ನೀರಾವರಿ ಅಥವಾ ಮಳೆಯಾಶ್ರಿತ ತೋಟ) ₹50 ಸಾವಿರ ಹಾಗೂ ಭೂರಹಿತ ಕುಟುಂಬಕ್ಕೆ ₹25 ಸಾವಿರ ನೀಡಲಾಗುವುದು.

ಸಾಮಾನ್ಯ ಅಧ್ಯಯನ 3:

ಶಿಶು ಮರಣ ಪ್ರಮಾಣ ಶೇ 37ರಷ್ಟು ಇಳಿಕೆ

ಸಂದರ್ಭ: ದೇಶದಲ್ಲಿ ಶಿಶುಗಳ ಮರಣ ಪ್ರಮಾಣದಲ್ಲಿ (ಐಎಂಆರ್‌) ಗಣನೀಯ ಇಳಿಕೆ ದಾಖಲಾಗಿದೆ. 2013ಕ್ಕೆ ಹೋಲಿಸಿದರೆ 2023ರಲ್ಲಿ ಶಿಶುಗಳ ಮರಣ ಪ್ರಮಾಣವು ದಾಖಲೆಯ ಶೇ 37ರಷ್ಟು ಕಡಿಮೆಯಾಗಿದೆ.

  • ರಿಜಿಸ್ಟ್ರಾರ್‌ ಜನರಲ್‌ ಆಫ್‌ ಇಂಡಿಯಾ ಬಿಡುಗಡೆಗೊಳಿಸಿರುವ 2023ರ ಮಾದರಿ ನೋಂದಣಿ ವರದಿಯಲ್ಲಿ ಈ ವಿವರಗಳನ್ನು ನೀಡಲಾಗಿದೆ.
  • ಒಂದು ವರ್ಷದಲ್ಲಿ ಜನಿಸಿದ ಪ್ರತಿ ಸಾವಿರ ಮಗುವಿನ ಪೈಕಿ ಮರಣ ಹೊಂದಿದ ಮಕ್ಕಳ ಸಂಖ್ಯೆಯನ್ನು ಪರಿಗಣಿಸಿ ಈ ದತ್ತಾಂಶ ನಿಗದಿಪಡಿಸಲಾಗುತ್ತದೆ.
  • 2013ರಲ್ಲಿ ಶೇ 40ಕ್ಕೆ ತಲುಪಿದ್ದ ಶಿಶುಗಳ ಮರಣ ಪ್ರಮಾಣವು 2023ರ ವೇಳೆಗೆ 25ಕ್ಕೆ ಇಳಿಕೆಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
  • ಅಲ್ಲದೇ, 1971ಕ್ಕೆ ಹೋಲಿಸಿದರೆ ಶಿಶುಗಳ ಮರಣ ಪ್ರಮಾಣವು 2023ರ ವೇಳೆಗೆ ಬರೋಬ್ಬರಿ ಶೇ 80ರಷ್ಟು ಇಳಿಕೆಯಾಗಿದೆ. 1971ರಲ್ಲಿ ಶಿಶುಗಳ ಮರಣ ಸಂಖ್ಯೆಯು 129 ಆಗಿತ್ತು ಎಂದೂ ವರದಿ ಉಲ್ಲೇಖಿಸಿದೆ. 

ಪ್ರಚಲಿತ ವಿದ್ಯಮಾನಗಳು: 4ನೇ ಸೆಪ್ಟೆಂಬರ್ 2025

  • ಜಿಎಸ್ಟಿ ಕಡಿತ: ದಸರಾ ಉಡುಗೊರೆ

ಸಂದರ್ಭ: ಹೇರ್‌ ಆಯಿಲ್‌ನಿಂದ ಸೇರಿದಂತೆ ಕಾರ್ನ್‌ಫ್ಲೇಕ್ಸ್‌, ಟಿವಿ ಸೆಟ್‌ಗಳಿಂದ ಹಿಡಿದು ಆರೋಗ್ಯ ಮತ್ತು ಜೀವ ವಿಮೆ ಪಾಲಿಸಿ ವರೆಗಿನ ಸಾಮಾನ್ಯ ಜನರು ಬಳಸುವ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳನ್ನು ಪರಿಷ್ಕರಿಸುವ ಮಹತ್ವದ ನಿರ್ಧಾರವನ್ನು ಜಿಎಸ್‌ಟಿ ಮಂಡಳಿ ತೆಗೆದುಕೊಂಡಿದೆ.

  • ಅವಧಿ ವಿಮೆ, ಯುಲಿಪ್‌ ಅಥವಾ ಎಂಡೋಮೆಂಟ್ ಪಾಲಿಸಿ ಸೇರಿ ವೈಯಕ್ತಿಕ ಜೀವ ವಿಮೆ ಮತ್ತು ಆರೋಗ್ಯ ವಿಮೆ ಪಾಲಿಸಿಗಳ ಪ್ರೀಮಿಯಮ್‌ಗೆ ಜಿಎಸ್‌ಟಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಹೆಚ್ಚು ಜನರಿಗೆ ವಿಮಾ ಸೌಲಭ್ಯ ತಲುಪಲಿ ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
  • ಫ್ಯಾಮಿಲಿ ಫ್ಲೋಟರ್ ಪಾಲಿಸಿಗಳು, ಹಿರಿಯ ನಾಗರಿಕರ ಆರೋಗ್ಯ ವಿಮೆ ಪಾಲಿಸಿಗಳ ಪ್ರೀಮಿಯಂಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗಿದೆ. 2017ರಲ್ಲಿ ತೆರಿಗೆ ವ್ಯವಸ್ಥೆ ಜಾರಿಗೆ ಬಂದಾಗಿನಿಂದ ವಿಮಾ ಉತ್ಪನ್ನಗಳ ಪ್ರೀಮಿಯಂ ಮೇಲೆ ಶೇ 18ರಷ್ಟು ಜಿಎಸ್ಟಿ ವಿಧಿಸಲಾಗುತ್ತಿತ್ತು.
  • ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ಈಗ ಇರುವ ನಾಲ್ಕು ತೆರಿಗೆ ಹಂತಗಳನ್ನು ಎರಡು ಹಂತಗಳಿಗೆ ತಗ್ಗಿಸುವ ಪ್ರಸ್ತಾವಕ್ಕೆ ಮಂಡಳಿಯು ಒಪ್ಪಿಗೆ ನೀಡಿದೆ.
  • ಎರಡು ತೆರಿಗೆ ಹಂತಗಳ (ಶೇ 5 ಮತ್ತು ಶೇ 18) ಹೊಸ ವ್ಯವಸ್ಥೆಯು ನವರಾತ್ರಿಯ ಮೊದಲ ದಿನವಾದ ಸೆಪ್ಟೆಂಬರ್‌ 22ರಿಂದ ಜಾರಿಗೆ ಬರಲಿದೆ. ಮೂಲಕ ದೇಶದ ಜನರಿಗೆ ಕೇಂದ್ರ ಸರ್ಕಾರ ದಸರಾ ಭರ್ಜರಿ ಉಡುಗೊರೆ ನೀಡಿದೆ.
  • ಮಂಡಳಿ ಸಭೆ ಬಳಿಕ ಸುದ್ದಿಗೋಷ್ಠಿ ಯಲ್ಲಿ ವಿವರಣೆ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ಜಿಎಸ್‌ಟಿ ದರ ಪರಿಷ್ಕರಣೆ ಕುರಿತಂತೆ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಯಾವ ರಾಜ್ಯವೂ ಭಿನ್ನಾಭಿಪ್ರಾಯ ವ್ಯಕ್ತಪಡಿಸಿಲ್ಲ’ ಎಂದರು.
  • ‘ಪ್ರಸ್ತುತ ಶೇ 5, 12, 18 ಹಾಗೂ ಶೇ 28ರಂತೆ ತೆರಿಗೆ ಹಂತಗಳಿವೆ. ಇವುಗಳನ್ನು ಪರಿಷ್ಕರಿಸಿ, ಕೇವಲ ಶೇ 5 ಹಾಗೂ ಶೇ 18ರಂತೆ ಎರಡು ಹಂತಗಳ ಜಿಎಸ್‌ಟಿ ವ್ಯವಸ್ಥೆ ಜಾರಿಗೊಳಿಸಲಾಗುವುದು. ಹೈಎಂಡ್‌ ಕಾರುಗಳು, ತಂಬಾಕು ಹಾಗೂ ಸಿಗರೇಟ್‌ಗಳು ಸೇರಿ ಕೆಲ ಐಷಾರಾಮಿ ವಸ್ತುಗಳ ಮೇಲೆ ವಿಶೇಷ ಶೇ 40ರಷ್ಟು ಜಿಎಸ್‌ಟಿ ವಿಧಿಸಲು ಮಂಡಳಿ ಅನುಮೋದಿಸಿದೆ’ ಎಂದು ವಿವರಿಸಿದರು.
  • ‘ಗುಟ್ಕಾ, ತಂಬಾಕು ಮತ್ತು ತಂಬಾಕು ಉತ್ಪನ್ನಗಳು ಹಾಗೂ ಸಿಗರೇಟ್‌ ಹೊರತುಪಡಿಸಿ, ಉಳಿದ ಎಲ್ಲ ವಸ್ತುಗಳ ಮೇಲಿನ ಹೊಸ ದರಗಳು ಸೆಪ್ಟೆಂಬರ್ 22ರಿಂದ ಜಾರಿಗೆ ಬರಲಿವೆ’ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.
  • ಜಿಎಸ್‌ಟಿ ವ್ಯವಸ್ಥೆಯ ಸರಳೀಕರಣ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವ ಅಂಗವಾಗಿ ಮಾಡಿದ ಭಾಷಣದಲ್ಲಿ ಘೋಷಿಸಿದ್ದರು. ಅಲ್ಲದೇ, ಅಮೆರಿಕವು ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ 50ರಷ್ಟು ಸುಂಕ ವಿಧಿಸಿರುವ ಸಂದರ್ಭದಲ್ಲಿಯೇ ಈ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸುಧಾರಣೆ ತಂದಿl 1,200 ಸಿ.ಸಿಗಿಂತ ಅಧಿಕ ಸಾಮರ್ಥ್ಯದ ಹಾಗೂ 4 ಸಾವಿರ ಎಂ.ಎಂ ಉದ್ದದ ಎಲ್ಲ ಆಟೊಮೊಬೈಲ್‌ಗಳು, 350 ಸಿ.ಸಿಗಿಂತ ಹೆಚ್ಚು ಸಾಮರ್ಥ್ಯದ ಮೋಟರ್‌ ಸೈಕಲ್‌ಗಳು, ಯಾಚ್‌ಗಳು, ವೈಯಕ್ತಿಕ ಬಳಕೆಯ ಏರ್‌ಕ್ರಾಫ್ಟ್‌ಗಳು, ರೇಸಿಂಗ್‌ ಕಾರುಗಳ ಮೇಲೆ ಶೇ 40ರಷ್ಟು ತೆರಿಗೆ.
  • l 1,200 ಸಿ.ಸಿಗಿಂತ ಅಧಿಕ ಸಾಮರ್ಥ್ಯದ ಹಾಗೂ 4 ಸಾವಿರ ಎಂ.ಎಂ ಉದ್ದದ ಎಲ್ಲ ಆಟೊಮೊಬೈಲ್ಗಳು, 350 ಸಿ.ಸಿಗಿಂತ ಹೆಚ್ಚು ಸಾಮರ್ಥ್ಯದ ಮೋಟರ್ಸೈಕಲ್ಗಳು, ಯಾಚ್ಗಳು, ವೈಯಕ್ತಿಕ ಬಳಕೆಯ ಏರ್ಕ್ರಾಫ್ಟ್ಗಳು, ರೇಸಿಂಗ್ಕಾರುಗಳ ಮೇಲೆ ಶೇ 40ರಷ್ಟು ತೆರಿಗೆ.
  • l ಎಲ್ಲ .ವಿಗಳ ಮೇಲೆ ಈಗ ಇರುವ ಶೇ 5ರಷ್ಟು ಜಿಎಸ್ಟಿ ಮುಂದುವರಿಕೆ.

  • ಎಫ್ಡಿಐ: ಕರ್ನಾಟಕಕ್ಕೆ ಹೆಚ್ಚು

ಸಂದರ್ಭ: ಜೂನ್‌ ತ್ರೈಮಾಸಿಕದಲ್ಲಿ ದೇಶದಲ್ಲಿನ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಪ್ರಮಾಣ ಶೇ 15ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

  • ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹1.42 ಲಕ್ಷ ಕೋಟಿ ವಿದೇಶಿ ನೇರ ಹೂಡಿಕೆ ಆಗಿತ್ತು. ಈ ಬಾರಿ ಇದು ₹1.63 ಲಕ್ಷ ಕೋಟಿ ಆಗಿದೆ. ಇದು ಮಾರ್ಚ್ ತ್ರೈಮಾಸಿಕದಲ್ಲಿ ₹82,210 ಕೋಟಿಯಷ್ಟಾಗಿತ್ತು.
  • ಈಕ್ವಿಟಿ ಒಳಹರಿವು, ಗಳಿಕೆಯ ಮರುಹೂಡಿಕೆ ಮತ್ತು ಇತರೆ ಬಂಡವಾಳ ಹೂಡಿಕೆಯು ಹೆಚ್ಚಳವಾಗಿದ್ದು, ಒಟ್ಟು ಹೂಡಿಕೆ ₹2.21 ಲಕ್ಷ ಕೋಟಿಯಾಗಿದೆ. ಕಳೆದ ಜೂನ್ ತ್ರೈಮಾಸಿಕದಲ್ಲಿ ₹1.98 ಲಕ್ಷ ಕೋಟಿಯಾಗಿತ್ತು.
  • ಕರ್ನಾಟಕ ಮುಂಚೂಣಿ: ರಾಜ್ಯಗಳು ಸ್ವೀಕರಿಸಿದ ವಿದೇಶಿ ಬಂಡವಾಳ ಪಟ್ಟಿಯಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದ್ದು, ₹50,094 ಕೋಟಿ ಸ್ವೀಕರಿಸಿದೆ. ನಂತರದ ಸ್ಥಾನಗಳಲ್ಲಿ ಮಹಾರಾಷ್ಟ್ರ (₹47,188 ಕೋಟಿ), ತಮಿಳುನಾಡು (₹23,505 ಕೋಟಿ), ಹರಿಯಾಣ (₹11,444 ಕೋಟಿ), ಗುಜರಾತ್ (₹10,564 ಕೋಟಿ), ದೆಹಲಿ (₹8,803 ಕೋಟಿ) ಮತ್ತು ತೆಲಂಗಾಣ (₹3,477 ಕೋಟಿ) ಇವೆ.
  • ಇದೇ ಅವಧಿಯಲ್ಲಿ ಅಮೆರಿಕದ ಹೂಡಿಕೆಯ ಪ್ರಮಾಣದಲ್ಲಿ ಮೂರು ಪಟ್ಟು ಏರಿಕೆಯಾಗಿದೆ. ಭಾರತದಲ್ಲಿ ಅತಿ ಹೆಚ್ಚು ಹೂಡಿಕೆ ಮಾಡಿದ ದೇಶ ಅಮೆರಿಕ. ಒಟ್ಟು ₹49,379 ಕೋಟಿ ಹೂಡಿಕೆ ಈ ತ್ರೈಮಾಸಿಕದಲ್ಲಿ ಅಮೆರಿಕದಿಂದ ಆಗಿದೆ. ಕಳೆದ ಆರ್ಥಿಕ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ₹13,205 ಕೋಟಿ ಬಂಡವಾಳ ಒಳಹರಿವಾಗಿತ್ತು.
  • ಜೂನ್‌ ತ್ರೈಮಾಸಿಕದಲ್ಲಿ ಹೂಡಿಕೆ ಮಾಡಿದ ದೇಶಗಳ ಪೈಕಿ ಸಿಂಗಪುರ, ಮಾರಿಷಸ್, ಸೈಪ್ರಸ್, ಯುಎಇ, ಕೇಮನ್ ಐಸ್‌ಲ್ಯಾಂಡ್, ನೆದರ್ಲೆಂಡ್ಸ್, ಜಪಾನ್‌ ಮತ್ತು ಜರ್ಮನಿ ನಂತರದ ಸ್ಥಾನಗಳಲ್ಲಿ ಇವೆ.
  • 2000ದ ಏಪ್ರಿಲ್‌ನಿಂದ 2025ರ ವರೆಗೆ ಅಮೆರಿಕ ₹6.71 ಲಕ್ಷ ಕೋಟಿ ಹೂಡಿಕೆ ಮಾಡಿದೆ. ಈ ಮೂಲಕ ಮೂರನೇ ಅತಿಹೆಚ್ಚು ಎಫ್‌ಡಿಐ ಹೂಡಿಕೆ ಮಾಡಿದ ದೇಶವಾಗಿದೆ. ಮಾರಿಷಸ್‌ ₹16.04 ಲಕ್ಷ ಕೋಟಿ ಹೂಡಿಕೆ ಮಾಡಿದ್ದು, ಅತಿ ಹೆಚ್ಚು ಹೂಡಿಕೆ ಮಾಡಿದ ದೇಶವಾಗಿದೆ. ಸಿಂಗಪುರ ಎರಡನೇ ಸ್ಥಾನದಲ್ಲಿದ್ದು, ₹15.80 ಲಕ್ಷ ಕೋಟಿಯಾಗಿದೆ.
  • ಕಂಪ್ಯೂಟರ್‌ ಯಂತ್ರಾಂಶ ಹಾಗೂ ತಂತ್ರಾಂಶ, ಸೇವೆಗಳು, ವ್ಯಾಪಾರ, ದೂರಸಂಪರ್ಕ, ವಾಹನೋದ್ಯಮ, ರಾಸಾಯನಿಕ ವಲಯಗಳು ಹೆಚ್ಚು ಹೂಡಿಕೆ ಸ್ವೀಕರಿಸಿವೆ ಎಂದು ತಿಳಿಸಿದೆ.
  • ಸೇವಾ ವಲಯದ ಪ್ರಗತಿ 15 ವರ್ಷದ ಗರಿಷ್ಠ

ಸಂದರ್ಭ: ದೇಶದ ಸೇವಾ ವಲಯದ ಬೆಳವಣಿಗೆ ಆಗಸ್ಟ್‌ ತಿಂಗಳಿನಲ್ಲಿ 15 ವರ್ಷದ ಗರಿಷ್ಠ ಮಟ್ಟಕ್ಕೆ ಏರಿಕೆ ದಾಖಲಿಸಿದೆ ಎಂದು ಮಾಸಿಕ ಸಮೀಕ್ಷೆಯೊಂದು ತಿಳಿಸಿದೆ.

  • ಎಚ್‌ಎಸ್‌ಬಿಸಿ ಇಂಡಿಯಾ ಸರ್ವಿಸಸ್ ಪಿಎಂಐ ಬ್ಯುಸಿನೆಸ್ ಆ್ಯಕ್ಟಿವಿಟಿ ಸೂಚ್ಯಂಕವು ಜುಲೈನಲ್ಲಿ 60.5 ದಾಖಲಾಗಿತ್ತು. ಆಗಸ್ಟ್‌ನಲ್ಲಿ 62.9ಕ್ಕೆ ಹೆಚ್ಚಳ ಕಂಡಿದೆ. ಹೊಸ ಕಾರ್ಯಾದೇಶ ಮತ್ತು ಉತ್ಪಾದನೆಯಲ್ಲಿ ಹೆಚ್ಚಳವಾಗಿರುವುದೇ ಸೂಚ್ಯಂಕ ಏರಿಕೆಗೆ ಕಾರಣ ಎನ್ನಲಾಗಿದೆ.
  • ಪಿಎಂಐ ಮಾನದಂಡಗಳ ಪ್ರಕಾರ ಸೂಚ್ಯಂಕವು 50ಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇದ್ದರೆ ಅದನ್ನು ಬೆಳವಣಿಗೆ ಎಂದು ಪರಿಗಣಿಸಲಾಗುತ್ತದೆ. 50ಕ್ಕಿಂತ ಕಡಿಮೆ ಇದ್ದರೆ ಅದನ್ನು ಕುಸಿತವೆಂದು ಕಾಣಲಾಗುತ್ತದೆ.
  • ‘ರಫ್ತು ಹೆಚ್ಚಳಗೊಂಡಿದ್ದರಿಂದ ಒಟ್ಟಾರೆ ಮಾರಾಟ ಏರಿಕೆ ಕಂಡಿದೆ. ಏಷ್ಯಾ, ಯುರೋಪ್‌, ಪಶ್ಚಿಮ ಏಷ್ಯಾ ಮತ್ತು ಅಮೆರಿಕದಿಂದ ವಲಯಕ್ಕೆ ಹೆಚ್ಚಿನ ಬೇಡಿಕೆ ಉಂಟಾಗಿದೆ’ ಎಂದು ಎಚ್ಎಸ್‌ಬಿಸಿಯ ಮುಖ್ಯ ಅರ್ಥಶಾಸ್ತ್ರಜ್ಞೆ ಪ್ರಾಂಜುಲ್‌ ಭಂಡಾರಿ ಹೇಳಿದ್ದಾರೆ.
  • ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿದ ಮಾರಾಟದಿಂದ ದೇಶದ ಸೇವಾ ವಲಯದ ಕಂಪನಿಗಳು ಹೆಚ್ಚುವರಿ ಸಿಬ್ಬಂದಿ ನೇಮಿಸಿಕೊಳ್ಳಲು ಮುಂದಾದವು. ಇದರಿಂದ ಕಾರ್ಮಿಕರ ವೆಚ್ಚ ಹೆಚ್ಚಳವಾಯಿತು. ಪರಿಣಾಮವಾಗಿ ತಯಾರಿಕೆ ಮತ್ತು ಉತ್ಪಾದನಾ ದರ ಏರಿಕೆಯಾಯಿತು ಎಂದು ತಿಳಿಸಿದ್ದಾರೆ.
  • ಭಾರತಜರ್ಮನಿ ಸಹಕಾರ ವೃದ್ಧಿ ಅನಿವಾರ್ಯ: ಜೈಶಂಕರ್

ಸಂದರ್ಭ: ಜಾಗತಿಕ ಆರ್ಥಿಕತೆ ಹಾಗೂ ಭೌಗೋಳಿಕ ರಾಜಕೀಯ ಸನ್ನಿವೇಶಗಳಲ್ಲಿನ ಅನಿರೀಕ್ಷಿತ ಬೆಳವಣಿಗೆಗಳು ಭಾರತ ಮತ್ತು ಜರ್ಮನಿಯು ತಮ್ಮ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಿಕೊಂಡು ಕಾರ್ಯಪ್ರವೃತ್ತವಾಗಬೇಕಾದ ಅನಿವಾರ್ಯವನ್ನು ಸೃಷ್ಟಿಸಿವೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹೇಳಿದ್ದಾರೆ.

  • ಜರ್ಮನಿ ವಿದೇಶಾಂಗ ಸಚಿವ ಜೋಹನ್‌ ವಡೆಫುಲ್‌ ಅವರೊಂದಿಗಿನ ಮಾತುಕತೆ ಬಳಿಕ ಜೈಶಂಕರ್‌ ಈ ಹೇಳಿಕೆ ನೀಡಿದ್ದಾರೆ.
  • ‘ವ್ಯಾಪಾರ, ರಕ್ಷಣೆ, ಸೆಮಿಕಂಡಕ್ಟರ್‌ ಉತ್ಪಾದನೆ, ತಂತ್ರಜ್ಞಾನ ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಹಕಾರ ವೃದ್ಧಿಗೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚೆ ನಡೆಸಿದ್ದೇವೆ. ಶೀಘ್ರದಲ್ಲೇ ಈ ನಿಟ್ಟಿನಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆದು ಅಂತಿಮ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಜೈಶಂಕರ್ ತಿಳಿಸಿದ್ದಾರೆ.
  • ನಿರ್ಣಾಯಕ ಖನಿಜಗಳ ಪುನರ್ಬಳಕೆಗೆ ₹1500 ಕೋಟಿ

ಸಂದರ್ಭ: ದೇಶದಲ್ಲಿ ನಿರ್ಣಾಯಕ ಖನಿಜಗಳ ಮರು ಬಳಕೆ ಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ₹1,500 ಕೋಟಿ ಮೊತ್ತದ ಪ್ರೋತ್ಸಾಹಕ ಯೋಜನೆಗೆ ಒಪ್ಪಿಗೆ ನೀಡಿದೆ.

  • ದ್ವಿತೀಯ ಮೂಲಗಳಿಂದ ನಿರ್ಣಾಯಕ ಖನಿಜಗಳ ಉತ್ಪಾದನೆ ಮತ್ತು ಪ್ರತ್ಯೇಕಗೊಳಿಸುವ ಮರು ಬಳಕೆಯ ಸಾಮರ್ಥ್ಯವನ್ನು ವೃದ್ಧಿ ಮಾಡುವ ಗುರಿಯನ್ನು ಈ ಯೋಜನೆಯು ಹೊಂದಿದೆ.
  • ಇ–ತ್ಯಾಜ್ಯ, ಲಿಥಿಯಂ ಇಯಾನ್ ಬ್ಯಾಟರಿ ತುಣುಕುಗಳು (ಎಲ್‌ಐಬಿ) ಮತ್ತು ಅವಧಿ ಮೀರಿದ ವಾಹನಗಳಲ್ಲಿನ ಕ್ಯಾಟಲಿಟಿಕ್‌ (ವೇಗವರ್ಧಕ/ಉತ್ಪ್ರೇರಕಗಳು) ತ್ಯಾಜ್ಯ ಸೇರಿ ವಿವಿಧ ಮೂಲಗಳಿಂದ ಮರು ಬಳಕೆ ಮಾಡುವ ಉದ್ದೇಶದ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು

ಪ್ರಚಲಿತ ವಿದ್ಯಮಾನಗಳು: 3ನೇ ಸೆಪ್ಟೆಂಬರ್ 2025

ಸಾಮಾನ್ಯ ಅಧ್ಯಯನ 2: ನಗರ ಆಡಳಿತ

ಮುನ್ಸಿಪಲ್‌ ಬೋರ್ಡ್‌ನಿಂದ ನಗರ ಪಾಲಿಕೆವರೆಗೆ..

ಸಂದರ್ಭ: ನಗರದ ಆಡಳಿತ 1862ರಲ್ಲಿ 18 ಸದಸ್ಯರಿಂದ ಆರಂಭವಾಗಿ, 2010ರಲ್ಲಿ 198 ಕಾರ್ಪೊರೇಟರ್‌ಗಳನ್ನು ಹೊಂದುವವರೆಗೂ ನಾಲ್ಕು ಬಾರಿ ತನ್ನ ‘ಆಡಳಿತ ವಿನ್ಯಾಸ’ವನ್ನು ಬದಲಿಸಿಕೊಂಡಿದೆ.

  • ನಗರ ಆಡಳಿತಕ್ಕೇ ಪ್ರತ್ಯೇಕವಾದ ಬೋರ್ಡ್‌ ರಚನೆಯಾಗಿ 142 ವರ್ಷಗಳಾಗುತ್ತಿದ್ದು, ಎರಡು ಮುನ್ಸಿಪಲ್‌ ಬೋರ್ಡ್‌ನಿಂದ ಆರಂಭವಾಗಿ, 198 ವಾರ್ಡ್‌ಗಳ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಾಗಿ, ಇದೀಗ ಐದು ನಗರ ಪಾಲಿಕೆಗಳಿಗೆ ನಗರದ ಆಡಳಿತ ಹಂಚಿಕೆಯಾಗಿದೆ.
  • 1862ರ ಮಾರ್ಚ್‌ 27ರಂದು ಬೆಂಗಳೂರಿನಲ್ಲಿ ಸ್ಥಳೀಯ ಆಡಳಿತ ಪ್ರಾಯೋಗಿಕವಾಗಿ ಜಾರಿಗೆ ಬಂದಿತ್ತು. ಬ್ರಿಟನ್‌ ಮಾದರಿಯಲ್ಲಿ ಅಂದಿನ ಮೈಸೂರಿನ ಆಯುಕ್ತ ಬೌರಿಂಗ್ ಅವರು 1850 ಕಾಯ್ದೆಯನ್ವಯ ಬೆಂಗಳೂರಿನಲ್ಲಿ ಮುನ್ಸಿಪಲ್ ಬೋರ್ಡ್ ರಚಿಸಿದರು. ನಾಲ್ಕು ತಿಂಗಳ ನಂತರ 1862ರ ಆಗಸ್ಟ್ 1ರಂದು ಬೆಂಗಳೂರು ಮುನ್ಸಿಪಲ್ ಬೋರ್ಡ್ ಹಾಗೂ ಮುನ್ಸಿಪಲ್ ಕಂಟೋನ್ಮೆಂಟ್ ಬೋರ್ಡ್ (ದಂಡುಪ್ರದೇಶ) ಎಂದು ರಚಿಸಲಾಯಿತು.
  • ಮುನ್ಸಿಪಲ್‌ ಬೋರ್ಡ್‌ನಲ್ಲಿ ಒಂಬತ್ತು ಅಧಿಕಾರಿಗಳನ್ನು ಸರ್ಕಾರ ನಾಮನಿರ್ದೇಶನ ಮಾಡಿತ್ತು. ದಂಡು ಪ್ರದೇಶ ಬೋರ್ಡ್‌ನಲ್ಲಿ ತಲಾ ಆರು ಅಧಿಕಾರಿಗಳು ಹಾಗೂ ಸೈನ್ಯಾಧಿಕಾರಿಗಳು ಸದಸ್ಯರಾಗಿದ್ದರು. ಎರಡೂ ಬೋರ್ಡ್‌ಗಳು ಪ್ರತ್ಯೇಕವಾಗಿ ತಮ್ಮ ವ್ಯಾಪ್ತಿಯಲ್ಲಿ ನೈರ್ಮಲ್ಯ, ತೆರಿಗೆ, ಪೊಲೀಸ್ ಹಾಗೂ ಲೆಕ್ಕಪತ್ರದ ನಿರ್ವಹಣೆ ಮಾಡುತ್ತಿದ್ದವು.
  • ಎರಡು ಬೋರ್ಡ್‌ಗಳಿಗೆ 1883ರಲ್ಲಿ ಮೊದಲ ಬಾರಿಗೆ ಚುನಾವಣೆ ನಡೆದು, 18 ಸದಸ್ಯರು ಚುನಾಯಿತರಾದರು. ಅಧಿಕಾರಿಗಳೇ ಕಾರ್ಯ ನಿಯಂತ್ರಣ ಹೊಂದಿದ್ದರು. ಬೆಂಗಳೂರು ಮುನ್ಸಿಪಲ್ ಬೋರ್ಡ್‌ಗೆ 1897ರಲ್ಲಿ ಸರ್ಕಾರದ ಪ್ರತಿನಿಧಿಯಾದ ಅರ್ಕಾಡ್ ಶ್ರೀನಿವಾಸ ಚಾರ್ಯ ಮೊದಲ ಅಧ್ಯಕ್ಷರಾದರು. ಅಧಿಕಾರೇತರ ಸದಸ್ಯರಾದ ಪುಟ್ಟಣ್ಣಶೆಟ್ಟಿ ಅವರು 1913ರಲ್ಲಿ ಅಧ್ಯಕ್ಷರಾದರು. ಮುನ್ಸಿಪಲ್ ಕಂಟೋನ್ಮೆಂಟ್ ಬೋರ್ಡ್‌ನಲ್ಲಿ ಅಧಿಕಾರಿಗಳೇ ಇದ್ದರು.
  • ದಂಡುಪ್ರದೇಶ ಹಾಗೂ ಬೆಂಗಳೂರು ಮುನ್ಸಿಪಲ್ ಬೋರ್ಡ್‌ಗಳನ್ನು 1949ರಲ್ಲಿ ಸಿಟಿ ಕಾರ್ಪೊರೇಷನ್ ಕಾಯ್ದೆಯನ್ವಯ ವಿಲೀನಗೊಳಿಸಿ, ‘ಬೆಂಗಳೂರು ಸಿಟಿ ಕಾರ್ಪೊರೇಷನ್’ (ಬೆಂಗಳೂರು ನಗರ ಸಭೆ– ಬಿಸಿಸಿ) ಎಂದು ಹೆಸರಿಸಲಾಯಿತು. ಆರ್. ಸುಬ್ಬಣ್ಣ ಪ್ರಥಮ ಮೇಯರ್ ಹಾಗೂ ವಿ.ಪಿ. ದೀನದಯಾಳು ನಾಯ್ಡು ಪ್ರಥಮ ಉಪಮೇಯರ್ ಆದರು. 1951ರಲ್ಲಿ ಬಿಸಿಸಿಗೆ ಚುನಾವಣೆ ನಡೆದು, 69 ಸದಸ್ಯರು ಆಯ್ಕೆಯಾದರು. ಆರು ಜನರು ನಾಮಕರಣ ಸದಸ್ಯರಿದ್ದರು. ಐದು ಸ್ಥಾಯಿ ಸಮಿತಿಗಳೂ ಅಸ್ತಿತ್ವಕ್ಕೆ ಬಂದವು.
  • 1971ರ ಚುನಾವಣೆ ವರೆಗೂ ಬೆಂಗಳೂರು ನಗರ ಸಭೆಯ ಒಟ್ಟಾರೆ ಸದಸ್ಯರ ಸಂಖ್ಯೆ 75 (ನಾಮಕರಣ ಸದಸ್ಯರು ಸೇರಿ) ಆಗಿತ್ತು. 1983ರಲ್ಲಿ 87 ವಾರ್ಡ್‌ಗಳನ್ನಾಗಿ ವಿಂಗಡಿಸಲಾಯಿತು. 1996ರಲ್ಲಿ 100 ವಾರ್ಡ್‌ಗಳಿಗೆ ವಿಸ್ತರಣೆ ಮಾಡಿ, ‘ಬೆಂಗಳೂರು ಮಹಾನಗರ ಪಾಲಿಕೆ’ (ಬಿಎಂಪಿ) ಅಸ್ತಿತ್ವಕ್ಕೆ ಬಂದಿತು. 2007ರಲ್ಲಿ ನಗರದ ಸುತ್ತಮತ್ತಲಿನ ಏಳು ನಗರ ಸಭೆ ಹಾಗೂ ಒಂದು ಪುರಸಭೆ ಮತ್ತು 110 ಹಳ್ಳಿಗಳು ಸೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿ (ಬಿಬಿಎಂಪಿ) ರಚಿಸಿ, 198 ವಾರ್ಡ್‌ಗಳನ್ನು ವಿಂಗಡಿಸಲಾಯಿತು. 2010ರಲ್ಲಿ ಬಿಬಿಎಂಪಿಗೆ ಚುನಾವಣೆ ನಡೆದಿತ್ತು.
  • 2020 ಸೆಪ್ಟೆಂಬರ್ 10ರಂದು ಕೌನ್ಸಿಲ್ಅವಧಿ ಮುಕ್ತಾಯಗೊಂಡಿತ್ತು. 2022ರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲೇ 243 ವಾರ್ಡ್‌ಗಳನ್ನು ಸರ್ಕಾರ ರಚಿಸಿತ್ತು. 2023ರ ಆಗಸ್ಟ್‌ನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲೇ 225 ವಾರ್ಡ್‌ಗಳಿಗೆ ಮರು ವಿಂಗಡಣೆ ಮಾಡಲಾಗಿತ್ತು. 2025ರ ಸೆಪ್ಟೆಂಬರ್‌ 2ರಂದು ಬಿಬಿಎಂಪಿ ಅಸ್ತಿತ್ವ ಕಳೆದುಕೊಂಡು, ಅದೇ ವ್ಯಾಪ್ತಿಯಲ್ಲಿ ‘ಗ್ರೇಟರ್‌ ಬೆಂಗಳೂರು’ ಅಸ್ತಿತ್ವ ಕಂಡುಕೊಂಡು, ಐದು ನಗರ ಪಾಲಿಕೆಗಳೂ ರಚನೆಯಾಗಿವೆ.

ಮೆಯೊಹಾಲ್‌ನಿಂದ ಕೆಂಪೇಗೌಡ ಪೌರ ಸಭಾಂಗಣ

  • ಮಹಾತ್ಮಗಾಂಧಿ ರಸ್ತೆಯಲ್ಲಿರುವ ಮೆಯೊ ಹಾಲ್‌ನಲ್ಲಿ 1996ರವರೆಗೆ ಕಾರ್ಪೊರೇಟರ್‌ಗಳ ಸಭೆ ನಡೆಯುತ್ತಿತ್ತು. ಎನ್.ಆರ್. ಚೌಕದಲ್ಲಿ 1996ರಲ್ಲಿ ಕೆಂಪೇಗೌಡ ಸಭಾಂಗಣ ನಿರ್ಮಾಣವಾದ ಮೇಲೆ ಅಂದಿನಿಂದ ಪಾಲಿಕೆಯ ಸಭೆ ಅಲ್ಲಿ ನಡೆಯುತ್ತಿತ್ತು. ಆಡಳಿತ ಯಂತ್ರದ ಕೇಂದ್ರ ಸ್ಥಾನವೂ ಅದೇ ಆವರಣದಲ್ಲಿತ್ತು.
  • 1949ರಿಂದ 1994ರವರೆಗೆ ಬೆಂಗಳೂರು ನಗರ ಸಭೆಯಲ್ಲಿ 33 ಮೇಯರ್‌ಗಳಿದ್ದರು. 1996ರಿಂದ 2006ವರೆಗೆ 10 ಮೇಯರ್‌ಗಳು ಬೆಂಗಳೂರು ಮಹಾನಗರ ಪಾಲಿಕೆಯಲ್ಲಿದ್ದರು. 2010ರಿಂದ 2020ರವರೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ 10 ಮೇಯರ್‌ಗಳನ್ನು ಕಂಡಿದೆ.
  • 1967ರಿಂದ 1990ರವರೆಗಿನ ಬೆಂಗಳೂರು ನಗರ ಸಭೆಯಲ್ಲಿ 17 ಆಡಳಿತಾಧಿಕಾರಿಗಳು ವಿವಿಧ ಅವಧಿಯಲ್ಲಿದ್ದರು. 1995ರಿಂದ 1996ರವರೆಗಿನ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿಆರು ಮಂದಿ ಆಡಳಿತಾಧಿಕಾರಿ, 2006ರಿಂದ 2025ರವರೆಗಿನ ಬಿಬಿಎಂಪಿ ಅವಧಿಯಲ್ಲಿ ಏಳು ಮಂದಿ ಆಡಳಿತಾಧಿಕಾರಿಗಳು ಕಾರ್ಯನಿರ್ವಹಿಸಿದ್ದಾರೆ. 2020ರಿಂದ ಬಿಬಿಎಂಪಿಯಲ್ಲಿ ಅಧಿಕಾರಿಗಳ ಆಡಳಿತವೇ ಇತ್ತು. ಇದೀಗ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಆಡಳಿತ ಆರಂಭವಾಗಿದೆ.

‘ಇಂದಿನಿಂದಲೇ ಪಾಲಿಕೆಗಳಿಗೆ ತೆರಿಗೆ ಹಣ’

  • ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ನಗರ ಪಾಲಿಕೆಗಳಿಗೆ ಹೊಸ ಪ್ರದೇಶಗಳು ಸೇರ್ಪಡೆ: ಡಿಸಿಎಂ ಡಿ.ಕೆ. ಶಿವಕುಮಾರ್‌
  • ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಂಗ್ರಹ ವಾಗುವ ತೆರಿಗೆ ಹಣ ಆಯಾ ಪಾಲಿಕೆಗಳಿಗೆ ಬುಧವಾರದಿಂದಲೇ ಸಂದಾ ಯವಾಗಲಿದೆ. ಜಿಬಿಎ ಅಥವಾ ರಾಜ್ಯ ಸರ್ಕಾರಕ್ಕೆ ಬರುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.
  • ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗುವುದಿಲ್ಲ. ಪಾಲಿಕೆಗಳಿಗೆ ಸ್ವಾಯತ್ತತೆ ನೀಡಲಾಗಿದೆ. ಮುಂದೆ ಜಿಬಿಎ ಮೂಲಕ ದೊಡ್ಡ ಯೋಜನೆಗಳ ಜಾರಿ, ಉತ್ತಮ ಆಡಳಿತ, ಸೇವೆಗೆ ಮೀಸಲಾಗಿರಲಿದೆ. ಸರ್ಕಾರದಿಂದ ಬಂದ ಹಣ ಜಿಬಿಎ ಹಾಗೂ ಪಾಲಿಕೆಗಳಿಗೆ ಹೋಗಲಿದೆ. ಇನ್ನು ಮುಂದಿನ ದಿನಗಳಲ್ಲಿ ಕಾನೂನು ಚೌಕಟ್ಟಿನಲ್ಲಿ ಚುನಾವಣೆ ನಡೆಯಲಿದೆ’ ಎಂದು ಸುದ್ದಿಗಾರರಿಗೆ ಮಂಗಳವಾರ ಮಾಹಿತಿ ನೀಡಿದರು.
  • ನಗರದ ಜನಸಂಖ್ಯೆ 1.44 ಕೋಟಿ ಎಂದು ಅಂದಾಜಿಸಲಾಗಿದೆ. 2011 ಜನಗಣತಿ ಪ್ರಕಾರ, ವಾರ್ಡ್ನಲ್ಲಿ 20 ಸಾವಿರ ಜನಸಂಖ್ಯೆ ಇತ್ತು. ಈಗ 35-40 ಸಾವಿರ ಸರಾಸರಿಯಲ್ಲಿ ವಾರ್ಡ್ ರಚನೆ ಮಾಡಲಾಗುವುದುಎಂದು ವಿವರಿಸಿದರು.
  • ‘ಮುಂದಿನ ದಿನಗಳಲ್ಲಿ ಪೂರ್ವ, ಪಶ್ಚಿಮ, ಉತ್ತರ ದಕ್ಷಿಣ ಪಾಲಿಕೆಗಳಿಗೆ ಹೊಸ ಪ್ರದೇಶಗಳು ಸೇರ್ಪಡೆಯಾಗಲು ಅವಕಾಶ ಕಲ್ಪಿಸಿದ್ದೇವೆ. ಕಾನೂನಿಗೆ ತೊಡಕಾಗಬಾರದು ಎಂಬ ಉದ್ದೇಶ ದಿಂದ ಆ ಬಗ್ಗೆ ಚರ್ಚೆ ಮಾಡುವುದಿಲ್ಲ. ಆಯಾ ಪಾಲಿಕೆಗಳು ಸರ್ಕಾರವನ್ನು ವಿಶ್ವಾಸಕ್ಕೆ ಪಡೆದು ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆಗಳನ್ನು ಮಾಡಿಕೊಳ್ಳಲಿವೆ. ಈಗ ಹಾಲಿ ಇದ್ದ ಪಾಲಿಕೆ ವ್ಯಾಪ್ತಿಗೆ ಜಿಬಿಎ ರಚಿಸಿ, ಐದು ಪಾಲಿಕೆ ಮಾಡಿದ್ದೇವೆ. ಆನೇಕಲ್ ಕ್ಷೇತ್ರಕ್ಕೆ ಸೇರಿದ್ದ ಒಂದು ವಾರ್ಡ್ ಬಿಟ್ಟುಹೋಗಿತ್ತು. ಈಗ ಅದನ್ನು ಸರಿಪಡಿಸಿದ್ದೇವೆ’ ಎಂದು ಹೇಳಿದರು.
  • ಐತಿಹಾಸಿಕ ದಿನ:’ ‘ಬೆಂಗಳೂರಿನ ಪಾಲಿಗೆ ಇದೊಂದು ಐತಿಹಾಸಿಕ ದಿನ. ಅಧಿಕಾರ ವಿಕೇಂದ್ರೀಕರಣಗೊಳಿಸುವ ರಾಜೀವ್ ಗಾಂಧಿ ಅವರ ಆಶಯದಂತೆ ಸಂವಿಧಾನದ 74ನೇ ತಿದ್ದುಪಡಿಯನ್ನು ಪಾಲಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲಾಗಿದೆ. 1993ರ ಜೂನ್ 1ರಂದು ಕರ್ನಾಟಕದಲ್ಲಿ 74ನೇ ತಿದ್ದುಪಡಿ ಜಾರಿಗೆ ಬಂದಿತು’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
  • ‘ಪೂರ್ವ ನಗರ ಪಾಲಿಕೆಯ ಆದಾಯ ಪೂರ್ವ ಪಾಲಿಕೆಗೇ ಸೀಮಿತ ವಾಗಲಿದೆ. ಪಶ್ಚಿಮ ನಗರ ಪಾಲಿಕೆ ಆದಾಯ ಕಡಿಮೆ ಇದ್ದಾಗ ಸರ್ಕಾರ ಅವರಿಗೆ ನೆರವು ನೀಡಬೇಕು. ನಾವು ಪೂರ್ವದ ಹಣವನ್ನು ಪಶ್ಚಿಮದ ಪಾಲಿಕೆಗೆ ನೀಡಿದರೆ ಅದು ಸಂವಿಧಾನಕ್ಕೆ ವಿರುದ್ಧವಾಗಿರಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
  • ‘ಉತ್ತಮ ಆಡಳಿತ, ಸೇವೆ ನೀಡ ಬೇಕು, ಸಂವಿಧಾನ ರಕ್ಷಣೆ ಮಾಡಬೇಕು. ಈ ಹಿಂದೆ ನಗರದ ಸಣ್ಣಪುಟ್ಟ ವಿಚಾರಕ್ಕೂ ಬೆಂಗಳೂರು ಆಯುಕ್ತರಿಗೆ ಕರೆ ಮಾಡಬೇಕಿತ್ತು. ಈಗ ಪರಿಸ್ಥಿತಿ ಹಾಗಿಲ್ಲ. ಜಿಬಿಎ ಅಧಿಕಾರಿಗಳು ನಗರದ ದೊಡ್ಡ ಯೋಜನೆಗಳ ಜವಾಬ್ದಾರಿ ಮಾತ್ರ ನಿಭಾಯಿಸುತ್ತಾರೆ. ಸುರಂಗ ರಸ್ತೆ ಸೇರಿದಂತೆ ಬೇರೆ ಬೇರೆ ಪಾಲಿಕೆಗಳ ಮೂಲಕ ಹಾದುಹೋಗುವ ದೊಡ್ಡ ದೊಡ್ಡ ಯೋಜನೆ ನೋಡಿಕೊಳ್ಳುತ್ತಾರೆ. ಆಯಾ ಪಾಲಿಕೆಗೆ ನಿಯೋಜನೆಯಾಗಿರುವ ಆಯುಕ್ತರು ಹೊಣೆಗಾರಿಕೆ ಹೊಂದಿರುತ್ತಾರೆ ’ ಎಂದರು.

ಗ್ರೇಟರ್‌ ಬೆಂಗಳೂರು ರಚನೆ ಹಾದಿ…

  • ‘2007ರ ಜನವರಿ 16ರಂದು 198 ವಾರ್ಡ್‌ಗಳೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಚನೆಯಾಗಿತ್ತು. 2024ರ ಸೆಪ್ಟೆಂಬರ್‌ 22ರಂದು ಬಿ.ಎಸ್ ಪಾಟೀಲ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ಬೆಂಗಳೂರಿನಲ್ಲಿ ಉತ್ತಮ ಆಡಳಿತ ನೀಡುವ ಬಗ್ಗೆ ಅಧ್ಯಯನ ನಡೆಸಲಾಯಿತು. ಈ ಸಮಿತಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಅಧ್ಯಯನ ಮಾಡಿ ಒಂಬತ್ತು ವರದಿಗಳನ್ನು ಸಲ್ಲಿಸಿತ್ತು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.
  • ‘2015ರಲ್ಲಿ ಬೆಂಗಳೂರಿನಲ್ಲಿ ಮೂರು ಪಾಲಿಕೆಗಳನ್ನು ಮಾಡಬೇಕು ಎಂಬ ತೀರ್ಮಾನಕ್ಕೆ ಬರಲಾಯಿತು. ಈ ಪ್ರಸ್ತಾಪವನ್ನು ರಾಜ್ಯಪಾಲರಿಗೆ ಕಳುಹಿಸಿಲಾಗಿತ್ತಾದರೂ ನಂತರ ರಾಜ್ಯ ಸರ್ಕಾರ 2019ರ ಜುಲೈ 26ರಂದು ಅದನ್ನು ಹಿಂಪಡೆಯಿತು’ ಎಂದರು.
  • ‘ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದ ನಂತರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲು ತೀರ್ಮಾನಿಸಿ, 2023ರ ಜುಲೈ 18ರಂದು ಬಿ.ಎಸ್ ಪಾಟೀಲ್ ಅವರ ಸಮಿತಿ ರಚಿಸಿದೆವು. ಈ ಸಮಿತಿ 2024ರ ಜುಲೈ 12ರಂದು ವರದಿ ಸಲ್ಲಿಸಿತ್ತು. ಗ್ರೇಟರ್ ಬೆಂಗಳೂರು ಆಡಳಿತ  ಮಸೂದೆ ಸಿದ್ಧಪಡಿಸಿ, ಜುಲೈ 25ರಂದು ವಿಧಾನಸಭೆಯಲ್ಲಿ ಮಂಡಿಸಲಾಯಿತು. ವಿರೋಧ ಪಕ್ಷಗಳ ಸದಸ್ಯರ ಸಲಹೆ ಮೇರೆಗೆ ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ 15 ಸದಸ್ಯರ ಜಂಟಿ ಸದನ ಸಮಿತಿ ರಚಿಸಲಾಯಿತು. ಈ ಸಮಿತಿ 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ ನೀಡಿದ ವರದಿಯನ್ವಯ, 2025ರ ಮಾರ್ಚ್‌ 10ರಂದು ತಿದ್ದುಪಡಿ ಮಸೂದೆಯನ್ನು ವಿಧಾನಸಭೆಯಲ್ಲಿ  ಮಂಡಿಸಲಾಯಿತು. ಮಾ.12ರಂದು ವಿಧಾನ ಪರಿಷತ್‌ನಲ್ಲಿ ಚರ್ಚೆ ಮಾಡಿ ಅನುಮೋದನೆ ಪಡೆದು ರಾಜ್ಯಪಾಲರಿಗೆ ಕಳುಹಿಸಲಾಯಿತು. 2025ರ ಏಪ್ರಿಲ್ 23ರಂದು ರಾಜ್ಯಪಾಲರು ಅಂಕಿತ ಹಾಕಿದರು. ಮೇ 15ರಿಂದ ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ ಜಾರಿಗೆ ಬಂದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿತು. ಜುಲೈ 19ರಂದು ಐದು ನಗರ ಪಾಲಿಕೆಗಳ ಕರಡು ಅಧಿಸೂಚನೆ ಹೊರಡಿಸಿ, 30 ದಿನಗಳ ಕಾಲಾವಕಾಶ ನೀಡಲಾಯಿತು.  55 ಆಕ್ಷೇಪಣೆಗಳು ಬಂದಿದ್ದವು. ಇದೆಲ್ಲವನ್ನು ಬಗೆಹರಿಸಿ ಐದು ಪಾಲಿಕೆಗಳ ಗಡಿಯ ನಕ್ಷೆ ರೂಪಿಸಿ ರಾಜ್ಯಪಾಲರಿಂದ ಅಂಕಿತ ಪಡೆಯಲಾಯಿತು. ಅಂತಿಮ ಅಧಿಸೂಚನೆ ಹೊರಡಿಸಲಾಯಿತು ಎಂದು ಮಾಹಿತಿ ನೀಡಿದರು.

ಗ್ರೇಟರ್‌ ಬೆಂಗಳೂರಿಗೆ 5 ಪಾಲಿಕೆ

  • ರಾಜಧಾನಿಯ ಆಡಳಿತ ಯಂತ್ರವನ್ನು ನಿಭಾಯಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ದ (ಜಿಬಿಎ) ಅಡಿಯಲ್ಲಿ ಐದು ನಗರ ಪಾಲಿಕೆಗಳು ರಚನೆಯಾಗಿವೆ.
  • ‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ– 2024’ (ಜಿಬಿಜಿಎ) ಅಡಿಯಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನು ‘ಗ್ರೇಟರ್‌ ಬೆಂಗಳೂರು ಪ್ರದೇಶ’ (ಜಿಬಿಎ) ಎಂದು ಗುರುತಿಸಿ 2025ರ ಮೇ 15ರಂದು ಸರ್ಕಾರ ಅಧಿಸೂಚಿಸಿತ್ತು. ‘ಗ್ರೇಟರ್‌ ಬೆಂಗಳೂರು ಪ್ರದೇಶ’ದಲ್ಲೇ ಐದು ನಗರ ಪಾಲಿಕೆಗಳನ್ನು ರಚಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಬಿಬಿಎಂಪಿ ತನ್ನ ಅಸ್ತಿತ್ವ ಕಳೆದುಕೊಂಡಿದೆ.
  • ಜಿಬಿಜಿಎ ಕಾಯ್ದೆಯ ಪ್ರಕರಣ 4ರ ಉಪ ಪ್ರಕರಣ (1) ಹಾಗೂ ಪ್ರಕರಣ 7ರ ಉಪ ಪ್ರಕರಣದಡಿ (1) ಅಧಿಕಾರ ಚಲಾಯಿಸಿರುವ ಸರ್ಕಾರ, ಜನಸಂಖ್ಯೆ, ವಿಸ್ತೀರ್ಣ, ಜನಸಂಖ್ಯಾ ಸಾಂದ್ರತೆ, ಬರುವ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗ ಪ್ರಮಾಣ, ಆರ್ಥಿಕ ಪ್ರಾಮುಖ್ಯ ವನ್ನು ಪರಿಗಣಿಸಿ ಐದು ನಗರ ಪಾಲಿಕೆಗಳನ್ನು ರಚಿಸಿದೆ.
  • ವಿಧಾನಸಭೆಯಂತೆ ವಿಂಗಡಣೆ ಇಲ್ಲ: ಬಿಬಿಎಂಪಿ ವ್ಯಾಪ್ತಿಯಲ್ಲಿ 225 ವಾರ್ಡ್‌ಗಳನ್ನು ಮರುರಚಿಸಿ 2023ರ ಸೆಪ್ಟೆಂಬರ್‌ 25ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಹೊಸ ಐದು ನಗರ ಪಾಲಿಕೆಗಳನ್ನು ಬಿಬಿಎಂಪಿ ಚುನಾವಣೆ ನಡೆದಿದ್ದ 198 ವಾರ್ಡ್‌ಗಳಿಗೆ ಅನುಗುಣವಾಗಿ ವಿಂಗಡಿಸಲಾಗಿದೆ. ಜೊತೆಗೆ 225 ವಾರ್ಡ್‌ಗಳ ವಿಂಗಡಣೆ ಸಮಯದಲ್ಲಿ ಸೇರಿಸಲಾದ ಪ್ರದೇಶಗಳನ್ನು ಸೇರಿಸಿಕೊಳ್ಳಲಾಗಿದೆ.
  • 712 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಐದು ನಗರ ಪಾಲಿಕೆಗಳನ್ನು ರಚಿಸಿ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆನೇಕಲ್‌ ವಿಧಾನಸಭೆ ಕ್ಷೇತ್ರದ ಸಿಂಗಸಂದ್ರ (ಕೂಡ್ಲು) ವಾರ್ಡ್‌ ಸೇರಿದಂತೆ 225 ವಾರ್ಡ್‌ಗಳನ್ನು ಪುನರ್‌ ವಿಂಗಡಿಸಿದಾಗ ಸೇರಿಕೊಂಡ ಪ್ರದೇಶಗಳು ಸೇರಿದಂತೆ 9 ಚದರ ಕಿ.ಮೀ. ವೃದ್ಧಿಸಿ 720.9 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಐದು ನಗರ ಪಾಲಿಕೆಗಳ ಗಡಿಗಳನ್ನು ಗುರುತಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.
  • 2025ರ ಆಸ್ತಿ ತೆರಿಗೆ ಸಂಗ್ರಹವನ್ನು ಐದು ನಗರ ಪಾಲಿಕೆಗಳಿಗೆ ವಿಂಗಡಿಸಿದರೆ, ಮಹದೇವಪುರ ಹಾಗೂ ಕೆ.ಆರ್. ಪುರ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯನ್ನು ಹೊಂದಲಿರುವ ಪೂರ್ವ ನಗರ ಪಾಲಿಕೆಗೆ ಅತಿಹೆಚ್ಚು (₹912 ಕೋಟಿ) ಸಂಗ್ರಹ ಇರಲಿದೆ. ಉತ್ತರ ನಗರ ಪಾಲಿಕೆಗೆ ಅತಿ ಕಡಿಮೆ (₹543 ಕೋಟಿ) ತೆರಿಗೆ ಸಂಗ್ರಹವಾಗಲಿದೆ.
  • ಒಂದು ಚದರ ಕಿ.ಮೀ.ಗೆ ಸರಾಸರಿ 20,225 ಜನಸಂಖ್ಯೆ ಸಾಂದ್ರತೆ ಬರುವಂತೆ ವಿಂಗಡಿಸಲಾಗಿದೆ. ಕೇಂದ್ರ ನಗರ ಪಾಲಿಕೆಯಲ್ಲಿ ಅತಿಹೆಚ್ಚು ಜನಸಂಖ್ಯೆ ಸಾಂದ್ರತೆ (32,051) ಇರಲಿದ್ದು, ಪೂರ್ವ ನಗರ ಪಾಲಿಕೆಯಲ್ಲಿ ಅತಿ ಕಡಿಮೆ ಜನಸಂಖ್ಯೆ ಸಾಂದ್ರತೆ (7,738) ಇರಲಿದೆ. ಪ್ರತಿ ನಗರ ಪಾಲಿಕೆಯ ಗಡಿಯಲ್ಲಿ ಅತಿದೊಡ್ಡ ರಸ್ತೆ ಇರುವಂತೆ ವಿಂಗಡಣೆ ಮಾಡಲಾಗಿದೆ.

ನ.30ಕ್ಕೆ ವಾರ್ಡ್ ಮೀಸಲಾತಿ ಪ್ರಕಟ: ಡಿಸಿಎಂ

  • ಐದು ನಗರ ಪಾಲಿಕೆಗಳ ವಾರ್ಡ್‌ ಪುನರ್‌ ವಿಂಗಡಣೆಗೆ ಆಯೋಗ ರಚಿಸಿದ್ದು, ನವೆಂಬರ್‌ 1ಕ್ಕೆ ವಾರ್ಡ್‌ಗಳ ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ. ನ.30ರಂದು ವಾರ್ಡ್‌ಗಳ ಮೀಸಲಾತಿ ಅಧಿಸೂಚನೆ ಹೊರಡಿಸಿ, ಚುನಾವಣೆ ನಡೆಸಲಾಗುತ್ತದೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದರು.
  • ‘ನಾವು ಸುಪ್ರೀಂ ಕೋರ್ಟಿಗೆ ಪ್ರಮಾಣಪತ್ರ ಸಲ್ಲಿಸಿದ್ದು, ನಮಗೆ ಕಾಲಮಿತಿ ಇದೆ. ವಾರ್ಡ್‌ ಮೀಸಲಾತಿ ಅಧಿಸೂಚನೆಯಾದ ನಂತರ ಆಯೋಗಕ್ಕೆ ನೀಡಿ, ಚುನಾವಣೆ ನಡೆಸಲು ಮನವಿ ಮಾಡಲಾಗುತ್ತದೆ. ಚುನಾವಣೆ ನಡೆಸಲು ಪೂರ್ವಸಿದ್ಧತೆ ಆರಂಭಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ಅತಿ ಶೀಘ್ರದಲ್ಲೇ ಅವರು ಮತದಾರರ ಪಟ್ಟಿ ಸಿದ್ಧಪಡಿಸಲಿದ್ದಾರೆ’ ಎಂದು ಮಂಗಳವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.
  • ‘ಪಾಲಿಕೆಗಳ ಮೇಲೆ ಜಿಬಿಎ ಇರುವುದರಿಂದ 74ನೇ ತಿದ್ದುಪಡಿಗೆ ತೊಂದರೆಯಾಗುವುದಿಲ್ಲವೇ, ಇದನ್ನು ಪ್ರಶ್ನಿಸಿ ಯಾರಾದರೂ ನ್ಯಾಯಾಲಯದ ಮೊರೆ ಹೋಗುವುದಿಲ್ಲವೇ’ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್‌, ‘ನ್ಯಾಯಾಲಯಗಳಲ್ಲಿ ಅರ್ಜಿ ಹಾಕಿ, ತಿರಸ್ಕೃತವಾಗಿವೆ. ಸುಪ್ರೀಂ ಕೋರ್ಟ್ ಪ್ರಮಾಣಪತ್ರ ಒಪ್ಪಿದೆ. ವಾರ್ಡ್ ಪುನರ್ ವಿಂಗಡಣೆ ಬಳಿಕ, ನವೆಂಬರ್ 3ರಂದು ವಿಚಾರಣೆಗೆ ಬರುವಂತೆ ತಿಳಿಸಿದೆ’ ಎಂದರು.
  • ಸಕಾರಣವಿಲ್ಲದ ಡಿಎನ್ಎ ಪರೀಕ್ಷೆ ಸಲ್ಲ

ಸಂದರ್ಭ: ‘ಸಕಾರಣ ಮತ್ತು ಅಗತ್ಯ ಇಲ್ಲದೇ ಡಿಎನ್‌ಎ ಪರೀಕ್ಷೆಗೆ ಒತ್ತಾಯಿಸುವುದು ವಿವಾಹದ ಪಾವಿತ್ರ್ಯ, ಸಾಂವಿಧಾನಿಕ ಚೌಕಟ್ಟು ಗಳ ಅಡಿಯಲ್ಲಿ ದಂಪತಿಗಳಿಗೆ ಕೊಡಮಾಡಿದ ಗೋಪ್ಯತೆ ಹಾಗೂ ಘನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತೆ’ ಎಂದು ಹೈಕೋರ್ಟ್‌, ಆಸ್ತಿ ಪಾಲುದಾರಿಕೆಯ ಪ್ರಕರಣವೊಂದರಲ್ಲಿ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

  • ಈ ಸಂಬಂಧ 39 ವರ್ಷದ ಪುರುಷರೊಬ್ಬರು ಸಲ್ಲಿಸಿದ್ದ ರಿಟ್‌ ಅರ್ಜಿ (ಡಬ್ಲ್ಯು.ಪಿ 20342/2025) ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿದೆ.
  • ‘ಡಿಎನ್ಎ ಪರೀಕ್ಷೆ ನಡೆಸುವಂತೆ ಕೋರಿ ಸಲ್ಲಿಸಲಾಗುವ ಅರ್ಜಿ ಗಳಿಗೆ ಉತ್ತರಿಸುವಾಗ ವಿಚಾರಣಾ ನ್ಯಾಯಾಲಯಗಳು ಸದರಿ ತೀರ್ಪಿನ ಸಮಯದಲ್ಲಿ ಮಾಡಲಾಗಿರುವ ಎಲ್ಲ ಅವಲೋಕನಾ ಅಂಶಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಮುಂದುವರಿಯ ಬೇಕು. ಅಂತೆಯೇ, ಈ ತೀರ್ಪನ್ನು ಸಂಬಂಧ ಪಟ್ಟ ನ್ಯಾಯಾಲಯಗಳಿಗೆ ರವಾನಿಸಬೇಕು’ ಎಂದು ಹೈಕೋರ್ಟ್‌ ರಿಜಿಸ್ಟ್ರಿಗೆ ತಾಕೀತು ಮಾಡಿದೆ.

ಕಲಂ 112ರ ಘನತೆಗೆ ಧಕ್ಕೆಯಾಗಬಾರದು…

  • ‘ಭಾರತೀಯ ಸಾಕ್ಷ್ಯ ಕಾಯ್ದೆ-1872ರ ಕಲಂ 112ರ ಅಸ್ತಿತ್ವವೇ ಸಾರ್ವಜನಿಕ ನೈತಿಕತೆ ಮತ್ತು ಸಾಮಾಜಿಕ ಸ್ವಾಸ್ಥ್ಯ ಅಥವಾ ಶಾಂತಿಯ ಭದ್ರತೆಯನ್ನು ಹೊಂದಿದೆ. ದಾಂಪತ್ಯ ಅಸ್ತಿತ್ವದಲ್ಲಿರುವಾಗ ಮತ್ತು ಗರ್ಭ ಧರಿಸಿದ 280 ದಿನಗಳ ಮೇಲೆ ಮಗು ಜನಿಸಿದರೆ ಅದು ಆತನೇ ತಂದೆ ಎಂದು ತಿಳಿಯಬೇಕು. ಈ ನಿರ್ಣಾಯಕ ಪುರಾವೆಯನ್ನು ಮೀರಿ ಒಂದು ವೇಳೆ ಮಗುವಿನ ಪಿತೃತ್ವವನ್ನು ಪ್ರಶ್ನಿಸಿದ್ದೇ ಆದರೆ ಅದು 112ರಲ್ಲಿ ಅಡಕವಾಗಿರುವ ತತ್ವಗಳನ್ನು ಮೀರಿದ ಕಾರಣಕ್ಕೆ ಉದ್ಭವಿಸಿದೆ ಎನ್ನುವಂತಿರಬೇಕು. ಇಂತಹ ಮೀರಿದ ಸಂದರ್ಭಗಳಲ್ಲಿ ಮಾತ್ರವೇ ಡಿಎನ್‌ಎ ಪರೀಕ್ಷೆಗೆ ಅನುಮತಿ ನೀಡುವುದು ಸಮ್ಮತ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
  • ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಎಂ.ವಿಜಯಕೃಷ್ಣ ಭಟ್‌ ಅವರ ವಾದವನ್ನು ಪುರಸ್ಕರಿಸಿರುವ ನ್ಯಾಯಪೀಠ, ‘ಸಂವಿಧಾನದಲ್ಲಿ ನಿಗದಿಪಡಿಸಿದಂತೆ ಪರೀಕ್ಷೆ, ಗೋಪ್ಯತೆಯ ಹಕ್ಕು ಮತ್ತು ಘನತೆಯ ನಡುವೆ ಹೆಣೆದುಕೊಂಡಿರುವ ಸೂಕ್ಷ್ಮ ಸಮತೋಲನವನ್ನು ನಾವು ಸದಾ ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಭಾರತೀಯ ಸಾಕ್ಷ್ಯ ಕಾಯ್ದೆ-1872ರ ಕಲಂ 112ರಲ್ಲಿ ನಿಗದಿಪಡಿಸಿದ ಷರತ್ತುಗಳನ್ನು ಪೂರೈಸದ ಹೊರತು ನ್ಯಾಯಾಲಯಗಳು ಡಿಎನ್ಎ ಪರೀಕ್ಷೆಗೆ ಅನುಮತಿ ನೀಡಬಾರದು’ ಎಂದು ಸ್ಪಷ್ಟಪಡಿಸಿದೆ.
  • ಪ್ರಕರಣವೇನು?: ಮೊದಲ ಹೆಂಡತಿಯ ಇಬ್ಬರು ವಯಸ್ಕ ಗಂಡು ಮಕ್ಕಳು ಹಾಗೂ ಎರಡನೇ ಹೆಂಡತಿಯ ವಯಸ್ಕ ಮಗನ ಮಧ್ಯೆ ಆಸ್ತಿ ಪಾಲುದಾರಿಕೆಗೆ ಸಂಬಂಧಿಸಿದಂತೆ 2016ರಿಂದ ಚನ್ನರಾಯಪಟ್ಟಣದ ಹಿರಿಯ ಸಿವಿಲ್‌ ಜಡ್ಜ್‌ ಮತ್ತು ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಅಸಲು ದಾವೆಯ ವ್ಯಾಜ್ಯ ಮುಂದುವರಿದಿತ್ತು. ವ್ಯಾಜ್ಯದ ಸಮಯದಲ್ಲಿ ಅರ್ಜಿದಾರರನ್ನು ಪಾಟೀ ಸವಾಲಿಗೆ ಒಳಪಡಿಸಿದಾಗ ಅವರ ಪಿತೃತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗಿತ್ತು.
  • ‘ರಿಟ್‌ ಅರ್ಜಿದಾರರು, ನಮ್ಮ ತಂದೆಗೆ ಜನಿಸಿದ ಮಗನಲ್ಲ. ನಮ್ಮ ತಂದೆಗೆ ಆದಾಗಲೇ ವಾಸೆಕ್ಟಮಿ (ನಸ್ಬಂದಿ) ಆಪರೇಷನ್‌ ಆಗಿತ್ತು. ಅವರಿಗೆ ಮಕ್ಕಳಾಗುವ ಸಾಧ್ಯತೆಯೇ ಇರಲಿಲ್ಲ. ಹೀಗಾಗಿ, ಇವರ ಪಿತೃತ್ವದ ಸತ್ಯಾಸತ್ಯತೆ ಅರಿಯಲು ಡಿಎನ್‌ಎ ಪರೀಕ್ಷೆ ನಡೆಸಲು ಆದೇಶಿಸಬೇಕು’ ಎಂದು ಮೊದಲ ಹೆಂಡತಿಯ ಇಬ್ಬರು ಮಕ್ಕಳು (ಅಸಲು ದಾವೆಯ ವಾದಿಗಳು) ಕೋರಿದ್ದರು.
  • ಈ ತಕರಾರನ್ನು ಮಾನ್ಯ ಮಾಡಿದ್ದ ಸಿವಿಲ್‌ ನ್ಯಾಯಾಧೀಶರು, ಸಿವಿಲ್‌ ಪ್ರಕ್ರಿಯಾ ಸಂಹಿತೆ–1908ರ ನಿಯಮ 26, ನಿಯಮ 10 ಎ ಅಡಿಯಲ್ಲಿ ಡಿಎನ್‌ಎ ಪರೀಕ್ಷೆಗೆ ಸಮ್ಮತಿ ನೀಡಿ 2025ರ ಏಪ್ರಿಲ್‌ 5ರಂದು ಆದೇಶಿಸಿದ್ದರು.
  • ಇದನ್ನು ಪ್ರಶ್ನಿಸಿದ್ದ 39 ವರ್ಷದ ಅರ್ಜಿದಾರರು, ‘ವಿಚಾರಣಾ ನ್ಯಾಯಾಲಯ ಡಿಎನ್‌ಎ ಪರೀಕ್ಷೆಗೆ ಅನುಮತಿ ನೀಡಿರುವುದನ್ನು ರದ್ದುಪಡಿಸಬೇಕು’ ಎಂದು ಕೋರಿದ್ದರು. ಈ ಮನವಿಯನ್ನು ಮನ್ನಿಸಿರುವ ನ್ಯಾಯಪೀಠ, ‘ಒಂದು ವೇಳೆ ಡಿಎನ್‌ಎ ಪರೀಕ್ಷೆ ನಡೆಸಿ ಏನಾದರೂ ವರದಿ ಸಿದ್ಧಪಡಿಸಿದ್ದರೆ ಅಂತಹ ವರದಿ ಅಮಾನ್ಯವಾಗಿರುತ್ತದೆ’ ಎಂದು ಸ್ಪಷ್ಟಪಡಿಸಿದೆ.

ಕಲಂ 112ರ ಘನತೆಗೆ ಧಕ್ಕೆಯಾಗಬಾರದು…

  • ‘ಕಲಂ 112 ಸಾಮಾನ್ಯ ಸಂದರ್ಭಗಳಲ್ಲಿ ಮಹಿಳೆಯ ಘನತೆ ಏನು ಎತ್ತ ಎಂಬುದರ ಸೂಕ್ಷ್ಮ ಸಿದ್ಧಾಂತವನ್ನು ಒಳಗೊಂಡಿದೆ. ಮಗುವಿನ ತಂದೆ ತಾನೇ ಎಂಬುದು ಗೊತ್ತಿದ್ದರೂ ಕೆಲವೊಮ್ಮೆ ಪುರುಷ ನಿರಾಧಾರ ಆರೋಪ ಹೊರಿಸಿಬಿಡುತ್ತಾನೆ. ಮಹಿಳೆಯ ವ್ಯಕ್ತಿತ್ವವನ್ನು ನಾಶ ಮಾಡಿಬಿಡುತ್ತಾನೆ. ಈ ಹುಮ್ಮಸ್ಸಿನಲ್ಲಿ ರಕ್ತ–ಡಿಎನ್‌ಎ ಪರೀಕ್ಷೆಗೆ ಕೋರುತ್ತಾನೆ. ಆಗ ಮಹಿಳೆಯ ಘನತೆಗೆ ವಿನಾಕಾರಣ ಪೆಟ್ಟು ಬಿದ್ದಂತಾಗುತ್ತದೆ’ ಎಂದು ನ್ಯಾಯಪೀಠ ಹೇಳಿದೆ.
  • ಡಿಎನ್‌ಎ ಪರೀಕ್ಷೆ ಎಂದರೇನು?: ಡಿ ಆಕ್ಸಿ ರೈಬೋ ನ್ಯೂಕ್ಲಿಕ್ ಆಮ್ಲವು (ಡಿಎನ್‌ಎ) ಮೂಲಭೂತವಾಗಿ ಆನುವಂಶಿಕ ಸಂಕೇತವಾಗಿದೆ. ಇದು ಇಬ್ಬರೂ ಪೋಷಕರಿಂದ ಅವರ ಮಕ್ಕಳಿಗೆ ಗುಣಲಕ್ಷಣಗಳನ್ನು ಹೊತ್ತೊಯ್ಯುತ್ತದೆ. ಪ್ರತಿಯೊಬ್ಬರಲ್ಲೂ ಇದು ವಿಶಿಷ್ಟವಾದ ಸಂಕೇತವನ್ನು ಹೊಂದಿರುತ್ತದೆ. ಯಾವುದೇ ಆನುವಂಶಿಕ ಅಸ್ವಸ್ಥತೆಗಳ ಮೌಲ್ಯಮಾಪನಕ್ಕೆ ಅಥವಾ ಕಾನೂನು ಉದ್ದೇಶಗಳ ದೃಢೀಕರಣಕ್ಕಾಗಿ ಪಿತೃತ್ವವನ್ನು ಸಾಬೀತುಪಡಿಸುವ ಸಂದರ್ಭದಲ್ಲಿ ಈ ಪರೀಕ್ಷೆ ಕೈಗೊಳ್ಳಲಾಗುತ್ತದೆ.
  • ಮರಾಠರಿಗೆ ಮೀಸಲಾತಿ: ಒಪ್ಪಿಗೆ

ಸಂದರ್ಭ: ‘ಮರಾಠರಿಗೆ ಕುಣಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ಮಂಗಳವಾರ ಒಪ್ಪಿಕೊಂಡಿದೆ. ಸ್ನೇಹಿತರೇ ನಾವು ಗೆದ್ದುಬಿಟ್ಟೆವು’ ಎಂದು ಹೋರಾಟಗಾರ ಮನೋಜ್‌ ಜರಾಂಗೆ ಘೋಷಿಸಿದರು. ಕಳೆದ 5 ದಿನಗಳಿಂದ ಸಾವಿರಾರು ಹೋರಾಟಗಾರರೊಂದಿಗೆ ಜರಾಂಗೆ ಅವರು ಇಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

  • ‘ಮರಾಠರಿಗೆ ಕುಣಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ಮಂಗಳವಾರ ಒಪ್ಪಿಕೊಂಡಿದೆ. ಸ್ನೇಹಿತರೇ ನಾವು ಗೆದ್ದುಬಿಟ್ಟೆವು’ ಎಂದು ಹೋರಾಟಗಾರ ಮನೋಜ್‌ ಜರಾಂಗೆ ಘೋಷಿಸಿದರು.
  • ಐದು ದಿನಗಳಿಂದ ಸಾವಿರಾರು ಹೋರಾಟಗಾರರೊಂದಿಗೆ ಜರಾಂಗೆ ಅವರು ಇಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.
  • ಮರಾಠ ಸಮುದಾಯದವರಿಗೆ ಈಗ ಹಿಂದುಳಿದ ವರ್ಗದ ಕೋಟಾದಡಿ ಮೀಸಲಾತಿ ದೊರೆಯಲಿದೆ. ಮರಾಠರಿಗೆ ಮೀಸಲಾತಿ ನೀಡುವ ವಿಷಯ ಪರಿಶೀಲಿಸಲು ರಚಿಸಿದ ಸಂಪುಟ ಉಪಸಮಿತಿಯು ಜರಾಂಗೆ ಅವರ ಬಹುಪಾಲು ಬೇಡಿಕೆಗಳನ್ನು ಒಪ್ಪಿಕೊಂಡಿದೆ. ಒಪ್ಪಿಗೆ ನೀಡಿರುವುದಾಗಿ ಸಮಿತಿಯ ಮುಖ್ಯಸ್ಥ, ಸಚಿವ ರಾಧಾಕೃಷ್ಣ ವಿಖೆ ಪಾಟೀಲ್‌ ಅವರು ಜರಾಂಗೆ ಅವರಿಗೆ ತಿಳಿಸಿದರು.
  • ಸಮಿತಿಯ ಕರಡು ಪ್ರತಿಯನ್ನು ಜರಾಂಗೆ ಅವರು ಓದಿ ಹೇಳುತ್ತಿದ್ದಂತೆಯೇ ಇಲ್ಲಿನ ಆಜಾದ್‌ ಮೈದಾನದಲ್ಲಿ ಹೋರಾಟಗಾರರು ಹಲಗೆ ಹೊಡೆದು, ಕುಣಿದು ಕುಪ್ಪಳಿಸಿ ಸಂಭ್ರಮಿಸಿ ದರು. ‘ಸರ್ಕಾರದೊಂದಿಗೆ ಮಾತ ನಾಡಲು ಸಿದ್ಧನಿದ್ದೇನೆ. ನನ್ನ ಬೇಡಿಕೆಗಳು ಈಡೇರದ ಹೊರತು ಮುಂಬೈ ಬಿಟ್ಟು ತೆರಳುವುದಿಲ್ಲ’ ಎಂದು ಜರಾಂಗೆ ಅವರು ಬೆಳಿಗ್ಗೆಯಷ್ಟೇ ಹೇಳಿದ್ದರು.
  • ‘ಮರಾಠ ಮೀಸಲಾತಿ ಹೋರಾಟಗಾರರ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಸೆಪ್ಟೆಂಬರ್‌ ಅಂತ್ಯದ ಒಳಗಾಗಿ ಕೈಬಿಡಲಾಗುವುದು ಎಂದು ಉಪ ಸಮಿತಿಯವರು ಹೇಳಿದ್ದಾರೆ’ ಎಂದರು.
  • ‘ಕುಣಬಿ ಮತ್ತು ಮರಾಠರು ಒಂದೇ ಸಮುದಾಯದವರು ಎಂದು ಸರ್ಕಾರಿ ಆದೇಶ ಹೊರಡಿಸಲು ಕಾನೂನು ಪ್ರಕಾರ ಇರುವ ಆಯ್ಕೆಗಳ ಕುರಿತು ಹುಡುಕಾಟ ನಡೆಯುತ್ತಿದೆ. ಎಲ್ಲ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಎರಡು ತಿಂಗಳು ಬೇಕಾಗಬಹುದು’ ಎಂದು ಸಚಿವ ರಾಧಾಕೃಷ್ಣ ಹೇಳಿದರು.
  • ಜರಾಂಗೆ ಅವರು ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿ, ಕಣ್ಣೀರು ಹಾಕಿದರು. ಮೈದಾನದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಹೈಕೋರ್ಟ್‌ ತರಾಟೆ

  • ‘ಅನುಮತಿ ಪಡೆಯದೆಯೇ ಆಜಾದ್ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮಂಗಳವಾರ ಮಧ್ಯಾಹ್ನ 3ರ ಒಳಗೆ ಆಜಾದ್‌ ಮೈದಾನವನ್ನು ಖಾಲಿ ಮಾಡಬೇಕು’ ಎಂದು ಬಾಂಬೆ ಹೈಕೋರ್ಟ್‌ ಹೇಳಿತ್ತು. ‘ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿಲ್ಲ’ ಎಂದು ರಾಜ್ಯ ಸರ್ಕಾರವನ್ನೂ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ಜರಾಂಗೆ ಅವರ ಮನವಿ ಮೇರೆಗೆ ಬುಧವಾರ ಬೆಳಿಗ್ಗೆವರೆಗೆ ಪ್ರತಿಭಟನೆ ನಡೆಸಲು ಕೋರ್ಟ್‌ ಅನುಮತಿ ನೀಡಿತ್ತು.
  • ಈ ಬಳಿಕ ಸಂಪುಟದ ಉಪ ಸಮಿತಿಯ ಮುಖ್ಯಸ್ಥ ರಾಧಾಕೃಷ್ಣ ಅವರು ಜರಾಂಗೆ ಅವರನ್ನು ಮಧ್ಯಾಹ್ನದ ವೇಳೆಗೆ ಭೇಟಿ ಮಾಡಿದರು.
  • ನೂರಾರು ಪ್ರತಿಭಟನಕಾರರು ದಕ್ಷಿಣ ಮುಂಬೈನ ಬೀದಿಗಳಲ್ಲಿ ಮತ್ತು ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಲ್‌ ಆವರಣದಲ್ಲಿ ಬೀಡುಬಿಟ್ಟಿದ್ದರು. ಇದರಿಂದ ಲಕ್ಷಾಂತರ ಜನರಿಗೆ ತೊಂದರೆಯಾಗುತ್ತಿತ್ತು.
  • ‘ಜರಾಂಗೆ ಮತ್ತು ಅವರ ಅನುಯಾಯಿಗಳು ಮೈದಾನವನ್ನು ಖಾಲಿ ಮಾಡದೆ ಇದ್ದರೆ ದಂಡ ವಿಧಿಸಲಾಗುವುದು. ಇವರ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು’ ಎಂದೂ ಕೋರ್ಟ್ ಎಚ್ಚರಿಸಿತ್ತು.

  • 2 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ

ಸಂದರ್ಭ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೋರಿಕೆ ತಡೆಗಟ್ಟಲು ರಾಜ್ಯ ಸರ್ಕಾರ ತಿದ್ದುಪಡಿ ತಂದಿದ್ದ ‘ಕರ್ನಾಟಕ ಸರಕು ಸೇವೆಗಳ ಮಸೂದೆ- 2025’ ಹಾಗೂ  ₹3,351.96 ಕೋಟಿ ಮೊದಲ ಪೂರಕ ಅಂದಾಜು ಒಳಗೊಂಡ ‘ಕರ್ನಾಟಕ ಧನ ವಿನಿಯೋಗ ಮಸೂದೆ–2025’ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

  • ‘ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌’ ಅನ್ನು ಕೆಲವರು ಅಕ್ರಮವಾಗಿ ಪಡೆದುಕೊಳ್ಳುತ್ತಿದ್ದಾರೆ. ತಂಬಾಕು–ಅಡಿಕೆ ಆಧಾರಿತ ಪದಾರ್ಥಗಳಲ್ಲಿ (ಗುಟ್ಕಾ, ಪಾನ್‌ ಮಸಾಲಾ) ತೆರಿಗೆ ಸೋರಿಕೆ ಆಗುತ್ತಿದ್ದು, ಯಾವ ರೀತಿ ದುರುಪಯೋಗ ಮಾಡುತ್ತಿದ್ದಾರೆ ಎಂಬುದನ್ನು ಹುಡುಕಿ ಅದನ್ನು ತಡೆಗಟ್ಟಲು ‘ಕರ್ನಾಟಕ ಸರಕು ಸೇವೆಗಳ ಕಾಯ್ದೆ’ ನೆರವಾಗಲಿದೆ.